Tag: ragging

  • ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

    ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

    ಬಾಗಲಕೋಟೆ: ಸಹಪಾಠಿಗಳು ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.

    ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಗದಗ | ಐಪಿಎಸ್ ಅಧಿಕಾರಿಯ ಸಹೋದರನ ದರ್ಪ – ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ರಂಪಾಟ

    ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳಾದ ವರ್ಷಾ ಹಾಗೂ ಪ್ರದೀಪ್ ಸೇರಿ ಅಂಜಲಿಗೆ ರ‍್ಯಾಗಿಂಗ್ ಮಾಡಿದ್ದರು. ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಈ ಸಂಬಂಧ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಇನ್ನಿತರರ ಮೇಲೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಡೆತ್‌ನೋಟ್‌ನಲ್ಲೇನಿದೆ?
    ನನ್ನ ಸಾವಿಗೆ ಕಾರಣ ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಅವರು ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆಯೇ ಮಾತನಾಡಿ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೇಯಿಂಗ್ ಗುಡ್ ಬೈ ಎಂದು ಸಹಿ ಹಾಕಿ ಅಂಜಲಿ ಡೆತ್‌ನೋಟ್ ಬರೆದಿದ್ದಾಳೆ.

  • ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

    ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

    ನೆಲಮಂಗಲ: ಇಲ್ಲಿನ ನಂದರಾಮಯ್ಯನ ಪಾಳ್ಯದಲ್ಲಿ ರ‍್ಯಾಗಿಂಗ್‌ಗೆ (Ragging) ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಅರುಣ್ (22) ಆರ್ಕಿಟೆಕ್ಚರ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಚನ್ನಕೇಶವ ಹಾಗೂ ತುಳಸಿ ದಂಪತಿ ಹಿರಿಯ ಮಗ ಅರುಣ್ ಮೂಲತಃ ಹಾಸನದವನಾಗಿದ್ದ. ಮನೆಯಲ್ಲಿ ಕಡು ಬಡತನವಿದ್ದರಿಂದ ಕೆಲಸ ಹುಡುಕಿಕೊಂಡು ಬಂದು ನಂದರಾಮಯ್ಯನ ಪಾಳ್ಯದಲ್ಲಿ ನೆಲೆಸಿದ್ದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ದಂಪತಿಯು ಮೂಟೆ ಹೊತ್ತು ಕೂಲಿ ಕೆಲಸ ಮಾಡಿ, ಮಕ್ಕಳನ್ನ ಸಾಕುತ್ತಿದ್ದರು. ಮನೆಯಲ್ಲಿ ಬಡತನವಿದ್ದರೂ ಅರುಣ್ ಕಲಿಕೆಯಲ್ಲಿ ಕಾಲೇಜು ಟಾಪರ್ ಆಗಿದ್ದ. ಇದರಿಂದ ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದುಕೊಂಡಿದ್ದ. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

    ಕಲೆಯಲ್ಲೂ ಆಸಕ್ತಿ ಹೊಂದಿದ್ದ ಅರುಣ್, 5 ನಿಮಿಷದಲ್ಲಿ ಭಾವಚಿತ್ರ, ವಿಭಿನ್ನ ಚಿತ್ರಗಳನ್ನ ಬಿಡಿಸುವ ಕಲೆ ರೂಢಿಸಿಕೊಂಡಿದ್ದ. ಗಣ್ಯಾತಿಗಣ್ಯರು, ಚಲನಚಿತ್ರ ನಟರ ಹಾಗೂ ಪಾರಂಪರಿ ಕಲಾಕೃತಿ ಚಿತ್ರಗಳನ್ನೂ ಬಿಡಿಸುತ್ತಿದ್ದ. ಅಲ್ಲದೇ ಸಿನಿಮಾ ತಾರೆಯರ ಭಾವಚಿತ್ರ ಬಿಡಿಸಿ ಮೆಚ್ಚುಗೆಯನ್ನೂ ಗಳಿಸಿದ್ದ. ಪೇಂಟಿಂಗ್‌ನಲ್ಲಿ ಅಪಾರ ಜನಪ್ರಿಯತೆ ಹೊಂದಿದ್ದ ಅರುಣ್, ಶಾಲಾ ಕಾರ್ಯಕ್ರಮವೊಂದರಲ್ಲಿ ಜವಹರಲಾಲ್ ಫೋಟೋ ಬಿಡಿಸಿ ಭೇಷ್ ಎನಿಸಿಕೊಂಡಿದ್ದ. ಇದನ್ನೂ ಓದಿ: ಒಡಿಶಾ ಹೋಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ – ಕಾಂಗ್ರೆಸ್ ಸ್ಟೂಡೆಂಟ್ ಲೀಡರ್ ಅರೆಸ್ಟ್

    ಜು. 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಸೆಲ್ಫಿ ವೀಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ. ನನ್ನ ಬೆನ್ನ ಹಿಂದೆ ಕೆಟ್ಟ ಕೆಟ್ಟದಾಗಿ ಮಾತನಾಡ್ತಾರೆ ಎಂದು ವೀಡಿಯೋದಲ್ಲಿ ಹೇಳಿದ್ದ. ಬಳಿಕ ಆ ವೀಡಿಯೋವನ್ನು ಕಾಲೇಜು ಗ್ರೂಪ್‌ಗೆ ಹರಿಬಿಟ್ಟು, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದ.

    ವೀಡಿಯೋ ವೈರಲ್ ಆಗ್ತಿದ್ದಂತೆ ಕಾಲೇಜಿನವರು ಅರುಣ್ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೋಷಕರು ಮನೆಗೆ ಬಂದು ನೋಡಿದಾಗ ಅರುಣ್ ನೇಣಿಗೆ ಶರಣಾಗಿರುವುದು ಬೆಳಕಿಗೆಬಂದಿದೆ. ಈ ಘಟನಾ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

    ತಿರುವನಂತಪುರಂ: ಕೇರಳದ ಕೊಟ್ಟಾಯಂ (Kottayam) ನರ್ಸಿಂಗ್‌ ಕಾಲೇಜಿನಲ್ಲಿ ಭಯಾನಕ ರ‍್ಯಾಗಿಂಗ್ (Ragging) ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಬಂಧಿಸಿದ ಬೆನ್ನಲ್ಲೇ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ಹೊರಬಿದ್ದಿದೆ.

    ಐವರು ಹಿರಿಯ ವಿದ್ಯಾರ್ಥಿಗಳು ತಮ್ಮ ಮೂವರು ಜೂನಿಯರ್‌ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಚಿತ್ರಹಿಂಸೆ ನೀಡಿದ್ದಾರೆ? ಅನ್ನೋದನ್ನ ಈ ವೀಡಿಯೋ ಬಹಿರಂಗಪಡಿಸಿದೆ. ಕಿರಿಯ ವಿದ್ಯಾರ್ಥಿಯನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ಮಾಡೋದಕ್ಕೂ ಮುನ್ನವೇ ಇನ್ನೂ ಬೇರೆ ರೀತಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಾಲ್ಕು ಗಿನ್ನಿಸ್ ದಾಖಲೆಗೆ ತಯಾರಿ

    ಹೌದು. ಮೊದಲು ಮೂವರು ಕಿರಿಯರಲ್ಲಿ ಓರ್ವನನ್ನ ಹಾಸಿಗೆ ಮೇಲೆ ಮಲಗಿಸಿದ್ದಾರೆ. ಕೈಕಾಲುಗಳನ್ನ ಹಾಸಿಗೆ ತುದಿಗೆ ಕಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಆತನ ತೊಡೆಯ ಭಾಗಕ್ಕೆ ಕಂಪಾಸ್‌ನಿಂದ ಚುಚ್ಚಿದ್ದಾನೆ. ಸಂತ್ರಸ್ತ ವಿದ್ಯಾರ್ಥಿ (Medical Student) ಚೀರಾಡಿದರೂ ಬಿಡದೇ ಅತನ ಮೈಮೇಲೆ ಬಿಳಿ ಲೋಷನ್‌ ಸುರಿದಿದ್ದಾರೆ. ಬಳಿಕ ಮರ್ಮಾಂಗಕ್ಕೆ ಡಂಬಲ್ಸ್‌ಗಳನ್ನ ನೇತುಹಾಕಿ, ಎದೆಯ ಭಾಗಕ್ಕೆ ಬಟ್ಟೆ ಕ್ಲಿಪ್‌ಗಳನ್ನ ಕಚ್ಚಿಸಿದ್ದಾರೆ. ಬಳಿಕ ಕ್ಲಿಪ್‌ ಹಿಡಿದು ಎಳೆದಾಡಿದ್ದಾರೆ. ವಿದ್ಯಾರ್ಥಿ ಕೂಗಿಕೊಂಡರೂ ಬಿಡದೇ ಆತನನ್ನ ಟಾರ್ಚರ್‌ ಮಾಡಿ, ಕೇಕೆ ಹಾಕಿದ್ದಾರೆ.  ಇದನ್ನೂ ಓದಿ: ಫೆ.15ರಂದು ಅಶ್ವಿನಿ ವೈಷ್ಣವ್ ರಾಜ್ಯ ಭೇಟಿ – ಕೇಂದ್ರ ಬಜೆಟ್ ಕುರಿತು ಸಂವಾದ

    ಈ ಸಂಬಂಧ ಅದೇ ಕಾಲೇಜಿನ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿದ ಪೊಲೀಸರು ಹಿರಿಯ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ರಾಹುಲ್ ರಾಜ್ (22), ಜೀವಾ (18), ರಿಜಿಲ್ ಜಿತ್ (20) ಮತ್ತು ವಿವೇಕ್ (21)ರನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ.

    ಈ ನಡುವೆ ಮದ್ಯ ಖರೀದಿಸಲು ಕಿರಿಯ ವಿದ್ಯಾರ್ಥಿಗಳಿಂದ ಹಣ ಕೇಳಿದ್ದಾರೆ, ಅವರು ನಿರಾಕರಿಸಿದ್ದಕ್ಕಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ಮತ್ತೊಬ್ಬ ವಿದ್ಯಾರ್ಥಿ ತನ್ನ ತಂದೆಯೊಂದಿಗೆ ಹೇಳಿಕೊಂಡ ನಂತರ ವಿಷಯ ಗೊತ್ತಾಗಿದೆ. ಬಳಿಕ ದೂರು ದಾಖಲಿಸಲು ಮಗನಿಗೆ ಪ್ರೋತ್ಸಾಹ ನೀಡಿದ್ದಾರೆ. ಇದನ್ನೂ ಓದಿ: ಏಡ್ಸ್‌ ಸೋಂಕಿಗೆ ಒಳಗಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ ಬಡ್ತಿ ನಿರಾಕರಣೆ – ತಾರತಮ್ಯದ ಸ್ಪಷ್ಟ ನಿದರ್ಶನ ಎಂದ ಹೈಕೋರ್ಟ್‌

  • ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್: ಕೇರಳದಲ್ಲಿ ಭಯಾನಕ ರ‍್ಯಾಗಿಂಗ್

    ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಂಡು ಕೇಳರಿಯದಂತಹ ಭಯಾನಕ ರ‍್ಯಾಗಿಂಗ್ (Ragging) ನಡೆದಿದೆ.

    ಇಲ್ಲಿನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ (Government Nursing College) ವ್ಯಾಸಂಗ ಮಾಡುತ್ತಿದ್ದ ಮೂವರು ಕಿರಿಯ ವಿದ್ಯಾರ್ಥಿಗಳನ್ನು ಮೂರನೇ ವರ್ಷದ ಸೀನಿಯರ್‌ ವಿದ್ಯಾರ್ಥಿಗಳು ಬೆತ್ತಲೆ ಮಾಡಿ, ಮರ್ಮಾಂಗಕ್ಕೆ ಡಂಬಲ್ಸ್ ನೇತು ಹಾಕಿ ಟಾರ್ಚರ್ ನೀಡಿದ್ದಾರೆ.

    ಕಂಪಾಸ್‌ನಿಂದ ಇರಿದು ಕ್ರೂರವಾಗಿ ಥಳಿಸಿ ಬಾಯಿಗೆ ಲೋಷನ್ ತುಂಬಿ ಅಮಾನುಷವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಉಚಿತ ಯೋಜನೆಗಳಿಂದ ಜನ ಕಷ್ಟಪಟ್ಟು ಕೆಲಸ ಮಾಡ್ತಿಲ್ಲ – ಸುಪ್ರೀಂ ಅಸಮಾಧಾನ

    ನವೆಂಬರ್‌ನಿಂದ ನಿರಂತರವಾಗಿ ನಮ್ಮ ಮೇಲೆ ರ‍್ಯಾಗಿಂಗ್ ನಡೆಯುತ್ತಿದೆ. ಮದ್ಯಪಾನಕ್ಕಾಗಿ ಹಣ ಕಸಿಯುತ್ತಿದ್ದರು. ಹಣ ನೀಡದ್ದಕ್ಕೆ ಹೊಡೆಯಲು ಆರಂಭಿಸಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ರ‍್ಯಾಗಿಂಗ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪೊಲೀಸರು ಆರೋಪಿ ವಿದ್ಯಾರ್ಥಿಗಳಾದ ಸ್ಯಾಮುಯೆಲ್ ಜಾನ್ಸನ್, ಎನ್ ಎಸ್ ಜೀವಾ, ಕೆಪಿ ರಾಹುಲ್ ರಾಜ್, ರಿಜಿಲ್ ಜಿತ್, ವಿವೇಕ್‌ನನ್ನು ಬಂಧಿಸಿದ್ದಾರೆ.

     

  • ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು ಕಾಲೇಜಿನಲ್ಲಿ ರ‍್ಯಾಗಿಂಗ್ – ಗಡ್ಡ ಶೇವ್ ಮಾಡದ್ದಕ್ಕೆ ಜೂನಿಯರ್ ಮೇಲೆ ಹಲ್ಲೆ

    ಬೆಂಗಳೂರು: ಗಡ್ಡ ಶೇವ್ ಮಾಡಿಲ್ಲವೆಂದು ಸೀನಿಯರ್‌ಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಾಗಿದೆ.

    ಹಲ್ಲೆಗೊಳಗಾದ ವಿದ್ಯಾರ್ಥಿ ಕೇರಳ (Kerala) ಮೂಲದನಾಗಿದ್ದು, ದೊಡ್ಡ ಸಿದ್ದಾಪುರದಲ್ಲಿ ಸ್ನೇಹಿತರ ಜೊತೆ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದನು. ಈತನನ್ನು ಆಗಸ್ಟ್ 30 ರಂದು ಕರೆ ಮಾಡಿ ಸಿದ್ದಾಪುರದ ಚರ್ಚ್ ಬಳಿ ಬರುವಂತೆ 3 ಬಾರಿ ಕಾಲ್ ಮಾಡಿ ಸೀನಿಯರ್‌ಗಳು ಕರೆಸಿಕೊಂಡಿದ್ದರು.  ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್‌, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್‌

    ವಿದ್ಯಾರ್ಥಿ ಬರುವಾಗಲೇ ಗಡ್ಡ ಹಾಗೂ ಮೀಸೆ ಟ್ರಿಮ್ ಮಾಡುವಂತೆ ಒತ್ತಾಯ ಮಾಡಿದ್ದು, ಇದನ್ನು ನಿರಾಕರಣೆ ಮಾಡಿದಾಗ ಆತನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನೀವು ಬಸ್ಸು, ಟ್ರಕ್, ವ್ಯಾನ್ ಚಾಲಕರಾಗಬೇಕೇ? – ಇಲ್ಲಿದೆ ಸುವರ್ಣಾವಕಾಶ, ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ

    ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಬೆಳ್ಳಂದೂರು (Bellandur) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಲಾಗಿದೆ. ಘಟನೆಯ ಕುರಿತಾಗಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜಮನೆತನ, ಸರ್ಕಾರ ಮಧ್ಯೆ ನಿಲ್ಲದ ಚಾಮುಂಡಿ ಪ್ರಾಧಿಕಾರ ಸಂಘರ್ಷ – ಮೊದಲ ಸಭೆಯಲ್ಲಿ ಏನೇನು ಚರ್ಚೆಯಾಗಿದೆ?

  • ರ‍್ಯಾಗಿಂಗ್‍ನಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

    ರ‍್ಯಾಗಿಂಗ್‍ನಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

    ಹೈದರಾಬಾದ್: ರ‍್ಯಾಗಿಂಗ್‍ (Ragging) ಹಿನ್ನೆಲೆಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ಆತ್ಮಹತ್ಯೆ ಶರಣಾದ ಘಟನೆ ತೆಲಂಗಾಣದ (Telangana) ಹೈದರಾಬಾದ್‍ನಲ್ಲಿ ನಡೆದಿದೆ.

    ಡಿ. ಪ್ರೀತಿ (26) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಆಕೆ ಸಿನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಪ್ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆ ವೇಳೆ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ ನಂತರ ಪ್ರೀತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಆಗಿದ್ದಳು.

    ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‍ಗೆ ದಾಖಲಿಸಲಾಗಿತ್ತು. ಆದರೆ 4 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರೀತಿಯ ತಂದೆಯ ದೂರಿನ ಮೇರೆಗೆ 2ನೇ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಅಲಿ ಸೈಫ್‍ನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

    ಪ್ರೀತಿ ಸಿನಿಯರ್ ವಿರುದ್ಧ ಕಾಲೇಜು ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಯಕಯೋಗಿಗಳಿಂದ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಎಸ್‍ಸಿ, ಎಸ್‍ಟಿ ರಾಷ್ಟ್ರೀಯ ಆಯೋಗವು ಸರ್ಕಾರ, ಎಂಜಿಎಂ ಆಸ್ಪತ್ರೆಯ ಸೂಪರಿಂಟೆಂಡೆಂಟ್, ಪ್ರಾಂಶುಪಾಲರು ಮತ್ತು ವಿಭಾಗದ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

  • 3 ತಿಂಗಳು ಕಾಲೇಜಲ್ಲಿ ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಿದ ಮಹಿಳಾ ಪೇದೆ

    3 ತಿಂಗಳು ಕಾಲೇಜಲ್ಲಿ ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಿದ ಮಹಿಳಾ ಪೇದೆ

    ಭೋಪಾಲ್: ಮಹಿಳಾ ಪೇದೆಯೊಬ್ಬರು (Female Constable) 3 ತಿಂಗಳ ಕಾಲ ಕಾಲೇಜೊಂದರಲ್ಲಿ (College) ವಿದ್ಯಾರ್ಥಿನಿಯಂತೆಯೇ (Student) ನಟಿಸಿ, ಸಿನಿಮೀಯ ರೀತಿಯಲ್ಲಿ ರ‍್ಯಾಗಿಂಗ್ ಪ್ರಕರಣವನ್ನು (Ragging Case) ಭೇದಿಸಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಮಧ್ಯಪ್ರದೇಶದ ಇಂದೋರ್‌ನಲ್ಲಿನ ಸರ್ಕಾರಿ ಮಹಾತ್ಮ ಗಾಂಧಿ ಮೆಮೊರಿಯಲ್ (MGM) ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಲು ಮಹಿಳಾ ಪೊಲೀಸ್ ಪೇದೆ 3 ತಿಂಗಳ ಕಾಲ ವೈದ್ಯಕೀಯ ವಿದ್ಯಾರ್ಥಿನಿಯಂತೆ ನಟಿಸಿದ್ದರು ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಕೆಲ ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾಲಯದ ಧನಸಹಾಯ ಆಯೋಗದ (UGC) ಸಹಾಯವಾಣಿಗೆ ರ‍್ಯಾಗಿಂಗ್ ಬಗ್ಗೆ ದೂರು ನೀಡಿದ್ದ. ಬಳಿಕ ಸಂಸ್ಥೆಯ ಆಡಳಿತ ಜುಲೈ 24 ರಂದು ಅಪರಿಚಿತ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.

    ಯುಜಿಸಿ ಸಹಾಯವಾಣಿಗೆ ಬಂದಿದ್ದ ದೂರಿನಲ್ಲಿ ರ‍್ಯಾಗಿಂಗ್ ಘಟನೆಯ ಬಗ್ಗೆ ಸಂಪೂರ್ಣ ವಿವರ ನೀಡಲಾಗಿತ್ತು. ಆದರೆ ಆರೋಪಿ ಹಾಗೂ ದೂರುದಾರರ ಹೆಸರನ್ನು ಉಲ್ಲೇಖಿಸಲಾಗಿರಲಿಲ್ಲ. ದೂರು ನೀಡಿದ ವಿದ್ಯಾರ್ಥಿಯ ಫೋನ್ ನಂಬರ್ ಕೂಡಾ ಬಹಿರಂಗಪಡಿಸಲಾಗಿರಲಿಲ್ಲ. ಈ ಹಿನ್ನೆಲೆ ಪ್ರಕರಣವನ್ನು ಭೇದಿಸಲು ಪೊಲೀಸ್ ಅಧಿಕಾರಿಯೊಬ್ಬರನ್ನು ಕಾಲೇಜಿಗೆ ವಿದ್ಯಾರ್ಥಿಯ ವೇಷದಲ್ಲಿ ಕಳುಹಿಸಬೇಕಾಯಿತು ಎಂದು ಸಂಯೋಗಿತಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ತಹಜೀಬ್ ಖಾಜಿ ತಿಳಿಸಿದ್ದಾರೆ.

    ಪ್ರಕರಣದ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾನ್‌ಸ್ಟೆಬಲ್ ಶಾಲಿನಿ ಚೌಹಾಣ್ (24) ಅವರನ್ನು ಮೊದಲಿಗೆ ಕಾಲೇಜಿಗೆ ವಿದ್ಯಾರ್ಥಿನಿಯ ರೂಪದಲ್ಲಿ ಕಳುಹಿಸಲಾಗಿತ್ತು. ಅವರು ವೈದ್ಯಕೀಯ ವಿದ್ಯಾರ್ಥಿಯಂತೆ ನಟಿಸಿ, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಪ್ರಕರಣದ ಬಗ್ಗೆ ಇನ್ನಷ್ಟು ಆಳವಾಗಿ ತನಿಖೆ ನಡೆಸಲು ಇನ್ನೊಬ್ಬ ಮಹಿಳಾ ಸಿಬ್ಬಂದಿಯನ್ನು ನರ್ಸ್ ವೇಷದಲ್ಲಿ ಕಳುಹಿಸಲಾಯಿತು. ಬಳಿಕ ಇನ್ನಿಬ್ಬರು ಕಾನ್‌ಸ್ಟೇಬಲ್‌ಗಳನ್ನು ಕ್ಯಾಂಟೀನ್ ಕೆಲಸಗಾರರಂತೆ ಕಾಲೇಜಿಗೆ ಕಳುಹಿಸಲಾಯಿತು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ವ್ಯಕ್ತಿಯ ಬರ್ಬರ ಕೊಲೆ

    ಮಾರುವೇಷದಲ್ಲಿ ಹೋಗಿದ್ದ ಪೊಲೀಸರು ತನಿಖೆಯ ವೇಳೆ ಅಪರಾಧವನ್ನು ದೃಢಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ 11 ವಿದ್ಯಾರ್ಥಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಆರೋಪಿ ಸೀನಿಯರ್ ವಿದ್ಯಾರ್ಥಿಗಳು ತಮ್ಮ ಜೂನಿಯರ್‌ಗಳಿಗೆ ಅಶ್ಲೀಲ ಕೃತ್ಯವನ್ನು ಮಾಡುವಂತೆ ಒತ್ತಾಯಿಸಿ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಇದೀಗ ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಆರೋಪಪಟ್ಟಿ ಸಲ್ಲಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಕಾಲೇಜು ಆಡಳಿತ ಕಳೆದ ವಾರ ಆರೋಪಿ ವಿದ್ಯಾರ್ಥಿಗಳನ್ನು 3 ತಿಂಗಳ ಕಾಲ ಕಾಲೇಜಿನಿಂದ ಅಮಾನತುಗೊಳಿಸಿದೆ. ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ಮಾಸ್ ಕಾಪಿ – 10 ಸಾವಿರ ವಸೂಲಿ ಮಾಡಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

    Live Tv
    [brid partner=56869869 player=32851 video=960834 autoplay=true]

  • ದಿಂಬಿನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ – ರ‍್ಯಾಗಿಂಗ್ ಭಯಾನಕ ಸ್ಟೋರಿ ಬಿಚ್ಚಿಟ್ಟ ಜ್ಯೂನಿಯರ್

    ದಿಂಬಿನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ – ರ‍್ಯಾಗಿಂಗ್ ಭಯಾನಕ ಸ್ಟೋರಿ ಬಿಚ್ಚಿಟ್ಟ ಜ್ಯೂನಿಯರ್

    ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ಧ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜ್ಯೂನಿಯರ್ಸ್ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು, ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ. ಜೊತೆಗೆ ದಿಂಬಿನೊಂದಿಗೆ ಸೆಕ್ಸ್ ಮಾಡಲು ಒತ್ತಾಯಿಸಿದ್ದಾರೆ ಎಂದು ಕಿರಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಹೌದು, ಇಂದೋರ್‌ನ ಎಂಜಿಎಂ ಮೆಡಿಕಲ್ ಕಾಲೇಜಿನಲ್ಲಿ ಹಿರಿಯ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ವಿದ್ಯಾರ್ಥಿಗಳು ಕೆಲವು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ಆರೋಪವನ್ನು ಎದುರಿಸುತ್ತಿದೆ. ಈ ಕುರಿತಂತೆ ಕಿರಿಯ ವಿದ್ಯಾರ್ಥಿಯೋರ್ವ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಆ್ಯಂಟಿ ರ‍್ಯಾಗಿಂಗ್ ಸಹಾಯವಾಣಿಗೆ ಕರೆ ಮಾಡಿ ತಮಗಾದ ಕಹಿ ಘಟನೆ ಬಗ್ಗೆ ವಿವರಿಸಿದ್ದಾರೆ. ಹಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು ಫ್ಲ್ಯಾಟ್‍ಗಳಲ್ಲಿ ದಿಂಬಿನ ಜೊತೆಗೆ ಸೆಕ್ಸ್ ಮಾಡುವಂತೆ ಮತ್ತು ಮತ್ತು ಬ್ಯಾಚ್‍ಮೇಟ್‍ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವಂತೆ, ಅಲ್ಲದೇ ಬಲವಂತವಾಗಿ ಪರಸ್ಪರ ಕಪಾಳಮೋಕ್ಷ ಮಾಡಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: 3,419 ಕೋಟಿ ರೂ. ವಿದ್ಯುತ್ ಬಿಲ್ ಕಂಡು ಮಹಿಳೆಗೆ ಶಾಕ್ – ಮಾವ ಆಸ್ಪತ್ರೆಗೆ ದಾಖಲು

    ರ‍್ಯಾಗಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಮುಜುಗರವನ್ನುಂಟು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆ ಪ್ರಭಾರಿ ತೆಹಜೀಬ್ ಖಾಜಿ ಹೇಳಿದ್ದಾರೆ.  ಇದನ್ನೂ ಓದಿ: ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ

    Live Tv
    [brid partner=56869869 player=32851 video=960834 autoplay=true]

  • 9ನೇ ತರಗತಿ ವಿದ್ಯಾರ್ಥಿಗೆ ಬಲವಂತವಾಗಿ ಮೂತ್ರ ಕುಡಿಸಿದ ಸೀನಿಯರ್ಸ್!

    9ನೇ ತರಗತಿ ವಿದ್ಯಾರ್ಥಿಗೆ ಬಲವಂತವಾಗಿ ಮೂತ್ರ ಕುಡಿಸಿದ ಸೀನಿಯರ್ಸ್!

    ಗಾಂಧಿನಗರ: 9ನೇ ತರಗತಿ ವಿದ್ಯಾರ್ಥಿಯೋರ್ವನಿಗೆ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ನಗರದ ಕೇಂದ್ರೀಯ ವಿದ್ಯಾಲಯ ಶಾಲೆಯೊಂದರಲ್ಲಿ ಮಂಗಳವಾರ ನಡೆದಿದೆ.

    ಘಟನೆ ಕುರಿತು ವಿದ್ಯಾರ್ಥಿಯ ತಾಯಿ ಮಾತನಾಡಿ, ತಮ್ಮ ಮಗ ಹಾಗೂ ಆತನ ಸ್ನೇಹಿತರಿಗೆ ಅದೇ ಶಾಲೆಯ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‌ನಲ್ಲಿ ಸಮೋಸಾ ತಯಾರಿಕೆ – 30 ವರ್ಷಗಳ ಬಳಿಕ ರೆಸ್ಟೊರೆಂಟ್ ಬಂದ್

    ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ, 12ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಏಪ್ರಿಲ್ 20 ರಂದು ಶಾಲಾ ಸಮಯದಲ್ಲಿ ತಮ್ಮ ಮಗ ಮತ್ತು ಇತರ ಕೆಲವರನ್ನು ಶೌಚಾಲಯಕ್ಕೆ ಕರೆದೊಯ್ದು ಮೂತ್ರ ಕುಡಿಸಲು ಪ್ರಯತ್ನಿಸಿದ್ದಾರೆ ಎಂದು ಏಪ್ರಿಲ್ 22 ರಂದು ವಸ್ತ್ರಾಪುರ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಬಾತ್‌ರೂಮ್‌ ಗೋಡೆಯಲ್ಲಿ ಸಿಕ್ತು 60 ವರ್ಷದ ಮೆಕ್‍ಡೊನಾಲ್ಡ್ಸ್ ಊಟ!

    ಶಾಲೆಯ ಪ್ರಾಂಶುಪಾಲರಾದ ಜೇಮಿ ಜೇಮ್ಸ್ ಅವರು ಈ ವಿಷಯವಾಗಿ ಎರಡು ವಿಚಾರಣೆಗಳನ್ನು ನಡೆಸಿದ್ದಾರೆ. ಆದರೆ ಗಂಭೀರವಾದ ಅಂಶ ಏನೂ ಕಂಡುಬಂದಿಲ್ಲ. ಘಟನೆ ಸಂಭವಿಸಿದ ಕೂಡಲೇ ನಾವು ಗುರುವಾರದಂದು ವಿಚಾರಣೆಯನ್ನು ಪ್ರಾರಂಭಿಸಿದ್ದೇವೆ. ವಿಚಾರಣೆ ಪೂರ್ಣಗೊಂಡಿದ್ದು, ಅದರಲ್ಲಿ ಏನೂ ಇಲ್ಲ ಎಂದು ತಿಳಿಸಿದ್ದಾರೆ.

    POLICE JEEP

    ಘಟನೆ ಕುರಿತು ಪೊಲೀಸರು ಈಗಾಗಲೇ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ ಎಂದು ಇನ್ಸ್‌ಪೆಕ್ಟರ್ ಸಂದೀಪ್ ಖಂಬಳ್ ತಿಳಿಸಿದ್ದಾರೆ. ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

  • ವಿದ್ಯಾರ್ಥಿಗಳ ರ‍್ಯಾಗಿಂಗ್- ಆರು ಮಂದಿ ಬಂಧನ

    ವಿದ್ಯಾರ್ಥಿಗಳ ರ‍್ಯಾಗಿಂಗ್- ಆರು ಮಂದಿ ಬಂಧನ

    ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ ಮಾಡಿರುವ ಕೇರಳ ಮೂಲದ ಆರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಶ್ರೀಲಾಲ್, ಶಾಹಿದ್,ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಜೂನಿಯರ್ಸ್ ವಾಸವಿದ್ದ ಅಪಾರ್ಟ್ಮೆಂಟ್ಗೆ ನುಗ್ಗಿ ರ‍್ಯಾಗಿಂಗ್ ಮಾಡಿದ್ದಾರೆ. ನಗರದ ಇಂದಿರಾ ನರ್ಸಿಂಗ್ ಕಾಲೇಜಿನ ಆರು ಜನ ಕೇರಳ ಮೂಲದ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

    ಕಡಲನಗರಿ ಮಂಗಳೂರು ಶಿಕ್ಷಣಕಾಶಿ ಅಂತಾನು ಕರೆಸಿಕೊಂಡಿದೆ. ಇಲ್ಲಿ ಉನ್ನತ ಶಿಕ್ಷಣಕ್ಕಾಗಿ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊರ ಜಿಲ್ಲೆ, ರಾಜ್ಯ, ವಿದೇಶದಿಂದ ಬಂದವರಿದ್ದಾರೆ. ಕೇವಲ ಆರು ತಿಂಗಳಲ್ಲೇ ಮೂರು ರ‍್ಯಾಗಿಂಗ್ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಂದು ರ‍್ಯಾಗಿಂಗ್ ಕೇಸ್ ದಾಖಲಾಗಿದ್ದು, ಆರು ಜನ ವಿದ್ಯಾರ್ಥಿಗಳು ಅಂದರ್ ಆಗಿದ್ದಾರೆ.

    ಕೇರಳ ಮೂಲದ ದ್ವಿತೀಯ ವರ್ಷದ ವಿದಾರ್ಥಿ ಮ್ಯಾನುಯಲ್ ಬಾಬು ಹಾಗೂ ಆತನ ಸಹಪಾಠಿ ವಿದ್ಯಾರ್ಥಿಗಳಿಗೆ ಈ ಆರೋಪಿಗಳು ರ‍್ಯಾಗಿಂಗ್ ಮಾಡಿದ್ದಾರೆ. ನಾವು ಸೀನಿಯರ್ಸ್ ನಾವು ಬರೋವಾಗ ಎದ್ದು ನಿಂತು ರೆಸ್ಪೆಕ್ಟ್ ಕೊಡ್ಬೇಕು ಎಂದು ಹೋಟೆಲ್ ಒಂದರಲ್ಲಿ ರ್ಯಾಗಿಂಗ್ ನಡೆಸಿದ್ದರು. ಇಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳು ವಾಸವಿದ್ದ ಅಪಾಟ್ಮೆರ್ಂಟ್‍ನ ರೂಮ್‍ಗೆ ಎಂಟ್ರಿ ಕೊಟ್ಟು ಒಳ ಚಡ್ಡಿಯಲ್ಲಿ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ನಾವು ಬರೋವಾಗ ನೀವು ತಲೆ ತಗ್ಗಿಸಿ ಕುಳಿತುಕೊಳ್ಳಬೇಕು, ನಾವು ಹೇಳಿದಂತೆ ಕೇಳಬೇಕು, ಕಾಲೇಜಿಗೆ ಬರುವಾಗಲು ನಮ್ಮ ಎದುರು ಅಡಿಗೆ ತಲೆ ಹಾಕಿಕೊಂಡು ಹೋಗಬೇಕು ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಒಡ್ಡಿದ್ದರು. ಹೀಗಾಗಿ ಮ್ಯಾನುಯಲ್ ಬಾಬು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ರ‍್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

    ರ‍್ಯಾಗಿಂಗ್ ತಡೆಯುವುದಕ್ಕಾಗಿ ಪೊಲೀಸ್ ಸೂಚನೆಯಂತೆ ಕಾಲೇಜುಗಳಲ್ಲಿ ಆ್ಯಂಟಿ ರ‍್ಯಾಗಿಂಗ್ ಕಮಿಟಿ ಮಾಡಲಾಗಿದೆ. ಈಗಾಗಲೇ ಈ ಹಿಂದಿನ ಮೂರು ಪ್ರಕರಣದಲ್ಲಿ 18ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ರ‍್ಯಾಗಿಂಗ್ ಪ್ರಕರಣದ ವಿದ್ಯಾರ್ಥಿಗಳಿಗೆ ಯಾವುದೇ ಎಕ್ಸ್‍ಕ್ಯೂಝ್ ನೀಡಲ್ಲ ಎಂದು ಕಮೀಷನರ್ ಎಚ್ಚರಿಕೆ ನೀಡಿದ್ದಾರೆ.