Tag: raghavendra raj kumar

  • ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

    ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

    ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆಗೆ ಆಗಮಿಸಿರುವ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಇಂದು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ಮಾಡಿದ್ದಾರೆ. ಅಪ್ಪು ಮನೆಯಲ್ಲೇ ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ ಸಂಜಯ್ ದತ್ ಅವರನ್ನು ಭೇಟಿ ಮಾಡಿದೆ.

    ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಪತ್ನಿ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್ ಕೂಡ ಅಲ್ಲಿದ್ದರು. ಕೆಲ ಹೊತ್ತು ಪುನೀತ್ ಕುಟುಂಬದ ಯೋಗಕ್ಷೇತ್ರ ವಿಚಾರಿಸಿ ಮತ್ತೆ ಅವರು ಉಳಿದುಕೊಂಡಿರುವ ಹೋಟೆಲ್ ಗೆ ಆಗಮಿಸಿದರು ಸಂಜಯ್ ದತ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ  ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ.  ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.

  • ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

    ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

    ಇಂದು ಮೈಸೂರಿನ ವಿಶ್ವವಿದ್ಯಾಲಯದ 102ನೇ ವಾರ್ಷಿಕೋತ್ಸವ ಘಟಿಕೋತ್ಸವದಲ್ಲಿ ನಟ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವಿಶ್ವ ವಿದ್ಯಾಲಯವು 1976ರಲ್ಲಿ ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಿತ್ತು. ಈ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಗೌರವ ಡಾಕ್ಟರೇಟ್ ಪಡೆದ ಫೋಟೋ ಮತ್ತು ಇಂದು ಪುನೀತ್ ಅವರ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೌರವ ಡಾಕ್ಟರೇಟ್ ಪಡೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಅಂದಿನ ಫೋಟೋದಲ್ಲಿ ಡಾ.ರಾಜ್ ಕುಮಾರ್ ಜತೆ ಪಾರ್ವತಮ್ಮ ರಾಜ್ ಕುಮಾರ್ ಇದ್ದಾರೆ. ಇವತ್ತು  ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆದ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

  • ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

    ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

    ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರತಿ ವರ್ಷವೂ ಮೈಸೂರು ವಿಶ್ವವಿದ್ಯಾಲಯದಲ್ಲಿ ಓದಿದ ಪ್ರತಿಭಾವಂತರಿಗೆ 2 ಚಿನ್ನದ ಪದಕವನ್ನು ನೀಡುವುದಾಗಿ ರಾಘವೇಂದ್ರ ರಾಜ್ ಕುಮಾರ್ ಘೋಷಿಸಿದ್ದಾರೆ. ಇಂದು ಮೈಸೂರಿನ ವಿವಿಯಲ್ಲಿ ನಡೆಯುತ್ತಿರುವ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ ‘ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕಗಳನ್ನು ನೀಡುವುದಾಗಿ ತಿಳಿಸಿದರು. ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ, ಬ್ಯೂಸಿನೇಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಪುನೀತ್ ರಾಜಕುಮಾರ್  ಹೆಸರಿನಲ್ಲಿ ಲಲಿತಾ ಕಲೆಗಳ ವಿಷಯದಲ್ಲಿ ಬಂಗಾರದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಘೋಷಣೆ ಆಯಿತು.  ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು ಎಂದಿದೆ ಡಾ.ರಾಜ್ ಕುಟುಂಬ.

    ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣುಸ್ತಿಲ್ಲ. ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನ ಶ್ರದ್ದೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಅಂತ ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನ ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ರ್ನಾಟಕ ರತ್ನ ಪುನೀತ್ ರಾಜ್‌ ಕುಮಾರ್( ಮರಣೋತ್ತರ) ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ  ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

    ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ರಾಘವೇಂದ್ರ ರಾಜ್ ಕುಮಾರ್ ಭಾವುಕ

    ಸಭೆಯ ಕೆಳಗೆ ಕುಳಿತಿದ್ದ ನಟ ರಾಘವೇಂದ್ರ ರಾಜಕುಮಾರ್ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಪ್ರಶಸ್ತಿ ನೀಡುವಾಗ ಭಾವುಕರಾದರು. ಇದೇ ವೇಳೆ 15 ಚಿನ್ನದ ಪದಕ ಪಡೆದ ಜಿ.ಎಂ.ಭಾವನ ಅವರನ್ನು ಕರೆದು ರಾಘವೇಂದ್ರ ರಾಜಕುಮಾರ್ ಬೆನ್ನು ತಟ್ಟಿ ಅಭಿನಂದಿಸಿದರು.

  • 80 ಕೋಟಿಗೆ ಜೇಮ್ಸ್ ಟಿವಿ ರೈಟ್ಸ್ ಸೇಲಾಯ್ತಾ? ಡಿಮಾಂಡಪ್ಪೋ ಡಿಮಾಂಡ್

    80 ಕೋಟಿಗೆ ಜೇಮ್ಸ್ ಟಿವಿ ರೈಟ್ಸ್ ಸೇಲಾಯ್ತಾ? ಡಿಮಾಂಡಪ್ಪೋ ಡಿಮಾಂಡ್

    ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ಕುರಿತು ಚಂದನವನ ಅಂಗಳದಿಂದ ಮತ್ತೊಂದು ಭರ್ಜರಿ ಸುದ್ದಿ ಹರಿದಾಡುತ್ತಿದೆ. ಕನ್ನಡದಲ್ಲೇ ಅತೀ ಹೆಚ್ಚು ಮೊತ್ತಕ್ಕೆ ಜೇಮ್ಸ್ ಚಿತ್ರದ ಟಿವಿ ರೈಟ್ಸ್ ಸೇಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

    ಈಗಾಗಲೇ ಥಿಯೇಟರ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಜೇಮ್ಸ್ ಚಿತ್ರವು, ಮುಂದಿನ ನಾಲ್ಕು ದಿನಗಳ ಟಿಕೆಟ್ ಸೋಲ್ಡೌಟ್ ಆಗಿವೆಯಂತೆ. ಇವತ್ತು ಒಂದೇ ದಿನಕ್ಕೆ ಅಂದಾಜು 20 ಕೋಟಿಗೂ ಅಧಿಕ ಆದಾಯ ಹರಿದು ಬಂದಿದೆ ಎನ್ನುತ್ತಿದೆ ಬಾಕ್ಸ್ ಆಫೀಸ್ ರಿಪೋರ್ಟ್. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ

    ಈ ನಡುವೆ ಜೇಮ್ಸ್ ಸಿನಿಮಾದ ಟಿವಿ ರೈಟ್ಸ್ ಎಲ್ಲ ಭಾಷೆಗೂ ಸೇರಿ ಅಂದಾಜು 80 ಕೋಟಿಗೆ ಸೇಲ್ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕನ್ನಡದಲ್ಲೇ ಸುವರ್ಣ ವಾಹಿನಿಯು 13.80 ಕೋಟಿಗೆ ಪ್ರಸಾರದ ಹಕ್ಕನ್ನು ಪಡೆದಿದೆಯಂತೆ. ಸೋನಿ ಡಿಜಿಟಲ್ 40 ಕೋಟಿ ಕೊಟ್ಟು ಪ್ರಸಾರದ ಹಕ್ಕನ್ನು ಪಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ತಮಿಳಿನ ಸನ್ ನೆಟ್ ವರ್ಕ್ 2.17 ಕೋಟಿ, ತೆಲುಗಿನ ಮಾ ಟಿವಿ 5.70 ಕೋಟಿ, ಮಲೆಯಾಳಂ 1.2 ಕೋಟಿ, ಹಿಂದಿ ಸೋನಿ 2.70 ಕೋಟಿ, ಭೋಜಪುರಿ 5.50 ಕೋಟಿ ಹಾಗೂ ಮತ್ತಿತರ ಭಾಷೆಯಲ್ಲೂ ಡಬ್ ಆದ ಚಿತ್ರದಿಂದ ಅಂದಾಜು 10 ಕೋಟಿಯಷ್ಟು ಹಣ ಬಂದಿದೆಯಂತೆ. ಹಾಗಾಗಿ ಥಿಯೇಟರ್ ರಿಲೀಸ್ ಮತ್ತು ಟಿವಿ ರೈಟ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ಬಂದು ಹಣ 100 ಕೋಟಿ ತಲುಪಿದೆ. ಬಿಡುಗಡೆಯ ದಿನವೇ ನೂರು ಕೋಟಿ ಕ್ಲಬ್ ಗೆ ಸೇರಿದ ಸಿನಿಮಾವಿದು ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿದೆ.

    ನಾಲ್ಕು ದಿನಗಳ ಟಿಕೇಟ್ ಈಗಾಗಲೇ ಮಾರಾಟವಾಗಿರುವುದರಿಂದ ಮತ್ತು ಅತೀ ಹೆಚ್ಚು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿರುವುದರಿಂದ ಜೇಮ್ಸ್ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಮಾಯಿ ಮಾಡಿದೆ.

  • ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಧ್ಯೆ ರಾತ್ರಿಯಿಂದಲೇ ತೆರೆಯ ಮೇಲೆ ಅಪ್ಪು ರಾರಾಜಿಸುತ್ತಾ ಇದ್ದಾರೆ. ಇಂದು ಅವರ ಹುಟ್ಟುಹಬ್ಬವೂ ಆಗಿರುವುದರಿಂದ ಒಂದು ರೀತಿಯಲ್ಲಿ ಜಾತ್ರೆಯ ವಾತಾವರಣವೇ ಥಿಯೇಟರ್ ಮುಂದಿದೆ. ಆದರೆ, ಅಪ್ಪು ಇಲ್ಲ ಎನ್ನುವ ಕೊರಗು ಸದಾ ಇದ್ದೇ ಇರುತ್ತದೆ.

    ಜೇಮ್ಸ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ. ಖಂಡಿತಾ ಈ ಸೆಂಟಿಮೆಂಟ್ ಸಿನಿಮಾಗೆ ಬಂದ ಮೇಲೆ ವರ್ಕ್ ಆಗಲ್ಲ. ಸೆಂಟಿಮೆಂಟ್ ಆಚೆಯೂ ಸಿನಿಮಾ ಗೆದ್ದು ನಿಲ್ಲುತ್ತದೆ. ಕಾರಣ ‘ಪವರ್ ಸ್ಟಾರ್’. ಸಾಮಾನ್ಯವಾಗಿ ಕಥೆಯೇ ಇಲ್ಲದೇ ಸ್ಟಾರ್ ನಟರು ಚಿತ್ರ ಮಾಡುತ್ತಾರೆ ಎನ್ನುವ ಆರೋಪವಿದೆ. ಆದರೆ, ಜೇಮ್ಸ್ ಸಿನಿಮಾದಲ್ಲಿ ಭರ್ಜರಿ ಕಥೆಯಿದೆ. ಅದು ಕೇವಲ ನಮ್ಮ ನೆಲದ ಕಥೆ ಮಾತ್ರವಲ್ಲ, ವಿದೇಶಿ ನೆಲದಲ್ಲೂ ಬೇರೂರಿರುವಂತಹ ಕಥಾವಸ್ತುವನ್ನು ಅದು ಹೊಂದಿದೆ. ಇದನ್ನೂ ಓದಿ : ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಅಪ್ಪು ಎಂಟ್ರಿನೇ ಮೈ ಜುಮ್ಮೆನಿಸುತ್ತದೆ. ಅದರಲ್ಲೂ ಕಾರ್ ಚೇಸಿಂಗ್ ದೃಶ್ಯ ನೋಡುಗರ ಎದೆ ನಡುಗಿಸುತ್ತದೆ. ಹೇಳಿ ಕೇಳಿ ಪುನೀತ್ ರಾಜ್ ಕುಮಾರ್ ಆಕ್ಷನ್ ಕಿಂಗ್. ಅವರಿಗೆ ಹೇಳಿ ಮಾಡಿಸಿದಂತೆಯೆ ಸಾಹಸ ದೃಶ್ಯಗಳ ಸಂಯೋಜನೆ. ರವಿವರ್ಮಾ ಅದ್ಭುತವಾಗಿ ಸ್ಟಂಟ್ ಕೊರಿಯೋಗ್ರಫಿ ಮಾಡಿದ್ದಾರೆ. ಅಪ್ಪು ಕಾಲುಗಳು ಬೆಳೆದದ್ದೇ ಡಾನ್ಸ್ ಮಾಡಲು. ಪುನೀತ್ ರಾಜ್ ಕುಮಾರ್ ಸಿನಿಮಾಗಳೆಂದರೆ, ಅಲ್ಲಿ ಹಾಡಿಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಯಾಕೆಂದರೆ, ಹಾಡಿಗೂ ಮತ್ತು ಇವರು ಹಾಕುವ ಸ್ಟೆಪ್ ಗೂ ಒಂದು ರೀತಿಯಲ್ಲಿ ಜುಗಲ್ಬಂದಿಯೇ ಏರ್ಪಾಟಾಗುತ್ತದೆ. ಈ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗದೇ ಇದ್ದರೂ, ಇರೋ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ ಪುನೀತ್ ರಾಜ್ ಕುಮಾರ್. ಚರಣ್ ರಾಜ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಹಾಡುಗಳು ಕೂಡ ಕಾಡುತ್ತವೆ. ಹಿನ್ನೆಲೆ ಸಂಗೀತ ಸಂಯೋಜನೆ ಚಿತ್ರಕ್ಕೆ ಹೇಳಿ ಮಾಡಿಸಿದಂತಿದೆ.

    ಪುನೀತ್ ರಾಜ್ ಕುಮಾರ್ ಈ ಸಿನಿಮಾದಲ್ಲಿ ಎರಡು ಶೇಡ್ ಇರುವಂತಹ ಪಾತ್ರ ಮಾಡಿದ್ದಾರೆ. ಒಂದು ಸೈನಿಕನಾಗಿ ಮತ್ತೊಂದು ಸೆಕ್ಯುರಿಟಿ ಏಜೆನ್ಸಿ ನಡೆಸುವ ಮುಖ್ಯಸ್ಥನಾಗಿ. ಮೇಜರ್ ಪಾತ್ರಕ್ಕೆ ಪುನೀತ್ ಅವರು ಜೀವ ತುಂಬಿದ್ದಾರೆ. ಫ್ಲ್ಯಾಶ್ ಬ್ಯಾಕ್ ಗೆ ಹೊರಳುವ ಕಥೆಯಲ್ಲಿ ಇನ್ನೂ ಸಖತ್ ಆಗಿ ಕಾಣುತ್ತಾರೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಮೇಲ್ನೊಟಕ್ಕೆ ಇದೊಂದು ಸೇಡಿನ ಕಥೆ ಅಂತ ಅನಿಸಿದರೂ, ಇಲ್ಲೊಂದು ದೇಶಪ್ರೇಮದ ಟಿಸಿಲಿದೆ. ಗೆಳೆತನದ ಮಹತ್ವ ಸಾರುವ ಸಾಲಿದೆ. ಜಗತ್ತನ್ನೇ ಆತಂಕಕ್ಕೆ ದೂಡಿದ ಡ್ರಗ್ಸ್ ಮಾಫಿಯಾ ಕೂಡ ಕಥೆಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಅದಕ್ಕೊಂದು ತಾರ್ಕಿಕ ಅಂತ್ಯ ಕೊಡುವ ದೃಶ್ಯವೇ ಹೊಸದೆನಿಸುತ್ತದೆ.

    ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಪಾರ್ವತಮ್ಮ ರಾಜ್ ಕುಮಾರ್ ಆಸೆ ಆಗಿತ್ತು. ಆ ಆಸೆಯು ಈ ಸಿನಿಮಾದಲ್ಲಿ ಈಡೇರಿದೆ. ಬಾಲ್ಯದ ಸನ್ನಿವೇಶಕ್ಕೆ ಕಥೆ ತಿರುಗಿದಾಗ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಕಾಣಿಸುತ್ತಾರೆ. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಪುನೀತ್ ಅವರ ಜತೆ ನಟಿಸಿದ ತಾರಾಬಳಗ ಕೂಡ ದೊಡ್ಡದಿದೆ. ಶರತ್ ಕುಮಾರ್, ಪ್ರಿಯಾ ಆನಂದ್, ಸಾಧು ಕೋಕಿಲಾ, ಶ್ರೀಕಾಂತ್, ಆದಿತ್ಯ ಮೆನನ್ ಹೀಗೆ ಅನುಭವಿ ಕಲಾವಿದರ ಬಳಗವೇ ಸಿನಿಮಾದಲ್ಲಿದೆ. ಹೀಗೆ ಸಿನಿಮಾ ನೋಡಲು ನೂರಾರು ಕಾರಣಗಳನ್ನು ಕೊಡಬಹುದು.

  • ಹ್ಯಾಪಿ ಬರ್ತ್‌ಡೇ ಪವರ್ ಸ್ಟಾರ್ ಬ್ಯಾನರ್ ಹೊತ್ತ ವಿಮಾನ : ಯಾವೆಲ್ಲ ಸ್ಥಳದಲ್ಲಿ ಹಾರಾಟ, ವೇಳಾಪಟ್ಟಿ ಡಿಟೇಲ್ಸ್

    ಹ್ಯಾಪಿ ಬರ್ತ್‌ಡೇ ಪವರ್ ಸ್ಟಾರ್ ಬ್ಯಾನರ್ ಹೊತ್ತ ವಿಮಾನ : ಯಾವೆಲ್ಲ ಸ್ಥಳದಲ್ಲಿ ಹಾರಾಟ, ವೇಳಾಪಟ್ಟಿ ಡಿಟೇಲ್ಸ್

    ಪುನೀತ್ ರಾಜ್ ಕುಮಾರ್ ಜನ್ಮದಿನದ ನಿಮಿತ್ತ ಮತ್ತು ಜೇಮ್ಸ್ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ಹೆಲಿಕ್ಯಾಪ್ಟರ್ ಮೂಲಕ ಹೂಗಳನ್ನು ಸುರಿಸುವ ಅಭಿಮಾನಿಗಳ ಆಸೆಗೆ ಪೊಲೀಸ್ ಇಲಾಖೆ ತಣ್ಣೀರೆರಚಿತ್ತು. ಮಾಡಿಕೊಂಡಿದ್ದ ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿತ್ತು. ಆದರೂ, ಪುಟ್ಟ ವಿಮಾನವೊಂದು ಬಾನಂಗಳದಿಂದಲೇ ‘ಹ್ಯಾಪಿ ಬರ್ತಡೇ ಪವರ್ ಸ್ಟಾರ್’ ಎಂಬ ಬ್ಯಾನರ್ ಹೊತ್ತು, ಶುಭಾಶಯ ಕೋರಿದೆ.

    ಬೆಳಗ್ಗೆ 9.30ಕ್ಕೆ ಬಾನಂಗಳಕ್ಕೆ ಹಾರಿದ ವಿಮಾನ ಕಂಡು ಪುನೀತ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಎರಡು ಗಂಟೆಗಳ ಕಾಲ ಈ ಬ್ಯಾನರ್ ಹೊತ್ತ ಮಿನಿ ವಿಮಾನ ಆಗಸದಲ್ಲಿ ಹಾರಾಡಿದೆ. ಜಕ್ಕೂರು ವಿಮಾನ ನಿಲ್ದಾಣದಿಂದ ಹೊರಟ ಈ ಪುಟ್ಟ ವಿಮಾನವು ಮೊದಲು ಪುನೀತ್ ರಾಜ್ ಕುಮಾರ್ ಅವರ  ಸಮಾಧಿ ಸ್ಥಳದ ಮೇಲೆ ಹಾರಾಟ ನಡೆಸಿತು. ಈ ಸ್ಥಳದಲ್ಲಿಯೇ ಸುಮಾರು 25ಕ್ಕೂ ಹೆಚ್ಚು ನಿಮಿಷ ಹಾರಾಟ ಮಾಡಿ, ಅಭಿಮಾನಿಗಳ ಹರ್ಷೋದ್ಘಾರಕ್ಕೆ ಸಾಕ್ಷಿ ಆಯಿತು. ನಂತರ ಸದಾಶಿವ ನಗರ, ಒರಾಯನ್ ಮಾಲ್, ರಾಜಾಜಿನಗರ, ಮಲ್ಲೇಶ್ವರಂ, ಗಾಂಧಿನಗರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಹಾರಾಡಿದೆ. 9.30 ರಿಂದ ಶುರುವಾದ ಈ ಪುಟ್ಟ ವಿಮಾನದ ಹಾರಾಟ, 11.30ಕ್ಕೆ ಮತ್ತೆ ಜಕ್ಕೂರು ವಿಮಾನ ನಿಲ್ದಾಣ ತಲುಪಿದ ನಂತರ ಮುಕ್ತಾಯವಾಯಿತು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಸಂಜೆ ಮತ್ತೊಂದು ಸುತ್ತಿನ ಹಾರಾಟಕ್ಕೆ ಈ ವಿಮಾನ ಸಜ್ಜಾಗಿದೆ.  ಸಂಜೆ 4 ಗಂಟೆಗೆ ಶುರುವಾಗುವ ಹಾರಾಟ ಎರಡು ಗಂಟೆಗಳ ಕಾಲ ಅದು ವಿವಿಧ ಸ್ಥಳಗಳ ಮೇಲೆ ಹಾರಾಡಲಿದೆ. ಶಿವರಾಜ್ ಕುಮಾರ್ ನಿವಾಸವಿರುವ ಮಾನ್ಯತಾ ಟೆಕ್ ಪಾರ್ಕ್, ಮೈಸೂರು ರಸ್ತೆ, ಬನಶಂಕರಿ, ಜೆ.ಪಿ. ನಗರ, ಗೋಪಾಲ್ ಮಹಲ್, ಕೆ.ಆರ್. ಮಾರ್ಕೆಟ್, ಬಾಣಸವಾಡಿ, ಕೆ.ಆರ್. ಪುರಂ, ಸಿಲ್ಕ್ ಬೋರ್ಡ್, ದೊಮ್ಮಲೂರು ಹೀಗೆ ಇತರ ಸ್ಥಳಗಳ ಮೇಲೆ ಈ ಮಿನಿ ಹಕ್ಕಿ ಹಾರಾಟ ಮಾಡಲಿದೆ.

  • ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಸಿನಿಮಾ ನೋಡೋಕೆ ಹೋದಾಗ ಯಾವತ್ತೂ ನಾನು ಸಂಕಟದಿಂದ ಚಿತ್ರಮಂದಿರಕ್ಕೆ ಹೆಜ್ಜೆ ಇಟ್ಟವನು ಅಲ್ಲ. ಪುನೀತ್ ರಾಜ್ ಕುಮಾರ್ ಅವರ ‘ಜೇಮ್ಸ್’ ಚಿತ್ರಕ್ಕೆ ಹೋಗುವಾಗ ಅಂಥದ್ದೊಂದು ಸಂಕಟವಿತ್ತು. ಸಿನಿಮಾ ನೋಡುವ ಕುತೂಹಲದ ಜತೆಗೆ ನಾನು ತೆರೆಯ ಮೇಲೆ ಅಪ್ಪು ಸರ್ ನ ನೋಡೋಕೆ ಸಾಧ್ಯವಾ? ಅದು ನನ್ನಿಂದ ಆಗತ್ತಾ ಅನ್ನುವ ನೋವಿತ್ತು. ಆ ಒದ್ದಾಟದಲ್ಲೇ ಥಿಯೇಟರ್ ಗೆ ಹೋದೆ.

    ಸಿನಿಮಾ ಶುರುವಾಗುತ್ತಿದ್ದಂತೆಯೇ ‘ಜೇಮ್ಸ್’ ಅಂತ ಟೈಟಲ್ ಬಂತು. ಎದೆ ಬಡಿತ ಜೋರಾಯಿತು. ಕಾರ್ ಚೇಸ್ ಮಾಡಿಕೊಂಡು ಅಪ್ಪು ಸರ್ ಬರುವಾಗ ಎದ್ದೇ ನಿಂತುಕೊಂಡು ಬಿಟ್ಟೆ. ಆ ರೀತಿಯಲ್ಲಿ ಅಪ್ಪು ಸರ್ ಪಾತ್ರವನ್ನು ಎಂಟ್ರಿ ಕೊಡಿಸಿದ್ದಾರೆ ನಿರ್ದೇಶಕ ಚೇತನ್ ಕುಮಾರ್. ಇದೊಂದು ದೇಶಾಭಿಮಾನ ಇಟ್ಟುಕೊಂಡ ನಾಯಕನ ಕುರಿತಾದ ಚಿತ್ರ. ಅಪ್ಪು ಈವರೆಗೂ ನಾನಾ ರೀತಿಯ ಚಿತ್ರಗಳನ್ನು ಮಾಡಿದ್ದಾರೆ. ಆದರೆ, ಈ ಜಾನರ್ ನ ಚಿತ್ರದಲ್ಲಿ ಅವರು ನಟಿಸಿರಲಿಲ್ಲ. ಆ ಕೊರತೆಯನ್ನು ನೀಗಿಸಿದಂತಹ ಚಿತ್ರ ಇದಾಗಿದೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಸೆಕ್ಯುರಿಟಿ ಏಜೆನ್ಸ್, ಡ್ರಗ್ಸ್ ಮಾಫಿಯಾ, ದೇಶಪ್ರೇಮ, ಗೆಳೆತನ ಹೀಗೆ ಹಲವು ಕವಲುಗಳ ಕಥೆ ಸಿನಿಮಾದಲ್ಲಿದ್ದರೂ, ಅಷ್ಟಕ್ಕೂ ಗೆಲ್ಲುವುದು ಪುನೀತ್ ರಾಜ್ ಕುಮಾರ್ ಎಂಬ ಸಂತೋಷ್ ಪಾತ್ರ. ನಿರ್ದೇಶಕ ಚೇತನ್ ಕುಮಾರ್ ಅವರ ಕಥೆ ಹೇಳುವ ಶೈಲಿಯೇ ಚೆನ್ನಾಗಿದೆ. ಯಾವುದು ಎಷ್ಟಿರಬೇಕೋ, ಯಾವ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಕೊಡಬೇಕೋ ಅಷ್ಟನ್ನೂ ಈ ಚಿತ್ರದಲ್ಲಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲಿಯೂ ಬೋರ್ ಅನಿಸದೇ ತಾನಾಗಿಯೇ ಸಿನಿಮಾ ನೋಡಿಸಿಕೊಂಡು ಹೋಗುತ್ತದೆ. ಕಥೆ ಹೇಳುವ ರೀತಿ, ದೃಶ್ಯಗಳನ್ನು ಕಟ್ಟಿದ ರೀತಿ ಮತ್ತು ಹಾಡುಗಳನ್ನು ಜೋಡಿಸಿದ ಪರಿಯೇ ಸೊಗಸಾಗಿದೆ. ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಗೆಳೆತನಕ್ಕೆ ಮತ್ತೊಂದು ವ್ಯಾಖ್ಯಾನ ಕೊಟ್ಟಿದೆ. ಈವರೆಗೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ಭಾವನಾತ್ಮಕ ಸನ್ನಿವೇಶಗಳು ಬಂದಾಗ ಅಪ್ಪ, ಅಮ್ಮ, ತಂಗಿ ಈ ರೀತಿಯಲ್ಲಿ ದೃಶ್ಯಗಳಾಗಿವೆ. ಈ ಸಿನಿಮಾದಲ್ಲಿ ಗೆಳೆತನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಜತೆ ಚೈಲ್ಡ್ ವುಡ್ ಎಪಿಸೋಡ್ ಬರುತ್ತದೆ. ಅದನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಈ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ತೋರಿಸಿದ ಹೆಗ್ಗಳಿಕೆ ಕೂಡ ಈ ಚಿತ್ರಕ್ಕೆ ಸಲ್ಲಬೇಕು. ಸಿನಿಮಾಟೋಗ್ರಫಿ, ಸಾಹಸ ಸನ್ನಿವೇಶಗಳು ಈ ಸಿನಿಮಾದ ಅಂದವನ್ನು ಮತ್ತಷ್ಟು ಹೆಚ್ಚಿಸಿವೆ. ಪಾತ್ರಗಳು ಮತ್ತು ಪಾತ್ರಗಳಿಗೆ ಹಾಕುವ ಕಾಸ್ಟ್ಯೂಮ್ ಕೂಡ ಅಷ್ಟೇ ಒಪ್ಪಿದೆ. ಹರಿಕೃಷ್ಣ ಅವರ ಹಿನ್ನೆಲೆ ಸಂಗೀತ ಮತ್ತು ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಸೂಪರ್ಬ್. ಇದನ್ನೂ ಓದಿ : ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

    ಸಿನಿಮಾದ ಬಗ್ಗೆ ಹೇಳಲೇಬೇಕಾದ ಮತ್ತೊಂದು ಅಂಶವೆಂದರೆ, ಕ್ಲೈಮ್ಯಾಕ್ಸ್ ಪಾರ್ಟ್. ಕ್ಲೈಮ್ಯಾಕ್ಸ್ ನೋಡುತ್ತಿದ್ದಂತೆಯೇ ಎಮೋಷನಲ್ ಆಗಿಸುತ್ತದೆ. ಅಪ್ಪು ಸರ್ ಸಾಧನೆಯ ಬಗ್ಗೆ ಕ್ಲೈಮಾಕ್ಸ್ ನಲ್ಲಿ ಅಚ್ಚುಕಟ್ಟಾಗಿ ತೋರಿಸಲಾಗಿದೆ. ‘ಅಪ್ಪ ಅಜರಾಮರ, ಅಪ್ಪುಗೆ ಸಾವಿಲ್ಲ’ ಎಂದು ತೆರೆಯ ಮೇಲೆ ಬಂದಾಗ ಕಣ್ಣೀರು ತಡೆದುಕೊಳ್ಳಲು ಆಗುವುದೇ ಇಲ್ಲ. ಈ ಅಕ್ಷರಗಳು ಬರುತ್ತಿದ್ದಂತೆಯೇ ಇಡೀ ಥಿಯೇಟರ್ ನಲ್ಲಿದ್ದ ಪ್ರೇಕ್ಷಕರು ಎದ್ದು ನಿಂತು ಚೆಪ್ಪಾಳೆ ತಟ್ಟಿ ಗೌರವ ಸೂಚಿಸಿದ್ದು ಇದಕ್ಕೆ ಸಾಕ್ಷಿ.

    -ಮಹೇಶ್ ಕುಮಾರ್, ಮದಗಜ, ಅಯೋಗ್ಯ ಚಿತ್ರ ಖ್ಯಾತಿಯ ನಿರ್ದೇಶಕ

  • ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ  200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ದೇಶಾದ್ಯಂತ ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಕರ್ನಾಟಕದಲ್ಲಂತೂ ಭರ್ಜರಿ ಪ್ರಚಾರ ಸಿಗುತ್ತಿದೆ. ಆದರೆ, ಬೇರೆ ಭಾಷೆಗಳಲ್ಲಿ ಚಿತ್ರತಂಡ ಅಷ್ಟೇನೂ ಪ್ರಚಾರ ಮಾಡದ ಕಾರಣ, ಕ್ರೇಜ್ ಕ್ರಿಯೇಟ್ ಆದಂತೆ ಕಾಣುತ್ತಿಲ್ಲ. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?

    ನಾಲ್ಕು ದಿನಗಳ ಮೊದಲೇ ಟಿಕೆಟ್ ಬುಕ್ಕಿಂಗ್ ಶುರು ಮಾಡಿದೆ ಚಿತ್ರತಂಡ. ಹಲವು ಕಡೆ ಬೆಳಗ್ಗೆ ನಾಲ್ಕರಿಂದಲೇ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಸದ್ಯ ಬುಕ್ ಮೈ ಶೋ ಆಪ್ ನಲ್ಲಿ ಬೆಳಗ್ಗೆ 6 ಗಂಟೆಯಿಂದ ಪ್ರದರ್ಶನಕ್ಕೆ ಟಿಕೆಟ್ ಬುಕ್ ಮಾಡಬಹುದು. ಇದನ್ನೂ ಓದಿ : ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    ಬಾಕ್ಸ್ ಆಫೀಸರ್ ರಿಪೋರ್ಟ್ ಪ್ರಕಾರ ಮಾ.17 ರಂದು ಬೆಳಗ್ಗೆ 6 ಗಂಟೆಗೆ 200 ಶೋಗಳು ಜೆಮ್ಸ್ ಗಾಗಿ ಮೀಸಲಿಟ್ಟಿವೆ. ಅಷ್ಟೂ ಶೋಗಳ ಟಿಕೇಟ್ ಸೋಲ್ಡೌಟ್ ಆಗಿರುವುದು ವಿಶೇಷ. ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತದ್ದು, ಬೆಳಗಿನ ಪ್ರದರ್ಶನಕ್ಕೆ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಬಹುತೇಕ ಸ್ಕ್ರೀನ್ ಗಳನ್ನು ಜೇಮ್ಸ್ ಪ್ರದರ್ಶನಕ್ಕಾಗಿಯೇ ಮೀಸಲಿಡಲಾಗಿದೆಯಂತೆ. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದರಿಂದ, ಅವರಿಗೆ ಗೌರವ ಸಲ್ಲಿಸುವುದಕ್ಕಾಗಿಯೇ ಆ ವಾರ ಯಾವ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ರಾಜ್ಯ ಶೇ.80ರಷ್ಟು ಚಿತ್ರಮಂದಿರಗಳಲ್ಲಿ ಜೇಮ್ಸ್ ತೆರೆ ಕಾಣುತ್ತಿದೆ. ಕೋವಿಡ್ ಕಾರಣದಿಂದಾಗಿ ಮುಚ್ಚಲಾಗಿದ್ದ ಚಿತ್ರಮಂದಿರಗಳನ್ನೂ ಜೇಮ್ಸ್ ಚಿತ್ರಕ್ಕಾಗಿ ಮತ್ತೆ ತೆರೆದಿರುವುದು ವಿಶೇಷ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಸಿನಿಮಾ ಬಿಡುಗಡೆಗೂ ನಾಲ್ಕು ದಿನಗಳ ಮುನ್ನ ಸಿಕ್ಕಿರುವ ರೆಸ್ಪಾನ್ಸ್ ನೋಡಿದರೆ, ಒಂದು ವಾರದೊಳಗೆ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವುದರಲ್ಲಿ ಅಚ್ಚರಿ ಪಡಬೇಕಿಲ್ಲ. ಅಷ್ಟರ ಮಟ್ಟಿಗೆ ಅಭಿಮಾನಿಗಳು ಜೇಮ್ಸ್ ಸಿನಿಮಾವನ್ನು ಅಪ್ಪಿಕೊಂಡಿದ್ದಾಗಿದೆ.

  • ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ

    ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ

    ರನಟ ಡಾ.ರಾಜ್ ಕುಮಾರ್ ಹುಟ್ಟಿದ ಊರಿನಲ್ಲಿ ಕೆಲ ಸಿನಿಮಾಗಳ ಚಿತ್ರೀಕರಣ ನಡೆದಿವೆ. ಆದರೆ, ಇದೇ ಮೊದಲ ಬಾರಿಗೆ ಸಿನಿಮಾದ ಮುಹೂರ್ತವೊಂದು ನಡೆಯುತ್ತಿದೆ. ಈ ಸಿನಿಮಾದಲ್ಲಿ ಡಾ.ರಾಜ್ ಕುಮಾರ್ ಅವರ ಪುತ್ರ ರಾಘವೇಂದ್ರ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ : ಸಿನಿಮಾ ರಂಗಕ್ಕೆ ಬಾ ಅನ್ನಲಿಲ್ಲ ಬಂದ, ರಾಜಕಾರಣಕ್ಕೆ ಅವನನ್ನೇ ಕೇಳಬೇಕು : ಪುತ್ರನ ಬಗ್ಗೆ ಸುಮಲತಾ ಮಾತು

    ಈ ಕುರಿತು ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, “ಗಾಜನೂರಿನಲ್ಲಿ ಖಡಕ್ ಹಳ್ಳಿ ಹುಡುಗರು ಚಿತ್ರಕ್ಕೆ ಮೂಹೂರ್ತ ನಡೆಯುತ್ತಿದೆ. ಹಾಗಾಗಿ ಇಲ್ಲಿವೆ ಬಂದಿದ್ದೇವೆ. ಗಾಜನೂರಿನಲ್ಲಿ ಸಂಪತ್ತಿಗೆ ಸವಾಲ್, ಶ್ರೀನಿವಾಸ ಕಲ್ಯಾಣ ಚಿತ್ರಗಳ ಚಿತ್ರೀಕರಣ ಮಾತ್ರ ಆಗಿದೆ. ಆದ್ರೆ ಯಾವುದೇ ಚಿತ್ರದ ಮೂಹೂರ್ತ ಆಗಿಲ್ಲ ಹೀಗಾಗಿ ಪ್ರಥಮಬಾರಿಗೆ ಗಾಜನೂರಿನಲ್ಲೇ ಮೂಹೂರ್ತ ನಮ್ಮ ಸೋದರತ್ತೆ ನಾಗಮ್ಮ ಕೈಲಿ ಪೂಜೆ ಮಾಡಿಸುತ್ತೇವೆ” ಎಂದರು. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಅವರ ‘ಮಿಷನ್ ಮಜ್ನು’ ಬರ್ತಿದ್ದಾನೆ, ದಾರಿ ಬಿಡಿ

    ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಡಾ.ರಾಜ್ ಹುಟ್ಟಿದ ಮನೆ, ಓದಿದ ಶಾಲೆ, ಮಂಟೇಸ್ವಾಮಿ ದೇವಾಲಯದಲ್ಲಿ ಚಿತ್ರೀಕರಣ ನಡೆಯಲಿದೆ. ಅಲ್ಲದೇ, ಕನ್ನಡಕ್ಕೆ ಮೊದಲ ಗೌರವ ಎಂಬ ಹಾಡಿನ ಚಿತ್ರೀಕರಣ ಕೂಡ ಇಲ್ಲೇ ನಡೆಯಲಿದೆಯಂತೆ. ಇದನ್ನೂ ಓದಿ : ಆಟಿಸಂ ಸಮಸ್ಯೆ ಕುರಿತಾದ ಕನ್ನಡದ ಮೊದಲ ಸಿನಿಮಾ ‘ವರ್ಣಪಟಲ’

    “ನಾಗತ್ತೆ ಅವರು ನಮಗೆ ಹಾಲು ಕುಡಿಸಿ ಬೆಳೆಸಿದ್ದಾರೆ. ನಮ್ಮ ತಂದೆ ಚಿತ್ರೀಕರಣಕ್ಕೆ ಹೋದಾಗ ತಾಯಿಯೂ ಸಹ ಹೋಗುತ್ತಿದ್ರು. ಆಗ ನಾಗತ್ತೆ ನಮ್ಮನ್ನು ಸಾಕಿ ಸಲುಹಿದ್ರು. ಅವರಿಗೆ ಹುಷಾರಿಲ್ಲ ಅವರ ಆರೋಗ್ಯ ವಿಚಾರಿಸಲು ಹಾಗೂ ಚಿತ್ರೀಕರಣಕ್ಕೆ ಪೂಜೆ ಮಾಡಿಸಲು ನಾವೇ ಇಲ್ಲಿಗೆ ಬಂದಿದ್ದೇವೆ” ಎಂದು ನಾಗತ್ತೆಯ ಕುರಿತಾಗಿಯೂ ರಾಘವೇಂದ್ರ ರಾಜ್ ಕುಮಾರ್ ಮಾತನಾಡಿದರು. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್

    ಡಾ.ರಾಜ್ ಹುಟ್ಟಿದ ಗಾಜನೂರಿಗೆ ಒಂದು ಮಹತ್ವ ಇದೆ. ಇಲ್ಲಿ ಚಿತ್ರದ ಮೂಹೂರ್ತ ನಡೆಸಿದ್ರೆ ನಮ್ಮ ಪೂರ್ವಿಕರೆಲ್ಲಾ ಬಂದು ಆಶಿರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎನ್ನುವುದು ಅವರ ಮಾತು.