Tag: Rainwater

  • ಕ್ಷುಲ್ಲಕ ಕಾರಣಕ್ಕೆ ಕುಟುಂಬದ ಮೇಲೆ ಅಟ್ಯಾಕ್ ಮಾಡಿದ ಗ್ಯಾಂಗ್ ಸೆರೆ

    ಕ್ಷುಲ್ಲಕ ಕಾರಣಕ್ಕೆ ಕುಟುಂಬದ ಮೇಲೆ ಅಟ್ಯಾಕ್ ಮಾಡಿದ ಗ್ಯಾಂಗ್ ಸೆರೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹದ್ದು ಮೀರುತ್ತಿದೆ ಪುಡಾರಿಗಳ ಹಾವಳಿ. ದಿನ ಕಳೆದಂತೆ ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಮದುವೆ ಮುಗಿಸಿ ಮನೆಗೆ ಬರುತ್ತಿದ್ದ ಕುಟುಂಬದ ಮೇಲೆ ಅಪರಿಚಿತರ ಗ್ಯಾಂಗ್ ಅಟ್ಯಾಕ್ ಮಾಡಿರುವ ಘಟನೆ ಕೆಜಿ ಹಳ್ಳಿಯ ಪಿಳ್ಳಣ್ಣ ಗಾರ್ಡನ್ ಬಳಿ ನಡೆದಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೆಂಗಳೂರಿನಲ್ಲಿ ಇತ್ತೀಚಿಗೆ ಹೊಡಿ ಬಡಿ ಪ್ರವೃತ್ತಿ ಅತಿಯಾಗುತ್ತಿದೆ. ಸಾರ್ವಜನಿಕರು ತಡರಾತ್ರಿ ಓಡಾಡುವುದಕ್ಕೆ ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸಯ್ಯದ್ ನೌಶದ್ ಎಂಬವರು ಅಕ್ಕನ ಮಗಳ ಮದುವೆ ಮುಗಿಸಿಕೊಂಡು ಕೆಜಿ ಹಳ್ಳಿಯ ಪಿಳ್ಳಣ್ಣ ಗಾರ್ಡನ್ ನಲ್ಲಿರುವ ಮನೆಗೆ ಕುಟುಂಬದೊಂದಿಗೆ ಬರುತ್ತಿರುವಾಗ ನಾಲ್ಕೈದು ಮಂದಿಯ ಗ್ಯಾಂಗ್ ಮರದ ದೊಣ್ಣೆಯಿಂದ ಹಲ್ಲೆ ಮಾಡಿ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿತ್ತು. ಇದನ್ನೂ ಓದಿ: ಸುಪ್ರೀಂಕೋರ್ಟ್ ಮುಂಭಾಗದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು

    ಕಾರು ಇಳಿಯೋಕು ಬಿಡದೆ ಕಾರು ತಡೆದು ಮನಸ್ಸೋ ಇಚ್ಛೆ ಥಳಿಸಿದ ಅಪರಿಚಿತರ ಗ್ಯಾಂಗ್ ಅಲ್ಲಿಂದ ಎಸ್ಕೇಪ್ ಆಗಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಆರೋಪಿಗಳ ಪ್ರಾಥಮಿಕ ತನಿಖೆ ವೇಳೆ ಮಳೆ ಬರುತ್ತಿರುವಾಗ ಮಳೆ ನೀರು ನಮ್ಮ ಮೇಲೆ ಚೆಲ್ಲಿದ್ದಕ್ಕೆ ಹಲ್ಲೆ ಮಾಡಿದ್ದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮನೆಯಲ್ಲೇ ತಾಳಿ ಕಟ್ಟಿ ಸಹ ನಟಿ ಜೊತೆ ಮದುವೆ ನಾಟಕ, ಒಡವೆ ಎಗರಿಸಿ ಎಸ್ಕೇಪ್

  • ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

    ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

    ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ.

    ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ದೇವಸ್ಥಾನ ಸಂಪೂರ್ಣ ಜಲಾವೃತವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕಟ್ಟಿಗೆಯಲ್ಲಿ ಅವಿತುಕೊಂಡಿದ್ದ ವಿಷ ಸರ್ಪ – ಉರಗ ಕಂಡು ಆತಂಕಗೊಂಡ ಜನ

    ಹಿಡಕಲ್ ಜಲಾಶಯದ ನೀರಿನ ಮಟ್ಟ (ಒಳ ಹರಿವು) 17 ಸಾವಿರ ಕ್ಯೂಸೆಕ್ ಇದ್ದು, ಹೊರ ಹರಿವನ್ನು ನಿಲ್ಲಿಸಲಾಗಿದೆ. ಆದರೂ ಕೂಡ ಬರೀ ಮಳೆಯ ನೀರಿನಿಂದಲೇ ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿರುವುದು ನದಿ ದಡದ ಜನರಲ್ಲಿ ಆತಂಕ ಮೂಡಿಸಿದೆ.

    ಹೊಳೆ ಬಸವೇಶ್ವರ ದೇವಸ್ಥಾನ ನದಿ ದಡದಲ್ಲೇ ಇರುವುದರಿಂದಾಗಿ ಘಟಪ್ರಭಾಗೆ ನೀರು ಹರಿವು ಹೆಚ್ಚಾಗುತ್ತಿದ್ದಂತೆ, ಪ್ರತೀ ವರ್ಷವೂ ಈ ದೇವಸ್ಥಾನ ಜಲದಿಗ್ಬಂಧನ ಎದುರಿಸುತ್ತಿದೆ. ಇದೀಗ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲವಾದರೂ ಮುಂದೆ ಹಿಡಕಲ್ ಜಲಾಶಯದಿಂದ 50 ಸಾವಿರ ಕ್ಯೂಸೆಕ್‍ನಷ್ಟು ನೀರು ಘಟಪ್ರಭಾಗೆ ಹರಿದು ಬಂದಾಗ, ಮುಧೋಳ ತಾಲೂಕಿನ ಹಲವು ಗ್ರಾಮಗಳಿಗೆ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ.