Tag: Rafiq Ahmed

  • ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?

    ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?

    ತುಮಕೂರು: ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಪ್ರಬಲ ಆಕಾಂಕ್ಷಿಯಾದ (Ticket Aspirant) ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ (Rafiq Ahmed) ಸೋಲಿನ ಭೀತಿ ಮತ್ತೆ ಕಾಡ್ತಾ ಇದ್ಯಾ? ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಗುಮಾನಿ ಹುಟ್ಟಿಕೊಂಡಿದೆ.

    ಕಾಂಗ್ರೆಸ್‍ನ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು (Attica Babu) ಮಾತು ಈ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಕೆಲದಿನಗಳ ಹಿಂದೆ ಮಸೀದಿಗಳಿಗೆ ಭೇಟಿ ಕೊಟ್ಟು ಆಡಿದ ಮಾತುಗಳು ರಫಿಕ್ ಅಹ್ಮದ್ ಸ್ಪರ್ಧೆ ಮಾಡಲ್ಲ ಎನ್ನುವುದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ. ರಫಿಕ್ ಅಹ್ಮದ್ ನನಗೆ ಸಹಾಯ ಮಾಡುತ್ತಾರೆ. ಅವರ ಬಳಿ ಹಣ ಇಲ್ಲ. ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಟ್ಟಿಕಾ ಬಾಬು ಮಸೀದಿಯಲ್ಲಿ ಹೇಳಿದ್ದಾರೆ. ಅಟ್ಟಿಕಾ ಬಾಬು ಕೂಡ ಮುಸ್ಲಿಂ ಸಮುದಾಯದವನಾಗಿದ್ದು, ನನ್ನ ಹೆಸರು ಅಯೂಬ್ ನನ್ನ ತಂದೆ ಪಾಷ ಸಾಬ್ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

    ಹಾಲಿ ಶಾಸಕರಾಗಿದ್ದರೂ ಕಳೆದ ಬಾರಿ ರಫಿಕ್ ಅಹ್ಮದ್ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ತುಮಕೂರು ನಗರದಲ್ಲಿ ಮುಸ್ಲಿಂ ಸಮುದಾಯದ ಮತ ಹೆಚ್ಚಿದ್ದರೂ ಕಾಂಗ್ರೆಸ್‍ನಿಂದ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟವಾಗುತ್ತದೆ ಎಂಬ ಲೆಕ್ಕಾಚಾರ ಇದೆ. ಕಾಂಗ್ರೆಸ್‍ನಿಂದ ಹಿಂದೂ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಸುಲಭ ಎಂಬ ಸ್ಟ್ರಾಟಜಿಯನ್ನು ನಾಯಕರು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ ಸೋಲಿನ ಭೀತಿ ಕಾಡ್ತಾ ಇದ್ದು, ಚುನಾವಣೆಗೆ ಖರ್ಚು ಮಾಡಲು ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ಮಾತು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ತಮ್ಮ ಸಮುದಾಯದವರೇ ಆದ ಅಟ್ಟಿಕಾ ಗೋಲ್ಡ್ ಕಂಪನಿಯ ಅಟ್ಟಿಕಾ ಬಾಬು ಅವರ ಬೆಂಬಲಕ್ಕೆ ರಫಿಕ್ ಅಹ್ಮದ್ ನಿಂತಿದ್ದಾರೆ ಎನ್ನುವ ಸಂಗತಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಿಂದ 22ನೇ ಸ್ಥಾನಕ್ಕೆ ಜಾರಿದ ಅದಾನಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತೆರೆಮೆರೆಯಲ್ಲಿ ‘ಕೈ’ ಕುಲುಕಿದ್ರಾ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ?

    ತೆರೆಮೆರೆಯಲ್ಲಿ ‘ಕೈ’ ಕುಲುಕಿದ್ರಾ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ?

    ತುಮಕೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಮಾಜಿ ಸಚಿವ ಸೊಗಡು ಶಿವಣ್ಣ ನಿಜಕ್ಕೂ ತೆರೆಮರೆಯಲ್ಲಿ ಕಾಂಗ್ರೆಸ್‍ಗೆ ಸಪೋರ್ಟ್ ಮಾಡ್ತಾ ಇದ್ದಾರಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

    ಪಕ್ಕಾ ಹಿಂದೂವಾದಿ ಆಗಿರುವ ಸೊಗಡು ಶಿವಣ್ಣ ತುಮಕೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಫಿಕ್ ಅಹಮದ್‍ಗೆ ಬೆಂಬಲ ನೀಡಿದ್ದಾರೆ ಅಂತಾ ಹೇಳಲಾಗ್ತಿದೆ. ಕ್ಯಾತಸಂದ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದ ಶಾಸಕ ರಫಿಕ್ ಅಹಮದ್ ತಮ್ಮ ಭಾಷಣದ ವೇಳೆ ಸ್ಫೋಟಕ ರಹಸ್ಯವನ್ನ ಬಿಚ್ಚಿಟ್ಟಿದ್ದಾರೆ.

    ಭಾಷಣದ ವೇಳೆ ಬಿಜೆಪಿ ಪಕ್ಷದ ಮುಖಂಡರು ನಮಗೆ ಬೆಂಬಲ ನೀಡುತ್ತಿದ್ದಾರೆ. ಕೆಲವರು ಬಹಿರಂಗವಾಗಿ ಸಪೋರ್ಟ್ ನೀಡಿದ್ರೆ, ಇನ್ನೂ ಕೆಲವರು ತೆರೆಮರೆಯಲ್ಲಿ ಸಹಕಾರ ನೀಡುತ್ತಿದ್ದಾರೆ. ಬಿಜೆಪಿ ನಾಯಕರ ಬೆಂಬಲದಿಂದ ನಾನು ಮತ್ತೊಮ್ಮೆ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತೇನೆ. ಅದರಲ್ಲೂ ಮಾಜಿ ಸಚಿವ ಸೊಗಡು ಶಿವಣ್ಣರ ಆಶೀರ್ವಾದ ನನ್ನ ಮೇಲಿದೆ. ಅವರ ಮನೆಗೆ ಹೋಗಿ ನಾನು ಮತಯಾಚನೆ ಮಾಡಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ನನ್ನ ಮನೆಗೆ ಬರುವುದೇ ಬೇಡ-ಕೊನೆಗೂ ಮೌನ ಮುರಿದ ಸೊಗಡು ಶಿವಣ್ಣ

    ಕಾಂಗ್ರೆಸ್ ಅಭ್ಯರ್ಥಿ ರಫಿಕ್ ಅಹಮದ್ ಹೇಳಿಕೆ ತುಮಕೂರು ಬಿಜೆಪಿ ಪಾಳಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೊಗಡು ಶಿವಣ್ಣ ಈ ಬಾರಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಹೈಕಮಾಂಡ್ ಜ್ಯೋತಿ ಗಣೇಶ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರಿಂದ ಸೊಗಡು ಶಿವಣ್ಣ ಸಹಜವಾಗಿಯೇ ಅಸಮಾಧಾನಗೊಂಡಿದ್ದರು.