Tag: Rain God

  • ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ – ಮಳೆ ದೇವನಿಗೆ ಸ್ಥಳೀಯರಿಂದ ವಿಶೇಷ ಪೂಜೆ

    ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ – ಮಳೆ ದೇವನಿಗೆ ಸ್ಥಳೀಯರಿಂದ ವಿಶೇಷ ಪೂಜೆ

    ಚಿಕ್ಕಮಗಳೂರು: ಕಾಫಿನಾಡು ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರಿದ ಪರಿಣಾಮ ಸ್ಥಳೀಯರು ಮಳೆ ದೇವನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ ದೇವರಿಗೆ ನೆಮ್ಮಾರ್ ಸೀಮೆಯವರು ವಿಶೇಷ ಪೂಜೆ ಸಲ್ಲಿಸಿ ಮಳೆ ನಿಲ್ಲುವಂತೆ ಬೇಡಿಕೊಂಡಿದ್ದಾರೆ. ಕಿಗ್ಗಾದ ಋಷ್ಯಶೃಂಗೇಶ್ವರ ಮಳೆ ಬೇಕು ಅಂದಾಗ ಸುರಿಸೋ, ಬೇಡವೆಂದಾಗ ನಿಲ್ಲಿಸೋ ಮಳೆ ದೇವರು ಎಂದೇ ಪ್ರಸಿದ್ಧಿ ಹೊಂದಿದೆ. ಇದನ್ನೂ ಓದಿ:  ʼಬೆಲ್ಲದ ದೋಸೆʼ ಮಾಡುವ ಸೂಪರ್‌ ವಿಧಾನ 

    ಪ್ರಸ್ತುತ ಶೃಂಗೇರಿಯಲ್ಲಿ ವಾಡಿಕೆಗಿಂತ ಡಬಲ್ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಕಾಫಿ, ಮೆಣಸು, ಅಡಿಕೆಗೆ ಕೊಳೆಯುವ ರೋಗದ ಭೀತಿ ಜನರಲ್ಲಿ ಆವರಿಸಿದೆ. ಪರಿಣಾಮ ಸ್ಥಳೀಯರು ಅತಿವೃಷ್ಟಿ ನಿವಾರಿಸೋ ಎಂದು ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಈ ದೇವನಿಗೆ ಅತಿವೃಷ್ಟಿ-ಅನಾವೃಷ್ಟಿ ವೇಳೆ ಸರ್ಕಾರವೇ ಪೂಜೆ ಸಲ್ಲಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ: ಅರ್ಚಕರಿಗೆ ಶೃಂಗೇರಿ ಶ್ರೀ ಸೂಚನೆ

    ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ: ಅರ್ಚಕರಿಗೆ ಶೃಂಗೇರಿ ಶ್ರೀ ಸೂಚನೆ

    ಚಿಕ್ಕಮಗಳೂರು: ಮಲೆನಾಡು ಹಾಗೂ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಶೃಂಗೇರಿ ತಾಲೂಕಿನಲ್ಲಿರುವ ಕಿಗ್ಗಾದ ಮಳೆ ದೇವರು ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ ಎಂದು ಅರ್ಚಕರಿಗೆ ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಸೂಚಿಸಿದ್ದಾರೆ.

    ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾಭದ್ರಾ ಸೇರಿದಂತೆ ಹಲವು ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನದಿ ನೀರಿನ ರಭಸದಿಂದಾಗಿ ಪ್ರವಾಹ ಪರಸ್ಥಿತಿ ಎದುರಾಗಿದ್ದು, ಕೂಡಲೇ ಮಳೆ ದೇವರಾದ ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ಪೂಜೆ ಸಲ್ಲಿಸಿ ಎಂದು ಶೃಂಗೇರಿ ಶ್ರೀ ಸೂಚಿಸಿದ್ದಾರೆ.

    ಸದ್ಯದ ಪರಿಸ್ಥಿತಿಯಲ್ಲಿ ವರುಣದೇವ ಶಾಂತನಾಗಬೇಕಾದರೆ, ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆಯ ಅಗತ್ಯವಿದೆ. ಹೀಗಾಗಿ ಮೂರು ದಿನಗಳ ಕಾಲ ಸತತವಾಗಿ ಅರ್ಚಕರುಗಳು ಸ್ವಾಮಿಗೆ ಅಗಿಲು ಸೇವೆ ಹಾಗೂ ಅಭಿಷೇಕವನ್ನು ಮಾಡಬೇಕೆಂದು ಹೇಳಿದ್ದಾರೆ.

    ಕಿಗ್ಗಾದ ಋಷ್ಯಶೃಂಗೇಶ್ವರನು ಮಳೆ ದೇವರೆಂದೇ ಪ್ರಸಿದ್ಧಿ ಹೊಂದಿದೆ. ಅನಾಧಿಕಾಲದಿಂದಲೂ ಜಿಲ್ಲೆಯಲ್ಲಿ ಮಳೆ ಬರಲಿ ಅಥವಾ ಬಾರದೇ ಇದ್ದಾಗ ಸ್ವಾಮಿಗೆ ಸತತ ಮೂರು ದಿನಗಳ ಕಾಲ ಅಗಿಲು ಸೇವೆಯನ್ನು ಮಾಡಿದ ಬಳಿಕ ಮಳೆಯಾಗುತ್ತಿರುವುದು ಪ್ರತೀತಿಯಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾದಗಲೂ ಸಹ ಋಷ್ಯಶೃಂಗನಿಗೆ ಪೂಜೆ ಸಲ್ಲಿಸಿದಾಗ ವರುಣ ಶಾಂತನಾಗುತ್ತಾನೆಂಬುದು ನಂಬಿಕೆ ಜನರಲ್ಲಿದೆ.

    ಋಷ್ಯಶೃಂಗೇಶ್ವರನ ಪರಮ ಭಕ್ತರಾದ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಕಳೆದ ಬಾರಿ ಬರಗಾಲವಿದ್ದರಿಂದ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿದ್ದರು.

    ರಾಜ್ಯದಲ್ಲಿ ಭೀಕರ ಬರಗಾಲ ಕಾಣಿಸಿಕೊಂಡ್ರೆ ಸರ್ಕಾರ ಹಾಗೂ ಜಿಲ್ಲಾಡಳಿತ ಕಿಗ್ಗದಲ್ಲಿ ನೆಲೆಸಿರೋ ಋಷ್ಯಶೃಂಗೇಶ್ವರ ಸ್ವಾಮಿಯ ಮೋರೆ ಹೋಗುತ್ತೆ. ರಾಜ್ಯದಲ್ಲಿ ಸಮೃದ್ಧ ಮಳೆಯಾಗಲೆಂದು ಸರ್ಕಾರದ ಪ್ರತಿನಿಧಿಗಳು ಪ್ರತಿವರ್ಷವು ಈ ದೇವಾಲಯಕ್ಕೆ ಬಂದು ಹರಕೆ ಕಟ್ಟಿಕೊಂಡು ಇಲ್ಲಿ ವಿಶೇಷ ಹೋಮ ಹಾಗೂ ಹವನಗಳನ್ನ ನಡೆಸಿ ಹೋಗುತ್ತಿರುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv