Tag: Raja Venkatappa Nayak

  • ಪೊಲೀಸ್ ಠಾಣೆ ಎದುರು ರಾಜಾ ವೆಂಕಟಪ್ಪ ನಾಯಕ ಪ್ರತಿಭಟನೆ

    ಪೊಲೀಸ್ ಠಾಣೆ ಎದುರು ರಾಜಾ ವೆಂಕಟಪ್ಪ ನಾಯಕ ಪ್ರತಿಭಟನೆ

    ಯಾದಗಿರಿ: ಕೊಡೆಕಲ್ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಸುರಪುರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಠಾಣೆಯ ಎದುರು ದಿಢೀರ್ ಧರಣಿ ಕುಳಿತ್ತಿದ್ದಾರೆ.

    ಹುಣಸಗಿ ತಾಲೂಕಿನ ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯ, ಗೆದ್ದಮರಿ ಗ್ರಾಮ ಪಂಚಾಯತಿ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ವಿಚಾರವಾಗಿ ಸದಸ್ಯರೊಬ್ಬರನ್ನು ಕಾಂಗ್ರೆಸ್ ಮುಖಂಡರು ಅಪಹರಣ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ಹೀಗಾಗಿ ಪಿಎಸ್‍ಐ ಬಾಷುಮಿಯಾ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ. ಆದರೆ ಈ ಆರೋಪವನ್ನು ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಳ್ಳಿಹಾಕಿದ್ದಾರೆ.

    ಗೆದ್ದಮರಿ ಗ್ರಾಮ ಪಂಚಾಯತಿ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಯಾವುದೇ ತಪ್ಪು ಮಾಡಿಲ್ಲ. ಆದರೆ ಕೊಡೆಕಲ್ ಠಾಣೆ ಸಿಬ್ಬಂದಿ ಕೆಲವರ ಮಾತು ಕೇಳಿ ನಮ್ಮ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕರ್ತರನ್ನು ಠಾಣೆಗೆ ಕರೆಯಿಸಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮರು ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದ ತನಿಖೆ ಇಲ್ಲಿಗೆ ಕೈ ಬಿಡಬೇಕೆಂದು ಠಾಣೆಯ ಎದುರು ದಿಢೀರ್ ಧರಣಿ ನಡೆಸುತ್ತಿದ್ದಾರೆ.

  • ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಪೊಲೀಸರ ಮೇಲೆ ದರ್ಪ ಮೆರೆದಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಶುಕ್ರವಾರ ಬೆಳಗ್ಗೆ ಠಾಣೆಗೆ ಮಾಜಿ ಶಾಸಕರ ಪುತ್ರ ರಾಜಾ ವೇಣುಗೋಪಾಲ ನಾಯಕ ಹಾಗು ಸಂಗಡಿಗರು ಕರ್ತವ್ಯ ನಿರತ ಶಂಭುರಾವ್, ಬಸವರಾಜ್ ಮತ್ತು ಶರಣಗೌಡ ಎಂಬವರಿಗೆ ಅವಾಚ್ಯಪದಗಳಿಂದ ನಿಂದಿಸಿದ್ದಾರೆ. ಕೆಲ ಸಮಯದ ಬಳಿಕ ಠಾಣೆಗೆ ಬಂದ ರಾಜಾ ವೆಂಕಟಪ್ಪ ನಾಯಕ, ಡಿಎಸ್‍ಪಿ ಮತ್ತು ಸಿಪಿಐ ಎಲ್ಲಿ? ಅವರನ್ನು ಕರೆಸಿ ಎಂದು ಅವಾಚ್ಯಪದಗಳನ್ನು ಬಳಕೆ ಮಾಡಿ ಬೈದಿದ್ದಾರೆ. ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ ಎಂದು ಕರ್ತವ್ಯ ನಿರತ ಪೊಲೀಸರಿಗೆ ಅವಾಜ್ ಹಾಕಿ ಎಲ್ಲರೂ ಹಿಂದಿರುಗಿದ್ದಾರೆ.

    ಘಟನೆ ಬಳಿಕ ಪೊಲೀಸ್ ಸಿಬ್ಬಂದಿ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಜೀವಬೆದರಿಕೆ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv