Tag: rahulgandhi

  • ನಾಳೆ ಸಿದ್ದರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ – ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ ಆಗಮನ

    ನಾಳೆ ಸಿದ್ದರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ – ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ ಆಗಮನ

    ಬೆಂಗಳೂರು: ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಒಂದೇ ದಿನ ಇದ್ದು, ದಾವಣಗೆರೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.

    ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 50 ಎಕರೆ ವಿಸ್ತಾರವಾದ ಶಾಮನೂರು ಪ್ಯಾಲೇಸ್ ಗ್ರೌಂಡ್‌ನಲ್ಲಿ ಅರಮನೆ ಮಾದರಿಯ ಬೃಹತ್ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್, ಖರ್ಗೆ ಸೇರಿದಂತೆ ಕೇವಲ 45 ಜನ ಮುಖ್ಯ ಗಣ್ಯರಿಗೆ ಕೂರಲು ಅವಕಾಶ ನೀಡಲಾಗಿದೆ. ಹಾಗೆಯೇ ವೇದಿಕೆ ಮುಂಭಾಗದಲ್ಲಿ 6 ಲಕ್ಷ ಜನರಿಗೆ ಆಸನಗಳು ಸಜ್ಜಾಗಿವೆ. ಮಾಜಿ ಸಚಿವರು, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

    ಸಿದ್ದರಾಮಯ್ಯನವರ 75 ವರ್ಷಗಳ ಕಾಲ ನಡೆದು ಬಂದ ಹಾದಿಯ ಬಗ್ಗೆ ಜನರಿಗೆ ತಿಳಿಸಲು ಛಾಯಾಚಿತ್ರ ಪ್ರದರ್ಶನವನ್ನು ಕೂಡ ಆಯೋಜನೆ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಬಾಸ್ ಎಂದು ಚಿನ್ನದಲ್ಲಿ ಬರೆಸಿ ಸಿದ್ದರಾಮಯ್ಯಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ವೇಳೆ ಎಕ್ಸ್ ಸಿಎಂ ಎಂದು ಬರೆಸಬೇಕಿತ್ತು ಸಿದ್ದು ಅಭಿಮಾನಿಗೆ ತಿಳಿಸಿದ್ದಾರೆ.

    ಸಿದ್ದರಾಮೋತ್ಸವಕ್ಕೆ ಹೋಗುವವರಿಗೆ ಅಭಿಮಾನಿಗಳನ್ನು ಕರೆದೊಯ್ಯಲು ಈಗಾಗಲೇ ವಿವಿಧ ಜಿಲ್ಲೆಗಳಿಂದ ಸುಮಾರು 7 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 200 ಕಾರು, 100 ಆಟೋಗಳಿಗೆ ರಕ್ಷಾರಾಮಯ್ಯ ಚಾಲನೆ ನೀಡಿದ್ದಾರೆ. ಇಂದು ಸಂಜೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು. ಹುಬ್ಬಳ್ಳಿಗೆ ಸಂಜೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಖಾಸಗಿ ಹೋಟೆಲ್‌ಗೆ ತೆರಳುವ ರಾಹುಲ್, ಮೊದಲ ಬಾರಿಗೆ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೆ ಚುನಾವಣೆ ಸಂಬಂಧಿತ ಐತಿಹಾಸಿಕ ಸಭೆ ನಡೆಸಲಿದ್ದಾರೆ. ಬಳಿಕ ರಾತ್ರಿ ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಮಾಡಿ ಬೆಳಗ್ಗೆ ಚಿತ್ರದುರ್ಗದ ಕಡೆ ತೆರಳಲಿದ್ದಾರೆ ಎಂದು ಸಿದ್ದರಾಮಯ್ಯ ಅಮೃತಮಹೋತ್ಸವ ಸಮಿತಿ ಮಾಹಿತಿ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್

    ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್

    ನವದೆಹಲಿ: ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಭೇಟಿಯಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ವೇಳೆ ಕೊತ್ತೂರು ಮಂಜುನಾಥ್ ಮತ್ತು ಡಾ.ಎಂ.ಸಿ. ಸುಧಾಕರ್ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

    ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ದೆಹಲಿಗೆ ತೆರಳಿರುವ ನಿಯೋಗದ ಜೊತೆಗೆ ಇತ್ತೀಚೆಗೆ ಜೆಡಿಎಸ್ ತೊರೆದ ಶಾಸಕ ಶ್ರೀನಿವಾಸಗೌಡ ಇದ್ದರು.

    ಈ ಮೂಲಕ ಅವಳಿ ಜಿಲ್ಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್‍ನ ರಣತಂತ್ರ ದೆಹಲಿಯಲ್ಲಿ ನಡಿತಿದ್ಯಾ ಅನ್ನೋ ಅನುಮಾನಗಳು ಮೂಡಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಆಯ್ಕೆ ಕೂಡ ಚರ್ಚೆ ನಡೆದಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ


    ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ವಿರೋಧಿ ಬಣದ ಗುಂಪಾಗಿ ಗುರುತಿಸಿ ಕೊಂಡಿರುವುದ ವಿಶೇಷ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪ ಸೋಲಿಗೆ ಈ ಗುಂಪು ಕಾರಣ ಎಂಬ ಮಾತು ಕೇಳಿಬಂದಿತ್ತು. ಆ ಬಳಿಕ ಈ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದರು.

    Live Tv

  • ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ತಿರುವನಂತಪುರಂ: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ.

    ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ 

    ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರರಿಗೂ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಪೇಪರ್‌ ಬಿಕ್ಕಟ್ಟು – ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಪಠ್ಯ, ನೋಟ್‌ ಪುಸ್ತಕ

    ಸಿಪಿಐ(M) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.

    Live Tv

  • ದ್ವೇಷ, ಹಿಂಸೆ, ಬಹಿಷ್ಕಾರಗಳು ದೇಶವನ್ನು ದುರ್ಬಲಗೊಳಿಸುತ್ತಿವೆ: ರಾಹುಲ್ ಗಾಂಧಿ

    ದ್ವೇಷ, ಹಿಂಸೆ, ಬಹಿಷ್ಕಾರಗಳು ದೇಶವನ್ನು ದುರ್ಬಲಗೊಳಿಸುತ್ತಿವೆ: ರಾಹುಲ್ ಗಾಂಧಿ

    ನವದೆಹಲಿ: ಹಿಂದೂಗಳ ಪ್ರಮುಖ ಹಬ್ಬವಾದ ರಾಮನವಮಿ ಆಚರಣೆ ವೇಳೆ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆದ ಕೋಮು ಸಂಘರ್ಷದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್‌ಗಾಂಧಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

    BENKI

    ಈ ಕುರಿತು ಟ್ವೀಟ್ ಮಾಡಿರುವ ಅವರು, ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆಯ ಇಟ್ಟಿಗೆಗಳಿಂದ ಕಟ್ಟಿದ ಈ ದೇಶದ ಪ್ರಗತಿಯ ಹಾದಿಯನ್ನು ಸುಗಮಗೊಳಿಸಲಾಗಿದೆ. ಆದರೆ, ದ್ವೇಷ, ಹಿಂಸೆ ಮತ್ತು ಬಹಿಷ್ಕಾರಗಳು ನಮ್ಮ ಪ್ರೀತಿಯ ದೇಶವನ್ನು ದುರ್ಬಲಗೊಳಿಸುತ್ತಿವೆ. ಹಾಗಾಗಿ ನಾವು ಎಲ್ಲರನ್ನೂ ಒಳಗೊಳ್ಳುವ ಭಾರತವನ್ನು ಸುರಕ್ಷಿತವಾಗಿರಿಸಲು ಒಟ್ಟಾಗಿ ನಿಲ್ಲಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

    ರಾಮನವಮಿ ವೇಳೆ ಹಿಂಸಾಚಾರ
    ರಾಮನವಮಿ ಆಚರಣೆ ಪ್ರಯುಕ್ತ ಭಾನುವಾರ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ ಗಾಯಗೊಂಡಿದ್ದು, ಓರ್ವ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

    RAHULGANDHI

    ಮಧ್ಯಪ್ರದೇಶದ ಖರ್ಗಾನ್‌ನ ಕೆಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ಮತ್ತು ಗಲಭೆ ನಡೆದಿದೆ. ಅನೇಕ ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸಂಘರ್ಷ ಭುಗಿಲೇಳುವುದನ್ನು ತಡೆಯಲು ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ಕೋಮು ಸಂಘರ್ಷದ ವೇಳೆ ಕಲ್ಲುತೂರಾಟ ನಡೆದಿದ್ದು ಅಲ್ಲಲ್ಲಿ ಮನೆಗಳಿಗೆ ಬೆಂಕಿ ಬಿದ್ದಿದೆ. ಒಂದು ದೇವಸ್ಥಾನವನ್ನೂ ಧ್ವಂಸಮಾಡಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು.

  • ಮೊದಲು ಲಸಿಕೆ, ನಂತರ ಮನ್ ಕೀ ಬಾತ್: ರಾಹುಲ್ ಕಿಡಿ

    ಮೊದಲು ಲಸಿಕೆ, ನಂತರ ಮನ್ ಕೀ ಬಾತ್: ರಾಹುಲ್ ಕಿಡಿ

    ನವದೆಹಲಿ: ಮೊದಲು ಲಸಿಕೆ ನೀಡಿ,ನಂತರ ಮನ್ ಕೀ ಬಾತ್‍ನಲ್ಲಿ ಮಾತಾಡಿ ಎಂದು ಕಾಂಗ್ರೆಸ್ ಸಂಸದ ರಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.

    ಮೊದಲು ಈ ದೇಶದ ಪ್ರತಿಯೊಬ್ಬರಿಗೂ ಕೊರೊನಾ 19 ಲಸಿಕೆ ತಲುಪುವಂತೆ ಮಾಡಿ. ಬಳಿಕ ನಿಮ್ಮ ಮನ್ ಕೀ ಬಾತ್ ನಡೆಸಿ ಎಂದು ಹೇಳಿದ್ದಾರೆ. ಹಾಗೇ ಕೊರೊನಾ ಲಸಿಕೆ ಬಗೆಗಿನ ಸತ್ಯಗಳು ಎಂಬ, ಗ್ರಾಫ್ ಚಾರ್ಟ್‍ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಕೊರೊನಾ ಲಸಿಕೆ ನೀಡಿದ ಡಾಟಾ ಉಲ್ಲೇಖವಾಗಿರುವುದನ್ನು ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹುಟ್ಟಿದಾಗಿಂದಲೂ ಅಲ್ಲಿ ಸಿಎಂ ರೇಸ್ ಇದೆ: ಸಚಿವ ಸುಧಾಕರ್

    ಮನ್ ಕೀ ಬಾತ್ ಪ್ರಧಾನಿ ಮೋದಿಯವರ ತಿಂಗಳ ರೇಡಿಯೋ ಕಾರ್ಯಕ್ರಮವಾಗಿದೆ. ಪ್ರತಿ ತಿಂಗಳ ಕೊನೇ ಭಾನುವಾರದಂದು ಈ ಕಾರ್ಯಕ್ರಮದ ಮೂಲಕ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ.

    ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದೇ ಮೊದಲಿನಿಂದಲೂ ರಾಹುಲ್ ಗಾಂಧಿ ಹೇಳುತ್ತಾ ಬಂದಿದ್ದಾರೆ. ಎರಡನೇ ಅಲೆಯಲ್ಲಿ ಸೋಂಕು ನಿಯಂತ್ರಣದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಮೂರನೇ ಅಲೆ ಇನ್ನಷ್ಟು ಭೀಕರವಾಗಿರಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

  • ಹೆತ್ತತಾಯಿಯನ್ನೇ ನಂಬಲಾಗದ ಸ್ಥಿತಿಗೆ ಕಾಂಗ್ರೆಸ್ಸಿಗರು ಬಂದಿದ್ದಾರೆ: ಸಿ.ಟಿ ರವಿ

    ಹೆತ್ತತಾಯಿಯನ್ನೇ ನಂಬಲಾಗದ ಸ್ಥಿತಿಗೆ ಕಾಂಗ್ರೆಸ್ಸಿಗರು ಬಂದಿದ್ದಾರೆ: ಸಿ.ಟಿ ರವಿ

    ಮೈಸೂರು: ಹೆತ್ತ ತಾಯಿಯನ್ನೇ ನಂಬಲಾಗದ ಸ್ಥಿತಿಗೆ ಅವರುಗಳು ಬಂದಿದ್ದಾರೆ ಎಂದು ಸಚಿವ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

    ಪುಲ್ವಾಮಾ ದಾಳಿ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಹೆತ್ತ ತಾಯಿಯನ್ನು ನಂಬಲಾಗದ ಸ್ಥಿತಿಗೆ ಅವರುಗಳು ಬಂದಿದ್ದಾರೆ. ಟೆರರಿಸ್ಟ್ ಗಳ ಮಟ್ಟ ಹಾಕಿದ್ರೆ ಅದನ್ನು ನಂಬುವುದಿಲ್ಲ. ಸರ್ಜಿಕಲ್ ಸ್ಟ್ರೈಕ್ ಅಂದ್ರೆ ಸೈನಿಕರನ್ನ ನಂಬಲ್ಲ. ಎಲೆಕ್ಷನ್ ಅಂದ್ರೆ ಇವಿಎಂ ನಂಬಲ್ಲ. ಅವರು ಯಾವ ದೇಶದ ನಾಯಕರು ಎಂಬುದೇ ಗೊತ್ತಿಲ್ಲ. ನಮ್ಮ ಸೈನಿಕರ ದಾಳಿಗಳನ್ನೇ ಅನುಮಾನದಲ್ಲಿ ನೋಡಿದ್ದಾರೆ. ಇಂಥವರ ಬಗ್ಗೆ ಏನು ಹೇಳೋದು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಇದೇ ವೇಳೆ ಟಿಪ್ಪು ಬಗ್ಗೆ ಮೈಸೂರು ರಂಗಾಯಣ ನಿರ್ದೇಶಕರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿ, ಟಿಪ್ಪು ಬಗ್ಗೆ ನಾನು ಕೂಡ ಮಾತನಾಡಿದ್ದೀನಿ. ತಾಕತ್ತಿದ್ದರೆ ನನ್ನನ್ನೂ ವಜಾ ಮಾಡಿ ಎಂದು ಕೇಳಲಿ ಅಂತ ಪ್ರಗತಿಪರ ಚಿಂತಕರಿಗೆ ಸಿ.ಟಿ ರವಿ ತಿರುಗೇಟು ನೀಡಿದರು.

    ಟಿಪ್ಪು ಮತಾಂಧ, ಕೊಡವರ ಮೇಲೆ ದೌರ್ಜನ್ಯ ಮಾಡಿರುವುದು ಸತ್ಯ. ಮಲಬಾರಿಗಳ ಮೇಲೆ ಟಿಪ್ಪು ಹಾಗೂ ಆತನ ಸೈನಿಕರು ಅತ್ಯಾಚಾರ ಮಾಡಿರುವುದು ಸತ್ಯ. ಮಂಗಳೂರಿನಲ್ಲಿ ಕ್ರಿಶ್ಚಿಯನ್ನರ ಮೇಲೆ ದೌರ್ಜನ್ಯ ಮಾಡಿ ನೆತ್ತರು ಹರಿಸಿದ್ದ ಎಷ್ಟು ಸತ್ಯವ್ಯೋ, ಬ್ರಿಟೀಷರ ವಿರುದ್ಧ ಕೂಡ ಹೋರಾಟ ಮಾಡಿದ್ದು ಅಷ್ಟೇ ಸತ್ಯ. ನಾವೂ ಎರಡೂ ಸತ್ಯಗಳನ್ನು ಹೇಳಬೇಕು ಒಂದನ್ನು ಮಾತ್ರ ಹೇಳಿ ಇನ್ನೊಂದನ್ನು ಮರೆಮಾಚುವುದು ತಪ್ಪು ಎಂದು ಹೇಳಿದರು.

    ಕಾರು ಅಪಘಾತ ಪ್ರಕರಣದಲ್ಲಿ ಸಚಿವ ಆರ್. ಅಶೋಕ್ ಮಗ ಭಾಗಿ ಎಂಬುದರ ಬಗ್ಗೆ ಪ್ರತಿಕ್ರಿಯಿಸಿ, ಅಪಘಾತ ಸುದ್ದಿ ಮಾಡುತ್ತಿರುವುದು ಮಾಧ್ಯಮದವರು. ನನ್ನ ವಿರುದ್ಧವೂ ಪಟ್ಟ ಕಟ್ಟಿದ್ರಿ. ಕುಡಿದು ಗಾಡಿ ಓಡಿಸಿದ್ರು ಅಂತ ಹೇಳಿದ್ರಿ. ನನ್ನ ಪ್ರಕರಣದಲ್ಲೇ ಹೀಗೆ ಮಾಡಿರಬೇಕಾದ್ರೆ ನಾನು ಯಾರನ್ನು ನಂಬಲಿ ಎಂದು ಮಾಧಮ್ಯಗಳ ವಿರುದ್ಧ ಹರಿಹಾಯ್ದರು.

    ಸಚಿವ ಆನಂದ್ ಸಿಂಗ್ ಅರಣ್ಯ ಖಾತೆ ನೀಡಿದಕ್ಕೆ ಟೀಕೆ ವಿಚಾರವಾಗಿಯೂ ಮಾತನಾಡಿದ ಸಚಿವರು, ಆನಂದ್ ಸಿಂಗ್ ಕಾಂಗ್ರೆಸ್ಸಿನಲ್ಲಿದ್ದಾಗ ಶುದ್ಧರಾಗಿದ್ದರು. ಈಗ ಕಾಂಗ್ರೆಸ್ ಬಿಟ್ಟ ಮೇಲೆ ಆಪಾದನೆ ಮಾಡ್ತಿದ್ದಾರೆ. ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟು, ಈಗ ಗೆದ್ದ ಮೇಲೆ ಆಪಾದನೆ ಮಾಡೊದು ಎಷ್ಟು ಸರಿ ಎಂದು ಕಾಂಗ್ರೆಸ್ಸಿಗರನ್ನ ಪ್ರಶ್ನಿಸಿದರು.

  • ನನ್ನ, ಕುಟುಂಬವನ್ನು ರಕ್ಷಿಸಲು ದಣಿವರಿಯದೆ ಕೆಲಸ ಮಾಡಿದ್ದಕ್ಕೆ ಧನ್ಯವಾದ- ರಾಹುಲ್ ಗಾಂಧಿ

    ನನ್ನ, ಕುಟುಂಬವನ್ನು ರಕ್ಷಿಸಲು ದಣಿವರಿಯದೆ ಕೆಲಸ ಮಾಡಿದ್ದಕ್ಕೆ ಧನ್ಯವಾದ- ರಾಹುಲ್ ಗಾಂಧಿ

    ನವದೆಹಲಿ: ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್‍ಪಿಜಿ(ವಿಶೇಷ ಭದ್ರತಾ ಪಡೆ)ಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಸ್‍ಪಿಜಿಗೆ ಧನ್ಯವಾದ ತಿಳಿಸಿದ್ದಾರೆ.

    ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ರಾಹುಲ್, ”ಎಸ್‍ಪಿಜಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನನ್ನ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ಕಡೆಯಿಂದ ಧನ್ಯವಾದಗಳು. ಕಳೆದ 28 ವರ್ಷಗಳಿಂದ ನನ್ನ ಹಾಗೂ ನನ್ನ ಕುಟುಂಬವನ್ನು ರಕ್ಷಿಸಲು ದಣಿವರಿಯದೇ ಕೆಲಸ ಮಾಡಿದ್ದೀರಿ. ನಿಮ್ಮ ಈ ನಿಸ್ವಾರ್ಥ ಸೇವೆಗೆ ಚಿರಋಣಿ. ಅಲ್ಲದೆ ನಿಮ್ಮ ನಿರಂತರ ಬೆಂಬಲ ಹಾಗೂ ವಾತ್ಸಲ್ಯದಿಂದ ತುಂಬಿದ್ದ ಪ್ರಯಾಣಕ್ಕೆ ಧನ್ಯವಾದಗಳು. ನಿಮ್ಮ ಮುಂದಿನ ಭವಿಷ್ಯಕ್ಕೆ ಶುಭವಾಗಲಿ” ಎಂದು ಬರೆದುಕೊಂಡಿದ್ದಾರೆ.

    1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಬಳಿಕ ಇಡೀ ಗಾಂಧಿ ಕುಟುಂಬಕ್ಕೆ ವಿಶೇಷ ಭದ್ರತೆಯನ್ನು ಒದಗಿಸಲಾಗಿತ್ತು. ಗಾಂಧಿ ಕುಟುಂಬದ ರಕ್ಷಣೆಗೆ ಯಾವುದೇ ಧಕ್ಕೆ ಇಲ್ಲ. ಅಲ್ಲದೆ ಇತ್ತೀಚೆಗೆ ನೇರ ಬೆದರಿಕೆಗಳು ಕೂಡ ಇಲ್ಲದಿರುವ ಕಾರಣಕ್ಕೆ ಕುಟುಂಬಕ್ಕೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇತ್ತ ಕಾಂಗ್ರೆಸ್, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಚಕಾರ ಎತ್ತದ ರಾಹುಲ್ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    ಬಿಜೆಪಿಯವರು ಸೋನಿಯಾ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಜೀವನದಲ್ಲಿ ಆಟವಾಡುತ್ತಿದ್ದಾರೆ. ಯಾವ ಆಧಾರದ ಮೇಲೆ ಅವರು ಭದ್ರತೆಯನ್ನು ಹಿಂಪಡೆಯುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವೈಯಕ್ತಿಕವಾಗಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕಿಡಿಕಾರಿದ್ದಾರೆ.

    ಆಯ್ದ ಕೆಲವರಿಗೆ ಮಾತ್ರ ಒದಗಿಸಲಾಗಿರುವ ಎಸ್‍ಪಿಜಿ ಭದ್ರತೆಯ ವಾರ್ಷಿಕ ಬದಲಾವಣೆಯ ಭಾಗವಾಗಿ ಈ ಮೊದಲು ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆಯನ್ನು ವಾಪಸ್ ಪಡೆಯಲಾಗಿತ್ತು.

    ದೇಶದ ಅತ್ಯಂತ ಪ್ರಮುಖ ರಾಜಕಾರಣಿಗಳು ಹಾಗೂ ಗಣ್ಯರಿಗೆ ಮಾತ್ರ ಎಸ್‍ಪಿಜಿ ಭದ್ರತೆ ಒದಗಿಸಲಾಗುತ್ತದೆ. ಮನಮೋಹನ್ ಸಿಂಗ್ ಬಳಿಕ ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಈ ನಾಲ್ವರಿಗೆ ಮಾತ್ರ ಎಸ್‍ಪಿಜಿ ಭದ್ರತೆ ಒದಗಿಸಲಾಗಿದೆ.

    ಈ ಹಿಂದೆ ಎಸ್‍ಪಿಜಿ ಭದ್ರತೆಯ ಬದಲಾವಣೆಯ ವಿಮರ್ಶೆಯೂ ಕಾಲಕಾಲಕ್ಕೆ ನಡೆಯುತ್ತದೆ. ಅಲ್ಲದೆ, ಭದ್ರತಾ ಏಜೆನ್ಸಿಗಳ ವೃತ್ತಿಪರ ಮೌಲ್ಯಮಾಪನವನ್ನು ಆಧರಿಸಿದೆ. ಹೀಗಾಗಿ ಯಾರಿಗೆ ಯಾವ ರೀತಿ ಭದ್ರತೆ ನೀಡಬೇಕೆಂದು ಭದ್ರತಾ ಏಜೆನ್ಸಿಗಳು ಚರ್ಚಿಸಿ ತೀರ್ಮಾನಿಸುತ್ತವೆ. ಡಾ.ಮನಮೋಹನ್ ಸಿಂಗ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಮುಂದುವರಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದರು.

    ಇದೇ ರೀತಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಮತ್ತು ವಿಪಿ ಸಿಂಗ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿ ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸದಿದ್ದರೂ ಸಹ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೃತಪಡುವರೆಗೂ ಎಸ್‍ಪಿಜಿ ಭದ್ರತೆ ನೀಡಲಾಗಿತ್ತು.

    ಎಸ್‍ಪಿಜಿಯಲ್ಲಿ 3 ಸಾವಿರಕ್ಕೂ ಅಧಿಕ ಸಿಬ್ಬಂದಿ ಇದ್ದಾರೆ. ಬೆದರಿಕೆ ಕರೆಗಳನ್ನು ಆಧರಿಸಿ ಪ್ರಧಾನಿ, ಮಾಜಿ ಪ್ರಧಾನಿ ಹಾಗೂ ಅವರ ಕುಟುಂಬದವರಿಗೆ ಈ ಭದ್ರತೆಯನ್ನು ನೀಡಲಾಗುತ್ತದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ ನಂತರ ಎಸ್‍ಪಿಜಿಯನ್ನು 1985ರಲ್ಲಿ ಸ್ಥಾಪಿಸಲಾಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ನಂತರ 1991ರಲ್ಲಿ ಎಸ್‍ಪಿಜಿ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಾಜಿ ಪ್ರಧಾನಿಗಳು ಹಾಗೂ ಅವರ ಕುಟುಂಬಕ್ಕೆ 10 ವರ್ಷಗಳ ಕಾಲ ಭದ್ರತೆ ನೀಡುವಂತೆ ನಿಯಮ ರೂಪಿಸಲಾಗಿದೆ.

  • ವೇದಿಕೆಯಲ್ಲೇ ಮಾಜಿ ಸಚಿವರಿಗೆ ಅವಮಾನ- ಎಚ್ ಆಂಜನೇಯ ಸ್ಪಷ್ಟನೆ

    ವೇದಿಕೆಯಲ್ಲೇ ಮಾಜಿ ಸಚಿವರಿಗೆ ಅವಮಾನ- ಎಚ್ ಆಂಜನೇಯ ಸ್ಪಷ್ಟನೆ

    ಚಿತ್ರದುರ್ಗ: ನಾನು ದಲಿತ ನಾಯಕನೂ ಹೌದು, ಕಾಂಗ್ರೆಸ್ ಮುಖಂಡನೂ ಹೌದು. ವೇದಿಕೆಯಲ್ಲಿದ್ದ ನಾಯಕರನ್ನು ಕರೆಯುವಂತೆ ಸಿದ್ದರಾಮಯ್ಯ ನನಗೆ ಸೂಚಿಸಿದರು ಅಷ್ಟೇ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ತಪ್ಪಾಗಿ ಬಿಂಬಿತವಾಗಿದೆ ಎಂದು ಮಾಜಿ ಸಚಿವ ಎಚ್ ಆಂಜನೇಯ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ಸಭೆಯ ವೇಳೆ ವೇದಿಕೆಯಲ್ಲಿ ಅವಮಾನ ಮಾಡಿದ ಬಗ್ಗೆ ಕೇಳಿದಾಗ ಆಂಜನೇಯ ಗರಂ ಆದರು. ನನ್ನ ಸ್ಪಷ್ಟನೆಯನ್ನು ಮಾಧ್ಯಮಗಳು ಪ್ರಕಟಿಸುತ್ತವೆಂಬ ನಂಬಿಕೆಯಿಲ್ಲ. ಅಲ್ಲಿ ಆಗಿದ್ದೇ ಬೇರೆ. ಆದರೆ ಮಾಧ್ಯಮಗಳಲ್ಲಿ ಪ್ರಚಾರ ಆಗಿರುವುದು ಬೇರೆಯಾಗಿದೆ. ಹೀಗಾಗಿ ಸ್ಪಷ್ಟನೆಯನ್ನು ಪ್ರಸಾರ ಮಾಡಿ ಎಂದು ಮಾಧ್ಯಮಗಳಿಗೆ ಆಂಜನೇಯ ಕಿಡಿಕಾರಿದರು.

    ನಾನು ದಲಿತ ನಾಯಕ ಹಾಗೂ ಕಾಂಗ್ರೆಸ್ ಮುಖಂಡನೂ ಹೌದು. ವೇದಿಕೆಯಲ್ಲಿದ್ದ ನಾಯಕರನ್ನು ಕರೆಯುವಂತೆ ಮಾಜಿ ಸಿಎಂ ನನಗೆ ಸೂಚಿಸಿದ್ದರು. ಆದ್ರೆ ಇದೀಗ ಅವರ ಸೂಚನೆ ತಪ್ಪಾಗಿ ಬಿಂಬಿತವಾಗಿದೆ ಎಂದು ಹೇಳಿದರು.

    ಮಾಜಿ ಸಿಎಂ ಸಿದ್ಧರಾಮಯ್ಯ ನನ್ನ ಏಳಿಗೆಗೆ ಸಹಕರಿಸುವ ನಾಯಕನಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವನಾಗಿದ್ದೆ. ಅವರು ನನ್ನ ಖಾತೆಯಲ್ಲಿ ನನಗೆ ಸರ್ವಾಧಿಕಾರ ನೀಡಿದರು ಅಂದ್ರು.

    ನಡೆದಿದ್ದೇನು?
    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚಿತ್ರದುರ್ಗದಲ್ಲಿ ಭಾಷಣ ಮಾಡುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವೇದಿಕೆಗೆ ಆಗಮಿಸಿದರು. ರಾಹುಲ್ ಗಾಂಧಿಯವರನ್ನು ತಬ್ಬಿಕೊಳ್ಳುವ ಭರದಲ್ಲಿ ಸಿಎಂ ಹಾಗೂ ಮಾಜಿ ಸಿಎಂ ಮಾಜಿ ಸಚಿವ ಆಂಜನೇಯರನ್ನು ಹಿಂದಕ್ಕೆ ತಳ್ಳಿದ ಘಟನೆ ನಡೆದಿತ್ತು.

    ವೇದಿಕೆಗೆ ಮಾಜಿ ಸಿಎಂ ಆಗಮಿಸುತ್ತಿದ್ದಂತೆ ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯನವರನ್ನು ತಬ್ಬಿಕೊಂಡರು. ಈ ವೇಳೆ ಕುಮಾರಸ್ವಾಮಿಯವರು ಸಹ ರಾಹುಲ್ ಬಳಿ ಬಂದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಮಾಜಿ ಸಚಿವ ಆಂಜನೇಯ ಅವರನ್ನು ತಳ್ಳಿ ವೇಣುಗೋಪಾಲ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕುಮಾರಸ್ವಾಮಿ ಹಾಗೂ ರಾಹುಲ್ ಗಾಂಧಿ ಎಲ್ಲರೂ ಒಂದಾಗಿ ಕೈ ಎತ್ತಿ ಬಲ ಪ್ರದರ್ಶನ ಮಾಡಿದರು. ಆಂಜನೇಯ ಅವರನ್ನು ತಳ್ಳುತ್ತಿದ್ದಂತೆ ಅವರು ಹಿಂದೆ ಸರಿದಿದ್ದರು.

    ಸಿದ್ದರಾಮಯ್ಯನವರು ಆಂಜನೇಯನವರಿಗೆ ತಳ್ಳುವ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಬರೆದು ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ್ದರು.

  • ಅಂಬಾನಿ ಜೇಬಿನಿಂದ ಬಡವರಿಗೆ ಹಣ: ರಾಹುಲ್ ಗಾಂಧಿ

    ಅಂಬಾನಿ ಜೇಬಿನಿಂದ ಬಡವರಿಗೆ ಹಣ: ರಾಹುಲ್ ಗಾಂಧಿ

    – ಮೋದಿ ಡೈಲಾಗ್ ಕೇಳಿ ಯುವಕರೆಲ್ಲಾ ಸುಸ್ತು
    – ಬಡ ಕುಟುಂಬದ ಮಹಿಳೆಯರ ಖಾತೆಗೆ ಹಣ
    – ಕಳ್ಳ ಯಾವತ್ತೂ ದೇಶ ಭಕ್ತನಾಗಲು ಸಾಧ್ಯವಿಲ್ಲ

    ಕೋಲಾರ: ಲೋಕಸಭಾ ಚುನಾವಣೆಯ ಭಾಷಣಗಳಲ್ಲಿ ಪ್ರಧಾನಿ ಮೋದಿ ಎಲ್ಲಿಯೂ ಉದ್ಯೋಗ ಖಾತ್ರಿ, ರೈತರ ಬಗ್ಗೆ ಮಾತನಾಡಿಲ್ಲ. 2014ರಲ್ಲಿ 15 ಲಕ್ಷ ರೂ. ಖಾತೆಗೆ ಹಾಕ್ತೀನಿ ಎಂದು ಹೇಳಿದವ್ರು ಎಲ್ಲಿಯೂ ತಮ್ಮ ಭಾಷಣದಲ್ಲಿ ಪ್ರಧಾನಿಗಳು ಉಲ್ಲೇಖಿಸಿಲ್ಲ. ಚೌಕಿದಾರ ಎಂದು ಹೇಳುವ ಮೋದಿ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

    ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸುಮಾರು ಆರು ತಿಂಗಳ ಹಿಂದೆ ನಮ್ಮ ಪಕ್ಷದ ಆರ್ಥಿಕ ತಜ್ಞರನ್ನು ಒಳಗೊಂಡ ಸಮಿತಿಯ ಸಭೆ ನಡೆಸಲಾಗಿತ್ತು. ಮೋದಿ 15 ಲಕ್ಷ ನೀಡ್ತೀನಿ ಅಂತಾ ಸುಳ್ಳು ಹೇಳಿದ್ದಾರೆ. ನಿಖರವಾಗಿ ರೈತರ ಖಾತೆಗೆ ಎಷ್ಟು ಹಣ ಹಾಕಬಹುದು ಎಂಬುದರ ಅಂಕಿ-ಅಂಶ ನೀಡಬೇಕೆಂದು ಕೇಳಿಕೊಂಡಿದ್ದೆ. ನಿಖರ ಅಂಕಿ ಅಂಶಗಳ ಪ್ರಕಾರ ಬಡ ಕುಟುಂಬಕ್ಕೆ ತಿಂಗಳಿಗೆ 6 ಸಾವಿರ, ವರ್ಷಕ್ಕೆ 72 ಸಾವಿರ ನೀಡಲು ಸಾಧ್ಯ ಎಂಬುವುದು ತಿಳಿದಿದೆ. ಅದೇ ಅಂಕಿ-ಅಂಶಗಳನ್ನು ನಿಮ್ಮ ಮುಂದಿಟ್ಟಿದ್ದೇವೆ. ಪ್ರತಿ ಬಡ ಕುಟುಂಬದ ಮಹಿಳಾ ಸದಸ್ಯರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು ಹೇಳಿದರು.

    ರಾಹುಲ್ ಭಾಷಣದ ಮುಖ್ಯಾಂಶಗಳು
    ನಮ್ಮ ‘ನ್ಯಾಯ’ಯೋಜನೆಗೆ ಹಣ ಅಂಬಾನಿಯಿಂದ ಬರಲಿದೆ. ಮೋದಿಯವರ ಗೆಳೆಯ ಅನಿಲ್ ಅಂಬಾನಿ ಜೇಬಿನಿಂದ ಬಡವರಿಗೆ ಕಾಂಗ್ರೆಸ್ ಹಣ ನೀಡಲಿದೆ. ಚೌಕಿದಾರ ನೂರಕ್ಕೆ ನೂರು ಕಳ್ಳನಾಗಿದ್ದು, ತಮ್ಮದೇ ಆದ ತಂಡವನ್ನು ಹೊಂದಿದ್ದಾರೆ. ನಿಮ್ಮ ಜೇಬಿನಲ್ಲಿರುವ ಹಣ ತೆಗೆದು ನೀರವ್ ಮೋದಿಗೆ ನೀಡಿದ್ರು. ಚೋಕ್ಸಿ, ಲಲಿತ್ ಮೋದಿ, ಸೇರಿದಂತೆ ಎಲ್ಲ ಕಳ್ಳರು ನಿಮ್ಮ ಹಣ ತೆಗೆದುಕೊಂಡು ವಿದೇಶಕ್ಕೆ ಹೋದರು.

    500 ಮತ್ತು 1 ಸಾವಿರ ರೂ. ನೋಟ್ ಅಮಾನ್ಯೀಕರಣಗೊಳಿಸಿ ಬಡವರು, ಸಣ್ಣ ವ್ಯಾಪಾರಸ್ಥರು ಬಿಸಿಲಿನಲ್ಲಿ ನಿಲ್ಲುವಂತೆ. ನರೇಂದ್ರ ಮೋದಿ ಕೇವಲ ಮನ್ ಕೀ ಬಾತ್ ಮಾಡುತ್ತಾರೆ. ನಮ್ಮದು ಕಾಮ್ ಕೀ ಬಾತ್. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಜಿಎಸ್‍ಟಿ ಸರಳೀಕರಣಗೊಳಿಸಲಾಗುವುದು. ಮೋದಿ ತಮ್ಮ ಎಲ್ಲ ಭಾಷಣಗಳಲ್ಲಿಯೂ ಹೊಸ ಹೊಸ ಭರವಸೆಗಳು ನೀಡುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ದೇಶದ ಯುವ ಜನತೆಗೆ ಏನು ಮಾಡಿದ್ದೀರಿ ಎಂಬುದನ್ನು ನೀವು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ರೈತರು ಜೈಲಿಗೆ ಹೋಗಲ್ಲ:
    ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ನೀವು ಏನು ಮಾಡಿದ್ದೀರಿ ಎಂಬುದನ್ನು ತಿಳಿಸಬೇಕು. ಅಂಬಾನಿಯನ್ನು ಆಲಿಂಗನ ಮಾಡಿಕೊಂಡು ಫೋಟೋ ತೆಗೆದುಕೊಳ್ಳುವ ನೀವು ರೈತರನ್ನು ಮಾತನಾಡಿಸಲ್ಲ ಯಾಕೆ? ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರೈತರಿಗಾಗಿ ಸಂಸತ್ ನಲ್ಲಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಾಗುವುದು. ಅಧಿಕಾರಕ್ಕೆ ಬಂದ ಕೂಡಲೇ ನಿಮ್ಮ ಕಾಂಗ್ರೆಸ್ ಸರ್ಕಾರ ಮೊದಲ ಬಜೆಟ್ ನಲ್ಲಿ ತಿಳಿಸಲು ಪ್ರಯತ್ನಿಸುತ್ತೆವೆ. ರೈತರನ್ನು ಭಯಮುಕ್ತರನ್ನಾಗಿ ಮಾಡಲು ನಾವು ಕೆಲಸ ಮಾಡಲಿದ್ದೇವೆ. ಅನಿಲ್ ಅಂಬಾನಿಯಂತಹ ಉದ್ಯಮಿ ಸಾಲ ಪಡೆದರೂ ಹಣ ಮರುಪಾವತಿ ಮಾಡಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸಾಲ ಮರುಪಾವತಿ ಮಾಡದ ರೈತ ಜೈಲಿಗೆ ಹೋಗಲ್ಲ ಎಂದು ಕಾಂಗ್ರೆಸ್ ಭರವಸೆ ನೀಡುತ್ತಿದೆ.

    ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವು ಘೋಷಣೆಗಳನ್ನು ಕೇಳಿ ಯುವಕರು ಸುಸ್ತಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಖಾಲಿ ಇರುವ ಎಲ್ಲ ಕೇಂದ್ರ ಸರ್ಕಾರದ ಹುದ್ದೆಗಳನ್ನು ಭರ್ತಿ ಮಾಡುತ್ತವೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಸುಳ್ಳು ಹೇಳಿದ್ದರು. ಪ್ರತಿ ಬಡವರ ಖಾತೆಗೆ ಹಣ ಹಾಕಲು ನಾವು ಬದ್ಧವಾಗಿದ್ದೇವೆ. ಕಳ್ಳ ಯಾವತ್ತೂ ದೇಶ ಭಕ್ತನಾಗಲು ಸಾಧ್ಯವಿಲ್ಲ.

  • ದೋಸ್ತಿ ಸರ್ಕಾರದಿಂದ ಸಿದ್ದರಾಮಯ್ಯ ಕಡೆಗಣನೆ!

    ದೋಸ್ತಿ ಸರ್ಕಾರದಿಂದ ಸಿದ್ದರಾಮಯ್ಯ ಕಡೆಗಣನೆ!

    ಬೆಂಗಳೂರು: ದೋಸ್ತಿ ಸರ್ಕಾರದ ಇಂದಿನ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಡೆಗಣಿಸಲಾಗಿದ್ಯಾ ಎನ್ನುವ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    ಇಂದು ಬೆಂಗಳೂರು ಹೊರವಲಯ ನೆಲಮಂಗಲ ಸಮೀಪ ಇರುವ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ದೋಸ್ತಿಗಳು ಜಂಟಿಯಾಗಿ ಬೃಹತ್ ಸಮಾವೇಶವನ್ನು ಆಯೋಜಿಸಿವೆ. ಈ ಕುರಿತು ಹಾಕಲಾದ ಬ್ಯಾನರ್, ಫ್ಲೆಕ್ಸ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಲ್ಲ. ಹೀಗಾಗಿ ಅವರನ್ನು ಕಡೆಗಣಿಸಿದ್ದಾರಾ ಅಥವಾ ಬೇಕಂತಲೇ ಅವರ ಫೋಟೋ ಹಾಕಿಲ್ವಾ ಅನ್ನೋ ಅನುಮಾನ ಮೂಡಿದೆ.

    ಮಾದಾವರದ ಬಿಐಇಸಿ ಮೈದಾನದಲ್ಲಿ ಹಾಕಿರುವ ಯಾವುದೇ ಫ್ಲೆಕ್ಸ್ ನಲ್ಲಿ ಸಿದ್ದರಾಮಯ್ಯನವರ ಫೋಟೋ ಕಾಣಿಸುತ್ತಿಲ್ಲ. ಹೀಗಾಗಿ ಈ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯರನ್ನು ಡಮ್ಮಿ ಎಂದು ಬಿಂಬಿಸುವ ಪ್ರಯತ್ನ ನಡೀತಿದ್ಯಾ ಅನ್ನೋ ಪ್ರಶ್ನೆ ಕೂಡ ಕಾಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನ ಭಾವಚಿತ್ರ ಹಾಕದೇ ಇರಲು ಯಾರಾದ್ರೂ ಖಡಕ್ ಸೂಚನೆ ಕೊಟ್ಟಿದ್ದಾರಾ ಅಥವಾ ಕಣ್ತಪ್ಪಿನಿಂದ ಈ ಎಡವಟ್ಟು ಆಗಿದೆಯಾ ಎಂದು ಅಲ್ಲಿನ ಜನಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ.

    ಒಟ್ಟಿನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂದಿ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರಧಾನಿ ಮೋದಿ ವಿರುದ್ಧ ಘರ್ಜಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 5 ಲಕ್ಷ ಕಾರ್ಯಕರ್ತರು ಬರುವ ನಿರೀಕ್ಷೆ ದೋಸ್ತಿ ಸರ್ಕಾರಕ್ಕಿದೆ.