Tag: Rachita Ram

  • ಡ್ರೋನ್‌ ಆಪರೇಟರ್‌ಗೆ ನಷ್ಟ ತುಂಬಿ ಕೊಡುವುದಾಗಿ ಮಗ ಒಪ್ಪಿಕೊಂಡಿದ್ದಾನೆ: ಜಮೀರ್‌ ಅಹ್ಮದ್

    ಡ್ರೋನ್‌ ಆಪರೇಟರ್‌ಗೆ ನಷ್ಟ ತುಂಬಿ ಕೊಡುವುದಾಗಿ ಮಗ ಒಪ್ಪಿಕೊಂಡಿದ್ದಾನೆ: ಜಮೀರ್‌ ಅಹ್ಮದ್

    ಜೈದ್ ಖಾನ್ (Zaid Khan) ನಟನೆಯ ‘ಕಲ್ಟ್’ (Cult) ಸಿನಿಮಾದ ಡ್ರೋನ್ ಹಾನಿ ಪ್ರಕರಣದ ಕುರಿತು ಇದೀಗ ಸಚಿವ ಜಮೀರ್ ಅಹ್ಮದ್ (Zameer Ahmad) ರಿಯಾಕ್ಟ್ ಮಾಡಿದ್ದಾರೆ. ಡ್ರೋನ್ ಆಪರೇಟರ್ ಸಂತೋಷ್‌ಗೆ‌ ಮಗ ಜೈದ್‌ ಖಾನ್ ಸಹಾಯ ಮಾಡೋದಾಗಿ‌ ಜಮೀರ್ ತಿಳಿಸಿದ್ದಾರೆ.‌ ಇದನ್ನೂ ಓದಿ:BBK 11: ಬಿಗ್ ಬಾಸ್‌ನಿಂದ ಹೊರಬಂದ ಚೈತ್ರಾ ಕುಂದಾಪುರ

    ‘ಕಲ್ಟ್ ಸಿನಿಮಾ ಚಿತ್ರೀಕರಣ ವೇಳೆ, ಡ್ರೋನ್‌ಗೆ ಹಾನಿ ಪ್ರಕರಣದ ಕುರಿತು ಜಮೀರ್ ಮಾತನಾಡಿ, ಡ್ರೋನ್ ವಿಚಾರ ನನ್ನ ಗಮನಕ್ಕೆ ಬಂದಿದೆ. ಚಿತ್ರೀಕರಣದ ವೇಳೆ ಡ್ರೋನ್ ಕ್ಯಾಮೆರಾಗೆ ಡ್ಯಾಮೆಜ್ ಆಗಿದೆ. ಡ್ರೋನ್ ಹಾರಿಸೋದು ಅವರ ಜವಾಬ್ದಾರಿ ಆಗಿದೆ. ಡ್ರೋನ್ ಜಾಸ್ತಿ ಹೈಟ್ ಹಾರಿಸಿ ಡ್ಯಾಮೆಜ್ ಆಗಿದೆ. ಅದಕ್ಕೆ ಯಾರು ಹೊಣೆಯಾಗ್ತಾರೆ? ಎಂದು ಪ್ರಶ್ನಿಸಿದರು.

    ಆದರೂ ನಷ್ಟ ತುಂಬಿ ಕೊಡೋದಾಗಿ ನನ್ನ ಮಗ ಒಪ್ಪಿಕೊಂಡಿದ್ದಾನೆ. ತಪ್ಪು ಆಗಿದ್ದು ಡ್ರೋನ್ ಆಪರೇಟರ್ ಕಡೆಯಿಂದಲೇ ಎಂದಿದ್ದಾರೆ. ಅವನು ಬಡವ ಇದ್ದಾನೆ. ಅದಕ್ಕಾಗಿ ಸಹಾಯ ಮಾಡಬೇಕು. ನನ್ನ ಮಗನೇ ಸಹಾಯ ಮಾಡೋದಾಗಿ ತಿಳಿಸಿದ್ದಾರೆ. ಡ್ರೋನ್ ಕ್ಯಾಮೆರಾ ಕೊಂಡುಕೊಳ್ಳಲು ಸಹಾಯ ಮಾಡ್ತೀವಿ ಎಂದು ಜಮೀರ್ ಮಾತನಾಡಿದ್ದಾರೆ.

    ಏನಿದು ಪ್ರಕರಣ?

    ಇದೇ ತಿಂಗಳ ನ.25ರಂದು ಚಿತ್ರದುರ್ಗದಲ್ಲಿ ಕಲ್ಟ್ ಚಿತ್ರತಂಡ ಶೂಟಿಂಗ್ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಲವು ಸಿನಿಮಾಗಳಿಗೆ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿರುವ ಸಂತೋಷ್ ಸ್ವಂತವಾಗಿ ಡ್ರೋನ್ ಹೊಂದಿದ್ದರು. 25 ಲಕ್ಷ ರೂ. ಸಾಲಸೋಲ ಮಾಡಿ ಡ್ರೋನ್ ಖರೀದಿಸಿದ್ದ ಸಂತೋಷ್ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25,000 ರೂ. ಚಾರ್ಜ್ ಮಾಡುತ್ತಿದ್ದರು.

    ಮಾರ್ಟಿನ್, ಯುವ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್, ಕಲ್ಟ್ ಚಿತ್ರಕ್ಕೂ ಶೂಟಿಂಗ್ ಮಾಡುವ ಕೆಲಸಕ್ಕೆ ಒಪ್ಪಿಕೊಂಡಿದ್ದರು. ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ರಿಸ್ಕ್ ಇದೆ ಅಂತ ಎಚ್ಚರಿಕೆ ಕೊಟ್ಟಿದ್ದರೂ ನಿರ್ದೇಶಕ ಮಾಡಲೇಬೇಕು ಎಂದು ಒತ್ತಾಯ ಮಾಡಿದ್ರು ಎನ್ನಲಾಗಿದೆ. ಶೂಟಿಂಗ್ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ಟಚ್ ಆಗಿ ಪೀಸ್ ಪೀಸ್ ಆಗಿತ್ತು. ಇದಾದ ಬಳಿಕ ಸಂತೋಷ್‌ಗೆ ಕೊಂಚವೂ ನಷ್ಟ ಕಟ್ಟಿಕೊಡದ ಚಿತ್ರತಂಡ ಕಲ್ಟ್ ಚಿತ್ರವನ್ನ ಸಚಿವ ಜಮೀರ್ ಪುತ್ರ ಜೈದ್ ನಿರ್ಮಾಣ ಮಾಡುತ್ತಿದ್ರು. ಹೀಗಾಗಿ ಸಂತೋಷ್ ಜೈದ್ ಬಳಿಯೇ ಪರಿಹಾರ ನೀಡುವಂತೆ ಕೇಳಿಕೊಂಡಿದ್ದ. ಆದ್ರೆ ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಜಮೀರ್ ಪುತ್ರ ಜೈದ್ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್ ರೆಕಾರ್ಡಿಂಗ್ ಆಗಿದ್ದ ಮೆಮೊರಿ ಕಾರ್ಡ್ ಕಿತ್ತುಕೊಂಡಿದ್ದಾರೆ, ಆಧಾರ್ ಕಾರ್ಡ್ ನಂಬರ್ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

  • ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನಿನಾಸಂ (Satish Ninasam) ಮತ್ತೆ ಒಂದಾಗಿದ್ದಾರೆ. ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಅಯೋಗ್ಯ ಸಿನಿಮಾದ ಪಾರ್ಟ್ 2 (Ayogya 2) ಸೆಟ್ಟೇರುತ್ತಿದ್ದು, ಈಗಾಲೇ ಮುಹೂರ್ತಕ್ಕೆ ಡೇಟ್ ಫಿಕ್ಸ್ ಆಗಿದೆ.

    6 ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ ‘ಅಯೋಗ್ಯ 2’ ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನಿರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು‌ ಸಜ್ಜಾಗಿದೆ. ಇನ್ನು ‘ಅಯೋಗ್ಯ 2’ ಸಿನಿಮಾ ಡಿಸೆಂಬರ್ 11ರಂದು ಸೆಟ್ಟೇರಲಿದ್ದು, ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಎಂ ಮುನೇಗೌಡ ‘ಅಯೋಗ್ಯ 2’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ‌‌ ಇರಲಿದೆ.

    ರಚಿತಾ ರಾಮ್, ಸತೀಶ್ ನಿನಾಸಂ‌, ರವಿಶಂಕರ್, ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ‘ಅಯೋಗ್ಯ’ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ಅಯೋಗ್ಯ- 2ನಲ್ಲಿ ಮುಂದುವರೆಯುತ್ತಿರುವುದು ವಿಶೇಷ. ಇದನ್ನೂ ಓದಿ:ಸಂಸತ್ ಲೈಬ್ರರಿಯಲ್ಲಿ `ಸಾಬರಮತಿ ರಿಪೋರ್ಟ್‌’ ಸಿನಿಮಾ ವೀಕ್ಷಿಸಿದ ಮೋದಿ

    ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಅಂದರೆ ನಿರೀಕ್ಷೆ ಮತ್ತು ಕುತೂಹಲ ಕೊಂಚ ಜಾಸ್ತಿನೆ ಇರಲಿದೆ. ಹಾಗಾಗಿ ಅಯೋಗ್ಯ-2 ಕೂಡ ಸೆಟ್ಟೇರುವುದಕ್ಕೂ ಮೊದಲೇ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಪಾರ್ಟ-2 ಹೇಗಿರಲಿದೆ ರವಿ ಶಂಕರ್ ಮತ್ತು ಸತೀಶ್ ನಡುವಿನಕಾದಾಟ, ಜಿದ್ದಾಜಿದ್ದಿ ಹಾಗೆ ಮುಂದುವರೆಯಲಿದಿಯಾ ಕಾದುನೋಡಬೇಕು.

  • ಅವನು ಸಂಜು ಅವಳು ಗೀತಾ: `ಸಂಜು ಮತ್ತು ಗೀತಾ 2′ ಸಾಂಗ್ ರಿಲೀಸ್

    ಅವನು ಸಂಜು ಅವಳು ಗೀತಾ: `ಸಂಜು ಮತ್ತು ಗೀತಾ 2′ ಸಾಂಗ್ ರಿಲೀಸ್

    ವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ (Nagasekhar) ಅವರ ನಿರ್ದೇಶನದ ಈ ವರ್ಷದ  ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. (Sanju Weds Geetha 2) ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ  ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ  ಅಧ್ಯಕ್ಷ ಉಮೇಶ್ ಬಣಕಾರ್ ಕೂಡ ಹಾಜರಿದ್ದರು. ಕವಿರಾಜ್ ಅವರ ಸಾಹಿತ್ಯ ರಚನೆಯ ಈ ಹಾಡಿಗೆ ಶ್ರೀಧರ್ ವಿ.ಸಂಭ್ರಮ್ ಅದ್ಭುತವಾದ ಟ್ಯೂನ್ ಹಾಕಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ‌ ನಾಗಶೇಖರ್ ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಳ್ಳಬೇಕಾಗಿತ್ತು. ಒಟ್ಟು 6 ಸುಂದರ ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ  ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ ಲ್ಯಾಂಡ್ ಸೈನಿಕನೊಬ್ಬ ತನ್ನ ರಾಣಿ ಸೆಲ್ವಿಕ್ ಳನ್ನು ತನ್ನ  ಹೃದಯದಲ್ಲಿಟ್ಟುಕೊಂಡು ಪ್ರೀತಿ ಮಾಡ್ತಿರ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲಿಕ್ಕೆ ಆಗ್ತಿರಲಿಲ್ಲ, ಏಕೆಂದರೆ ಆಕೆ ಮಹಾರಾಣಿ. ಆತನದು ಒನ್ ವೇ ಲವ್, ಒಮ್ಮೆ ಜರ್ಮನ್ ಸೈನಿಕರು ಸ್ವಿಟ್ಜರ್ ಲ್ಯಾಂಡ್ ಮೇಲೆ ಅಟ್ಯಾಕ್ ಮಾಡ್ತಾರೆ. ಆಗ ವೀರಾವೇಶದಿಂದ ಹೋರಾಡಿದ ಆ ಸೈನಿಕ ಅವರನ್ನು ಸೋಲಿಸಿ ವೀರಮರಣವನ್ನಪ್ಪುತ್ತಾನೆ, ತನ್ನ ರಾಣಿಗೆ ಆಕೆಯ ಕಿರೀಟವನ್ನು ಮತ್ತೆ ತಂದುಕೊಡುತ್ತಾನೆ. ಸಾಯೋ ಸಮಯದಲ್ಲಿ ಆತ ರಾಣಿಗೆ ತನ್ನ ರಕ್ತದಲ್ಲಿ “ಐ ಲವ್ ಯು ಫಾರೆವರ್” ಅಂತ ಒಂದು ಪತ್ರ ಬರೆಯುತ್ತಾನೆ. ಈ ಹಾಡು ಚಿತ್ರಕಥೆಯಲ್ಲಿ ಬಹಳ ಮುಖ್ಯವಾದ ಭಾಗವಾಗಿರುತ್ತದೆ. ಈ ಸಾಂಗ್ ನಲ್ಲಿ ಮೊದಲಬಾರಿಗೆ ಆಕ್ಷನ್ ಇಟ್ಟಿದ್ದೇನೆ ಎಂದು ಹೇಳಿದರು.

    ಶ್ರೀಧರ್ ವಿ.ಸಂಭ್ರಮ್ ಮಾತನಾಡಿ ‌ನಾಗಶೇಖರ್ ಅವರು ಈ ಥರದ ಕಥೆ ಇದೆ ಎಂದಾಗ ಖುಷಿಯಾಯ್ತು. ಅವರುಸುಲಭವಾಗಿ ಟ್ಯೂನ್ ಒಪ್ಪುವವರಲ್ಲ, ಆದರೆ ಈ ನಾನು ಈ ಟ್ಯೂನ್ ಕೊಟ್ಟ ಕೂಡಲೇ ಒಪ್ಪಿದರು. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿ ಮೂಡಿಬಂದಿವೆ ಎಂದರು. ಸಾಹಿತಿ ಕವಿರಾಜ್ ಮಾತನಾಡಿ ಇದು ಸಿನಿಮಾ ಕೆಲಸ ಅನಿಸೋದೇ ಇಲ್ಲ. ನಮಗೆ ಅಷ್ಟು ಫ್ರೀಡಂ ಕೊಟ್ಟಿರ್ತಾರೆ. ನಾಗಶೇಖರ್ ಸಿನಿಮಾಗೆ ಹಾಡುಗಳನ್ನು ಬರೀಬೇಕಾದ್ರೆ ತಾನಾಗೇ ಒಳ್ಳೊಳ್ಳೆ ಪದಗಳು ಹುಟ್ಟಿಕೊಳ್ಳುತ್ತವೆ. ನಿರ್ದೇಶಕರು  ನಮಗೆಲ್ಲ ಒಂದು ರೆಸಾರ್ಟ್ ಬುಕ್ ಮಾಡಿ ಲಿರಿಕ್ ಬರೆಯಲು ಹೇಳಿದ್ದರು, ಈ ಚಿತ್ರದ ಸಾಂಗ್ ಬರೆಯಲು ಹೋದಾಗ ಏನೋ ಹೊಸ ಸ್ಪೂರ್ತಿ ಬರುತ್ತದೆ  ಎಂದು ಹೇಳಿದರು.

    ನಟ ಉಪೇಂದ್ರ ಮಾತನಾಡಿ ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನು ಅಂತ ಗೊತ್ತಾಯ್ತು.ನಾನು ಅವತ್ತೇ ಹೇಳಿದೆ ಈ ಸಿನಿಮಾ ಸೂಪರ್ ಸಕ್ಸಸ್ ಅಂತ. ಈಗ ಈ ಹಾಡನ್ನು ನೋಡಿದಾಗ ಡಿಸೈಡ್ ಮಾಡಿದೆ. 100% ಹಿಟ್ ಆಗುತ್ತೆ ಎಂದು ಕಾನ್ಫಿಡೆಂಟಾಗಿ ಹೇಳಿದರು. ನಿರ್ಮಾಪಕ ಛಲವಾದಿ ಕುಮಾರ್,  ಮಾತನಾಡುತ್ತ  ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ಖಂಡಿತ ಹಿಟ್ ಆಗುತ್ತೆ ಎಂಬ ಬಂಬಿಕೆಯಿದೆ ಎಂದರು.  ನಾಯಕಿ ರಚಿತಾರಾಮ್ ಶೂಟಿಂಗ್ ನಲ್ಲಿದ್ದುದರಿಂದ ಬಂದಿರಲಿಲ್ಲ.

    ವಿತರಕ ಗೋಕುಲರಾಜ್ ಮಾತನಾಡಿ ನನಗೆ ಚಿತ್ರದ ಸ್ಯಾಂಪಲ್ಸ್  ತೋರಿಸಿದರು.‌ ತುಂಬಾ ಚೆನ್ನಾಗಿ ಬಂದಿದೆ. ಎಂದರು.   ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ನಟ  ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ಹೆಸರಾಂತ ಕಲಾವಿದರೇ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ನ  ಅದ್ಭುತವಾದ ಲೊಕೇಶನ್‌ಗಳಲ್ಲಿ 72 ದಿನಗಳ ಕಾಲ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ.  ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ  ಸಮಸ್ಯೆ,  ಅಲ್ಲಿನ ಕಪ್ಪುಮಣ್ಣಿನ  ಕಥೆಯನ್ನು  ಈ ಚಿತ್ರದ ಮೂಲಕ ನಾಗಶೇಖರ್ ಹೇಳ ಹೊರಟಿದ್ದಾರೆ. ಈಗಿನ  ಕಾಲದ ಲವ್‌ಸ್ಟೋರಿ  ಜೊತೆಗೆ ಒಂದು ಸರ್‌ ಪ್ರೈಸ್ ಕೂಡ  ಈ ಚಿತ್ರದಲ್ಲಿದೆ.

     

    ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ  ಮೊದಲಬಾರಿಗೆ  ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ  ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ  ಸಾಕಷ್ಟು  ಕಲಾವಿದರು ಈ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

  • ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ ರಚಿತಾ ರಾಮ್ ರಿಯಾಕ್ಷನ್

    ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ ರಚಿತಾ ರಾಮ್ ರಿಯಾಕ್ಷನ್

    ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ (Darshan) ಬೇಲ್ ಸಿಕ್ಕ ಬೆನ್ನಲ್ಲೇ ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ರಿಯಾಕ್ಷನ್ ಕೊಟ್ಟಿದ್ದಾರೆ. ಕಾಲಾಯ ತಸ್ಮೈ ನಮಃ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಮನಸ್ಸು ನಿರಾಳ ಆಗಿದೆ: ತರುಣ್ ಸುಧೀರ್

    ದರ್ಶನ್ ಬೇಲ್ ಸಿಕ್ಕಿರುವ ಖುಷಿಯನ್ನು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಲವೇ ಎಲ್ಲದ್ದಕ್ಕೂ ಉತ್ತರ ಕೊಡಲಿದೆ ಎಂಬರ್ಥದಲ್ಲಿ ಕಾಲಾಯ ತಸ್ಮೈ ನಮಃ ಎಂದು ಅವರು ಹೇಳಿರುವ ತುಣುಕನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ನವಗ್ರಹ ಸಿನಿಮಾದ ಟ್ಯೂನ್ ಕೇಳಿ ಬರುತ್ತಿದೆ. ನಟಿಯ ವಿಡಿಯೋ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಜೈ ಡಿಬಾಸ್ ಎಂದಿದ್ದಾರೆ.

     

    View this post on Instagram

     

    A post shared by Rachita Ram (@rachita_instaofficial)

    ಅಂದಹಾಗೆ, ದರ್ಶನ್ ಜೊತೆ ‘ಬುಲ್ ಬುಲ್’ ಸಿನಿಮಾದಲ್ಲಿ ರಚಿತಾ ನಟಿಸಿದ್ದರು. ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ನಟಿ ಪಾದಾರ್ಪಣೆ ಮಾಡಿದರು.

  • ‘ಕಲ್ಟ್’ ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಚಿತಾ ರಾಮ್

    ‘ಕಲ್ಟ್’ ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಚಿತಾ ರಾಮ್

    ನ್ನಡದ ‘ಬುಲ್ ಬುಲ್’ ನಟಿ ರಚಿತಾ ರಾಮ್‌ಗೆ (Rachita Ram) ಇಂದು (ಅ.3) ಹುಟ್ಟುಹಬ್ಬ ಸಂಭ್ರಮವಾಗಿದ್ದು, ನಟಿಗೆ ‘ಕಲ್ಟ್’ (Cult Film) ಚಿತ್ರತಂಡ ನೀಡಿದೆ. ಹುಟ್ಟುಹಬ್ಬ ಆಚರಣೆಯ ಸುಂದರ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್‌

    2 ದಿನಗಳ ಹಿಂದೆಯೇ ತಾವು ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಎಂದಿನಂತೆ ಭಾನುವಾರ ಸಿಗೋಣ ಎಂದು ನಟಿ ಮಾಹಿತಿ ಹಂಚಿಕೊಂಡಿದ್ದರು. ಆದರೆ ಇದೀಗ ಚಿತ್ರತಂಡ ಒತ್ತಾಯಕ್ಕೆ ಮಣಿದು ರಚಿತಾ, ತಂಡದ ಜೊತೆ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.

    ‘ಕಲ್ಟ್’ ಚಿತ್ರದ ನಾಯಕ ಝೈದ್ ಖಾನ್ ಜೊತೆ ನಿಂತು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಒಬ್ಬರಿಗೊಬ್ಬರು ಕೇಕ್ ತಿನ್ನಿಸಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಚಿತಾ, ಝೈದ್ ಖಾನ್ ಜೊತೆ ಕ್ಯಾಮೆರಾ ಮ್ಯಾನ್ ಜೆ.ಎಸ್ ವಾಲಿ, ಆಲ್ ಓಕೆ, ಡೈರೆಕ್ಟರ್ ಅನಿಲ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಇನ್ನೂ ಕಳೆದ 20 ದಿನಗಳಿಂದ ‘ಕಲ್ಟ್’ ಸಿನಿಮಾದ ಶೂಟಿಂಗ್ ಬಿರುಸಿನಿಂದ ಉಡುಪಿಯಲ್ಲಿ ನಡೆಯುತ್ತಿದೆ. ಶೂಟಿಂಗ್ ಬಿಡುವಿನ ಮಧ್ಯೆ ರಚಿತಾ ಹುಟ್ಟುಹಬ್ಬ ಆಚರಿಸಿದ್ದಾರೆ.

    ಇನ್ನೂ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ಮಲೈಕಾ ವಸುಪಾಲ್ ನಾಯಕಿಯರಾಗಿ ನಟಿಸುತ್ತಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆಯಾಗಿದೆ. ಸದ್ಯದಲ್ಲೇ ಸಿನಿಮಾದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲಿದೆ.

  • ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ ರಚಿತಾ ರಾಮ್- ಫ್ಯಾನ್ಸ್ ಬೇಸರ

    ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ ರಚಿತಾ ರಾಮ್- ಫ್ಯಾನ್ಸ್ ಬೇಸರ

    ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅಭಿಮಾನಿಗಳಿಗೆ ಕಹಿ ಸುದ್ದಿ ಕೊಟ್ಟಿದ್ದಾರೆ. ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಫ್ಯಾನ್ಸ್‌ಗೆ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ:ದೊಡ್ಮನೆ ಧಗ ಧಗ- ಉಗ್ರಂ ಮಂಜು, ಚೈತ್ರಾ ನಡುವೆ ಕಿರಿಕ್

     

    View this post on Instagram

     

    A post shared by Rachita Ram (@rachita_instaofficial)


    ಎಲ್ಲರಿಗೂ ನಮಸ್ಕಾರ, ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಈ ಬಾರಿ ಚಿತ್ರೀಕರಣ ಇರುವುದರಿಂದ ನನ್ನ ಹುಟ್ಟುಹಬ್ಬ (ಅ.3) ಆಚರಣೆಯನ್ನು ಮಾಡಿಕೊಳ್ಳುತ್ತಿಲ್ಲ ಎಂದು ಹೇಳಲು ಇಚ್ಚಿಸುತ್ತೇನೆ. ಎಲ್ಲರಿಗೂ ಕ್ಷಮೆಯಾಚಿಸುತ್ತಾ ಎಂದಿನಂತೆ ಪ್ರತಿ ಭಾನುವಾರ ಚಿತ್ರೀಕರಣ ಮುಗಿಸಿ ಬಂದ ನಂತರ ಸಿಗುತ್ತೇನೆ ಎಂದು ನಟಿ ಮನವಿ ಮಾಡಿದ್ದಾರೆ.

    ಅಂದಹಾಗೆ, ಶ್ರೀನಗರ ಕಿಟ್ಟಿ ಜೊತೆಗಿನ ‘ಸಂಜು ವೆಡ್ಸ್ ಗೀತಾ 2’ನಲ್ಲಿ ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಈ ಸಿನಿಮಾದ ಜೊತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ.

  • ಝೈದ್ ಖಾನ್ ಗೆ ಜೊತೆಯಾದ ಡಿಂಪಲ್ ಕ್ವೀನ್ ರಚ್ಚು

    ಝೈದ್ ಖಾನ್ ಗೆ ಜೊತೆಯಾದ ಡಿಂಪಲ್ ಕ್ವೀನ್ ರಚ್ಚು

    ಸಂಜು ವೆಡ್ಸ್ ಗೀತಾ 2 ಸಿನಿಮಾ ಮುಗಿಯುತ್ತಿದ್ದಂತೆಯೇ ರಚಿತಾ ರಾಮ್‍ ತಮ್ಮ ಫ್ಯಾನ್ಸ್ ಗೆ ಹೊಸ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ (Zaid Khan) ನಟನೆಯ ಹೊಸ ಸಿನಿಮಾಗೆ ರಚಿತಾ ರಾಮ್ (Rachita Ram) ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮಾಹಿತಿಯನ್ನು ಸ್ವತಃ ಝೈದ್ ಖಾನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಬಹಿರಂಗ ಪಡಿಸಿದ್ದಾರೆ.

    ಬಹುತೇಕ ಎಲ್ಲಾ ಸ್ಟಾರ್ ನಟರ ಜೊತೆ ನಟಿಸಿರುವ ರಚಿತಾ ರಾಮ್ ಇದೀಗ ಇನ್ನೊಂದು ನಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. `ಕಲ್ಟ್’ ಸಿನಿಮಾ ತಂಡಕ್ಕೆ ರಚಿತಾ ರಾಮ್ ಸೇರಿಕೊಂಡಿದ್ದಾರೆ. ಈ ವಿಚಾರ ಆಫಿಷಿಯಲ್ ಘೋಷಣೆಯಾಗಿದೆ. ಕಲ್ಟ್ ಇದು ಝೈದ್ ಖಾನ್ ಅಭಿನಯದ ಎರಡನೇ ಚಿತ್ರ. ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಝೈದ್ ಖಾನ್ ಇದೀಗ ಕಲ್ಟ್  (Cult) ಶೀರ್ಷಿಕೆಯಡಿ ಚಿತ್ರ ಮಾಡುತ್ತಿದ್ದಾರೆ. ಝೈದ್‌ಗೆ ಜೋಡಿಯಾಗಿ ರಚಿತಾ ರಾಮ್ ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.

    ಅನಿಲ್ ಕುಮಾರ್ ನಿರ್ದೇಶಿಸುತ್ತಿರುವ `ಕಲ್ಟ್’ ಚಿತ್ರ ಫಸ್ಟ್ ಲುಕ್ ಪೋಸ್ಟರ್‌ನಿಂದಲೇ ವೈರಲ್ ಆಗಿತ್ತು. ಇದೀಗ ಝೈದ್‌ಖಾನ್ ಅವರ `ಬ್ಲಡ್ಡೀ ಲವ್’ಗೆ ಬಣ್ಣ ಹಚ್ಚುತ್ತಿದ್ದಾರೆ ರಚಿತಾ. ಮ್ಯಾಟ್ನಿ ಬಳಿಕ ರಚಿತಾ ಒಪ್ಪಿಕೊಂಡ ನಯಾ ಪ್ರಾಜೆಕ್ಟ್ ಇದು. ಇದೀಗ ಕಲ್ಟ್ಗೆ ನಾಯಕಿಯಾಗೋದ್ರ ಮೂಲಕ ದಶಕದಿಂದ ಬೇಡಿಕೆ ಉಳಿಸಿಕೊಂಡಿರುವ ಸ್ಯಾಂಡಲ್‌ವುಡ್ ನಟಿ ಎಂಬ ಹೆಗ್ಗಳಿಕೆ ರಚಿತಾ ಪಾಲಾಗುತ್ತೆ.

    ಸ್ಟಾರ್ ನಟರು-ಯುವ ನಟರಿಗೂ ಜೋಡಿಯಾಗಿ ಹೊಂದಿಕೆಯಾಗುವ ರಚಿತಾ ಇದೀಗ ವಿಭಿನ್ನ ಕಥೆಯ ಚಿತ್ರದಲ್ಲಿ ಝೈದ್‌ಗೆ ಜೋಡಿಯಾಗಿದ್ದಾರೆ. ಕಲ್ಟ್ ಚಿತ್ರ ಆ್ಯಕ್ಷನ್ ರೊಮ್ಯಾಂಟಿಕ್ ಜಾನರ್ ಚಿತ್ರವಾಗಿದ್ದು ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಒಂದೊಂದಾಗೇ ಹೊರಬೀಳಲಿದೆ.

  • ರಾಜನನ್ನು ರಾಜನ ಥರ ನೋಡೋಕೆ ಇಷ್ಟ: ದರ್ಶನ್ ಸ್ಥಿತಿ ಕಂಡು ರಚಿತಾ ರಾಮ್ ಭಾವುಕ

    ರಾಜನನ್ನು ರಾಜನ ಥರ ನೋಡೋಕೆ ಇಷ್ಟ: ದರ್ಶನ್ ಸ್ಥಿತಿ ಕಂಡು ರಚಿತಾ ರಾಮ್ ಭಾವುಕ

    ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ರಚಿತಾ ರಾಮ್ (Rachita Ram) ಭೇಟಿಯಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜನನ್ನು ರಾಜನ ಥರ ನೋಡೋಕೆ ಇಷ್ಟ ಎಂದು ನಟಿ ಭಾವುಕರಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್ – ದರ್ಶನ್ A1 ಆರೋಪಿ?

    ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಜೈಲಿನಲ್ಲಿ ಅವರನ್ನು ಹಾಗೇ ನೋಡೋಕೆ ಕಷ್ಟ ಆಗುತ್ತಿದೆ. ಎಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಅವರಿಗೆ ಹೇಳಿ ಬಿಟ್ಟು ಬಂದೆ ನಾವೆಲ್ಲರೂ ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇವೆ. ಪ್ಲೀಸ್ ಬೇಗ ಬನ್ನಿ ಅಂತ. ನನಗೆ ಕಾನೂನು ಮೇಲೆ ನಂಬಿಕೆ ಇದೆ. ದರ್ಶನ್ ಸರ್ ಆದಷ್ಟು ಬೇಗ ಹೊರಗೆ ಬರುತ್ತಾರೆ ಎಂದು ನಂಬಿಕೆ ಇದೆ ಎಂದು ರಚಿತಾ ರಾಮ್ ಮಾತನಾಡಿದ್ದಾರೆ.

    ರಾಜನನ್ನು ರಾಜನ ಥರನೇ ನನಗೆ ನೋಡೋಕೆ ಇಷ್ಟ. ಇವತ್ತು ಅವರನ್ನು ನೋಡಿ ನಿರಾಳವಾಯ್ತು ಎಂದು ನಟಿ ಭಾವುಕರಾಗಿದ್ದಾರೆ. ಅವರು ಅಲ್ಲಿ ಆರೋಗ್ಯವಾಗಿ ಆರಾಮ ಆಗಿ ಇದ್ದಾರೆ. ನಾನು ಅವರ ಬ್ಯಾನರ್‌ನಿಂದ ಪರಿಚಯ ಆದವಳು. ನನಗೆ ಇವತ್ತು ಏನೇ ಹೆಸರು ಇದ್ದರೂ ಅದು ಅವರಿಂದ ಸಿಕ್ಕಿದೆ. ಅವರು ಅವತ್ತು ಒಪ್ಪಿಕೊಂಡಿದಕ್ಕೆ ನಾನು ಬಿಂದ್ಯಾ ರಾಮ್‌ನಿಂದ ರಚಿತಾ ರಾಮ್ ಆಗಿ ಬೆಳೆದಿದ್ದು. ನಾನು ಯಾವಗಲೂ ಅವರ ಕುಟುಂಬಕ್ಕೆ ಆಭಾರಿಯಾಗಿರುತ್ತೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ ಆದರೆ ಅವರೇ ನನಗೆ ಸಮಾಧಾನ ಮಾಡಿದರು. ಅವರು ಆದಷ್ಟು ಬೇಗ ಹೊರಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಚಿತಾ ರಾಮ್ ಮಾತನಾಡಿದ್ದಾರೆ.

  • ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಶೂಟಿಂಗ್‍ ಮುಕ್ತಾಯ

    ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಶೂಟಿಂಗ್‍ ಮುಕ್ತಾಯ

    ಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 (Sanju Weds Geetha 2) ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ  ರಮ್ಯಾ ಬದಲು ನಾಯಕಿಯಾಗಿ  ರಚಿತಾರಾಮ್ ಎಂಟ್ರಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್, ನಮ್ಮ ಚಿತ್ರ ವರ್ಷದ ಹಿಂದೆ ಶುರುವಾಗಿತ್ತು. ಶಿಡ್ಲಘಟ್ಟ,  ಸ್ವಿಟ್ಜರ್ ಲ್ಯಾಂಡ್, ಬೆಂಗಳೂರು ಸುತ್ತಮುತ್ತ ಓಟ್ಟು 72 ದಿನಗಳ ಕಾಲ ಆರು ಹಂತಗಳಲ್ಲಿ ಯಶಸ್ವಿಯಾಗಿ  ಶೂಟಿಂಗ್ ನಡೆಸಲಾಯಿತು, ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಇದು ಸಾಧ್ಯವಾಯಿತು. ಕಿಟ್ಟಪ್ಪ, ರಚಿತಾರಾಮ್, ಸಾಧು ಕೋಕಿಲ, ತಬಲಾನಾಣಿ ಸೇರಿದಂತೆ ಬಿಗ್ ಸ್ಟಾರ್ ಕಾಸ್ಟ್ ಚಿತ್ರದಲ್ಲಿದೆ. ಈಗಾಗಲೇ ಎಡಿಟಿಂಗ್, ಡಬ್ಬಿಂಗ್ ಕೂಡ ನಡೆದಿದೆ.  ಸದ್ಯದಲ್ಲೇ  ಆಡಿಯೋ ರಿಲೀಸ್ ಮಾಡೋ ಪ್ಲಾನಿದೆ. ಇವತ್ತಿನ ಟೆಕ್ನಾಲಜಿಯ ಲವ್ ಸ್ಟೋರಿ,  ಜೊತೆಗೆ ಒಂದು ಸರ್ ಪ್ರೈಸ್ ಚಿತ್ರದಲ್ಲಿದೆ. ಇದರಲ್ಲೂ ನಾಯಕ ಬ್ಯೂಟಿ, ಐ ಲವ್ ಯೂ ಗೀತಾ ಅಂತಲೇ ಹೇಳ್ತಾನೆ ಎಂದರು.

    ನಂತರ ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಕಳೆದ ಆಗಸ್ಟ್ ನಲ್ಲಿ ಶೂಟಿಂಗ್ ಶುರು ಮಾಡಿದ್ದೆವು. ಆಗಸ್ಟ್ 19ಕ್ಕೇ ಶೂಟಿಂಗ್ ಮುಗಿದಿದೆ.ನಮ್ಮ ಟೆಕ್ನಿಕಲ್ ಟೀಮ್ ಸಹಕಾರ ತುಂಬಾ ಚೆನ್ನಾಗಿತ್ತು. ಒಂದೇ ಒಂದು ಅನ್ ವಾಂಟೆಡ್ ಶಾಟ್ಸ್ ತೆಗೆದಿಲ್ಲ. ಹಾಸನ, ಹಾವೇರಿ ಹೀಗೆ ಬೇರೆ ಬೇರೆ ಊರುಗಳಲ್ಲಿ  ನಮ್ಮ ಚಿತ್ರದ ಮೂರು ಹಾಡುಗಳನ್ನು ರಿಲೀಸ್ ಮಾಡೋ ಪ್ಲಾನಿದೆ ಎಂದು ಹೇಳಿದರು. ನಾಯಕ ಕಿಟ್ಟಿ ಮಾತನಾಡುತ್ತ ಇವತ್ತಿಗೆ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಸದ್ಯದಲ್ಲೇ ಹಾಡುಗಳ ಮೂಲಕ ನಿಮ್ಮ ಮುಂದೆ ಬರುತ್ತೇವೆ‌. ಇಲ್ಲಿ ರೇಶ್ಮೆ ಬೆಳೆಗಾರನಾಗಿ ನಾನು ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು.

    ನಾಯಕಿ ರಚಿತಾರಾಂ ಮಾತನಾಡಿ ಈ ಸಿನಿಮಾದ ಜರ್ನಿ ತುಂಬಾ ಚೆನ್ನಾಗಿತ್ತು. ನನ್ನ ಪಾತ್ರದ ಡಬ್ಬಿಂಗ್ ಮಾಡಿಲ್ಲ, ಟೈಟಲ್ ಅದೇ ಇದ್ದರೂ ಇದು ಬೇರೆ ಥರದ ಕಥೆ. ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ಸಮಯದಲ್ಲಿ ನಮಗಾದ ಅನುಭವ ನೆನಪಲ್ಲುಳಿದಿದೆ. ನವೆಂಬರ್-ಡಿಸೆಂಬರ್ ವೇಳೆ ಆದರೂ ವೆದರ್ ನಮಗೆಲ್ಲೂ ತೊಂದರೆ ಕೊಡಲಿಲ್ಲ, ಸಿನಿಮಾ ವಿಜ್ಯುಯಲಿ ತುಂಬಾ ಚೆನ್ನಾಗಿ ಬಂದಿದೆ. ಅದಕ್ಕೆ ಸತ್ಯ ಹೆಗಡೆ ಅವರೇ ಕಾರಣ. ಮುಖ್ಯವಾಗಿ ನಾವು ಹೋದಲ್ಲೆಲ್ಲ ವಾತಾವರಣ ನಮಗೆ ಸಹಕಾರಿಯಾಗಿತ್ತು ಎಂದರು. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ  ನಮ್ಮ ಮಣ್ಣಿನ ಪ್ರೇಮಿಗಳ  ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ.

     

    ಛಾಯಾಗ್ರಾಹಕ‌ ಸತ್ಯ ಹೆಗ್ಡೆ ಮಾತನಾಡಿ ಒಂದು  ಸೂಪರ್ ಹಿಟ್ ಚಿತ್ರದ ಸೀಕ್ವೇಲ್ ಮಾಡುವಾಗ ಭಯ ಇದ್ದೇ ಇರುತ್ತೆ. ಶಿಡ್ಲಘಟ್ಟದಲ್ಲಿ ಶೂಟ್ ಮಾಡಿದ್ದು ನಮಗೆ ಸರ್ ಪ್ರೈಸ್ ಹಾಗೀ ಚಾಲೆಂಜ್ ಆಗಿತ್ತು. ಈ ಚಿತ್ರದಲ್ಲಿ ಕಥೆ ಹೇಳುವ ರೀತಿ ಚೇಂಜ್ ಮಾಡಿಕೊಂಡಿದ್ದೇವೆ. ಸ್ವಿಟ್ಜರ್ ಲ್ಯಾಂಡ್ ನ ಹನ್ನೊಂದು ಲೊಕೇಶನ್ ಗಳಲ್ಲಿ  ಚಿತ್ರೀಕರಣ ನಡೆಸಿದ್ದೇವೆ ಎಂದು ಹೇಳಿದರು. ಸಾಧು ಕೋಕಿಲ, ತಬಲಾನಾಣಿ, ಮೂಗು ಸುರೇಶ್ ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಚಿತ್ರದ ಕುರಿತಂತೆ ಮಾತನಾಡಿದರು. ಸಂಗೀತ ನಿರ್ದೇಶಕ‌  ಶ್ರೀಧರ ವಿ. ಸಂಭ್ರಮ್ ಚಿತ್ರದಲ್ಲಿ ಐದು ಸುಂದರ ಹಾಡುಗಳನ್ನು  ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ.  ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ರಿಲೀಸ್  ಮಾಡುತ್ತಿದೆ.

  • ಪ್ರೀ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ ಸಂಜು ವೆಡ್ಸ್ ಗೀತಾ

    ಪ್ರೀ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ ಸಂಜು ವೆಡ್ಸ್ ಗೀತಾ

    ನಿರ್ದೇಶಕ ನಾಗಶೇಖರ್ ಸಾರಥ್ಯದ ‘ಸಂಜು ವೆಡ್ಸ್ ಗೀತಾ-2’ (Sanju Weds Geeta 2) ಪ್ರಾರಂಭದಿಂದಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.  ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು  ನಾಗಶೇಖರ್  ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ  ರಮ್ಯಾ ಬದಲು ರಚಿತಾರಾಮ್ ಎಂಟ್ರಿಯಾಗಿದ್ದಾರೆ. ಈ ಚಿತ್ರದ ಪ್ರೀ ಕ್ಲೈಮ್ಯಾಕ್ಸ್  (Pre Climax) ದೃಶ್ಯದ ಚಿತ್ರೀಕರಣ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿತ್ತು. ಅಲ್ಲಿ ನಾಯಕ ಶ್ರೀನಗರ ಕಿಟ್ಟಿ ಒಬ್ಬ ಸೈನಿಕನ ಗೆಟಪ್ ನಲ್ಲಿದ್ದರು. ಜರ್ಮನ್ ಸೈನಿಕರ ವಿರುದ್ದ ಸೆಣೆಸಾಟ ನಡೆಸಿ  ಅವರ  ಹಿಡಿತದಿಂದ  ರಾಣಿಯನ್ನು ಬಿಡಿಸಿಕೊಂಡು ಬರುವ ಸನ್ನಿವೇಶವದು. ಆ ದೃಶ್ಯವನ್ನು ಗ್ರೀನ್ ಮ್ಯಾಟ್ ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.

    ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ  ನಮ್ಮ ಮಣ್ಣಿನ ಪ್ರೇಮಿಗಳ  ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ನಟಿ ರಾಗಿಣಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ  ನಟ ಚೇತನ್ ಚಂದ್ರ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್, ಈಗಾಗಲೇ ಚಿತ್ರದ ಬಹುತೇಕ  ಚಿತ್ರೀಕರಣ ಮುಗಿದಿದೆ. ಇದು ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಸೀನ್. ಇದರ ನಂತರ ನೆದರ್ ಲ್ಯಾಂಡ್ನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಚಿತ್ರದ ಚಿತ್ರೀಕರಣ ಅಂದುಕೊಂಡ ಪ್ಲಾನ್ ಪ್ರಕಾರ ಸರಾಗವಾಗಿ ಮುಗಿಯುತ್ತಿದೆ. ಹನ್ನೆರಡು ಕೋಟಿ ಅಂದುಕೊಂಡ ಬಜೆಟ್ ಈಗ ಹದಿನೈದು ಕೋಟಿಯಾಗಿದೆ.

    ಶೂಟಿಂಗ್ ಜೊತೆಗೇ ಎಡಿಟಿಂಗ್ ಸೇರಿದಂತೆ ಚಿತ್ರದ ಪೋಸ್ಟ ಪ್ರೊಡಕ್ಷನ್ ಕೆಲಸಗಳು ಬಹುತೇಕ  ಮುಗಿದಿವೆ‌  ಅಂದುಕೊಂಡ ಹಾಗೆ ದಸರಾ ವೇಳೆಗೆ ಚಿತ್ರವನ್ನು ತೆರೆಗೆ ತರಲು ಪ್ರಯತ್ನ ಮಾಡುತ್ತಿದ್ದೇವೆ.  ಈಗಾಗಲೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ  ಚಿತ್ರೀಕರಣ ಮಾಡಿದ್ದೇವೆ. ಈಗ ನೆದರ್ ಲ್ಯಾಂಡ್ ಗೆ ಹೋಗ್ತಿದ್ದೇವೆ  ಎಂದು ಹೇಳಿದರು. ನಂತರ ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಈಗಾಗಲೇ ನಾವು ಶೂಟಿಂಗ್ ಕೊನೇ ಹಂತಕ್ಕೆ ಬಂದಿದ್ದೇವೆ. ಅಂದುಕೊಂಡ ಹಾಗೆ ಚಿತ್ರ ಮೂಡಿಬರುತ್ತಿದೆ. ಒಂದು  ಅದ್ಭುತ ದೃಶ್ಯಕಾವ್ಯವಾಗಿ ಸಂಜು ವೆಡ್ಸ್ ಗೀತಾ ಚಿತ್ರ ಮೂಡಿಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.

     

    ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ  ನಿರ್ಮಾಪಕ  ಛಲವಾದಿ ಕುಮಾರ್ ಅವರು ಈ  ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ‌  ಶ್ರೀಧರ ವಿ. ಸಂಭ್ರಮ  5 ಸುಂದರವಾದ ಹಾಡುಗಳನ್ನು  ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ.  ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ.