Tag: Raghavendra Hunsur

  • ನಟ ರಮೇಶ್ ಅರವಿಂದ್ ಬರೆದ ಯಶಸ್ಸಿನ ಕುರಿತಾದ ಪುಸ್ತಕ ಬಿಡುಗಡೆ

    ನಟ ರಮೇಶ್ ಅರವಿಂದ್ ಬರೆದ ಯಶಸ್ಸಿನ ಕುರಿತಾದ ಪುಸ್ತಕ ಬಿಡುಗಡೆ

    ಬೆಂಗಳೂರಿನ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ (Ramesh Aravind)  ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ (Ananth Nag) ಬಿಡುಗಡೆ ಮಾಡಿದರು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣಗೆ ಭರ್ಜರಿ ಡಿಮ್ಯಾಂಡ್

    ಈ ವೇಳೆ ಮಾತನಾಡಿದ ಅವರು, ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

    ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

    ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) (Jogi) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು. ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು (Raghavendra Hunsur) ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ (Jameel) ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ಬೆಂಗಳೂರು: ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ರಿಯಾಲಿಟಿ ಶೋಗೆ ಶನಿವಾರ ಅದ್ಧೂರಿ ತೆರೆಬಿದ್ದಿದ್ದು, ಉಡುಪಿಯ ರಾಜೇಕ್ ಪೂಜಾರಿ ವಿಜೇತರಾಗಿ, ಕಾಮಿಡಿ ಕಿಲಾಡಿಗಳು 3ರ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಮೊದಲ ಸ್ಥಾನವನ್ನು ರಾಕೇಶ್ ಪಡೆದಿದ್ದು, ಹಾಸನದ ಸಂತೋಷ್ ಅವರು ರನ್ನರ್ ಅಪ್ ಆಗಿದ್ದಾರೆ. ಶನಿವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆದಿದ್ದು, ಶೋ ತೀರ್ಪುಗಾರರಾಗಿದ್ದ ನಟ ಜಗ್ಗೇಶ್ ಅವರು ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ಮತ್ತು ರನ್ನರ್ ಅಪ್‍ಗಳನ್ನು ಘೋಷಿಸಿದರು.

    ವಿನ್ನರ್ ಆದ ರಾಕೇಶ್ ಅವರಿಗೆ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್ ಸಂತೋಷ್ ಅವರಿಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ಇತ್ತ ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿನ್ನರ್ ರಾಕೇಶ್ ಅವರಿಗೆ ಕಾರ್ಯಕ್ರಮದ ಮೂವರು ತಿರ್ಪುಗಾರರಾದ ನಟ ಜಗ್ಗೇಶ್, ನಟಿ ರಕ್ಷಿತಾ, ನಿರ್ದೇಶಕ ಯೋಗರಾಜ್ ಭಟ್ ಹಾಗೂ ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರ್ ಅವರು ನಗದು ಬಹುಮಾನದ ಚೆಕ್ ಮತ್ತು ಟ್ರೋಫಿ ನೀಡಿ ಖುಷಿಪಟ್ಟರು.

    15 ಸ್ಪರ್ಧಿಗಳು ತೀವ್ರ ಪೈಪೋಟಿ ನೀಡುತ್ತಾ, 26 ವಾರಗಳ ಕಾಲ ನಡೆದ ‘ಕಾಮಿಡಿ ಕಿಲಾಡಿಗಳು ಸೀಸನ್ 3’ಗೆ ಅದ್ಧೂರಿ ತೆರೆಬಿದ್ದಿದೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರು ನೆರೆದಿದ್ದರು.