Tag: Rain damage

  • ಅತಿವೃಷ್ಟಿಯಿಂದ ಹಾನಿ – ಕರ್ನಾಟಕಕ್ಕೆ SDRFನಿಂದ 384 ಕೋಟಿ ರೂ. ಬಿಡುಗಡೆ

    ಅತಿವೃಷ್ಟಿಯಿಂದ ಹಾನಿ – ಕರ್ನಾಟಕಕ್ಕೆ SDRFನಿಂದ 384 ಕೋಟಿ ರೂ. ಬಿಡುಗಡೆ

    ನವದೆಹಲಿ: ಕರ್ನಾಟಕದಲ್ಲಿ (Karnataka) ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಎಸ್‌ಡಿಆರ್‌ಎಫ್‌ನಿಂದ (SDRF) ರಾಜ್ಯಕ್ಕೆ 384 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.

    ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲು ಗೃಹಸಚಿವ ಅಮಿತ್ ಶಾ (Amit Shah) ಅನುಮತಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಹಾರಾಷ್ಟ್ರಕ್ಕೆ (Maharashtra) 1,566.40 ಕೋಟಿ ರೂ. ಅನುಮೋದಿಸಲಾಗಿದೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ಈ ವರ್ಷ, ಕೇಂದ್ರವು ಈಗಾಗಲೇ ಎಸ್‌ಡಿಆರ್‌ಎಫ್ ಅಡಿಯಲ್ಲಿ 27 ರಾಜ್ಯಗಳಿಗೆ 13,603.20 ಕೋಟಿ ರೂ. ಮತ್ತು ಎನ್‌ಡಿಆರ್‌ಎಫ್ ಅಡಿಯಲ್ಲಿ 15 ರಾಜ್ಯಗಳಿಗೆ 2,189.28 ಕೋಟಿ ರೂ. ಬಿಡುಗಡೆ ಮಾಡಿದೆ. ಇದನ್ನೂ ಓದಿ: ಮಳೆಯಾಟದಲ್ಲಿ ಗೆದ್ದ ಆಸ್ಟ್ರೇಲಿಯಾ – ಭಾರತದ ವಿರುದ್ಧ 7 ವಿಕೆಟ್‌ಗಳ ಗೆಲುವು

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರವಾಹ, ಭೂಕುಸಿತ, ಮೇಘಸ್ಫೋಟದಿಂದ ತೊಂದರೆಗೊಳಗಾದ ಜನರಿಗೆ ಎಲ್ಲಾ ರೀತಿಯ ಸಹಾಯ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

  • ಬಿರುಗಾಳಿ ಮಳೆಗೆ ಧರೆಗುರುಳಿದ ಮರ, ಮುರಿದ ವಿದ್ಯುತ್ ಕಂಬ – ಗೊಮ್ಮಟೇಶ್ವರ ದೇವಸ್ಥಾನದ ಛಾವಣಿಗೂ ಹಾನಿ

    ಬಿರುಗಾಳಿ ಮಳೆಗೆ ಧರೆಗುರುಳಿದ ಮರ, ಮುರಿದ ವಿದ್ಯುತ್ ಕಂಬ – ಗೊಮ್ಮಟೇಶ್ವರ ದೇವಸ್ಥಾನದ ಛಾವಣಿಗೂ ಹಾನಿ

    – ಸೊರಬ ತಾಲೂಕಿನ ಹಲವೆಡೆ ಮಳೆ ಅವಾಂತರ ಸೃಷ್ಟಿ

    ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬಿರುಗಾಳಿ ಮಳೆಗೆ (Heavy Rain) ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga) ಸೊರಬ ತಾಲೂಕಿನಲ್ಲಿ ನಡೆದಿದೆ.

    ಸೊರಬ ತಾಲೂಕಿನ ಚಂದ್ರಗುತ್ತಿ ಬಳಿಯ ಅಂಕರವಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಮನೆಯ ಹೆಂಚು ತಗಡುಗಳಿಗೆ ಹಾನಿಯಾಗಿದೆ. ಜೊತೆಗೆ ಶೆಡ್‌ನಲ್ಲಿದ್ದ ಕಾರಿಗೂ ಹಾನಿಯಾಗಿದೆ. ಮತ್ತೊಂದೆಡೆ ಅಂಗಡಿ ಮಳಿಗೆ ಮೇಲೂ ಮರ ಉರುಳಿದ್ದು, ಅಂಗಡಿಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ. ಇದನ್ನೂ ಓದಿ: ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ಇನ್ನೂ ಅಂಕರವಳ್ಳಿ ಚಂದ್ರಗುತ್ತಿ ಮಾರ್ಗದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಸ್ಥಳೀಯರು ಮರವನ್ನು ಜೆಸಿಬಿ ಮೂಲಕ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಲ್ಕುಣಿ ಕ್ರಾಸ್ ಬಳಿಯೂ ಮರವೊಂದು ಉರುಳಿ ಬಿದ್ದಿದೆ. ಬಿರುಗಾಳಿಗೆ ಜೋಳದಗುಡ್ಡೆ ಸಮೀಪದ ಗೊಮ್ಮಟೇಶ್ವರ ದೇವಸ್ಥಾನದ (Gommateshwara Temple) ಮೇಲ್ಛಾವಣಿಗೂ ಹಾನಿಯಾಗಿದೆ.

    ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಯಿತು. ಒಟ್ಟಾರೆ ಉತ್ತಮ ಮಳೆಯಾಗಿದೆ. ಬಿಸಿಲಿನಿಂದ ಕಾವೇರುತ್ತಿದ್ದ ಇಳೆ ತಂಪಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ, ಮತ್ತೊಂದೆಡೆ ಹಾನಿ ಉಂಟುಮಾಡಿರುವುದು ದುರಂತ ಎನಿಸಿದೆ. ಇದನ್ನೂ ಓದಿ: ಒಂದು ಸಣ್ಣ ಆ್ಯಕ್ಸಿಡೆಂಟ್‌.. ರಕ್ತನೂ ಬರಲಿಲ್ಲ, ಆದ್ರೆ ಬ್ರೈನ್ ಡೆಡ್! 

  • ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ಮೈಸೂರು: ಪ್ರವಾಹದಲ್ಲಿ ಸಂಭವಿಸಿದ ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನೆರೆ ಪ್ರವಾಹ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ-ತಮ್ಮ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಹಾನಿ ಪ್ರದೇಶಕ್ಕೆ ಹೋಗುತ್ತಿಲ್ಲ ಎಂಬುದು ಸುಳ್ಳು. ನನ್ನ ಹಾದಿಯಾಗಿ ಎಲ್ಲ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಸಂಸದರ ಬೇಡಿಕೆಗೆ ಮಣಿದ್ರಾ ಉದ್ಧವ್? 

    ರಾಜ್ಯದಲ್ಲಿ ನೆರೆ ಹಾನಿ ವಿಚಾರ, ಇಂದು ಸಂಜೆಯೊಳಗಡೆ ಮೊದಲ ಹಂತದ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆ ಮಾಡಲಾಗುತ್ತೆ. ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ 750 ಕೋಟಿ ರೂ. ಎನ್‍ಡಿಆರ್‌ಎಫ್ ಹಣ ನಮ್ಮಲ್ಲಿ ಇದೆ ಎಂದು ತಿಳಿಸಿದರು.

    ಅನೇಕ ಕಡೆಗಳಲ್ಲಿ ಭೂ ಕುಸಿತವಾಗಿದೆ. ರಸ್ತೆಗಳು ಹಾಳಾಗಿದೆ, ಮನೆ ಹಾನಿ, ಪ್ರಾಣ ಹಾನಿಯೂ ಉಂಟಾಗಿದೆ. ಎಲ್ಲದರ ಬಗ್ಗೆ ವರದಿ ಸಿದ್ಧವಾಗುತ್ತಿದೆ. ಸಂಜೆಯೊಳಗಡೆ ಅಧಿಕೃತ ಮಾಹಿತಿ ಪ್ರಕಟವಾಗುತ್ತೆ ಎಂದರು.

    ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಉತ್ತರಿಸಿದ ಅವರು, ಆರು ತಿಂಗಳ ಹಿಂದೆಯೇ ಅಧ್ಯಕ್ಷರ ಬದಲಾವಣೆಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿದ್ದೇವೆ. ಒಂದುವರೆ ವರ್ಷ ಪೂರೈಸಿರುವ ಅಧ್ಯಕ್ಷರುಗಳು ರಾಜೀನಾಮೆ ಸೂಚನೆ ನೀಡಿದ್ದೇವೆ. ಒಂದುವರೆ ವರ್ಷ ಅಧಿಕಾರ ಪೂರೈಸಿರುವವರ ಪಟ್ಟಿ ತಯಾರಿಸಿದ್ದೇವೆ. ಶೀಘ್ರದಲ್ಲೇ ಅದರ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಉದಯಪುರ ಹತ್ಯೆ ಬಗ್ಗೆ ಪೋಸ್ಟ್ – ಬಾಲಕಿಗೆ ಕೊಲೆ, ಅತ್ಯಾಚಾರ ಬೆದರಿಕೆ ಹಾಕಿದ ಜಮ್ಮು, ಕಾಶ್ಮೀರದ ವ್ಯಕ್ತಿ 

    ಬೆಂಗಳೂರಿನ ಚಾಮರಾಜಪೇಟೆ ಬಂದ್‌ ವಿಚಾರವನ್ನು ಸ್ಥಳೀಯ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಮೂವತ್ತು ಮನೆಗಳಿಗೆ ನುಗ್ಗಿದ ನೀರು- ರಸ್ತೆ ಮಧ್ಯಕ್ಕೆ ಉರುಳಿದ ಬೃಹತ್ ಮರ

    ಮೂವತ್ತು ಮನೆಗಳಿಗೆ ನುಗ್ಗಿದ ನೀರು- ರಸ್ತೆ ಮಧ್ಯಕ್ಕೆ ಉರುಳಿದ ಬೃಹತ್ ಮರ

    – ಭಾರೀ ಮಳೆಗೆ ಹಾಸನ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಅವಾಂತರ

    ಹಾಸನ: ಜಿಲ್ಲೆಯ ಹಲವೆಡೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೂವತ್ತು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

    ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಸುತ್ತಮುತ್ತ ಹಲವು ಹಳ್ಳಿಗಳಲ್ಲಿ ರಾತ್ರಿ ಸುರಿದ ಭರ್ಜರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬಸವಾಪಟ್ಟಣ ಗ್ರಾಮದಲ್ಲಿ ಸುಮಾರು ಮೂವತ್ತು ಮನೆಗಳಿಗೆ ಮಳೆ ನೀರು ನುಗ್ಗಿದೆ. ಪರಿಣಾಮ ದಿನ ಬಳಕೆಯ ವಸ್ತುಗಳು ಸಂಪೂರ್ಣ ಹಾನಿಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಸಿಬ್ಬಂದಿ ಮೇಲಿನ ಕೋಪಕ್ಕೆ ಮಗನ ಮೇಲೆ ಗುಂಡು ಹಾರಿಸಿದ ತಂದೆ!

    ಕಾಳೇನಹಳ್ಳಿ ಗ್ರಾಮದಲ್ಲಿ ಮಳೆ ನೀರಿಗೆ ರಸ್ತೆ ಕೊಚ್ಚಿಹೋಗಿದ್ದು, ಕೇರಳಾಪುರ ಹಾಗೂ ರಾಮನಾಥಪುರಕ್ಕೆ ಸಂಚರಿಸಲು ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ತಾತ್ಕಾಲಿಕ ಪರಿಹಾರ ಒದಗಿಸಿದ್ದಾರೆ. ಆಂಜನೇಯ ಹೊಸಹಳ್ಳಿ ಕೆರೆ ಮಳೆ ನೀರಿಗೆ ಕೋಡಿ ಬಿದ್ದಿದೆ. ಶಿರಗನಹಳ್ಳಿ ಗ್ರಾಮದ ಸಮೀಪ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಹಲವು ವಿದ್ಯುತ್ ಕಂಬ ಧರೆಗುರುಳಿವೆ.

    ರಸ್ತೆಗೆ ಮರ ಬಿದ್ದಿರುವುದರಿಂದ ಕೇರಳಾಪುರ ರಾಮನಾಥಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮರವನ್ನು ರಸ್ತೆಯಿಂದ ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಆರ್‍ಐ ಸ್ವಾಮಿ, ವಿಎಗಳಾದ ಮದನ್, ಯಾದವ್, ಉಮೇಶ್, ಪೂಜಾರಿ ಮತ್ತು ತಂಡದಿಂದ ಪರಿಹಾರ ಕಾರ್ಯ ಭರದಿಂದ ಸಾಗಿದೆ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಿಂದ ಹೊರಬಂದ ಸಿಂಹ- ವೀಡಿಯೋ ವೈರಲ್

    ಮಳೆ ಹಾನಿಗೊಳಗಾಗದವರಿಗೆ ಶೀಘ್ರ ಪರಿಹಾರ ಒದಗಿಸುವುದಾಗಿ ಆರ್‌ಐ ಸ್ವಾಮಿ ಭರವಸೆ ನೀಡಿದ್ದಾರೆ.