Tag: Railway Interlock System

  • ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ – ಪೊಲೀಸರಿಂದ ಖಡಕ್ ಎಚ್ಚರಿಕೆ

    ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ – ಪೊಲೀಸರಿಂದ ಖಡಕ್ ಎಚ್ಚರಿಕೆ

    ಭುವನೇಶ್ವರ: ಒಡಿಶಾ ರೈಲು ದುರಂತಕ್ಕೆ (Odisha Train Accident) ಕೋಮು ಬಣ್ಣ (Communal Colour) ನೀಡುವವರ ವಿರುದ್ಧ ಒಡಿಶಾ ಪೊಲೀಸರು ಭಾನುವಾರ ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಬಾಲಸೋರ್ ಅಪಘಾತದ ಕುರಿತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಹರಡುತ್ತಿದ್ದಾರೆ. ಇದು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಿಚಾರವಾಗಿದೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು

    ಪ್ರಾಥಮಿಕ ತನಿಖೆಯಲ್ಲಿ ಅಪಘಾತದ ಟ್ರ್ಯಾಕ್ ಮ್ಯಾನೇಜ್‍ಮೆಂಟ್ ಸಿಸ್ಟಮ್‍ನಲ್ಲಿನ ವೈಫಲ್ಯ ಇರುವುದು ಗೊತ್ತಾಗಿದೆ. ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ ಸಿಸ್ಟಮ್ (Railway Interlock System) ಸಮಸ್ಯೆ ಅವಘಡಕ್ಕೆ ಕಾರಣವಾಗಿರಬಹುದು. ತನಿಖೆ ಪೂರ್ಣಗೊಂಡ ಬಳಿಕ ಸ್ಪಷ್ಟವಾದ ಕಾರಣ ತಿಳಿದು ಬರಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ.

    ಈ ಹಿಂದೆ ಇಂಟರ್‌ಲಾಕಿಂಗ್‌  ಸಮಸ್ಯೆಯ ವರದಿ ನೀಡಿಯೂ ಸಹ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ದಾರೆ. ರೈಲ್ವೇ ಹಳಿಗಳ ತಪಾಸಣೆಯಲ್ಲಿನ ಕೊರತೆ, ಆದ್ಯತೆಯ ಕಾರ್ಯಗಳಿಗೆ ಮೀಸಲಾದ ರೈಲ್ವೆ ನಿಧಿಯನ್ನು ಬಳಸಿಲ್ಲ. ಈ ಕಾರಣಗಳು ಅವಘಡಕ್ಕೆ ಕಾರಣವಾಗಿರುವ ಸಾಧ್ಯತೆಗಳಿದೆ ಎಂಬ ಆರೋಪಗಳು ಕೇಳಿಬಂದಿವೆ. ಶುಕ್ರವಾರ ಸಂಭವಿಸಿದ್ದ ದುರಂತದಲ್ಲಿ 275 ಜನ ಸಾವಿಗೀಡಾಗಿದ್ದರು. 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

  • ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    – ಏನಿದು ಇಂಟರ್‌ಲಾಕ್ ಸಿಸ್ಟಮ್?

    ನವದೆಹಲಿ: ಒಡಿಶಾ ರೈಲು ದುರಂತದ (Odisha Train Accident) ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಪೂರೈಸಿದ್ದು, ವರದಿ ನೀಡಿದ್ದಾರೆ. ಇಂಟರ್‌ಲಾಕ್ ಸಿಸ್ಟಮ್ (Railway Interlock System) ಸಮಸ್ಯೆಯಿಂದಾಗಿ ಒಡಿಶಾ ರೈಲು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

    ಈ ಬಗ್ಗೆ ಕಿರಿಯ ಅಧಿಕಾರಿಗಳು ಫೆಬ್ರವರಿ 9 ರಂದು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ. ಇದರಿಂದಾಗಿ ತೊಂದರೆ ಸಂಭವಿಸಿರುವ ಸಾಧ್ಯತೆಗಳ ಬಗ್ಗೆ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು

    ಅಪಘಾತ ಸ್ಥಳದಿಂದ ಎಲ್ಲಾ ಮೃತದೇಹಗಳನ್ನು ತೆಗೆದುಹಾಕಲಾಗಿದೆ. ಬುಧವಾರ ಬೆಳಿಗ್ಗೆಯಿಂದ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಭೀಕರ ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದರು. ದೇಶದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಇದು ಒಂದಾಗಿದೆ. ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರನ್ನು ಬಾಲಸೋರ್‍ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

    ಏನಿದು ಇಂಟರ್‌ಲಾಕ್ ಸಿಸ್ಟಮ್?
    ರೈಲು ಯಾವ ನಿಲ್ದಾಣಕ್ಕೆ ಯಾವ ಟ್ರ್ಯಾಕ್ ಮೂಲಕ ಹೋಗಬೇಕೆಂದು ಇಂಟರ್‌ಲಾಕ್ ಸಿಸ್ಟಮ್ ಮೂಲಕ ನಿರ್ಧಾರ ಮಾಡಲಾಗುತ್ತದೆ. ಮಾರ್ಗ ಬದಲಾವಣೆಯನ್ನು ಸಹ ಇಂಟರ್‌ಲಾಕ್ ಸಿಸ್ಟಮ್ ಮೂಲಕವೇ ಮಾಡಲಾಗುತ್ತದೆ. ಹಳಿಯಿಂದ ಹಳಿಗೆ ರೈಲು ಸಂಚಾರ ಮಾರ್ಗವನ್ನು ಬದಲಾಯಿಸಲು ಇಂಟರ್‌ಲಾಕ್ ಸಿಸ್ಟಮ್ ಕೆಲಸ ನಿರ್ವಹಿಸುತ್ತದೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ