Tag: Raghavendra Swamy Temple

  • ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

    ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

    ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಆಗಸ್ಟ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಒಟ್ಟು 2,78,80,586 ರೂಪಾಯಿ ಸಂಗ್ರಹವಾಗಿದೆ.

    ಸಂಗ್ರಹವಾದ ಕಾಣಿಕೆಯಲ್ಲಿ 5,89,300 ರೂ.ಗಳಷ್ಟು ನಾಣ್ಯಗಳು ಹಾಗೂ 2,72,91,286 ರೂ.ನಷ್ಟು ನೋಟುಗಳಿವೆ. 65 ಗ್ರಾಂ. ಬಂಗಾರ, 1.15 ಕೆ.ಜಿ ಬೆಳ್ಳಿಯಿದೆ. ಜುಲೈ ತಿಂಗಳಲ್ಲಿ ಒಟ್ಟು 1,97,21,825 ರೂ. ಸಂಗ್ರಹವಾಗಿತ್ತು, ಜೂನ್‌ನಲ್ಲಿ 2,52,33,205 ರೂಪಾಯಿ ಹಾಗೂ ಮೇ ತಿಂಗಳಲ್ಲಿ 2,27,42,499 ರೂಪಾಯಿ ಸಂಗ್ರಹವಾಗಿತ್ತು. ಇದನ್ನೂ ಓದಿ: ಕೋಲಾರ ಗಣೇಶೋತ್ಸವ – ರಾತ್ರಿ 10 ಗಂಟೆ ಬಳಿಕ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ

    ಈ ಬಾರಿ ಭಕ್ತರೊಬ್ಬರು 10 ರೂ. ನೋಟುಗಳಿಂದ ಮಾಡಿದ ಮಾಲೆಯನ್ನು ಕಾಣಿಕೆ ಹುಂಡಿಯಲ್ಲಿ ಹಾಕಿದ್ದು ವಿಶೇಷ ಕಾಣಿಕೆ ಎನಿಸಿದೆ ಎಂದು ಹುಂಡಿ ಎಣಿಕೆ ಕಾರ್ಯ ಮುಕ್ತಾಯದ ನಂತರ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.

    ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಯರ ದರ್ಶನ ಪಡೆಯುವುದೇ ಪುಣ್ಯ, ಸನ್ಮಾನ ಮುಖ್ಯವಲ್ಲ- ಮಂತ್ರಾಲಯದಲ್ಲಿ ದರ್ಶನ್‌

    ರಾಯರ ದರ್ಶನ ಪಡೆಯುವುದೇ ಪುಣ್ಯ, ಸನ್ಮಾನ ಮುಖ್ಯವಲ್ಲ- ಮಂತ್ರಾಲಯದಲ್ಲಿ ದರ್ಶನ್‌

    ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.

    ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ದರ್ಶನ್‍ಗೆ ಸನ್ಮಾನಿಸಿ ಆಶೀರ್ವಚನ ನೀಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ದರ್ಶನ್ ರಾಯರ ಅನುಗ್ರಹದಿಂದ ಮಾತ್ರ ಮಂತ್ರಾಲಯಕ್ಕೆ ಬರಲು ಸಾಧ್ಯ ಎಂದರು.

    ಇದಕ್ಕೂ ಮುನ್ನ ರಾಯರ ವೃಂದಾವನ ದರ್ಶನ ಪಡೆದು ಬಳಿಕ ಮಾತನಾಡಿದ ದರ್ಶನ್ ರಾಯರ ದರ್ಶನ ಪಡೆಯುವುದೇ ಪುಣ್ಯ, ಸನ್ಮಾನ ಮುಖ್ಯವಲ್ಲ.ರಾಬರ್ಟ್ ಸಿನೆಮಾ ತನ್ನ ಪಾಡಿಗೆ ತಾನು ಯಶಸ್ವಿಯಾಗುತ್ತಿದೆ. ರಾಬರ್ಟ್ 100 ದಿನ ಓಡಬಹುದು ಕಾದು ನೋಡಿ ಎಂದರು.

    ಈಗ ರಾಬರ್ಟ್ ನಡೆಯುತ್ತಿದೆ. ಮುಂದಿನ ಪ್ರಾಜೆಕ್ಟ್ ಮುಂದೆ ನೋಡೋಣ. ಅಭಿಮಾನಿಗಳು ಸಿನೆಮಾ ನೋಡುತ್ತಿದ್ದಾರೆ ಅವರಿಗೆ ನನ್ನ ಧನ್ಯವಾದಗಳು ಅಂತ ಕೃತಜ್ಞತೆ ತಿಳಿಸಿದರು.

    ಪೈರಸಿ ನಂತರವೂ ರಾಬರ್ಟ್‌ ಸಿನಿಮಾ ಓಡುತ್ತಿದೆ. ಪೈರಸಿ ಮಾಡಿ ಏನು ಮಾಡಿದರೋ ಅವರನ್ನೇ ಕೇಳಬೇಕು ಅಂತ ಅಸಮಾಧಾನ ವ್ಯಕ್ತಪಡಿಸಿದರು. ಮಂತ್ರಾಲಯದಲ್ಲೂ ಅಭಿಮಾನಿಗಳು ಡಿ ಬಾಸ್ ಎಂದು ಘೋಷಣೆ ಕೂಗಿ ತಮ್ಮ ನೆಚ್ಚಿನ ನಟನನ್ನು ನೋಡಿ ಸಂತಸ ವ್ಯಕ್ತಪಡಿಸಿದರು.