Tag: Rabada

  • ವಿಶ್ವಕಪ್‍ನಿಂದ ದಕ್ಷಿಣ ಆಫ್ರಿಕಾ ಔಟ್ – ಐಪಿಎಲ್‍ನತ್ತ ಬೊಟ್ಟು ಮಾಡಿದ ಡುಪ್ಲೆಸಿಸ್

    ವಿಶ್ವಕಪ್‍ನಿಂದ ದಕ್ಷಿಣ ಆಫ್ರಿಕಾ ಔಟ್ – ಐಪಿಎಲ್‍ನತ್ತ ಬೊಟ್ಟು ಮಾಡಿದ ಡುಪ್ಲೆಸಿಸ್

    ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್‍ನಿಂದಲೇ ತಂಡ ವಿಶ್ವಕಪ್‍ನಲ್ಲಿ ಹಿನ್ನಡೆ ಅನುಭವಿಸಲು ಕಾರಣ ಎಂದು ದಕ್ಷಿಣ ಆಫ್ರಿಕಾ ತಂಡದ ನಾಯಕ ಡುಪ್ಲೆಸಿಸ್ ಅಭಿಪ್ರಾಯ ಪಟ್ಟಿದ್ದಾರೆ.

    ದಕ್ಷಿಣ ಆಫ್ರಿಕಾ ಟೀಂ ಮ್ಯಾನೇಜ್‍ಮೆಂಟ್ ತಂಡದ ಕೆಲ ಆಟಗಾರರಿಗೆ ಶ್ರೀಮಂತ ಲೀಗ್ ಆಡಲು ಅನುಮತಿ ನೀಡಬಾರದಿತ್ತು ಎಂದು ಫ್ಲಾಫ್ ಡುಪ್ಲೆಸಿಸ್ ಹೇಳಿದ್ದಾರೆ.

    ಭಾನುವಾರ ನಡೆದ ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49 ರನ್ ಗಳ ಅಂತರದಿಂದ ಸೋಲುಂಡಿತ್ತು. ಪಂದ್ಯದ ಬಳಿಕ ಮಾತನಾಡಿದ ಡುಪ್ಲೆಸಿಸ್, ತಂಡದ ಸೋಲಿನ ಬಗ್ಗೆ ಸರಿಯಾದ ಉತ್ತರ ನೀಡಲಾಗುತ್ತಿಲ್ಲ. ವಿಶ್ವಕಪ್ ದೃಷ್ಟಿಯಿಂದ ನಾವು ಐಪಿಎಲ್ ಆಡಬಾರದಿತ್ತು. ಕನಿಷ್ಠ ತಂಡದ ಪ್ರಮುಖ ವೇಗಿಯಾಗಿದ್ದ ರಬಾಡರನ್ನು ಐಪಿಎಲ್‍ನಿಂದ ದೂರ ಉಳಿಸಿಕೊಳ್ಳಬೇಕಿತ್ತು ಎಂದಿದ್ದಾರೆ.

    ಆಟಗಾರರು ವಿಶ್ರಾಂತಿ ಇಲ್ಲದೇ ನಿರಂತರವಾಗಿ ಟೂರ್ನಿಗಳಲ್ಲಿ ಆಡಿದರೆ ಇಂತಹ ಫಲಿತಾಂಶವೇ ಎದುರಾಗುತ್ತದೆ. ತಂಡದ ಪ್ರಮುಖ ಆಟಗಾರರು ಗಾಯದ ಸಮಸ್ಯೆ ಎದುರಿಸಿದ್ದು ಕೂಡ ಸೋಲಿಗೆ ಕಾರಣವಾಗಿದೆ. ಟೂರ್ನಿಯ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡದಿದ್ದರೆ ನಮ್ಮ ಮೇಲಿರುವ ನಂಬಿಕೆಯನ್ನು ಕಳೆದುಕೊಳ್ಳುತ್ತೇವೆ ಎಂದಿದ್ದಾರೆ.

    ಇತ್ತ ರಬಾಡ 6 ಪಂದ್ಯಗಳಿಂದ 6 ವಿಕೆಟ್ ಗಳನ್ನು ಮಾತ್ರವೇ ಪಡೆದಿದ್ದರು. ಬಹುಮುಖ್ಯ ಟೂರ್ನಿಯಲ್ಲೇ ರಬಾಡ ಮಿಂಚಲು ವಿಫಲವಾಗಿದ್ದು ದಕ್ಷಿಣ ಅಫ್ರಿಕಾ ತಂಡದ ಮೇಲೆ ಹೆಚ್ಚಿನ ಪ್ರಭಾವ ಉಂಟು ಮಾಡಿತ್ತು. ಆದರೆ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರಬಾಡ 12 ಪಂದ್ಯಗಳಲ್ಲಿ 25 ವಿಕೆಟ್ ಪಡೆದಿದ್ದರು. ಆದರೆ ಟೂರ್ನಿಯಲ್ಲಿ ಗಾಯಗೊಂಡಿದ್ದ ರಬಾಡ ಸರಿಯಾದ ವಿಶ್ರಾಂತಿ ಪಡೆಯದೆ ವಿಶ್ವಕಪ್‍ನಲ್ಲಿ ಭಾಗವಹಿಸಿದ್ದರು. ಅಲ್ಲದೇ ತಂಡದ ಸ್ಟಾರ್ ಬೌಲರ್ ಡೇಲ್ ಸ್ಟೇನ್ ಕೂಡ ಐಪಿಎಲ್‍ನಲ್ಲೇ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದಿದ್ದರು.

    ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದರೆ, ಇತ್ತ ಪಾಕ್ ಸೆಮಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ. ಇದುವರೆಗೂ 6 ಪಂದ್ಯಗಳನ್ನು ಆಡಿರುವ ಪಾಕಿಸ್ತಾನ 5 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದಿದೆ.

  • 33 ರನ್‍ಗೆ 7 ವಿಕೆಟ್ ಬಿತ್ತು, ನಾಲ್ವರು ‘ಶೂನ್ಯ’ಕ್ಕೆ ಔಟ್ – ಟೀಂ ಇಂಡಿಯಾಗೆ ಹರಿಣಗಳ ವಿರುದ್ಧ ಗೆಲುವು

    33 ರನ್‍ಗೆ 7 ವಿಕೆಟ್ ಬಿತ್ತು, ನಾಲ್ವರು ‘ಶೂನ್ಯ’ಕ್ಕೆ ಔಟ್ – ಟೀಂ ಇಂಡಿಯಾಗೆ ಹರಿಣಗಳ ವಿರುದ್ಧ ಗೆಲುವು

    ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ವೈಟ್ ವಾಷ್‍ನಿಂದ ತಪ್ಪಿಸಿಕೊಂಡಿದೆ. ಗೆಲ್ಲಲು 241 ರನ್‍ಗಳನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ 177 ರನ್‍ಗೆ ಆಲೌಟಾಯಿತು. ಈ ಮೂಲಕ 63 ರನ್‍ಗಳಿಂದ ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿತು. 144 ರನ್‍ಗೆ 4ನೇ ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ 177 ರನ್‍ಗಳಿಗೆ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡಿತು.

    ಆರಂಭಿಕ ಆಟಗಾರ ಎಲ್ಗರ್ ಭಾರತದ ದಾಳಿಗೆ ಪ್ರತಿರೋಧ ತೋರಿ 86 ರನ್ ಗಳಿಸಿದರೂ ಭಾರತದ ವೇಗಿಗಳ ಮುಂದೆ ಇತರೆ ಎಲ್ಲಾ ಆಟಗಾರರು ರನ್ ಗಳಿಸಲು ತಿಣುಕಾಡಿದರು. ಇದರಿಂದಾಗಿ ದಕ್ಷಿಣ ಆಫ್ರಿಕಾದ ಆಟಗಾರರು ಎರಡಂಕಿ ರನ್ ತಲುಪುವಲ್ಲೂ ವಿಫಲರಾದರು. ಅಲ್ಲದೆ ನಾಲ್ವರು ಆಟಗಾರು ಶೂನ್ಯಕ್ಕೆ ಔಟಾದರು.

    ಟೀಂ ಇಂಡಿಯಾ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ 5 ವಿಕೆಟ್ ಗಳಿಸಿದರೆ, ಬೂಮ್ರಾ 2, ಇಶಾಂತ್ ಶರ್ಮಾ 2, ಪಾಂಡ್ಯಾ ಹಾಗೂ ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಗಳಿಸಿದರು. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‍ನಲ್ಲಿ 187 ಹಾಗೂ ಎರಡನೇ ಇನ್ನಿಂಗ್ಸ್‍ನಲ್ಲಿ 247 ರನ್ ಗಳಿಸಿದರೆ ದಕ್ಷಿಣ ಆಫ್ರಿಕಾ 194 ಹಾಗೂ 177 ರನ್ ಗಳಿಸಿತು. ಈ ಮೂಲಕ ಭಾರತ 63 ರನ್ ಗಳ ಗೆಲುವು ಸಾಧಿಸಿತು. ಭಾರತದ ಪರವಾಗಿ ಬೂಮ್ರಾ ಮೊದಲ ಇನ್ನಿಂಗ್ಸ್‍ನಲ್ಲಿ 5 ವಿಕೆಟ್ ಗಳಿಸಿದ್ದರು.

    ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಆರಂಭಿಕ ಆಟಗಾರ ಎಲ್ಗರ್ ಅಜೇಯ 86 ರನ್, ಹಶೀಂ ಆಮ್ಲ 52, ಎಬಿಡಿ ವಿಲಿಯರ್ಸ್ 6, ಫಿಲಾಂಡರ್ 10, ಮಕ್ರ್ರಮ್ 4 ರನ್ ಗಳಿಸಿದರು. ಡಿ’ಕಾಕ್, ಫೆಲುಕ್ವಾಯೋ, ರಬಾಡ ಹಾಗೂ ಮಾರ್ಕೆಲ್ ಸೊನ್ನೆ ಸುತ್ತಿದರು.