Tag: Radhika Chetan

  • ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಟ್ರೈಲರ್ ರಿಲೀಸ್

    ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಟ್ರೈಲರ್ ರಿಲೀಸ್

    ಮೇಶ್ ಅರವಿಂದ್ (Ramesh Aravind) ನಾಯಕರಾಗಿ  ನಟಿಸಿರುವ ‘ಶಿವಾಜಿ ಸುರತ್ಕಲ್ 2’ (Shivaji Suratkal 2) ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೈಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ.

    ಶಿವಾಜಿ ಸುರತ್ಕಲ್ 2 ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ನಾನು ಹಾಗೂ ರಮೇಶ್ ಸರ್ ವಾಟ್ಸಪ್ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್ ಡೌನ್ ನಿಂದ ತೊಂದರೆ ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ‌ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈಗ ಟ್ರೈಲರ್ ಬಿಡುಗಡೆಯಾಗಿದೆ. ಎಲ್ಲರಲ್ಲೂ ಮನೆ ಮಾಡಿರುವ ‘ಮಾಯಾವಿ ಯಾರು?’ ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ (Akash Srivatsa) ತಿಳಿಸಿದರು.

    “ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಶಿವಾಜಿ ಸುರತ್ಕಲ್ 2 ಚಿತ್ರದ ಟ್ರೈಲರ್ ಚೆನ್ನಾಗಿದೆ. ಇದೇ ಏಪ್ರಿಲ್ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನಾನು ಪ್ರತಿ ವೀಕೆಂಡ್ ನಿಮ್ಮ ಮನೆಗೆ ಬರುತ್ತೇನೆ. ನೀವು ಕುಟುಂಬ ಸಮೇತ ನಮ್ಮ ಚಿತ್ರ ನೋಡಲು ಚಿತ್ರಮಂದಿರಕ್ಕೆ ಬನ್ನಿ’ ಎಂದರು ನಟ ರಮೇಶ್ ಅರವಿಂದ್. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ನನ್ನ ಮಿತ್ರರ ಸಹಕಾರದಿಂದ ಈ ಚಿತ್ರವನ್ನು ನಿರ್ಮಿಸಿದ್ದೇನೆ. ಸದಭಿರುಚಿಯ ಚಿತ್ರ ನಿರ್ಮಿಸಿರುವ ಹೆಮ್ಮೆಯಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಅನೂಪ್ ಗೌಡ. ಚಿತ್ರದಲ್ಲಿ ನಟಿಸಿರುವ ರಾಧಿಕಾ ಚೇತನ್ (Radhika Chetan), ಮೇಘನಾ ಗಾಂವ್ಕರ್ (Meghana Gaonkar), ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ವಿನಾಯಕ ಜೋಶಿ, ವಿದ್ಯಾಮೂರ್ತಿ ಮುಂತಾದವರು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

  • ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಗಾಗಲೇ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಕಾಂತಾರ’ ಹೆಸರಿನ ಸಿನಿಮಾವೊಂದು ಸೆಟ್ಟೇರಿದೆ. ಈ ಚಿತ್ರದಲ್ಲಿ ಕಂಬಳ ಕುರಿತಾಗಿಯೂ ಕಥೆಯಿದೆ. ಅಲ್ಲದೇ, ಇದೀಗ ಕಂಬಳ ಕುರಿತಾಗಿ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದ್ದು,  ವೀರ ಕಂಬಳ ಹೆಸರಿನ ಈ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ ಹಂಚಿಕೊಂಡದ್ದು ಹೀಗೆ‌. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ “ಕಂಬಳ’ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ. ಅವರಿಂದ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಅರುಣ್ ರೈ ತೋಡಾರ್ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ದವಾಯಿತು. ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ಒಂದೇ ತರಹ ಇರುವುದಿಲ್ಲ. ಅದನೆಲ್ಲಾ ನೋಡಿಕೊಂಡು ಚಿತ್ರೀಕರಣ ಮಾಡಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ.  ಈ ಚಿತ್ರಕ್ಕೆ ಕಥೆಯೇ ಹೀರೋ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಕೇಳಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ “ವೀರ ಕಂಬಳ” ನಿಮ್ಮ ಮುಂದೆ ಬರಲಿದೆ.  ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದರು. ನಂತರ ವಿಶ್ವದಾದ್ಯಂತ ಜಯಭೇರಿ ಬಾರಿಸುತ್ತಿರುವ “ಕೆ ಜಿ ಎಫ್ ೨” ಚಿತ್ರತಂಡಕ್ಕೆ ಶುಭ ಕೋರಿದ ರಾಜೇಂದ್ರ ಸಿಂಗ್ ಬಾಬು, ಮುಂದೆ ನಾನು ಸಹ ದರ್ಶನ್ ಅವರ  ಅಭಿನಯದಲ್ಲಿ ಅದ್ದೂರಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ. ಎಷ್ಟೋ ಜನಕ್ಕೆ ನಾನು ತುಳುನಾಡಿನವಳೆಂದು ತಿಳಿದಿಲ್ಲ. ನನ್ನ ಮಾತೃ ಭಾಷೆ ಕೂಡ ತುಳು. ಈ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ವಂದನೆಗಳು. ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ರಾಧಿಕಾ ಚೇತನ್.

    ನಮ್ಮ ಊರಿನಲ್ಲಿ ನಡೆಯುವ ಕಂಬಳಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಆಹ್ವಾನಿಸಲು ಕಂಬಳದ ಅಧ್ಯಕ್ಷರು ಹೇಳಿದರು. ಬಾಬು ಸರ್ ನಮ್ಮ ಊರಿಗೆ ಬಂದರು. ಅಲ್ಲಿ ಈ ಚಿತ್ರದ ಮಾತುಕತೆಯಾಗಿ, ಚಿತ್ರ ಆರಂಭವಾಯಿತು. ನಾನು ರಾಜೇಂದ್ರ ಸಿಂಗ್ ಬಾಬು ಅವರ ದೊಡ್ಡ ಅಭಿಮಾನಿ. ಅವರು ನಮ್ಮ ಚಿತ್ರ ನಿರ್ದೇಶನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು ನಿರ್ಮಾಪಕ ಅರುಣ್ ರೈ ತೋಡಾರ್. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ

    ನಾನು ಮೂಲತಃ ರಂಗಭೂಮಿಯವನು. ತುಳು ಭಾಷೆಯ ಸಾಕಷ್ಟು ನಾಟಕಗಳಿಗೆ ಸಂಭಾಷಣೆ ಬರೆದಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರು ನನ್ನನ್ನು ಭೇಟಿಯಾಗಿ ಈ ಚಿತ್ರಕ್ಕೆ ತುಳು ಹಾಗೂ ಕನ್ನಡದಲ್ಲಿ ಸಂಭಾಷಣೆ ಬರೆಯಲು ಹೇಳಿದರು. ಈವರೆಗೂ ನಾನು ಕನ್ನಡ ಚಿತ್ರಕ್ಕೆ ಸಂಭಾಷಣೆ ಬರೆದಿರಲಿಲ್ಲ. ಇದೇ ಮೊದಲು. ಕನ್ನಡ ಚಿತ್ರರಂಗಕ್ಕೆ ಇದು ದೊಡ್ಡ ಚಿತ್ರವಾಗುತ್ತದೆ. ತುಳು ಭಾಷೆಯಲಂತೂ ಪ್ರಚಂಡ ಯಶಸ್ಸು ಕಾಣಲಿದೆ ಎಂದು  ಚಿತ್ರಕಥೆ , ಸಂಭಾಷಣೆ ಬರೆದಿರುವ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ ಗೌಡ ,  ಸ್ವರಾಜ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ “ವೀರ ಕಂಬಳ” ದ ಕುರಿತು ಮಾತನಾಡಿದರು. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಎ.ಆರ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಎಸ್ .ವಿ .ರಾಜೇಂದ್ರ ಸಿಂಗ್ ಬಾಬು. ಅರ್ ಗಿರಿ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಆರ್ ಬಾಬು ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಜೇಶ್ ಕುಡ್ಲ ಅವರ ನಿರ್ಮಾಣ ನಿರ್ವಹಣೆ “ವೀರ ಕಂಬಳ” ಚಿತ್ರಕ್ಕಿದೆ. ಆದಿತ್ಯ, ರಾಧಿಕಾ ಚೇತನ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜೂರು, ಮೈಮ್ ರಮೇಶ್, ರಾಜಶೇಖರ ಕೋಟ್ಯಾನ್, ಉಷಾ ಭಂಡಾರಿ, ಶ್ರೀನಿವಾಸ ಗೌಡ, ಸ್ವರಾಜ್ ಶೆಟ್ಟಿ, ವೀಣಾ ಪೊನ್ನಪ್ಪ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

  • ಆಧುನಿಕ ಜೀವನಶೈಲಿ, ಒತ್ತಡ ಸೂಕ್ಷ್ಮ ಅಂಶಗಳ ಅನಾವರಣ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’

    ಆಧುನಿಕ ಜೀವನಶೈಲಿ, ಒತ್ತಡ ಸೂಕ್ಷ್ಮ ಅಂಶಗಳ ಅನಾವರಣ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’

    ಬೆಂಗಳೂರು: ಟೈಟಲ್ ಹಾಗೂ ಟ್ರೇಲರ್ ನಿಂದಲೇ ಸ್ಯಾಂಡಲ್‍ವುಡ್ ಅಂಗಳದಲ್ಲಿ ಸೌಂಡ್ ಮಾಡಿದಂತಹ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಸಿನಿಮಾ. ಈ ಶುಭ ಶುಕ್ರವಾರ ಥಿಯೇಟರ್ ಗೆ ಲಗ್ಗೆ ಇಟ್ಟಿದೆ. ಈ ವಾರ ಗಾಂಧಿನಗರಕ್ಕೆ ಎಂಟ್ರಿಕೊಟ್ಟ `ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಹೆಸರಿನ ಪ್ರಯೋಗಾತ್ಮಕ ಸಿನಿಮಾವೊಂದನ್ನ ಕನ್ನಡ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಇಂದ್ರಬಾಬು ನಿರ್ದೇಶನವಿರುವ ಅನಂತ್ ನಾಗ್ ಹಾಗೂ ರಾಧಿಕಾ ಚೇತನ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಅದ್ದೂರಿಯಾಗಿ ಚಿತ್ರಮಂದಿರಕ್ಕೆ ಎಂಟ್ರಿಕೊಟ್ಟಿದೆ.

    `ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಟೈಟಲ್ ಮೂಲಕವೇ ಕ್ಯೂರಿಯಾಸಿಟಿ ಮೂಡಿಸಿದಂಥಹ ಸಿನಿಮಾ. ಟ್ರೇಲರ್ ರಿಲೀಸ್ ಆದ್ಮೇಲೆ ಸಿನಿಮಾದ ನಿರೀಕ್ಷೆ ಮತ್ತೊಂದಿಷ್ಟು ಜಾಸ್ತಿಯಾಗಿತ್ತು. ಫೈನಲಿ ಇವತ್ತು ಆ ನಿರೀಕ್ಷೆಗೆ ತೆರೆಬಿದ್ದಿದೆ. ಸ್ಟೇಬಲ್ ಅಂಡ್ ಸೆಟಲ್ ಆ್ಯಕ್ಟಿಂಗ್‍ನಿಂದ ಅನಂತ್‍ನಾಗ್ ಮತ್ತೊಮ್ಮೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಬಾಸ್ ಪಾತ್ರದಲ್ಲಿ ಮಿಂಚಿರುವ ರಾಧಿಕಾ ಪ್ರತಿ ಫ್ರೇಮ್‍ನಲ್ಲೂ ಮುದ್ದಾಗಿ ಕಾಣಿಸಿಕೊಂಡು ಪ್ರೇಕ್ಷಕರ ಮನಸೂರೆಗೊಂಡಿದ್ದಾರೆ. ಈ ಎರಡು ಕ್ಯಾರೆಕ್ಟರ್‍ಗಳು ಸಿನಿಮಾದ ಮೂಲ ಆಕರ್ಷಣೆಯಾಗಿದೆ.

    ಕಾರ್ಪೋರೇಟ್ ಬದುಕಿನ ಒದ್ದಾಟ, ಲಿವಿಂಗ್ ಟುಗೇದರ್ ರಿಲೇಷನ್‍ಶಿಪ್ ಪೀಕಲಾಟ, ಜತೆಗೆ ಓಲ್ಡೇಜ್ ಒಂಟಿತನದ ಹೋರಾಟದ ಸುತ್ತ ಸುತ್ತುವ ಈ ಸಿನಿಮಾ, ಮಾಸ್, ಆ್ಯಕ್ಷನ್, ಲವ್ ಚಿತ್ರಗಳನ್ನು ನೋಡಿ ಬೇಸರವಾದವ್ರಿಗೆ ಇಷ್ಟವಾಗುತ್ತದೆ. ರಾಮಚಂದ್ರ ಹಡಪದ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಹಾಗೂ ಹಿನ್ನಲೆ ಸಂಗೀತ ಪ್ರೇಕ್ಷಕರನ್ನ ಕಾಡುತ್ತವೆ.

    ಕಬ್ಬಡಿ ಸಿನಿಮಾ ಖ್ಯಾತಿಯ ಇಂದ್ರಬಾಬು ನಿರ್ದೇಶನದಲ್ಲಿ, ಹರೀಶ್ ಶೇರೆಗಾರ್, ಸುದರ್ಶನ್ ಮತ್ತು ರಾಮಮೂರ್ತಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ. ಆಧುನಿಕ ಜೀವನಶೈಲಿ ಮತ್ತು ಒತ್ತಡ ಎರಡು ಸೂಕ್ಷ್ಮ ಅಂಶ ಚಿತ್ರದಲ್ಲಿ ಅನಾವರಣವಾಗಿದೆ. ಒಟ್ಟಿನಲ್ಲಿ ಮೊದಲ ದಿನವೇ ಗಾಂಧಿನಗರದ ಮಂದಿ, `ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರದ ಅರ್ಥಪೂರ್ಣ ಮಹತ್ವ ತಿಳಿದುಕೊಂಡು ಸಿನಿಮಾಗೆ ಜೈ ಎಂದಿದ್ದಾರೆ.

  • ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಎನ್ನುತ್ತ ಯಂಗ್ ಜನರೇಷನ್‍ಗೆ ಅನಂತನಾಗ್ ಟಕ್ಕರ್ !

    ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಎನ್ನುತ್ತ ಯಂಗ್ ಜನರೇಷನ್‍ಗೆ ಅನಂತನಾಗ್ ಟಕ್ಕರ್ !

    ಬೆಂಗಳೂರು: ಅನಂತ ನಾಗ್ ಸ್ಯಾಂಡಲ್‍ವುಡ್ ಕಂಡ ಮೇರು ಕಲಾವಿದ. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತ ತಮ್ಮದೇ ಆದ ಫ್ಯಾನ್ ಫಾಲೋವರ್ಸ್ ಗಳನ್ನು ಅನಂತನಾಗ್ ಹೊಂದಿದ್ದಾರೆ. ಹಿಂದೆಯೆಲ್ಲಾ ಲವ್ವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಅನಂತನಾಗ್ ಇಂದು ಪೋಷಕ ಪಾತ್ರಗಳಿಗೆ ತಮ್ಮ ಅನುಭವದ ಮೂಲಕ ಜೀವ ತುಂಬುತ್ತಿದ್ದಾರೆ. ಕಥೆಯನ್ನು ನೋಡಿ ಒಪ್ಪಿಕೊಳ್ಳುವ ಅನಂತನಾಗ್ ಇಂದಿಗೂ ತಮ್ಮ ಅಮೋಘ ನಟನೆಯ ಮೂಲಕ ಅಭಿಮಾನಿಗಳನ್ನು ಮಂತ್ರ ಮುಗ್ಧರನ್ನಾಗಿಸುತ್ತಾರೆ.

    ಸದ್ಯ ನರೇಂದ್ರ ಬಾಬು ನಿರ್ದೇಶನದ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ವಿಶೇಷ ಸಿನಿಮಾದ ಮೂಲಕ ತೆರೆಯ ಮೇಲೆ ಬರಲಿದ್ದಾರೆ. ‘ಸಂತೆಯಲ್ಲಿ ನಿಂತ ಕಬೀರ’ ಎಂಬ ಪ್ರಯೋಗಾತ್ಮಕ ಸಿನಿಮಾ ನೀಡಿದ್ದ ನರೇಂದ್ರ ಬಾಬು ಅವರ ಮೂರನೇ ಚಿತ್ರ ಇದಾಗಿದ್ದು, ಸಾಕಷ್ಟು ಭರವಸೆಗಳನ್ನು ಮೂಡಿಸಿದೆ.

    ಸ್ವಂತ ವ್ಯವಹಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಳಿ ವಯಸ್ಸಿನ ವ್ಯಕ್ತಿಗೆ ಅನಿವಾರ್ಯ ಕಾರಣಗಳಿಂದಾಗಿ ಬೇರೆ ಕಂಪೆನಿಯಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಪರಿಸ್ಥಿತಿ ಅನುಗುಣವಾಗಿ ಹೊಟ್ಟೆಗಾಗಿ ಮತ್ತು ಗೇಣು ಬಟ್ಟೆಗಾಗಿ ಬೇರೆ ವ್ಯಕ್ತಿಯ ಕೆಳಗೆ ಕೆಲಸ ಮಾಡಲು ಮುಂದಾಗುತ್ತಾರೆ. ಕಂಪೆನಿಯಲ್ಲಿ ಕೆಲಸ ಮಾಡುವ ಯಂಗ್ ಜನರೇಷನ್‍ನ್ನು ಎದುರಿಸುವ ಪ್ರಸಂಗ ಬರುತ್ತದೆ. ಈ ಎಲ್ಲ ತಳಮಳ, ಒತ್ತಡ, ಸವಾಲುಗಳನ್ನು ಕಥಾ ನಾಯಕ ಹೇಗೆ ಎದುರಿಸುತ್ತಾನೆ ಎಂಬುವುದು ಚಿತ್ರದ ತಿರುಳು.

    ರಂಗಿತರಂಗ ಖ್ಯಾತಿಯ ರಾಧಿಕಾ ಚೇತನ್ ಸಹ ಸಿನಿಮಾದಲ್ಲಿ ನಟಿಸಿದ್ದಾರೆ. ಸ್ಮಿತಾ ಪಾಟೀಲ್, ಅನಿಲ್ ಹುಲಿಯಾ, ಸಂದೀಪ್ ಅರಸ್ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಜನ್ ಲೋಕದ ಧೃವತಾರೆ ಗೀತಾಂಜಲಿ ರೈ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

    ಹಿಂದೂಸ್ಥಾನಿ ಗಾಯಕ ರಾಮಚಂದ್ರ ಹಡಪದ ಚಿತ್ರದ ಮೂರು ಹಾಡುಗಳಿಗೆ ಸಂಗೀತ ನೀಡಿದ್ದು, ರೇಬಿನ್ ಬ್ರದರ್‍ಹುಡ್ ಹಿನ್ನೆಲೆ ಸಂಗೀತವನ್ನು ಹೊಂದಿದೆ. ಪಿಕೆಹೆಚ್ ದಾಸ್ ಛಾಯಾಗ್ರಹಣ, ಹರೀಶ್ ಶೇರಿಗಾರ್, ರಾಮಮೂರ್ತಿ ಮತ್ತು ಸುದರ್ಶನ್ ಜೊತೆಯಾಗಿ ಬಂಡವಾಳ ಹಾಕಿದ್ದಾರೆ.

  • ಕತಾರ್ ನಲ್ಲಿ ಬೀಸಲಿದೆ ಚಂದನವನದ `ಕಾಫಿ ತೋಟ’ದ ಪರಿಮಳ

    ಕತಾರ್ ನಲ್ಲಿ ಬೀಸಲಿದೆ ಚಂದನವನದ `ಕಾಫಿ ತೋಟ’ದ ಪರಿಮಳ

    ಬೆಂಗಳೂರು: ಕತಾರ್ ರಾಜಧಾನಿ ದೋಹಾದಲ್ಲಿ ಅಕ್ಟೋಬರ್ 13ರಂದು ಕನ್ನಡದ ವಿನೂತನ ಸಿನಿಮಾ, ಸ್ಯಾಂಡಲ್‍ವುಡ್ ಮೇಷ್ಟ್ರು ಟಿ.ಎನ್.ಸೀತಾರಂ ನಿರ್ದೇಶಿಸಿರುವ `ಕಾಫಿ ತೋಟ’ ಬಿಡುಗಡೆಯಾಗಲಿದೆ.

    ಸಿನಿಮಾ ಬಿಡುಗಡೆ ವೇಳೆಯಲ್ಲಿ ಸಿನಿಮಾದ ನಾಯಕ ನಟ ರಘು ಮುಖರ್ಜಿ, ನಟಿಯರಾದ ರಾಧಿಕಾ ಚೇತನ್, ಅಪೇಕ್ಷ ಪುರೋಹಿತ್ ಭಾಗಿಯಾಗಲಿದ್ದಾರೆ. ಕೇವಲ ಒಂದು ವರ್ಷದ ಅವಧಿಯಲ್ಲಿ ರಂಗಿತರಂಗ, ಹೆಬ್ಬುಲಿ, ಕೋಟಿಗೊಬ್ಬ-2, ರಾಜಕುಮಾರ, ಚೌಕ, ಕಿರಿಕ್ ಪಾರ್ಟಿ, ಒಂದು ಮೊಟ್ಟೆಯ ಕಥೆ, ದೊಡ್ಮನೆ ಹುಡುಗ ಮತ್ತು ತುಳು ಚಿತ್ರ ಅರೈಮರ್ಲೆರ್ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ ಎಂದು ಪ್ರದರ್ಶನದ ಮುಖ್ಯ ಆಯೋಜಕರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ತಿಳಿಸಿದ್ದಾರೆ.

    ಎಲ್ಲರಿಗಿಂತಲೂ ಭಿನ್ನವಾಗಿ ಕಥೆ ಹೇಳುವ ಸೀತಾರಂ ಇಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಮಾಯಾಮೃಗ, ಮುಕ್ತ, ಮುಕ್ತ..ಮುಕ್ತ.. ಧಾರವಾಹಿಗಳ ಮೂಲಕ ಹಾಗೂ ಸೆಸ್ಪನ್ಸ್ ಕಥೆಗಳನ್ನು ನಿರ್ದೇಶಿಸುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೀತಾರಂ ಹೊಂದಿದ್ದಾರೆ. ಚಿತ್ರವು ಸಂಪೂರ್ಣ ಹೊಸ ಕಲಾವಿದರನ್ನು ಒಳಗೊಂಡಿದ್ದು, ಸಸ್ಪೆನ್ಸ್ ಕಥಾ ಹಂದರವನ್ನು ಹೊಂದಿದೆ. ಟ್ರೇಲರ್‍ನಲ್ಲಿ ತೋರಿಸಿರುವಂತೆ ಸಿನಿಮಾ ಕೊಲೆಯ ಕೇಸನ್ನು ಭೇದಿಸುವ ರಹಸ್ಯ ಕಥಾನಕವನ್ನು ಹೊಂದಿದೆ. ಇದೂವರೆಗೂ ಸೀತಾರಂ ಅವರ ಧಾರವಾಹಿಗಳಲ್ಲಿ ನಟಿಸಿರುವ ಅನುಭವಿ ಕಲಾವಿದರ ಬಳಗವನ್ನೇ ಚಿತ್ರತಂಡ ಹೊಂದಿದೆ.

    ಚಿತ್ರದ ಮುಖ್ಯಭೂಮಿಕೆಯಲ್ಲಿ ರಂಗಿತರಂಗ ಬೆಡಗಿ ರಾಧಿಕಾ ಚೇತನ್ ಮತ್ತು ರಘು ಮುಖರ್ಜಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಿನಿಮಾದಲ್ಲಿ ವಕೀಲರ ಪಾತ್ರದಲ್ಲಿ ಸೀತಾರಂ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಸಂಯುಕ್ತ ಹೊರನಾಡ್, ಅಚ್ಯುತ್ ಕುಮಾರ್, ರಾಹುಲ್ ಮಾಧವ್, ಅಪೇಕ್ಷ ಪುರೋಹಿತ್, ವೀಣಾ ಸುಂದರ್, ಸುಂದರ್ ರಾಜ್, ಅಮೋಘ (ಡ್ರಾಮ ಜ್ಯೂನಿಯರ್ಸ್) ಮುಂತಾದವರಿದ್ದಾರೆ. ಬಿ.ಸಿ. ಪಾಟೀಲ್ ಹಾಗೂ ಅಂಬಿಕಾ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

    ಜಯಂತ್ ಕಾಯ್ಕಿಣಿ ಹಾಗೂ ಜೋಗಿಯವರು ಬರೆದಿರುವ ಹಾಡುಗಳಿಗೆ ಅನೂಪ್ ಸೀಳಿನ್, ಹರಿಚರಣ್, ಸಿಂಚನಾ ದೀಕ್ಷಿತ್, ಮಿಥುನ್ ಮುಕುಂದನ್, ರಾಜಗುರು ಹೊಸಕೋಟೆ, ಅನನ್ಯಾ ಭಗತ್ ಹಾಗೂ ಇನ್ನಿತರರು ತಮ್ಮ ಸುಮಧುರ ಧ್ವನಿ ನೀಡಿದ್ದಾರೆ.