Tag: Raipur

  • ನನಗೀಗ 52 ವಯಸ್ಸು.. ಈಗಲೂ ಸ್ವಂತ ಮನೆಯೇ ಇಲ್ಲ: ರಾಹುಲ್‌ ಗಾಂಧಿ

    ನನಗೀಗ 52 ವಯಸ್ಸು.. ಈಗಲೂ ಸ್ವಂತ ಮನೆಯೇ ಇಲ್ಲ: ರಾಹುಲ್‌ ಗಾಂಧಿ

    ರಾಯ್ಪುರ: ನನಗೀಗ 52 ವಯಸ್ಸು. ಆದರೆ ನನಗೆ ಸ್ವಂತ ಮನೆಯೇ ಇಲ್ಲ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

    ರಾಯ್ಪುರದಲ್ಲಿ (Raipur) ನಡೆದ ಕಾಂಗ್ರೆಸ್‌ನ 85ನೇ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ವಿಚಿತ್ರ ಪರಿಸ್ಥಿತಿ ಇತ್ತು. ನಾನು ಅಮ್ಮನ ಬಳಿಗೆ ಹೋಗಿ ಏನಾಯಿತು ಎಂದು ಕೇಳಿದೆ. ಅದಕ್ಕೆ ಅವರು, ನಾವು ಮನೆಯಿಂದ ಹೊರಡುತ್ತಿದ್ದೇವೆ ಎಂದರು. ಇದು ನನ್ನ ಮನೆ ಅಲ್ಲವೇ ಎಂದು ನಾನು ಕೇಳಿದೆ. ಆಗ ಅಮ್ಮ, ಇದು ನಮ್ಮ ಮನೆ ಅಲ್ಲ, ಸರ್ಕಾರದ್ದು ಎಂದರು ಎಂದು ರಾಹುಲ್‌ ಸನ್ನಿವೇಶವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೆಲ ತಿಂಗಳು ಜೈಲಲ್ಲಿದ್ರೂ I Don’t Care- ವಿಚಾರಣೆಗೆ ಸಿಬಿಐ ಕಚೇರಿ ತಲುಪಿದ ಸಿಸೋಡಿಯಾ

    ಹಾಗಾದರೆ ನಾವು ಎಲ್ಲಿಗೆ ಹೋಗೋದು ಎಂದು ನಾನು ಕೇಳಿದೆ. ಅದಕ್ಕೆ ಅಮ್ಮ, ಗೊತ್ತಿಲ್ಲ ಎಂದರು. ನನಗೆ ಈಗ 52 ವರ್ಷ ವಯಸ್ಸು. ಇನ್ನೂ ನನಗೆ ಮನೆ ಇಲ್ಲ ಎಂದು ತಿಳಿಸಿದ್ದಾರೆ.

    ನಾನು ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದಾಗ, ನನ್ನ ಜವಾಬ್ದಾರಿ ಏನು ಎಂದು ಪ್ರಶ್ನಿಸಿಕೊಂಡಿದ್ದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಜನರಿಗೆ ನಾನಿದ್ದ ಕಚೇರಿ ಮನೆಯಂತೆಯೇ ಭಾಸವಾಗಬೇಕು ಎಂದುಕೊಂಡಿದ್ದೆ. ಯಾತ್ರೆಯೇ ನಮ್ಮ ಮನೆಯಾಗಿತ್ತು. ಈ ಮನೆಯ ಬಾಗಿಲು ಎಲ್ಲರಿಗೂ ತೆರೆದಿತ್ತು. ಶ್ರೀಮಂತರು, ಬಡವರು, ಪ್ರಾಣಿಗಳು ಎಲ್ಲರಿಗೂ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವು

    ಯಾತ್ರೆ ಒಂದು ಪುಟ್ಟ ಐಡಿಯಾ ಆಗಿತ್ತು. ಆದರೆ ನಂತರ ನಾನು ಅದರ ಆಳವನ್ನು ಅರ್ಥಮಾಡಿಕೊಂಡಿದ್ದೇನೆ. ಯಾತ್ರೆ ಮನೆಯಾದ ದಿನ ಯಾತ್ರೆಯೇ ಬದಲಾಯಿತು. ಜನರು ನನ್ನೊಂದಿಗೆ ರಾಜಕೀಯದ ಬಗ್ಗೆ ಮಾತನಾಡಲಿಲ್ಲ. ಕೊನೆಗೆ ನಮ್ಮ ಪುಟ್ಟ ಮನೆ ಕಾಶ್ಮೀರಕ್ಕೆ ಬಂದಾಗ, ನಾನು ನನ್ನ ಮನೆಗೆ ಬಂದೆ ಎನಿಸಿತು ಎಂದು ತಿಳಿಸಿದ್ದಾರೆ.

  • ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ದಿಸ್ಪುರ್: ಕಾಂಗ್ರೆಸ್ ಮುಖಂಡ ಪವನ್ ಖೇರಾ (Pawan Khera) ಅವರ ಬಂಧನ ಹಾಗೂ ಬಿಡುಗಡೆಯ ಬಳಿಕ ಅವರು ನೀಡಿದ್ದ ಹೇಳಿಕೆಗೆ ಬೆಷರತ್ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಯಾರು ಗೌರವಕ್ಕೆ ಧಕ್ಕೆ ಬರುವಂತಹ ಯಾವ ಪದಗಳನ್ನು ಬಳಸುವದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಅಸ್ಸಾಂ (Assam) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಶುಕ್ರವಾರ ಟ್ವೀಟ್ ಮಾಡಿದ್ದಾರೆ.

    ರಾಯ್‍ಪುರದ (Raipur) ಕಾಂಗ್ರೆಸ್ ಮಾಹಾಧಿವೇಶನಕ್ಕೆ (Congress plenary session) ತೆರಳಲು ವಿಮಾನವೇರಿದ್ದ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ ಬಂಧಿಸಿದ್ದರು. ಖೇರಾ ಅವರ ವಿರುದ್ಧ ಕ್ರಿಮಿನಲ್ ಸಂಚು, ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಕೋಮು ಸೌಹಾರ್ದತೆಗೆ ಪ್ರಚೋದಿಸಿದ ಆರೋಪ ದಾಖಲಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಐಜಿಪಿ ಮತ್ತು ವಕ್ತಾರ ಪ್ರಶಾಂತ ಕುಮಾರ್ ಭುಯಾನ್ ತಿಳಿಸಿದ್ದರು. ಇದನ್ನೂ ಓದಿ: ಸಿಟಿ ರವಿಗೆ ಮೂಳೆ ಬಿರಿಯಾನಿ, ಚಿಕನ್ ಪಾರ್ಸೆಲ್ ಮಾಡಿದ ಕೈ ಪಡೆ

     ಮುಂಬೈನ ಪತ್ರಿಕಾಗೋಷ್ಠಿಯೊಂದರಲ್ಲಿ ಫೆ.17ರಂದು ಖೇರಾ, ನರೇಂದ್ರ ಗೌತಮ್‍ದಾಸ್ ಮೋದಿ ಎಂದು ಉಚ್ಛರಿಸಿ ಬಳಿಕ ನರೇಂದ್ರ ದಾಮೋದರ ದಾಸ್ ಮೋದಿ (Narendra Modi) ಎಂದಿದ್ದರು. ಅಸ್ಸಾಂ ಪೊಲೀಸರು ಬಂಧಿಸಿದ ಕೂಡಲೇ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತುರ್ತು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇವಲ 1 ರೂ.ಗೆ ಬಡಜನರಿಗೆ ಚಿಕಿತ್ಸೆ ನೀಡ್ತಾರೆ ಈ ಡಾಕ್ಟರ್‌!

    ಕೇವಲ 1 ರೂ.ಗೆ ಬಡಜನರಿಗೆ ಚಿಕಿತ್ಸೆ ನೀಡ್ತಾರೆ ಈ ಡಾಕ್ಟರ್‌!

    ರಾಯ್ಪುರ: ಬಡವರಿಗಾಗಿ ಅನೇಕ ಸರ್ಕಾರಿ ಆರೋಗ್ಯ ಯೋಜನೆಗಳಿದ್ದರೂ, ಎಲ್ಲರಿಗೂ ಹೇಳಿಕೊಳ್ಳುವಂತಹ ಉಚಿತ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ದುಬಾರಿಯಾಗಿದ್ದು, ಕೂಲಿಕಾರರಿಗೆ ಸೂಕ್ತ ಚಿಕಿತ್ಸೆ ಪಡೆಯುವುದು ದೊಡ್ಡ ಸವಾಲಾಗಿದೆ. ಆದರೆ ಇಲ್ಲೊಬ್ಬ ವೈದ್ಯರು (Doctor) ತಮ್ಮ ಕ್ಲಿನಿಕ್‌ನಲ್ಲಿ ಕೇವಲ 1 ರೂಪಾಯಿಗೆ ಚಿಕಿತ್ಸೆ ನೀಡಿ ಮೆಚ್ಚುಗೆ ಗಳಿಸಿದ್ದಾರೆ.

    ಛತ್ತೀಸಗಢದ (Chhattisgarh) ರಾಯ್ಪುರದ (Raipur) ಅಂಬೇಡ್ಕರ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿನಯ್ ವರ್ಮಾ ಅವರು ತಮ್ಮ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಕೇವಲ 1 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನು ತಲ್ಲಣಗೊಳಿಸಿತು. ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಹಾಸಿಗೆಗಳಿಗಾಗಿ ಹೆಣಗಾಡಿದರು. ಇಂತಹ ಸನ್ನಿವೇಶದಲ್ಲಿ ಡಾ. ವರ್ಮಾ ಅವರು ರೋಗಿಗಳಿಗೆ ಸಾಕಷ್ಟು ನೆರವಾಗಿದ್ದರು. ಇದನ್ನೂ ಓದಿ: ಮಗಳ ಬಳಿ ಪ್ರೆಗ್ನೆನ್ಸಿ ಟೆಸ್ಟ್‌ ಕಿಟ್ ಪತ್ತೆ – ಆ್ಯಸಿಡ್ ಸುರಿದು ತಂದೆ, ತಾಯಿಯಿಂದ ಕೊಲೆ

    ಕಳೆದ 4 ವರ್ಷಗಳಿಂದ ಬಡಜನರಿಗೆ 1 ರೂ. ಪಡೆದು ವರ್ಮಾ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ನಿತ್ಯ ಬೆಳಗ್ಗೆ 8 ರಿಂದ 10 ಗಂಟೆವರೆಗೆ ಡಾ. ವರ್ಮಾ ಅವರು ತಮ್ಮ ಮನೆಯಲ್ಲೇ ರೋಗಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುತ್ತಾರೆ. ನಂತರ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡುತ್ತಾರೆ. ಚಿಕಿತ್ಸೆಗಾಗಿ ಅವರು ಕೇವಲ 1 ರೂ. ಶುಲ್ಕ ವಿಧಿಸುತ್ತಾರೆ.

    ಆಸ್ಪತ್ರೆಯಲ್ಲಿ ತುರ್ತು ಘಟಕದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಬಿಡುವಿದ್ದಾಗಲೆಲ್ಲಾ ಹೆಚ್ಚಿನ ಸಮಯ ಬಡರೋಗಿಗಳಿಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಫೆ.14 – ಹಸುಗಳನ್ನಪ್ಪಿಕೊಳ್ಳೊ ದಿನ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕರೆ

    “ನನ್ನ ಬಳಿಗೆ ಬರುವ ಅನೇಕ ರೋಗಿಗಳಿಗೆ ಔಷಧಿಗಳನ್ನು ಖರೀದಿಸಲು ಸಹ ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಅವರಿಗೆ ಔಷಧಿಗಳನ್ನು ನೀಡಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದ್ದಾರೆ. ಪ್ರತಿದಿನ 30 ರಿಂದ 40 ರೋಗಿಗಳಿಗೆ ತಮ್ಮ ಸೇವೆಯನ್ನು ನೀಡುವ ಡಾ. ವಿನಯ್ ಅವರು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ಟೇಡಿಯಂನಿಂದ ಮೈದಾನಕ್ಕೆ ಬಂದು ರೋಹಿತ್‍ರನ್ನು ತಬ್ಬಿಕೊಂಡ ಬಾಲಕ

    ಸ್ಟೇಡಿಯಂನಿಂದ ಮೈದಾನಕ್ಕೆ ಬಂದು ರೋಹಿತ್‍ರನ್ನು ತಬ್ಬಿಕೊಂಡ ಬಾಲಕ

    ರಾಯ್‍ಪುರ: ಭಾರತ (India) ಹಾಗೂ ನ್ಯೂಜಿಲೆಂಡ್ (New Zealand) ನಡುವಿನ ಎರಡನೇ ಏಕದಿನ ಪಂದ್ಯದ (2nd ODI) ನಡುವೆ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾರ (Rohit Sharma) ಅಭಿಮಾನಿ ಬಾಲಕನೋರ್ವ (Young Fan) ಸ್ಟೇಡಿಯಂನಿಂದ ಬಂದು ಮೈದಾನದಲ್ಲಿ ಶರ್ಮಾರನ್ನು ತಬ್ಬಿಕೊಂಡಿರುವ ಘಟನೆ ನಡೆದಿದೆ.

    ನ್ಯೂಜಿಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ ರಾಯ್‍ಪುರದಲ್ಲಿ (Raipur) ನಡೆಯುತ್ತಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 108 ರನ್‍ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಆ ಬಳಿಕ ಈ ಮೊತ್ತವನ್ನು ಚೇಸಿಂಗ್ ಮಾಡಲು ಮೈದಾನಕ್ಕಿಳಿದ ರೋಹಿತ್ ಶರ್ಮಾ ಭರ್ಜರಿಯಾಗಿ ಬ್ಯಾಟ್ ಬೀಸಿದರು. ಇದನ್ನೂ ಓದಿ: IND vs NZ 2nd ODI: ರಾಯ್‍ಪುರದಲ್ಲಿ ಟೀಂ ಇಂಡಿಯಾಗೆ ರಾಜ ಮರ್ಯಾದೆ – ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯದೊಂದಿಗೆ ಸರಣಿ ಕೈವಶ

    ಈ ನಡುವೆ 9.4 ಓವರ್‌ನಲ್ಲಿ ಭಾರತ ವಿಕೆಟ್ ನಷ್ಟವಿಲ್ಲದೇ 51 ರನ್ ಗಳಿಸಿತ್ತು. ಈ ವೇಳೆ ರೋಹಿತ್ ಶರ್ಮಾರ ಅಭಿಮಾನಿ ಬಾಲಕನೋರ್ವ ಸ್ಟೇಡಿಯಂನಿಂದ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮೈದಾನಕ್ಕೆ ಓಡಿ ಬಂದಿದ್ದಾನೆ. ಬಂದು ರೋಹಿತ್‍ರನ್ನು ನೋಡಿ ತಬ್ಬಿಕೊಂಡಿದ್ದಾನೆ. ಇದನ್ನೂ ಓದಿ: Will You Marry Me – ಆರೆಂಜ್ ಆರ್ಮಿ ಒಡತಿ ಕಾವ್ಯ ಮಾರನ್‍ಗೆ ಮದುವೆ ಪ್ರಸ್ತಾಪವಿಟ್ಟ ಪ್ರೇಕ್ಷಕ

    ಆ ಬಳಿಕ ಭದ್ರತಾ ಸಿಬ್ಬಂದಿ ಆ ಬಾಲಕನನ್ನು ಹಿಡಿದಿದ್ದಾರೆ. ಈ ವೇಳೆ ರೋಹಿತ್ ಬಾಲಕನಿಗೆ ಏನು ಮಾಡಬೇಡಿ ಆತನನ್ನು ಕರೆದುಕೊಂಡು ಹೋಗಿ ಎಂದಿದ್ದಾರೆ. ನಂತರ ಬಾಲಕ ಭದ್ರತಾ ಸಿಬ್ಬಂದಿ ಜೊತೆ ಸ್ಟೇಡಿಯಂ ಕಡೆಗೆ ಹೆಜ್ಜೆ ಹಾಕಿದ.

    ರೋಹಿತ್ ಶರ್ಮಾ ಪಂದ್ಯದಲ್ಲಿ ಅರ್ಧಶತಕ 51 ರನ್ (50 ಎಸೆತ, 7 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು. ಅಂತಿಮವಾಗಿ ಭಾರತ 2 ವಿಕೆಟ್ ನಷ್ಟಕ್ಕೆ 20.1 ಓವರ್‌ಗಳಲ್ಲಿ 111 ರನ್ ಚಚ್ಚಿ ಇನ್ನೂ 179 ಎಸೆತ ಬಾಕಿ ಇರುವಂತೆ 8 ವಿಕೆಟ್‍ಗಳಿಂದ ಗೆದ್ದು ಬೀಗಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮ್ಯಾನೇಜರ್ ನಂಬರ್ ಕೇಳಿದ್ದೆ ತಪ್ಪಾ? – ಬಟ್ಟೆ ಚಿಂದಿಯಾಗುವಂತೆ ವ್ಯಕ್ತಿಗೆ ಹೊಡೆದ್ರು ಮಹಿಳೆಯರು

    ಮ್ಯಾನೇಜರ್ ನಂಬರ್ ಕೇಳಿದ್ದೆ ತಪ್ಪಾ? – ಬಟ್ಟೆ ಚಿಂದಿಯಾಗುವಂತೆ ವ್ಯಕ್ತಿಗೆ ಹೊಡೆದ್ರು ಮಹಿಳೆಯರು

    ಭೋಪಾಲ್: ಮಹಿಳೆಯರ ಗುಂಪೊಂದು ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಬಟ್ಟೆ ಹರಿದು ಹೋಗುವಂತೆ ನಿರ್ದಯವಾಗಿ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಭಾನುವಾರ ರಾಯಪುರದ ಸ್ವಾಮಿ ವಿವೇಕಾನಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Raipur’s Swami Vivekananda International Airport) ವ್ಯಕ್ತಿಯೊಬ್ಬರು ಈ ವೀಡಿಯೋವನ್ನು ಸೆರೆಹಿಡಿದಿದ್ದು, ವೀಡಿಯೋದಲ್ಲಿ ರೊಚ್ಚಿಗೆದ್ದ ಮಹಿಳೆಯರು ಬೆಲ್ಟ್‌ನಿಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ಮತ್ತು ಹಣದ ವಿಚಾರವಾಗಿ ಪದೇ, ಪದೇ ಕಪಾಳಮೋಕ್ಷ ಮಾಡಿ, ಗುದ್ದುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ವ್ಯಕ್ತಿ ಧರಿಡಿದ್ದ ಶರ್ಟ್ ಕಿತ್ತುಹೋಗುವಂತೆ ಹೊಡೆದಿದ್ದಾರೆ.

    ಈ ಘಟನೆ ಸಂಬಂಧ ಎರಡೂ ಕಡೆಯವರು ರಾಯ್‍ಪುರ ನಗರದ ಮನ ಪೊಲೀಸ್ ಠಾಣೆಯಲ್ಲಿ (Mana police Station in Raipur city) ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಹುಲ್ ಟ್ರಾವೆಲ್ಸ್ (Rahul Travels) ಎಂಬ ಟ್ರಾವೆಲ್ ಕಂಪನಿಯ ಆಟೋ ಟ್ಯಾಕ್ಸಿ ಚಾಲಕ (Auto Taxi Driver) ದಿನೇಶ್ (Dinesh) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಸ್ತೆಗಾಗಿ ದಶಕಗಳಿಂದ ಹೋರಾಟ – ಆಸ್ಪತ್ರೆಗೆ ದಾಖಲಿಸಲು ವದ್ಧೆಯನ್ನು ಜೋಳಿಗೆಯಲ್ಲೇ ಹೊತ್ತೊಯ್ದರು

    ತಾನು ಟ್ರಾವೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ. ಆದರೆ ಈ ವರ್ಷ ಮೇ ಮತ್ತು ಜೂನ್ ತಿಂಗಳ ಸಂಬಳವನ್ನೇ ಪಡೆದಿರಲಿಲ್ಲ. ಹೀಗಾಗಿ ಬಾಕಿ ಹಣವನ್ನು ವಸೂಲಿ ಮಾಡಲು ಕಚೇರಿಗೆ ಬಂದಾಗ, ಮಹಿಳಾ ಉದ್ಯೋಗಿಗಳು ತನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಜಗಳವಾಡಿದರು. ಮ್ಯಾನೇಜರ್‌ನ ನಂಬರ್ ಕೇಳಿದಾಗ, ಮಹಿಳೆಯರ ಗುಂಪು ತನ್ನನ್ನು ಥಳಿಸಿ ನಿಂದಿಸಲು ಪ್ರಾರಂಭಿಸಿದರು ಎಂದು ದಿನೇಶ್  ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

    ಜೊತೆಗೆ ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಟೋ ಚಾಲಕನಿಗೆ ಜಾಕ್‌ಪಟ್‌ – ಓಣಂ ಬಂಪರ್‌ ಲಾಟರಿಯಲ್ಲಿ 25 ಕೋಟಿ ಗೆದ್ದ

    Live Tv
    [brid partner=56869869 player=32851 video=960834 autoplay=true]

  • ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು!

    ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು!

    ರಾಯಪುರ: ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿಂದು `ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮೃತ ಕಾರ್ಮಿಕನನ್ನು ಸುಮನ್ ತಿಗ್ಗಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಪ್ರತೀಕ್ಷಾ ಬಸ್ ನಿಲ್ದಾಣದಲ್ಲಿ ಮತ್ತೊಬ್ಬ ಕಾರ್ಮಿಕನೊಂದಿಗೆ ರಾಷ್ಟ್ರಧ್ವಜವನ್ನು ಕಟ್ಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮಣೇಂದ್ರಗಢ ಉಪವಿಭಾಗೀಯ ಪೊಲೀಸ್ ಅಧಿಕಾರಿ ರಾಕೇಶ್ ಕರ‍್ರೆ ಹೇಳಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಘಟನೆಯಲ್ಲಿ ಸುಮನ್ ತಿಗ್ಗಾ ಸಹೋದ್ಯೋಗಿ ರಾಮಕೃಪಾಲ್ ಸಿಂಗ್ (35) ಸಹ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಮಿಕರ ಸಂಘ ತಿಗ್ಗಾ ಸಾವಿನ ನಂತರ ಪ್ರತಿಭಟನೆ ನಡೆಸಿದ್ದು, ಮೃತನ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕರ‍್ರೆ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯದ ಅಮಲಿನಲ್ಲಿ ಸ್ಕೈವಾಕ್‍ನಿಂದ ಜಿಗಿದ ವ್ಯಕ್ತಿ – ಸೊಂಟಕ್ಕೆ ಗಂಭೀರ ಪೆಟ್ಟು

    ಮದ್ಯದ ಅಮಲಿನಲ್ಲಿ ಸ್ಕೈವಾಕ್‍ನಿಂದ ಜಿಗಿದ ವ್ಯಕ್ತಿ – ಸೊಂಟಕ್ಕೆ ಗಂಭೀರ ಪೆಟ್ಟು

    ರಾಯ್ಪುರ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯ ಸ್ಕೈವಾಕ್‍ನಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯ್ಪುರದಲ್ಲಿ ನಡೆದಿದೆ.

    ಗಾಯಗೊಂಡ ವ್ಯಕ್ತಿಯನ್ನು ಮಧ್ಯಪ್ರದೇಶದ ಸತ್ನಾ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತನ ಸೊಂಟಕ್ಕೆ ಗಂಭೀರವಾಗಿ ಪೆಟ್ಟುಬಿದ್ದಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    2003ರಲ್ಲಿ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದ ಸುಜಿತ್ ಕುಮಾರ್, ಮೂರ್ಛೆ ರೋಗವನ್ನು ಸಹ ಹೊಂದಿದ್ದ. ಮೂರ್ಛೆ ರೋಗ ಹೊಂದಿದ್ದರಿಂದ ಅವರನ್ನು ಡಾ.ಭೀಮ್ ರಾವ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

    ತನ್ನ ಲಗೇಜ್ ಮತ್ತು ಪ್ರಮಾಣಪತ್ರಗಳನ್ನು ಕೇಳುವ ಮೂಲಕ ಸುಜಿತ್ ಕುಮಾರ್ ಆಸ್ಪತ್ರೆಯಲ್ಲಿ ರಂಪಾಟ ಮಾಡಿ, ನಂತರ ಆಸ್ಪತ್ರೆಯಿಂದ ಓಡಿಹೋಗಿ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಸ್ಕೈವಾಕ್ ಅನ್ನು ಏರಿ ಕಿರಾಡಲು ಆರಂಭಿಸಿದ್ದಾನೆ. ಅಲ್ಲದೇ ಕುಡಿದ ಅಮಲಿನಲ್ಲಿ ಸುಜಿತ್ ಕುಮಾರ್ ಸ್ಕೈವಾಕ್ ಮೇಲೆ ಹತ್ತಿ ಜಿಗಿಯುತ್ತೇನೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅವಾಂತರ – ಭಾರೀ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ

    ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಕುಲದೀಪ್ ಜುನೇಜಾ ಅವರು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಸುಜಿತ್ ಕುಮಾರ್‍ನನ್ನು ಸಮಾಧಾನಗೊಳಿಸಿ ಕೆಳಗೆ ಬರುವಂತೆ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರು. ಆದರೆ ಸುಜಿತ್ ಯಾರ ಮಾತನ್ನು ಕೇಳದೇ ಸ್ಕೈವಾಕ್ ಮೇಲೆ ಓಡಲು ಆರಂಭಿಸಿ ನಂತರ 7 ರಿಂದ 8 ಅಡಿ ಎತ್ತರದಿಂದ ಕೆಳಗೆ ಜಿಗಿದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    ರಾಯ್‍ಪುರ: ದ್ವೇಷ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಕಳೆದ ಮೂರು ತಿಂಗಳಿಂದ ಸೆರೆವಾಸ ಅನುಭವಿಸುತ್ತಿದ್ದರು. ಆದರೆ ಈಗ ಛತ್ತೀಸ್‍ಗಢ ಹೈಕೋರ್ಟ್ ಕಾಳಿಚರಣ್ ಅವರಿಗೆ ಜಾಮೀನು ನೀಡಿದೆ.

    Kalicharan Maharaj: Kali devotee, who claimed a 'vision' | India News,The Indian Express

    ರಾಜ್ಯ ರಾಜಧಾನಿ ರಾಯ್‍ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಈ ಕುರಿತು ಭಾರೀ ಚರ್ಚೆಯಾಗುತ್ತಿತ್ತು. ಕಾಳಿಚರಣ್ ವಕೀಲರು ಜಾಮೀನಿಗಾಗಿ ಓಡಾಡುತ್ತಿದ್ದರೂ ಸಿಕ್ಕಿರಲಿಲ್ಲ. ಆದರೆ ಮೂರು ತಿಂಗಳ ನಂತರ ಛತ್ತೀಸ್‍ಗಢ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದನ್ನೂ ಓದಿ: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ

    ಡಿಸೆಂಬರ್ 30 ರಂದು ಮಧ್ಯಪ್ರದೇಶದ ರಾಯ್‍ಪುರ ಕಾರ್ಯಕ್ರಮದಲ್ಲಿ ಕಾಳಿಚರಣ್ ಅವರು ಮುಖ್ಯ ಅತಿಥಿಗಳಾಗಿ ಬಂದಿದ್ದರು. ಈ ವೇಳೆ ಕಾಳಿಚರಣ್ ಅವರು ಗಾಂಧಿ ದೇಶವನ್ನು ನಾಶಮಾಡುತ್ತಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವೀಡಿಯೋದಲ್ಲಿ ಅವರು, ನಾನು ನಾಥೂರಾಂ ಗೋಡ್ಸೆಗೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ವಿಚಾರಣೆಯಲ್ಲಿ ಕಾಳಿಚರಣ್ ಪರ ವಕೀಲ ಕಿಶೋರ್ ಭಾದುರಿ ಅವರು, ತಮ್ಮ ಕಕ್ಷಿದಾರರು ನಿರಪರಾಧಿಯಾಗಿದ್ದು, ರಾಜಕೀಯ ಪೈಪೋಟಿಯಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೈಕೋರ್ಟ್‍ಗೆ ತಿಳಿಸಿದ್ದರು. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

  • ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

    ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

    ರಾಯಪುರ: ತಂದೆಯೊಬ್ಬ 7 ವರ್ಷದ ತನ್ನ ಮೃತ ಮಗಳ ದೇಹವನ್ನು ಭುಜದ ಮೇಲೆ ಹೊತ್ತು 10 ಕಿ.ಮೀ ಸಾಗಿದ ಘಟನೆ ಶುಕ್ರವಾರ ಬೆಳಗ್ಗೆ ಸರ್ಗುಜಾ ಜಿಲ್ಲೆಯ ಲಖನ್‍ಪುರ್ ಗ್ರಾಮದಲ್ಲಿ ನಡೆದಿದೆ.

    ಘಟನೆ ವೀಡೀಯೋವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ದೃಶ್ಯವನ್ನು ಕಂಡ ಆರೋಗ್ಯ ಮಂತ್ರಿ ಟಿ.ಎಸ್ ಸಿಂಗ್ ದೇವ್ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ

    ವೀಡಿಯೋದಲ್ಲಿ ವ್ಯಕ್ತಿ ತನ್ನ ಹೆಗಲ ಮೇಲೆ ಶವವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಅಮದಲದಲ್ಲಿರುವ ಮನೆ ತಲುಪಲು ಕಾಲ್ನಡಿಗೆಯಲ್ಲಿ ಸುಮಾರು 10 ಕಿ.ಮೀ ದೂರ ಕ್ರಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಜಿಲ್ಲಾ ಕೇಂದ್ರವಾದ ಅಂಬಿಕಾಪುರದಲ್ಲಿದ್ದ ಆರೋಗ್ಯ ಸಚಿವ ಸಿಂಗ್ ದೇವ್ ಅವರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗೆ ಸೂಚಿಸಿದ್ದಾರೆ.

    ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವಿಡಿಯೋ ನೋಡಿದೆ. ಇದು ಗೊಂದಲದ ಸಂಗತಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಎಚ್‍ಒಗೆ ಹೇಳಿದ್ದೇನೆ. ಅಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು.

    ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿ ಮನೆಯವರ ಮನವೊಲಿಸಿ ವಾಹನಕ್ಕಾಗಿ ಕಾಯಬೇಕು. ಅಂತಹ ಘಟನೆಗಳು ನಡೆಯದಂತೆ ಅವರು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

    ಅಧಿಕಾರಿಗಳ ಪ್ರಕಾರ, ಜಿಲ್ಲೆಯ ಲಖನ್‍ಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಬಾಲಕಿ ಮೃತಪಟ್ಟಿದ್ದು, ಶವ ವಾಹನ ಬರುವ ಮುನ್ನ ಆಕೆಯ ತಂದೆ ಶವವನ್ನು ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು

    ಅಮದಾಳ ಗ್ರಾಮದವರಾದ ಈಶ್ವರ ದಾಸ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ಪುತ್ರಿ ಸುರೇಖಾಳನ್ನು ಬೆಳಗ್ಗೆ ಲಖನಪುರ ಸಿಎಚ್‍ಸಿಗೆ ಕರೆತಂದಿದ್ದರು.

    60ರ ಆಸುಪಾಸಿನಲ್ಲಿ ಬಾಲಕಿಯ ಆಮ್ಲಜನಕದ ಪ್ರಮಾಣ ತೀರಾ ಕಡಿಮೆಯಾಗಿತ್ತು. ಆಕೆಯ ಪೋಷಕರ ಪ್ರಕಾರ, ಆಕೆ ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಅಗತ್ಯ ಚಿಕಿತ್ಸೆ ನೀಡಿದರು ಸಹ ಅವಳ ಸ್ಥಿತಿ ಹದಗೆಟ್ಟಿತು. ಬೆಳಿಗ್ಗೆ 7:30 ರ ಸುಮಾರಿಗೆ ಅವರು ಸಾವನ್ನಪ್ಪಿದರು ಎಂದು ಹೇಳಿದರು.

    ಡಾ ವಿನೋದ್ ಭಾರ್ಗವ್, ಗ್ರಾಮೀಣ ವೈದ್ಯಕೀಯ ಸಹಾಯಕ (ಆರ್‍ಎಮ್‍ಎ) ಆರೋಗ್ಯ ಕೇಂದ್ರದಲ್ಲಿ ಈ ಬಗ್ಗೆ ನನಗೆ ತಿಳಿಸಿದ್ದಾರೆ. ಶೀಘ್ರದಲ್ಲೇ ಶವ ಸಾಗಾಟ ವಾಹನ ಬರಲಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಿದ್ದೇವೆ. ಶವ ಸಾಗಾಟ ವಾಹನವು 9:20ರ ಸುಮಾರಿಗೆ ಬಂದಿತು. ಆದರೆ ಆ ಹೊತ್ತಿಗೆ ಅವರು ದೇಹದೊಂದಿಗೆ ಹೊರಟು ಹೋಗಿದ್ದರ ಎಂದು ತಿಳಿಸಿದರು.

  • ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ರಾಯ್‍ಪುರ: ಮಾವೋವಾದಿಗಳು ಅಪಹರಿಸಿದ ಪತಿಯನ್ನು ಹುಡುಕುತ್ತಾ ಪತ್ನಿ ತನ್ನ ಎರಡೂವರೆ ವರ್ಷದ ಮಗಳೊಂದಿಗೆ ಅರಣ್ಯಕ್ಕೆ ಹೋಗಿರುವ ಭಾವನಾತ್ಮಕ ಘಟನೆ ರಾಯ್‍ಪುರದಲ್ಲಿ ನಡೆದಿದೆ.

    ಛತ್ತೀಸ್‍ಗಢದಲ್ಲಿ ತನ್ನ ಎಂಜಿನಿಯರ್ ಪತಿ ಅಶೋಕ್ ಅವರನ್ನು ಮಾವೋವಾದಿಗಳು ಅಪಹರಿಸಿದ ಕೆಲವು ದಿನಗಳ ನಂತರ, ಪತ್ನಿ ಸೋನಾಲಿ ಪವಾರ್, ಅವರನ್ನು ಬಿಡುಗಡೆ ಮಾಡುವಂತೆ ಭಾವನಾತ್ಮಕ ಮನವಿ ಮಾಡಿಕೊಂಡಿದ್ದರು. ಆದರೆ ಕೊನೆಗೂ ಅವರನ್ನು ಕಿಡಿಗೇಡಿಗಳು ಬಿಡುಗಡೆ ಮಾಡಿಲ್ಲ. ಪರಿಣಾಮ ತನ್ನ ಅಪ್ರಾಪ್ತ ಮಗಳೊಂದಿಗೆ ಸೋನಾಲಿ ಅವರು ಮಾವೋವಾದಿಗಳ ದಟ್ಟವಾದ ಅಬುಜ್ಮದ್ ಅರಣ್ಯಕ್ಕೆ ಪ್ರಯಾಣಿಸಿದ್ದಾರೆ.

    ಮಂಗಳವಾರ ಸಂಜೆ ಎಂಜಿನಿಯರ್ ಅಶೋಕ್ ಪವಾರ್ ಮತ್ತು ಕೆಲಸಗಾರ ಆನಂದ್ ಯಾದವ್ ಅವರನ್ನು ಮಾವೋವಾದಿಗಳು ಅವರಿಗೆ ಯಾವುದೇ ರೀತಿಯ ಹಾನಿಯಾಗದಂತೆ ಬಿಡುಗಡೆ ಮಾಡಿದ್ದಾರೆ. ಆದರೆ ಸೋನಾಲಿ ಪವಾರ್ ಇನ್ನೂ ಕಾಡಿನೊಳಗಿದ್ದು, ಅವರು ಸ್ಥಳೀಯ ಪತ್ರಕರ್ತರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಕ್ಲಾಸ್‍ಗೆ ಅನುಮತಿ ನೀಡಿ ಎಂದು ವಿದ್ಯಾರ್ಥಿನಿಯರು ಪಟ್ಟು!

    ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‍ಪಿ) ಪಂಕಜ್ ಶುಕ್ಲಾ ಈ ಕುರಿತು ಪ್ರತಿಕ್ರಿಯಿಸಿದ್ದು, ಅಶೋಕ್ ಪವಾರ್ ಮತ್ತು ಯಾದವ್ ಅವರನ್ನು ಪ್ರಸ್ತುತ ಬಿಜಾಪುರದ ಕುಟ್ರುದಲ್ಲಿ ಇರಿಸಲಾಗಿದೆ. ಪತಿಯನ್ನು ಭೇಟಿಯಾಗಲು ಸೋನಾಲಿ ಶೀಘ್ರದಲ್ಲೇ ಕುಟ್ರು ತಲುಪಲಿದ್ದಾರೆ ಎಂದು ಹೇಳಿದ್ದಾರೆ.

    ವೀಡಿಯೋದಲ್ಲಿ ಏನಿತ್ತು?
    ನನ್ನ ಹೆಣ್ಣು ಮಕ್ಕಳಿಗಾಗಿ ಪತಿಯನ್ನು ಬಿಡುಗಡೆ ಮಾಡುವಂತೆ ಮಾವೋವಾದಿಗಳಿಗೆ ಭಾವನಾತ್ಮಕ ವೀಡಿಯೊವನ್ನು ಮಾಡಿ ಸೋನಾಲಿ ಅವರು ಕಳುಹಿಸಿದ್ದರು. ವೀಡಿಯೋ ಕಳುಹಿಸಿದ ನಂತರವೂ ಅಶೋಕ್ ಅವರನ್ನು ಬಿಡುಗಡೆ ಮಾಡದ ಪರಿಣಾಮ, ಸೋನಾಲಿ ಪವಾರ್ ಅವರನ್ನು ಹುಡುಕಲು ಛತ್ತೀಸ್‍ಗಢದ ಬಿಜಾಪುರ ಮತ್ತು ನಾರಾಯಣಪುರ ಜಿಲ್ಲೆಗಳ ಅಬುಜ್ಮದ್ ಅರಣ್ಯವನ್ನು ಪ್ರವೇಶಿಸಿದ್ದಾರೆ ಎಂದು ವರದಿಗಳ ಪ್ರಕಾರ ತಿಳಿದುಬಂದಿದೆ.

    ಪ್ರಸ್ತುತ ಸೋನಾಲಿ ಅವರು ಪತ್ರಕರ್ತರ ಮತ್ತು ಪೊಲೀಸರ ಸಹಾಯದಿಂದ ಕೆಲವು ಸ್ಥಳೀಯರನ್ನು ಸಂಪರ್ಕಿಸಿದ್ದಾರೆ. ಅಲ್ಲದೆ ಸೋನಾಲಿ ಪವಾರ್ ತನ್ನ ಎರಡೂವರೆ ವರ್ಷದ ಕಿರಿಯ ಮಗಳನ್ನು ತನ್ನೊಂದಿಗೆ ಕಾಡಿಗೆ ಕರೆದೊಯ್ದಿದ್ದಾಳೆ. ಐದು ವರ್ಷದ ಹಿರಿಯ ಮಗಳನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್