Tag: R Shankar

  • ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

    ಬೆಂಗಳೂರು: ಹಲವು ಗೊಂದಲಗಳ ನಡುವೆ ಮೈತ್ರಿ ಸಂಪುಟಕ್ಕೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಎಂಟ್ರಿ ಪಡೆದಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ಇಬ್ಬರು ಶಾಸಕರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಆರ್.ಶಂಕರ್ ಇಂದು ಮತ್ತೊಮ್ಮೆ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಪದ ಗ್ರಹಣ ಕಾರ್ಯಕ್ರಮದಲ್ಲಿ ಸಿಎಂ, ಮಾಜಿ ಸಿಎಂ ಸಿದ್ದರಾಮಯ್ಯ ಸಚಿವರಾದ ಜಮೀರ್ ಅಹ್ಮದ್, ಡಿ.ಕೆ.ಶಿವಕುಮಾರ್ ಬಂಡೆಪ್ಪ ಕಾಶೆಂಪುರ್ ಮತ್ತು ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಪಕ್ಷೇತರರಿಗೆ ಸಂಪುಟದಲ್ಲಿ ಸ್ಥಾನ ಮಾನ ಕೊಟ್ರೇ ಏನ್ ತಪ್ಪಿದೆ. ಯಾವ ಅಸಮಾಧಾನವೂ ನಮ್ಮೊಳಗಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತೇವೆ. ಪಕ್ಷ ಉಳಿಸಲು ಸ್ಥಿರತೆ ಕಾಪಾಡಲು ಎಲ್ಲರ ಒಮ್ಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಏಕಮುಖ ತೀರ್ಮಾನ ಅಲ್ಲ. ಹೊಸಬರಿಗೆ ಖಾತೆ ಹಂಚಿಕೆ ವಿಚಾರ ದ ಬಗ್ಗೆ ಮುಖಂಡರು ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದೇವೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳುವ ಶಾಸಕ ಸುಧಾಕರ್ ಹೇಳಿಕೆಗೆ ಟಾಂಗ್ ನೀಡಿದರು.

  • ಕಾಂಗ್ರೆಸ್ ಸೇರುತ್ತೇನೆ- ಪಕ್ಷೇತರ ಶಾಸಕ ಆರ್.ಶಂಕರ್

    ಕಾಂಗ್ರೆಸ್ ಸೇರುತ್ತೇನೆ- ಪಕ್ಷೇತರ ಶಾಸಕ ಆರ್.ಶಂಕರ್

    ಬೆಂಗಳೂರು: ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಾಗಿ ಇಂದು ರಾಣಿಬೆನ್ನೂರಿನ ಶಾಸಕ ಆರ್.ಶಂಕರ್ ಅವರು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಈ ಕುರಿತು ಶಂಕರ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ಈ ಹಿಂದೆ ಕೂಡ ಹೇಳಿದ್ದೆ ಸಚಿವ ಸ್ಥಾನ ಎಂಬುದು ಒಂದು ಜವಾಬ್ದಾರಿಯಾಗಿದೆ. ಅದನ್ನು ತಾಲೂಕಿನ ಜನರಿಗೆ ಮತ್ತು ಈ ನಾಡಿಗೆ ನನ್ನ ಇಲಾಖೆ ವತಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನನ್ನ ಬಯಕೆಯಾಗಿದೆ. ನನ್ನ ಜೊತೆ ಕಾಂಗ್ರೆಸ್ ನವರು ಮಾತಾಡಿಯೇ ನನಗೆ ಸಚಿವ ಸ್ಥಾನ ಕೊಟ್ಟಿರುವುದು. ನಾನು ಕಾಂಗ್ರೆಸ್ ಸೇರುತ್ತೇನೆ ಎಂದರು.

    ಬ್ಲಾಕ್‍ಮೇಲ್ ತಂತ್ರವನ್ನು ಉಪಯೋಗಿಸಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂದಿದ್ದ ಕೋಳಿವಾಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೋಳಿವಾಡ ಅವರು ಸ್ಪೀಕರ್ ಆಗಿದ್ದಾಗ ಮಾಡಿರುವ ಕಿತಾಪತಿಗಳು ಜನರಿಗೆ ಗೊತ್ತಿದೆ. ವಿಶೇಷವಾಗಿ ನಮ್ಮ ತಾಲೂಕಿನ ಜನತೆಗೆ ಅವರ ಬಗ್ಗೆ ತಿಳಿದಿದೆ. ಬ್ಲಾಕ್‍ಮೇಲ್ ತಂತ್ರ ನಾನು ಮಾಡಿಲ್ಲ. ಕೆ.ಬಿ ಕೋಳಿವಾಡ ಅವರು ದೆಹಲಿಗೆ ಹೋಗಿ ಲಾಭಿ ಮಾಡಿರುವುದು, ಶಾಸಕರನ್ನ ಎತ್ತಿಕಟ್ಟಿಕೊಂಡು ಮಾಡಿರುವ ಉದಾಹರಣೆಗಳು ಇವೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದು, ನನ್ನ ಹಕ್ಕನ್ನು ನಾನು ಪ್ರತಿಪಾದನೆ ಮಾಡಿದ್ದೇನೆ. ನಾನು ಯಾವ ಬ್ಲಾಕ್‍ಮೇಲ್ ತಂತ್ರ ಅಳವಡಿಸಿ ಸಚಿವ ಸ್ಥಾನ ಪಡೆದಿಲ್ಲ. ನನ್ನ ಹಕ್ಕನ್ನು ನಾನು ಕೇಳಿದ್ದೇನೆ ಎಂದು ಕೋಳಿವಾಡ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ನಾನು ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದೇನೆ. ನಾನು ಕಳೆದ ಬಾರಿ ಸಚಿವ ಸ್ಥಾನ ಕಳೆದು ಕೊಳ್ಳುವುದಕ್ಕೆ ಯಾವ ತಪ್ಪು ಮಾಡಿಲ್ಲ. ಕೆಲವು ಗೊಂದಲಗಳು ಆಗಿರಬಹುದು ಇಲ್ಲ ಅಂತಲ್ಲ. ಹಾಗಂತ ನಾನು ಸ್ಥಾನ ಕಳೆದುಕೊಂಡ ಮೇಲೆ ಬೇರೆ ಪಕ್ಷಕ್ಕೆ ಹೋಗುತ್ತೇನೆ ಅನ್ನೋದು ಸುಳ್ಳು. ಕಾಂಗ್ರೆಸ್ ಅಸಮಾಧಾನಿತ ಶಾಸಕರು ಅಂದುಕೊಂಡಂತೆ ಇರಲ್ಲ ನಿಯತ್ತಾಗಿ ಇರುತ್ತೇನೆ. ನನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡಿದ್ದೇನೆ. ಯಾವ ಬ್ಲಾಕ್‍ಮೇಲ್ ಮಾಡಿಲ್ಲ. ಈಗ ಸರ್ಕಾರಕ್ಕೆ ನನ್ನ ಬೆಂಬಲ ಬೇಕಾಗಿದೆ. ಹೀಗಾಗಿ ನಾನು ಸರ್ಕಾರದ ಜೊತೆ ಕೆಲಸ ಮಾಡುತ್ತೇನೆ. ಖಾಲಿ ಇರುವ ಖಾತೆ ಕೊಡುತ್ತೀನಿ ಎಂದು ಹೇಳಿದ್ದಾರೆ ನೋಡೋಣ ಎಂದು ಆರ್.ಶಂಕರ್ ಹೇಳಿದ್ದಾರೆ.

  • ಆಪರೇಷನ್ ಕಮಲ ಫೇಲ್ ಬೆನ್ನಲ್ಲೆ ಬಿಜೆಪಿಗೆ ಮತ್ತೊಂದು ಶಾಕ್!

    ಆಪರೇಷನ್ ಕಮಲ ಫೇಲ್ ಬೆನ್ನಲ್ಲೆ ಬಿಜೆಪಿಗೆ ಮತ್ತೊಂದು ಶಾಕ್!

    ಬೆಂಗಳೂರು: ಆಪರೇಷನ್ ಕಮಲ ಬಹುತೇಕ ಫೇಲ್ ಆದ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಮಂಗಳವಾರ ಮಧ್ಯಾಹ್ನ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದ ಶಾಸಕ ಆರ್.ಶಂಕರ್ ಇದೂವರೆಗೂ ರಾಜ್ಯಪಾಲರನ್ನು ಭೇಟಿ ಮಾಡಿಲ್ಲ. ಇಂದು ಬೆಂಬಲ ವಾಪಸ್ ಪಡೆದಿದ್ದರ ಬಗ್ಗೆ ಪತ್ರವನ್ನು ನೀಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯನವರ ಒಂದು ಫೋನ್ ಕರೆಯಿಂದಾಗಿ ಆರ್.ಶಂಕರ್ ಮನಸ್ಸು ಬದಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಂಪುಟದಿಂದ ಕೊಕ್ ನೀಡಿದ ಹಿನ್ನೆಲೆಯಲ್ಲಿ ಆರ್.ಶಂಕರ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಮಂಗಳವಾರ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬೆಂಬಲ ಹಿಂಪಡೆದಿದ್ದೇನೆ ಅಂತ ಹೇಳಿದ್ದರು. ಪಕ್ಷೇತರರು ಇಬ್ಬರು ಬೆಂಬಲ ವಾಪಾಸ್ಸು ಪಡೆದ ಬಳಿಕ ಮುಂಬೈನಲ್ಲಿರುವ ಕಾಂಗ್ರೆಸ್‍ನ ಕೆಲ ಅತೃಪ್ತ ಶಾಸಕರು ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಮೂರು ದಿನದಿಂದ ಸ್ವಿಚ್ ಆಫ್ ಮಾಡಿದ್ದೆ- ಕೊನೆಗೂ ಪಬ್ಲಿಕ್ ಟಿವಿಗೆ ತನ್ನ ನಿರ್ಧಾರ ತಿಳಿಸಿದ್ರು ಭೀಮಾನಾಯ್ಕ್

    ಇದೀಗ ಮಾಜಿ ಸಿಎಂ ಸಿದ್ದರಾಮಯ್ಯನವರು ಆರ್.ಶಂಕರ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಮತ್ತೊಮ್ಮೆ ನಿಮಗೆ ಸಂಪುಟದಲ್ಲಿ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರಂತೆ. ಈ ಹಿಂದೆ ಸಚಿವರಾಗಿದ್ದ ಆರ್.ಶಂಕರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗದ ಹಿನ್ನೆಲೆಯಲ್ಲಿ ಸಂಪುಟದಿಂದ ಕೊಕ್ ನೀಡಲಾಗಿತ್ತು ಎಂದು ಹೇಳಲಾಗಿತ್ತು. ಆದ್ರೆ ಇದೂವರೆಗೂ ಆರ್.ಶಂಕರ್ ಈ ಬಗ್ಗೆ ಅಧಿಕೃತ ಹೇಳಿಕೆಯನ್ನ ನೀಡಿಲ್ಲ. ಇದನ್ನೂ ಓದಿಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

    ತುಮಕೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ನಮ್ಮ 38 ಶಾಸಕರು ಯಾವುದೇ ಆಪರೇಷನ್ ಕಮಲಕ್ಕೆ ಒಳಗಾಗಲ್ಲ. ಇನ್ನು ಕಾಂಗ್ರೆಸ್ ಶಾಸಕರ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿಬಿಜೆಪಿಯ ಆಪರೇಷನ್ ಕಮಲ ಬಹುತೇಕ ಫೇಲ್?

    ಮುಂಬೈನಲ್ಲಿದ್ದಾರೆಂದು ಹೇಳಲಾಗುತ್ತಿದ್ದ ಶಾಸಕ ಭೀಮಾನಾಯ್ಕ್ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇನ್ನುಳಿದ ಶಾಸಕರು ಶೀಘ್ರದಲ್ಲಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುಂಬೈನಲ್ಲಿ ಈಗ 3-4 ಶಾಸಕರು ಇದ್ದು, ಶಾಸಕ ಉಮೇಶ್ ಜಾಧವ್ ಕೂಡ ಉಲ್ಟಾ ಹೊಡೆಯುವ ಸಾಧ್ಯತೆಯಿದೆ. ಉಮೇಶ್ ಜಾಧವ್ ವಾಪಸ್ ಬಗ್ಗೆ ಸಹೋದರ ರಾಮಚಂದ್ರ ಜಾಧವ್ ಸುಳಿವು ನೀಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕಮಟಳ್ಳಿ ನಡೆ ಮಾತ್ರ ನಿಗೂಢವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

    ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

    ಮುಂಬೈ: ಸಮ್ಮಿಶ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ನಮ್ಮನ್ನು ಗಣನೆಗೆ ತೆಗೆದುಕೊಳ್ಳದ್ದಕ್ಕೆ ನಾವು ಬೆಂಬಲವನ್ನು ವಾಪಸ್ ಪಡೆಯುತ್ತಿರುವುದಾಗಿ ರಾಣೆಬೆನ್ನೂರು ಶಾಸಕ ಆರ್. ಶಂಕರ್ ತಿಳಿಸಿದ್ದಾರೆ.

    ಮೃತ್ರಿ ಸರ್ಕಾರದ ಕಾರ್ಯವೈಖರಿಯಿಂದ ನಾವು ಬೇಸತ್ತಿದ್ದೇವೆ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ನೀಡಿದ್ದ ಮೈತ್ರಿಯನ್ನು ಹಿಂಪಡೆದಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ಮಾತನಾಡಿದ ಮತ್ತೊಬ್ಬ ಪಕ್ಷೇತರ ಶಾಸಕ ಮುಳುಬಾಗಿಲು ನಾಗೇಶ್ ಅವರು, ಜನರು ಬಿಜೆಪಿಗೆ ಬೆಂಬಲ ನೀಡುತ್ತಿದ್ದು, ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಅಂತ ಬೆಂಬಲ ನೀಡಿದ್ದೆ. ಆದರೆ ಅಂತಹ ಯಾವುದೇ ಬೆಳವಣಿಗೆಗಳು ಕಾಣುತ್ತಿಲ್ಲ. ಹೀಗಾಗಿ ನಾನು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದು, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮುಂದಾಗುತ್ತೇನೆ ಎಂದು ತಿಳಿಸಿದರು.

    ಸಚಿವ ಸ್ಥಾನ ಹಿಂಪಡೆದಿದ್ದರಿಂದ ಆರ್.ಶಂಕರ್ ಅವರು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧನವನ್ನು ಹೊರಹಾಕಿದ್ದರು. ಇತ್ತ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಇಬ್ಬರು ರಾಜ್ಯಪಾಲರಿಗೆ ಪತ್ರ ಬರೆದು ಸರ್ಕಾರಕ್ಕೆ ನೀಡಿದ ಬೆಂಬಲವವನ್ನು ವಾಪಸ್ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೋಸ್ತಿ ಸರ್ಕಾರದ ಎರಡು ವಿಕೆಟ್ ಪತನ- ಪಕ್ಷೇತರರ ಬೆಂಬಲ ವಾಪಸ್

    ದೋಸ್ತಿ ಸರ್ಕಾರದ ಎರಡು ವಿಕೆಟ್ ಪತನ- ಪಕ್ಷೇತರರ ಬೆಂಬಲ ವಾಪಸ್

    ಮುಂಬೈ: ಸಂಕ್ರಾಂತಿಯಂದು ಆಪರೇಷನ್ ಕಮಲ ನಡೆಯಲಿದೆ ಎನ್ನುವ ಸುದ್ದಿಗೆ ಪೂರಕ ಎಂಬಂತೆ ಪಕ್ಷೇತರ ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್ ಮತ್ತು ಮುಳಬಾಗಿಲು ನಾಗೇಶ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.

    ಈ ಇಬ್ಬರು ಶಾಸಕರು ಆಪರೇಷನ್ ಕಮಲಕ್ಕೆ ಒಳಗಾದ್ರಾ ಎಂಬ ಚರ್ಚೆಗಳು ಅರಂಭಗೊಂಡಿವೆ. ಇನ್ನು ಮುಂಬೈನಲ್ಲಿರುವ ಇತರೆ ಕಾಂಗ್ರೆಸ್ ನಾಯಕರ ನಡೆಯ ಮೇಲೆ ಎಲ್ಲರ ಕಣ್ಣಿದೆ. ಒಂದು ವೇಳೆ ಮುಂಬೈನಲ್ಲಿದ್ದಾರೆ ಎಂದು ಹೇಳಲಾಗುತ್ತಿರುವ 14 ಜನರು ರಾಜೀನಾಮೆ ನೀಡಿದ್ರೆ ದೋಸ್ತಿಗಳಿಗೆ ಕಂಟಕ ಎದುರಾಗುತ್ತಾ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    ಸರ್ಕಾರ ರಚನೆಯಾಗಿ ಶಾಸಕರನ್ನು ಗಣನೆಗೆ ತೆಗೆದುಕೊಳ್ಳದೇ ಆಡಳಿತ ನಡೆಸುತ್ತಿದೆ. ಈ ಅಭದ್ರ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು ನಮ್ಮ ಬೆಂಬಲವನ್ನು ವಾಪಸ್ಸು ಪಡೆಯುತ್ತಿದ್ದೇವೆ ಎಂದು ಹೇಳಿದ್ದು, ಎಲ್ಲಿಯೂ ಬಿಜೆಪಿ ಸೇರುತ್ತೇನೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಬೆಳಗಾವಿ: ಸಂಪುಟ ವಿಸ್ತರಣೆಯಲ್ಲಿ ನಮಗೂ ಸಚಿವ ಸ್ಥಾನ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಲ್ವರು ಹಾಲಿ ಶಾಸಕರನ್ನು ಕೈ ಬಿಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಈ ಮೂಲಕ ಡಿಸೆಂಬರ್ 22ರಂದು ನಡೆಯುವುದು ಸಂಪುಟ ವಿಸ್ತರಣೆಯೋ? ಅಥವಾ ಪುನರಚನೆಯೋ ಎನ್ನುವ ಪ್ರಶ್ನೆ ಶುರುವಾಗಿದೆ. ಸಂಪುಟ ಪುನರ್ ರಚನೆ ಮಾಡುವಂತೆ ಕಾಂಗ್ರೆಸ್‍ನ ಕೆಲವು ಹಿರಿಯ ಶಾಸಕರ ಪಟ್ಟು ಹಿಡಿದಿದ್ದಾರಂತೆ. ಹೀಗಾಗಿ ಅವರ ಒತ್ತಡಕ್ಕೆ ಮಣಿದ ನಾಯಕರು, ನಾಲ್ವರು ಸಚಿವರ ಹೆಸರನ್ನು ಮಂತ್ರಿಗಿರಿಯಿಂದ ಕೈಬಿಡುವ ಪಟ್ಟಿಗೆ ಸೇರಿಸಿದ್ದಾರೆ ಎನ್ನಲಾಗಿದೆ.

    ಯಾರೆಲ್ಲ ಸಂಪುಟದಿಂದ ಔಟ್:
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್.ಶಂಕರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಕೈ ನಾಯಕರು ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಮಂತ್ರಿಗಳ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕಳುಹಿಸಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿ ಮಾಹಿತಿ ಲಭಿಸಿದೆ.

    ಸಂಪುಟ ಪುನಾರಚನೆಯ ಕುರಿತು ಡಿಸೆಂಬರ್ 21ರಂದು ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಚರ್ಚೆ ನಡೆಸಿ ಯಾರಿಗೆ ಮಂತ್ರಿಗಿರಿ ನೀಡಬೇಕು ಎನ್ನುವ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

    ಸಂಪುಟ ವಿಸ್ತರಣೆ ವಿಚಾರ ಹೊರ ಬೀಳುತ್ತಿದ್ದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿದಂತೆ ಅನೇಕರು ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಬಣದ ನಾಯಕರ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಳ್ಳೆ ಮುಹೂರ್ತ ನೋಡ್ಕೊಂಡು ಕಾಂಗ್ರೆಸ್ ಸೇರ್ತೀನಿ: ಸಚಿವ ಶಂಕರ್

    ಒಳ್ಳೆ ಮುಹೂರ್ತ ನೋಡ್ಕೊಂಡು ಕಾಂಗ್ರೆಸ್ ಸೇರ್ತೀನಿ: ಸಚಿವ ಶಂಕರ್

    ಕೊಪ್ಪಳ: ಒಳ್ಳೆಯ ಮುಹೂರ್ತವನ್ನು ನೋಡಿಕೊಂಡು ನಾನು ಸಹ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದು ಅರಣ್ಯ ಇಲಾಖೆ ಸಚಿವ ಆರ್.ಶಂಕರ್ ಹೇಳಿದ್ದಾರೆ.

    ಹೌದು, ಕೆ.ಪಿ.ಜೆ.ಪಿ ಪಕ್ಷದಿಂದ ಆಯ್ಕೆಯಾಗಿದ್ದ ಶಂಕರ್ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ಈಗ ಅವರು ನಾನು ಅಧಿಕೃತವಾಗಿ ಕಾಂಗ್ರೆಸ್ಸನ್ನು ಸೇರುತ್ತೇನೆ ಎಂದು ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ರೀತಿಯ ಒತ್ತಡಗಳು ಕಾಂಗ್ರೆಸ್ಸಿನಿಂದ ಇಲ್ಲ. ನಾನು ಒಳ್ಳೆಯ ಮುಹೂರ್ತ ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿನಿ. ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು 5 ವರ್ಷ ಪೂರ್ಣಗೊಳಿಸುತ್ತದೆ. ನನ್ನ ಸಂಪೂರ್ಣ ಬೆಂಬಲ ಸಮ್ಮಿಶ್ರ ಸರ್ಕಾರಕ್ಕೆ ಇದೆ. ನನ್ನಿಂದ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಸದ್ಯ ಎಲ್ಲಾ ರೀತಿಯಿಂದಲು ಯೋಚನೆ ಮಾಡಿದ್ದು, ಶೀಘ್ರವೇ ಕಾಂಗ್ರೆಸ್ ಸೇರುತ್ತೇನೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv