Tag: Rafale

  • ಭಾರತದ ವಾಯುನೆಲೆಯಲ್ಲಿ ಫ್ರಾನ್ಸ್ ರಫೇಲ್‌ ಲ್ಯಾಂಡಿಂಗ್‌

    ಭಾರತದ ವಾಯುನೆಲೆಯಲ್ಲಿ ಫ್ರಾನ್ಸ್ ರಫೇಲ್‌ ಲ್ಯಾಂಡಿಂಗ್‌

    ನವದೆಹಲಿ: ಫ್ರಾನ್ಸಿನ ಮೂರು ರಫೇಲ್‌ ಯುದ್ಧ ವಿಮಾನಗಳು ತಮಿಳುನಾಡಿನ ಸೂಲೂರ್‌ನಲ್ಲಿರುವ ವಾಯುನೆಯಲ್ಲಿ ನಿಲುಗಡೆಯಾಗಿತ್ತು.

    ಮೂರು ರಫೇಲ್ ಜೆಟ್‌ ಒಳಗೊಂಡಂತೆ ಫ್ರೆಂಚ್ ವಾಯು ಪಡೆ ತಂಡವು ಪೆಸಿಫಿಕ್ ಸಾಗರದಲ್ಲಿ ನಡೆಸುತ್ತಿರುವ ಮೆಗಾ ಮಿಲಿಟರಿ ಕಾರ್ಯಾಚರಣೆಯ ಭಾಗವಾಗಿ ಸೂಲೂರಿನಲ್ಲಿ ಲ್ಯಾಂಡ್‌ ಆಗಿತ್ತು.

    ಮಿಲಿಟರಿ ಸಹಕಾರವನ್ನು ಹೆಚ್ಚಿಸಲು ಫ್ರಾನ್ಸ್ ಮತ್ತು ಭಾರತವು 2018 ರಲ್ಲಿ ಪರಸ್ಪರ ಲಾಜಿಸ್ಟಿಕ್ಸ್ ಬೆಂಬಲ ನೀಡಲು ಸಹಿ ಹಾಕಿತ್ತು. ಈ ಒಪ್ಪಂದಂತೆ ಫ್ರಾನ್ಸ್‌ ವಿಮಾನಗಳು ಭಾರತದಲ್ಲಿ ಲ್ಯಾಂಡ್‌ ಆಗಿವೆ.

    ಫ್ರೆಂಚ್ ವಾಯು ಮತ್ತು ಬಾಹ್ಯಾಕಾಶ ಪಡೆ ಇಂಡೋ-ಪೆಸಿಫಿಕ್‌ನಲ್ಲಿ ʼಪೆಗೇಸ್ 22ʼ ಹೆಸರಿನಲ್ಲಿ ಆಗಸ್ಟ್ 10 ರಿಂದ ಸೆಪ್ಟೆಂಬರ್ 18 ರವರೆಗೆ ಕಾರ್ಯಾಚರಣೆಯನ್ನು ನಡೆಸುತ್ತಿದೆ.

    72 ಗಂಟೆಯ ಒಳಗಡೆ( ಆಗಸ್ಟ್‌10 -12ರ ಒಳಗಡೆ) ಫ್ರಾನ್ಸ್‌ ಸೇನೆಯನ್ನು ಮೆಟ್ರೋಪಾಲಿಟನ್‌ ಫ್ರಾನ್ಸ್‌ನಿಂದ ನ್ಯೂ ಕ್ಯಾಲೆಡೋನಿಯಾಗೆ ನಿಯೋಜಿಸುವುದು ಈ ಕಾರ್ಯಾಚರಣೆಯ ಮೊದಲ ಹಂತವಾಗಿತ್ತು. ಫ್ರಾನ್ಸ್‌ ವಸಾಹತು ಆಗಿರುವ ನ್ಯೂ ಕ್ಯಾಲೆಡೋನಿಯಾ ಆಸ್ಟ್ರೇಲಿಯಾದ ಸಿಡ್ನಿಯಿಂದ 2 ಸಾವಿರ ಕಿ.ಮೀ ದೂರದಲ್ಲಿದೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ

    16,600 ಕಿಮೀ. ದೂರವನ್ನು ಕ್ರಮಿಸಲು ಫ್ರಾನ್ಸ್‌ ವಾಯುಪಡೆಯ ತಾಂತ್ರಿಕ ನಿಲುಗಡೆ ಮಾಡಿತ್ತು. ಆಗಸ್ಟ್ 10 ರ ಸಂಜೆ ಸೂಲೂರಿನಲ್ಲಿ ಲ್ಯಾಂಡಿಂಗ್ ಆದ ವಿಮಾನಗಳು ಆಗಸ್ಟ್ 11 ರ ಮುಂಜಾನೆ ಇಂಧನ ತುಂಬಿದ ಬಳಿಕ ಕ್ಯಾಲೆಡೋನಿಯಾಕ್ಕೆ ತೆರಳಿದೆ.

    ಫ್ರೆಂಚ್ ವಾಯುಪಡೆ ʼಪೆಗೇಸ್ 22ʼ ಬಳಿಕ ಆಗಸ್ಟ್ 17 ರಿಂದ ಸೆಪ್ಟೆಂಬರ್ 10 ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ʼಪಿಚ್ ಬ್ಲ್ಯಾಕ್ʼ ಸಮರಾಭ್ಯಾಸದಲ್ಲಿ ಭಾಗಿಯಾಗಲಿದೆ. ಭಾರತ ಸೇರಿದಂತೆ ಆಸ್ಟ್ರೇಲಿಯಾ, ಜಪಾನ್, ಅಮೆರಿಕ, ಜರ್ಮನಿ, ಇಂಡೋನೇಷ್ಯಾ, ಸಿಂಗಾಪುರ, ಇಂಗ್ಲೆಂಡ್‌, ದಕ್ಷಿಣ ಕೊರಿಯಾ ದೇಶಗಳು ಈ ಡ್ರಿಲ್‌ನಲ್ಲಿ ಭಾಗವಹಿಸಲಿವೆ.

    Live Tv
    [brid partner=56869869 player=32851 video=960834 autoplay=true]

  • ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

    ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

    ಮೈಸೂರು: ಬಿಟ್ ಕಾಯಿನ್ ಎಂದರೇನು? ಇದರ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿದೆ ಅದನ್ನು ನಮ್ಮಂತವರಿಗೆ ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯನವರು ವಿವರಿಸಲಿ, ಆರೋಪ ಮಾಡಿದವರು ಅವರೇ ನಮಗೆ ತಿಳಿಸಿಕೊಡಲಿ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆರೋಪ ಮಾಡುತ್ತಿರುವುದರೊಂದಿಗೆ, ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ, ಕಾಂಗ್ರೆಸ್‍ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‍ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಶುರುವಾಗಿ ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ನನ್ನ ಹೆಸ್ರು ಬೇಕಾದ್ರೆ ಹೇಳಲಿ: ಡಿ.ಕೆ ಶಿವಕುಮಾರ್

    ರಫೇಲ್ ವಿಚಾರದಲ್ಲು ಕಾಂಗ್ರೆಸ್‍ನ ಅಮ್ಮ, ಮಗಾ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲು ಅದೇ ತಂತ್ರವನ್ನು ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಬಿಜೆಪಿ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ. ನಮಗೆ ಬಿಟ್ ಕಾಯಿನ್ ಬಗ್ಗೆ ಮಹಾನ್ ಆರ್ಥಿಕಾ ತಜ್ಞರಾಗಿರುವ ಸಿದ್ದರಾಮಯ್ಯನವರು ನಮಗೆಲ್ಲರಿಗೂ ತಿಳಿಸಿಕೊಡಲಿ. ಬಸವರಾಜ ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು, ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

  • ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ  ಮೇಲೆ ಲಂಚ ಸ್ವೀಕಾರ ಆರೋಪ

    ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ ಮೇಲೆ ಲಂಚ ಸ್ವೀಕಾರ ಆರೋಪ

    ನವದೆಹಲಿ: ಬಹುಕೋಟಿ ರಫೆಲ್ ಯುದ್ಧ ವಿಮಾನ ಖರೀದಿಗಾಗಿ ಮಧ್ಯವರ್ತಿ ಸುಸೇನ್ ಗುಪ್ತಾಗೆ ಫ್ರಾನ್ಸ್ ನ ಡಸಾಲ್ಟ್ ಏವಿಯೇಷನ್ 64 ಕೋಟಿ ರೂಪಾಯಿ ಲಂಚ ನೀಡಿತ್ತು ಎಂಬ ಸ್ಫೋಟಕ ವರದಿಯನ್ನು ಫ್ರಾನ್ಸ್ ನ ಮೀಡಿಯಾಪಾರ್ಟ್ ಸಂಸ್ಥೆ ಬಿಚ್ಚಿಟ್ಟಿದೆ.

    ಈ ಲಂಚ ಸಂದಾಯದ ಬಗ್ಗೆ ಮಾರಿಷಸ್‍ನ ಅಟಾರ್ನಿ ಜನರಲ್ ಅವರೇ ಖುದ್ದು ಪತ್ರ ಬರೆದಿದ್ದರೂ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿಲ್ಲ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. 36 ರಫೆಲ್ ಯುದ್ಧ ವಿಮಾನಗಳ ಡೀಲ್ ಕುದುರಿಸುವ ಸಲುವಾಗಿ 2009ರಿಂದ 2012ರ ಅವಧಿಯಲ್ಲಿ ಮಾರಿಷಸ್‍ನಲ್ಲಿರುವ ಗುಪ್ತಾಗೆ ಸೇರಿದ ಕಂಪನಿ ಇಂಟರ್‍ಸ್ಟೆಲರ್ ಮೂಲಕ ಕಮಿಷನ್ ಪಾವತಿ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: 60 ಸಾವಿರ ಕೋಟಿ ರಫೇಲ್ ಡೀಲ್‍ನಲ್ಲಿ ಕೋಟಿ ಕೋಟಿ ಗಿಫ್ಟ್ ಸಿಕ್ಕಿದ್ಯಾರಿಗೆ – ಕಾಂಗ್ರೆಸ್ ಪ್ರಶ್ನೆ

    ಬೋಗಸ್ ಬಿಲ್‍ಗಳ ಮೂಲಕ ಈ ಹಣ ವರ್ಗಾವಣೆ ಮಾಡಲಾಗಿತ್ತು. ರಫೆಲ್ ಡೀಲ್ ಮೇಲೆ ಪ್ರಭಾವ ಬೀರುವ ಸಲುವಾಗಿ ಫ್ರಾನ್ಸ್ ಥೇಲ್ಸ್ ಕಂಪನಿ ಕೂಡಾ ಗುಪ್ತಾಗೆ ಕಮಿಷನ್ ಸಂದಾಯ ಮಾಡಿತ್ತು. 2018ರಲ್ಲೇ ಈ ಅಕ್ರಮದ ಬಗ್ಗೆ ದಾಖಲೆಗಳಿದ್ದರೂ ಸಿಬಿಐ ಮತ್ತು ಇಡಿ ತನಿಖೆ ನಡೆಸಲಿಲ್ಲ ಎಂದು ಮೀಡಿಯಾ ಪಾರ್ಟ್ ವರದಿಯಲ್ಲಿ ಉಲ್ಲೇಖೆಸಿದೆ. ಇದನ್ನೂ ಓದಿ: ರಫೇಲ್ ಡೀಲ್‍ನಲ್ಲಿ ನಿಮಗೆ ಎಷ್ಟು ಕಮೀಷನ್ ಸಿಕ್ಕಿದೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

    ಈ ಹಿಂದೆ ಕೂಡ  ಮೀಡಿಯಾಪಾರ್ಟ್ ವರದಿ ಮಾಡಿರುವ ಪ್ರಕಾರ, 2016ರಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ ಯುದ್ಧ ವಿಮಾನ ಖರೀದಿ ವ್ಯವಹಾರ ನಡೆದಿತ್ತು. ಆ ವೇಳೆ ಫ್ರಾನ್ಸಿನ ಡಸಾಲ್ಟ್ ಏವಿಯೇಷನ್ ಭಾರತದ ಓರ್ವ ಮಧ್ಯವರ್ತಿಗೆ 1.1 ಮಿಲಿಯನ್ ಯುರೋ ಗಿಫ್ಟ್ ರೂಪದಲ್ಲಿ ನೀಡಿದೆ. 2017ರ ಡಸಾಲ್ಟ್ ಸಮೂಹದ ಲೆಕ್ಕ ಪತ್ರಗಳನ್ನ ಪರಿಶೀಲಿಸಿದಾಗ ಮಧ್ಯವರ್ತಿ ಗ್ರಾಹಕರಿಗೆ ಗಿಫ್ಟ್ ರೂಪದಲ್ಲಿ 1.1 ಮಿಲಿಯನ್ ವರ್ಗಾವಣೆ ಆಗಿರೋದು ಬೆಳಕಿಗೆ ಬಂದಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

  • ನವೆಂಬರಿನಲ್ಲಿ 4 ಯುದ್ಧ ವಿಮಾನ ಸೇರ್ಪಡೆ – ವಾಯುಸೇನೆಯಲ್ಲಿ ಹೆಚ್ಚಲಿದೆ ರಫೇಲ್ ಬಲ

    ನವೆಂಬರಿನಲ್ಲಿ 4 ಯುದ್ಧ ವಿಮಾನ ಸೇರ್ಪಡೆ – ವಾಯುಸೇನೆಯಲ್ಲಿ ಹೆಚ್ಚಲಿದೆ ರಫೇಲ್ ಬಲ

    ನವದೆಹಲಿ: ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲಿ ಭಾರತೀಯ ವಾಯು ಸೇನೆಗೆ ಮತ್ತಷ್ಟು ಬಲ ಬರುವ ಲಕ್ಷಣಗಳು ಗೋಚರಿಸುತ್ತಿದೆ.

    ನವೆಂಬರ್ ಮೊದಲ ವಾರದಲ್ಲಿ ಎರಡನೇ ಹಂತದಲ್ಲಿ ಭಾರತಕ್ಕೆ 3-4 ರಫೇಲ್ ಯುದ್ಧ ವಿಮಾನಗಳು ಬರುವ ಸಾಧ್ಯತೆಗಳಿದೆ. ಮೊದಲ ಹಂತದಲ್ಲಿ ಐದು ವಿಮಾನಗಳು ಭಾರತೀಯ ವಾಯು ಸೇನೆ ಸೇರಿದ್ದು, ಎರಡನೇ ಹಂತದಲ್ಲಿ 3-4 ವಿಮಾನಗಳು ಹರಿಯಾಣದ ಅಂಬಾಲ ವಾಯು ನೆಲೆಗೆ ಬಂದಿಳಿಯಲಿದೆ.

    ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಯುದ್ಧ ವಿಮಾನಗಳನ್ನು ಸೇರ್ಪಡೆ ಹಿನ್ನೆಲೆ ಭಾರತದ ಅಧಿಕಾರಿಗಳ ತಂಡ ಫ್ರಾನ್ಸ್ ಗೆ ತೆರಳಿದೆ. ಅಲ್ಲಿ ಸೇಂಟ್-ಡಿಜಿಯರ್ ವಾಯುನೆಲೆಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಯುದ್ಧ ವಿಮಾನಗಳ ತಯಾರಿ ಪರಿಶೀಲನೆ ಮಾಡಲಿದೆ.

    ಕಳೆದ ಜುಲೈ 28ರಂದು ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಮೊದಲ ಹಂತದಲ್ಲಿ ಬಂದಿಳಿದ್ದವು ತರಬೇತಿ ಬಳಿಕ ಸೆಪ್ಟೆಂಬರ್ 10ರಂದು ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಾಗಿತ್ತು. 2023ರ ವೇಳೆಗೆ ಒಪ್ಪಂದದಂತೆ ಎಲ್ಲಾ 36 ರಫೇಲ್ ವಿಮಾನಗಳು ಭಾರತದಲ್ಲಿರಲಿವೆ.

  • ರಫೇಲ್‌ ಡೀಲ್‌  – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ ಮಾಡಿದೆ.

    ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ವಿಶೇಷ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾಧೀನ) ಅಪೂರ್ವ ಚಂದ್ರ ಅವರು, ನಾವು ಆಫ್‌ಸೆಟ್ ಮಾರ್ಗಸೂಚಿಗಳಲ್ಲಿ ಬದಲಾವಣೆಗಳನ್ನು ಮಾಡಿದ್ದೇವೆ. ಈಗ ಸರ್ಕಾರದಿಂದ ಸರಕಾರದ ನಡುವೆ ಮತ್ತು ಒಂದೇ ಕಂಪನಿಯಿಂದ ರಕ್ಷಣಾ ಸಾಮಾಗ್ರಿ ಖರೀದಿ ವೇಳೆ ಆಫ್‌ಸೆಟ್‌ ನಿಯಮಗಳು ಇರುವುದಿಲ್ಲ ಎಂದು ಎಂದು ತಿಳಿಸಿದ್ದಾರೆ.

    ಈ ನಿಯಮಗಳು ಖರೀದಿಗೆ ಅಡ್ಡಿಯಾಗುತ್ತದೆ ಮತ್ತು ಯಾವುದೇ ಉದ್ದೇಶವನ್ನು ಸಾಧಿಸುತ್ತಿಲ್ಲ. ಹೀಗಾಗಿ ನಿಯಮವನ್ನು ಬದಲಾವಣೆ ಮಾಡಲಾಗಿ ಎಂದು ಸರ್ಕಾರ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್

    ರಕ್ಷಣಾ ಖರೀದಿ ವೇಳೆ ವಿದೇಶಿ ಕಂಪನಿಗಳೊಂದಿಗೆ ಆಫ್‌ಸೆಟ್‌ ನೀತಿಯನ್ನು 2005ರಲ್ಲಿ ಭಾರತ ಸರ್ಕಾರ ಜಾರಿಗೆ ತಂದಿದೆ. 300 ಕೋಟಿ ರೂ.ಗೂ ಅಧಿಕ ಮೊತ್ತದ ರಕ್ಷಣಾ ವಸ್ತುಗಳ ಖರೀದಿಯ ವೇಳೆ ವಿದೇಶಿ ಕಂಪನಿ ಕನಿಷ್ಟ ಶೇ.30 ರಷ್ಟು ಹೂಡಿಕೆಯನ್ನು ಭಾರತದಲ್ಲಿ ಮಾಡಬೇಕು ಮತ್ತು ತಂತ್ರಜ್ಞಾನವನ್ನು ವರ್ಗಾವಣೆ ಮಾಡಬೇಕು ಎಂಬ ನಿಯಮ ವಿಧಿಸಲಾಗಿತ್ತು.

    ದೇಶೀಯವಾಗಿ ರಕ್ಷಣಾ ಸಲಕರಣೆಗೆ ಉತ್ಪಾದನೆಗೆ ಉತ್ತೇಜನ ನೀಡಲು ಈ ನಿಯಮವನ್ನು ತರಲಾಗಿತ್ತು. ರಫೇಲ್‌ ಖರೀದಿಯಲ್ಲಿ ಆಫ್‌ಸೆಟ್‌ ನಿಯಮವನ್ನು ಶೇ.50ರಷ್ಟುಎಂದು ನಿಗದಿ ಮಾಡಲಾಗಿತ್ತು.

  • ರಫೇಲ್ ಆಗಮಿಸಿದ್ದಕ್ಕೆ ಜಿಲೇಬಿ ಹಂಚಿ, ಬೃಹತ್ ಧ್ವಜ ಪ್ರದರ್ಶಿಸಿ ಸಂಭ್ರಮಾಚರಣೆ

    ರಫೇಲ್ ಆಗಮಿಸಿದ್ದಕ್ಕೆ ಜಿಲೇಬಿ ಹಂಚಿ, ಬೃಹತ್ ಧ್ವಜ ಪ್ರದರ್ಶಿಸಿ ಸಂಭ್ರಮಾಚರಣೆ

    ಉಡುಪಿ: ಮೊದಲ ಹಂತದ ರಫೇಲ್ ಯುದ್ಧವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗಿದ್ದು, ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಈ ಸಂಭ್ರಮವನ್ನು ಹಲವರು ಹಲವು ರೀತಿಯಲ್ಲಿ ಆಚರಿಸುತ್ತಿದ್ದು, ಉಡುಪಿಯಲ್ಲಿ ಸಹ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ಬುಧವಾರ 5 ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್‍ನಿಂದ ಆಗಮಿಸಿದ್ದು, ಅಂಬಾಲ ವಾಯು ನೆಲೆಯಲ್ಲಿ ಲ್ಯಾಂಡ್ ಆಗಿವೆ. ಭರ್ಜರಿಯಾಗಿ ಸ್ವಾಗತಿಸುವ ಮೂಲಕ ರಫೇಲ್ ಯುದ್ಧ ವಿಮಾನಗಳನ್ನು ಬರಮಾಡಿಕೊಳ್ಳಲಾಗಿದೆ. ಇಡೀ ದೇಶದಲ್ಲಿ ಇದೀಗ ಸಂಭ್ರಮ ಮನೆ ಮಾಡಿದ್ದು, ಅದೇ ರೀತಿ ಉಡುಪಿಯಲ್ಲಿ ಸಹ ಸಂಭ್ರಮಾಚರಣೆ ಮಾಡಲಾಗಿದೆ. ಜಿಲ್ಲಾ ನಾಗರೀಕ ಸಮಿತಿ ಬೃಹತ್ ಧ್ವಜ ಪ್ರದರ್ಶನ ಮಾಡಿ, ಬಿಸಿ ಜಿಲೇಬಿ ತಯಾರಿಸಿ ಸಾರ್ವಜನಿಕರಿಗೆ ಹಂಚಿ ಸಂಭ್ರಮಿಸಿದೆ.

    ಇದರಿಂದಾಗಿ ಉಡುಪಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲೇ ಅತಿ ದೊಡ್ಡ 20/14 ಅಡಿ ಗಾತ್ರದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಿ, ರಫೇಲ್ ಯುದ್ಧ ವಿಮಾನಕ್ಕೆ ಸ್ವಾಗತ ಕೋರಲಾಯಿತು. ನಂತರ ಸ್ಥಳದಲ್ಲೇ ಬಿಸಿ ಜಿಲೇಬಿ ತಯಾರಿಸಿ ಸಾರ್ವಜನಿಕರಿಗೆ ಹಂಚಲಾಯಿತು. ರಫೇಲ್ ಚಿತ್ರ ಹಾಗೂ ಮಾಹಿತಿ ಹೊಂದಿರುವ ಬ್ಯಾನರ್ ಹಿಡಿದು ಸಂಭ್ರಮಾಚರಣೆ ಮಾಡಲಾಯಿತು.

    ರಫೇಲ್ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ. ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆ.ಜಿ.ತೂಕದ ಈ ವಿಮಾನ 9,500 ಕೆ.ಜಿ. ತೂಕದ ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮಥ್ರ್ಯ ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.

    ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1,800 ಕಿ.ಮೀ ವ್ಯಾಪ್ತಿಯಲ್ಲಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮಥ್ರ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ. ಇದನ್ನೂ ಓದಿ: ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

    ಭಾರತ ಫ್ರಾನ್ಸ್‍ನ ಡಸಾಲ್ಟ್ ಸಂಸ್ಥೆ ಜೊತೆ ಒಟ್ಟು 36 ರಫೇಲ್ ಯುದ್ಧ ವಿಮಾನಗಳ ಖರೀದಿಸುವ ಸಂಬಂಧ ಒಪ್ಪಂದ ನಡೆದಿತ್ತು. ಇದೀಗ ಈ ಪೈಕಿ ಮೊದಲ ಬ್ಯಾಚ್‍ನ ಐದು ವಿಮಾನಗಳು ಸೋಮವಾರ ಫ್ರಾನ್ಸ್‍ನಿಂದ ಟೇಕಾಫ್ ಆಗಿ ಮಂಗಳವಾರ ಯುಎಇಯಲ್ಲಿರುವ ದಫ್ರಾ ವಾಯುನೆಲೆಯಲ್ಲಿ ಲ್ಯಾಂಡ್ ಆಗಿತ್ತು. ಅಲ್ಲಿಂದ ಹೊರಟ ವಿಮಾನ ಈಗ ಭಾರತದಲ್ಲಿ ಲ್ಯಾಂಡ್ ಆಗಿದೆ.

    2016ರಲ್ಲಿ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ವಿಮಾನಗಳನ್ನು(28 ಸಿಂಗಲ್ ಸೀಟರ್, 8 ಡಬಲ್ ಸೀಟರ್) ಖರೀದಿಸುವ ಸಂಬಂಧ ಭಾರತ ಸರ್ಕಾರ ಫ್ರಾನ್ಸ್‍ನ ಡಸಾಲ್ಟ್ ಕಂಪನಿಯ ಜೊತೆ ಸಹಿ ಹಾಕಿತ್ತು. ಒಪ್ಪಂದ ಪ್ರಕಾರ 2020ರ ಜುಲೈಯಲ್ಲಿ ಮೊದಲ ಬ್ಯಾಚ್ ವಿಮಾನಗಳು ಭಾರತಕ್ಕೆ ಬರಬೇಕು ಡೆಡ್‍ಲೈನ್ ವಿಧಿಸಲಾಗಿತ್ತು. ಈ ಡೆಡ್‍ಲೈನ್‍ಗೆ ಅನುಗುಣವಾಗಿ ಮೊದಲ ಬ್ಯಾಚ್‍ನ 10 ವಿಮಾನಗಳು ಈಗ ಪೂರ್ಣ ಪ್ರಮಾಣದಲ್ಲಿ ಹಸ್ತಾಂತರವಾಗುತ್ತಿವೆ. ಈ ಪೈಕಿ 5 ವಿಮಾನಗಳು ಭಾರತಕ್ಕೆ ಬರುತ್ತಿದ್ದರೆ ಉಳಿದ 5 ವಿಮಾನಗಳು ಫ್ರಾನ್ಸ್‍ನಲ್ಲಿ ತರಬೇತಿ ನೀಡಲು ಬಳಕೆಯಾಗಲಿದೆ. ಎಲ್ಲ ವಿಮಾನಗಳು 2021ರ ಡಿಸೆಂಬರ್ ಕೊನೆಯಲ್ಲಿ ಭಾರತಕ್ಕೆ ಹಸ್ತಾಂತರವಾಗಲಿದೆ.

  • ತಮ್ಮ ಕಲೆಯೊಂದಿಗೆ ರಫೇಲ್ ಸ್ವಾಗತಿಸಿದ ಧಾರವಾಡದ ಕಲಾವಿದ

    ತಮ್ಮ ಕಲೆಯೊಂದಿಗೆ ರಫೇಲ್ ಸ್ವಾಗತಿಸಿದ ಧಾರವಾಡದ ಕಲಾವಿದ

    ಧಾರವಾಡ: ಅತ್ಯಾಧುನಿಕ ಗೇಮ್ ಚೇಂಜರ್ ಯುದ್ಧ ವಿಮಾನ ರಫೇಲ್ ಭಾರತದಲ್ಲಿ ಲ್ಯಾಂಡ್ ಆಗಿದೆ. 5 ರಫೇಲ್ ವಿಮಾನಗಳು ಹರ್ಯಾಣದ ಅಂಬಾಲ ವಾಯುನೆಲೆಯಲ್ಲಿ ಮಧ್ಯಾಹ್ನ 3.10ರ ವೇಳೆಗೆ ಲ್ಯಾಂಡ್ ಆಯ್ತು. ಈ ಹಿನ್ನೆಲೆಯಲ್ಲಿ ಧಾರವಾಡ ಕಲಾವಿದ ಮಂಜುನಾಥ್ ವಿಭಿನ್ನವಾಗಿ ಸ್ವಾಗತ ಕೋರಿದ್ದಾರೆ.

    ಹೌದು. ದೇಶದ ಯಾವುದೇ ಮೂಲೆಯಲ್ಲಿ ಏನೇ ಒಳ್ಳೆಯ ಕೆಲಸ ನಡೆಯಲಿ, ಅದರ ಬಗ್ಗೆ ತನ್ನ ಕಲೆಯ ಮೂಲಕ ಗೌರವ ಸಲ್ಲಿಸುವ ಧಾರವಾಡದ ಕಲಾವಿದ ಮಂಜುನಾಥ್ ಈ ಬಾರಿ ರಫೇಲ್ ವಿಮಾನ ದೇಶಕ್ಕೆ ಆಗಮಿಸಿದ ಬಗ್ಗೆ ತನ್ನ ಕಲೆಯನ್ನ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

    ಫ್ರಾನ್ಸ್ ದೇಶದಿಂದ ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳು ಬಂದಿಳಿಯುತ್ತಿದ್ದಂತೆ ಧಾರವಾಡ ಕೆಲಗೇರಿಯ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ ಅವರು ಧಾರವಾಡದಿಂದಲೇ ಆ ವಿಮಾನಗಳಿಗೆ ಕಲಾ ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: ರಫೇಲ್‌ ಭಾರತಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಕಾಶ್ಮೀರದ ಹಿಲಾಲ್‌ ಅಹ್ಮದ್

    ಮರಳಿನಲ್ಲಿ (ಸ್ಯಾಂಡ್ ಆರ್ಟ್) ರಫೇಲ್ ಯುದ್ಧ ವಿಮಾನಗಳ ಚಿತ್ರ ಬಿಡಿಸಿ ‘ವೆಲ್ ಕಮ್ ರಫೇಲ್’ ಎಂದು ಬರೆದು ಆ ವಿಮಾನಗಳಿಗೆ ತಮ್ಮ ಕಲೆಯ ಮೂಲಕ ಸ್ವಾಗತ ಕೋರಿದರು. ಇದನ್ನೂ ಓದಿ: ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿ ರಫೇಲ್ ಸಾರಥಿ

  • ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿ ರಫೇಲ್ ಸಾರಥಿ

    ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿ ರಫೇಲ್ ಸಾರಥಿ

    – ವಿಜಯಪುರ ಸೈನಿಕ ಶಾಲೆಗೆ ಮತ್ತೊಂದು ಗರಿ

    ವಿಜಯಪುರ: ಒಂದೆಡೆ ಮೊದಲ ಹಂತದ 5 ರಫೇಲ್ ಯುದ್ಧ ವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗುತ್ತಿರುವುದಕ್ಕೆ ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದರೆ, ಇನ್ನೊಂದೆಡೆ ವಿಜಯಪುರ ಸೈನಿಕ ಶಾಲೆಗೆ ಮತ್ತೊಂದು ಗರಿ ಬಂದಂತಾಗಿದೆ.

    ಇತ್ತೀಚೆಗಷ್ಟೆ ಫ್ರಾನ್ಸ್ ನಿಂದ ಭಾರತೀಯ ಸೇನೆಗೆ ಸೇರ್ಪಡೆಯಾದ ರಫೇಲ್ ಜೆಟ್ ಗೆ ಪೈಲಟ್ ಆಗಿ ವಿಜಯಪುರ ಸೈನಿಕ ಶಾಲೆಯ ವಿದ್ಯಾರ್ಥಿ ಕಮಾಂಡರ್ ಆಯ್ಕೆಯಾಗಿದ್ದಾರೆ. ವಿವಿಧ ಸೈನಿಕ ಶಾಲೆಯ ನಾಲ್ವರು ಕಮಾಂಡರ್ ಗಳು ಪೈಲಟ್ ಆಗಿ ಆಯ್ಕೆ ಆಗಿದ್ದಾರೆ. ಇದರಲ್ಲಿ ವಿಜಯಪುರ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅರುಣ್ ಕುಮಾರ್ ಸಹ ಆಯ್ಕೆಯಾಗಿದ್ದಾರೆ. ಮೂಲತಃ ಬಿಹಾರದವರಾದ ಅರುಣ್ ಕುಮಾರ್, ವಿಜಯಪುರ ಸೈನಿಕ ಶಾಲೆಯಲ್ಲಿ ಅಭ್ಯಾಸ ಮಾಡಿರುವುದು ಇದೀಗ ಸಂತಸದ ಸಂಗತಿಯಾಗಿದೆ. ಇದರಿಂದ ವಿಜಯಪುರದ ಸೈನಿಕ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ಭಾರತೀಯ ವಾಯುಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅರುಣ್ ಕುಮಾರ್, 1995 ರಿಂದ 2001ರ ಬ್ಯಾಚ್‍ನ ವಿದ್ಯಾರ್ಥಿಯಾಗಿದ್ದು, ಜನವರಿ 2002ರಲ್ಲಿ ಎನ್‍ಡಿಎ(ನ್ಯಾಷನಲ್ ಡಿಫೆನ್ಸ್ ಆರ್ಮಿ) ಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ತಂದೆ ಎನ್.ಪ್ರಸಾದ್ ಸಹ ಭಾರತೀಯ ವಾಯು ಸೇನೆಯಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಅರುಣ್ ಕುಮಾರ್ ಸಾಧನೆಗೆ ಅವರ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಹಬ್ಬದ ರೀತಿಯ ವಾತಾವರಣವೇ ನಿರ್ಮಾಣವಾಗಿದೆ.

    ಈ ಕುರಿತು ಅರುಣ್ ಕುಮಾರ್ ಅವರ ಶಿಕ್ಷಕರು ಮಾತನಾಡಿದ್ದು, ವಿಜಯಪುರ ಸೈನಿಕ ಶಾಲೆಗೆ ಇದೊಂದು ಹೆಮ್ಮೆಯ ವಿಷಯ. ಇತ್ತೀಚೆಗಷ್ಟೆ ಫ್ರಾನ್ಸ್ ನಿಂದ ಭಾರತ ಸೇನೆಗೆ ಸೇರ್ಪಡೆಯಾದ ರಫೆಲ್ ಜೆಟ್ ಗೆ ವಿವಿಧ ಸೈನಿಕ ಶಾಲೆಯ ನಾಲ್ವರು ಕಮಾಂಡರ್ ಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ ವಿಜಯಪುರದ ಸೈನಿಕ ಶಾಲೆಯಲ್ಲಿ ಕಲಿತಿದ್ದ ವಿದ್ಯಾರ್ಥಿ ಸಹ ಇರುವುದು ಸಂತಸ ತಂದಿದೆ. ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅರುಣ್ ಕುಮಾರ್ ಸಾಧನೆ ಮಹತ್ತರವಾದದ್ದು. ಸುಮಾರು 35 ವರ್ಷದ ಅರುಣ್ ಕುಮಾರ್ ವಿಜಯಪುರದ ಸೈನಿಕ ಶಾಲೆಯ 1995 ರಿಂದ 2001ರ ಬ್ಯಾಚ್ ವಿದ್ಯಾರ್ಥಿ. ಜನವರಿ 2002ರಲ್ಲಿ ಅವರು ಎನ್‍ಡಿಎ(ನ್ಯಾಷನಲ್ ಡಿಫೆನ್ಸ್ ಆರ್ಮಿ) ಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ತಂದೆ ಎನ್.ಪ್ರಸಾದ್ ಸಹ ಏರ್ ಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

    ವಾಯು ಸೇನೆಗೆ ಬಲ ತುಂಬಬಲ್ಲ ಅತ್ಯಾಧುನಿಕ ಗೇಮ್ ಚೇಂಜರ್ ಯುದ್ಧ ವಿಮಾನ ರಫೇಲ್ ಭಾರತದಲ್ಲಿ ಲ್ಯಾಂಡ್ ಆಗಿದೆ. 5 ರಫೇಲ್ ವಿಮಾನಗಳು ಹರ್ಯಾಣದ ಅಂಬಾಲ ವಾಯುನೆಲೆಯಲ್ಲಿ ಮಧ್ಯಾಹ್ನ 3.10ರ ವೇಳೆಗೆ ಲ್ಯಾಂಡ್ ಆದವು. ಯುದ್ಧ ವಿಮಾನಗಳು ಆಗಮಿಸುವ ಹಿನ್ನೆಲೆ ಇವುಗಳ ಸ್ವಾಗತಕ್ಕೆ ಹರ್ಯಾಣದಲ್ಲಿರುವ ಅಂಬಾಲ ವಾಯುನೆಲೆ ಮೊದಲೇ ಸಜ್ಜುಗೊಂಡಿತ್ತು. ರಫೇಲ್ ಭಾರತದ ವಾಯುಸೀಮೆಯನ್ನು ಪ್ರವೇಶಿಸುತ್ತಿದ್ದಂತೆ ಎರಡು ಸುಖೋಯ್ ವಿಮಾನಗಳು ಸ್ವಾಗತಿಸಿ ಬೆಂಗಾವಲಾಗಿ ಅಂಬಾಲಕ್ಕೆ ಕರೆದುಕೊಂಡು ಬಂದವು.

    ಕೊರೊನಾ ಇರುವುದರಿಂದ ಹಾಗೂ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಅಂಬಾಲದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಂಬಾಲ ವಾಯುನೆಲೆಗೆ ಹೊಂದಿಕೊಂಡಿರುವ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್ 144 ಜಾರಿಗೊಂಡಿದೆ.

    ಭಾರತ ಫ್ರಾನ್ಸ್ ನ ಡಸಾಲ್ಟ್ ಸಂಸ್ಥೆ ಜೊತೆ ಒಟ್ಟು 36 ರಫೇಲ್ ಯುದ್ಧ ವಿಮಾನಗಳ ಖರೀದಿಸುವ ಸಂಬಂಧ ಒಪ್ಪಂದ ನಡೆದಿತ್ತು. ಇದೀಗ ಈ ಪೈಕಿ ಮೊದಲ ಬ್ಯಾಚ್‍ನ ಐದು ವಿಮಾನಗಳು ಸೋಮವಾರ ಫ್ರಾನ್ಸ್ ನಿಂದ ಟೇಕಾಫ್ ಆಗಿ ಮಂಗಳವಾರ ಯುಎಇಯಲ್ಲಿರುವ ದಫ್ರಾ ವಾಯುನೆಲೆಯಲ್ಲಿ ಲ್ಯಾಂಡ್ ಆಗಿದ್ದವು. ಅಲ್ಲಿಂದ ಹೊರಟ ವಿಮಾನ ಈಗ ಭಾರತದಲ್ಲಿ ಲ್ಯಾಂಡ್ ಆಗಿವೆ.

    ಸ್ವದೇಶಿ ಐಎನ್‍ಎಸ್ ನೌಕೆ ರಫೇಲ್ ಲೀಡರ್ ಗೆ ಭಾರತಕ್ಕೆ ಸ್ವಾಗತ ಎಂದು ಹೇಳಿ ಹ್ಯಾಪಿ ಲ್ಯಾಂಡಿಂಗ್ ಸಂದೇಶ ಕಳುಹಿಸಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಡಿಯೋ ಟ್ವೀಟ್ ಮಾಡಿ ಸ್ವಾಗತ ಕೋರಿದ್ದರು. ಇದನ್ನೂ ಓದಿ: ರಫೇಲ್‌ ಭಾರತಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಕಾಶ್ಮೀರದ ಹಿಲಾಲ್‌ ಅಹ್ಮದ್

    2016ರಲ್ಲಿ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ವಿಮಾನಗಳನ್ನು(28 ಸಿಂಗಲ್ ಸೀಟರ್, 8 ಡಬಲ್ ಸೀಟರ್) ಖರೀದಿಸುವ ಸಂಬಂಧ ಭಾರತ ಸರ್ಕಾರ ಫ್ರಾನ್ಸ್ ನ ಡಸಾಲ್ಟ್ ಕಂಪನಿಯ ಜೊತೆ ಸಹಿ ಹಾಕಿತ್ತು. ಒಪ್ಪಂದ ಪ್ರಕಾರ 2020ರ ಜುಲೈಯಲ್ಲಿ ಮೊದಲ ಬ್ಯಾಚ್ ವಿಮಾನಗಳು ಭಾರತಕ್ಕೆ ಬರಬೇಕು ಡೆಡ್‍ಲೈನ್ ವಿಧಿಸಲಾಗಿತ್ತು. ಈ ಡೆಡ್‍ಲೈನ್‍ಗೆ ಅನುಗುಣವಾಗಿ ಮೊದಲ ಬ್ಯಾಚ್‍ನ 10 ವಿಮಾನಗಳು ಈಗ ಪೂರ್ಣ ಪ್ರಮಾಣದಲ್ಲಿ ಹಸ್ತಾಂತರವಾಗುತ್ತಿವೆ. ಈ ಪೈಕಿ 5 ವಿಮಾನಗಳು ಭಾರತಕ್ಕೆ ಬರುತ್ತಿದ್ದರೆ ಉಳಿದ 5 ವಿಮಾನಗಳು ಫ್ರಾನ್ಸ್ ನಲ್ಲಿ ತರಬೇತಿ ನೀಡಲು ಬಳಕೆಯಾಗಲಿವೆ. ಎಲ್ಲ ವಿಮಾನಗಳು 2021ರ ಡಿಸೆಂಬರ್ ಕೊನೆಯಲ್ಲಿ ಭಾರತಕ್ಕೆ ಹಸ್ತಾಂತರವಾಗಲಿವೆ. ಇದನ್ನೂ ಓದಿ: ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

  • ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

    ಕನಸು ನನಸು.. ಗೇಮ್‌ ಚೇಂಜರ್‌ ರಫೇಲ್‌ ಭಾರತದಲ್ಲಿ ಲ್ಯಾಂಡ್‌

    ಅಂಬಾಲ: ವಾಯು ಸೇನೆಗೆ ಬಲ ತುಂಬಬಲ್ಲ ಅತ್ಯಾಧುನಿಕ ಗೇಮ್‌ ಚೇಂಜರ್‌ ಯುದ್ಧ ವಿಮಾನ ರಫೇಲ್‌ ಭಾರತದಲ್ಲಿ ಲ್ಯಾಂಡ್‌ ಆಗಿದೆ. 5 ರಫೇಲ್‌ ವಿಮಾನಗಳು ಹರ್ಯಾಣದ ಅಂಬಾಲ ವಾಯುನೆಲೆಯಲ್ಲಿ ಮಧ್ಯಾಹ್ನ 3.10ರ ವೇಳೆಗೆ ಲ್ಯಾಂಡ್‌ ಆಯ್ತು.

    ಯುದ್ಧ ವಿಮಾನಗಳು ಆಗಮಿಸುವ ಹಿನ್ನೆಲೆ ಇವುಗಳ ಸ್ವಾಗತಕ್ಕೆ ಹರ್ಯಾಣದಲ್ಲಿರುವ ಅಂಬಾಲ ವಾಯುನೆಲೆ ಮೊದಲೇ ಸಜ್ಜುಗೊಂಡಿತ್ತು. ರಫೇಲ್‌ ಭಾರತದ ವಾಯುಸೀಮೆಯನ್ನು ಪ್ರವೇಶಿಸುತ್ತಿದ್ದಂತೆ ಎರಡು ಸುಖೋಯ್‌ ವಿಮಾನಗಳು ಸ್ವಾಗತಿಸಿ ಬೆಂಗಾವಲಾಗಿ ಅಂಬಾಲಕ್ಕೆ ಕರೆದುಕೊಂಡು ಬಂದಿತ್ತು.

    ಕೊರೊನಾ ಇರುವುದರಿಂದ ಹಾಗೂ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಅಂಬಾಲದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಂಬಾಲ ವಾಯುನೆಲೆಗೆ ಹೊಂದಿಕೊಂಡಿರುವ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್‌ 144 ಜಾರಿಗೊಂಡಿದೆ.

    ಮನೆಯ ಮೇಲ್ಛಾವಣೆಯಲ್ಲಿ ಸೇರುವುದು ಹಾಗೂ ಯುದ್ಧ ವಿಮಾನಗಳ ಫೋಟೋ ತೆಗೆಯುವುದನ್ನ ಈ ಸುತ್ತ ಮುತ್ತಲ ಪ್ರದೇಶದಲ್ಲಿ ನಿಷೇಧಿಸಲಾಗಿದೆ. ಇದನ್ನೂ ಓದಿ: ರಫೇಲ್‌ ಭಾರತಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಕಾಶ್ಮೀರದ ಹಿಲಾಲ್‌ ಅಹ್ಮದ್

    ಭಾರತ ಫ್ರಾನ್ಸ್‌ನ ಡಸಾಲ್ಟ್‌ ಸಂಸ್ಥೆ ಜೊತೆ ಒಟ್ಟು 36 ರಫೇಲ್‌ ಯುದ್ಧ ವಿಮಾನಗಳ ಖರೀದಿಸುವ ಸಂಬಂಧ ಒಪ್ಪಂದ ನಡೆದಿತ್ತು. ಇದೀಗ ಈ ಪೈಕಿ ಮೊದಲ ಬ್ಯಾಚ್‌ನ ಐದು ವಿಮಾನಗಳು ಸೋಮವಾರ ಫ್ರಾನ್ಸ್‌ನಿಂದ ಟೇಕಾಫ್‌ ಆಗಿ ಮಂಗಳವಾರ ಯುಎಇಯಲ್ಲಿರುವ ದಫ್ರಾ ವಾಯುನೆಲೆಯಲ್ಲಿ ಲ್ಯಾಂಡ್‌ ಆಗಿತ್ತು. ಅಲ್ಲಿಂದ ಹೊರಟ ವಿಮಾನ ಈಗ ಭಾರತದಲ್ಲಿ ಲ್ಯಾಂಡ್‌ ಆಗಿದೆ.

    ಸ್ವದೇಶಿ ಐಎನ್‌ಎಸ್‌ ನೌಕೆ ರಫೇಲ್‌ ಲೀಡರ್‌ಗೆ ಭಾರತಕ್ಕೆ ಸ್ವಾಗತ ಎಂದು ಹೇಳಿ ಹ್ಯಾಪಿ ಲ್ಯಾಂಡಿಂಗ್‌ ಸಂದೇಶ ಕಳುಹಿಸಿತು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ವಿಡಿಯೋ ಟ್ವೀಟ್‌ ಮಾಡಿ ಸ್ವಾಗತ ಕೋರಿದ್ದರು. ಇದನ್ನೂ ಓದಿ: ರಫೇಲ್‌ ಲ್ಯಾಂಡ್‌ ಆಗಿದ್ದ ವಾಯುನೆಲೆಯ ಸಮೀಪವೇ ಬಿತ್ತು ಇರಾನ್‌ ಕ್ಷಿಪಣಿ

    2016ರಲ್ಲಿ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್‌ ವಿಮಾನಗಳನ್ನು(28 ಸಿಂಗಲ್‌ ಸೀಟರ್‌, 8 ಡಬಲ್‌ ಸೀಟರ್‌) ಖರೀದಿಸುವ ಸಂಬಂಧ ಭಾರತ ಸರ್ಕಾರ ಫ್ರಾನ್ಸ್‌ನ ಡಸಾಲ್ಟ್‌ ಕಂಪನಿಯ ಜೊತೆ ಸಹಿ ಹಾಕಿತ್ತು. ಒಪ್ಪಂದ ಪ್ರಕಾರ 2020ರ ಜುಲೈಯಲ್ಲಿ ಮೊದಲ ಬ್ಯಾಚ್‌ ವಿಮಾನಗಳು ಭಾರತಕ್ಕೆ ಬರಬೇಕು ಡೆಡ್‌ಲೈನ್‌ ವಿಧಿಸಲಾಗಿತ್ತು. ಈ ಡೆಡ್‌ಲೈನ್‌ಗೆ ಅನುಗುಣವಾಗಿ ಮೊದಲ ಬ್ಯಾಚ್‌ನ 10 ವಿಮಾನಗಳು ಈಗ ಪೂರ್ಣ ಪ್ರಮಾಣದಲ್ಲಿ  ಹಸ್ತಾಂತರವಾಗುತ್ತಿವೆ. ಈ ಪೈಕಿ 5 ವಿಮಾನಗಳು ಭಾರತಕ್ಕೆ ಬರುತ್ತಿದ್ದರೆ ಉಳಿದ 5 ವಿಮಾನಗಳು ಫ್ರಾನ್ಸ್‌ನಲ್ಲಿ ತರಬೇತಿ ನೀಡಲು ಬಳಕೆಯಾಗಲಿದೆ. ಎಲ್ಲ ವಿಮಾನಗಳು 2021ರ ಡಿಸೆಂಬರ್‌ ಕೊನೆಯಲ್ಲಿ ಭಾರತಕ್ಕೆ ಹಸ್ತಾಂತರವಾಗಲಿದೆ.

  • ರಫೇಲ್‌ ಲ್ಯಾಂಡ್‌ ಆಗಿದ್ದ ವಾಯುನೆಲೆಯ ಸಮೀಪವೇ ಬಿತ್ತು ಇರಾನ್‌ ಕ್ಷಿಪಣಿ

    – ವಾಯುನೆಲೆಯಲ್ಲಿ ಹೈ ಅಲರ್ಟ್‌ ಘೋಷಣೆ
    – ಸೈನಿಕರಿಗೆ ಬಂಕರ್‌ಗೆ ಹೋಗುವಂತೆ ಸೂಚನೆ

    ಅಬುಧಾಬಿ: ಅತ್ಯಾಧುನಿಕ ಯುದ್ಧ ವಿಮಾನ ರಫೇಲ್‌ ಇಂದು ಮಧ್ಯಾಹ್ನ ಹರ್ಯಾಣದಲ್ಲಿರುವ ಅಂಬಾಲ ವಾಯುನೆಲೆಯಲ್ಲಿ ಲ್ಯಾಂಡ್‌ ಆಗಲಿದೆ. ಈ ಮಧ್ಯೆ ಮಂಗಳವಾರ ರಾತ್ರಿ ರಫೇಲ್‌ ತಂಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಲ್ ದಫ್ರಾ ವಾಯುನೆಲೆಯ ಸಮೀಪ ಇರಾಕ್‌ನ  ಕ್ಷಿಪಣಿಗಳು ಲ್ಯಾಂಡ್‌ ಆದ ವಿಚಾರ ಬೆಳಕಿಗೆ ಬಂದಿದೆ.

    ಭಾರತದ ಮೂರು ಸಿಂಗಲ್‌ ಸೀಟರ್‌ ಮತ್ತು ಎರಡು ಡಬಲ್‌ ಸೀಟರ್‌ ರಫೇಲ್‌ ವಿಮಾನಗಳು ಸೋಮವಾರ ಫ್ರಾನ್ಸ್‌ನ ಮೆರಿಗ್ನಾಕ್‌ನಿಂದ ಟೇಕಾಫ್‌ ಆಗಿ ಅಮೆರಿಕ ಮತ್ತು ಫ್ರಾನ್ಸ್‌ ವಾಯುನೆಲೆಯಾಗಿರುವ ಅಲ್ ದಫ್ರಾದಲ್ಲಿ ಲ್ಯಾಂಡ್‌ ಆಗಿತ್ತು. ಈ ನಡುವೆ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಮೂರು ಕ್ಷಿಪಣಿಗಳನ್ನು ಹಾರಿಸಿತ್ತು. ಕ್ಷಿಪಣಿ ಹಾರಿಸಿದ್ದ ವಿಚಾರ ತಿಳಿಯುತ್ತಿದ್ದಂತೆ ಅಲ್‌ ದಫ್ರಾ ಮತ್ತು ಕತಾರ್‌ನಲ್ಲಿರುವ ಅಮೆರಿಕದ ವಾಯು ನೆಲೆ ಅಲ್‌ ಉದಿದ್‌ನಲ್ಲಿ ಹೈ ಅಲರ್ಟ್‌ ಅಲರ್ಟ್‌ ಘೋಷಿಸಲಾಗಿತ್ತು.

    ಇರಾನ್‌ ಕ್ಷಿಪಣಿಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಎರಡು ವಾಯು ನೆಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿತ್ತು. ಆದರೆ ಈ ಕ್ಷಿಪಣಿಗಳು ಯಾವುದು ವಾಯುನೆಲೆಯ ಮೇಲೆ ಅಪ್ಪಳಿಸಲಿಲ್ಲ. ವಾಯು ನೆಲೆಯ ಸಮೀಪ ಇರುವ ಪರ್ಷಿಯನ್‌ ಕೊಲ್ಲಿಯಲ್ಲಿ ಬಿತ್ತು ಎಂದು ಫಾಕ್ಸ್‌ ನ್ಯೂಸ್‌ ವರದಿ ಮಾಡಿದೆ.

    ಮಿಲಿಟರಿ ತಾಲೀಮಿನ ಭಾಗವಾಗಿ ಇರಾನ್‌ ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಅಮೆರಿಕದ ವಿಮಾನ ವಾಹಕ ಯುದ್ಧ ನೌಕೆಯ ಮಾದರಿಯನ್ನು ನಿಲ್ಲಿಸಿ ಅದರ ಮೇಲೆ ದಾಳಿ ನಡೆಸುವ ಭಾಗವಾಗಿ ಕ್ಷಿಪಣಿ ಹಾರಿಸಿತ್ತು. ಈ ಕ್ಷಿಪಣಿಗಳು ಎರಡು ವಾಯುನೆಲೆಯ ಸಮೀಪವೇ ಬಿದ್ದ ಕಾರಣ ಕೆಲ ಹೊತ್ತು ಆತಂಕಕ್ಕೆ ಕಾರಣವಾಗಿತ್ತು ಇರಾನ್‌ ಕ್ಷಿಪಣಿ ಬರುತ್ತಿರುವ ಸಿಗ್ನಲ್‌ ತಿಳಿಯುತ್ತಿದ್ದಂತೆ ಆಲ್‌ ದಫ್ರಾ ವಾಯುನೆಲೆಯಲ್ಲಿರುವ ಸೈನಿಕರಿಗೆ ಬಂಕರ್‌ ಒಳಗಡೆ ಹೋಗುವಂತೆ ಅಮೆರಿಕ ಸೂಚಿಸಿತ್ತು.

     

    ಕ್ಷಿಪಣಿ ಹಾರಿಸಿದ್ದು ಯಾಕೆ?
    ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ ಕೋರ್‌ನ ಕಮಾಂಡರ್‌ ಮೇಜರ್‌ ಜನರಲ್‌ ಖಾಸಿಂ ಸುಲೇಮಾನಿ ಅವರನ್ನು ಅಮೆರಿಕ ಸೇನೆ ಈ ವರ್ಷದ ಜನವರಿ 3 ರಂದು ಹತ್ಯೆ ಮಾಡಿತ್ತು. ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿ ಬಿಗಿ ಭದ್ರತೆಯಲ್ಲಿದ್ದ ಸುಲೇಮಾನಿಯ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

    ಇರಾಕ್‍ನ ಮಿಲಿಟರಿ ಕಮಾಂಡರ್ ಅಬು ಮಹ್ದಿ ಅಲ್ ಮುಹಾಂದಿಸ್ ಜೊತೆ ಇರಾಕ್ ರಾಜಧಾನಿ ಬಾಗ್ದಾದ್‍ನ ವಿಮಾನ ನಿಲ್ದಾಣಕ್ಕೆ ಇರಾನ್ ಸೇನಾ ಮುಖ್ಯಸ್ಥರಾಗಿದ್ದ ಸುಲೇಮಾನಿ ಕಾರಿನಲ್ಲಿ ತೆರಳುತ್ತಿದ್ದರು. ಈ ಇಬ್ಬರು ತೆರಳುತ್ತಿದ್ದ ಕಾರನ್ನು ಟಾರ್ಗೆಟ್ ಮಾಡಿದ ಅಮೆರಿಕ ಸೇನೆಗಳು ಡ್ರೋನ್ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಿ ಏರ್ ಸ್ಟ್ರೈಕ್ ಮಾಡಿತ್ತು. ದಾಳಿಯ ತೀವ್ರತೆಗೆ ಇಬ್ಬರು ತೆರಳುತ್ತಿದ್ದ ಕಾರುಗಳು ಛಿದ್ರ-ಛಿದ್ರವಾಗಿದ್ದವು.

    ಈ ಘಟನೆಯ ಬಳಿಕ ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿರುವ ಅಮೆರಿಕ ಸೇನೆ ಬೀಡು ಬಿಟ್ಟಿರುವ ಅಲ್-ಬಲಾದ್ ವಾಯುನೆಲೆ ಮೇಲೆ ಇರಾನ್ ಎರಡು ರಾಕೆಟ್ ದಾಳಿ ನಡೆಸಿತ್ತು. ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಲು ಇರಾನ್‌ ಮುಂದಾಗುತ್ತಿದ್ದು ಈಗ ಕ್ಷಿಪಣಿಗಳನ್ನು ಉಡಾಯಿಸುವ ಮೂಲಕ ಸಮರಾಭ್ಯಾಸ ನಡೆಸುತ್ತಿದೆ.  ಇದನ್ನೂ ಓದಿ: ಅಮೆರಿಕ, ಇರಾನ್ ಯುದ್ಧದ ಕಾರ್ಮೋಡ- ಭಾರೀ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ರೈತರು