Tag: raila odinga

  • ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

    ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

    ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ (Kenya) ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಸ್ತಂಭನದಿಂದ (Cardiac Arrest) ಇಂದು ಮುಂಜಾನೆ ನಿಧನರಾಗಿದ್ದಾರೆ.

    80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ (Ayurvedic Treatment) ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. ಇದನ್ನೂ ಓದಿ: ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

  • ಭಾರತದ ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಿಲು ಕೀನ್ಯಾ ಮಾಜಿ ಪ್ರಧಾನಿ ಮನವಿ

    ಭಾರತದ ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಿಲು ಕೀನ್ಯಾ ಮಾಜಿ ಪ್ರಧಾನಿ ಮನವಿ

    ನೈರೋಬಿ: ಭಾರತದ ಆಯುರ್ವೇದ ಚಿಕಿತ್ಸೆಗೆ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಮಾರು ಹೋಗಿದ್ದಾರೆ. ಇವರ ಪುತ್ರಿಗೆ ಕೇರಳದಲ್ಲಿ ನೀಡಿರುವ ಕಣ್ಣಿನ ಚಿಕಿತ್ಸೆಯಿಂದ ದೃಷ್ಟಿ ಬಂದಿದೆ. ಹೀಗಾಗಿ ಇವರು ಒಂದು ಉತ್ತಮ ನಿರ್ಧಾರವನ್ನು ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಅವರು, ಆಯುರ್ವೇದ ಶಕ್ತಿಯಿಂದ ನನ್ನ ಮಗಳು ಮರಳಿ ದೃಷ್ಟಿ ಪಡೆದಿದ್ದಾಳೆ. ಈ ಅಮೂಲ್ಯ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಬೇಕು. ಇಲ್ಲಿನ ಔಷಧಿ ಸಸ್ಯಗಳನ್ನು ಬೆಳೆಯಲು ಪೂರಕ ವಾತಾವರಣವಿದೆ. ಈ ಮೂಲಕ ವಿಶ್ವದ ಆರೋಗ್ಯ ಸಮಸ್ಯೆಗೆ ಭಾರತದ ಆಯುರ್ವೇದ ಚಿಕಿತ್ಸೆ ಮೂಲಕ ಶಾಶ್ವತ ಪರಿಹಾರ ನೀಡಬೇಕು ಎಂದು ರೈಲಾ ಒಡಿಂಗಾ, ಮೋದಿ ಭೇಟಿಯಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    2017ರಲ್ಲಿ ಟ್ಯೂಮರ್ ಆರೋಗ್ಯ ಸಮಸ್ಯೆಗೆ ತುತ್ತಾದ ರೋಸಮೇರೆ ಕಣ್ಣಿನ ದೃಷ್ಟಿ ಕಳೆದೆಕೊಂಡರು. ಬಳಿಕ ಆಫ್ರಿಕಾ, ಜರ್ಮನಿ, ಇಸ್ರೇಲ್, ಚೀನಾ ಸೇರಿದಂತೆ ಕೆಲ ದೇಶಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿರುವ ಶ್ರೀಧಾರೀಯಂ ಆಯುರ್ವೇದ ಕಣ್ಣಿ ಆಸ್ಪತ್ರೆ ಕುರಿತು ಮಾಹಿತಿ ಪಡೆದು ನೇರವಾಗಿ ಕೇರಳಕ್ಕೆ ಆಗಮಿಸಿ ಚಿಕಿತ್ಸೆ ಪಡೆದಿದ್ದಾರೆ. ಪರಿಣಾಮ ರೋಸಮೇರಿ ಇದೀಗ ಬಹುತೇಕ ಕಣ್ಣಿನ ದೃಷ್ಟಿ ಪಡೆದಿದ್ದಾರೆ. ಓದಲು ಸಾಧ್ಯವಾಗುತ್ತಿದೆ ಎಂದು ರೈಲಾ ಒಡಿಂಗಾ ಹೇಳಿದ್ದಾರೆ.   

    ರೋಸಮೆರಿ ಒಡಿಂಗಾ 2019ರಿಂದ ಶ್ರೀಧಾರೀಯಂ ಆಯುರ್ವೇದಾ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2019ರಲ್ಲಿ ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದ ರೋಸಮೇರಿ, ಸತತ ಚಿಕಿತ್ಸೆಯಿಂದ ಮರಳಿ ದೃಷ್ಟಿ ಪಡೆದಿದ್ದಾರೆ. ನನಗೆ ಓದಲು ಸಾಧ್ಯವಾಗುತ್ತಿದೆ. ಫೋನ್ ರಿಸೀವ್ ಮಾಡಲು ಸಾಧ್ಯವಾಗುತ್ತಿದೆ. ಇದಕ್ಕಿಂತ ಸಂತಸ ಇನ್ನೇನು ಬೇಕು. ನಾನು ಕೇರಳದ ಶ್ರೀಧಾರೀಯಂ ಆಯುರ್ವೇದ ಕಣ್ಣಿ ಆಸ್ಪತ್ರೆಗೆ ಆಭಾರಿಯಾಗಿದ್ದೇನೆ ಎಂದು ರೋಸಮೇರಿ ಹೇಳಿದ್ದಾರೆ.