Tag: Rainfall

  • ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

    ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

    ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

    ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ 

    ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

  • ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ವರುಣನ ಸಿಂಚನ

    ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ವರುಣನ ಸಿಂಚನ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿದೆ.

    ಬೆಂಗಳೂರು ನಗರದ ವಿಜಯನಗರ, ಸುಂಕದಕಟ್ಟೆ, ಕಾಮಾಕ್ಷಿ ಪಾಳ್ಯ, ಕೆಂಗೇರಿ, ಯಶವಂತಪುರ, ಮೈಸೂರು ರೋಡ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಇತ್ತ ಹಾಸನ, ಹಾವೇರಿ, ಚಿಕ್ಕೋಡಿ, ಮಡಿಕೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲೂ ವರುಣ ತಂಪೆರೆದಿದ್ದಾನೆ. ಇದನ್ನೂ ಓದಿ: ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ಇಂದಿನಿಂದ ಮೂರು ದಿನ ರಾಜ್ಯದ ಬಹುತೇಕ ಕಡೆ ಮಳೆ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

  • ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

    ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

    ತಿರುವನಂತಪುರಂ: 2021ರ ಅಕ್ಟೋಬರ್‌ನಲ್ಲಿ ಅತ್ಯಧಿಕ ಮಳೆ ದಾಖಲಾಗಿದ್ದು, ಇದು 120 ವರ್ಷಗಳಲ್ಲಿಯೇ ಆಗಿರುವ ಅತ್ಯಧಿಕ ಮಳೆ ಎಂದು ಭಾರತೀಯ ಇಲಾಖೆ ಹೇಳಿದೆ.

    ಐಎಂಟಿ ಪ್ರಕಾರ ಈ ವರ್ಷದ ಅಕ್ಟೋಬರ್‍ನಲ್ಲಿ 589.9 ಮಿ.ಮೀ ಮಳೆಯಾಗಿದೆ. ಇದು 1901ರ ನಂತರ ಸುರಿದಿರುವ ಅತ್ಯಧಿಕ ಮಳೆಯಾಗಿದೆ. ಅಲ್ಲದೆ ರಾಜ್ಯದಲ್ಲಿ ಕಳೆದ ವರ್ಷ ಅಕ್ಟೋಬರ್‍ನಲ್ಲಿ ಸುರಿದ ಮಳೆಗಿಂತ ಎರಡು ಪಟ್ಟು ಹೆಚ್ಚು ಮಳೆ ಈ ವರ್ಷದ ಅಕ್ಟೋಬರ್‍ನಲ್ಲಿ ಸುರಿದಿದೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ8 ಸುರಿದ ಮಳೆಯ ಈ ಹಿಂದಿನ ದಾಖಲೆಗಳ ಪ್ರಕಾರ, 1932ರಲ್ಲಿ 543.2 ಮಿ.ಮೀ, 1999ರಲ್ಲಿ 567.9ಮಿ.ಮೀ ಮತ್ತು 2002ರಲ್ಲಿ 511.7ಮಿ.ಮೀ ಮಳೆ ಸುರಿದಿದೆ. ಇದನ್ನೂ ಓದಿ: ‘ಅಪ್ಪು ಜೊತೆ ರಾಜ್ ಸಮಾಧಿ ನೋಡಲು ಬರ್ತಿದ್ದ ನಾವು ಈಗ ಅವರದ್ದೇ ಸಮಾಧಿ ನೋಡೋಕೆ ಬರುವಂಗಾಯ್ತು

    ಕೇರಳದಲ್ಲಿ ಸುರಿಸದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಮನೆ, ಗುಡ್ಡ ಬೆಟ್ಟಗಳು ಕುಸಿದು ಬಿದ್ದಿದ್ದವು, ಹಲವು ಕಡೆ ಭೂಕುಸಿತವಾಗಿತ್ತು. ಈಗ 120 ವರ್ಷಗಳಲ್ಲಿಯೇ ಸುರಿದಿರುವ ಅತ್ಯಧಿಕ ಮಳೆ ಕೇರಳದಲ್ಲಿ ಈ ಭಾರೀಯಾಗಿದೆ. ಇದನ್ನೂ ಓದಿ:   ದನ ಕದಿಯಲು ಬಂದು ಪ್ರಾಣ ಬಿಟ್ಟ

  • ಕೊಡಗಿನಲ್ಲಿ ಭೂ ಕುಸಿತ – ತ್ರಿವೇಣಿ ಸಂಗಮ ಭರ್ತಿ, ರಸ್ತೆ ಸಂಚಾರ ಬಂದ್

    ಕೊಡಗಿನಲ್ಲಿ ಭೂ ಕುಸಿತ – ತ್ರಿವೇಣಿ ಸಂಗಮ ಭರ್ತಿ, ರಸ್ತೆ ಸಂಚಾರ ಬಂದ್

    ಮಡಿಕೇರಿ: ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆರ್ಭಟ ಮುಂದುವರೆದಿದ್ದು, ಪರಿಣಾಮ ತಡೆಗೋಡೆ ಕುಸಿದು ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅನಾಹುತದಿಂದ ಪಾರಾಗಿರುವ ಘಟನೆ ಮಡಿಕೇರಿಯ ರಾಜಾಸೀಟ್ ಸಮೀಪದ ಆಕಾಶವಾಣಿ ಟವರ್ ಬಳಿ ನಡೆದಿದೆ.

    ನಗರದ ಮಡಿಕೇರಿ ಆಕಾಶವಾಣಿ ಬಳಿ 2018ರಲ್ಲಿ ಕುಸಿದಿದ್ದ ಜಾಗದಲ್ಲೇ ಮತ್ತೆ ಮಣ್ಣು ಕುಸಿದಿದೆ. ಎರಡು ವರ್ಷಗಳ ಹಿಂದೆ ಅಲ್ಪ ಪ್ರಮಾಣದ ಬರೆ ಕುಸಿದಿದ್ದ ಸ್ಥಳದಲ್ಲೇ ಮತ್ತೆ ಕುಸಿಯದಂತೆ ತಡೆಗೋಡೆಯನ್ನು ನಿರ್ಮಿಸಲಾಗುತಿತ್ತು. ಈ ವೇಳೆ ಮತ್ತೆ ಬರೆ ಕುಸಿದಿದ್ದು, ತಡೆಗೋಡೆ ನಿರ್ಮಿಸುತ್ತಿದ್ದ 7 ಮಂದಿ ಸ್ಥಳೀಯರು ಅಪಾಯದಿಂದ ಪಾರಾಗಿದ್ದಾರೆ.

    ಪ್ರತಿನಿತ್ಯ ಗುಡ್ಡ ಜರಿದ ಸ್ಥಳದಲ್ಲೇ ಊಟ ಮಾಡುತ್ತಿದ್ದ ಕಾರ್ಮಿಕರು, ಮಧ್ಯಾಹ್ನ ಊಟ ಮುಗಿಸಿ ಸಾರುವೆ ನಿರ್ಮಿಸಿಕೊಳ್ಳಲು ಮರಗಳನ್ನು ಇಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಮಣ್ಣು ಸಡಿಲಗೊಂಡಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

    ಇತ್ತ ಕಾವೇರಿ ಉಗಮಸ್ಥಳ ತಲಕಾವೇರಿ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನಾಪೋಕ್ಲು ಸಂಪರ್ಕ ರಸ್ತೆ ಬಂದ್ ಆಗಿದೆ. ಕಾವೇರಿ ನದಿಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಎರಡು ದಿನಗಳಿಂದ ಈ ಬಾಗದಲ್ಲಿ ಮಳೆ ಹೆಚ್ಚಾಗಿದೆ. ತಲಕಾವೇರಿ ಚೇರಂಗಾಲ ರಸ್ತೆ ಬಳಿ ಗುಡ್ಡ ಕುಸಿದ ಪರಿಣಾಮವಾಗಿ ಚೇರಂಗಾಲಕ್ಕೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

  • ರಾಜ್ಯದಲ್ಲಿ ಆ.15ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ

    ರಾಜ್ಯದಲ್ಲಿ ಆ.15ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಆಗಸ್ಟ್ 15ರಿಂದ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಐದು ದಿನ ಕರಾವಳಿ ಭಾಗದಲ್ಲಿ ಅತಿಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

    ಪಶ್ಚಿಮಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗೋ ಮುನ್ಸೂಚನೆ ದೊರಕಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ 16ರಿಂದ 18ರವರೆಗೆ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ತುಮಕೂರು ಹಾಗೂ ಸುತ್ತ ಮುತ್ತಿನ ಪ್ರದೇಶದಲ್ಲಿ ಸಾಧಾರಣ ಮಳೆ ಆಗಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಒಮ್ಮೊಮ್ಮೆ ಅತಿ ಹೆಚ್ಚು ಮಳೆಯಾಗೋ ಸಾಧ್ಯತೆ ಕೂಡ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

  • ‘ಫನಿ’ ಚಂಡಮಾರುತ ಏಫೆಕ್ಟ್ – ದಕ್ಷಿಣ ಕರ್ನಾಟಕಕ್ಕಿಲ್ಲ ಆತಂಕ, ಉತ್ತರದಲ್ಲಿ ವಹಿಸಿ ಎಚ್ಚರ

    ‘ಫನಿ’ ಚಂಡಮಾರುತ ಏಫೆಕ್ಟ್ – ದಕ್ಷಿಣ ಕರ್ನಾಟಕಕ್ಕಿಲ್ಲ ಆತಂಕ, ಉತ್ತರದಲ್ಲಿ ವಹಿಸಿ ಎಚ್ಚರ

    ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈಗ ಫನಿ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಪುದುಚೇರಿ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ತೀರ ಪ್ರದೇಶಗಳಲ್ಲಿ ಭಾರೀ ಮಳೆಯ ಆತಂಕ ಸೃಷ್ಟಿಸಿದೆ. ಹಿಂದೂ ಮಹಾಸಾಗರ-ಬಂಗಾಳಕೊಲ್ಲಿಯ ಸಮನಾಂತರ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಫನಿ ಚಂಡಮಾರುತ ಈಗ ಶ್ರೀಲಂಕಾದ ಟ್ರಿಂಕೋಮಲಿಯಿಂದ 550 ಕಿ.ಮೀ. ದೂರಕ್ಕೂ ಚೆನ್ನೈನ ಆಗ್ನೇಯ ದಿಕ್ಕಿನಿಂದ 820 ಕಿ.ಮೀ. ದೂರದಲ್ಲಿ ಬರುತ್ತಿದೆ.

    ಫನಿ ಚಂಡಮಾರುತ ಆರಂಭವಾದಾಗ ಅಂದರೆ ಏಪ್ರಿಲ್ 25ರ ಆಸುಪಾಸಿನಲ್ಲಿ ಶ್ರೀಲಂಕಾದ ಅರ್ಧ ಉತ್ತರಭಾಗವನ್ನು ಆಕ್ರಮಿಸಿ, ಅಲ್ಲಿಂದ ಪುದುಚೇರಿ, ತಮಿಳುನಾಡಿನ ದಕ್ಷಿಣಭಾಗ ಸೇರಿ ಚೆನ್ನೈ ಆಂಧ್ರ ಪ್ರದೇಶದ ಮಚಿಲಿಪಟ್ಟಣದ ಮಧ್ಯೆ ಭರ್ಜರಿಯಾಗಿ ಅಪ್ಪಳಿಸುತ್ತದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗ, ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತೆ ಎಂದು ಅಂದಾಜಿಸಲಾಗಿತ್ತು. ಆದರೆ ಏಪ್ರಿಲ್ 27ರ ಮಧ್ಯಭಾಗದಿಂದ ಚಂಡಮಾರುತ ದಿಕ್ಕು ಬದಲಿಸುತ್ತಿದ್ದು, ತಿರುವು ಪಡೆದು ದಕ್ಷಿಣದ ಚೆನ್ನೈನಿಂದ ಉತ್ತರದ ಕಡೆ ಅಂದರೆ ಆಂಧ್ರ ಪ್ರದೇಶದ ಮಚಲಿಪಟ್ಟಣ, ಉತ್ತರ ಕರಾವಳಿ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕಡೆ ಮುನ್ನುಗ್ತಿದೆ.

    ಸದ್ಯದ ಮಾಹಿತಿ ಅನ್ವಯ ಆಂಧ್ರ-ಒಡಿಶಾದ ಮಧ್ಯ ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಬೀರುವ ಅವಕಾಶ ಹೆಚ್ಚಾಗಿದ್ದು, ಚಂಡಮಾರುತ ವೇಗ ಮತ್ತಷ್ಟು ಹೆಚ್ಚಾದರೆ ಖಂಡಿತಾ ಒಡಿಶಾದಲ್ಲಿ ಹೆಚ್ಚಿನ ಅವಘದ ಸಂಭವಿಸಲಿದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಲಾಗಿದೆ. ಎನ್‍ಡಿಆರ್‍ಎಫ್, ಕೋಸ್ಟ್‍ಗಾರ್ಡ್‍ಗೆ ಹೈ ಅಲರ್ಟ್‍ನಲ್ಲಿರುವಂತೆ ಸೂಚಿಸಲಾಗಿದೆ. ಒಡಿಶಾದ 28 ಜಿಲ್ಲೆಗಳ ಡಿಸಿಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಆಂಧ್ರ-ಒಡಿಶಾದ ಕರಾವಳಿ ಜನರನ್ನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗುತ್ತಿದ್ದು, ಕೇಂದ್ರ ಗೃಹ ಸಚಿವಾಲಯ ಹೆಚ್ಚಿನ ನಿಗಾ ವಹಿಸಿದೆ.

    ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಕಡಿಮೆ ಪ್ರಮಾಣದಲ್ಲಿ ಆಗಲಿದ್ದು, ಇದಕ್ಕೆ ಪ್ರಮುಖ ಕಾರಣ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಫನಿ ಚಂಡಮಾರುತ ತನ್ನ ದಿಕ್ಕು ಬದಲಿಸಿದೆ. ಚೆನ್ನೈ ಮೇಲೆ ಮೋಡಗಳು ಆವರಿಸಿದರೆ ಬೆಂಗಳೂರು, ಮೈಸೂರು ಭಾಗದಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಕೇರಳದಲ್ಲೂ ಮಳೆ ಆಗುವ ಸಾಧ್ಯತೆ ಕಡಿಮೆ ಇದೆ. ಆದರೆ ಆಂಧ್ರದ ಉತ್ತರ ಭಾಗಕ್ಕೆ ಚಂಡಮಾರುತದ ಪ್ರಭಾವ ಶಿಫ್ಟ್ ಆಗುತ್ತಿರುವುವರಿಂದ ಉತ್ತರ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

  • ಮಳೆಗಾಲದಲ್ಲಿ ಪಾಲನೆ ಮಾಡಬೇಕಾದ ಆರೋಗ್ಯ ಸೂತ್ರಗಳು

    ಮಳೆಗಾಲದಲ್ಲಿ ಪಾಲನೆ ಮಾಡಬೇಕಾದ ಆರೋಗ್ಯ ಸೂತ್ರಗಳು

    ಹೊರಗೆ ಮಳೆ ಬರುತ್ತಿದೆ ಎಂದರೆ ಹಾಸಿಗೆ ಬಿಟ್ಟು ಏಳಲು ಮನಸ್ಸೇ ಆಗುವುದಿಲ್ಲ. ಬಿಸಿ ಬಿಸಿ ಬಜ್ಜಿ, ಬೋಂಡಾ, ಸಮೋಸ, ಪಾನಿಪುರಿ, ಗೋಬಿ, ಬಾಯಿ ಚಪ್ಪರಿಸುವ ತಿಂಡಿಗಳನ್ನು ತಿನ್ನಬೇಕೆನಿಸುತ್ತದೆ. ಹಾಗಾದ್ರೆ ಸ್ವಲ್ಪ ತಾಳಿ, ನೀವು ಮಳೆಗಾಲದಲ್ಲಿ ಮನಬಂದಂತೆ ಹೊರಗಿನ ತಿಂಡಿ, ಬೀದಿಬದಿಯ ತಿನಿಸುಗಳನ್ನು ತಿಂದರೆ ವೈದ್ಯರೇ ಬಳಿ ಹೋಗೋದು ಗ್ಯಾರೆಂಟಿ.

    ಜ್ವರ, ಶೀತ, ನೆಗಡಿ ಹೀಗೆ ಅನೇಕ ರೋಗಗಳು ನಿಮ್ಮನ್ನು ಆವರಿಸಬಹುದು. ಮಳೆಗಾಲದಲ್ಲಿ ನೀರಿನಲ್ಲಿ ಸೂಕ್ಷ್ಮಾಣುಗಳು ಉತ್ಪತ್ತಿ ಆಗುತ್ತದೆ. ನೀರಿನ ಮೂಲಕ ರೋಗಾಣುಗಳು ನಿಮ್ಮನ್ನು ಅಟ್ಯಾಕ್ ಮಾಡಲು ಹೊಂಚು ಹಾಕುತ್ತಿರುತ್ತದೆ. ಆದ್ದರಿಂದ ಈ ಕಾಲದಲ್ಲಿ ನೀವು ಎಚ್ಚರಿಕೆಯಿಂದಿರಬೇಕು. ಅದರಲ್ಲೂ ನೀರಿನ ವಿಚಾರದಲ್ಲಿ ಸ್ವಲ್ಪ ಕಾಳಜಿ ಹೆಚ್ಚಿದರೆ ಒಳ್ಳೆಯದು.

    ಮಳೆಗಾಲದಲ್ಲಿ ಪಾಲಿಸಬೇಕಾದ ಕೆಲವು ಟಿಪ್ಸ್ ಗಳು ಹೀಗಿವೆ

    * ಈ ಕಾಲದಲ್ಲಿ ರೋಗಗಳು ಹೆಚ್ಚಾಗಿ ನೀರಿನಿಂದ ಹರಡುತ್ತದೆ. ಹೀಗಾಗಿ ನೀರನ್ನು ಕುದಿಸಿ, ಆರಿಸಿ ಕುಡಿಯಿರಿ.
    * ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಹೀಗಾಗಿ ಕಷಾಯ, ಹರ್ಬಲ್ ಟೀ ಸೇವಿಸಿ, ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವಂತೆ ಮಾಡುತ್ತದೆ.
    * ರಸ್ತೆ ಬದಿಯ ತಿಂಡಿ ತಿನಿಸುಗಳಿಂದ ಸಾಧ್ಯವಾದಷ್ಟು ದೂರವಿರಿ.
    * ಬಿಸಿಯಾದ ಆಹಾರ ಸೇವಿಸಿ, ಹಸಿರು ಸೊಪ್ಪು, ತಾಜಾ ತರಕಾರಿಗಳ ಸೇವನೆ ಆರೋಗ್ಯಕರ.

    * ತರಕಾರಿಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ಅಡುಗೆ ಮಾಡಲು ಬಳಸಿ.
    * ಬೆಳಗ್ಗೆ ಮನೆಯಿಂದ ಹೊರಡುವಾಗ ಸ್ನಾನ ಮಾಡಿದ್ದರೂ, ಮತ್ತೊಮ್ಮೆ ಸಂಜೆ ಸ್ನಾನ ಮಾಡಿ. ಇದ್ರಿಂದ ಬೆವರಿನಿಂದ ಬರಬಹುದಾದ ಸೋಂಕಿನಿಂದ ರಕ್ಷಣೆ ಸಿಗುತ್ತದೆ.
    * ಚಳಿ ಇರುವಾಗ ಹೆಚ್ಚು ಬಾಯಾರಿಕೆ ಆಗುವುದಿಲ್ಲ. ಆದರೂ ನೀವು ನೀರು ಕುಡಿಯುವುದನ್ನು ಕಡಿಮೆ ಮಾಡಲೇಬೇಡಿ.
    * ಮಳೆಯಲ್ಲಿ ಹೆಚ್ಚಾಗಿ ಹೊರಗೆ ಹೋಗಬೇಡಿ, ಇದ್ರಿಂದ ವೈರಲ್ ರೋಗಗಳು ಬರುವ ಸಾಧ್ಯತೆ ಹೆಚ್ಚು.

    * ಮನೆಯಲ್ಲಿ ತೇವ ಅಥವಾ ಒದ್ದೆ ಇರುವ ಗೋಡೆಗಳಿದ್ದರೆ ಶಿಲೀಂದ್ರಗಳ ಅವಾಸಸ್ಥಾನವಾಗುತ್ತೆ. ಉಸಿರಾಟ ಸಮಸ್ಯೆ ಇರುವವರು ಎಚ್ಚರದಿಂದಿರಿ.
    * ಪದೇ ಪದೇ ಕೊಳೆ ಇರುವ, ತೊಳೆಯದ ಕೈಗಳಿಂದ ಕಣ್ಣುಗಳನ್ನು ಮುಟ್ಟಿಕೊಳ್ಳಬೇಡಿ. ವೈರಸ್ ಹರಡಬಹುದು.
    * ಮನೆಯಲ್ಲಿ ಮಕ್ಕಳಿದ್ದರೆ ಅವರು ತಿನ್ನುವ ಆಹಾರ, ಕುಡಿಯುವ ನೀರಿನ ಬಗ್ಗೆ ಗಮನ ವಹಿಸಿ.
    * ಮಕ್ಕಳನ್ನು ನೀರಿನಲ್ಲಿ ಆಡಲು & ಮಳೆಯಲ್ಲಿ ನೆನೆಯಲು ಬಿಡಬೇಡಿ.. ಬಟ್ಟೆ ಒದ್ದೆಯಾಗಿರದಂತೆ ನೋಡಿಕೊಳ್ಳಿ.
    * ನಿಮ್ಮ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡಿದ್ದರೆ ರೋಗ ಕಟ್ಟಿಟ್ಟಬುತ್ತಿ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಇದ್ರಿಂದ ಸೊಳ್ಳೆ, ನೊಣಗಳು ದಾಳಿ ತಪ್ಪುತ್ತದೆ.

  • ಜೂನ್ 26 ರಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು

    ಜೂನ್ 26 ರಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು

    ಬೆಂಗಳೂರು: ಜೂನ್ 26 ರಿಂದ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ತೇವಾಂಶ ಕೊರತೆ ಹಾಗೂ ಗಾಳಿಯು ದುರ್ಬಲವಾಗಿರುವ ಹಿನ್ನಲೆಯಲ್ಲಿ ಮುಂಗಾರು ಮಳೆ ದುರ್ಬಲವಾಗಿದೆ. ರಾಜ್ಯದ 30 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ ಇದೆ. ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ, ಹಾಗೂ ಉತ್ತರ ಒಳನಾಡಿನ ಮೂರು ಜಿಲ್ಲೆಗಳಲ್ಲಿ, ಉತ್ತರ ಕರ್ನಾಟಕ ಏಳು ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ ಎಂದು ತಿಳಿಸಿದರು.

    ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಶೇ.42 ರಷ್ಟು ಮಳೆ ಕೊರತೆ ಇದೆ. ಹಾಗೆ ಕಾವೇರಿ ಭಾಗದಲ್ಲಿ ಶೇಕಡಾ 36ರಷ್ಟು ಮಳೆ ಕೊರತೆ ಇದೆ. ಇನ್ನೂ ನಾಲ್ಕು ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದರು.

  • ಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು

    ಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು

    ಉಡುಪಿ: ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮತ್ತೆ ಗುಡ್ಡ ಕುಸಿತಗೊಂಡಿದ್ದು ವಾಹನ ಸವಾರರು ಪರದಾಡುವಂತಾಯಿತು. ಉಡುಪಿಯ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ.

    ಖಾಸಗಿ ಹಾಗು ಸರ್ಕಾರಿ ವಾಹನಗಳಿಗೆ ಪರ್ಯಾಯ ರಸ್ತೆಯನ್ನು ಮಾಡಿಕೊಡಲಾಗಿದೆ. ಸುಮಾರು 2 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತವಾಗಿದೆ.

    ಉಡುಪಿ- ಕುಂದಾಪುರ- ಕಾರವಾರ ರಾಷ್ಟ್ರೀಯ ಹೆದ್ದಾರಿ ಅಗಲ ಕಾಮಗಾರಿ ನಡೆಯುತ್ತಿದೆ. ಈ ಮಳೆಗಾಲಕ್ಕೂ ಮುನ್ನ ಹೆದ್ದಾರಿ ಕಾಮಗಾರಿ ಪೂರ್ಣವಾಗಬೇಕಿತ್ತು. ಆದ್ರೆ ಸೇತುವೆಗಳ ಕಾಮಗಾರಿ ವಿಳಂಬವಾಗಿರುವುದರಿಂದ ರಸ್ತೆ ಕಾಮಗಾರಿಯೂ ವಿಳಂಬವಾಗಿದೆ.

    ಜಿಲ್ಲಾಡಳಿತ ಮತ್ತು ಕಾಮಗಾರಿ ವಹಿಸಿಕೊಂಡ ಐ.ಆರ್.ಬಿ ಕಂಪನಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳದಿರುವುದೇ ಈ ಘಟನೆ ಸಂಭವಿಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒತ್ತಿನೆಣೆ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ಬೈಂದೂರು ಪೊಲೀಸರಿಗೆ ಮಾಹಿತಿ ಬಂದಿತ್ತು. ಜಿಲ್ಲಾಡಳಿತಕ್ಕೆ ಐ.ಆರ್.ಬಿ ಕಂಪೆನಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸುತ್ತೇವೆ ಎಂದು ಭರವಸೆ ನೀಡಿತ್ತು.

    ಸದ್ಯ ತೆರವು ಕಾರ್ಯಾಚರಣೆ ಮಾಡಿ ಒಂದು ಭಾಗದ ರಸ್ತೆ ಕ್ಲಿಯರ್ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಗುಡ್ಡ ಕುಸಿತದ ಪರಿಣಾಮ ಸುಮಾರು 2 ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಆಗಿತ್ತು. ವಾರದ ಹಿಂದೆಯೇ ಎರಡು ಬಾರಿ ಗುಡ್ಡ ಕುಸಿತವಾಗಿತ್ತು.

    ಇದನ್ನೂ ಓದಿ: ಬೈಂದೂರಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು 5 ಗಂಟೆ ಟ್ರಾಫಿಕ್ ಜಾಮ್!

     

  • ಬೈಂದೂರಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು 5 ಗಂಟೆ ಟ್ರಾಫಿಕ್ ಜಾಮ್!

    ಬೈಂದೂರಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು 5 ಗಂಟೆ ಟ್ರಾಫಿಕ್ ಜಾಮ್!

    ಉಡುಪಿ: ಉಡುಪಿ ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದು ಸುಮಾರು 5 ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದೆ. ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ. ಸುಮಾರು ಮೂರು ಗಂಟೆಗಳ ನಿರಂತರ ಕಾರ್ಯಾಚರಣೆ ನಡೆದ ನಂತರ ಒಂದು ರಸ್ತೆಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

    ಉಡುಪಿ- ಕುಂದಾಪುರ- ಕಾರವಾರ ರಾಷ್ಟ್ರೀಯ ಹೆದ್ದಾರಿ ಅಗಲ ಕಾಮಗಾರಿ ನಡೆಯುತ್ತಿದೆ. ಈ ಮಳೆಗಾಲಕ್ಕೂ ಮುನ್ನ ಹೆದ್ದಾರಿ ಕಾಮಗಾರಿ ಪೂರ್ಣವಾಗಬೇಕಿತ್ತು. ಆದ್ರೆ ಸೇತುವೆಗಳ ಕಾಮಗಾರಿ ವಿಳಂಬವಾಗಿರುವುದರಿಂದ ರಸ್ತೆ ಕಾಮಗಾರಿಯೂ ವಿಳಂಬವಾಗಿದೆ.

    ಕಳೆದೆರಡು ದಿನಗಳಿಂದ ಇಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಮಣ್ಣು ಸಂಪೂರ್ಣ ತೇವಗೊಂಡು ಒತ್ತಿನೆಣೆ ಎಂಬಲ್ಲಿ ಗುಡ್ಡ ರಸ್ತೆಗೆ ಕುಸಿದಿದೆ. ಕಳೆದ ಒಂದು ತಿಂಗಳಿಂದ ಒತ್ತಿನೆಣೆ ಗುಡ್ಡ ಅಪಾಯದ ಮುನ್ಸೂಚನೆ ನೀಡಿತ್ತು. ಒಂದು ವಾರದಿಂದ ಗುಡ್ಡ ಕುಸಿಯುವ ಭೀತಿಯಿತ್ತು. ಇಂದು ಮುಂಜಾನೆ ಗುಡ್ಡ ಕುಸಿತದಿಂದ ಐದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಚಾರ ಬಂದ್ ಆಯ್ತು. ಪರಿಣಾಮ ಪ್ರಯಾಣಿಕರು ಮಳೆಯಲ್ಲಿ ಪರದಾಡಿದರು.

    ಜಿಲ್ಲಾಡಳಿತ ಮತ್ತು ಕಾಮಗಾರಿ ವಹಿಸಿಕೊಂಡ ಐ.ಆರ್.ಬಿ ಕಂಪನಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳದಿರುವುದೇ ಈ ಘಟನೆ ಸಂಭವಿಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒತ್ತಿನೆಣೆ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ಬೈಂದೂರು ಪೊಲೀಸರಿಗೆ ಮಾಹಿತಿ ಬಂದಿತ್ತು. ಜಿಲ್ಲಾಡಳಿತಕ್ಕೆ ಐ.ಆರ್.ಬಿ ಕಂಪೆನಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸುತ್ತೇವೆ ಎಂದು ಭರವಸೆ ನೀಡಿತ್ತು.

    ವಾರದ ಹಿಂದೆ ಇನ್ನೊಂದು ರಸ್ತೆ ನಿರ್ಮಾಣ: ಗುಡ್ಡ ಕುಸಿತ ಸಂಭವಿಸುವ ಆತಂಕವಿದ್ದಾಗ, ಐ.ಆರ್.ಬಿ ಕಂಪನಿ ತರಾತುರಿಯಲ್ಲಿ ಬದಲಿ ರಸ್ತೆಯನ್ನು ನಿರ್ಮಾಣ ಮಾಡಿದೆ. ಆದರೆ ಜೇಡಿ ಮಣ್ಣು ಗುಡ್ಡ ಹೊಸ ರಸ್ತೆಯ ಮೇಲೂ ಕುಸಿದಿದೆ. ಎರಡು ದಿನದ ಹಿಂದೆ ಕರಾವಳಿಯಲ್ಲಿ ಮಳೆ ಶುರುವಾಗಿದೆ. ಮಳೆ ಮುಂದುವರೆದರೆ ಗುಡ್ಡದ ಇನ್ನೊಂದು ಭಾಗ ಕುಸಿಯುವ ಭೀತಿಯಿದೆ. ನಿರಂತರವಾಗಿ ಮಳೆ ಸುರಿದರೆ ಭಾರೀ ಅಪಾಯ ಸಾಧ್ಯತೆಯಿದೆ. ಬೇಸಿಗೆಯಲ್ಲೇ ಒತ್ತಿನೆಣೆ ಗುಡ್ಡದ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದ್ರೆ ಅದನ್ನು ಐ.ಆರ್.ಬಿ ಕಂಪೆನಿ ಕಡೆಗಣಿಸಿತ್ತು. ಈಗ ಜೇಡಿ ಮಣ್ಣು ಗುಡ್ಡದ ಅರಿವಾಗಿರಬೇಕು ಎಂದು ಸ್ಥಳೀಯ ಮಹೇಶ್ ಗಾಣಿಗ ಮಾಹಿತಿ ನೀಡಿದರು.

    ಸಾರ್ವಜನಿಕರಿಗೆ ತೊಂದರೆ ಹಾಗೂ ನಿರ್ಲಕ್ಷ್ಯದಡಿಯಲ್ಲಿ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿರುವುದಾಗಿ ಕುಂದಾಪುರ ಎ.ಸಿ.ಶಿಲ್ಪಾ ನಾಗ್ ಹೇಳಿದ್ದಾರೆ.

    ಹೆದ್ದಾರಿಗಳಲ್ಲಿ ಸೂಚನಾ ಫಲಕಗಳಿಲ್ಲ, ಚರಂಡಿ ವ್ಯವಸ್ಥೆಯಿಲ್ಲ. ಗುಡ್ಡಕ್ಕೆ ಕಪ್ಪುಕಲ್ಲು ಕೆಳಗಿನಿಂದ ಕಟ್ಟಬೇಕು. ಮೇಲ್ಭಾಗದ ಮಣ್ಣನ್ನು ಗುಡ್ಡದ ಹೊರಭಾಗಕ್ಕೆ ಇಳಿಸಬೇಕು ಎಂದು ಸದ್ಯ ಇಂಜಿನಿಯರ್ ಗಳು ನಿರ್ಧಾರ ಮಾಡಿದ್ದಾರೆ. ಸದ್ಯ ತೆರವು ಕಾರ್ಯಾಚರಣೆ ಮಾಡಿ ಒಂದು ಭಾಗದ ರಸ್ತೆ ಕ್ಲಿಯರ್ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯ್ತು. ಗುಡ್ಡ ಕುಸಿತದ ಪರಿಣಾಮ ಸುಮಾರು 5 ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಆಗಿತ್ತು.