Tag: Raipur

  • ಡ್ಯಾನ್ಸ್ ಮಾಡುವ ಮೂಲಕ ಟ್ರಾಫಿಕ್ ನಿಯಂತ್ರಿಸ್ತಿರುವ ಪೊಲೀಸ್: ವಿಡಿಯೋ

    ಡ್ಯಾನ್ಸ್ ಮಾಡುವ ಮೂಲಕ ಟ್ರಾಫಿಕ್ ನಿಯಂತ್ರಿಸ್ತಿರುವ ಪೊಲೀಸ್: ವಿಡಿಯೋ

    ರಾಯಪುರ: ಪೊಲೀಸ್ ಅಧಿಕಾರಿಯೊಬ್ಬರು ಡ್ಯಾನ್ಸ್ ಮಾಡುವ ಮೂಲಕ ಟ್ರಾಫಿಕ್ ಕಂಟ್ರೋಲ್ ಮಾಡುತ್ತಿರುವ ದೃಶ್ಯ ಛತ್ತಿಸಗಡದ ರಾಯಪುರದಲ್ಲಿ ಕಂಡು ಬಂದಿದೆ. ಇದೀಗ ಪೊಲೀಸ್ ಅಧಿಕಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಮೊಹಮ್ಮದ್ ಮೊಹ್ಸಿನ್ ಶೇಖ್ ಅವರು ತಮ್ಮ ವಿಶಿಷ್ಟ ಶೈಲಿಯೊಂದಿಗೆ ಟ್ರಾಫಿಕ್ ಕಂಟ್ರೋಲ್ ಮಾಡುತ್ತಿದ್ದಾರೆ. ಮೊಹ್ಸಿನ್ ಡ್ಯಾನ್ಸ್ ಮಾಡುವ ಮೂಲಕ ಟ್ರಾಫಿಕ್ ನಿಯಂತ್ರಿಸುತ್ತಿರುವುದನ್ನು ನೋಡಿದ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೊಹ್ಸಿನ್ ಅವರು, ನಾನು ನನ್ನ ಕೆಲಸವನ್ನು ತುಂಬಾ ಎಂಜಾಯ್ ಮಾಡುತ್ತೇನೆ. ಈ ಮೊದಲು ಮಧ್ಯಪ್ರದೇಶದ ಪೊಲೀಸ್ ಅಧಿಕಾರಿ ರಂಜಿತ್ ಸಿಂಗ್ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ನನಗೆ ತುಂಬಾ ಇಷ್ಟವಾಗಿತ್ತು. ವಿಶಿಷ್ಟ ಶೈಲಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಮಾಡುವುದು ತುಂಬಾ ಸುಲಭ. ಜನರು ನನ್ನ ಸನ್ನೆಯನ್ನು ತುಂಬಾ ಬೇಗ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

    ಇತ್ತೀಚೆಗೆ ಇಂದೋರ್ ನ ರಸ್ತೆಗಳಲ್ಲಿ ಡ್ಯಾನ್ಸಿಂಗ್ ಟ್ರಾಫಿಕ್ ಗರ್ಲ್ ಕಾಣಿಸಿಕೊಳ್ಳುತ್ತಿದ್ದರು. ಎಂಬಿಎ ವಿದ್ಯಾರ್ಥಿನಿ ಶುಭಿ ಜೈನ್ ತಮ್ಮ ವಿಭಿನ್ನ ಡ್ಯಾನ್ಸ್ ಮೂಲಕ ಟ್ರಾಫಿಕ್ ಕಂಟ್ರೋಲ್ ಮಾಡಿದ್ದರು. ಶುಭಿ ಜೈನ್ ತನ್ನ ವಿಭಿನ್ನ ಶೈಲಿಯೊಂದಿಗೆ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದರು.

  • ಯುವಕನ ಜೊತೆ ಪತ್ನಿಯ ಸೆಕ್ಸ್ – ವಿಡಿಯೋ ಮಾಡಿ ಪತಿಯಿಂದ ಬ್ಲ್ಯಾಕ್‍ಮೇಲ್

    ಯುವಕನ ಜೊತೆ ಪತ್ನಿಯ ಸೆಕ್ಸ್ – ವಿಡಿಯೋ ಮಾಡಿ ಪತಿಯಿಂದ ಬ್ಲ್ಯಾಕ್‍ಮೇಲ್

    ರಾಯಪುರ: ಪತಿಯೊಬ್ಬ ತನ್ನ ಪತ್ನಿ ಯುವಕನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿರುವ ವಿಡಿಯೋವನ್ನು ಸೆರೆ ಹಿಡಿದು ಬ್ಲ್ಯಾಕ್‍ಮೇಲ್ ಮಾಡಿದ ಘಟನೆ ಛತ್ತಿಸ್‍ಗಡದ ರಾಜನಂದ್‍ಗಾವ್‍ನಲ್ಲಿ ನಡೆದಿದೆ.

    ಪತಿ ಹಾಗೂ ಪತ್ನಿ ಇಬ್ಬರು ಸೇರಿ ಯುವಕನನ್ನು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದರು. ಮಹಿಳೆ ತನ್ನ ಪತಿಯ ಸಹಾಯದಿಂದ ಯುವಕನೊಬ್ಬನನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಳು. ಬಳಿಕ ಆ ಯುವಕನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದಳು. ಇದನ್ನು ಆಕೆಯ ಪತಿ ಗೌಪ್ಯವಾಗಿ ವಿಡಿಯೋ ಮಾಡುತ್ತಿದ್ದನು.

    ವಿಡಿಯೋ ಮಾಡಿದ ಬಳಿಕ ಪತಿ-ಪತ್ನಿ ಆ ಯುವಕನಿಗೆ ಬ್ಲ್ಯಾಕ್‍ಮೇಲ್ ಮಾಡಲು ಶುರು ಮಾಡಿದ್ದರು. 10 ಲಕ್ಷ ರೂ. ನೀಡಲಿಲ್ಲ ಎಂದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ದಂಪತಿ ಯುವಕನಿಂದ 6 ಲಕ್ಷ ರೂ. ಪಡೆದಿದ್ದಾರೆ. ಬಳಿಕ ಮತ್ತೆ ಹಣ ಕೇಳಿದಾಗ ಯುವಕ ದೂರು ನೀಡಿದ್ದು, ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ, ದಂಪತಿ ಮೊದಲು ಫೋಟೋ ಹಾಗೂ ವಿಡಿಯೋ ತೋರಿಸಿ ಯುವಕನಿಗೆ ಬ್ಲ್ಯಾಕ್‍ಮೇಲ್ ಮಾಡಿ 6 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದಾರೆ. ಬಳಿಕ ಮತ್ತೆ ಹಣ ಕೇಳಿದಾಗ ಯುವಕ ಗುರುವಾರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದನು. ಪೊಲೀಸರು ದಂಪತಿಯನ್ನು ಬಂಧಿಸಿ ವಿಚಾರಣೆ ನಡೆಸಿದ ನಂತರ ಜೈಲಿಗೆ ಕಳುಹಿಸಿದ್ದಾರೆ.

  • ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ನಕ್ಸಲರ ಅಟ್ಟಹಾಸ – ಮೂವರು ಬಲಿ

    ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ನಕ್ಸಲರ ಅಟ್ಟಹಾಸ – ಮೂವರು ಬಲಿ

    ರಾಯ್ಪುರ: ಛತ್ತೀಸ್‍ಗಢದ ಕಂಕರ್ ಜಿಲ್ಲೆಯಲ್ಲಿ ರೈಲ್ವೆ ಹಳಿ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಡೀಸೆಲ್ ಟ್ಯಾಂಕರ್ ಒಂದನ್ನು ನಕ್ಸಲಿಯರು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಇಟ್ಟು ಸ್ಫೋಟಿಸಿದ್ದು, ನಕ್ಸಲಿಯರ ಅಟ್ಟಹಾಸಕ್ಕೆ ಮೂವರು ನಾಗರಿಕರು ಬಲಿಯಾಗಿದ್ದಾರೆ.

    ಕಂಕರ್ ಜಿಲ್ಲೆಯ ತುಮಾ ಪಾಲ್ ಗ್ರಾಮದ ಬಳಿ ಸೋಮವಾರ ರಾತ್ರಿ ನಕ್ಸಲಿಯರು ಈ ಕೃತ್ಯವೆಸೆಗಿದ್ದಾರೆ. ಜಿಲ್ಲೆಯ ರೌಫಾಟ್ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ಟ್ರಕ್ ಮ್ಯಾನ್‍ಗಳು ಹಾಗೂ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿದ್ದಾರೆ. ಕೆಲಸ ನಡೆಯುತ್ತಿದ್ದ ಪ್ರದೇಶದಲ್ಲಿ ಐಇಡಿ ಸ್ಫೋಟಿಸಿ ನಕ್ಸಲಿಯರು ಅಟ್ಟಹಾಸ ಮೆರೆದಿದ್ದಾರೆ.

    ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಪರಿಸ್ಥಿತಿಯ ಬಗ್ಗೆ ಪರಿಶೀಲಿಸಲು ಜವಾನರು ಸ್ಥಳಕ್ಕೆ ಹೋದಾಗ, ಅಲ್ಲಿಯೇ ಹೊಂಚು ಹಾಕಿ ಕುಳಿತ್ತಿದ್ದ ನಕ್ಸಲರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

    ಘಟನಾ ಸ್ಥಳಕ್ಕೆ ಕಂಕರ್ ಎಸ್‍ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗೃತ ಕ್ರಮವಾಗಿ ಘಟನಾ ಸ್ಥಳವನ್ನು ಹಾದು ಹೋಗುವ ಭಾನುಪ್ರತಾಪ್‍ಪುರ ಹಾಗೂ ನಾರಾಯಣ್‍ಪುರ ಮಾರ್ಗದ ರಸ್ತೆ ಸಂಚಾರವನ್ನು ಕೆಲ ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ನಕ್ಸಲರಿಗಾಗಿ ಹುಡುಕಾಟ ನಡೆಸಲಾಗಿದೆ

  • 4 ವರ್ಷದಿಂದ ಪೊಲೀಸರ ವಶದಲ್ಲಿದ್ದ 3 ಆಮೆಗಳು ಬಿಡುಗಡೆ

    4 ವರ್ಷದಿಂದ ಪೊಲೀಸರ ವಶದಲ್ಲಿದ್ದ 3 ಆಮೆಗಳು ಬಿಡುಗಡೆ

    ರಾಯ್‍ಪುರ: ನಾಲ್ಕು ವರ್ಷಗಳಿಂದ ಪೊಲೀಸರ ವಶದಲ್ಲಿದ್ದ 3 ಆಮೆಗಳನ್ನು ಛತ್ತೀಸ್‍ಗಢದ ರಾಜನಂದಗಾಂವ್ ಜಿಲ್ಲಾ ನ್ಯಾಯಾಲಯ ಆದೇಶದ ಮೇರೆಗೆ ಇಂದು ಬಿಡುಗಡೆ ಮಾಡಲಾಗಿದೆ.

    2015ರಲ್ಲಿ ಈ ಆಮೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 6 ಮಂದಿ ಮಾಂತ್ರಿಕರು ಮಾಟಮಂತ್ರಕ್ಕಾಗಿ ಈ ಆಮೆಗಳನ್ನು ಬಳಸುತ್ತಿದ್ದರು. ಈ ಹಿನ್ನೆಲೆಯಲ್ಲಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅವರ ಜೊತೆಗೆ ಈ ಮೂರು ಆಮೆಗಳನ್ನು ಕೂಡ ವಶಕ್ಕೆ ಪಡೆದಿದ್ದರು. ಕಳೆದ 4 ವರ್ಷಗಳಿಂದ ಪೊಲೀಸ್ ಠಾಣೆಯಲ್ಲಿ ಪ್ಲಾಸ್ಟಿಕ್ ಟ್ಯಾಂಕಿನಲ್ಲಿ ಆಮೆಗಳನ್ನು ಇರಿಸಲಾಗಿತ್ತು.

    ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ರಾಜನಂದಗಾಂವ್ ಜಿಲ್ಲಾ ನ್ಯಾಯಾಲಯ ವಶಕ್ಕೆ ಪಡೆದಿರುವ ಆಮೆಗಳನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿದೆ. ಈ ಹಿನ್ನೆಲೆ ಇಷ್ಟು ದಿನ ಪೊಲೀಸರ ವಶದಲ್ಲಿದ್ದ ಆಮೆಗಳಿಗೆ ಬಿಡುಗಡೆ ಭಾಗ್ಯ ಬಂದಿದೆ. ಆಮೆಗಳನ್ನು ಪೊಲೀಸರು ವನ್ಯಜೀವಿ ಇಲಾಖೆಗೆ ಒಪ್ಪಿಸಿದ್ದು, ಇಲಾಖೆ ಸಿಬ್ಬಂದಿ ಆಮೆಗಳನ್ನು ಶಿವನಾಥ್ ನದಿಗೆ ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.

  • ತಾಯಿಯನ್ನು ಕೊಂದು ಮೆದುಳು ಫ್ರೈ ಮಾಡಿದ ಪಾಪಿ ಮಗ

    ತಾಯಿಯನ್ನು ಕೊಂದು ಮೆದುಳು ಫ್ರೈ ಮಾಡಿದ ಪಾಪಿ ಮಗ

    ರಾಯ್‍ಪುರ: ಕುಡಿಯುವುದಕ್ಕೆ ಹಣ ನೀಡಲಿಲ್ಲ ಎಂದು ಪಾಪಿ ಮಗನೊಬ್ಬ ತಾಯಿಯನ್ನು ಕೊಲೆ ಮಾಡಿ ಆಕೆಯ ಮೆದುಳನ್ನು ಫ್ರೈ ಮಾಡಿದ ಘನಘೋರ ಘಟನೆ ಛತ್ತೀಸ್‍ಗಢದ ಖಾರ್ಸಿ ಜಿಲ್ಲೆಯಲ್ಲಿ ನಡೆದಿದೆ.

    ಸೀತಾರಾಮ್ ಒರಾನ್ ತಾಯಿಯನ್ನು ಕೊಂದ ಮಗ. ಸೀತಾರಾಮ್ ತನ್ನ ತಾಯಿ ಫುಲೋಬಾಯಿ ಜೊತೆ ವಾಸಿಸುತ್ತಿದ್ದನು. ಅಲ್ಲದೆ ಕುಡಿತದ ಚಟಕ್ಕೆ ಬಲಿಯಾಗಿದ್ದನು. ಸೀತಾರಾಮ್ ಮದ್ಯ ಸೇವಿಸಲು ತನ್ನ ತಾಯಿಯ ಬಳಿ ಹಣ ಕೇಳಿದ್ದನು. ಆದರೆ ತಾಯಿ ಹಣ ಕೊಡಲು ನಿರಾಕರಿಸಿದ್ದರು.

    ತಾಯಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಸೀತಾರಾಮ್ ಹರಿತವಾದ ವಸ್ತುವಿನಿಂದ ತನ್ನ ತಾಯಿಗೆ ಹೊಡೆದಿದ್ದಾನೆ. ನಂತರ ಆಕೆಯ ತಲೆ ಬುರುಡೆಯನ್ನು ತೆರೆದು ಮೆದುಳನ್ನು ಫ್ರೈ ಮಾಡಲು ಹಾಕಿದ್ದಾನೆ. ಆದರೆ ಸೀತಾರಾಮ್ ಆ ಮೆದುಳನ್ನು ತಿನ್ನುವ ಮೊದಲು ಅವರ ಕಿರಿಯ ಸಹೋದರನ ಪತ್ನಿ ಸ್ಥಳಕ್ಕೆ ಬಂದಿದ್ದಾರೆ. ಸಹೋದರನ ಪತ್ನಿಯನ್ನು ನೋಡುತ್ತಿದ್ದಂತೆ ಸೀತಾರಾಮ್ ಸ್ಥಳದಿಂದ ಪರಾರಿ ಆಗಿದ್ದಾನೆ.

    ಸೀತಾರಾಮ್ ಕೃತ್ಯ ನೋಡಿದ ಮಹಿಳೆ ತನ್ನ ಪತಿಗೆ ಅತ್ತೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಇಬ್ಬರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆತನನ್ನು ಹುಡುಕಾಡಲು ಶುರು ಮಾಡಿದ್ದಾರೆ. ಈ ವೇಳೆ ಸೀತಾರಾಮ್ ರಕ್ತ ಆಗಿರುವ ಬಟ್ಟೆಯಲ್ಲೇ ಯಾವುದೋ ಪ್ರದೇಶದಲ್ಲಿ ಅಡಗಿಕೊಂಡಿದ್ದನು. ಬಳಿಕ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾಗ ಆತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಸದ್ಯ ಪೊಲೀಸರು ಸೀತಾರಾಮ್ ವಿರುದ್ಧ ಐಪಿಸಿ ಸೆಕ್ಷನ್ ಅಡಿ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸೀತಾರಾಮ್ ಕಿರಿಯ ಸಹೋದರ ಆತನನ್ನು ಮದ್ಯ ಸೇವಿಸಬೇಡ ಎಂದು ಹಲವು ಬಾರಿ ಹೇಳಿದ್ದಾರೆ. ಆದರೆ ಈ ವಿಷಯಕ್ಕಾಗಿ ಸೀತಾರಾಮ್ ತನ್ನ ಸಹೋದರನ ಬಳಿ ಜಗಳವಾಡುತ್ತಿದ್ದನು. ಹಾಗಾಗಿ ಕಿರಿಯ ಸಹೋದರ ಆ ಮನೆಯಿಂದ ಹೊರಗೆ ಬಂದು ಬೇರೆ ಮನೆಯಲ್ಲಿ ವಾಸಿಸುತ್ತಿದ್ದನು. ಅಲ್ಲದೆ ತನ್ನ ತಾಯಿಯನ್ನು ಸೀತಾರಾಮ್ ಜೊತೆಯಲ್ಲಿ ಬಿಟ್ಟು ಹೋಗಿದ್ದರು.

  • ಪೊಲೀಸರಿಂದಲೇ ಪ್ರಯಾಣಿಕರ ದರೋಡೆ, ಬಸ್ಸಿಗೆ ಬೆಂಕಿ

    ಪೊಲೀಸರಿಂದಲೇ ಪ್ರಯಾಣಿಕರ ದರೋಡೆ, ಬಸ್ಸಿಗೆ ಬೆಂಕಿ

    ರಾಯಪುರ: ಖಾಸಗಿ ಬಸ್ಸಿನ ಪ್ರಯಾಣಿಕರನ್ನು ಲೂಟಿ ಮಾಡಿ ವಾಹನಕ್ಕೆ ಬೆಂಕಿ ಹಚ್ಚಿದ ಆರೋಪದಡಿ ಇಬ್ಬರು ಪೊಲೀಸರು ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಚತ್ತೀಸ್‍ಗಢದ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ.

    ಬಂಧಿತರನ್ನು ಮಾಧವ್ ಕುಲದೀಪ್ (35), ಹಿರ್ದು ರಾಮ್ ಕುಮೆತಿ (26), ದೋಲೆಂದ್ರ ಬಘೇಲ್ (21) ಎಂದು ಗುರುತಿಸಲಾಗಿದ್ದು, ಈ ಪೊಲೀಸ್ ಪೇದೆಗಳು ಕೊಂಡಗಾಂವ್‍ನಲ್ಲಿ ನೇಮಕಗೊಂಡಿರುವ ಕುರಿತು ತಿಳಿದುಬಂದಿದೆ. ನಾಲ್ಕನೇ ಆರೋಪಿ ಇನ್ನೂ ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ತಿಳಿಸಿದ್ದಾರೆ.

    ಆರೋಪಿಗಳಿಂದ ದರೋಡೆ ಸಮಯದಲ್ಲಿ ಬಳಸಿದ ಎರಡು ಬೈಕ್‍ಗಳು, ಎರಡು ದೇಶಿ ನಿರ್ಮಿತ ಬಂದೂಕುಗಳು, ಮೊಬೈಲ್ ಹಾಗೂ ಪ್ರಯಾಣಿಕರಿಂದ ಲೂಟಿ ಮಾಡಿದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮಾಜಿ ಪೊಲೀಸ್ ಮಾಹಿತಿದಾರ ಓಂಕಾರ್ ಕುಮೇತಿ ಸೇರಿದಂತೆ ಇನ್ನೂ ಹಲವರು ತಲೆ ಮರೆಸಿಕೊಂಡಿದ್ದಾರೆ. ಈ ಜಾಲವು ತುಂಬಾ ದೊಡ್ಡದಾಗಿದೆ ಎಂದು ಗಾರ್ಗ್ ಹೇಳಿದ್ದಾರೆ.

    ನಡೆದಿದ್ದೇನು?
    ಆಗಸ್ಟ್ 12ರ ರಾತ್ರಿ ನಾಲ್ವರು ಆರೋಪಿಗಳು ನಾರಾಯಣಪುರದಿಂದ ಕೊಂಡಗಾಂವ್‍ಗೆ ತೆರಳುತ್ತಿದ್ದ ಬಸ್ತರ್ ಟ್ರಾವೆಲ್ಸ್ ನ ಬಸ್ಸನ್ನು ಗಂಗಮುಂಡ ಗ್ರಾಮದ ಬಳಿಯ ಕೊಕೋಡಿ ರಿವ್ಯೂಲೇಟ್‍ನಲ್ಲಿ ತಡೆದಿದ್ದಾರೆ. ನಂತರ ಪ್ರಯಾಣಿಕರನ್ನು ಬಲವಂತವಾಗಿ ಕೆಳಗಿಳಿಸಿ, ಬಸ್ಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ಆರೋಪಿಗಳು ಪ್ರಯಾಣಿಕರಿಂದ ಹಣ, ಮೊಬೈಲ್ ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ಎಸ್‍ಪಿ ಮಾಹಿತಿ ನೀಡಿದ್ದಾರೆ.

    ಬಸ್ ತಡೆದು ಬೆಂಕಿ ಹಚ್ಚಿದ್ದಾರೆ ಎಂದರೆ ಇವರು ನಕ್ಸಲರೇ ಇರಬೇಕು ಎಂದು ಆರಂಭದಲ್ಲಿ ಪೊಲೀಸರು ಶಂಕಿಸಿದ್ದಾರೆ. ಆದರೆ, ನಕ್ಸಲರು ಎಂದಿಗೂ ಪ್ರಯಾಣಿಕರನ್ನು ದರೋಡೆ ಮಾಡುವುದಿಲ್ಲ ಎಂದು ಮತ್ತೆ ಪೊಲೀಸರಿಗೆ ಅನುಮಾನ ಮೂಡಿತ್ತು. ಆಗ ಕೊಂಡಗಾಂವ್‍ನ ಬಮ್ಹಾನಿ ಗ್ರಾಮದ ಬಳಿಯ ದರೋಡೆಕೋರರ ಮೊಬೈಲ್ ಲೊಕೇಷನ್‍ಗಳನ್ನು ಸೈಬರ್ ವಿಭಾಗದ ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ದೊರೆತ ಸುಳಿವಿನ ಆಧಾರದಲ್ಲಿ ಆರೋಪಿ ಕುಲದೀಪ್‍ನನ್ನು ಬಂಧಿಸಿದ್ದರು.

    ಕುಲದೀಪ್‍ನನ್ನು ತೀವ್ರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಘಟನೆಯ ಬಗ್ಗೆ ಬಾಯ್ಬಿಟ್ಟಿದ್ದ. ನಂತರ ಹಿರ್ದು ಮತ್ತು ಬಾಗೆಲ್‍ನನ್ನು ಕೊಂಡಗಾಂವ್‍ನಿಂದ ಬಂಧಿಸಿ ಕರೆ ತಂದಿದ್ದರು. ಬಂಧಿಸಲ್ಪಟ್ಟಿರುವ ಮೂವರೂ ಆರೋಪಿಗಳು ನಾರಾಯಣಪುರ-ಓರ್ಚಾ, ನಾರಾಯಣಪುರ-ಕೊಂಡಗಾಂವ್ ಮತ್ತು ಮರ್ಡೂಮ್-ಬರ್ಸೂರ್ ಮಾರ್ಗದಲ್ಲಿ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

  • ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ

    ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ

    ರಾಯ್ಪುರ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಛತ್ತೀಸ್‍ಗಢದ ದಂತೇವಾಡದ ಬೊಡ್ಲಿ ಬಳಿ ನಡೆದಿದೆ.

    ಹುತಾತ್ಮರಾದ ಯೋಧ ಬಿಹಾರದ ನವಾಡಾ ಮೂಲದ ರೋಶನ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಸಿಆರ್‌ಪಿಎಫ್ ನ 195 ಬೆಟಾಲಿಯನ್‍ನ ಭಾಗವಾಗಿದ್ದರು. ಮಂಗಳವಾರ ಬೆಳಿಗ್ಗೆ 6:15 ರ ಸುಮಾರಿಗೆ ದಂತೇವಾಡ-ಜಗದಾಲ್‍ಪುರ ಗಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಗಡಿಯಲ್ಲಿದ್ದ ಮಾಲೆವಾಹಿ ಸಿಆರ್‌ಪಿಎಫ್ ಶಿಬಿರದಿಂದ ಸುಮಾರು 700 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

    ಸ್ಫೋಟಗೊಂಡ ಐಇಡಿ ಬಾಂಬ್‍ನಲ್ಲಿ ಒತ್ತಡದ ಕಾರ್ಯವಿಧಾನವನ್ನು ಬಳಸಲಾಗಿದೆ ಎಂದು ವರದಿಯಾಗಿದ್ದು, ಸ್ಫೋಟಗೊಂಡ ಪ್ರದೇಶದಲ್ಲಿ ಯೋಧ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

    ಸದ್ಯ ಮೃತ ಜವಾನ್ ರೋಶನ್ ಕುಮಾರ್ ಅವರ ಮೃತದೇಹವನ್ನು ಛತ್ತೀಸ್‍ಗಢದ ಬರ್ಸೂರ್ ಗೆ  ತಂದು ಬಳಿಕ ಸ್ವಗ್ರಾಮಕ್ಕೆ ಮೃತದೇಹವನ್ನು ರವಾನಿಸಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

  • ಮೂವರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ

    ಮೂವರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ

    ರಾಯ್ಪುರ: ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ ಹೆಚ್ಚುತ್ತಿದ್ದು, ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ  ನಡೆಸಿ ಎನ್‍ಕೌಂಟರ್ ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿಯನ್ನು ಹತ್ಯೆಗೈದಿದ್ದಾರೆ.

    ಜುಲೈ 26ರಂದು 40-50 ಮಂದಿ ಮಾವೋವಾದಿಗಳು ತಿರಿಯಾ ಗ್ರಾಮದ ಅರಣ್ಯದಲ್ಲಿ ಬೀಡುಬಿಟ್ಟಿದ್ದಾರೆ ಎಂಬ ಮಾಹಿತಿ ದೊರಕಿತ್ತು. ಈ ಮಾಹಿತಿ ಮೇರೆಗೆ ಪೊಲೀಸರು, ಜಿಲ್ಲಾ ಭದ್ರತಾ ಸಿಬ್ಬಂದಿ, ವಿಶೇಷ ಮೀಸಲು ಪಡೆ ಜೊತೆ ಸೇರಿ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಒಡಿಶಾ ಗಡಿಯಲ್ಲಿನ ತಿರಿಯಾ ಗ್ರಾಮದ ಅರಣ್ಯದ ಬಳಿ ಗುಂಡಿನ ಘರ್ಷಣೆ ನಡೆದಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿ ಮೇಲೆ ಮೂವರು ಮಹಿಳಾ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು.

    ಈ ವೇಳೆ ಪ್ರತಿದಾಳಿ ನಡೆಸಿ ಒಟ್ಟು ಏಳು ಮಂದಿ ನಕ್ಸಲರನ್ನು ಹತ್ಯೆಗೈಯಲಾಯಿತು. ಕೆಲವು ನಕ್ಸಲರು ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆ ವಿಭಾಗದ ಡಿಎಸ್‍ಪಿ ಸುಂದರ್ ರಾಜ್ ಹೇಳಿದ್ದಾರೆ.

    ಈ ವೇಳೆ ಯಾವ ಸಿಬ್ಬಂದಿಯು ಕೂಡ ಗಾಯಗೊಂಡಿಲ್ಲ ಎನ್ನಲಾಗಿದೆ. ಅಲ್ಲದೆ ನಕ್ಸಲರ ಮೃತದೇಹಗಳನ್ನು ಗುರುತಿಸಲು ಜಗ್ದಲ್‍ಪುರಕ್ಕೆ ರವಾನಿಸಲಾಗಿದೆ. ಹಾಗೆಯೇ ಘಟನಾ ಸ್ಥಳದಲ್ಲಿ ಐಎನ್‍ಎಸ್‍ಎಎಸ್ ರೈಫಲ್, 4 303 ರೈಫಲ್‍ಗಳು, ಇತರೇ ಮಾರಾಕಾಸ್ತ್ರಗಳನ್ನು ಸಿಬ್ಬಂದಿ ವಶಪಡಿಕೊಂಡಿದ್ದಾರೆ.

    ತಿರಿಯಾ ಅರಣ್ಯ ಪ್ರದೇಶ ಹಾಗೂ ಸುತ್ತಮುತ್ತಲ ಗ್ರಾಮವನ್ನು ತಮ್ಮ ವಶಕ್ಕೆ ಪಡೆಯಲು ಕೆಲವು ದಿನಗಳ ಹಿಂದೆಯಷ್ಟೇ ನಕ್ಸಲರ ತಂಡ ಈ ಅರಣ್ಯಕ್ಕೆ ಬಂದು ನೆಲೆಸಿತ್ತು. ಅಲ್ಲದೆ ಅವರ ಕಾವಲಿಗಾಗಿ ಜನರನ್ನು ಕೂಡ ಅವರು ಹೊಂದಿದ್ದರು. ಕಾವಲಿಗಿದ್ದ ವ್ಯಕ್ತಿಗಳು ಗ್ರಾಮಗಳಲ್ಲಿ ನಕ್ಸಲರ ಬಗ್ಗೆ ಜನರಲ್ಲಿ ಭಯಹುಟ್ಟಿಸುತ್ತಿದ್ದರು. ಅಲ್ಲದೆ ವಾರದ ಸಂಸ್ಥೆಗಳಿಗೂ ಕೂಡ ತೆರೆಳುತ್ತಿದ್ದರು. ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಕಾವಲುಗಾರರು ನಕ್ಸಲರಿಗೆ ತಿಳಿಸಿದ್ದು, ಅವರು ಅರಣ್ಯದಿಂದ ಪರಾರಿಯಾಗಲೂ ಹೊರಟಿದ್ದರು. ಆದರೆ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಜಾಗೃತರಾಗಿದ್ದರಿಂದ ನಕ್ಸಲರನ್ನು ಸದೆಬಡಿಯಲು ಸಹಕಾರಿಯಾಯ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ದೇಶದ ಮೊದಲ ‘ಗಾರ್ಬೇಜ್ ಕೆಫೆ’- ಪ್ಲಾಸ್ಟಿಕ್ ತ್ಯಾಜ್ಯ ಕೊಟ್ರೆ ಊಟ ಫ್ರೀ

    ದೇಶದ ಮೊದಲ ‘ಗಾರ್ಬೇಜ್ ಕೆಫೆ’- ಪ್ಲಾಸ್ಟಿಕ್ ತ್ಯಾಜ್ಯ ಕೊಟ್ರೆ ಊಟ ಫ್ರೀ

    ರಾಯ್ಪುರ್: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರಕ್ಕೆ ಆಗುವ ಹಾನಿ ಹೆಚ್ಚಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಪೂರ್ಣ ಪ್ರಮಾಣದಲ್ಲಿ ತಡೆಯಲು ಆಗದಿದ್ದರೂ ಅಲ್ಪ ಪ್ರಮಾಣದಲ್ಲಿ ಪರಿಸರವನ್ನು ಉಳಿಸಲು ಛತ್ತೀಸ್‍ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಹೊಸ ಉಪಾಯ ಮಾಡಿದೆ.

    ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಗಾರ್ಬೇಜ್ ಕೆಫೆ ತೆರೆಯುವ ಪ್ರಯತ್ನಕ್ಕೆ ಕೈಹಾಕಿದೆ. ಪ್ಲಾಸ್ಟಿಕ್ ಚಿಂದಿ ಆಯುವ ನಿರಾಶ್ರಿತರಿಗೆ ‘ಗಾರ್ಬೇಜ್ ಕೆಫೆ’ ಹೆಸರಿನಲ್ಲಿ ಹೋಟೆಲ್ ತೆರೆಯಲು ಅಂಬಿಕಾಪುರ ಮಹಾನಗರ ಪಾಲಿಕೆ ನಿರ್ಧರಿಸಿದೆ.

    ಈ ಹೋಟೆಲ್ ಬಡ ಜನರಿಗೆ ಕೂಡ ಅನುಕೂಲವಾಗಲಿದೆ. ಅಲ್ಲದೆ ಈ ಹೋಟೆಲ್‍ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಂದುಕೊಟ್ಟರೆ ಉಪಹಾರ, ಊಟವನ್ನು ಉಚಿತವಾಗಿ ಕೊಡಲಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯ ಕೂಡ ಒಂದೆಡೆ ಸಂಗ್ರಹವಾಗುತ್ತದೆ. ಇದರಿಂದ ನಗರದ ರಸ್ತೆಗಳು ಪ್ಲಾಸ್ಟಿಕ್ ಮುಕ್ತ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ‘ಪ್ಲಾಸ್ಟಿಕ್ ಶುಲ್ಕ’ ಕಟ್ಟಿ ಉಚಿತವಾಗಿ ಓದಿ – ಶಾಲೆಯ ತಂತ್ರಕ್ಕೆ ಭಾರೀ ಮೆಚ್ಚುಗೆ

    ಗಾರ್ಬೇಜ್ ಕೆಫೆಯಲ್ಲಿ ಒಂದು ಕೆ.ಜಿ. ಪ್ಲಾಸ್ಟಿಕ್ ತಂದುಕೊಟ್ಟರೆ ಊಟ ಹಾಗೂ ಅರ್ಧ ಕೆ.ಜಿ. ಪ್ಲಾಸ್ಟಿಕ್ ತಂದುಕೊಟ್ಟರೆ ಉಪಾಹಾರ ನೀಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಈ ಗಾರ್ಬೆಜ್ ಕೆಫೆ ಒಂದು ವಿನೂತನ ಪ್ರಯತ್ನವಾಗಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಈ ರೀತಿ ಗಾರ್ಬೆಜ್ ಕೆಫೆ ನಿರ್ಮಾಣವಾಗಲಿದೆ.

    ಚಿಂದಿ ಆಯುವವರ ಹೊಟ್ಟೆ ತುಂಬಿಸುವುದೇ ಈ ವಿನೂತನ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ತಂದುಕೊಟ್ಟರೆ ಪಾಲಿಕೆ ವತಿಯಿಂದ ಉಚಿತ ಊಟ, ಉಪಾಹಾರ ನೀಡಲಾಗುತ್ತದೆ. ಕೆಫೆಯಲ್ಲಿ ಸಂಗ್ರಹಿಸಲಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ನಿರ್ಮಾಣ ಕಾರ್ಯಕ್ಕೆ ಬಳಸಲು ಪಾಲಿಕೆ ಚಿಂತನೆ ನಡೆಸಿದೆ.

    ಈ ‘ಗಾರ್ಬೇಜ್ ಕೆಫೆ’ ಯೋಜನೆಗಾಗಿ ಅಂಬಿಕಾಪುರ ಮಹಾನಗರ ಪಾಲಿಕೆ ಕಡೆಯಿಂದ ವರ್ಷಕ್ಕೆ 5 ಲಕ್ಷ ರೂ. ಅನುದಾನವನ್ನು ಈ ಯೋಜನೆಗೆ ಮೀಸಲಿಡಲಾಗಿದೆ. ಅಲ್ಲದೆ ಈ ಯೋಜನೆಯನ್ನು ವಿಸ್ತರಿಸಲು ಪಾಲಿಕೆ ಯೋಚಿಸುತ್ತಿದೆ. ಮುಂದೆ ಅದು ಕಾರ್ಯರೂಪಕ್ಕೆ ಬಂದರೆ ಪ್ಲಾಸ್ಟಿಕ್ ಸಂಗ್ರಹಿಸಿ ತಂದು ಕೊಟ್ಟರೆ ಪಾಲಿಕೆ ವತಿಯಿಂದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡುವುದಾಗಿ ತೀಳಿಸಿದೆ.

    ಸದ್ಯ ಸ್ವಚ್ಛತಾ ಅಭಿಯಾನದ ಪಟ್ಟಿಯಲ್ಲಿ ಇಂಧೋರ್ ಬಳಿಕ ಛತ್ತೀಸ್‍ಗಢದ ಅಂಬಿಕಾನಗರ ಈಗ 2ನೇ ಸ್ವಚ್ಛ ನಗರವಾಗಿದೆ. ಅಲ್ಲದೆ ಈಗಾಗಲೇ ನಗರದ ಕೆಲವು ರಸ್ತೆಗಳನ್ನು ಡಾಂಬರು ಹಾಗೂ 8 ಲಕ್ಷ ಪ್ಲಾಸ್ಟಿಕ್ ಚೀಲಗಳ ಮೂಲಕ ನಿರ್ಮಿಸಲಾಗಿದೆ.

  • ಮದ್ವೆಯಾದ 40 ದಿನಕ್ಕೆ ಸ್ನೇಹಿತನಿಂದ ಪತ್ನಿಯನ್ನೇ ರೇಪ್ ಮಾಡಿಸ್ದ

    ಮದ್ವೆಯಾದ 40 ದಿನಕ್ಕೆ ಸ್ನೇಹಿತನಿಂದ ಪತ್ನಿಯನ್ನೇ ರೇಪ್ ಮಾಡಿಸ್ದ

    -ಅತ್ಯಾಚಾರಿಯೊಂದಿಗೆ 19ರ ಪತಿಯಿಂದ ಹೆಂಡತಿಯ ವಿವಾಹ

    ರಾಯ್ಪುರ್: 19 ವರ್ಷದ ಯುವಕನೊಬ್ಬ ವಿಚ್ಛೇದನ ಪಡೆಯಲು ತನ್ನ ಸ್ನೇಹಿತನಿಂದ ಪತ್ನಿಯನ್ನೇ ಅತ್ಯಾಚಾರ ಮಾಡಿಸಿರುವ ಆಘಾತಕಾರಿ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಖಿಲೇಂದ್ರ ಸಾಹೂ ಎಂದು ಗುರುತಿಸಲಾಗಿದೆ. ಈತನ ಗೆಳೆಯ ಕಮ್ಲೇಶ್ ತನ್ನ ಸ್ನೇಹಿತನ ಪತ್ನಿಯನ್ನೇ ಅತ್ಯಾಚಾರ ಮಾಡಿದ್ದಾನೆ. ಇದೀಗ ಇಬ್ಬರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಕಬೀರ್ಧಾಮ್ ಜಿಲ್ಲೆಯ ಪೈಪರ್ ಟೋಲಾ ಗ್ರಾಮದ ನಿವಾಸಿ ಖಿಲೇಂದ್ರ ಸಾಹೂ 40 ದಿನಗಳ ಹಿಂದೆ ಅಪ್ರಾಪ್ತ ಹುಡುಗಿಯನ್ನು ಮದುವೆಯಾಗಿದ್ದನು. ಆದರೆ ಈತನಿಗೆ ಈ ಮದುವೆ ಇಷ್ಟವಿರಲಿಲ್ಲ. ಮನೆಯವರ ಒತ್ತಾಯದ ಮೇರೆಗೆ ವಿವಾಹವಾಗಿದ್ದನು. ಒಂದು ದಿನ ಪತಿ ತನ್ನ ಆಧಾರ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾವರ್ಧಾಗೆ ಪತ್ನಿಯನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಹೋಟೆಲ್‍ಗೆ ಪತ್ನಿಯನ್ನು ಕರೆದುಕೊಂಡು ಹೋಗಿದ್ದು, ಅಲ್ಲಿಗೆ ಸ್ನೇಹಿತ ಕಮ್ಲೇಶ್‍ನನ್ನು ಕರೆಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಹೋಟೆಲ್‍ನಲ್ಲಿ ಆರೋಪಿ ಪತಿ ತಲಾ 50 ರೂ. ಮೌಲ್ಯದ ಎರಡು ಸ್ಟಾಂಪ್ ಪೇಪರ್‌ಗಳಿಗೆ ಪತ್ನಿಯ ಕೈಯಿಂದ ಸಹಿ ಪಡೆದುಕೊಂಡಿದ್ದಾನೆ. ಒಂದು ಪೇಪರ್ ವಿಚ್ಛೇದನಕ್ಕೆ ಸಂಬಂಧಿಸಿದ್ದಾಗಿದ್ದು, ಮತ್ತೊಂದು ಅತ್ಯಾಚಾರಿಯ ಜೊತೆ ಆಕೆಯ ಮದುವೆಯ ಪೇಪರ್ ಆಗಿತ್ತು. ಸ್ವಲ್ಪ ಸಮಯದ ನಂತರ ಖಿಲೇಂದ್ರ ತನ್ನ ಪತ್ನಿಯನ್ನು ಹೋಟೆಲ್‍ನಲ್ಲಿ ಬಿಟ್ಟು ಶೀಘ್ರದಲ್ಲೇ ಬರುವುದಾಗಿ ಹೇಳಿ ಹೋಗಿದ್ದನು. ಇದೇ ವೇಳೆ ಕಮ್ಲೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯ ನಂತರ ಖಿಲೇಂದ್ರ ತನ್ನ ಪತ್ನಿಯನ್ನು ಪೋಷಕರ ಮನೆಗೆ ಬಿಟ್ಟು ಬಂದಿದ್ದಾನೆ.

    ಕೆಲವು ದಿನಗಳ ನಂತರ ಅತ್ಯಾಚಾರಿ ಕಮ್ಲೇಶ್ ಸ್ಟಾಂಪ್ ಪೇಪರ್ ಜೊತೆ ಬಂದು ಸಂತ್ರಸ್ತೆ ತನ್ನ ಪತ್ನಿ ಎಂದು ಗಲಾಟೆ ಮಾಡಿದ್ದಾನೆ. ಆಗ ಸ್ಥಳೀಯ ಹಿರಿಯರು ಈ ಬಗ್ಗೆ ವಿಚಾರಿಸಿದ್ದಾರೆ. ಆರೋಪಿ ಖಿಲೇಂದ್ರ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ತನ್ನ ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ. ಪಾರ್ಕಿನಲ್ಲಿ ಕಮ್ಲೇಶ್ ಜೊತೆ ನನ್ನ ಪತ್ನಿಯನ್ನು ನೋಡಿದ್ದೇನೆ. ಹೀಗಾಗಿ ಇವರಿಬ್ಬರು ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾನೆ.

    ಇತ್ತ ಆರೋಪಿ ಕಮ್ಲೇಶ್, ಆತ ತನ್ನ ಪತ್ನಿಗೆ ವಿಚ್ಛೇದನ ಕೊಡಲು ಸಹಾಯ ಮಾಡುವಂತೆ ಕೇಳಿಕೊಂಡ. ಆದ್ದರಿಂದ ನಾನು ಅವನು ಹೇಳಿದ ಕೆಲಸ ಮಾಡಿದ್ದೇನೆ. ಹೀಗಾಗಿ ಆಕೆ ನನಗೆ ಪತ್ನಿಯಾಗಿದ್ದಾಳೆ ಎಂದು ಹೇಳಿದ್ದಾನೆ. ಆಗ ನಡೆದ ಘಟನೆಯ ಬಗ್ಗೆ ತಿಳಿದು ಸಂತ್ರಸ್ತೆಯ ಕುಟುಂಬದವರು ಈ ಕುರಿತು ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಖಿಲೇಂದ್ರ ಮತ್ತು ಕಮ್ಲೇಶ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.