Tag: raichur crime

  • ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನೇ ಮುಗಿಸಿದ ಪತ್ನಿ

    ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನೇ ಮುಗಿಸಿದ ಪತ್ನಿ

    ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ.

    ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್ (38) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿ, ಉಸಿರು ಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಂದಿಗೆ ಮೃತನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳು. ಇದೇ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದನ್ನೂ ಓದಿ: ಡಬಲ್‌ ಮರ್ಡರ್‌ ಕೇಸ್‌ – ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ!

    ಈ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪತ್ನಿ ಸ್ನೇಹಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮೋದಿ ಹೆಸರಲ್ಲಿ 5,000 ರೂ. – ಮೆಸೇಜ್ ಕ್ಲಿಕ್ ಮಾಡೋ ಮುನ್ನ ಎಚ್ಚರ

  • ಜೂಜು, ಕುಡಿತ ಚಟಕ್ಕೆ ಬಿದ್ದು ಮನೆ ಮಾರೋಕೆ ಮುಂದಾಗಿ ತಾಯಿ, ಅಕ್ಕನಿಂದಲೇ ಕೊಲೆಯಾದ

    ಜೂಜು, ಕುಡಿತ ಚಟಕ್ಕೆ ಬಿದ್ದು ಮನೆ ಮಾರೋಕೆ ಮುಂದಾಗಿ ತಾಯಿ, ಅಕ್ಕನಿಂದಲೇ ಕೊಲೆಯಾದ

    ರಾಯಚೂರು: ಜೂಜು, ಕುಡಿತದ ಚಟಕ್ಕೆ ಬಿದ್ದು ಸಾಲ ಮಾಡಿ, ತೀರಿಸಲಾಗದೇ ಮನೆ ಮಾರಾಟಕ್ಕಿಟ್ಟಿದ್ದ ಎಂದು ತಾಯಿ ಸೇರಿದಂತೆ ಸಂಬಂಧಿಕರೇ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.

    ಅಮರೇಶ್ (43) ಕೊಲೆಯಾದ ವ್ಯಕ್ತಿ. ಮದ್ಯ ವ್ಯಸನದ ಜೊತೆ ಇಸ್ಪೀಟ್ ಶೋಕಿಗೆ ಬಿದ್ದು, ಸಾಲ ತೀರಿಸಲು ಮನೆ ಮಾರಾಟಕ್ಕೆ ಯತ್ನಿಸಿದ್ದ ಹಿನ್ನೆಲೆ ಮನೆಯವರೊಂದಿಗೆ ಜಗಳ ನಡೆದಿದೆ. ತಾಯಿ, ಅಕ್ಕ, ಭಾವ ಸೇರಿಕೊಂಡು ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ತಾಯಿ ಲಕ್ಷ್ಮೀ, ಅಕ್ಕ ನಿರ್ಮಲಾ ಹಾಗೂ ಭಾವ ಸಂತೋಷ್ ಈ ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ವಾರ್ಡನ್‍ನಿಂದ ಮತಾಂತರ ಕಿರುಕುಳ – ವಿದ್ಯಾರ್ಥಿನಿ ಆತ್ಮಹತ್ಯೆ

    ಕೊಡಲಿಯಿಂದ ತಲೆಗೆ ಹೊಡೆದು, ಕತ್ತಿಗೆ ಹಗ್ಗದಿಂದ ಬಿಗಿದು ಕೊಲೆ ಮಾಡಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಸಿರವಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತ‌ ಅಮರೇಶ್ ಪತ್ನಿ ಸೌಭಾಗ್ಯ ಸಿರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಅಮರೇಶ್ ಕೆಲಸಕ್ಕೆ ಹೋಗದೇ ಮನೆಯಲ್ಲಿ ಪ್ರತಿದಿನ ಗಲಾಟೆ ಮಾಡುತ್ತಿದ್ದ. ಗಂಡ ದುಡಿಯುವುದಿಲ್ಲ ಅಂತ ಪತ್ನಿ ಸೌಭಾಗ್ಯ ತವರು ಸೇರಿದ್ದಳು. ಇಸ್ಪೀಟ್ ಹಾಗೂ ಮದ್ಯದ ಚಟಕ್ಕೆ ಸಾಲ ಹೆಚ್ಚಾಗಿತ್ತು. ಹೀಗಾಗಿ ಸಾಲ ತೀರಿಸಲು ಮನೆ ಮಾರಾಟಕ್ಕೆ ಅಮರೇಶ್ ಮುಂದಾಗಿದ್ದ. ಇದೇ ವಿಚಾರವಾಗಿ ತಡರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಎಳೆದೊಯ್ದು ಅತ್ಯಾಚಾರ ಮಾಡಿದ್ರು

    ಆರೋಪಿಗಳು ಮೃತದೇಹವನ್ನು ಮನೆಯಿಂದ ಹೊರಗೆ ಬೀಸಾಡಿದ್ದರು. ಬೆಳಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.