Tag: Rahul Gandhi Protest

  • ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಅಕ್ರಮವಾಗಿದೆ – ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡ್ತಾರೆ: ಸಚಿವ ಸುಧಾಕರ್

    ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಅಕ್ರಮವಾಗಿದೆ – ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡ್ತಾರೆ: ಸಚಿವ ಸುಧಾಕರ್

    – 8-10 ತಿಂಗಳಿಂದ ರಿಸರ್ಚ್ ಮಾಡಿದ್ದಾರೆ ಎಂದ ಸಚಿವ

    ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ (Karnataka LokSabha Election) ಅಕ್ರಮ ಆಗಿರೋದು, ಮತಗಳ್ಳತನ ಆಗಿರೋದರ ಬಗ್ಗೆ ರಾಹುಲ್ ಗಾಂಧಿ ಬಳಿ ದಾಖಲಾತಿ ಇದೆ. ಆಗಸ್ಟ್ 8ರ ಪ್ರತಿಭಟನೆ ದಿನ ಅದನ್ನ ಬಿಡುಗಡೆ ಮಾಡ್ತಾರೆ ಅಂತ ಉನ್ನತ ಶಿಕ್ಷಣ ‌ಸಚಿವ ಸುಧಾಕರ್ (MC Sudhakar) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ವಿಚಾರ ಮತ್ತು ಮೈಸೂರಿನಲ್ಲಿ ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    ದೆಹಲಿ ಚುನಾವಣೆ (Delhi Election) ಸಮಯದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಾನು ಪ್ರಚಾರಕ್ಕೆ ಹೋಗಿದ್ದೆ. ಆಗ ನಮ್ಮ ಅಭ್ಯರ್ಥಿಯೇ ನಮಗೆ ತೋರಿಸಿದ್ರು. ಒಂದೇ ಅಡ್ರೆಸ್ ನಲ್ಲಿ ಎಷ್ಟು ಜನ ಇರೋಕೆ ಸಾಧ್ಯ? ಅಲ್ಲಿ ಅಂತಹ ಅಕ್ರಮವಾಗಿದೆ. ರಾಹುಲ್ ಗಾಂಧಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಅವರು ಶ್ಯಾಡೋ ಪ್ರಧಾನ ಮಂತ್ರಿ ಆಗಿದ್ದಾರೆ. 8-10 ತಿಂಗಳಿಂದ ಈ ಬಗ್ಗೆ ರಿಸರ್ಚ್ ಮಾಡಿದ್ದಾರೆ. ಮಹಾರಾಷ್ಟ್ರ ಚುನಾವಣೆ ಆದ ಮೇಲೆ ರಾಹುಲ್ ಗಾಂಧಿಗೂ ಹೆಚ್ಚು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಿ ಅವರು ಎಲ್ಲಾ ದಾಖಲಾತಿ ಬಿಡುಗಡೆ ಮಾಡ್ತಾರೆ‌ ಅಂತ ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

    ರಾಹುಲ್ ಗಾಂಧಿ ಅವರು ಚುನಾವಣೆ ಆಯೋಗಕ್ಕೆ ಡಿಜಿಟಲ್ ಓಟರ್ ಲೀಸ್ಟ್ ಕೊಡಿ ಅಂದರು ಆಯೋಗ ಯಾಕೆ ಕೊಡ್ತಿಲ್ಲ. ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲಾತಿ ಇವೆ. ದೆಹಲಿಯಲ್ಲಿ ಸುದ್ದಿಗೋಷ್ಟಿ ‌ಮಾಡಿ ರಿಲೀಸ್ ಮಾಡ್ತಾರೆ. ಕರ್ನಾಟಕಕ್ಕೆ ಬಂದಾಗ ದಾಖಲಾತಿ ಕೊಡ್ತಾರೆ. ಕರ್ನಾಟಕದಲ್ಲಿ ಅಕ್ರಮ ಆಗಿದೆ ಅಂತ ದಾಖಲಾತಿ ಸಮೇತ ಕೊಡೋದಾಗಿ ರಾಹುಲ್ ಹೇಳಿದ್ದಾರೆ. ಅವರ ಬಳಿ ಖಂಡಿತ ದಾಖಲಾತಿ ಇದೆ ಅನ್ನೋದು ನಮ್ಮ ನಂಬಿಕೆ. ರಾಹುಲ್ ಗಾಂಧಿ ದಾಖಲಾತಿ ಕೊಡ್ತಾರೆ ಅಂತ ತಿಳಿಸಿದರು. ಇದನ್ನೂ ಓದಿ: ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

  • ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

    ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

    ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ‌ ರಾಹುಲ್‌ ಗಾಂಧಿ (Rahul Gandhi) ನೇತೃತ್ವದ ಪ್ರತಿಭಟನಾ ರ‍್ಯಾಲಿ ಆಗಸ್ಟ್‌ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

    ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್‌ 5ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಪ್ರತಿಭಟನಾ ರ‍್ಯಾಲಿ ಮುಂದೂಡಿರುವುದಾಗಿ ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್; ಸಚಿವ ಶಿವಾನಂದ ಪಾಟೀಲ್‌ಗೆ ಸುಪ್ರೀಂ ಚಾಟಿ

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ರಣದೀಪ್ ಸುರ್ಜೇವಾಲ ಮಾತನಾಡಿದರು, ಶಿಬು ಸೊರೇನ್ ಅವರ ಮರಣದ ಹಿನ್ನೆಲೆಯಲ್ಲಿ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅದರಲ್ಲಿ ಭಾಗವಹಿಸಿದ್ದಾರೆ. ಆದ್ದರಿಂದ ನಾಳೆಯ (ಆ.5) ಪ್ರತಿಭಟನೆ ಮುಂದೂಡಲಾಗಿದೆ. ಅದನ್ನ ಆ.8ಕ್ಕೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಭಾರತ ಫಂಡಿಂಗ್‌ – ಅಮೆರಿಕ

    ಇನ್ನೂ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ನಾಳೆ ಶಿಬು ಸೊರೇನ್‌ ಅಂತ್ಯಕ್ರಿಯೆಯಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಇಲ್ಲಿಗೆ ಬಂದು ಅಲ್ಲಿಗೆ ಹೋಗೋದು ಅಂತ ಮೊದಲು ಮಾತುಕತೆ ಆಗಿತ್ತು. ಆದ್ರೆ ಇದು ದೊಡ್ಡ ಸಂದೇಶ ಕೊಡುವ ದಿನ, ಆದ್ದರಿಂದ ಗಡಿಬಿಡಿ ತೀರ್ಮಾನ ಬೇಡ ಅಂತ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಕೆಲವರಿಗೆಲ್ಲಾ ವರಮಹಾಲಕ್ಷ್ಮಿ ಹಬ್ಬ ಅಂತ ಇರುತ್ತದೆ. ಪಕ್ಷದ ಕಾರ್ಯಕ್ರಮದಲ್ಲಿ ಅದನ್ನೆಲ್ಲ ಲೆಕ್ಕದಲ್ಲಿ ಇಟ್ಟುಕೊಳ್ಳೋಕೆ ಆಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ

  • ಆ.5ರಂದು ಸಾರಿಗೆ ಬಂದ್‌ಗೆ ನಿರ್ಧಾರ – ಇಂದು 4 ನಿಗಮಗಳ ಜೊತೆ ಹೈವೋಲ್ಟೇಜ್‌ ಸಭೆ

    ಆ.5ರಂದು ಸಾರಿಗೆ ಬಂದ್‌ಗೆ ನಿರ್ಧಾರ – ಇಂದು 4 ನಿಗಮಗಳ ಜೊತೆ ಹೈವೋಲ್ಟೇಜ್‌ ಸಭೆ

    ಬೆಂಗಳೂರು: ಸರ್ಕಾರದ ವಿರುದ್ಧ ಸಮರ ಸಾರಿರುವ ಸಾರಿಗೆ ನೌಕರರು (Transport Employees) ಪಟ್ಟು ಸಡಿಲಿಸುವಂತೆ ಕಾಣ್ತಿಲ್ಲ. ಅತ್ತ 5ನೇ ತಾರೀಖು ಬಂದ್ ಮಾಡೇ ಮಾಡುತ್ತೇವೆ ಅಂತ ಪಟ್ಟು ಹಿಡಿದಿದ್ರೆ, ಇತ್ತ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ನಿರ್ಧಾರ ಮಾಡಬೇಕಿದ್ದ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ಸಮಾವೇಶದಲ್ಲಿ ಬ್ಯುಸಿಯಾಗಿದ್ದಾರೆ.

    ಈ ಮಧ್ಯೆ ಇಂದು ಕೊನೆಯ ಮುಷ್ಕರದಿಂದ ಮನವೊಲಿಸುವ ನಿಟ್ಟಿನಲ್ಲಿ ಸಾರಿಗೆ ಮುಖಂಡರ ಜೊತೆ ಕೊನೆ ಹಂತದ ಹೈವೋಲ್ಟೇಜ್ ಸಭೆ ನಡೆಯಲಿದೆ. ಇದನ್ನೂ ಓದಿ: ಎಣ್ಣೆಯಲ್ಲಿ ಫ್ಯಾಟ್ ಚೆಕಿಂಗ್‌ಗೆ ಮುಂದಾದ ಹೋಟೆಲ್‌ ಮಾಲೀಕರು – ಡಿವೈಸ್ ಬೆಲೆ ಕೇಳಿ ಸುಸ್ತು!

    ಹಿಂಬಾಕಿ, ಸಂಬಳ ಹೆಚ್ಚಳ ವಿಚಾರವಾಗಿ ಸರ್ಕಾರದ ವಿರುದ್ಧ ಸಮರ ಸಾರಿ ಮುಷ್ಕರಕ್ಕೆ ಕರೆ ಕೊಟ್ಟಿರುವ ಸಾರಿಗೆ ನೌಕರರು ಮುಷ್ಕರ ಮಾಡೇ ಮಾಡ್ತೀವಿ ಅಂತ ಪಟ್ಟು ಹಿಡಿದಿದ್ದಾರೆ. ಆಗಸ್ಟ್ 4ರ ತನಕ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಮಾತ್ರ ಬಾಕಿ ಇದ್ದು ಸಮಸ್ಯೆ ಸಂಬಂಧ ಸಭೆ ಕರೆದು ಸಾರಿಗೆ ಮುಖಂಡರ ಜೊತೆ ಮಾತನಾಡಬೇಕಿದ್ದ ಸಿಎಂ, 5ನೇ ತಾರೀಖು ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಪ್ರತಿಭಟನೆಯಲ್ಲಿ ಬ್ಯುಸಿಯಾಗಿದ್ದು, ಮುಷ್ಕರ ಆರಂಭವಾಗೇ ಬಿಡುತ್ತಾ ಅನ್ನೋ ಟೆನ್ಷನ್ ಹೆಚ್ಚಾಗಿದೆ. ಇದನ್ನೂ ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    ಹೌದು. ಸಮಸ್ಯೆ ಸಂಬಂಧ ಈ ಹಿಂದೆ ಮುಷ್ಕರಕ್ಕೆ ಕರೆಕೊಟ್ಟಿರೋ ಸಾರಿಗೆ ಮುಖಂಡರ ಜೊತೆ ಸಿಎಂ ಸಭೆ ಮಾಡಿದ್ರು. ಆದ್ರೆ ಸಭೆ ಯಶಸ್ಸು ಕಂಡಿರಲಿಲ್ಲ. ಆದಾದ ಮೇಲೆ ಆಗಸ್ಟ್ 4ರ ವರೆಗೆ ಡೆಡ್‌ಲೈನ್ ನೀಡಿ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಕೊಡಲಾಗಿದ್ದು. ಸಾರಿಗೆ ಮುಖಂಡರು ಕೊಟ್ಟಿದ್ದ ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಡೆಡ್‌ಲೈನ್ ಹತ್ತಿರ ಬರ್ತಿದ್ರೂ ಸಿಎಂ ಮಾತ್ರ ಈ ಬಗ್ಗೆ ಹೆಚ್ಚು ಗಮನಕೊಟ್ಟಂತೆ ಕಾಣ್ತಿಲ್ಲ. ಸಾರಿಗೆ ಮುಷ್ಕರ ಆರಂಭವಾಗುವ ದಿನದಂತೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.

    ಈ ಸಮಾವೇಶದ ಆಯೋಜನೆಯಲ್ಲಿ ಬ್ಯುಸಿಯಾಗಿರುವ ಸಿಎಂ ಸಾರಿಗೆ ಮುಷ್ಕರದ ಬಗ್ಗೆ ಗಮನ ಕೊಟ್ಟಂತೆ ಇಲ್ಲ. ಹಣಕಾಸು ಇಲಾಖೆ ಸಿಎಂ ಕೈಯಲ್ಲೇ ಇರುವ ಕಾರಣ, ಬೇಡಿಕೆ ಈಡೇರಿಕೆ ಸಂಬಂಧ ಸಿಎಂ ಮಾತ್ರ ನಿರ್ಧಾರ ಮಾಡೋಕೆ ಸಾಧ್ಯ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ ತಯಾರಿ ನಡುವೆ ಮುಖಂಡರ ಸಭೆ ಕರೆದು ಮನವೊಲಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ‌ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ

    ಇನ್ನೂ ಈ ಮಧ್ಯೆ ಸಿಎಂ ಕೊಟ್ಟಿರುವ ಡೆಡ್‌ಲೈನ್ ಮುಕ್ತಾಯಕ್ಕೂ ಮುನ್ನ ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಕೊನೆಯ ಹಂತದ ಮನವೊಲಿಕೆ ಪ್ರಯತ್ನ ನಡೆಯಲಿದೆ. ಇಂದು ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ಅಧಿಕಾರಿಗಳು, ಸಾರಿಗೆ ಸಂಘಟನೆ ಮುಖಂಡರ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕಾರಿಗಳು ಕೆಲವು ಭರವಸೆ ನೀಡುವ ಸಾಧ್ಯತೆ ಇದೆ. ಆದರೆ ಇತ್ತ ಯಾವುದೇ ಕಾರಣ ಬೇಡಿಕೆ ಈಡೇರುವ ಬಗ್ಗೆ ಘೋಷಣೆಯಾಗದ ಹೊರತು ನಾವಂತೂ ಮುಷ್ಕರ ಹಿಂಪಡೆಯಲ್ಲ ಅಂತ ಮುಖಂಡರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದಿನ ಸಭೆ ಕೂಡ ಸಾಕಷ್ಟು ಕುತೂಹಲ ಕೆರಳಿಸಿದೆ.