ನವದೆಹಲಿ: ನಿವೃತ್ತ ರಿಸರ್ವ್ ಬ್ಯಾಂಕ್ ಗವರ್ನರ್ (RBI) ಜನರಲ್ ರಘುರಾಮ್ ರಾಜನ್ (Raghuram Rajan) ರಾಜ್ಯಸಭೆಗೆ ಮಹಾರಾಷ್ಟ್ರದಿಂದ (Maharashtra) ಆಯ್ಕೆ ಆಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಜನವರಿ 31 ರಂದು ರಾಜನ್ ಅವರು ಶಿವಸೇನೆ(ಯುಬಿಟಿ) ಬಣದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಅವರ ಮಂಬೈ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.
ಕಾಂಗ್ರೆಸ್ ರಘುರಾಮ್ ರಾಜನ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಮುಂದಾಗಿದೆ. ಇದರ ಭಾಗವಾಗಿ ಬೆಂಬಲ ಕೇಳಲು ರಾಜನ್ ಉದ್ಧವ್ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತದೆ.
ಮಹಾರಾಷ್ಟ್ರದಿಂದ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿ 3 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯಸಭೆಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿಗೆ ಕನಿಷ್ಠ 42 ಮತಗಳ ಅಗತ್ಯವಿದೆ. ಪ್ರಸ್ತುತ ಕಾಂಗ್ರೆಸ್ 45 ಶಾಸಕರನ್ನು ಹೊಂದಿದೆ.
ರಘುರಾಮ್ ರಾಜನ್ ಅವರು ಯುಪಿಎ ಅವಧಿಯಲ್ಲಿ ಆರ್ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು. 2013 ರಲ್ಲಿ ಅಧಿಕಾರ ಸ್ವೀಕರಿಸಿದ್ದ ಅವರು 2016ರಲ್ಲಿ ನಿವೃತ್ತರಾಗಿದ್ದರು.
ನವದೆಹಲಿ: ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಮತ್ತೆ ಸುದ್ದಿಯಲ್ಲಿದ್ದು ಭಾರತ ದೇಶದ ಬಗ್ಗೆ ನೀಡಿದ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
ಸಂವಾದ ಕಾರ್ಯಕ್ರಮದಲ್ಲಿ ರಘುರಾಮ್ ರಾಜನ್ ಸಭಿಕರ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಮುಂದಿನ ದಶಕದಲ್ಲಿ ಹಣಕಾಸು ಸಚಿವರಾಗಿ ಅಥವಾ ಪ್ರಧಾನ ಮಂತ್ರಿಯಾಗಿ ನಿಮ್ಮನ್ನು ನೋಡಬಹುದೇ ಎಂದು ಪ್ರಶ್ನೆ ಕೇಳಲಾಯಿತು. ಇದನ್ನೂ ಓದಿ: ಮೋಸ್ಟ್ ವಾಂಟೆಡ್ ಖಲಿಸ್ತಾನಿ ಉಗ್ರ ಕೆನಡಾದಲ್ಲಿ ಗುಂಡಿನ ದಾಳಿಗೆ ಬಲಿ
ಈ ಪ್ರಶ್ನೆಗೆ, ಭಾರತವು ಸೂಪರ್ ಪವರ್ ಆಗಿರುವ ಬಗ್ಗೆ ನನಗೆ ಕಾಳಜಿ ಇಲ್ಲ. ಅದು ನನಗೆ ವಿಷಯವಲ್ಲ. ರಾಷ್ಟ್ರದ ಪಿತಾಮಹ ಬಯಸಿದಂತೆ ಪ್ರತಿಯೊಬ್ಬ ಭಾರತೀಯನನ್ನು ಸಂತೋಷಪಡಿಸುವುದೇ ಅದು ನನ್ನ ವಿಷಯ ಎಂದು ಉತ್ತರಿಸಿದರು. ಈ ಹೇಳಿಕೆಯ ಬಗ್ಗೆ ಈಗ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
Raghuram Rajan left a legacy memory of which is that it nearly made India bankrupt pic.twitter.com/hioDxALIi7
ರಾಘುರಾಮ್ ರಾಜನ್ ಹೇಳಿಕೆಗಳು ಚರ್ಚೆಗೆ ಗ್ರಾಸವಾಗುತ್ತಿರುವುದು ಇದು ಮೊದಲೆನಲ್ಲ. ಈ ಹಿಂದೆ ಸ್ಮಾರ್ಟ್ಫೋನ್ ಹೂಡಿಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಆರಂಭಿಸಿದ್ದ ಉತ್ಪಾದನೆ ಆಧಾರಿತ ಪ್ರೋತ್ಸಾಹಧನನ್ನು (Production Linked Incentive) ಟೀಕಿಸಿದ್ದರು. ಸ್ಮಾರ್ಟ್ಫೋನ್ ಪಿಎಲ್ಐ ಯೋಜನೆಯಲ್ಲಿ ಮೌಲ್ಯವರ್ಧನೆ ಕಡಿಮೆಯಾಗಿದೆ. ಇಲ್ಲಿ ಕೇವಲ ಜೋಡಣೆಯಾಗುತ್ತಿದೆಯೇ ಹೊರತು ಉತ್ಪಾದನೆಯಾಗುತ್ತಿಲ್ಲ. ಮೊಬೈಲ್ ಫೋನ್ಗಳ ಸಣ್ಣ ಭಾಗಗಳನ್ನು ಸಹ ಭಾರತದಲ್ಲಿ ತಯಾರಿಸಲಾಗುತ್ತಿಲ್ಲ ಎಂದು ಹೇಳಿದ್ದರು.
ಕೋವಿಡ್ ಲಾಕ್ಡೌನ್ ಬಳಿಕ ದೇಶದ ಆರ್ಥಿಕತೆಯನ್ನು ಮೇಲಕ್ಕೆ ಎತ್ತಲು ರಘುರಾಮ್ ರಾಜನ್ ನೀಡಿದ ಸಲಹೆಯೂ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ರೀತಿಯ ಅಸಾಮಾನ್ಯ ಸಂದರ್ಭದಲ್ಲಿ ಹಣ ಮುದ್ರಿಸುವುದರಿಂದ ಹಣಕಾಸು ಬಿಕ್ಕಟ್ಟನ್ನು ಸ್ವಲ್ಪ ಮಟ್ಟಿಗೆ ಪರಿಹರಿಸಬಹುದು. ಈ ರೀತಿಯ ಕ್ರಮ ವಿನಾಶಕಾರಿ ಆಗುವುದಿಲ್ಲ. ಮುದ್ರಣಗೊಂಡ ಹೆಚ್ಚುವರಿ ಹಣವನ್ನು ತಪ್ಪು ಮಾರ್ಗದಲ್ಲಿ ಬಳಸಿದರೆ ಮಾತ್ರ ಸಮಸ್ಯೆ ಸೃಷ್ಟಿಯಾಗಬಹುದು. ಹೆಚ್ಚುವರಿ ಹಣ ಮುದ್ರಿಸುವುದನ್ನು ತುಂಬ ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕೆಂದು ರಘುರಾಂ ರಾಜನ್ ತಮ್ಮ ಲಿಂಕ್ಇನ್ ಖಾತೆಯಲ್ಲಿ ಬರೆದುಕೊಂಡಿದ್ದರು.
ನವದೆಹಲಿ: ಭಾರತವು ಹಿಂದೂ ಬೆಳವಣಿಗೆ ದರದ (Hindu Rate of Growth) ಅಪಾಯಕ್ಕೆ ಹತ್ತಿರದಲ್ಲಿದೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ (Former RBI Governor Raghuram Rajan) ಹೇಳಿದ್ದು ಈಗ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ (Indian Economy) ಹಿಂದೂ ಬೆಳವಣಿಗೆ ದರದ ಅಪಾಯದಲ್ಲಿದೆ. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.
2022ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ (GDP) ಶೇ.4.4 ಬೆಳವಣಿಗೆ ಸಾಧಿಸಿತ್ತು. ಈ ಮಂದಗತಿಯನ್ನು “ಹಿಂದೂ ಬೆಳವಣಿಗೆ ದರ” ಎಂಬ ಹಳೆಯ ಪರಿಕಲ್ಪನೆಯೊಂದಕ್ಕೆ ಹೋಲಿಸಿ ರಘುರಾಮ್ ರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಆಯುರ್ವೇದ ಪಥ್ಯ; 22 ಕೆಜಿ ತೂಕ ಕಡಿಮೆ ಮಾಡಿಕೊಂಡ ಕೇಂದ್ರ ಸಚಿವ
ಖಾಸಗಿ ವಲಯದಲ್ಲಿ ಹೂಡಿಕೆ ಮುಗ್ಗರಿಸಿದ್ದು ಆರ್ಥಿಕ ಬೆಳವಣಿಗೆ (Economy Growth) ನಿರಂತರ ಕುಸಿಯುತ್ತಿದೆ. ಆರ್ಬಿಐ (RBI) ಈಗಲೂ ಬಡ್ಡಿ ದರ ಏರಿಸುತ್ತಿದೆ. ಜಾಗತಿಕ ಬೆಳವಣಿಗೆ ಈ ವರ್ಷವೂ ಮಂದಗತಿಯಲ್ಲಿ ಮುಂದುವರಿಯುವ ಲಕ್ಷಣ ಇದೆ. ಇದು ಹೆಚ್ಚಿನ ವೇಗ ಪಡೆಯಲಿದೆ ಎಂಬ ಬಗ್ಗೆ ನನಗೆ ಯಾವುದೇ ಖಚಿತತೆ ಕಾಣುತ್ತಿಲ್ಲ. ಇದು ನನ್ನ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಏನಿದು ಹಿಂದೂ ಬೆಳವಣಿಗೆ ದರ?
ದೆಹಲಿ ಸ್ಕೂಲ್ ಆಫ್ ಎಕಾನಮಿಕ್ಸ್ನಲ್ಲಿ ಪಾಠ ಮಾಡುತ್ತಿದ್ದ ಆರ್ಥಿಕ ತಜ್ಞ ರಾಜ್ ಕೃಷ್ಣ 1978ರಲ್ಲಿ ಹಿಂದೂ ರೇಟ್ ಆಫ್ ಗ್ರೋಥ್ ಪದವನ್ನು ಮೊದಲ ಬಾರಿಗೆ ಪರಿಚಯಿಸಿದ್ದರು. ಭಾರತವು 1950-1980ರ 30 ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿತ್ತು. ಸರಾಸರಿ ಶೇ.4 ಕ್ಕಿಂತ ಕಡಿಮೆ ಜಿಡಿಪಿ ಬೆಳವಣಿಗೆಯಾಗಿತ್ತು. ದೀರ್ಘಕಾಲ ಶೇ.3.5 ಕ್ಕಿಂತ ಕಡಿಮೆ ಜಿಡಿಪಿ ಬೆಳವಣಿಗೆ ದಾಖಲಾದರೆ ಅದನ್ನು ಹಿಂದೂ ಗ್ರೂಪ್ ರೇಟ್ ಎಂದು ಕರೆಯುವ ಪರಿಪಾಠ ಆರಂಭವಾಗಿತ್ತು.
ಜೈಪುರ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ (Raghuram Rajan) ಅವರು ಇಂದು ಬೆಳಗ್ಗೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡಿದ್ದರು.
ರಾಜಸ್ಥಾನದ (Rajastan) ಸವಾಯಿ ಮಾಧೋಪುರದಿಂದ ಕಾಂಗ್ರೆಸ್ನ ಪಾದಯಾತ್ರೆ ಪುನಾರಂಭವಾದ ಪಾದಯಾತ್ರೆಯಲ್ಲಿ ರಾಜನ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಇಂದಿಗೆ ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ 10ನೇ ದಿನವಾಗಿದ್ದು, ಇಂದು ಬಮನ್ವಾಸ್ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಭಡೋತಿ ಗ್ರಾಮದಿಂದ ಯಾತ್ರೆ ಪುನಾರಂಭವಾಯಿತು. ಇಂದು ಯಾತ್ರೆ 25 ಕಿ.ಮೀ ದೂರ ಕ್ರಮಿಸಲಿದೆ. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ
अंधेरे से उजाले की दिशा में लेकर जाने का यज्ञ है #BharatJodoYatra
इस यात्रा के स्वागत के लिए सर्द लहर में इंतजार करते लोग अपनी उपस्थिति से इस यज्ञ में आहुति डाल रहे हैं।
ಸೆ. 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದ್ದು, ಇದೀಗ ರಾಜಸ್ಥಾನದಲ್ಲಿ ಮುಂದುವರಿಸಿದೆ. ಮುಂದಿನ ವರ್ಷ ಗಣರಾಜ್ಯೋತ್ಸವದಂದು ಭಾರತ್ ಜೋಡೋ ಯಾತ್ರೆ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಈಗಾಗಲೇ ಭಾರತ್ ಜೋಡೋ ಯಾತ್ರೆಯಲ್ಲಿ ಮೇಧಾ ಪಾಟ್ಕರ್, ಸ್ವಯಂಘೋಷಿತ ದೇವಮಾನವ ನಾಮದೇವ್ ದಾಸ್ ತ್ಯಾಗಿ, ನಟಿ ಸ್ವರಾ ಭಾಸ್ಕರ್ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಭಾಗವಹಿಸಿದ್ದರು. ಇದನ್ನೂ ಓದಿ: ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಮಸ್ಕ್ – ನಂ.1 ಯಾರು ಗೊತ್ತಾ?
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ 65,000 ಕೋಟಿ ರೂ. ಮೀಸಲಿಡಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು ಆರ್ಥಿಕ ಪರಿಸ್ಥಿತಿ ಸುಧಾರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಕೊರೊನಾದಿಂದ ಭಾರತದ ಆರ್ಥಿಕತೆ ಪೆಟ್ಟು ತಿಂದಿದೆ. ಆರ್ಥಿಕತೆಯ ಪುನರಾರಂಭಿಸಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಇಂಥ ಘಟನೆಗಳಿಂದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಕೂಡ ಇದ್ದು, ಪರಿಸ್ಥಿತಿಯ ಲಾಭ ಪಡೆಯುವ ಹಲವು ಮಾರ್ಗಗಳಿದ್ದು ಅವುಗಳನ್ನು ಸರ್ಕಾರ ಬಳಸಿಕೊಳ್ಳಬೇಕಿದೆ ಎಂದು ರಾಜನ್ ಹೇಳಿದ್ದಾರೆ.
ಜಾಗತಿಕ ಆರ್ಥಿಕತೆ ಬಗ್ಗೆ ಪುನರ್ವಿಮರ್ಶೆ ಮಾಡಬೇಕು ಭಾರತದಲ್ಲಿ ಸಾಕಷ್ಟು ಸಂಪನ್ಮೂಲಗಳಿದೆ ನಮ್ಮ ಸೀಮಿತ ಸಾಮರ್ಥ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಆರ್ಥಿಕತೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದೇಗೆ ಎಂದು ನಿರ್ಧರಿಸಬೇಕು. ಲಾಕ್ಡೌನ್ ಮುಗಿದ ಬಳಿಕ ಸಮಸ್ಯೆ ಹೆಚ್ಚಾಗುತ್ತದೆ. ಆ ಸಮಯದಲ್ಲಿ ದೇಶದ ಪರಿಸ್ಥಿತಿ ಇನ್ನಷ್ಟು ದುರ್ಬಲಗೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕೊರೊನಾ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿ ನಿರ್ವಹಿಸಬೇಕು ಸಾಮೂಹಿಕ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಜೊತೆಗೆ ಜನರಿಗೆ ಜೀವನೋಪಾಯ ತೆರೆಯುವ ಬಗ್ಗೆ ಸರ್ಕಾರ ಚಿಂತಿಸಬೇಕು ಜನರನ್ನು ಸಾಯಲು ಬಿಡಬಾರದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ ದಕ್ಷಿಣ ಭಾರತದ ರಾಜ್ಯಗಳ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕೊರೊನಾ ಪರಿಸ್ಥಿತಿ ನಿಯಂತ್ರಣ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಕೆಲಸ ಮಾಡುತ್ತಿವೆ. ದಕ್ಷಿಣ ರಾಜ್ಯಗಳಲ್ಲಿ ವಿಕೇಂದ್ರೀಕರಣ ಪದ್ಧತಿ ಇದೆ ಜನರಿಗೆ ಏನು ಮಾಡಬೇಕೆಂದು ಯೋಚಿಸುವ ಶಕ್ತಿ ಇದೆ ಎಂದು ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದರು.
ನವದೆಹಲಿ: ಏಪ್ರಿಲ್ 14ರ ಬಳಿಕ ಕುಸಿದಿರುವ ಅರ್ಥವ್ಯವಸ್ಥೆಯನ್ನು ಹೇಗೆ ಪುನರ್ ಆರಂಭಿಸಬೇಕು ಎಂಬುದರ ಬಗ್ಗೆ ರಿಸರ್ವ್ ಬ್ಯಾಂಕಿನ ಮಾಜಿ ಗರ್ವನರ್ ರಘುರಾಮ್ ರಾಜನ್ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.
ಕೊರೊನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರ, ದೇಶವನ್ನು 21 ದಿನ ಲಾಕ್ಡೌನ್ ಮಾಡಿದೆ. ಲಾಕ್ಡೌನ್ ನಿಂದಾಗಿ ಇಡೀ ದೇಶದ ಅರ್ಥವ್ಯವಸ್ಥೆಯೇ ಸ್ತಬ್ಧಗೊಂಡಿದೆ. ಎಲ್ಲ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿವೆ. ಲಾಕ್ಡೌನ್ ಬಳಿಕ ಅರ್ಥವ್ಯವಸ್ಥೆ ನಿಧಾನವಾಗಿ ಚೇತರಿಸಿಕೊಳ್ಳಬೇಕಿದೆ. ಹಾಗಾಗಿ ಅರ್ಥವ್ಯವಸ್ಥೆಯನ್ನು ರೀಸ್ಟಾರ್ಟ್ ಮಾಡಲು ಸರ್ಕಾರ ಸಹ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಿದೆ ಎಂಬುವುದು ರಘುರಾಮ್ ರಾಜನ್ ಅಭಿಪ್ರಾಯ.
ಸೂಕ್ಷ್ಮವಾಗಿದೆ ದೇಶದ ಅರ್ಥವ್ಯವಸ್ಥೆ: 2008-09ನೇ ಸಾಲಿನ ಆರ್ಥಿಕ ಹಿಂಜರಿತಗಿಂತಲೂ ಇಂದಿನ ಸ್ಥಿತಿ ಅಪಾಯಕಾರಿಯಾಗಿದೆ. 2008-09ರಲ್ಲಿ ಅರ್ಥಿಕ ಹಿಂಜರಿತದ ನಡುವೆ ವಾಣಿಜ್ಯ ಚಟುವಟಿಕೆಗಳು ನಡೆದಿದ್ದವು. ಆದರೆ ಇಂದು ಎಲ್ಲ ವ್ಯವಹಾರಗಳು ಸಂಪೂರ್ಣವಾಗಿ ನೆಲ ಕಚ್ಚಿವೆ. 2008-09ರಲ್ಲಿ ಕಂಪನಿಗಳು ತಮ್ಮ ವ್ಯವಹಾರ ನಡೆಸುತ್ತಿರೋದರಿಂದ ದೇಶವೂ ನಡೆಯುತ್ತಿತ್ತು. ಹಾಗಾಗಿ ಹಣಕಾಸಿನ ವ್ಯವಸ್ಥೆ ಆರೋಗ್ಯಕರವಾಗಿತ್ತು. ಆದ್ರೆ ಇಂದಿನ ಹಣಕಾಸಿನ ವ್ಯವಸ್ಥೆ ತುಂಬಾ ಸೂಕ್ಷ್ಮವಾಗಿದ್ದು, ಜಾಗೂರಕತೆಯಿಂದ ಪ್ರತಿಯೊಂದು ಹೆಜ್ಜೆಯನ್ನು ಇರಿಸಬೇಕಿದೆ.
ಬಂದ್ ಮಾಡಲು ಸಾಧ್ಯವಿಲ್ಲ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಸಮಯವಕಾಶ ಸಿಕ್ಕಿದೆ. 21 ದಿನಗಳ ಲಾಕ್ಡೌನ್ ವೇಳೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡಬೇಕಿದೆ. ಈ ಲಾಕ್ಡೌನ್ ಅವಧಿಯಲ್ಲಿಯೇ ಕೊರೊನಾ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್ ಮತ್ತು ಸಾಮಾಜಿಕ ಅಂತರಕ್ಕೆ ಅಂತ್ಯ ಹಾಡಬೇಕಿದೆ. 21 ದಿನಗಳ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಸಿಗದಿದ್ದರೆ, ಎಲ್ಲವನ್ನು ಬಂದ್ ಮಾಡಲು ಸಾಧ್ಯವಿಲ್ಲ.
21 ದಿನಗಳ ನಂತರ ಲಾಕ್ಡೌನ್ ನಿಯಮವನ್ನು ಸರ್ಕಾರ ಸಡಿಲಿಸಬೇಕು. ಇದರಿಂದ ಕೆಲ ವಾಣಿಜ್ಯ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ಇದರಿಂದ ಅರ್ಥವ್ಯವಸ್ಥೆಯಲ್ಲಿ ಚೇತರಿಕೆ ಕಾಣುತ್ತದೆ. 21 ದಿನಗಳ ನಂತರ ಆರಂಭಿಸುವ ಕಂಪನಿಗಳು ಕಡ್ಡಾಯವಾಗಿ ಕೊರೊನಾ ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಬೇಕು. ಹಾಗೆ ಖಾಸಗಿ ಕಂಪನಿಗಳು ಸಹ ತಮ್ಮ ಸಿಬ್ಬಂದಿ ಹಿತದೃಷ್ಟಿಯಿಂದ ಸ್ಕ್ರೀನಿಂಗ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಬೇಕು ಎಂದು ರಾಜನ್ ಹೇಳುತ್ತಾರೆ.
ಆರ್ಥಿಕ ಸಹಾಯ: ದೀರ್ಘ ಕಾಲಾವಧಿಯವರೆಗೆ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಸರ್ಕಾರ ಸೂಚಿಸಬೇಕು. ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಬೇಕು. ಲಾಕ್ಡೌನ್ ನಿಂದಾಗಿ ದುಡಿಮೆ ಇಲ್ಲದೇ ಕೆಳ ವರ್ಗದ ಜೀವನಸ್ಥಿತಿ ಮತ್ತಷ್ಟು ಕುಸಿಯುವ ಸಾಧ್ಯತೆಗಳು ಹೆಚ್ಚಿವೆ ಎಂದು ರಾಜನ್ ಆತಂಕ ವ್ಯಕ್ತಪಡಿಸಿದ್ದಾರೆ.
ಎಲ್ಲರ ಸಹಾಯ ಪಡೆದುಕೊಳ್ಳಲಿ: ಸರ್ಕಾರ ಕೇವಲ ತಾನೇ ಕೆಲಸ ಮಾಡದೇ ಎಲ್ಲರ ಸಹಾಯ ಪಡೆದು ಒಗ್ಗಟ್ಟಿನಿಂದ ಕೊರೊನಾ ತಡೆಗೆ ಹೋರಾಟ ನಡೆಸಬೇಕಿದೆ. ವಿಪಕ್ಷದಲ್ಲಿರುವ ಅನುಭವಿ ನಾಯಕರನ್ನು ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು. ಕೇವಲ ಪ್ರಧಾನ ಮಂತ್ರಿ ಕಾರ್ಯಾಲಯವೊಂದೇ ಎಲ್ಲ ಕೆಲಸಗಳನ್ನು ಮಾಡಲಾರದು. ಎಲ್ಲ ರಾಜ್ಯಗಳ ಜೊತೆ ಸೇರಿ ಹಿರಿಯ ನಾಯಕರಿಂದ ಉತ್ತಮ ಸಲಹೆ ಪಡೆದು ಕೆಲಸ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು.
ದೊಡ್ಡ ಕಂಪನಿಗಳಿಂದ ಸಹಾಯ: ಕೇವಲ ಸರ್ಕಾರವೊಂದೇ ಶ್ರಮಪಟ್ಟರೇ ಅರ್ಥವ್ಯವಸ್ಥೆ ಚೇತರಿಕೆ ಕಾಣಲಾರದು. ಹಾಗಾಗಿ ಸುಸ್ಥಿತಿಯಲ್ಲಿರು ದೊಡ್ಡ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಸಣ್ಣ ವ್ಯವಹಾರಸ್ಥರ ಸಹಾಯಕ್ಕೆ ಮುಂದೆ ಬರಬೇಕಿದೆ. ಸಣ್ಣ ಪ್ರಮಾಣದ ವಿತರಕರಿಗೆ ದೊಡ್ಡ ಕಂಪನಿಗಳು ನರೆವು ನೀಡಬೇಕು. ಒಂದು ವೇಳೆ ಅವಶ್ಯವಿದ್ದಲ್ಲಿ ಬಾಂಡ್ ಮಾರ್ಕೆಟ್ ನಿಂದ ದೊಡ್ಡ ಗಾತ್ರದ ಕಂಪನಿಗಳು ಹಣ ಪಡೆಯಲು ಅವಕಾಶಗಳಿವೆ ಎಂದು ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.
ನ್ಯೂಯಾರ್ಕ್: ಆರ್.ಬಿ.ಐ ಹಿಂದಿನ ಗವರ್ನರ್ ರಘುರಾಮ್ ರಾಜನ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ದೇಶದ ಬ್ಯಾಂಕ್ಗಳ ಶೋಚನೀಯ ಸ್ಥಿತಿಗೆ ಕಾರಣ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದರು.
ಈ ವೇಳೆ ಮನಮೋಹನ್ ಸಿಂಗ್ ಮತ್ತು ರಘುರಾಮ್ ರಾಜನ್ ಅವಧಿಯಲ್ಲಿ ಬ್ಯಾಂಕ್ಗಳು ದುಸ್ಥಿತಿಗೆ ತಲುಪಿತ್ತು. ಈಗ ನಮ್ಮ ಸರ್ಕಾರ ಬ್ಯಾಂಕ್ಗಳಿಗೆ ಜೀವ ನೀಡಿ ಹೊಸ ಚೈತನ್ಯ ನೀಡುತ್ತಿದೆ ಎಂದು ತಿಳಿಸಿದರು.
ಭಾರತದ ಆರ್ಥಿಕತೆ ಕುಸಿತಕ್ಕೆ ಮೋದಿ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ರಘುರಾಮ್ ರಾಜನ್ ಮತ್ತು ಮನಮೋಹನ್ ಸಿಂಗ್ ದೂರಿದ್ದರು. ಈಗ ನಿರ್ಮಲಾ ಸೀತರಾಮನ್ ಇವರ ವಿರುದ್ಧವೇ ಗಂಭೀರ ಆರೋಪ ಮಾಡಿ ಬ್ಯಾಂಕ್ಗಳು ದುಸ್ಥಿತಿಗೆ ನೀವೇ ಹೊಣೆ ಎಂದು ದೂರಿ ತಿರುಗೇಟು ನೀಡಿದರು.
ಆರ್ಥಿಕ ತಜ್ಞರಾಗಿರುವ ರಘುರಾಮ್ ರಾಜನ್ ಮೇಲೆ ನನಗೆ ನನಗೆ ಬಹಳ ಗೌರವವಿದೆ. ದೇಶದ ಆರ್ಥಿಕತೆ ಸದೃಢವಾಗಿದ್ದಾಗ ಅವರು ಆರ್.ಬಿ.ಐ ಗವರ್ನರ್ ಆಗಿದ್ದರು. ರಾಜನ್ ಗವರ್ನರ್ ಆಗಿದ್ದ ಸಂದರ್ಭದಲ್ಲಿ ಪ್ರಭಾವಿಶಾಲಿ ವ್ಯಕ್ತಿಗಳು ಒಂದು ಫೋನ್ ಕರೆ ಮಾಡಿದರೆ ಸಾಕು ಸಾಲ ಮಂಜೂರಾಗುತಿತ್ತು. ಇದರಿಂದ ಸೃಷ್ಟಿಯಾದ ಸಮಸ್ಯೆಯಿಂದ ಪಾರಾಗಲು ಸಾರ್ವಜನಿಕ ರಂಗದ ಬ್ಯಾಂಕುಗಳು ಸರ್ಕಾರದ ಷೇರುಗಳನ್ನು ಅವಲಂಬಿಸುವ ಅನಿವಾರ್ಯತೆಗೆ ಸಿಲುಕಿದೆ ಎಂದು ಮಾಹಿತಿ ನೀಡಿದರು.
ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಈ ವಿಚಾರ ಹೇಳುತ್ತಿಲ್ಲ. ಮನಮೋಹನ್ ಸಿಂಗ್ ಮತ್ತು ರಾಜನ್ ಅವರಿದ್ದ ಸಮಯದಲ್ಲಿ ಬ್ಯಾಂಕುಗಳು ಬಹಳ ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದವು. ಆ ಸಂದರ್ಭದಲ್ಲಿ ನಮಗೆ ಈ ವಿಚಾರಗಳು ತಿಳಿಯುತ್ತಿರಲಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಹಿತಿ ಪ್ರಕಾರ 2012-13 ರಲ್ಲಿ ಸಾರ್ವಜನಿಕ ರಂಗದ ಕೆಟ್ಟ ಸಾಲದ ಪ್ರಮಾಣ 9,190 ಕೋಟಿ ಇದ್ದರೆ 2013-14ರ ವೇಳೆಗೆ ಇದು 2.16 ಲಕ್ಷ ಕೋಟಿಗೆ ಏರಿಕೆಯಾಗಿತ್ತು.
ಚೆನ್ನೈ: ನಾನು ಪತ್ನಿಯಿಂದಾಗಿ ರಾಜಕಾರಣಕ್ಕೆ ಬಂದಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಸಂದರ್ಶನದಲ್ಲಿ ಹೇಳಿದ್ದಾರೆ.
ಚೆನ್ನೈಗೆ ಆಗಮಿಸಿದ್ದ ರಘುರಾಂ ರಾಜನ್ ಅವರನ್ನು ಮಾಧ್ಯಮವೊಂದು ಸಂದರ್ಶನ ಮಾಡಿತ್ತು. ಸಂದರ್ಶನದಲ್ಲಿ ಮುಗುಳ್ನಗುತ್ತಲೇ ಪತ್ನಿಯಿಂದಾಗಿ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ವೇಳೆ ರಾಜಕೀಯಕ್ಕೆ ಹೋದ್ರೆ ನನ್ನನ್ನು ಬಿಟ್ಟು ಹೋಗ್ತೀನಿ ಅಂತಾ ಪತ್ನಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದರು.
ಈ ವೇಳೆ ರಾಜಕೀಯ ನಿಮ್ಮ ಶೈಲಿ ಅಲ್ಲವೇ ಎಂದು ಕೇಳಿದಾಗ, ರಾಜಕೀಯ ಎಲ್ಲ ಕಡೆಯೂ ಒಂದೇ ಆಗಿದೆ. ಕೇವಲ ಭಾಷಣ ಮಾಡಿ ಮತ ಕೇಳುವುದು ನನ್ನ ಶೈಲಿ ಅಲ್ಲ. ಒಂದು ವೇಳೆ ದೇಶಕ್ಕೆ ನನ್ನ ಅಗತ್ಯವಿದ್ರೆ ಖಂಡಿತಾ ಕೆಲಸ ಮಾಡುತ್ತೇನೆ. ದೇಶಕ್ಕಾಗಿ ಕೆಲಸ ಮಾಡುವುದರಿಂದ ಒಂದು ರೀತಿಯ ಖುಷಿ ಸಿಗುತ್ತದೆ. ಕೆಲವರು ನನ್ನ ಬಳಿ ಸಲಹೆ ಕೇಳಿದಾಗ ಖುಷಿ ಆಗುತ್ತದೆ ಎಂದರು.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಮಂತ್ರಿ ಆಗುತ್ತೀರಿ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದು ನಿಜವೇ ಎಂದು ಪ್ರಶ್ನೆ ಮಾಡಲಾಗಿತ್ತು. ಕಲಿಸುವುದು (ಟೀಚಿಂಗ್) ನನ್ನ ಪ್ರಾಥಮಿಕ ಕೆಲಸ. ಇದೇ ಕೆಲಸ ನನಗೆ ಅಚ್ಚು ಮೆಚ್ಚು. ಕೆಲವು ದಿನಗಳ ಹಿಂದೆ ನಾನು ಬರೆದ ಪುಸ್ತಕ ‘ದ ಥರ್ಡ್ ಪಿಲ್ಲರ್’ ಪ್ರಕಟಗೊಂಡಿದೆ. ಈಗ ಎಲ್ಲಿದ್ದೇನೋ ಅಲ್ಲಿ ಖುಷಿಯಾಗಿದ್ದೇನೆ ಅಂತಾ ಹೇಳುವ ಮೂಲಕ ಮಂತ್ರಿ ಆಗಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ದೇಶದಲ್ಲಿ ಹೊಸ ಸರ್ಕಾರ ರಚನೆಗೊಂಡಾಗ ಅಥವಾ ಹಳೆಯ ಸರ್ಕಾರವೇ ಪುನರ್ ರಚನೆಯಾದಾಗ ಮೊದಲಿಗೆ ನಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳ ಬಗ್ಗೆ ವಿಚಾರ ಮಾಡಬೇಕು. ನಿರುದ್ಯೋಗ ಸಮಸ್ಯೆ ಕೇವಲ ಭಾರತದಲ್ಲಿ ಮಾತ್ರ ಇಲ್ಲ. ವಿಶ್ವದ ಬಹುತೇಕ ರಾಷ್ಟ್ರಗಳು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿವೆ. ದೇಶ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಹಲವು ವಿಧಾನಗಳು ನಮ್ಮೆಲ್ಲರ ಮುಂದಿವೆ. ಈ ಕುರಿತಾಗಿ ವಿಶ್ವವಿದ್ಯಾನಿಲಯಗಳಲ್ಲಿ ಸಂಶೋಧನೆಗಳು ನಡೆಯಬೇಕಿದೆ. ಆದ್ರೆ ಈ ರೀತಿಯ ಸಂಶೋಧನೆಗಳು ನಡೆಯುತ್ತಿರೋದು ಮಾತ್ರ ನನಗೆ ಕಾಣಿಸುತ್ತಿಲ್ಲ ಎಂದು ರಘುರಾಂ ರಾಜನ್ ಬೇಸರ ವ್ಯಕ್ತಪಡಿಸಿದರು.
ಕೊನೆಯದಾಗಿ ಪತ್ನಿ ಬಗ್ಗೆ ಹೇಳಿ ಎಂದಾಗ, ನನ್ನ ಪತ್ನಿಯ ಹೆಸರು ರಾಧಿಕಾ ರಾಜನ್, ರಾಧಿಕಾ ಓರ್ವ ಹೆಚ್ಚು ಓದಿದ ಮಹಿಳೆಯಾಗಿದ್ದಾರೆ. ದೆಹಲಿಯ ಐಐಟಿಯಲ್ಲಿ ಬಿಟೆಕ್, ಅಹಮದಾಬಾದ್ ಐಐಎಂ ನಿಂದ ಪಿಜಿಡಿಬಿಎಂ ಮತ್ತು ಎಂಐಟಿ ಸೊಲನ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ನಿಂದ ಪಿಎಚ್ಡಿ ಪಡೆದಿದ್ದಾರೆ ಎಂದು ತಿಳಿಸಿದರು.
ನವದೆಹಲಿ: ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿರುವ ಸಾಲಮನ್ನಾ ಆಶ್ವಾಸನೆಯನ್ನು ಮೊದಲು ಕಿತ್ತುಹಾಕಬೇಕೆಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯ ಚಿಕಾಗೋ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಾಲಮನ್ನಾ ಯೋಜನೆಯಿಂದ ನಿಜಕ್ಕೂ ರೈತರ ಬದುಕು ಹಸನಾಗಿದೆಯೇ ಎಂದು ವಿದ್ಯಾರ್ಥಿಯೊಬ್ಬರು ರಘುರಾಮ್ ರಾಜನ್ ಅವರನ್ನು ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ, ರಾಜಕೀಯ ಪಕ್ಷಗಳು ಸಾಲಮನ್ನಾ ಮಾಡುತ್ತಿರುವುದರಿಂದ ರಾಷ್ಟ್ರದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತಿದೆ. ಅಲ್ಲದೇ ಸಾಲಮನ್ನಾದಿಂದಾಗಿ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಚುನಾವಣಾ ಆಯೋಗ ಪ್ರಣಾಳಿಕೆಗಳ ಪಟ್ಟಿಯಲ್ಲಿ ಮೊದಲು ಸಾಲಮನ್ನಾ ಭರವಸೆಯನ್ನು ತೆಗೆದುಹಾಕಬೇಕು. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆಂದು ಉತ್ತರಿಸಿದರು.
ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿಂದೆ ಸಾಲಮನ್ನಾ ಭರವಸೆ ಪ್ರಮುಖ ಕಾರಣವಾಗಿದೆ. ಅಲ್ಲದೇ ಛತ್ತೀಸಗಢದಲ್ಲಿ ಸಾಲಮನ್ನಾ ಭರವಸೆಯಿಂದಲೇ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಲು ಸಾಧ್ಯವಾಗಿದೆ. ಈಗ ಪಂಚರಾಜ್ಯಗಳ ಸೋಲಿನ ನಂತರ ಪ್ರಧಾನಿ ಮೋದಿಯವರೂ ಸಹ ದೇಶದ ಎಲ್ಲಾ ರೈತರ ಸುಮಾರು 4 ಲಕ್ಷ ಕೋಟಿ ಸಾಲಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ ಎಂದು ಹೇಳಿದರು.
ಇದಲ್ಲದೇ ಆರ್ಥಿಕ ತಜ್ಞರುಗಳಾದ ಅಭಿಜಿತ್ ಬ್ಯಾನರ್ಜಿ, ಪ್ರಂಜುಲ್ ಭಂಡಾರಿ, ಸಜ್ಜಿದ್ ಚಿನಾಯ್, ಮೈತ್ರೀಶ್ ಘಟಕ್, ಗೀತಾ ಗೋಪಿನಾಥ್, ಅಮಥ್ರ್ಯ ಲಹಿರಿ, ನೀಲಕಾಂತ್ ಮಿಶ್ರಾ, ಪ್ರಾಚಿ ಮಿಶ್ರಾ, ಕಾರ್ತಿಕ್ ಮುರುಳೀಧರನ್, ರೋಹಿಣಿ ಪಾಂಡೆ, ಈಶ್ವರ್ ಪ್ರಸಾದ್ ಮತ್ತು ಸೋಮನಾಥನ್ ರವರೊಂದಿಗೆ ಜತೆಗೂಡಿ ಭಾರತದ ಆರ್ಥಿಕತೆಯ ಕಾರ್ಯತಂತ್ರ ಕುರಿತಂತೆ ವರದಿಯನ್ನು ಸಿದ್ಧಪಡಿಸಿದ್ದೇವೆ.
ಈ ವರದಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಮನದಲ್ಲಿಟ್ಟುಕೊಂಡು, ಮುಂದಿನ 5 ವರ್ಷಗಳಲ್ಲಿ ಯಾವ ಆರ್ಥಿಕ ನೀತಿಗೆ ಪ್ರಾಮುಖ್ಯತೆಯನ್ನು ನೀಡಬೇಕೆಂದು ಉಲ್ಲೇಖಿಸಿದ್ದೇವೆ. ಅಲ್ಲದೇ ಇದು ಭಾರತದ ಆರ್ಥಿಕ ಸ್ಥಿತಿ ಅಭಿವೃದ್ಧಿ ನಡೆಸಿರುವ ವಿಶ್ಲೇಷಣೆಯೂ ಆಗಿದೆ. ಈ ವರದಿಯ ಹಿಂದೆ ಯಾವುದೇ ಸರ್ಕಾರ ಅಥವಾ ಪಕ್ಷವನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಿಲ್ಲವೆಂದು ರಘುರಾಮ್ ಸ್ಪಷ್ಟಪಡಿಸಿದ್ದಾರೆ.
ವಾಷಿಂಗ್ಟನ್: ನೋಟು ಅಮಾನ್ಯೀಕರಣ ಹಾಗೂ ನೂತನ ಜಿಎಸ್ಟಿ ತೆರಿಗೆಯಿಂದಾಗಿ ಭಾರತದ ಆರ್ಥಿಕತೆಯ ಬೆಳವಣಿಗೆ ಕುಂಠಿತವಾಗಿದೆಯೆಂದು ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅಭಿಪ್ರಾಯ ಪಟ್ಟಿದ್ದಾರೆ.
ಶುಕ್ರವಾರ ಬರ್ಕಲಿಯಾದ ಕ್ಯಾಲಿಫೋರ್ನಿಯ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಭಟ್ಟಾಚಾರ್ಯರವರ ಭಾರತದ ಭವಿಷ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2012 ರಿಂದ 2016ರ ವರೆಗೆ ಭಾರತದ ಬೆಳವಣಿಗೆಯ ವೇಗ ಹೆಚ್ಚಾಗಿತ್ತು. ಆದರೆ 2017ರಲ್ಲಿ ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿಯಿಂದಾಗಿ ಇದರ ವೇಗಕ್ಕೆ ತಡೆಯುಂಟಾಗಿದೆ. ಇವುಗಳ ಹೊಡೆತದಿಂದಾಗಿ ದೇಶದ ಆರ್ಥಿಕತೆ ಕುಂಠಿತವಾಗಿದೆ. ಜಗತ್ತು ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವಾಗ ಭಾರತದ ಆರ್ಥಿಕತೆಗೆ ಇವುಗಳಿಂದ ಹೊಡೆತ ಬಿದ್ದಿದೆ ಎಂದು ತಿಳಿಸಿದರು.
ಸತತ 25 ವರ್ಷಗಳ ಕಾಲಮಾನಕ್ಕೆ ಹೋಲಿಸಿದರೆ, ಇಂದಿನ ಶೇ.7 ರಷ್ಟು ಆರ್ಥಿಕ ಬೆಳವಣಿಗೆಯೇ ಅತ್ಯಂತ ಬಲಿಷ್ಠವಾಗಿದೆ. ಆದರೆ ಇದನ್ನು ಕೆಲವರು ಹಿಂದೂ ಬೆಳವಣಿಗೆ ದರ ಎಂದು ಹೇಳುತ್ತಿದ್ದಾರೆ. ಈ ಮೊದಲು ಹಿಂದೂ ಬೆಳವಣಿಗೆಯ ದರ ಕೇವಲ ಶೇ.3.5ರಷ್ಟಿತ್ತು. ಪ್ರಸ್ತುತ ಇರುವ ಶೇ.7 ರಷ್ಟು ಬೆಳವಣಿಗೆ ಸಾಕಾಗುವುದಿಲ್ಲ. ಮುಂಬರುವ ದಿನಗಳಲ್ಲಿ ದೇಶದಲ್ಲಿ ಉದ್ಯೋಗ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತದೆ. ಹೀಗಾಗಿ ನಾವು ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳಲು ಸಾಧ್ಯವಿಲ್ಲ. ಜಾಗತೀಕ ಬೆಳವಣಿಗೆಯಲ್ಲಿ ಭಾರತವನ್ನು ಸೂಕ್ಷ್ಮವಾಗಿ ನೋಡಿದರೆ, ಇಂದು ಅತಿ ಹೆಚ್ಚಿನ ಮುಕ್ತ ಅರ್ಥವ್ಯವಸ್ಥೆಯಾಗಿ ಬೆಳೆದಿದೆ. ಜಾಗತಿಕ ಅರ್ಥವ್ಯವಸ್ಥೆ ಬೆಳೆದರೇ, ಭಾರತವೂ ಬೆಳೆಯುತ್ತದೆ ಎಂದು ವಿವರಿಸಿದರು.
2017 ರಲ್ಲಿ ಭಾರತ ಅರ್ಥವ್ಯವಸ್ಥೆ ಇಳಿಮುಖವಾಗಿತ್ತು. ಇದಕ್ಕೆ ನೇರ ಕಾರಣ ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿ. ಇವುಗಳ ಹೊಡೆತ ಎಷ್ಟು ಬಲವಾಗಿತ್ತು ಎನ್ನುವುದಕ್ಕೆ ಇದೇ ನಿದರ್ಶನವಾಗಿದೆ. ಸದ್ಯದ ಭಾರತದ ಅರ್ಥವ್ಯವಸ್ಥೆ ಚೇತರಿಕೆಯ ಹಾದಿಯಲ್ಲಿದೆ. ಆದರೆ ತೈಲ ಬೆಲೆ ಏರಿಕೆಯಿಂದಾಗಿ, ಇದಕ್ಕೂ ಅಡ್ಡಿಯುಂಟಾಗುತ್ತಿದೆ. ಭಾರತದ ಅತ್ಯಧಿಕ ಸಂಪನ್ಮೂಲಗಳು ತೈಲ ಉತ್ಪನ್ನಗಳ ಆಮದಿಗೆ ವೆಚ್ಚವಾಗುತ್ತಿದೆ ಎಂದು ತಿಳಿಸಿದ್ರು.