Tag: Raichur murder case

  • ಮೊಬೈಲ್ ಕೊಳ್ಳಲು ಹಣಕ್ಕಾಗಿ ತಾತನನ್ನೇ ಕೊಲೆಗೈದ ಮೊಮ್ಮಗ!

    ಮೊಬೈಲ್ ಕೊಳ್ಳಲು ಹಣಕ್ಕಾಗಿ ತಾತನನ್ನೇ ಕೊಲೆಗೈದ ಮೊಮ್ಮಗ!

    ರಾಯಚೂರು: ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ನವೆಂಬರ್ 21 ರಂದು ನಡೆದಿದ್ದ ಕೊಲೆ ಪ್ರಕರಣವನ್ನು 40 ಗಂಟೆಯೊಳಗೆ ಭೇದಿಸಿರುವ ಪೊಲೀಸರು, ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.

    ನಿವೃತ್ತ ಶಿರಸ್ತೇದಾರ ಪಂಪಾಪತಿ ‌(77) ಕೊಲೆಯಾದ ವ್ಯಕ್ತಿ. ಮೃತರ ಅಣ್ಣನ ಮೊಮ್ಮಗ ಹಾಗೂ ಆತನ ಸ್ನೇಹಿತ ಹಣಕ್ಕಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಹಣ, ಒಡವೆಗಳಿಗಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಾದ ಅಖಿಲೇಶ್ ಹಾಗೂ ಗೌತಮ್ ಬಂಧಿಸಲಾಗಿದೆ. ಮೊಬೈಲ್ ಕೊಳ್ಳಲು ಹಣಕ್ಕಾಗಿ ಒತ್ತಾಯಿಸಿ ಹಣ ಕೊಡದಿದ್ದಕ್ಕೆ ಕಳ್ಳತನ ಮಾಡಿದ್ದರು. ಕಳ್ಳತನಕ್ಕೆ ಅಡ್ಡಿಪಡಿಸಿದ್ದಕ್ಕೆ ಕೊಲೆ ಮಾಡಿ ಪರಾರಿಯಾಗಿದ್ದರು. 50 ಸಾವಿರ ರೂ. ನಗದು, 1 ಲಕ್ಷ 23 ಸಾವಿರ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

    ಅಖಿಲೇಶ್ ಕೊಲೆಯಾದ ಪಂಪಾಪತಿಯ ಅಣ್ಣನ ಮೊಮ್ಮಗ. ಎರಡನೇ ಆರೋಪಿ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಗೌತಮ್ ಅಖಿಲೇಶನ ಸ್ನೇಹಿತ. ಆರೋಪಿಗಳಿಬ್ಬರು ರಾಯಚೂರಿನ ರಾಂಪೂರ ನಿವಾಸಿಗಳಾಗಿದ್ದಾರೆ. ಸ್ವಂತ ಮಕ್ಕಳಿಲ್ಲದ ಪಂಪಾಪತಿ ಪತ್ನಿ ಜೊತೆ ನಿಜಲಿಂಗಪ್ಪ ಕಾಲೋನಿಯಲ್ಲಿ ವಾಸವಾಗಿದ್ದರು. ಸಂಬಂಧದಲ್ಲಿ ಮೊಮ್ಮಗನಾಗಿದ್ದ ಅಖಿಲೇಶ್ ಪಂಪಾಪತಿಯೊಂದಿಗೆ ಉತ್ತಮ ಒಡನಾಟ ಹೊಂದಿದ್ದ. ಆದರೆ ಹಣಕ್ಕಾಗಿ ಸ್ನೇಹಿತನ ಜೊತೆಗೂಡಿ ತಾತನನ್ನೇ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

    ಈ ಸಂಬಂಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಪ್ರಕರಣ ತನಿಖೆಗೆ ಡಿವೈಎಸ್‌ಪಿ ಶಿವನಗೌಡ ಪಾಟೀಲ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಬಂಧಿತರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ರಾಯಚೂರು ತ್ರಿವಳಿ ಕೊಲೆ ಆರೋಪಿ ಹೈದ್ರಾಬಾದ್‍ನಲ್ಲಿ ಸೆರೆ

    ರಾಯಚೂರು ತ್ರಿವಳಿ ಕೊಲೆ ಆರೋಪಿ ಹೈದ್ರಾಬಾದ್‍ನಲ್ಲಿ ಸೆರೆ

    ರಾಯಚೂರು: ನಗರದ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಸಾಯಿ ಅಲಿಯಾಸ್ ಸೌರಭ್ ಹೈದ್ರಾಬಾದ್‍ನಲ್ಲಿ ಸೆರೆಸಿಕ್ಕಿದ್ದಾನೆ. ಸೆಪ್ಟೆಂಬರ್ 29ರಂದು ಒಂದೇ ಕುಟುಂಬದ ಮೂವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಹೈದ್ರಾಬಾದ್, ವಿಜಯವಾಡದಲ್ಲಿ ಓಡಾಡಿಕೊಂಡಿದ್ದ ಆರೋಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ.

    ಪತ್ನಿ, ಅತ್ತೆ, ಪತ್ನಿ ತಂಗಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಸಂತೋಷಿ, ವೈಷ್ಣವಿ ಮತ್ತು ಆರತಿ ಎಂಬುವವರ ಕೊಲೆಯಾಗಿತ್ತು. ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎರಡು ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಇದನ್ನೂ ಓದಿ: ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅಂದರ್

    ರೌಡಿಶೀಟರ್ ಆಗಿರುವ ಸಾಯಿ ವಿರುದ್ಧ ಹೈದ್ರಾಬಾದ್ ನ ವಿವಿಧ ಠಾಣೆಗಳಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಕೊಲೆ ಪ್ರಕರಣದಲ್ಲಿ ಆರೋಪಿಯ ಇಬ್ಬರು ಸ್ನೇಹಿತರು ಭಾಗಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿ ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ತಿಳಿಸಿದ್ದಾರೆ.