Tag: R V Deshpande

  • ಶಾಲಾ ಮಕ್ಕಳಂತೆ ಎದ್ದು ನಿಲ್ಲಿಸಿ ದೇಶಪಾಂಡೆಯಿಂದ ತಹಶೀಲ್ದಾರ್‌ರಿಗೆ ಫುಲ್ ಕ್ಲಾಸ್

    ಶಾಲಾ ಮಕ್ಕಳಂತೆ ಎದ್ದು ನಿಲ್ಲಿಸಿ ದೇಶಪಾಂಡೆಯಿಂದ ತಹಶೀಲ್ದಾರ್‌ರಿಗೆ ಫುಲ್ ಕ್ಲಾಸ್

    ಯಾದಗಿರಿ: ಬರ ನಿರ್ವಹಣೆಗೆ ಸಾಕಷ್ಟು ಹಣ ಇದ್ದರೂ, ನೀರು ನೀಡಿದವರಿಗೆ ಯಾಕೆ ಪೇಮೆಂಟ್ ಮಾಡುತ್ತಿಲ್ಲ ಎಂದು ಸಚಿವ ಆರ್.ವಿ ದೇಶಪಾಂಡೆ ಯಾದಗಿರಿ ಜಿಲ್ಲೆಯ 4 ಜನ ತಹಶೀಲ್ದಾರರನ್ನು ಶಾಲಾ ಮಕ್ಕಳಂತೆ ಎದ್ದು ನಿಲ್ಲಿಸಿ, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಬುಧವಾರ ರಾತ್ರಿಯವರೆಗೂ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕಂದಾಯ ಸಚಿವ ಆರ್.ವಿ ದೇಶಪಾಂಡೆ, ಬರಗಾಲದಲ್ಲಿ ನೀರು ಪೂರೈಕೆ ಮಾಡಿದ ಟ್ಯಾಂಕರ್ ಮಾಲೀಕರಿಗೆ ಹಣ ನೀಡದೆ ಸತಾಯಿಸುತ್ತಿದ್ದ ತಹಶೀಲ್ದಾರ್ ಗಳಿಗೆ ಚಳಿ ಬಿಡಿಸಿದರು.

    ಬರಗಾಲದ ನಿರ್ವಹಣೆಗಾಗಿ ಸರ್ಕಾರ ಸಾಕಷ್ಟು ಹಣ ಬಿಡುಗಡೆ ಮಾಡಿದೆ. ಹೀಗಿದ್ದರೂ ಟ್ಯಾಂಕರ್ ಮಾಲೀಕರಿಗೆ ಯಾಕೆ ಹಣ ಬಾಕಿ ಉಳಿಸಿಕೊಂಡಿದ್ದೀರಿ. ಹಣ ಇದ್ದರೂ ಬೇಜವಬ್ದಾರಿತನ ಯಾಕೆ ಎಂದು ಜಿಲ್ಲೆಯ ಶಹಪುರ, ಸುರಪುರ, ಹುಣಸಗಿ ಮತ್ತು ವಡಗೇರಾ ತಾಲೂಕಿನ ತಹಶೀಲ್ದಾರರನ್ನು ಎದ್ದು ನಿಲ್ಲಿಸಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಜಿಲ್ಲೆಯಲ್ಲಿ ತೀವ್ರ ಬರ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳಿಗೆ ಜಿಲ್ಲಾಡಳಿತದಿಂದ ಖಾಸಗಿ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತಿತ್ತು. ಆದರೆ ಬೇಸಿಗೆ ಆರಂಭದಿಂದ ಮೇ 8ರವರೆಗೆ ಮಾತ್ರ ತಹಶೀಲ್ದಾರರು ಟ್ಯಾಂಕರ್ ಗಳಿಗೆ ಹಣ ಪಾವತಿ ಮಾಡಿದ್ದರು. ಅಲ್ಲದೆ ಹಣ ಇದ್ದರೂ ಟ್ಯಾಂಕರ್ ಮಾಲೀಕರಿಗೆ ಹಣ ನೀಡದೆ ಕಳೆದ ಎರಡು ತಿಂಗಳಿನಿಂದ ಸತಾಯಿಸುತ್ತಿದ್ದರು.

    ಈ ಬಗ್ಗೆ ಬುಧವಾರ ಜಿಲ್ಲೆಗೆ ಭೇಟಿ ಕೊಟ್ಟ ಸಚಿವರ ಎದುರು ಟ್ಯಾಂಕರ್ ಮಾಲೀಕರು ತಮ್ಮ ಅಳಲನ್ನು ತೊಡಿಕೊಂಡಿದರು. ಇದಕ್ಕೆ ಸಿಡಿಮಿಡಿಗೊಂಡ ಸಚಿವ ಆರ್.ವಿ ದೇಶಪಾಂಡೆ, ಶಾಲಾ ಮಕ್ಕಳಂತೆ ತಹಶೀಲ್ದಾರ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಮಯಕ್ಕೆ ಸರಿಯಾಗಿ ಪೇಮೆಂಟ್ ಮಾಡದ ತಹಶೀಲ್ದಾರರಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ಸಹ ನೀಡಿದ್ದಾರೆ.

  • ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

    ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

    ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ಬಿಜೆಪಿ ಶಾಸಕ ಸಿ.ಎಸ್ ನಿಂಬಣ್ಣವರ ಕಲಘಟಗಿ ಮಧ್ಯೆ ವಾಗ್ವಾದ ನಡೆದಿದೆ.

    ಈಗ ಬಿತ್ತನೆ ಆರಂಭವಾಗಿದೆ, ಈಗ ಯಾಕೆ ಹೂಳು ತೆಗೆಯುತ್ತಿರಾ, ಎರಡು ತಿಂಗಳ ಮುಂಚೆಯೇ ಯಾಕೆ ಇದೇ ಕೆಸವನ್ನು ಮಾಡಲಿಲ್ಲ. ಮಳೆ ಆರಂಭವಾಗುವ ಹೊತ್ತಿಗೆ ಹೂಳೆತ್ತೋಕೆ ಯಾಕೆ ಬಂದಿದ್ದೀರಿ ಎಂದು ಶಾಸಕ ನಿಂಬಣ್ಣವರ ಆರ್.ವಿ ದೇಶಪಾಂಡೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದಕ್ಕೆ ತೀರುಗೇಟು ನೀಡಿದ ದೇಶಪಾಂಡೆ ಅವರು, ಎಂಎಲ್‍ಎ ಅವರೇ ನೀವು ಹೇಳೋದು ಸರಿ ಇದೇ ಆದರೆ ಇದು ಸಿಎಸ್‍ಆರ್ ಕಾಮಗಾರಿ ಸರ್ಕಾರದಿಂದ ಮಾಡುತ್ತಿಲ್ಲ. ನೀವು ಕೇಳದೇ ನಾವು ಹೂಳು ತೆಗೆಯೋಕೆ ಬಂದಿದ್ದೇವೆ ನೀವು ಅದನ್ನು ತಿಳಿದುಕೊಂಡು, ಹೂಳು ತೆಗೆಯೋಕೆ ಬಂದಿದ್ದಕ್ಕೆ ನಮಗೆ ಅಭಿನಂದನೆ ಹೇಳಬೇಕು ಎಂದು ತೀರುಗೇಟು ನೀಡಿದರು. ವಾಗ್ವಾದ ತಾರಕಕ್ಕೆ ಏರಿದ ಪರಿಣಾಮ ಸ್ಥಳದಲ್ಲೇ ಇದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಬ್ಬರನ್ನೂ ಸಮಾಧಾನಪಡಿಸಿ ಕಾಮಗಾರಿ ಪೂಜೆಗೆ ಕರೆದುಕೊಂಡು ಹೋದರು.

    ಇದೇ ವೇಳೆ ಮಾತನಾಡಿದ ದೇಶಪಾಂಡೆ ಅವರು, ಈಗಾಗಲೇ ಮೋಡ ಬಿತ್ತನೆಯ ವಿಚಾರವಾಗಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವಿಚಾರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು ನನ್ನ ಜೊತೆ ಮಾತನಾಡಿದ್ದಾರೆ. ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಕೇಂದ್ರ ಮಾಡಿದ್ದೇವೆ. ಇಷ್ಟೊತ್ತಿಗೆ ರಾಜ್ಯದಲ್ಲಿ ಮಳೆಯಾಬೇಕಿತ್ತು, ಆದರೆ ಗುಜರಾತ್‍ನಲ್ಲಿ ಉಂಟಾದ ಚಂಡಮಾರುತದಿಂದ ಸಮಸ್ಯೆ ಆಗಿದೆ. ಆದಷ್ಟು ಬೇಗ ಮೋಡ ಬಿತ್ತನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

    ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

    ಮೈಸೂರು: ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿದ್ದಾರೆ.  ಇದನ್ನೂ ಓದಿ: ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಜಿಟಿಡಿ, ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಬೇರೆ ಎಲ್ಲಿಲ್ಲದ ರೋಗ ನಿಮಗೆ ನನ್ನ ಕ್ಷೇತ್ರದಲ್ಲೆ ಇದೆ ಸಭೆಯಲ್ಲಿಯೇ ತಲೆ ಚಚ್ಚಿಕೊಂಡಿದ್ದಾರೆ. ಅಲ್ಲದೆ ಇದೇ ವೇಳೆ ತಪ್ಪು ಮಾಹಿತಿ ಕೊಟ್ಟ ಅಧಿಕಾರಿಗೆ ಜಿಟಿಡಿ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ಮೇ ವರೆಗೆ ಟ್ಯಾಂಕರ್ ಬಿಲ್ ಆಗಿದ್ಯಾ? ಅದನ್ನು ನೀನು ನನಗೆ ತೋರಿಸಿದ್ದೀಯಾ?. ನೀನು ಬಿಲ್ ಕ್ಲಿಯರ್ ಮಾಡದಿದ್ರೆ ಸಸ್ಪೆಂಡ್ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

  • ಐಎಂಎ ವಂಚನೆಗೆ ಸ್ಫೋಟಕ ತಿರುವು- ಮನ್ಸೂರ್‌ನನ್ನು  ಸಚಿವ್ರ ಬಳಿ ಕರ್ಕೊಂಡು ಹೋಗಿದ್ದ ಬೇಗ್

    ಐಎಂಎ ವಂಚನೆಗೆ ಸ್ಫೋಟಕ ತಿರುವು- ಮನ್ಸೂರ್‌ನನ್ನು ಸಚಿವ್ರ ಬಳಿ ಕರ್ಕೊಂಡು ಹೋಗಿದ್ದ ಬೇಗ್

    ಬೆಂಗಳೂರು: ಐಎಂಎ ಗೋಲ್ಡ್ ಕಂಪನಿಗೆ ಎನ್‍ಒಸಿ ನೀಡುವಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಆರ್.ವಿ ದೇಶಪಾಂಡೆ ಬಳಿ ಮನ್ಸೂರ್ ಖಾನ್‍ನನ್ನು ಕರೆದೊಯ್ದಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ಸ್ವತಃ ಕಂದಾಯ ಸಚಿವರೇ ಬಾಯಿಬಿಟ್ಟಿದ್ದಾರೆ.

    ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ದೇಶಪಾಂಡೆ ಈ ಬಗ್ಗೆ ಬಿಚ್ಚಿಟ್ಟಿದ್ದಾರೆ. ಕಳೆದ ತಿಂಗಳು ವಂಚಕ ಮನ್ಸೂರ್ ಖಾನ್ ಹಾಗೂ ರೋಷನ್ ಬೇಗ್ ನನ್ನನ್ನು ಭೇಟಿ ಆಗಿದ್ದರು. ಮನ್ಸೂರ್ ಖಾನ್ ನನ್ನ ಕ್ಷೇತ್ರದವರು, ತುಂಬಾ ಒಳ್ಳೆಯ ಮನುಷ್ಯ. ಮನ್ಸೂರ್ ಖಾನ್ ಕಂಪನಿಗೆ ಎನ್‍ಒಸಿ ಕೊಡುವಂತೆ ನನ್ನ ಬಳಿ ಬೇಗ್ ಮನವಿ ಮಾಡಿದ್ದರು. ಯಾಕೆಂದರೆ ಎನ್‍ಒಸಿ ಸಿಕ್ಕಿದ್ದರೆ ಮನ್ಸೂರ್ ಖಾನ್ ಕಂಪನಿಗೆ ಬ್ಯಾಂಕ್‍ನಿಂದ 600 ಕೋಟಿ ಸಾಲ ಸಿಗುತ್ತಿತ್ತು. ಆದರೆ ಕಾನೂನಿನ ಚೌಕ್ಕಟ್ಟಿನಲ್ಲಿ ಏನು ಮಾಡಲು ಸಾಧ್ಯವೋ ಅದನ್ನಷ್ಟೇ ಮಾಡಲು ಸಾಧ್ಯ ಎಂದು ಬೇಗ್‍ಗೆ ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದು ತಿಳಿಸಿದರು.ಇದನ್ನೂ ಓದಿ:ಮನ್ಸೂರ್ ಖಾನ್‍ಗೆ ಬ್ಯಾಂಕಿಂದ ಲೋನ್ ಕೊಡಿಸಲು ಯತ್ನ – ಎನ್‍ಒಸಿ ಕೊಡಿಸಲು ಸಚಿವರ ದುಸ್ಸಾಹಸ

    ಈ ಮೂಲಕ ಮನ್ಸೂರ್ ಖಾನ್ ಕಂಪನಿಯನ್ನು ಉಳಿಸಲು ಶಿವಾಜಿನಗರದ ಕಾಂಗ್ರೆಸ್ ಶಾಸಕ ಯತ್ನಿಸಿದ್ದರಾ? ದೇಶಪಾಂಡೆ ಬಳಿಗೆ ಖಾನ್‍ನನ್ನು ಕರೆದುಕೊಂಡು ಹೋಗಿದ್ದ ಬೇಗ್ ಅವರಿಗೆ ಇದರಿಂದ ಲಾಭವೇನಿತ್ತು ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಒಟ್ಟಿನಲ್ಲಿ ಈ ಪ್ರಕರಣ ಯಾವೆಲ್ಲಾ ತಿರುವು ಪಡೆದುಕೊಳ್ಳುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

  • ಶೆಟ್ಟರ್ ಮಾತಿಗೆ ದೇಶಪಾಂಡೆ ಗರಂ- ಅತಿಕ್ರಮಣ ತೆರವಿಗೆ ಅಧಿಕಾರಿಗಳಿಗೆ ಕೊಟ್ರು 24 ಗಂಟೆ ಗಡವು

    ಶೆಟ್ಟರ್ ಮಾತಿಗೆ ದೇಶಪಾಂಡೆ ಗರಂ- ಅತಿಕ್ರಮಣ ತೆರವಿಗೆ ಅಧಿಕಾರಿಗಳಿಗೆ ಕೊಟ್ರು 24 ಗಂಟೆ ಗಡವು

    ಧಾರವಾಡ: ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೈತ್ರಿ ಸರ್ಕಾರದ ಬಗ್ಗೆ ಆಡಿದ ಮಾತಿಗೆ ಸಚಿವ ಆರ್.ವಿ. ದೇಶಪಾಂಡೆ ಸಿಡಿಮಿಡಿಗೊಂಡಿದ್ದು, ಶೆಟ್ಟರ್ ಮಾತಿನ ಕೋಪವನ್ನು ಅಧಿಕಾರಿಗಳ ಮೇಲೆ ತೀರಿಸಿಕೊಂಡಿದ್ದಾರೆ.

    ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾ ಭವನದಲ್ಲಿ ಇಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್.ವಿ. ದೇಶಪಾಂಡೆ 4ನೇ ತ್ರೈಮಾಸಿಕ ಕೆಡಿಪಿ ಸಭೆ ಏರ್ಪಡಿಸಿದ್ದರು. ಈ ವೇಳೆ ಸಭೆಯ ಮಧ್ಯೆ ಜಗದೀಶ್ ಶೆಟ್ಟರ್ `ಯಾಕಾದ್ರೂ ಇರಬೇಕ್ರಿ ಸರ್ಕಾರ’ ಎನ್ನುವ ಮಾತೇ ಸಚಿವರ ಸಿಡಿಮಿಡಿಗೆ ಕಾರಣವಾಯ್ತು.

    ಹುಬ್ಬಳ್ಳಿಯಲ್ಲಿ ಜನರು ಓಡಾಡೋದಕ್ಕೆ ಆಗದಷ್ಟು ಅನೇಕ ರಸ್ತೆಗಳು ಅತಿಕ್ರಮಣ ಆಗಿವೆ. ಈಗ ಸಣ್ಣ ಸಣ್ಣ ಮಕ್ಕಳು ಕೂಡ ಅತಿಕ್ರಮಣದ ಬಗ್ಗೆ ಮಾತನಾಡುವಂತಾಗಿದೆ, ನಾನು ದಾಖಲೆಗಳನ್ನು ಕೂಡ ಕೊಟ್ಟಿದ್ದೇನೆ. ಆದರೂ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಸ್ತೆಗಳ ಅತಿಕ್ರಮಣ ತೆರವು ಮಾಡುತ್ತಿಲ್ಲ ಎಂದು ಶೆಟ್ಟರ್ ಆರೋಪಿಸಿದರು.

    ಅಲ್ಲದೆ `ಅತಿಕ್ರಮಣ ತೆರವು ಮಾಡುವ ಗಟ್ಸ್ ಇಲ್ಲದೇ ಹೋದರೆ ಯಾಕಾದ್ರೂ ಇರಬೇಕ್ರಿ ಈ ಸರ್ಕಾರ’ ಎಂದು ದೇಶಪಾಂಡೆ ಅವರ ಎದುರೇ ಮೈತ್ರಿ ಸರ್ಕಾರಕ್ಕೆ ಛೀಮಾರಿ ಹಾಕಿದರು. ಇದಕ್ಕೆ ಸಿಡಿಮಿಡಿಗೊಂಡ ಸಚಿವ ದೇಶಪಾಂಡೆ ಅವರು ಸಭೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಶೆಟ್ಟರ್ ಪ್ರಸ್ತಾಪ ಮಾಡಿರುವ ರಸ್ತೆಗಳ ಅತಿಕ್ರಮಣ ತೆರವು ಮಾಡಲು ಅಧಿಕಾರಿಗಳಿಗೆ 24 ಗಂಟೆಗಳ ಗಡುವು ನೀಡಿ ಎಚ್ಚರಿಕೆ ನೀಡಿದರು.

  • ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ, ಮಗ ಹೇಗೆ ಬ್ರಾಹ್ಮಣ ಆಗ್ತಾನೆ : ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

    ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ, ಮಗ ಹೇಗೆ ಬ್ರಾಹ್ಮಣ ಆಗ್ತಾನೆ : ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ

    – ರಾಹುಲ್ ಗಾಂಧಿಗೆ ದೇಶ, ಧರ್ಮದ ಬಗ್ಗೆ ಪ್ರಜ್ಞೆಯಿಲ್ಲ

    ಕಾರವಾರ: ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ ಆದ್ರೆ ಮಗ ಹೇಗೆ ಬ್ರಾಹ್ಮಣನಾಗಲು ಸಾಧ್ಯ ಎಂದು ರಾಹುಲ್ ಗಾಂಧಿ ಅವರ ಬ್ರಾಹ್ಮಣ ಹೇಳಿಕೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯವಾಡಿದ್ದಾರೆ.

    ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಿಜೆಪಿ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಕುಟುಂಬದ ಧರ್ಮವನ್ನೇ ಪ್ರಶ್ನೆ ಮಾಡಿದ್ದಾರೆ.

    ರಾಹುಲ್ ಗಾಂಧಿ ಅವರ ಬ್ರಾಹ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿ ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ ಆದ್ರೆ ಮಗ ಹೇಗೆ ಬ್ರಾಹ್ಮಣ ಆಗಲು ಸಾಧ್ಯ? ಜಗತ್ತಿನ ಯಾವುದೇ ಪ್ರಯೋಗಾಲಯದಲ್ಲೂ ಇರದ ಹೈಬ್ರಿಡ್ ತಳಿ ಕಾಂಗ್ರೆಸ್ ಲ್ಯಾಬ್‍ನಲ್ಲಿ ಮಾತ್ರ ಇದೆ. ರಾಹುಲ್ ಗಾಂಧಿ ಸುಳ್ಳು ಹೇಳಿದರೂ ನಂಬುವಂತಹ ಸುಳ್ಳು ಹೇಳಬೇಕು ಎಂದು ಟೀಕಿಸಿದ್ದಾರೆ.

    ರಾಹುಲ್ ಗಾಂಧಿಗೆ ರಫೇಲ್ ಪದದ ಅರ್ಥ ಗೊತ್ತಿಲ್ಲ. ಅದರಲ್ಲಿ ಎಷ್ಟು ಅಕ್ಷರ ಇದೆ ಎಂದು ತಿಳಿದಿಲ್ಲ. ಅವರು ರಫೇಲ್ ಅಂದರೆ ಮೂರು ಚಕ್ರದ ಸೈಕಲ್ ಎಂದು ತಿಳಿದುಕೊಂಡಿದ್ದಾರೆ. ಸುಮ್ಮನೆ ರಫೇಲ್ ವಿಚಾರ ಹಿಡಿದುಕೊಂಡು ಬಿಜೆಪಿ ವಿರುದ್ಧ ಮಾತನಾಡುತ್ತಾರೆ. ರಾಹುಲ್ ಅವರು ಬರೀ ಹಸಿ ಸುಳ್ಳನ್ನು ಹೇಳುತ್ತಾರೆ. ಇನ್ನೂ ಎರಡೇ ತಿಂಗಳು ಉಳಿದಿದೆ. ಆ ಮೇಲೆ ಸಾಮೂಹಿಕ ರಾಜಕೀಯ ಆತ್ಮಹತ್ಯೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಹಾಗೂ ವಿವಿಧ ಎಡಪಂಥೀಯ ಪಕ್ಷಗಳು ಮಾಡಿಕೊಂಡ ಮಹಾ ಘಟಬಂಧನ್ ಕುರಿತು ಲೇವಡಿಮಾಡಿದರು.

    ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ ದೇಶಪಾಂಡೆರವರು ಪರ್ಸಂಟೇಜ್ ಪಾಂಡೆ. ಇದು ಎಲ್ಲರಿಗೂ ಗೊತ್ತು. ದೇಶಪಾಂಡೆ ಅವರು ಜಿಲ್ಲೆಯ ರಸ್ತೆ ಅಥವಾ ಯಾವುದೇ ಅಭಿವೃದ್ಧಿ ಯೋಜನೆಯಲ್ಲಿ ಪರ್ಸಂಟೇಜ್ ತೆಗೆದುಕೊಳ್ಳುತ್ತಾರೆ. ಸದ್ಯದಲ್ಲಿಯೇ ಚುನಾವಣೆಗೆ ಬರುತ್ತಾರೆ ಎಂದು ಹೇಳಿ ವ್ಯಂಗ್ಯವಾಡಿದರು.

    https://www.youtube.com/watch?v=Qs55NIJhfl0&list=PLB83sv5noycv11k7vzFiNgvcg_4JBgLVd

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

    ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

    ಬಾಗಲಕೋಟೆ: ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಕಾಂಗ್ರೆಸ್ ನಾಯಕರಾಗಿ ಬಿಜೆಪಿಯವರ ಜೊತೆ ಊಟ ಮಾಡಿ ಪಕ್ಷದ ಮರ್ಯಾದೆ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.

    ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ತಂಡವೊಂದು ಜಿಲ್ಲೆಗೆ ಬಂದಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ನಾಯಕರ ಜೊತೆ ಊಟ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿದ್ದರೂ ಎಲ್ಲರನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಜೊತೆ ಊಟ ಮಾಡಿದ್ದಾರೆ. ಇದು ಪಕ್ಷಕ್ಕೆ ಮಾಡಿದ ಅವಮಾನ. ಪಕ್ಷದ ಹಿರಿಯ ನಾಯಕನಾಗಿ ಬಿಜೆಪಿ ಜೊತೆ ಹೋಗಿದ್ದು ತಪ್ಪು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

    ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತು ಸಚಿವರು ಬರ ಅಧ್ಯಯನವನ್ನು ವೀಕ್ಷಿಸಿದ್ದಾರೆ. ಇದು ಕಾಟಾಚಾರದ ಬರ ಅಧ್ಯಯನ ಎಂದು ಜಿ.ಪಂ ಕಾಂಗ್ರೆಸ್ ಸದಸ್ಯ ಹಾಗೂ ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆರ್ ವಿ ದೇಶಪಾಂಡೆ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಗಣನೆಗೆ ತೆಗೆದುಕೊಂಡಿಲ್ಲ. ಜೊತೆಗೆ ಪ್ರತಿಪಕ್ಷ ಬಿಜೆಪಿ ಕಚೇರಿಯಲ್ಲಿ ಊಟ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆನಂದ್ ಆಸ್ನೋಟಿಕರ್‌ಗೆ ಆರ್‌ವಿ ದೇಶಪಾಂಡೆ ಶಾಕ್

    ಆನಂದ್ ಆಸ್ನೋಟಿಕರ್‌ಗೆ ಆರ್‌ವಿ ದೇಶಪಾಂಡೆ ಶಾಕ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಭಲವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ನಮ್ಮದೇ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶಾಕ್ ಕೊಟ್ಟಿದ್ದಾರೆ.

    ಶಿರಸಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ತಪ್ಪಿಲ್ಲ. ಆದರೆ ಇದಕ್ಕೂ ಮುನ್ನ ಹಲವಾರು ವಿಷಯಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

    ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವಲ್ಲಿದ್ದು, ನಮ್ಮ ಪಕ್ಷದಷ್ಟು ಜೆಡಿಎಸ್ ಪ್ರಭಲವಾಗಿಲ್ಲ. ಹೀಗಾಗಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯೇ ಲೋಕಸಭಾ ಚುನಾವಣೆಗೆ ಎದುರಿಸಬೇಕಾಗುತ್ತದೆ ಎಂದು ದೇಶಪಾಂಡೆ ಹೇಳುವ ಮೂಲಕ ಪುತ್ರ ಪ್ರಶಾಂತ್ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಯೋಚನೆ ಹೂಡಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.

    ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಸಚಿವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕ್ಯಾಬಿನೆಟ್ ನಲ್ಲಿ ಅಭಿಪ್ರಾಯ ನೀಡಲು ಅವಕಾಶವಿದೆ. ಆದರೆ ಒಮ್ಮೆ ಸಚಿವ ಸಂಪುಟದಲ್ಲಿ ನಿರ್ಣಯವಾದರೆ ಅದಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕು. ಅನಾವಶ್ಯಕವಾಗಿ ಮಾತನಾಡುವುದು ತಪ್ಪು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತಿಳಿಸಿದರು.

    ಖಾತೆ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಬಹಳ ಇನ್ನಿಂಗ್ಸ್ ಆಡಿದ್ದೇನೆ. ಬಹಳ ಆಸಕ್ತಿ ಇಟ್ಟುಕೊಳ್ಳುವ ವ್ಯಕ್ತಿ ನಾನಲ್ಲ. ಸಂಪುಟ ವಿಸ್ತರಣೆ ಆಗಬೇಕಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನಗೂ ಸಿಎಂ ಆಗಲು ಅರ್ಹತೆ ಇರಬಹುದು, ಆದ್ರೆ ಅವಕಾಶ ಸಿಕ್ಕಿಲ್ಲ: ದೇಶಪಾಂಡೆ

    ನನಗೂ ಸಿಎಂ ಆಗಲು ಅರ್ಹತೆ ಇರಬಹುದು, ಆದ್ರೆ ಅವಕಾಶ ಸಿಕ್ಕಿಲ್ಲ: ದೇಶಪಾಂಡೆ

    ನವದೆಹಲಿ: ನನಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇರಬಹುದು, ಆದರೆ ಅವಕಾಶ ಸಿಕ್ಕಿಲ್ಲ. ಹಾಗೆಂದ ಮಾತ್ರಕ್ಕೆ ನಾನು ಎಂದಿಗೂ ಬೇಸರ ಪಟ್ಟುಕೊಂಡಿಲ್ಲವೆಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆ ನೀಡುವಂತಹ ವ್ಯಕ್ತಿಯಲ್ಲ. ಅವರ ಹೇಳಿಕೆಯಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಯಾಗುತ್ತಿದೆ. ನನ್ನ ಅನುಭವದಲ್ಲಿ ಸಾಕಷ್ಟು ರಾಜಕೀಯ ಏರುಪೇರುಗಳನ್ನು ಕಂಡಿದ್ದೇನೆ. ಆದರೆ ಈ ಥರದ ವಾತಾವರಣ ಕಂಡಿಲ್ಲ. ಸಿದ್ದರಾಮಯ್ಯನವರು ತಮ್ಮ ಹೇಳಿಕೆಗೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರಕ್ಕೆ ಅವರ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಸಿಎಂ ಆಗ್ತೀನಿ ಅಂತ ಹೇಳಿದ್ದು ಯಾಕೆ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

    ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನನ್ನನ್ನು ಸಹ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳುತ್ತಾರೆ. ಅವರಿಗೆ ಗೊತ್ತಿರಬಹುದು ನನಗೂ ಸಿಎಂ ಆಗುವ ಅರ್ಹತೆಯಿದೆ ಎಂದು ಹೀಗಾಗಿ ಅವರು ಆ ರೀತಿ ಹೇಳಿದ್ದಾರೆ. ನನಗೂ ಸಿಎಂ ಆಗುವ ಆರ್ಹತೆ ಇರಬಹುದು, ಆದರೆ ಅವಕಾಶಗಳು ಸಿಕ್ಕಿಲ್ಲ. ಅವಕಾಶ ಸಿಕ್ಕಿಲ್ಲವೆಂದು ನಾನೆಂದೂ ಬೇಸರಪಟ್ಟುಕೊಂಡವನಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶುಕ್ರವಾರದ ಸಭೆಯಲ್ಲಿನ ನಿರ್ಧಾರಗಳೇ ಸರ್ಕಾರದ ಗೈಡ್‍ಲೈನ್ಸ್: ಆರ್ ವಿ ದೇಶಪಾಂಡೆ

    ಶುಕ್ರವಾರದ ಸಭೆಯಲ್ಲಿನ ನಿರ್ಧಾರಗಳೇ ಸರ್ಕಾರದ ಗೈಡ್‍ಲೈನ್ಸ್: ಆರ್ ವಿ ದೇಶಪಾಂಡೆ

    ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರದ ಗುದ್ದಾಟದ ನಡುವೆ ಶುಕ್ರವಾರ ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರಗಳೇ ಸರ್ಕಾರಕ್ಕೇ ಗೈಡ್‍ಲೈನ್ಸ್ ಅಂತ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಇದೇ ಶುಕ್ರವಾರ 29ನೇ ತಾರೀಖಿನಂದು ನಡೆಯಲಿದೆ. ಸಭೆಯಲ್ಲಿ ಅಧ್ಯಕ್ಷರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ರಾಜ್ಯ ಕಾರ್ಯದರ್ಶಿ ವೇಣುಗೋಪಾಲ್, ಜೆಡಿಎಸ್ ಕಾರ್ಯದರ್ಶಿ ಡ್ಯಾನಿಶ್ ಅಲಿ ಹಾಗೂ ಮುಖಂಡರನ್ನು ಒಳಗೊಂಡಿದ್ದು, ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳೇ ಸರ್ಕಾರಕ್ಕೆ ಗೈಡ್‍ಲೈನ್ಸ್ ಆಗಿದೆ. ಸರ್ಕಾರ ಇದನ್ನೇ ಭಗವದ್ಗೀತೆ, ಕುರಾನ್, ಬೈಬಲ್ ಅಂತಾ ತಿಳಿದುಕೊಂಡು ಇದರ ಆಧಾರದಲ್ಲಿ ಸರ್ಕಾರ ನಡೆಯಬೇಕು ಎಂದು ತಿಳಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದ ಗುದ್ದಾಟದ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಬಲಿಷ್ಟ ಹಾಗೂ ಸುಭದ್ರವಾಗಿದ್ದು, ಸರ್ಕಾರ ಜವಾಬ್ದಾರಿಯಿಂದ ಕೆಲಸ ಮಾಡ್ತಿದೆ. ಎಲ್ಲಾ ಸಚಿವರು ತಮ್ಮ ತಮ್ಮ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಕಾನೂನಿನ ಪ್ರಕಾರ ಸರ್ಕಾರ ಐದು ವರ್ಷ ಉಳಿಯಬೇಕು, ಯಾವುದೇ ತೊಂದರೆ ಇಲ್ಲದೆ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ ಎಂದು ಹೇಳಿಕೆ ನೀಡಿದ್ದಾರೆ.