Tag: Railway Protection Force

  • ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತು 290 ಕಿಮೀ ಪಯಣಿಸಿದ ಭೂಪ

    ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತು 290 ಕಿಮೀ ಪಯಣಿಸಿದ ಭೂಪ

    – ಜಬಲ್ಪುರದಲ್ಲಿ ಗಾಲಿಗಳನ್ನು ಪರಿಶೀಲಿಸುವಾಗ ಯುವಕನನ್ನು ವಶಕ್ಕೆ ರೈಲ್ವೇ ಪೊಲೀಸರು

    ಭೋಪಾಲ್: ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 290 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಇಟಾರ್ಸಿಯಿಂದ (Itarsi) ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 290 ಕಿ.ಮೀ ಪ್ರಯಾಣಿಸಿದ್ದಾನೆ.ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ದಾನಪುರ್ ಎಕ್ಸಪ್ರೆಸ್‌ (Danapur Express) ರೈಲಿನಲ್ಲಿ ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದ ಕಾರಣ ಬೋಗಿಯ ಕೆಳಗೆ ಅವಿತುಕೊಂಡು ಕುಳಿತಿದ್ದಾನೆ. ಜಬಲ್ಪುರ (Jabalapur) ರೈಲು ನಿಲ್ದಾಣದ ಬಳಿ ಕ್ಯಾರೇಜ್ ಮತ್ತು ವ್ಯಾಗನ್ ಇಲಾಖೆ ಸಿಬ್ಬಂದಿ ನಡೆಸಿದ ರೋಲಿಂಗ್ ಪರೀಕ್ಷೆ ವೇಳೆ ವ್ಯಕ್ತಿಯೊಬ್ಬ ಅಡಗಿಕೊಂಡಿರುವುದು ಪತ್ತೆಯಾಗಿದೆ.

    ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಇಟಾರ್ಸಿಯಲ್ಲಿ ತಾನು ರೈಲು ಹತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಟಿಕೆಟ್ ಖರೀದಿಸಲು ಹಣವಿಲ್ಲದ ಕಾರಣ, ರೈಲಿನ ಚಕ್ರಗಳ ನಡುವೆ ಪ್ರಯಾಣಿಸುವುದು ಸೂಕ್ತವೆನಿಸಿತು ಎಂದು ತಿಳಿಸಿದ್ದಾನೆ. ತಕ್ಷಣವೇ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯನ್ನು ಕರೆಸಲಾಯಿತು. ಆದರೆ ಆ ವ್ಯಕ್ತಿ ರೈಲಿನ ಕೆಳಗೆ ಹೇಗೆ ಅಡಗಿ ಕುಳಿತನು ಎನ್ನುವ ಕುರಿತು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಬೋಗಿಯಿಂದ ಕೆಳಗಿನಿಂದ ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ – ರಾತ್ರಿ 11 ಗಂಟೆ ಬಳಿಕ ಎಂ.ಜಿ ರಸ್ತೆಯಿಂದ ಸಂಚಾರ ಬಂದ್‌

  • ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಭೋಪಾಲ್: ಜಮ್ಮು ಮತ್ತು ಕಾಶ್ಮೀರದಿಂದ (Jammu And Kashmir) ಕರ್ನಾಟಕಕ್ಕೆ (Karnataka) ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಯತ್ನಿಸಲಾಗಿತ್ತು. ಇದೀಗ ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ.

    ರೈಲ್ವೆ ಸಿಬ್ಬಂದಿ ಶಬೀರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಮಧ್ಯಪ್ರದೇಶದ (Madhyapradesh) ಬುರ್ಹಾನ್‌ಪುರ (Burhanpur) ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ರೈಲ್ವೆ ರಕ್ಷಣಾ ಪಡೆ (Railway Protection Force) ವಶಕ್ಕೆ ಪಡೆದುಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದವು. ವಶಕ್ಕೆ ಪಡೆದ ಶಬೀರ್ ವಿರುದ್ಧ ರೈಲಿನ ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಕದ್ದಿದ್ದಕ್ಕಾಗಿ ಕೇಸ್ ದಾಖಲಿಸಲಾಗಿದೆ.

    ಏನಿದು ಘಟನೆ?
    ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಸೇನೆಯ ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿತ್ತು.

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.

    ರೈಲು ಡಿಟೋನೇಟರ್‌ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದರು. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ರೈಲ್ವೇ ಇಲಾಖೆ ಕೆಟ್ಟ ಹೆಸರು ತರಲು ಯತ್ನಿಸಿ ಸಿಕ್ಕಿಬಿದ್ದ ವೃದ್ಧ

    ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ರೈಲ್ವೇ ಇಲಾಖೆ ಕೆಟ್ಟ ಹೆಸರು ತರಲು ಯತ್ನಿಸಿ ಸಿಕ್ಕಿಬಿದ್ದ ವೃದ್ಧ

    ನವದೆಹಲಿ: ಭಾರತೀಯ ರೈಲ್ವೇಗೆ ಕೆಟ್ಟ ಹೆಸರು ತರಲು ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ಸುಳ್ಳು ದೂರು ನೀಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಸುರೇಂದ್ರ ಪಾಲ್ (70) ಆಹಾರದಲ್ಲಿ ಹಲ್ಲಿ ಬಿದ್ದಿದೆ ಎಂದು ಕಳ್ಳಾಟ ಆಡುತ್ತಿದ್ದ ವೃದ್ಧ. ರೈಲಿನಲ್ಲಿ ಉಚಿತ ಊಟ ಪಡೆಯುವ ಉದ್ದೇಶದಿಂದ ಸುರೇಂದ್ರ ಪಾಲ್ ಹೀಗೆ ಸುಳ್ಳ ಹೇಳಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

    ಗುಂಟ್ಕಲ್ ನಿಲ್ದಾಣದಲ್ಲಿ ಖರೀದಿಸಿದ್ದ ವೆಜ್ ಬಿರಿಯಾನಿಯಲ್ಲಿ ಹಲ್ಲಿ ಪತ್ತೆಯಾಗಿದೆ. ಅದನ್ನು ಸೇವಿಸಿದ ನಂತರ ಅನಾರೋಗ್ಯಕ್ಕೆ ತುತ್ತಾಗಿದ್ದೇನೆ ಎಂದು ಸುರೇಂದ್ರ ಪಾಲ್ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ದೂರಿದ್ದ. ತಕ್ಷಣವೇ ಆತನನ್ನು ರೈಲ್ವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

    ವೃದ್ಧನ ನಡೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರೊಬ್ಬರು ಪಾಲ್ ಪ್ರಕರಣ ಎತ್ತಿಕೊಂಡಿದ್ದರು. ಬಳಿಕ ವಿವಿಧ ವಿಭಾಗಗಳಲ್ಲಿ ವರದಿಯಾದ ಇತರ ಪ್ರಕರಣಗಳನ್ನು ಹೋಲಿಕೆಯನ್ನು ಗಮನಿಸಿದರು. ತೀರಾ ಇತ್ತೀಚಿಗೆ ಜಬಲ್ಪುರದಲ್ಲಿ ವರದಿಯಾಗಿತ್ತು.

    ಜಬಲ್ಪುರಕ್ಕೆ ಸಂಪರ್ಕಿಸಿದಾಗ ಅಲ್ಲಿನ ಅಧಿಕಾರಿಗಳು, ತಮ್ಮ ಸಮೋಸಾದಲ್ಲಿ ಹಲ್ಲಿ ಸಿಕ್ಕಿತ್ತು ಎಂದು ದೂರಿದ್ದ ವ್ಯಕ್ತಿಯ ಫೋಟೋವನ್ನು ಕಳುಹಿಸಿದರು. ಅದು ಸುರೇಂದ್ರ ಪಾಲ್‍ದೆ ಆಗಿತ್ತು. ಮಿರಾಜ್ ನಿಲ್ದಾಣದಲ್ಲಿಯೂ ಪಾಲ್, ಇಡ್ಲಿಯಲ್ಲಿ ಬ್ಲೇಡ್ ಬಂದಿತ್ತು ಅಂತ ಹೇಳಿಕೊಂಡಿದ್ದ ಎಂದು ಪುಣೆ ವಿಭಾಗವು ಮಾಹಿತಿ ನೀಡಿತು. ಅಷ್ಟೇ ಅಲ್ಲದೆ ಇತರ ಎರಡು ಪ್ರಕರಣಗಳಲ್ಲಿ, ಪಾಲ್ ಅಂಗಡಿ ಮಾಲೀಕರಿಗೆ ದೂರು ನೀಡಿ ಬೆದರಿಕೆ ಹಾಕಿದ್ದು ಮತ್ತು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದ ವಿಚಾರಗಳು ಬೆಳಕಿಗೆ ಬಂದಿವೆ.

    ರೈಲ್ವೇ ಇಲಾಖೆಗೆ ಕೆಟ್ಟ ಹೆಸರು ತಂದಿದ್ದಕ್ಕೆ ಪಾಲ್‍ನನ್ನು ಶಿಕ್ಷಿಸಲಾಯಿತು. ಆದರೆ ಪಾಲ್, ತನ್ನ ಮಾರ್ಗಗಳನ್ನು ಬದಲಾಯಿಸುವ ಭರವಸೆ ನೀಡಿದ್ದಾನೆ. ಹೀಗಾಗಿ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

    ತಪ್ಪು ಕೆಲಸ ಮಾಡಿದ್ದೇನೆ. ನಾನು ವೃದ್ಧ, ಮಾನಸಿಕವಾಗಿ ಅಸ್ತಿತ್ವ ಕಳೆದುಕೊಂಡಿದ್ದೇವೆ. ನನಗೆ ರಕ್ತ ಕ್ಯಾನ್ಸರ್ ಇದೆ. ದಯವಿಟ್ಟು ನನ್ನನ್ನು ಬಿಟ್ಟು ಬಿಡಿ. ಪಂಜಾಬ್‍ನಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಹೋಗುತ್ತಿರುವೆ ಎಂದು ಸುರೇಂದ್ರ ಪಾಲ್ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾನೆ.

    ಪಾಲ್ ಹೇಳಿಕೊಂಡಂತೆ ಮಾನಸಿಕವಾಗಿ ಅಸ್ಥಿರವಾಗಿದ್ದಾನೆಯೇ ಅಥವಾ ರಕ್ತ ಕ್ಯಾನ್ಸರ್ ಇದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.