Tag: Raja amareshwar nayak

  • ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಯಚೂರು: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ (Raja Amareshwar Nayak) ಅವರ ಜಾತಿ ಪ್ರಮಾಣ ಪತ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಕಲಬುರಗಿ ಹೈಕೋರ್ಟ್ (High Court) ಪೀಠ ಏ.19ಕ್ಕೆ ಮುಂದೂಡಿದೆ. ಇದರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನವೇ ತೀರ್ಪು ಹೊರಬೀಳುವ ಸಾಧ್ಯತೆಯಿದೆ.

    ರಾಜಾ ಅಮರೇಶ್ವರ ನಾಯಕ ಕ್ಷತ್ರಿಯ ಸಮುದಾಯಕ್ಕೆ ಸೇರಿದ್ದು, ಎಸ್‍ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ನಾಯಕ ಸಮುದಾಯದ ಮುಖಂಡ ನರಸಿಂಹ ನಾಯಕ್ ಎಂಬವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಏ.19ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ಏ.19 ರಂದು ಜಾತಿ ಬಗ್ಗೆ ಅಫಿಡೆವಿಟ್ ಸಲ್ಲಿಸುವಂತೆ ಕೋರ್ಟ್ ರಾಜಾ ಅಮರೇಶ್ವರ ನಾಯಕ ಅವರಿಗೆ ಸೂಚಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು 10 ದಿನ ಎನ್‍ಐಎ ಕಸ್ಟಡಿಗೆ

    ಏ.18 ಕ್ಕೆ ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವ ರಾಜಾ ಅಮರೇಶ್ವರ ನಾಯಕ ಅವರಿಗೆ ಇದೀಗ ನ್ಯಾಯಾಲಯದ ತೀರ್ಪಿನ ಆತಂಕ ಶುರುವಾಗಿದೆ. ವಿರುದ್ಧ ತೀರ್ಪು ಬಂದರೆ ಈ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಆಗಲಿದೆಯೇ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಇದರ ನಡುವೆ ಟಿಕೆಟ್ ವಂಚಿತ ಆಕಾಂಕ್ಷಿ ಬಿ.ವಿ.ನಾಯಕ್ ಸಹ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

  • ರಾಯಚೂರಿನ ಹಾಲಿ ಸಂಸದ ಬಿ.ವಿ.ನಾಯಕ್‍ಗೆ ಸೋಲು- 86 ಸಾವಿರ ಮತಗಳಿಂದ ಬಿಜೆಪಿ ಗೆಲುವು

    ರಾಯಚೂರಿನ ಹಾಲಿ ಸಂಸದ ಬಿ.ವಿ.ನಾಯಕ್‍ಗೆ ಸೋಲು- 86 ಸಾವಿರ ಮತಗಳಿಂದ ಬಿಜೆಪಿ ಗೆಲುವು

    ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬಿ.ವಿ ನಾಯಕ್‍ಗೆ ಭಾರಿ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

    ಮೈತ್ರಿ ಅಭ್ಯರ್ಥಿ ಬಿ.ವಿ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಅವರು 86,414 ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ರಾಜಾ ಅಮರೇಶ್ವರ ನಾಯಕ್ 4,83,552 ಮತಗಳನ್ನು ಗಳಿಸಿದ್ದರೆ, ಬಿ.ವಿ ನಾಯಕ್ 3,97,138 ಮತಗಳನ್ನು ಪಡೆಯುವ ಮೂಲಕ ಸೋಲನ್ನು ಕಂಡಿದ್ದಾರೆ.

    ಬಿಜೆಪಿ ಗೆಲ್ಲಲು ಕಾರಣವೇನು?
    ರಾಜಾ ಅಮರೇಶ್ವರ ನಾಯಕ್ ಅವರು 86,414 ಮತಗಳ ಅಂತರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಹಿಂದಿಕ್ಕಲು ಜಿಲ್ಲೆಯಲ್ಲಿರುವ ಮೋದಿ ಹವಾನೇ ಮುಖ್ಯ ಕಾರಣವಾಗಿದೆ. ಸಂಭಾವಿತ ರಾಜಕಾರಣಿ ಅನ್ನೋ ಹೆಗ್ಗಳಿಕೆ, ಎರಡು ಬಾರಿ ಸಚಿವರಾಗಿ ಆಯ್ಕೆಯಾಗಿದ್ದ ಅನುಭವ, ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಬಿಜೆಪಿ ತೆಕ್ಕೆಯಲ್ಲಿರುವುದು ಹಾಗೂ ಯಾವುದೇ ವಿವಾದಗಳಲ್ಲಿ ಸಿಕ್ಕಾಕಿಕೊಳ್ಳದೇ ಇರುವ ಪರಿಣಾಮವೇ ಜನರು ರಾಜಾ ಅಮರೇಶ್ವರ ನಾಯಕ್ ಅವರನ್ನು ಗೆಲುವಿನ ಗದ್ದುಗೆಗೆ ಏರಿಸಿದ್ದಾರೆ.

    ಆದರೆ ಹಾಲಿ ಸಂಸದರಾದರೂ ಕ್ಷೇತ್ರದಲ್ಲಿ ಯಾವುದೇ ಹೇಳಿಕೊಳ್ಳುವಂತ ಅಭಿವೃದ್ಧಿ ಕೆಲಸ ಮಾಡದಿದ್ದಕ್ಕೆ ಈ ಬಾರಿ ಬಿ.ವಿ ನಾಯಕ್ ಸೋಲು ಕಂಡಿದ್ದಾರೆ. ಕ್ಷೇತ್ರದ ಜನರ ಸಂಪರ್ಕದಿಂದ ಬಹು ದೂರ ಉಳಿದುಕೊಂಡು ಮತಗಳನ್ನು ಅವರೇ ಕಡಿಮೆ ಮಾಡಿಕೊಂಡಿದ್ದಾರೆ. ಹಾಗೆಯೇ ಜೆಡಿಎಸ್ ಜೊತೆಗಿನ ಮೈತ್ರಿ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆಯಾಗಿಲ್ಲ. ಕೇಂದ್ರದ ಯೋಜನೆಗಳನ್ನ ಕ್ಷೇತ್ರದ ಜನರಿಗೆ ಮುಟ್ಟಿಸುವಲ್ಲಿ ಬಿ.ವಿ ನಾಯಕ್ ವಿಫಲವಾಗಿದ್ದಾರೆ. ಅಲ್ಲದೆ ಯಾದಗಿರಿ, ಸುರಪುರ, ಶಹಪುರ ಕ್ಷೇತ್ರಗಳ ಜೊತೆ ಸಂಪರ್ಕ ಅತ್ಯಂತ ಕಡಿಮೆ ಇರುವುದೇ ಅವರನ್ನು ಗೆಲುವಿನಿಂದ ದೂರಮಾಡಿದೆ.