Tag: R Shankar

  • ಅನರ್ಹಗೊಂಡ ಶಾಸಕರು ಮತ್ತೆ ಎಲೆಕ್ಷನ್‍ಗೆ ನಿಲ್ಲುವಂತಿಲ್ಲ- ಸ್ಪೀಕರ್ ಸ್ಪಷ್ಟನೆ

    ಅನರ್ಹಗೊಂಡ ಶಾಸಕರು ಮತ್ತೆ ಎಲೆಕ್ಷನ್‍ಗೆ ನಿಲ್ಲುವಂತಿಲ್ಲ- ಸ್ಪೀಕರ್ ಸ್ಪಷ್ಟನೆ

    ಬೆಂಗಳೂರು: ಈಗಾಗಲೇ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.

    ತಮಿಳು ಸುದ್ದಿವಾಹಿನಿಯೊಂದರ ಜೊತೆಗೆ ಮಾತನಾಡಿದ ಸ್ಪೀಕರ್, ಈ ಮೂವರು ಶಾಸಕರು ವಿಧಾನಸಭೆ ಅವಧಿ ಮುಗಿಯೋವರೆಗೆ ಅಂದರೆ 2023ರ ಮೇ ತಿಂಗಳವರೆಗೆ ಉಪಚುನಾವಣೆಗೆ ನಿಲ್ಲುವಂತಿಲ್ಲ. ಹೀಗಾಗಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂಬ ಚುನಾವಣಾ ಆಯೋಗದ ಅಭಿಪ್ರಾಯ ತಪ್ಪು ಎಂದು ಹೇಳಿದ್ದಾರೆ.

    ತಪ್ಪು ಮಾಡಿ ರಾಜೀನಾಮೆ ಕೊಟ್ಟು ಬಚಾವ್ ಆಗಲು ಸಾಧ್ಯವಿಲ್ಲ. ನೀವು ತಪ್ಪು ಮಾಡಿದ್ದೀರಿ. ನಾನು ರಾಜೀನಾಮೆ ಅಂಗೀಕರಿಸಲ್ಲ. ಪ್ರತಿಯೊಂದು ರಾಜೀನಾಮೆಯೂ ಬೇರೆ ಬೇರೆ ಪ್ರಕರಣವಾಗಿದೆ. ಹೀಗಾಗಿ ಪ್ರತಿಯೊಬ್ಬ ಶಾಸಕರ ರಾಜೀನಾಮೆ ಬಗ್ಗೆಯೂ ಅಧ್ಯಯನ ಮಾಡುತ್ತಿದ್ದೇನೆ. ಇನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

    ಆದರೆ ಇದೀಗ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್ ಶಂಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಜಯ ಸಿಗುತ್ತದೆ ಎಂದು ಅತೃಪ್ತ ಶಾಸಕರೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ವಿಶ್ವಾಸ ವ್ಯಕ್ತಪಡಿಸಿದ್ದರು. ಜೊತೆಗೆ ನಮ್ಮ ರಾಜೀನಾಮೆ ಅಂಗೀಕರಿಸದೆ, ನಮ್ಮನ್ನೂ ಅನರ್ಹಗೊಳಿಸಿದರೆ, ನಾವೂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದ್ದರು.

    ತಮಿಳುನಾಡಿನಲ್ಲೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಅಲ್ಲಿ ಶಾಸಕರು ರಾಜೀನಾಮೆ ಕೊಟ್ಟ 6 ತಿಂಗಳೊಳಗೆ ಅಂದರೆ ಆ ಸಮಯದಲ್ಲಿ ವಿಧಾನಸಭಾ ಅವಧಿ ಕೂಡ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅನರ್ಹಗೊಂಡವರು ಮತ್ತೆ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಈ ವಿಧಾನಸಭೆ ಅವಧಿ ಮುಗಿಯಲು ಇನ್ನೂ 3 ವರ್ಷ 10 ತಿಂಗಳು ಇರುವುದರಿಂದ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಸ್ಪೀಕರ್ ಹೇಳುತ್ತಿದ್ದಾರೆ.

  • ಅತೃಪ್ತರಿಗೆ ಶಾಕ್- ಮೂವರು ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

    ಅತೃಪ್ತರಿಗೆ ಶಾಕ್- ಮೂವರು ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

    ಬೆಂಗಳೂರು: ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಹೊಳಿಸಿ ಅದೇಶಿಸಿದರು. ಇನ್ನುಳಿದ ರಾಜೀನಾಮೆ ನೀಡಿರುವ ಶಾಸಕರ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ಮಾಹಿತಿ ನೀಡುತ್ತೇನೆ. ಅನರ್ಹಗೊಂಡಿರುವ ಶಾಸಕರು 15 ವಿಧಾನಸಭೆ ಅವಧಿ ಅಂದ್ರೆ 3 ವರ್ಷ 10 ತಿಂಗಳು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ರು.

    ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಜುಲೈ 6ರಂದು ನನ್ನ ಕಚೇರಿಗೆ ಬರುತ್ತೇನೆ ಮೊದಲೇ ಹೇಳಿರಲಿಲ್ಲ. ನಾನು ಕಚೇರಿಯಿಂದ ಹೋದ ಮೇಲೆ ಕೆಲ ಶಾಸಕರೊಂದಿಗೆ ಬಂದು ನಮ್ಮ ಕಾರ್ಯದರ್ಶಿಗೆ ರಾಜೀನಾಮೆ ನೀಡಿ ತೆರಳಿದ್ದರು. ಆದ್ರೆ ಕೆಲ ರಾಜೀನಾಮೆಗಳ ಕ್ರಮಬದ್ಧವಾಗಿರಲಿಲ್ಲ. ಹಾಗಾಗಿ ಮತ್ತೊಮ್ಮೆ ನಿಯಮ 202ರನ್ವಯ ಇಚ್ಛೆಯಿದ್ದಲ್ಲಿ ರಾಜೀನಾಮೆ ಸಲ್ಲಿಸಬಹುದು ಎಂದು ನೋಟಿಸ್ ಕಳುಹಿಸಲಾಗಿತ್ತು. ನಂತ್ರ ಸಾಮೂಹಿಕವಾಗಿ ಎಲ್ಲರು ಬಂದು ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿದ ಬಳಿಕ ವಿಚಾರಣೆಗೆ ಕರೆದ್ರೂ ಯಾವ ಶಾಸಕರು ಬಂದಿಲ್ಲ. ಅದೇ ರೀತಿ ಮಹೇಶ್ ಕುಮಟಳ್ಳಿ ಅವರನ್ನು ರಾಜೀನಾಮೆಗೂ ಮೊದಲೇ ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಸಿಎಲ್‍ಪಿ ನಾಯಕರು ದೂರು ನೀಡಿದ್ದರು.

    ರಾಣೇಬೆನ್ನೂರು ಶಾಸಕ ಆರ್.ಶಂಕರ್ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಜೂನ್ 14, 2019ರಂದು ಆರ್. ಶಂಕರ್ ನನಗೆ ಪತ್ರ ಬರೆದು ಶೆಡ್ಯೂಲ್ 10ರ ಪ್ರಕಾರ ಕೆಪಿಜೆಪಿಯನ್ನು ಕಾಂಗ್ರೆಸ್ ನಲ್ಲಿ ವಿಲೀನಗೊಳಿಸಿದ್ದೇನೆಂದು ಹೇಳಿದ್ದರು. ಈ ಸಂಬಂಧ ಕಾಂಗ್ರೆಸ್ ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರು ಕೆಪಿಜೆಪಿ ವಿಲೀನದ ಬಗ್ಗೆ ಪತ್ರ ಬರೆದಿದ್ದರು. ನಂತರ ಮೈತ್ರಿಗೆ ನೀಡಿದ ಬೆಂಬಲ ವಾಪಾಸ್ ಪಡೆದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸಂಬಂಧ ವಿಚಾರಣೆಗೆ ಕರೆದಾಗ ನಾಲ್ಕು ವಾರಗಳ ಸಮಯ ಬೇಕೆಂದು ಮೇಲ್ ಮಾಡಿದ್ದಾರೆ.

    ಪಕ್ಷೇತರ ಶಾಸಕ ಆರ್.ಶಂಕರ್ ಮೈತ್ರಿ ಸಂಪುಟ ಸೇರ್ಪಡೆಯ ಮುನ್ನವೇ ತಮ್ಮ ಪಕ್ಷ ಕೆಪಿಜೆಪಿಯನ್ನು ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಕಲಾಪಕ್ಕೆ ಗೈರಾಗಿದ್ದರಿಂದ ಆರ್.ಶಂಕರ್ ಅವರನ್ನು ಸಹ ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಸ್ಪೀಕರ್ ಬಳಿ ಮನವಿ ಮಾಡಿಕೊಂಡಿತ್ತು. ಉಳಿದಂತೆ ಅತೃಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಶ್ರೀಮಂತ್ ಪಾಟೀಲ್, ಆನಂದ್ ಸಿಂಗ್, ಕೆ.ಸುಧಾಕರ್, ಎಂಟಿಬಿ ನಾಗರಾಜ್, ನಾರಾಯಣಗೌಡ, ಹೆಚ್.ವಿಶ್ವನಾಥ್ ಮತ್ತು ಗೋಪಾಲಯ್ಯರ ಮೇಲೆ ಇನ್ನು ಅನರ್ಹತೆ ತೂಗುಗತ್ತಿ ನೇತಾಡುತ್ತಿದೆ.

  • ಪಕ್ಷೇತರ ಶಾಸಕರಿಬ್ಬರಿಗಾಗಿ ಕೈ-ಕಮಲ ಕಾರ್ಯಕರ್ತರ ಫೈಟ್

    ಪಕ್ಷೇತರ ಶಾಸಕರಿಬ್ಬರಿಗಾಗಿ ಕೈ-ಕಮಲ ಕಾರ್ಯಕರ್ತರ ಫೈಟ್

    ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ನಿತೀಶ್ ಅಪಾರ್ಟ್‍ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಇಬ್ಬರಿಗಾಗಿ ನಡುರಸ್ತೆಯಲ್ಲಿ ಹೈಡ್ರಾಮ ನಡೆದಿದೆ.

    ನಿತೇಶ್ ಅಪಾರ್ಟ್‍ಮೆಂಟ್ ಮುಂದೆ ಆಗಮಿಸಿದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರರು ಒಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಅಪಾರ್ಟ್‍ಮೆಂಟ್ ಪ್ರವೇಶಕ್ಕೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಕುಳಿತ ಕೈ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇತ್ತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

    ಇದಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರನ್ನು ವಿಧಾನಸೌಧ ಒಂದು ಕಿ.ಮೀ. ಆಸುಪಾಸಿನಲ್ಲಿಯೇ ಇರಿಸಲಾಗಿದೆ. ನಾನು ಅವರಿಬ್ಬರು ಬರೋದನ್ನು ಕಾಯುತ್ತಿದ್ದೇನೆ. ವಿಧಾನಸೌಧದಲ್ಲಿ ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೆ ನೋಡೋಣ ಎಂದು ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದರು.

  • ಆರ್.ಶಂಕರ್ ನನಗೆ ಬೇಡ, ಬಿಎಸ್‍ವೈ ಪಕ್ಕ ಕೂರಿಸಿ: ಸಿದ್ದರಾಮಯ್ಯ

    ಆರ್.ಶಂಕರ್ ನನಗೆ ಬೇಡ, ಬಿಎಸ್‍ವೈ ಪಕ್ಕ ಕೂರಿಸಿ: ಸಿದ್ದರಾಮಯ್ಯ

    ಬೆಂಗಳೂರು: ಪಕ್ಷೇತರ ಶಾಸಕ ಆರ್.ಶಂಕರ್ ನನಗೆ ಬೇಡ. ಬೇಕಾದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪಕ್ಕ ತಂದು ಕೂರಿಸಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ ಪ್ರಸಂಗ ಇಂದು ನಡೆಯಿತು.

    ರಾಜೀನಾಮೆ ನೀಡಿ ಮುಂಬೈನಲ್ಲಿ ಕುಳಿತಿರುವ ಶಾಸಕರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಬಹುದು. ಕೆಲವರು ಹಣ ಪಡೆದುಕೊಂಡು ಸುಮ್ಮನಾಗಬಹುದು. ಈ ಎಲ್ಲ 15 ಜನರ ಹಿಂದೆ ಬಿಜೆಪಿಯ ಕೈವಾಡವಿದೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಇನ್ನು ಆರ್.ಶಂಕರ್ ತನ್ನ ಪಕ್ಷವನ್ನು ಕಾಂಗ್ರೆಸ್‍ನಲ್ಲಿ ವಿಲೀನಗೊಳಿಸಿದ್ದಾರೆ. ಈ ವೇಳೆ ಆರ್.ಶಂಕರ್ ಸದನಕ್ಕೆ ಬಂದ್ರೆ ನಮಗೆ ಬೇಡ ಎಂದು ಕಿಡಿಕಾರಿದರು.

    ಈ ಹಿಂದೆ ದೇವದುರ್ಗದಲ್ಲಿ ಆಪರೇಷನ್ ಕಮಲದ ಆಡಿಯೋ ಬಿಡುಗಡೆಗೊಂಡಾಗ ಆ ಧ್ವನಿ ನನ್ನದೇ ಎಂದು ಯಡಿಯೂರಪ್ಪನವರು ಒಪ್ಪಿಕೊಂಡರು. ಆದ್ರೆ ಮುಖ್ಯವಾದ ಮಾತುಗಳು ನನ್ನದಲ್ಲ ಎಂದು ಯಡಿಯೂರಪ್ಪ ಅಂದ್ರು. ಆಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲೇ ನನ್ನದೇ ಧ್ವನಿ ಎಂದು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

    ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರನ್ನು ವಿಧಾನಸೌಧ ಒಂದು ಕಿ.ಮೀ. ಆಸುಪಾಸಿನಲ್ಲಿಯೇ ಇರಿಸಲಾಗಿದೆ. ನಾನು ಅವರಿಬ್ಬರು ಬರೋದನ್ನು ಕಾಯುತ್ತಿದ್ದೇನೆ. ವಿಧಾನಸೌಧದಲ್ಲಿ ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೆ ನೋಡೋಣ ಎಂದು ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದರು.

  • ನಮ್ಮ ವಿರುದ್ಧ ಅದ್ಹೇಗೆ ಕೈ ಎತ್ತುತ್ತಾರೆ ನೋಡ್ತೀನಿ: ಡಿಕೆಶಿ

    ನಮ್ಮ ವಿರುದ್ಧ ಅದ್ಹೇಗೆ ಕೈ ಎತ್ತುತ್ತಾರೆ ನೋಡ್ತೀನಿ: ಡಿಕೆಶಿ

    ಬೆಂಗಳೂರು: ವಿಶ್ವಾಸಮತ ಯಾಚನೆ ಸಂಬಂಧಿಸಿದ ವಿಷಯದ ಮೇಲೆ ಸುದೀರ್ಘವಾಗಿ ಮಾತನಾಡಿ ಹೊರ ಬಂದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷೇತರ ಶಾಸಕರು ನಮ್ಮ ವಿರುದ್ಧ ಹೇಗೆ ಕೈ ಎತ್ತುತ್ತಾರೆ ನೋಡೋಣ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.

    ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರನ್ನು ವಿಧಾನಸೌಧ ಒಂದು ಕಿ.ಮೀ. ಆಸುಪಾಸಿನಲ್ಲಿಯೇ ಇರಿಸಲಾಗಿದೆ. ನಾನು ಅವರಿಬ್ಬರು ಬರೋದನ್ನು ಕಾಯುತ್ತಿದ್ದೇನೆ. ವಿಧಾನಸೌಧದಲ್ಲಿ ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೆ ನೋಡೋಣ ಎಂದರು.

    ಸಮ್ಮಿಶ್ರ ಸರ್ಕಾರದಲ್ಲಿ ಪಕ್ಷೇತರ ಶಾಸಕರಿಬ್ಬರಿಗೂ ಸಚಿವ ಸ್ಥಾನವನ್ನು ನೀಡಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಬೆನ್ನಲ್ಲೆ ತಮ್ಮ ನಿಲುವು ಬದಲಿಸಿಕೊಂಡು ಪಕ್ಷೇತರ ಶಾಸಕರು ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ತಮ್ಮ ಬೆಂಬಲ ಹಿಂಪಡೆದು ದೋಸ್ತಿಗಳಿಗೆ ಶಾಕ್ ನೀಡಿದ್ದರು.

  • ಇಂದಿನ ಪರಿಸ್ಥಿತಿಗೆ ಸಿದ್ದರಾಮಯ್ಯ ಕಾರಣ – ಕೆ.ಬಿ.ಕೋಳಿವಾಡ

    ಇಂದಿನ ಪರಿಸ್ಥಿತಿಗೆ ಸಿದ್ದರಾಮಯ್ಯ ಕಾರಣ – ಕೆ.ಬಿ.ಕೋಳಿವಾಡ

    ಹಾವೇರಿ: ರಾಜ್ಯದಲ್ಲಿ ಇವತ್ತಿನ ರಾಜಕೀಯ ಪರಿಸ್ಥಿತಿಗೆ ಮಾಜಿ ಮುಖ್ಯಮಂತ್ರಿ ಕಾರಣ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಅಸಮಾಧಾನ ಹೊರಹಾಕಿದ್ದಾರೆ.

    ಇಂದು ರಾಣೇಬೆನ್ನೂರಿನಲ್ಲಿ ಅವರ ನಿವಾಸದಲ್ಲಿ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತಿನ ರಾಜಕೀಯ ವಿಚಾರದ ಹಿಂದೆ ಯಾರಿದ್ದಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅದನ್ನು ನನ್ನ ಬಾಯಿಂದ ಏಕೆ ಹೇಳಿಸ್ತೀರಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ್ದಾರೆ.

    ರಾಜೀನಾಮೆ ನೀಡಿರುವ ಶಾಸಕ ಆರ್.ಶಂಕರ್ ಬಗ್ಗೆ ಮಾತನಾಡಿ, ನಾನು ಅವತ್ತೇ ಅವರು ಪಕ್ಷ ಸೇರ್ಪಡೆ ಆಗುವುದನ್ನು ವಿರೋಧಿಸಿದ್ದೆ. ಆರ್.ಶಂಕರ್ ಆಯಾ ರಾಮ ಗಯಾ ರಾಮ ಇದ್ದಂತೆ. ರಾಣೇಬೆನ್ನೂರು ಕ್ಷೇತ್ರದಿಂದ ಆಯ್ಕೆ ಆದವರ ಪೈಕಿ ಈವರೆಗೆ ಯಾರೂ ಶಂಕರ್ ರೀತಿಯ ರಾಜಕಾರಣ ಮಾಡಿಲ್ಲ. ಶಾಸಕ ಶಂಕರ್ ತಾಲೂಕಿನ ಜನರ ಮಾನ ಹರಾಜು ಹಾಕಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

    ಪ್ರಸ್ತುತ ರಾಜಕೀಯ ಬೆಳವಣಿಗೆ ಬೇಸರ ತರಿಸಿದೆ. ಸಮ್ಮಿಶ್ರ ಸರ್ಕಾರದ ಬದಲು ಪ್ರತಿಪಕ್ಷದ ಸ್ಥಾನದಲ್ಲಿ ಕೂರೋದು ಒಳ್ಳೆಯದು. ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಹೋರಾಟ ಮಾಡೋಣ ಎಂದು ಹೇಳಿದರು.

  • ದೋಸ್ತಿಗೆ ಮತ್ತೊಂದು ಶಾಕ್ – ಸಚಿವ ಸ್ಥಾನಕ್ಕೆ ಶಂಕರ್ ರಾಜೀನಾಮೆ

    ದೋಸ್ತಿಗೆ ಮತ್ತೊಂದು ಶಾಕ್ – ಸಚಿವ ಸ್ಥಾನಕ್ಕೆ ಶಂಕರ್ ರಾಜೀನಾಮೆ

    ಬೆಂಗಳೂರು: ಕಾಂಗ್ರೆಸ್ ನಾಯಕರ ಕೈಗೆ ಸಿಗದೆ ನಾಟ್ ರೀಚೆಬಲ್ ಆಗಿದ್ದ ಪೌರಾಡಳಿತ ಸಚಿವ, ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್.ಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದೋಸ್ತಿಗೆ ಮತ್ತೊಂದು ಶಾಕ್ ನೀಡಿದ್ದಾರೆ.

    ಸಚಿವ ಡಿ.ಕೆ.ಶಿವಕುಮಾರ್ ಅವರು ಫೋನ್ ಮಾಡಿದರೂ ಆರ್.ಶಂಕರ್ ಸಂಪರ್ಕಕ್ಕೆ ಸಿಗಲಿಲ್ಲ. ಆದರೆ ಸ್ವಲ್ಪ ಸಮಯ ಬಳಿಕ ಸಚಿವರು ರಾಜೀನಾಮೆ ಕೊಟ್ಟು, ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.

    ಡಿಸಿಎಂ ಜಿ.ಪರಮೇಶ್ವರ್ ಅವರ ಮನೆಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆರ್.ಶಂಕರ್ ಅವರು ಕೂಡ ಇದ್ದರು. ಈ ವೇಳೆ ನಾನು ದೋಸ್ತಿ ಸರ್ಕಾರದ ಜೊತೆಗೆ ಇರುತ್ತೇನೆ ಎಂದು ಆರ್.ಶಂಕರ್ ಮಾತು ಕೊಟ್ಟಿದ್ದರು. ಆದರೆ ಸಭೆಯ ಬಳಿಕ ಹೊರ ಬಂದು ಶಾಸಕ ನಾಗೇಶ್ ಅವರಿಗೆ ಫೋನ್ ಮಾಡಿ, ನಿಮ್ಮನ್ನು ಕರೆತರಲು ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿಕೆ ಶಿವಕುಮಾರ್ ಬರುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ನಾಗೇಶ್ ಅವರು ಮಧ್ಯಾಹ್ನ 12:40 ಕ್ಕೆ ನಿಗದಿಯಾಗಿದ್ದ ವಿಮಾನವನ್ನು ತಕ್ಷಣವೇ ರೀ ಶೆಡ್ಯೂಲ್ ಮಾಡಿಸಿ ಮುಂಬೈಗೆ ಪ್ರಯಾಣ ಬೆಳೆಸಿದರು ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ತಮ್ಮ ಸಚಿವ ಸ್ಥಾನವನ್ನು ಹಿಂಪಡೆಯುತ್ತಾರೆ ಎಂದು ಅರಿತ ಆರ್.ಶಂಕರ್ ಅವರು ಬಿಜೆಪಿ ನಾಯಕರು ಕಳುಹಿಸಿದ್ದ ಕಾರಿನಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮುಂಬೈಗೆ ಪ್ರಯಾಣ ಬೆಳೆಸಿ, ಅತೃಪ್ತ ಶಾಸಕರನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

    ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

    -ಬಿಜೆಪಿ ನಾಯಕನಿಗೆ ಸಾಥ್ ನೀಡಿದ ಆರ್.ಶಂಕರ್
    -ನಾನು ಸಿಎಂ ಆಗಬಾರದಾ? ಎಂಬಿಪಿ ಪ್ರಶ್ನೆ

    ವಿಜಯಪುರ: ಇಂದು ತಿಕೋಟ ತಾಲೂಕಿನಲ್ಲಿ ನಡೆದ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಗೋವಾ ಬಿಜೆಪಿ ಶಾಸಕ ಮೈಕಲ್ ಲೋಬೋ, ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯ ನಾಯಕ, ಗೃಹ ಸಚಿವರಾಗಿರುವ ಎಂ.ಬಿ.ಪಾಟೀಲ್ ಕರ್ನಾಟಕದ ಮುಖ್ಯಮಂತ್ರಿ ಆಗಲಿ ಎಂಬ ಇಂಗಿತವನ್ನು ಹೊರ ಹಾಕಿದರು.

    ಜಾತ್ರೆಯ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮೈಕಲ್ ಲೋಬೋ, ಸಚಿವರು ಮತ್ತು ನಾನು ಒಳ್ಳೆಯ ಸ್ನೇಹಿತರಾಗಿದ್ದು, ರಾಜ್ಯ, ದೇಶದ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇವತ್ತು ಕಾಂಗ್ರೆಸ್ ನಲ್ಲಿದ್ದಾರೆ. ಮುಂದೆ ಎಲ್ಲಿ ಇರುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

    ಮೈಕಲ್ ಲೋಬೋ ಅವರ ಬಳಿಕ ಮಾತನಾಡಿದ ಸಚಿವ ಆರ್.ಶಂಕರ್ ಸಹ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂಬ ಇಚ್ಛೆಯನ್ನು ಹೊರ ಹಾಕಿದರು. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದು ಬರಡು ಭೂಮಿಗೆ ನೀರು ಹರಿಸಿದ್ದಾರೆ. ಅಭಿವೃದ್ಧಿಪರ ಕೆಲಸಗಳಿಂದಲೇ ಕ್ಷೇತ್ರದಲ್ಲಿ ಬಹು ಮತಗಳ ಅಂತದರದಲ್ಲಿ ಗೆಲುವು ಕಾಣುತ್ತಾ ಬಂದಿದ್ದಾರೆ. ತಾಯಿ ದುರ್ಗಾದೇವಿಯ ಆಶೀರ್ವಾದ ಇದ್ದರೆ ಎಂ.ಬಿ.ಪಾಟೀಲರು ಸಹ ಮುಖ್ಯಮಂತ್ರಿ ಆಗಲಿ ಎಂದು ಆರ್.ಶಂಕರ್ ತಿಳಿಸಿದರು.

    ಮೈಕಲ್ ಲೋಬೋ ಅವರ ಮಾತಿಗೆ ರಾಜಕೀಯ ಅರ್ಥ ಕಲ್ಪಿಸೋದು ಬೇಡ. ಪಕ್ಷಗಳು ಬೇರೆಯಾಗಿದ್ದರೂ, ನಾವಿಬ್ಬರು ಒಳ್ಳೆಯ ಸ್ನೇಹಿತರು. ಸ್ನೇಹದ ಪ್ರತೀಕವಾಗಿ ತನ್ನ ಗೆಳೆಯ ಸಿಎಂ ಆಗಲಿ ಎಂದು ಹಾರೈಸಿದ್ದಾರೆ. ಹಾಗಾದ್ರೆ ನೀವು ಮುಖ್ಯಮಂತ್ರಿ ಆಗ್ತೀರಾ ಪ್ರಶ್ನೆಗೆ ನಾನು ಸಿಎಂ ಆಗಬಾರದಾ ಎಂದರು. ಕ್ಷೇತ್ರ ಮತ್ತು ಕರ್ನಾಟಕದ ಜನತೆ ನಮಗೆ ಬಹುಮತ ನೀಡಿ ನಮ್ಮನ್ನು ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿದಾಗ ಸಿಎಂ ಆಗಲು ಸಾಧ್ಯ. ನಾವು, ನೀವೂ ಹೇಳಿದ ಮಾತ್ರಕ್ಕೆ ಯಾರು ಸಿಎಂ ಆಗಲ್ಲ. ಬಹುಮತ ಬಂದ ಮೇಲೆ ಎಲ್ಲ ಶಾಸಕರು ಮತ್ತು ಹೈಕಮಾಂಡ್ ಒಪ್ಪಿದರೆ ಮಾತ್ರ ಸಿಎಂ ಆಗಲು ಸಾಧ್ಯವಾಗಲಿದೆ ಎಂದು ಎಂ.ಬಿ.ಪಾಟೀಲರು ಸ್ಪಷ್ಟನೆ ನೀಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಇಬ್ಬರ ರಾಜೀನಾಮೆಯಿಂದ ಏನು ಆಗಲ್ಲ. ಪಕ್ಷದ ಮುಖಂಡರು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಹೈಕಮಾಂಡ್, ಜನಾಶೀರ್ವಾದ, ಶಾಸಕರ ಬೆಂಬಲ ಸಿಕ್ಕರೆ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಬಹುದು ಎಂದರು.

    2018ರಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದ ಎಂ.ಬಿ.ಪಾಟೀಲ್ ಇದೇ ಜಾತ್ರೆಯಲ್ಲಿ ಭಾಗವಹಿಸಿದ್ದ ವೇಳೆಯೂ ಮುಖ್ಯಮಂತ್ರಿ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಅಂದು ಸ್ವ-ಕ್ಷೇತ್ರ ಗ್ರಾಮದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಎಂ.ಬಿ.ಪಾಟೀಲ್, ನಾನು ಸಚಿವನಾದರೂ, ಶಾಸಕನಾದರೂ ಯಾವಾಗಲೂ ಫವರ್ ಫುಲ್. ತಾಯಿ ದುರ್ಗಾದೇವಿಯ ಆಶೀರ್ವಾದ ನನ್ನ ಮೇಲಿದೆ. ತಾಯಿಯ ಕೃಪೆಯಿಂದ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು.

    ನನಗೆ ಇನ್ನೂ 54 ವರ್ಷ ಆಗಿದೆ. ಮುಂದಿನ ದಿನಗಳಲ್ಲಿ ನನಗೂ ಮುಖ್ಯಮಂತ್ರಿ ಆಗುವ ಟೈಮ್ ಬರುತ್ತದೆ. ಸಿಎಂ ಆಗುವ ಆಸೆ ಸ್ವಾಭಾವಿಕ. ಆದ್ರೆ ನನಗೆ ದುರಾಸೆ ಇಲ್ಲ ಎಂದು ಮುಖ್ಯಮಂತ್ರಿ ಆಗುವ ಇಂಗಿತವನ್ನ ವ್ಯಕ್ತಪಡಿಸಿದರು. ಸದ್ಯ ದೇವಿ ಪರೀಕ್ಷೆ ನಡೆಸಿದ್ದಾಳೆ. ನನಗೆ ಎದುರಾಗಿರುವ ಪರೀಕ್ಷೆಯನ್ನು ದುರ್ಗಾದೇವಿಯೇ ಪಾರು ಮಾಡುತ್ತಾಳೆ. ಕಳೆದ ವರ್ಷದ ಜಾತ್ರೆಯಲ್ಲಿಯೂ ಎಂ.ಬಿ. ಪಾಟೀಲ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದು, ಶುಕ್ರವಾರ ಅದೇ ಮಾತನ್ನು ಪುನರುಚ್ಚರಿಸಿದ್ದರು.

  • ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ

    ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ

    ಬೆಂಗಳೂರು: ಮೈತ್ರಿ ಸಂಪುಟಕ್ಕೆ ಇತ್ತೀಚೆಗಷ್ಟೇ ಸೇರ್ಪಡೆಯಾಗಿದ್ದ ನೂತನ ಸಚಿವರಾದ ಆರ್.ಶಂಕರ್ ಹಾಗೂ ಎಚ್. ನಾಗೇಶ್ ಅವರಿಗೆ ಖಾತೆ ಹಂಚಿಕೆ ಮಾಡಿರುವ ಸರ್ಕಾರ, ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದೆ.

    ನಿರೀಕ್ಷೆಯಂತೆ ಶಂಕರ್ ಅವರಿಗೆ ಪೌರಾಡಳಿತ ಖಾತೆ ಲಭಿಸಿದ್ದು, ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆ ಖಾತೆ ನೀಡಲಾಗಿದೆ. ಈ ಹಿಂದೆ ಸಣ್ಣ ಕೈಗಾರಿಕೆ ಖಾತೆ ಗುಬ್ಬಿ ಶ್ರೀನಿವಾಸ್ ಅವರ ಬಳಿ ಇತ್ತು. ಸದ್ಯ ಅವರಿಂದ ಈ ಸಣ್ಣ ಕೈಗಾರಿಕೆಯನ್ನು ಹಿಂಪಡೆದಿರುವ ಮುಖ್ಯಮಂತ್ರಿಗಳು ನಾಗೇಶ್ ಅವರಿಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಇದ್ದ ಪ್ರಾಥಮಿಕ ಶಿಕ್ಷಣ ಖಾತೆಯನ್ನ ಗುಬ್ಬಿ ಶ್ರೀನಿವಾಸ್ ಅವರಿಗೆ ನೀಡಿದ್ದಾರೆ.

    ಕುಂದಗೋಳ ಶಾಸಕ ಸಿಎಸ್ ಶಿವಳ್ಳಿ ಅವರ ನಿಧನದಿಂದ ಪೌರಾಡಳಿತ ಖಾತೆ ತೆರವಾಗಿತ್ತು. ಜೂನ್ 14 ರಂದು ಹಲವು ಗೊಂದಲಗಳ ನಡುವೆಯೂ ಪಕ್ಷೇತರ ಶಾಸಕರಾಗಿದ್ದ ಶಂಕರ್ ಹಾಗೂ ನಾಗೇಶ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಪಕ್ಷೇತರರಿಗೆ ಸಂಪುಟದಲ್ಲಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

  • ಶುಭ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ

    ಶುಭ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ

    – ಶಂಕರ್ ಗೆ ಪೌರಾಡಳಿತ, ನಾಗೇಶ್‍ಗೆ ಶಿಕ್ಷಣ ಸಾಧ್ಯತೆ

    ಬೆಂಗಳೂರು: ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಎಂ ಕಚೇರಿಯಿಂದ ಲಭ್ಯವಾಗಿದೆ.

    ರಾಜ್ಯಪಾಲ ವಿ.ಆರ್.ವಾಲಾ ಅವರು ಬೆಂಗಳೂರಿನಿಂದ ಹೊರ ಇರುವ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ಆಗಲಿದೆ ಎಂಬ ಮಾಹಿತಿ ಲಭಿಸಿದ್ದು, ನಾಳೆ ವಾಲಾ ಅವರಿಂದ ನೂತನ ಸಚಿವರ ಖಾತೆಗಳ ಪಟ್ಟಿಗೆ ಅಂಕಿತ ಬೀಳಲಿದೆ. ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಪೌರಾಡಳಿತ ಇಲಾಖೆಯ ಜವಾಬ್ದಾರಿಯನ್ನು ಆರ್.ಶಂಕರ್ ಅವರಿಗೆ ವಹಿಸುವ ಸಾಧ್ಯತೆಗಳಿವೆ. ಬಹು ದಿನಗಳಿಂದ ಸಚಿವರಿಲ್ಲದೇ ಉಳಿದುಕೊಂಡಿರುವ ಶಿಕ್ಷಣ ಇಲಾಖೆಗೆ ಹೆಚ್.ನಾಗೇಶ್ ಅವರ ಪಾಲಾಗಲಿದೆ ಎಂದು ಹೇಳಲಾಗುತ್ತಿದೆ.

    ಜೂನ್ 14ರಂದು ಹಲವು ಗೊಂದಲಗಳ ನಡುವೆ ಪಕ್ಷೇತರರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪಕ್ಷೇತರರರಿಗೆ ಸಚಿವ ಸ್ಥಾನ ನೀಡಿದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಹಿರಿಯ ನಾಯಕರು ಮತ್ತು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಪಕ್ಷೇತರ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲಾಯ್ತು ಎಂಬ ಮಾತುಗಳು ಕೇಳಿ ಬಂದಿವೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]