ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಜೊತೆ ಧರ್ಮ ಕೀರ್ತಿರಾಜ್ ‘ಸಿಂಧೂರಿ’ ಚಿತ್ರಕ್ಕೆ ಕೈಜೋಡಿಸಿದ್ದಾರೆ. ಏ.30ರಂದು ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ‘ಸಿಂಧೂರಿ’ ಸಿನಿಮಾದ ಮುಹೂರ್ತ ನೆರವೇರಿದೆ. ಮೇ 1ರಿಂದ 45 ದಿನಗಳ ಕಾಲ ಸಕಲೇಶಪುರ ಸೇರಿದಂತೆ ಹಲವೆಡೆ ಚಿತ್ರದ ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ:ಸೆಟ್ಟೇರಿತು ಸೂರಿ, ಯುವ ಸಿನಿಮಾ- ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಡೈರೆಕ್ಟರ್ ಶಂಕರ್ ನಿರ್ದೇಶನದ ‘ಸಿಂಧೂರಿ’ ಚಿತ್ರ ಕಾಲ್ಪನಿಕ ಕಥೆಯಾಗಿದ್ದು, ಮರ್ಡರ್ ಮಿಸ್ಟಿ ಕಥೆ ಹೇಳಲಿದ್ದಾರೆ. ಇದರಲ್ಲಿ ಧರ್ಮಗೆ ವಿಭಿನ್ನವಾಗಿರೋ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ಧರ್ಮಗೆ ಜೋಡಿಯಾಗಿ ರಾಗಿಣಿ ನಟಿಸುತ್ತಿಲ್ಲ. ಬದಲಾಗಿ ಧರ್ಮಗೆ ಠಕ್ಕರ್ ಕೊಡೋ ಪಾತ್ರದಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ತಿರುವು ಕೊಡುವ ಪವರ್ಫುರ್ ಪಾತ್ರದಲ್ಲಿ ರಾಗಿಣಿ ನಟಿಸಲಿದ್ದಾರೆ.
ಟಕೀಲಾ, ಅಮರಾವತಿ ಪೊಲೀಸ್ ಸ್ಟೇಷನ್, ತೆಲುಗು ಬ್ಲಡ್ ರೋಸಸ್, ನಯನ ಮಧುರ, ವಸುಂಧರ ದೇವಿ ಸೇರಿದಂತೆ ಹಲವು ಸಿನಿಮಾಗಳು ಧರ್ಮ ಕೀರ್ತಿರಾಜ್ ಕೈಯಲ್ಲಿವೆ.
ಪವಿತ್ರಾ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 (Sanju Weds Geetha 2) ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು.
ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ‘ನಮ್ಮ ಸಹೋದರ ಕುಮಾರ್ ಈಗ ಸಿನಿಮಾ ರಂಗದಲ್ಲಿ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ, ತುಂಬಾ ಖರ್ಚು ಮಾಡಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ, ಅಲ್ಲದೆ ನಮ್ಮವರೇ ಆದ ನಾಗಶೇಖರ್ ಇದಕ್ಕೆ ನಿರ್ದೇಶನ ಮಾಡಿದ್ದಾರೆ. ಸಮಾಜದ ನ್ಯೂನತೆಗಳನ್ನು ತೊಡೆದು ಹಾಕೋ ಕೆಲಸವನ್ನು ನಮ್ಮ ಸಿನಿಮಾಗಳು ಮಾಡಲಿ, ಈ ಚಿತ್ರವು ಅತ್ಯಂತ ಯಶಸ್ವಿಯಾಗಲಿ ಅಂತ ಹಾರೈಸುತ್ತೇನೆ ಎಂದು ಶುಭ ಹಾರೈಸಿದರು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ.
ನಂತರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಡಿಪರೆಂಟ್ ಪ್ಯಾಟ್ರನ್ನಲ್ಲಿ ಮೂಡಿಬಂದಿರುವ, ರಾಗಿಣಿ ಅಭಿನಯದ ಈ ಹಾಡನ್ನು ನಮ್ಮ ನಾರಾಯಣಸ್ವಾಮಿ ಅವರ ಕೈಲೇ ರಿಲೀಸ್ ಮಾಡಿಸಬೇಕೆಂದಿತ್ತು, ಹಾಡು ಅದ್ಭುತವಾಗಿ ಮೂಡಿಬಂದಿದೆ. ಇದು ಅಪ್ಪಟ ಪ್ಯಾಮಿಲಿ ಸ್ಟೋರಿ, ಡಾ.ರಾಜ್ಕುಮಾರ್ ಅವರ ಸಿನಿಮಾಗಳನ್ನು ನೆನಪಿಸುತ್ತೆ, ರಚಿತಾರಾಮ್, ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ದೊಡ್ಡ ದೊಡ್ಡ ಕಲಾವಿದರೇ ಅಭಿನಯಿಸಿದ್ದಾರೆ ಎಂದು ಹೇಳಿದರು.
ನಿರ್ದೇಶಕ ನಾಗಶೇಖರ್ ಮಾತನಾಡುತ್ತ , ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ಹೀಗೆ ಅದ್ಭುತವಾದ ಲೊಕೇಶನ್ಗಳಲ್ಲಿ 72 ದಿನಗಳ ಕಾಲ ಚಿತ್ರೀಕರಿಸಿದ್ದೇವೆ, ಇವತ್ತು ಇಂಥ ದೊಡ್ಡ ವೇದಿಕೆಯಲ್ಲಿ ನಮ್ಮ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ, ಖುಷಿಯ ವಿಚಾರ ಏನೆಂದರೆ ಬಿಡುಗಡೆಗೂ ಮುನ್ನವೇ ಗೋಕುಲ್ ಪಿಲಂಸ್ನವರು ನಮ್ಮ ಚಿತ್ರವನ್ನು ಖರೀದಿ ಮಾಡಿದ್ದಾರೆ. ರಿಲೀಸ್ ಡೇಟ್ ಅನೌನ್ಸ್ ಮಾಡಲು ನಾವಂತೂ ರೆಡಿ ಇದ್ದೇವೆ. ಚಿತ್ರದಲ್ಲಿ 5 ಹಾಡುಗಳಿದ್ದು, ಒಂದು ಹಾಡಿಗೆ ಲಹರಿ ಸಂಸ್ಥೆಯ ಅನುಮತಿ ಬೇಕಿದೆ, ನಮ್ಮ ಮಣ್ಣಿನ ಕಥೆ ಮಾಡಲು ಹೊರಟಾಗ ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ ಕಣ್ಣಮುಂದೆ ಬಂತು, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಚಿತ್ರದಲ್ಲಿ ಹೇಳಹೊರಟಿದ್ದೇವೆ, ಇದರಲ್ಲಿ ಎಲ್ಲವೂ ಹೊಸದಾಗಿರುತ್ತೆ. ನಿರ್ಮಾಪಕ ಕುಮಾರ್ ಅವರು ನೀಡಿದ ಸಹಕಾರದಿಂದ ಚಿತ್ರದ ಇಷ್ಟು ಅದ್ದೂರಿಯಾಗಿ ಬಂದಿದೆ. ಈಗಿನ ಕಾಲದ ಲವ್ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಚಿತ್ರದಲ್ಲಿದೆ ಎಂದರು.
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಮೊದಲಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇಂದು ಮೊದಲ ಹಾಡು ರಿಲೀಸಾಗಿದೆ. ನಾಗಶೇಖರ್ ಅವರ ಪ್ಯಾಟ್ರನ್ ಅಲ್ಲದೆ ಇರುವ ಈ ಹಾಡಲ್ಲಿ ನಾನು, ರಚಿತಾರಾಮ್, ರಾಗಿಣಿ ದ್ವಿವೇದಿ ಅಭಿನಯಿಸಿದ್ದೇವೆ, ರಾಜ್ಯಾದ್ಯಂತ ಆಗಮಿಸಿರುವ ನಾಯಕರೆಲ್ಲರ ಸಮ್ಮುಖದಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ
ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಹೆಚ್ಚು ಜನಪ್ರಿಯವಾಗುತ್ತಿದೆ. ಅಧೀರ ಸಂತು ಅವರು ಬಾಲಿವುಡ್ ಸ್ಟೈಲ್ ನಲ್ಲಿ ಕನ್ನಡ ಆಲ್ಬಂ ಸಾಂಗ್ ಮಾಡಿದ್ದಾರೆ. ಅದರ ಹೆಸರು ಕೂಡ ವಿಭಿನ್ನವಾಗಿದೆ. ತುಂಬಾ ಸ್ಟೈಲಿಶ್ ಆಗಿ ಮೂಡಿಬಂದಿರುವ ‘ಓ ಏ ಲಡ್ಕಿ’ (OY YEAH LADK) ಎಂಬ ಕ್ಯಾಚಿ ಟೈಟಲ್ ಹೊಂದಿರೋ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ (Ragani) ಅವರು ಬಿಡುಗಡೆ ಮಾಡಿದರು. ವಿಶೇಷವಾಗಿ ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ. ಎನ್ನಾರೈ ಯುವತಿಯಾಗಿ ಅಮೃತ, ಡಿಲವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ. ಈ ಹಾಡಿನ ಜೊತೆಗೆ ಇದರ ಲಿರಿಕಲ್ ವಿಡಿಯೋ ಹಾಗೂ ರೀಮಿಕ್ಸ್ ವರ್ಷನ್ ಪ್ರದರ್ಶಿಸಲಾಯಿತು. ನಿರ್ದೇಶಕ ಅಧೀರ ಸಂತು ಅವರೇ ಈ ಹಾಡಿನ ಸಾಹಿತ್ಯ ರಚಿಸಿ, ತಾವೇ ನಂತರ ಹಾಡಿದ್ದಾರೆ. ಆಕಾಶ್ ಆಡಿಯೋ ಮೂಲಕ ‘ಓ ಏ ಲಡ್ಕಿ’ ಹಾಡು ಬಿಡುಗಡೆಯಾಗಿದೆ.
ಈ ಹಾಡಲ್ಲಿ ಸಾಮಾನ್ಯ ಡೆಲಿವರಿ ಬಾಯ್ ಒಬ್ಬ ತನ್ನ ನೃತ್ಯ ಪ್ರತಿಭೆಯ ಮೂಲಕ ಎನ್.ಆರ್.ಐ. ಹುಡುಗಿಯನ್ನು ಹೇಗೆ ಪಟಾಯಿಸಿದ ಎಂಬುದನ್ನು ಹೇಳಲಾಗಿದೆ. ಆ ಡೆಲಿವರಿ ಬಾಯ್ ಒಮ್ಮೆ ಖಳನಾಯಕನಿಗೆ ಡೆಲಿವರಿ ಕೊಡಲು ಬಂದು, ವಾಪಸ್ ಹೋಗುವಾಗ ಖಳನಾಯಕನ ಕಾರಿನಲ್ಲಿ ಕುಳಿತ ಓರ್ವ ಸುಂದರ NRI ಯುವತಿಯನ್ನ ನೋಡುತ್ತಾ ಮೈಮರೆಯುತ್ತಾನೆ. ಅದನ್ನ ಕಂಡ ಖಳನಾಯಕ ಆತನನ್ನ ಗದರಿ ಅವನ ಬಗ್ಗೆ ಕೀಳಾಗಿ ಮಾತಾಡುತ್ತಾನೆ. ಇದನ್ನೇ ಸವಾಲಾಗಿ ಸ್ವೀಕರಿಸಿದ ನಾಯಕ, 5 ನಿಮಿಷದಲ್ಲಿ ಆ ಯುವತಿ ತನ್ನತ್ತ ಓಡಿ ಬರೋಹಾಗೆ ಮಾಡ್ತಿನಿ ಅಂತ ಸವಾಲ್ ಹಾಕಿ, ತನ್ನ ಆಪದ್ಬಾಂಧವನಿಗೆ (ನಿರ್ದೇಶಕ) ಕರೆ ಮಾಡಿ ಸಹಾಯ ಕೋರುತ್ತಾನೆ. ರಾಕ್ಸ್ಟಾರ್ ಆಗಿಬಂದ ಡೆಲಿವರಿ ಬಾಯ್, ಕನ್ನಡ ನೆಲ, ಭಾಷೆಯ ತಾಕತ್ತನ್ನ ಹಾಡಿನ ಮೂಲಕ ಹೇಳಿ ಆ ಯುವತಿಯ ಮನಸನ್ನು ಗೆಲ್ಲುತ್ತಾನೆ. ಎಂಎಸ್. ತ್ಯಾಗರಾಜ್ ಈ ಹಾಡಿಗೆ ಮ್ಯೂಸಿಕ್ ಮಾಡಿದ್ದು, ಎಸ್. ಹಾಲೇಶ್ ಇದನ್ನು ಸೆರೆ ಹಿಡಿದಿದ್ದಾರೆ.
ಈ ವಿಶೇಷ ಹಾಡಿನ ಕುರಿತಂತೆ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಅಧೀರ ಸಂತು, ನಾನು ಇಂಡಸ್ಟ್ರಿಗೆ ಹೊಸಬನೇನಲ್ಲ, ಉಪ್ಪಿ ಅವರ ಐವತ್ತನೇ ಚಿತ್ರವನ್ನು ನಾನೇ ಮಾಡಬೇಕಿತ್ತು. ಅವರು ಕಥೆ ಕೇಳಿ ಒಪ್ಪಿ ಡೇಟ್ಸ್ ಕೂಡ ಕೊಟ್ಟಿದ್ದರು. ಕಾರಣಾಂತರಗಳಿಂದ ಆ ಸಿನಿಮಾ ಡ್ರಾಪ್ ಆಯ್ತು. ಸ್ನೇಹಿತರ ಸಹಕಾರದಿಂದ ಈ ಸಾಂಗ್ ನಿರ್ದೇಶನ ಮಾಡಿದ್ದೇನೆ. ನಟಿ ರಾಗಿಣಿ ಅವರನ್ನೇ ಇನ್ಸ್ಪೈರ್ ಆಗಿ ತೆಗೆದುಕೊಂಡು ಮಾಡಿದ ಹಾಡಿದು. ಅವರು ಬ್ಯುಸಿ ಇದ್ದದ್ದರಿಂದ ಬೇರೆಯವರ ಕೈಲಿ ಮಾಡಿಸಬೇಕಾಯ್ತು. ಮುಂದೆ ಅವರನ್ನು ಇಟ್ಟುಕೊಂಡು ಇಂಟರ್ ನ್ಯಾಷನಲ್ ಲೆವೆಲ್ ಸಾಂಗ್ ಮಾಡುವ ಯೋಜನೆಯಿದೆ ಎಂದು ಹೇಳಿದರು.
ನಟಿ ರಾಗಿಣಿ ಮಾತನಾಡುತ್ತ, ಸಂತು ನನಗೆ ಬಹಳ ದಿನಗಳಿಂದ ಪರಿಚಯ. ಹಾಡು ತುಂಬಾ ಚೆನ್ನಾಗಿ ಬಂದಿದೆ. ಸಂತು ಅವರ ವಿಜನ್ ತೆರೆಯ ಮೇಲೆ ಕಾಣುತ್ತಿದೆ. ಒಳ್ಳೊಳ್ಳೆ ಲೊಕೇಶನ್ ಗಳಲ್ಲಿ ಹಾಡನ್ನು ಶೂಟ್ ಮಾಡಿದ್ದಾರೆ. ನನಗೂ ಅವರ ಜೊತೆ ಕೆಲಸ ಮಾಡಬೇಕೆಂದು ತುಂಬಾ ಆಸಕ್ತಿಯಿದೆ ಎಂದು ಹೇಳಿದರು. ನಂತರ ಉಗ್ರಂ ರವಿ ಮಾತನಾಡಿ ವಿಲನ್ ಆಗಿದ್ದ ನಾನು ಮೊದಲಬಾರಿಗೆ ಇಂಥ ಹಾಡಲ್ಲಿ ಕಾಣಿಸಿಕೊಂಡಿದ್ದೇನೆ. ಇದರ ಕಾನ್ಸೆಪ್ಟ್ ತುಂಬಾ ಚೆನ್ನಾಗಿದೆ. ಸಂತುಗೆ ಮುಂದೆ ಒಳ್ಳೇ ಫ್ಯೂಚರ್ ಇದೆ ಎಂದು ಹೇಳಿದರು. ಮತ್ತೊಬ್ಬ ಅತಿಥಿಯಾಗಿ ಸುನಿಲ್ ಕಂಬಾರ್ ವೇದಿಕೆಯಲ್ಲಿದ್ದರು. ನಾಯಕ ಸಮೀರ್, ನಾಯಕಿ ಅಮೃತ ಕೂಡ ತಮ್ಮ ಪರಿಚಯ ಮಾಡಿಕೊಂಡರು.
ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್ ಗೀತಾ ಚಿತ್ರದ ಟೈಟಲ್ ಇಟ್ಟುಕೊಂಡು ನವನವೀನ ಪ್ರೇಮಕಥೆ ಹೆಣೆದು ಸಂಜು ವೆಡ್ಸ್ ಗೀತಾ-2 (Sanju Weds Geeta 2) ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty) ಹಾಗೂ ಗುಳಿಕೆನ್ನೆ ಬೆಡಗಿ ರಚಿತಾರಾಮ್ (Rachita Ram) ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ ನಾಯಕಿ ಗೀತಾ ಇಬ್ಬರ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬರುವ ಪಾರ್ಟಿ ಸಾಂಗ್ ಅದಾಗಿದ್ದು, ವಿಶೇಷವಾಗಿ ಈ ಹಾಡಲ್ಲಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇವರಿಬ್ಬರ ಜೊತೆ ಸ್ಟೆಪ್ಸ್ ಹಾಕಿದ್ದಾರೆ.
ಕುಂಬಳಗೋಡಿನ ಬಿಜಿಎಸ್ ಹೈಸ್ಕೂಲಿನ ಗ್ಲಾಸ್ ಹೌಸ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಿತು. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ. ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವರ್ಷದ ಸೂಪರ್ ಹಿಟ್ ಸಾಂಗ್ ಇದಾಗಲಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, 2 ಫೈಟ್ಸ್, ಒಂದು ಹಾಡಿನ ಪ್ಯಾಚ್ ವರ್ಕ್ ಮಾತ್ರವೇ ಬಾಕಿಯಿದೆ. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಅದ್ಭುತ ಪ್ರೇಮಕಥೆ ಈ ಚಿತ್ರದಲ್ಲಿದೆ.
ಈಗಾಗಲೇ ಚಿತ್ರದ ಎಡಿಟಿಂಗ್ ಮುಗಿದು, ಡಬ್ಬಿಂಗ್ ಕೂಡ ಕೊನೇ ಹಂತದಲ್ಲಿದೆ. ಚಿತ್ರಕ್ಕೆ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಸಲಾಗಿದೆ. ಅಲ್ಲದೆ 50 ಲಕ್ಷ ರೂ.ಗಳ ವೆಚ್ಚದಲ್ಲಿ ಕುಣಿಗಲ್ ನ ಯುಬಿ ಸ್ಟೆಡ್ ಫಾರಂ(ಕುದುರೆ ಫಾರಂ)ನಲ್ಲಿ ಸುಮಾರು 5 ದಿನಗಳವರೆಗೆ ಅದ್ದೂರಿಯಾಗಿ ಹಾಡೊಂದನ್ನು ಚಿತ್ರೀಕರಿಸಲಾಗಿದೆ. ಹೀಗೆ ಚಿತ್ರಕಥೆಯಷ್ಟೇ ಪ್ರಾಮುಖ್ಯತೆಯನ್ನು ಚಿತ್ರದ ಹಾಡುಗಳಿಗೂ ಸಹ ನೀಡಲಾಗಿದ್ದು, ಒಂದು ಸಿನಿಮಾಗಾಗುವಷ್ಟು ಖರ್ಚನ್ನು ನಿರ್ಮಾಪಕ ಛಲವಾದಿ ಕುಮಾರ್ ಅವರು ಹಾಡುಗಳಿಗೇ ಮಾಡುವ ಮೂಲಕ ಅದ್ದೂರಿತನಕ್ಕೆ ಎಲ್ಲೂ ಕೊರತೆ ಬಾರದಂತೆ ನೋಡಿಕೊಂಡಿದ್ದಾರೆ. ಅಲ್ಲದೆ ಹಾಡುಗಳನ್ನು ಹಾಸನ ಮತ್ತು ಹಾವೇರಿಯಲ್ಲಿ ಅದ್ದೂರಿ ಸಮಾರಂಭದಲ್ಲಿ
ರಿಲೀಸ್ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಅವರ ಕಥೆ, ಚಿತ್ರಕಥೆ ನಿರ್ದೇಶನ ಚಿತ್ರಕ್ಕಿದ್ದು ಶ್ರೀಧರ ವಿ. ಸಂಭ್ರಮ್ ೫ ಹಾಡುಗಳನ್ನು ಕಂಪೋಜ್ ಮಾಡಿದ್ದಾರೆ. ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ,(ಕೆಮಿಯೋ), ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ಬಿಡುಗಡೆ ಮಾಡುತ್ತಿದೆ.
ಲೋಕಸಭಾ ಚುನಾವಣೆಯ ಮತದಾನ (Lok Sabha Elections 202) ಪ್ರಕ್ರಿಯೆಯಲ್ಲಿ ಸ್ಯಾಂಡಲ್ವುಡ್ ನಾಯಕಿಯರು (Sandalwood Actress) ಭಾಗಿಯಾಗಿ ವೋಟ್ ಮಾಡಿದ್ದಾರೆ. ತಪ್ಪದೇ ವೋಟ್ ಮಾಡಿ ಎಂದು ಮತದಾರರಿಗೆ ಸಂದೇಶ ಕೂಡ ನೀಡಿದ್ದಾರೆ.
‘ಕಾಂತಾರ’ (Kantara) ನಟಿ ಸಪ್ತಮಿ ಗೌಡ (Sapthami Gowda) ಮತದಾನ ಮಾಡಿ ಎಂದು ಮತದಾರರಿಗೆ ಕರೆ ನೀಡಿದ್ದಾರೆ. ಜೆಪಿ ನಗರದಲ್ಲಿ ನಟಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್
‘ಟೋಬಿ’ ನಟಿ ಚೈತ್ರಾ ಆಚಾರ್ (Chaithra Achar) ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವೋಟ್ ಮಾಡಿದ್ದಾರೆ. ನಾನು ಮತದಾನ ಮಾಡಿದೆ. ನೀವು ಮಾಡಿದ್ರಾ? ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಕೇಳಿದ್ದಾರೆ.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ (Bharathi Vishnuvardhan) ಜಯನಗರದಲ್ಲಿ ಮತದಾನ ಮಾಡುವ ಮೂಲಕ ಮತದಾರರಿಗೆ ತಪ್ಪದೇ ವೋಟ್ ಮಾಡಿ ಎಂದು ಕರೆ ನೀಡಿದ್ದಾರೆ. ಮತದಾನ ನಮ್ಮೆಲ್ಲರ ಹಕ್ಕು. ಮತದಾನ ಮಾಡುವುದರಿಂದ ತಪ್ಪಿಸಿಕೊಳ್ಳಬೇಡಿ. ಯೋಚಿಸಿ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ. ಮತಕ್ಕೆ ತುಂಬಾ ಬೆಲೆ ಇದೆ. ಅದನ್ನು ವ್ಯರ್ಥ ಮಾಡಬೇಡಿ ಎಂದು ನಟಿ ಮನವಿ ಮಾಡಿದ್ದಾರೆ.
ನಟಿ ಕಾರುಣ್ಯ ರಾಮ್ (Actress Karunya Ram) ಮತದಾನ ಮಾಡಿ ಬಂದಿದ್ದಾರೆ. ವೋಟರ್ ಐಡಿ ತೋರಿಸಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.
ಪಂಚರಂಗಿ ನಟಿ ನಿಧಿ ಸುಬ್ಬಯ್ಯ ತಮ್ಮ ಕುಟುಂಬದ ಜೊತೆ ಮತದಾನ ಮಾಡಿ ಕ್ಯಾಮೆರಾಗೆ ಮುದ್ದಾಗಿ ನಗು ಬೀರಿದ್ದಾರೆ. ತುಪ್ಪದ ಬೆಡಗಿ ರಾಗಿಣಿ ಯಲಹಂಕದ ಜುಡಿಷಿಯಲ್ ಲೇಔಟ್ನಲ್ಲಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಮದುವೆ ಗೌನ್ ಕತ್ತರಿಸಿದ ನಟಿ ಸಮಂತಾ
‘ಬಿಗ್ ಬಾಸ್’ (Bigg Boss Kannada) ಬೆಡಗಿ ನಮ್ರತಾ ಗೌಡ (Namratha Gowda) ತಮ್ಮ ಕುಟುಂಬದ ಜೊತೆ ಆಗಮಿಸಿ ಬಸವೇಶ್ವರ ನಗರದ ವಾಣಿ ಪಬ್ಲಿಕ್ ಸ್ಕೂಲ್ನಲ್ಲಿ ಮತದಾನ ಮಾಡಿದ್ದು, ಅಭಿಮಾನಿಗಳಿಗೆ ಎಲ್ಲರೂ ವೋಟ್ ಮಾಡುವಂತೆ ಮನವಿ ಮಾಡಿದ್ದಾರೆ.
ನಟಿ ಕಮ್ ನಿರೂಪಕಿ ಶ್ವೇತಾ ಚಂಗಪ್ಪ, ಶ್ವೇತಾ ಶ್ರೀವಾಸ್ತವ್, ರಾಧಿಕಾ ಚೇತನ್, ತೇಜಸ್ವಿನಿ ಶರ್ಮಾ ವೋಟ್ ಮಾಡಿದ್ದು, ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಯುಗಾದಿ (Ugadi Festival) ಎಂದರೆ ಹೊಸ ಆರಂಭ. ನಾಡಿನೆಲ್ಲೆಡೆ ಯುಗಾದಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಿಂದೂಗಳ ಪಾಲಿಗೆ ಯುಗಾದಿ ಅಂದ್ರೆ ಹೊಸ ಸಂವತ್ಸರದ ಆರಂಭ. ಯುಗಾದಿ ಹಬ್ಬದಂದು ಬೇವು ಬೆಲ್ಲ ಸವಿದು ಕಷ್ಟ ಸುಖವನ್ನ ಸಮವಾಗಿ ಸ್ವೀಕರಿಸಲು ಎಲ್ಲರೂ ಸಜ್ಜಾಗುತ್ತಾರೆ. ಸ್ಯಾಂಡಲ್ವುಡ್ ತಾರೆಯರು (Sandalwood Stars) ಕೂಡ ತಮ್ಮ ಮನೆಯಲ್ಲೂ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.
ನ್ಯಾಷನಲ್ ಸ್ಟಾರ್ ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ಮನೆಯಲ್ಲಿ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕುಟುಂಬದ ಜೊತೆ ಖುಷಿಯಿಂದ ಸೆಲೆಬ್ರೇಟ್ ಮಾಡಿದ್ದಾರೆ. ಜೋಡಿಯ ಸುಂದರ ಫೋಟೋವನ್ನು ಶೇರ್ ಮಾಡಿ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಶುಭಕೋರಿದ್ದಾರೆ.
ಕನ್ನಡತಿ, ಟಾಲಿವುಡ್ನಲ್ಲಿ ಮಿಂಚುತ್ತಿರುವ ‘ರ್ಯಾಂಬೋ’ ಬೆಡಗಿ ಆಶಿಕಾ ರಂಗನಾಥ್ ಮನೆಯಲ್ಲೂ ಕೂಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಶೂಟಿಂಗ್ಗೆ ಬ್ರೇಕ್ ಯುಗಾದಿ ಹಬ್ಬವನ್ನು ನಟಿ ಆಚರಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಮನೆಯಲ್ಲಿಯೂ ಕೂಡ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದೆ. ಮನೆ ಮಂದಿಯ ಜೊತೆ ಹಬ್ಬದೂಟ ಮಾಡಿ ಸಂಭ್ರಮಿಸಿದ್ದಾರೆ.
ಹೊಸ ಜೋಡಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಅವರಿಗೂ ಈ ವರ್ಷ ಯುಗಾದಿ ಸಖತ್ ಸ್ಪೆಷಲ್. ಹಬ್ಬದ ನಡುವೆ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೇವು ಬೆಲ್ಲದಂತೆ ಜೀವನದಲ್ಲಿ ಬರುವ ಸಿಹಿ ಕಹಿಯನ್ನು ಸಮನಾಗಿ ಸ್ವೀಕರಿಸೋಣ. ಯುಗಾದಿ ಹಬ್ಬದ ಶುಭಾಶಯಗಳು ಎಂದು ಕಾಟೇರ ನಟಿ ಆರಾಧನಾ ರಾಮ್ (Aradhana Ram) ಶುಭ ಕೋರಿದ್ದಾರೆ. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ದಿವ್ಯಾ ಉರುಡುಗ
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಈ ನೂತನ ವರ್ಷ ನಿಮಗೆ ಹೆಚ್ಚು ಆನಂದ ಮತ್ತು ಸಮೃದ್ಧಿಯನ್ನು ತಂದಿರಲಿ. ಹೊಸ ಪ್ರಾರಂಭಗಳಿಗೆ ಹಾಗೂ ಹೊಸ ಅನುಭವಗಳಿಗೆ ಮುಂದೆ ಸಿದ್ಧವಾಗಿರಿ. ಹೊಸ ಸಂವತ್ಸರದ ಹಾರೈಕೆಯೊಂದಿಗೆ ನಮ್ಮ ಯುಗಾದಿ ಹಬ್ಬದ ಶುಭಾಶಯಗಳು ಎಂದು ನಭಾ ನಟೇಶ್ (Nabha Natesh) ಹಾರೈಸಿದ್ದಾರೆ.
ಯುಗಾದಿಯ ಶುಭಾಶಯಗಳು. ಈ ಹಬ್ಬದಲ್ಲಿ ನಿಮ್ಮ ಜೀವನಕ್ಕೆ ಸಮೃದ್ಧಿ, ಆನಂದ ಮತ್ತು ಆಶೀರ್ವಾದಗಳು ಬರಲಿ. ಹೊಸ ವರ್ಷವನ್ನು ಸಮೃದ್ಧಿಯಿಂದ ಸ್ವಾಗತಿಸೋಣ ಎಂದು ತುಪ್ಪದ ಬೆಡಗಿ ರಾಗಿಣಿ (Ragini) ಶುಭಹಾರೈಸಿದ್ದಾರೆ.
ಹೀರೋ ಅಂದ್ರೆ ಹ್ಯಾಂಡ್ಸಮ್ ಆಗಿ ಇರಬೇಕು, ಜಿಮ್ ಮಾಡಿ ಫಿಟ್ ಆಗಿ ಇರಬೇಕು. ಈ ಗುಣಗಳಿದ್ದವನೂ ಮಾತ್ರ ಹೀರೋ ಆಗೋದಿಕ್ಕೆ ಸಾಧ್ಯ ಎಂಬ ಕಾಲವೆಲ್ಲಾ ಹೋಗಿ ಆಯ್ತು. ಈಗ ಯಾರ್ ಬೇಕಾದ್ರೂ ಹೀರೋ ಆಗಬಹುದು. ಆದ್ರೆ ನಟನಾ ಪ್ರತಿಭೆ ಇರಬೇಕು ಅಷ್ಟೇ. ಈಗ ಯಾಕೆ ಈ ಮಾತು ಅಂತೀರಾ? ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಮುರುಗನಾಗಿ ಖಳನಾಯಕನ ಪಾತ್ರ ಮಾಡಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ಮುನಿಕೃಷ್ಣ (Munikrishn) ಮತ್ತೊಮ್ಮೆ ನಿಮ್ಮ ಮುಂದೆ ಬರ್ತಿದ್ದಾರೆ. ಕೊಡೆಮುರುಗ ಎಂಬ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಅವರೀಗ ಸತ್ಯಮಂಗಳ ಸಿನಿಮಾದಲ್ಲಿ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಮುನಿಕೃಷ್ಣಅವರನ್ನು ಹೀರೋ ಆಗಿ ಆಯ್ಕೆ ಮಾಡಿದ್ದಕ್ಕೆ ಕಾರಣ ಏನು ಅನ್ನೋದನ್ನು ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಸೂಪರ್ ಸ್ಟಾರ್ ಅವರ ಮೊದಲ ಸಿನಿಮಾ ಬೆಂಬಲ ಕೊಟ್ಟಿದ್ದಕ್ಕೆ ಸ್ಟಾರ್ ಆಗಿರ್ತಾರೆ. ಅದೇ ರೀತಿ ಮುನಿಕೃಷ್ಣಅವರ ಸಿನಿಮಾ ಮೇಲಿನ ಪ್ರೀತಿ, ಡೆಡಿಕೇಷನ್ ದೊಡ್ಡದಿದೆ ಅನ್ನೋದು ನಿರ್ದೇಶಕರ ಮಾತು.
ಸತ್ಯಮಂಗಳ (Satyamangala) ಸಿನಿಮಾದ ಟೈಟಲ್ (Title) ಬಿಡುಗಡೆಯಾಗಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಚಿಕ್ಕ ಹಳ್ಳಿಯೊಂದರಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಗಿಣಿ ವಿಶೇಷ ಅತಿಥಿಯಾಗಿ ಆಗಮಿಸಿ, ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ. ಸತ್ಯಮಂಗಳ ಸಿನಿಮಾಗೆ ಆರ್ಯನ್ ಪ್ರತಾಪ್ ಸಾರಥಿ. ಕಾರಂಜಿ ಹಾಗೂ ಚೆಲುವೆಯೇ ನಿನ್ನ ನೋಡಲು ಚಿತ್ರಗಳಿಗೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿರುವ, ಕನ್ನಡ 90/11, ತಮಿಳಿನ ಹೇರ್ ಕೆನಾರ್ ಕಿರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಈ ಚಿತ್ರ ಏಳು ಅಂತರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡಿದೆ. ಮಣಿರತ್ನಂ ಸಾರಥ್ಯದ ಅಲೈ ಪಾಯುತೇ, ರಾವಣ್ ಗೆ ಅಸಿಸ್ಟೆಂಟ್ ಡೈರೆಕ್ಷರ್ ಆಗಿ, ಹಾಲಿವುಡ್ ವಿಲ್ ಸ್ಮಿತ್ ಬಳಗದಲ್ಲಿಯೂ ದುಡಿದಿರುವ ಆರ್ಯನ್ ಪ್ರತಾಪ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸತ್ಯಮಂಗಳ ಸಿನಿಮಾಗೆ ಅವ್ರೇ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಫಸ್ಟ್ ಫಿಲ್ಮಂ ಎವರ್ ಮೇಡ್ ಸ್ಕ್ರಿಪ್ಟ್ ಸೀನ್ ಸಾಹಸಕ್ಕೆ ಗಿನ್ನಿಸ್ ಬುಕ್ ರೆಕಾರ್ಡ್ ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಅಡ್ವೆಂಚರ್ಸ್ ಥ್ರಿಲ್ಲಿಂಗ್ ಕಹಾನಿಯ ಸತ್ಯಮಂಗಳ ಸಿನಿಮಾದಲ್ಲಿ ದಿ ಗ್ರೇಟ್ ಖಲಿ, ಬಾಲಿವುಡ್ ಅರ್ಬಾಜ್ ಖಾನ್, ಕನಕ್ ಪಾಂಡೆ, ಶರಣ್ಯ, ಸಂಜಯ್ ಕುಮಾರ್ ರವಿ ಕಹಳೆ, ವಿಜಯ್ ಚಿಂದೂರ್, ಮಂತೇಶ್ ಹಿರೇಮಠ್, ಜಿಜಿ ತಾರಾಬಳಗದಲ್ಲಿದ್ದಾರೆ. ಹೂವಿನ ಹಡಗಲಿ ಶಾಸಕರಾದ ಕೃಷ್ಣ ನಾಯಕ್ ಅರ್ಪಿಸ್ತಿರುವ ಈ ಚಿತ್ರವನ್ನು ASA ಪ್ರೊಡಕ್ಷನ್ ಮತ್ತು ಐರಾ ಪ್ರೊಡಕ್ಷನ್ ನಡಿ ಶಂಕರ್ ಬಿ ಹಾಗೂ ಮುನಿಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರಶೇಖರ್ ಕೆಎಸ್ ಕ್ಯಾಮೆರಾ, ವೀರ್ ಸಮರ್ಥ್ ಸಂಗೀತ, ಎಂಎನ್ ವಿಶ್ವ ಸಂಕಲನ, ಪೀಟರ್ ಹೈನ್ಸ್ ಸ್ಟಂಟ್, ಚಿನ್ನಿ ಪ್ರಕಾಶ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ.
ಸತ್ಯಮಂಗಳ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ದಾಂಡೇಲಿ, ಮಲೆ ಮಹಾದೇಶ್ವರ ಬೆಟ್ಟ, ಶ್ರೀಲಂಕಾ, ಕಟ್ಮುಂಡು, ಬ್ಯಾಂಕಕ್ ಭಾಗದಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. ಈಗಾಗಲೇ ಚಿತ್ರತಂಡ 10 ದಿನಗಳ ಕಾಲ ಬ್ಯಾಂಕಕ್ ನಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದಿದೆ. ವಿಶೇಷ ಅಂದರೆ ಸತ್ಯಮಂಗಳ ಸಿನಿಮಾದಲ್ಲಿ ಪಾಂಡಿಚೇರಿ ಮುಖ್ಯಮಂತ್ರಿ ಎನ್,. ರಂಗಸ್ವಾಮಿ ನಟಿಸಿದ್ದಾರೆ. ಯಾವ ಪಾತ್ರ ಅನ್ನೋದನ್ನು ಚಿತ್ರತಂಡ ಗುಟ್ಟುಬಿಟ್ಟು ಕೊಟ್ಟಿಲ್ಲ.
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ (Yogaraj Bhatt) ಹಾಗೂ ನಟಿ ರಾಗಿಣಿ (Ragin) ಟೀಸರ್ ಬಿಡುಗಡೆ ಮಾಡಿದರು. ನಟಿ, ನಿರ್ದೇಶಕಿ, ನಿರ್ಮಾಪಕಿಯರಾದ ಪ್ರಿಯಾ ಹಾಸನ್ ಹಾಗೂ ರೂಪ ಅಯ್ಯರ್, ನಿರ್ದೇಶಕ ಗಡ್ಡ ವಿಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು “ಆಪಲ್ ಕಟ್” ಯಶಸ್ವಿಯಾಗಲಿ ಎಂದು ಮನಸ್ಸಾರೆ ಹಾರೈಸಿದರು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಅವರು ಚಿತ್ರದ ಟೀಸರ್ ವೀಕ್ಷಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಾನು ಯಾರ ಬಳಿಯೂ ಸಹ ನಿರ್ದೇಶಕಿಯಾಗಿ ಕೆಲಸ ಮಾಡಿಲ್ಲ. ನಮ್ಮ ಅಪ್ಪನ ಕಾರ್ಯವೈಖರಿ ನೋಡಿ ನನಗೆ ನಿರ್ದೇಶನದ ಆಸೆ ಹುಟ್ಟಿತ್ತು. ಕಿರುತೆರೆಯಲ್ಲಿ ಹತ್ತಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕಿಯಾಗಿ ಇದು ಮೊದಲ ಚಿತ್ರ. ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ‘ಆಪಲ್ ಕಟ್’, ಐದು ಜನ ಗೆಳೆಯರ ಸುತ್ತ ನಡೆಯುವ ಕಥೆ. ಜೊತೆಗೆ ನಾನು ಮಾನವಶಾಸ್ತ್ರ ಓದಿದ್ದು, ಚಿತ್ರದಲ್ಲಿ ಮಾನವಶಾಸ್ತ್ರದ ಒಂದು ಅಂಶ ಸೇರಿಸಲಾಗಿದೆ. ಶವವೊಂದನ್ನು ಸಹ ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ ಎನ್ನಬಹುದು. ನಮ್ಮ ಮೊದಲ ಪ್ರಯತ್ನಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು.
ಇನ್ನು ಚಿತ್ರವನ್ನು ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಮೊದಲಬಾರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಮಾರ್ಚ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದೇವೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಎಲ್ಲಾ ಗಣ್ಯರಿಗೂ ನನ್ನ ಧನ್ಯವಾದ ಎಂದರು ನಿರ್ಮಾಪಕಿ ಶಿಲ್ಪ ಪ್ರಸನ್ನ. ನಾನು ಈ ಚಿತ್ರದಲ್ಲಿ ಸತ್ಯ ಹೆಸರಿನ ಮಾನವಶಾಸ್ತ್ರ ಪ್ರೊಫೆಸರ್ ಪಾತ್ರ ಮಾಡಿದ್ದೇನೆ ಎಂದು ನಾಯಕ ಸೂರ್ಯ ಗೌಡ ತಿಳಿಸಿದರು.
‘ನಾನು ಮೂಲತಃ ಬಾಗೆಪಲ್ಲಿ ಹುಡುಗಿ. ಒಳ್ಳೆ ಕಂಟೆಂಟ್ ಇರುವ ಮರ್ಡರ್ ಮಿಸ್ಟರಿ ಸಿನಿಮಾದಲ್ಲಿ ಸೈಕಾಲಜಿ ಸ್ಟೂಡೆಂಟ್ ಆಗಿ ನಟಿಸಿದ್ದೇನೆ” ಎಂದು ನಾಯಕಿ ಅಶ್ವಿನಿ ಪೋಲೆಪಲ್ಲಿ ಹೇಳಿದರು. ಚಿತ್ರದಲ್ಲಿ ನಟಿಸಿರುವ ಅಪ್ಪಣ್ಣ, ಅಮೃತ, ಮೀನಾಕ್ಷಿ, ಬಾಲ ರಾಜವಾಡಿ ಹಾಗೂ ಸಂಗೀತ ನಿರ್ದೇಶಕ ವೀರ ಸಮರ್ಥ್ “ಆಪಲ್ ಕಟ್” ಚಿತ್ರದ ಕುರಿತು ಮಾತನಾಡಿದರು.
ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ (Prajwal Devraj) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಮತ್ತು ವೈಯಕ್ತಿಕ ಜೀವನ ಎರಡನ್ನು ಬ್ಯಾಲೆನ್ಸ್ ಮಾಡ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಪ್ರಜ್ವಲ್ ದೇವರಾಜ್, ಮಗುವಿನ ಪ್ಲ್ಯಾನಿಂಗ್ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಪ್ರಜ್ವಲ್ಗೆ ಯಾವಾಗ ಗುಡ್ ನ್ಯೂಸ್ ಕೊಡುತ್ತಾರೆ? ಎಂದು ಪ್ರಶ್ನೆ ಎದುರಾಗಿದೆ. ಅದಕ್ಕೆ ನಟ ತಮಾಷೆಯಾಗಿಯೇ ನಾನು ಮತ್ತು ರಾಗಿಣಿ (Ragini) ಯಾವಾಗ ಒಟ್ಟಿಗೆ ಸಿನಿಮಾ ಮಾಡುತ್ತೇವೆ ಅಂತ ಕೇಳುತ್ತಿದ್ದೀರಾ? ಎಂದು ಮರು ಪ್ರಶ್ನೆ ಮಾಡಿ ಹಾಸ್ಯ ಚಟಾಕಿ ಹಾರಿಸಿದ್ದರು. ಆ ಬಳಿಕ ಅಸಲಿ ಮ್ಯಾಟರ್ಗೆ ಬಂದರು. ಪ್ರಜ್ವಲ್- ರಾಗಿಣಿ ಮದುವೆಯಾಗಿ 8 ವರ್ಷಗಳಾಗಿದೆ. ಆದರೆ, ಮಗು, ಫ್ಯಾಮಿಲಿ ಪ್ಲ್ಯಾನಿಂಗ್ ಅಂತ ಬ್ಯುಸಿಯಾಗಿಲ್ಲ ಎಂದು ಉತ್ತರಿಸಿದ್ದಾರೆ.
ಈ ವೇಳೆ, ನಾವು ಮದುವೆ ಆಗಿ 8 ವರ್ಷಗಳಾಗಿದ್ದರೂ, ಮಕ್ಕಳ ಬಗ್ಗೆ ಯಾಕೆ ಯೋಚನೆ ಮಾಡಿಲ್ಲ ಅನ್ನೋ ಬಗ್ಗೆ ಓಪನ್ ಆಗಿ ಮಾತಾಡಿದ್ದಾರೆ. ರಾಗಿಣಿನೂ ಶಾನುಭೋಗರ ಮಗಳು ಅನ್ನೋ ಸಿನಿಮಾ ಮಾಡುತ್ತಿದ್ದಾರೆ. ಅವರಿಗೂ ಒಳ್ಳೊಳ್ಳೆ ಸಿನಿಮಾಗಳು ಬರುತ್ತಿವೆ. ನಿಮಗೆ ಇಷ್ಟ ಇರಲಿ. ಇಲ್ಲದೆ ಇರಲಿ ಮಗು ಆದಾಗ ಅದಕ್ಕೆ ಸಮಯ ಕೊಡಬೇಕಾಗುತ್ತೆ. ಸಮಯ ಕೊಡುವುದಕ್ಕೆ ಆದರೇನೆ ಮಕ್ಕಳನ್ನು ಮಾಡಿಕೊಳ್ಳಬೇಕು. ಒಂದ್ಕಡೆ ನಾನು ಕೆಲಸ ಮಾಡುತ್ತಲೇ ಇರುತ್ತೇನೆ. ಅದಕ್ಕೆ ಮಕ್ಕಳ ಬಗ್ಗೆ ಯೋಚನೆ ಮಾಡಿಲ್ಲ ಅನ್ನೋದನ್ನು ಹೇಳಿದ್ದಾರೆ. ಇದನ್ನೂ ಓದಿ:ಮತ್ತೊಂದು ಬಿಗ್ ಪ್ರಾಜೆಕ್ಟ್ ಒಪ್ಪಿಕೊಂಡ ಅನುಷ್ಕಾ ಶೆಟ್ಟಿ
ನಮ್ಮಿಬ್ಬರಿಗೂ ಯಾವಾಗ ಸಮಯ ಕೊಡುವುದಕ್ಕೆ ಆಗುತ್ತೋ ಅದೇ ಸರಿಯಾದ ಸಮಯ ಅಂತ ಅನಿಸುತ್ತೆ. ನಾನು ಗಂಡಸು ಅಂತ ನೀನು ಕೆಲಸ ಬಿಡು. ಮಗು ನೋಡಿಕೋ ನಾನು ಆಚೆ ಹೋಗಿ ಸಂಪಾದನೆ ಮಾಡುತ್ತೇನೆ ಅನ್ನೋದು ಹೋಗಬೇಕು. ಅವರ ಕೆಲಸ, ಸಿನಿಮಾಗಳು ಮುಗಿದಾಗ ನಾವು ಪ್ಲ್ಯಾನ್ ಮಾಡುತ್ತೇವೆ ಎಂದು ಪ್ರಜ್ವಲ್ ವೈಯಕ್ತಿಕ ವಿಚಾರದ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ.
ಇಬ್ಬರು ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆ ಪ್ರಶ್ನೆ ಎದುರಾದಾಗ, ಒಳ್ಳೆಯ ಕಥೆ ಸಿಕ್ಕರೆ ನಾನು ಮತ್ತು ರಾಗಿಣಿ (Ragini) ಜೋಡಿಯಾಗಿ ನಟಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಜ್ವಲ್-ರಾಗಿಣಿ ಅವರದ್ದು ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿದ್ದು, 2014ರಲ್ಲಿ ಈ ಜೋಡಿ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟರು.
ಮಲಯಾಳಂ ಹೆಸರಾಂತ ನಟ ಮೋಹನ್ ಲಾಲ್ ಮತ್ತು ಕನ್ನಡದ ನಿರ್ದೇಶಕ ನಂದಕಿಶೋರ್ ಅತೀ ಶೀಘ್ರದಲ್ಲೇ ಅಮೆರಿಕಾಗೆ (America) ಪ್ರಯಾಣ ಬೆಳೆಸಲಿದ್ದಾರೆ. ಈ ಜೋಡಿಯ ಮುಂದಿನ ಹಂತದ ಚಿತ್ರೀಕರಣ ಅಮೆರಿಕಾದಲ್ಲಿ ನಡೆಯಲಿದ್ದು, ಈಗಾಗಲೇ ಮೊದಲ ಹಂತದ ಶೂಟಿಂಗ್ (Shooting) ಅನ್ನು ಮೈಸೂರಿನಲ್ಲಿ ಮುಗಿಸಿಕೊಂಡಿದ್ದಾರೆ.
ಬಹು ನಿರೀಕ್ಷಿತ ‘ವೃಷಭ’ (Vrishabh) ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ (Mysore) ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡು ಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ (Nandakishor) ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್ ಲಾಲ್ (Mohanlal), ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ಪಾಲ್ಗೊಂಡಿದ್ದರು.
ಹಾಲಿವುಡ್ ನ ಜನಪ್ರಿಯ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಗುರುತಿಸಿಕೊಂಡಿರುವ ನಿಕ್ ಥರ್ಲೋ ಈ ಚಿತ್ರಕ್ಕೆ ಕೆಲಸ ಮಾಡುತ್ತಿರುವುದು ಒಂದು ವಿಶೇಷತೆಯಾದರೆ, ಬಾಹುಬಲಿ, ಪುಲಿಮುರುಗನ್, ಶಿವಾಜಿ – ದಿ ಬಾಸ್, ಎಂದಿರನ್, ಪುಷ್ಪ – ದಿ ರೈಸ್ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಭಾರತೀಯ ಚಿತ್ರರಂಗದ ಜನಪ್ರಿಯ ಸಾಹಸ ನಿರ್ದೇಶಕರಾದ ಪೀಟರ್ ಹೇನ್ಸ್ ಈ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿರುವುದು ಇನ್ನೊಂದು ಹೆಗ್ಗಳಿಕೆ.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ನಂದಕಿಶೋರ್, ‘ಮೊದಲ ಹಂತದ ಚಿತ್ರೀಕರಣದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದನ್ನು ಸಾಧಿಸಿದ ಖುಷಿ ನಮಗಿದೆ. ಜೊತೆಗೆ ಹಗಲು ರಾತ್ರಿ ಕಷ್ಟಪಟ್ಟು ದುಡಿದ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳುವುದಕ್ಕೆ ಬಯಸುತ್ತೇನೆ. ಮೋಹನ್ ಲಾಲ್ ಸರ್, ರೋಶನ್, ಶ್ರೀಕಾಂತ್, ರಾಗಿಣಿ ಮುಂತಾದವರು ನಮ್ಮ ಡೆಡ್ ಲೈನ್ ಗಳನ್ನು ಪೂರೈಸುವಲ್ಲಿ ಪೂರಕವಾಗಿ ಕೆಲಸ ಮಾಡಿದ್ದಾರೆ. ಪುಲಿಮುರುಗನ್ ಚಿತ್ರದ ನಂತರ ಮೋಹನ್ ಲಾಲ್ ಮತ್ತು ಪೀಟರ್ ಹೇನ್ಸ್ ಈ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ವೃಷಭ ಚಿತ್ರವು ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರವಾಗಿ ಮೂಡಿಬರಲಿದೆ’ ಎಂದಿದ್ದಾರೆ.
ವೃಷಭ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಅತೀ ದೊಡ್ಡ ಆಕ್ಷನ್ ಚಿತ್ರವಾಗಿದ್ದು, ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಝಹ್ರ ಎಸ್ ಖಾನ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ವಿಎಫ್ಎಕ್ಸ್ ದೊಡ್ಡ ಪ್ರಮಾಣದಲ್ಲಿದ್ದು, ಇದೊಂದು ಬರೀ ಆಕ್ಷನ್ ಚಿತ್ರವಷ್ಟೇ ಅಲ್ಲ, ಅದ್ಭುತ ಸೆಂಟಿಮೆಂಟ್ ಚಿತ್ರವಾಗಿ ಮೂಡಿಬರುತ್ತಿದ್ದು, 2024ರ ಅತೀ ಜನಿರೀಕ್ಷಿತ ಚಿತ್ರವಾಗಿದೆ.
ವೃಷಭ ಚಿತ್ರವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲಂಸ್, ಎವಿಎಸ್ ಸ್ಟುಡಿಯೋಸ್ ನ ಜೊತೆಗೆ ಅರ್ಪಿಸುತ್ತಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರವನ್ನು, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಅಭಿಷೇಕ್ ವ್ಯಾಸ್ (ಏವಿಎಸ್), ಶ್ಯಾಮ್ ಸುಂದರ್ (ಫರ್ಸ್ಟ್ ಸ್ಟೆಪ್ ಮೂವೀಸ್), ಏಕ್ತಾ ಕಪೂರ್, ಶೋಭಾ ಕಪೂರ್ (ಬಾಲಾಜಿ ಟೆಲಿಫಿಲಂಸ್), ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ (ಕನೆಕ್ಟ್ ಮೀಡಿಯಾ) ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರವು ತೆಲುಗು, ಮಲಯಾಳಂ, ಹಿಂದಿ, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.