Tag: rajamouli

  • ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಡಬ್ ಆಗಿದ್ದರೂ, ಅದು ಕರ್ನಾಟಕದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಒಂದೇ ಒಂದು ಥಿಯೇಟರ್ ಕೂಡ ಕನ್ನಡ ಡಬ್ಬಿಂಗ್ ಚಿತ್ರಕ್ಕೆ ಕೊಟ್ಟಿಲ್ಲವೆಂದು ಎರಡು ದಿನಗಳಿಂದ ‘ಬೈಕಾಟ್ ಆರ್.ಆರ್.ಆರ್’ ಹೋರಾಟ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಕನ್ನಡ ಪರ ಕೆಲ ಹೋರಾಟಗಾರರು ಮತ್ತು ಸತತವಾಗಿ ಡಬ್ಬಿಂಗ್ ಪರ ಒಲವು ತೋರಿರುವ ಕನ್ನಡಿಗರ ‘ಆರ್.ಆರ್.ಆರ್’ ಸಿನಿಮಾ ಕನ್ನಡದಲ್ಲೇ ಬೇಕು ಎಂದು ಕ್ಯಾಂಪೇನ್ ಶುರು ಮಾಡಿದ್ದರು. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಕಾವು ಪಡೆದುಕೊಂಡಿತ್ತು. ಕನ್ನಡದಲ್ಲೇ ಆರ್.ಆರ್.ಆರ್ ನೋಡುತ್ತೇವೆ. ಬೇರೆ ಭಾಷೆಯಲ್ಲಿರುವ ಚಿತ್ರವನ್ನು ತಿರಸ್ಕರಿಸುತ್ತೇವೆ ಎಂದು ಅನೇಕ ಕನ್ನಡಿಗರು ಪೋಸ್ಟ್ ಮಾಡಿದ್ದರು. ಈ ಕಾವು ಮತ್ತಷ್ಟು ಜೋರಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ವಿತರಣಾ ಹಕ್ಕು ಪಡೆದಿರುವ ಕೆ.ವಿ.ಎನ್ ಸಂಸ್ಥೆಯು ತುಂಬಾ ಜಾಣ್ಮೆಯ ಉತ್ತರವನ್ನು ಕೊಟ್ಟಿದೆ. ಆರ್.ಆರ್.ಆರ್ ಸಿನಿಮಾವನ್ನು ಕನ್ನಡದಲ್ಲಿ ನೋಡಲು ನೀವೇ ನಮಗೆ ಸಹಾಯ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರರಿಗೆ ಈ ಜವಾಬ್ದಾರಿ ಹೊರೆಸಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈ ಕುರಿತು ಡಬ್ಬಿಂಗ್ ಪರ ಹೋರಾಟಗಾರರಿಗೆ ಅದು ಸುದೀರ್ಘವಾಗಿ ಪತ್ರ ಬರೆದು, “ಆರ್.ಆರ್.ಆರ್ ನಾಯಕ ನಟರಾದ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್.ಆರ್.ಆರ್ ಸಿನಿಮಾವನ್ನು ಕನ್ನಡದ ಅವತರಣಿಕೆಯನ್ನು ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ ಥಿಯೇಟರ್ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯದಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡುವುದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ಭಾವಿಸುತ್ತೇವೆ’’ ಕನ್ನಡದ ಸಿನಿಮಾವನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಕೈ ತೊಳೆದುಕೊಂಡಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

     

     

    ಇನ್ನೆರಡು ದಿನ ಕಳೆದರೆ ಆರ್.ಆರ್. ಆರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಮಾರ್ಚ್ 25ಕ್ಕೆ ಹತ್ತು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ.

  • ಆರ್.ಆರ್.ಆರ್ ಟೀಮ್ ನಿಂದ ಟೆಂಪಲ್ ರನ್

    ಆರ್.ಆರ್.ಆರ್ ಟೀಮ್ ನಿಂದ ಟೆಂಪಲ್ ರನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಥಿಯೇಟರ್ ಗೆ ಬರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಸಿನಿಮಾ ತಂಡ ದೇವಸ್ಥಾನಗಳಿಗೆ ಭೇಟಿ ನೀಡಿ ಸಿನಿಮಾದ ಗೆಲುವಿನ ಬಗ್ಗೆ ಪ್ರಾರ್ಥಿಸುತ್ತಿದೆ. ಮೊನ್ನೆಯಷ್ಟೇ  ಕರ್ನಾಟಕದಲ್ಲಿ ಪ್ರಿ ರಿಲೀಸ್ ಇವೆಂಟ್ ಮಾಡಿದ್ದ ರಾಜಮೌಳಿ ಅಂಡ್ ಟೀಮ್ ಇದೀಗ ಅಮೃತಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ಕೊಟ್ಟಿದೆ.

    ಈ ಅಮೃತಸರದ ಗೋಲ್ಡನ್ ಟೆಂಪಲ್ ದರ್ಶನ ಪಡೆದರೆ, ಅಂದುಕೊಂಡದ್ದು ಎಲ್ಲವೂ ನೆರವೇರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿಯೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಒಟ್ಟಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಈಗಾಗಲೇ ಆರ್.ಆರ್.ಆರ್ ಸಿನಿಮಾ ಅತೀ ನಿರೀಕ್ಷೆಯನ್ನು ಮೂಡಿಸಿದೆ. ಹಲವು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟ್ರೇಲರ್ ಸಖತ್ ಕ್ರೇಜ್ ಕ್ರಿಯೇಟ್ ಮಾಡಿವೆ. ಹಾಗಾಗಿಯೇ ಈ ಚಿತ್ರಕ್ಕಾಗಿ ವಿಶ್ವದಾದ್ಯಂತ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಇದೇ ಮೊದಲ ಬಾರಿಗೆ ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ತೆರೆ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಸೇರಿದಂತೆ ಹಲವು ತಾರೆಯರ ಬಳಗವೇ ಈ ಸಿನಿಮಾದಲ್ಲಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿದೆ.

  • ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಗಮಗಿಸುಗ ಸ್ಟೇಜ್.. ಕಣ್ಣಾಯಿಸಿದ ಕಡೆಯೆಲ್ಲಾ ಅಭಿಮಾನಿಗಣ. ಇಳಿಸಂಜೆಯಲ್ಲಿ ಸಂಗೀತ-ನೃತ್ಯದ ಯಾನ. ನೆಚ್ಚಿನ ಸ್ಟಾರ್ಸ್ ಕಣ್ತುಂಬಿಕೊಂಡು ಪುಳಕಿತರಾದ ಫ್ಯಾನ್ಸ್. ಇದೆಲ್ಲಾ ಗಡಿನಾಡು ಚಿಕ್ಕಬಳ್ಳಾಪುರದಲ್ಲಿ ನಡೆದ RRR ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಝಲಕ್.

    ಮಾರ್ಚ್ 25ಕ್ಕೆ ಪಂಚ ಭಾಷೆಯಲ್ಲಿ ಅದ್ಧೂರಿಯಾಗಿ ತೆರೆಕಾಣ್ತಿರುವ ಮಲ್ಟಿಸ್ಟಾರ್ ಸಿನಿಮಾ RRR ಪ್ರೀ-ರಿಲೀಸ್ ಇವೆಂಟ್ ಧಾಮ್ ಧೂಮ್ ಅಂತಾ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಳಿಸಂಜೆಯಲ್ಲಿ ಅದ್ಧೂರಿಯಾಗಿ ನಡೆದ ಪ್ರೀ-ರಿಲೀಸ್ ಇವೆಂಟ್ ಗೆ ಜನಸಾಗರವೇ ಹರಿದು ಬಂದಿತ್ತು. ಸುಮಾರು ನೂರು ಎಕರೆ ಜಾಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಇಡೀ RRR ಬಳಗ ಸಾಕ್ಷಿಯಾಯ್ತು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಯಂಗ್ ಟೈಗರ್ ಕನ್ನಡ ಪ್ರೀತಿಗೆ ಕನ್ನಡಿಗರ ಸಲಾಂ
    ಕನ್ನಡ ಭಾಷೆ.. ಕನ್ನಡಿಗರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಯಂಗ್ ಟೈಗರ್ ಜೂನಿಯರ್ ಎನ್‍ಟಿಆರ್ ಕನ್ನಡದಲ್ಲಿಯೇ ಮಾತು ಆರಂಭಿಸಿ ಎಲ್ಲರ ಗಮನಸೆಳೆದರು. ಅಪ್ಪು ಎಲ್ಲಿಯೂ ಹೋಗಿಲ್ಲ. ಗಾಳಿ, ನೀರು ಎಲ್ಲೆಡೆ ಅಪ್ಪು ಇದ್ದಾರೆ ಅಂತಾ ನೆಚ್ಚಿನ ಗೆಳೆಯನನ್ನು ನೆನೆದ ತಾರಕ್, ಮಾರ್ಚ್ 25ಕ್ಕೆ ತ್ರಿಬಲ್ ಆರ್ ಸಿನಿಮಾವನ್ನು ಫ್ಯಾಮಿಲಿ ಸಮೇತರಾಗಿ ನೋಡಿ ಅಂತ ಮನವಿ ಮಾಡಿಕೊಂಡರು.

    ಅಪ್ಪು ನೆನೆದು ಭಾವುಕ
    ತ್ರಿಬಲ್ ಆರ್ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಸ್ಪೆಷಲ್ ಗೆಸ್ಟ್ ಆಗಿ ಆಗಮಿಸಿದ್ದ ನಟ ಶಿವರಾಜ್ ಕುಮಾರ್, ಒಂದು ಕಡೆ ಸಂತೋಷನೂ ಆಗ್ತಾ ಇದೆ. ಮತ್ತೊಂದು ಕಡೆ ದುಃಖ ಇದೆ. ಅಪ್ಪುನ ಕಳೆದುಕೊಂಡು ದುಃಖದಲ್ಲಿದ್ದೇವೆ. ನಮ್ಮ ದುಃಖದಲ್ಲಿ ಭಾರತೀಯ ಚಿತ್ರರಂಗ ಇದೆ, ಸರ್ಕಾರ ಇದೆ. ಬೊಮ್ಮಾಯಿ ಅವರು ಅಣ್ಣನ ಸ್ಥಾನದಲ್ಲಿ ನಿಂತಿದ್ದಾರೆ. ನಮಗಾದಷ್ಟೇ ನೋವು ಅವರಿಗೂ ಆಗಿದೆ. ರಾಮ್ ಚರಣ್, ಜ್ಯೂ.ಎನ್‍ಟಿಆರ್ ಬಂದು ನಾವು ನಿಮ್ಮ ತಮ್ಮ ಎಂದಾಗ ಖುಷಿ ಆಯ್ತು. ಅಪ್ಪುನ ಇವರಲ್ಲಿ, ಅಭಿಮಾನಿಗಳಲ್ಲಿ ಕಾಣುತ್ತಿದ್ದೆ.

    ನಾನು ರಾಜಮೌಳಿ ದೊಡ್ಡ ಫ್ಯಾನ್. ಜ್ಯೂ.ಎನ್‍ಟಿಆರ್ ಅವರ ಎಲ್ಲ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ನೋಡ್ತೀನಿ. ರಾಮ್ ಚರಣ್, ಪವನ್ ಕಲ್ಯಾಣ್, ಚಿರಂಜೀವಿ, ಅಜಿತ್, ವಿಜಯ್ ಪ್ರತಿಯೊಬ್ಬರ ಸಿನಿಮಾನೂ ನಾನು ಥಿಯೇಟರ್‍ನಲ್ಲೇ ನೋಡೋದು. ನನಗೆ ಮನೆಯಲ್ಲೇ ಶೋ ಹಾಕಿಸಿಕೊಂಡು ಸಿನಿಮಾ ನೋಡೋದು ಇಷ್ಟ ಇಲ್ಲ. ನಾನು ಅಭಿಮಾನಿ ತರಹ ಥಿಯೇಟರ್ ಗೆ ಹೋಗೆ ಸಿನಿಮಾ ನೋಡೋದು ಎಂದಿದ್ದಾರೆ ಶಿವರಾಜ್‌ಕುಮಾರ್. RRR ಸಿನಿಮಾ ಯಶಸ್ಸು ಆಗಲಿ ಎಂದು ಹಾರೈಸಿದರು.

    ಇಡೀ RRR ಬಳಗಕ್ಕೆ ಧನ್ಯವಾದ ಹೇಳಿದ ಮೌಳಿ
    ಚಿತ್ರಬ್ರಹ್ಮ ರಾಜಮೌಳಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಶಿವಣ್ಣ, ಮುಖ್ಯಮಂತ್ರಿ, ಆರೋಗ್ಯ ಸಚಿವರ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿ ಗಮನಸೆಳೆದ ಮೌಳಿ, ಇಂತಹ ಅದ್ಧೂರಿ ಇವೆಂಟ್ ಆಯೋಜಿಸಿದ KVN ಸಂಸ್ಥೆಯ ಒಡೆಯ ವೆಂಕಟ್ ಅವರಿಗೆ ಧನ್ಯವಾದ ತಿಳಿಸಿದರು. ರಾಮ್ ಚರಣ್ ಸಿನಿಮಾ ನೋಡಲು ಕಾತುರನಾಗಿದ್ದೇನೆ. ಪ್ರತಿಯೊಬ್ಬರು ಥಿಯೇಟರ್ ಗೆ ಹೋಗಿ ಸಿನಿಮಾ ನೋಡಿ  ಪ್ರೋತ್ಸಾಹಿಸಿ ಎಂದರು.

    ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ತೋರಿಸಿರುವುದು ಹೆಮ್ಮೆ
    ಸ್ವಾತಂತ್ರ್ಯ ಹೋರಾಟದ ಸತ್ಯಗಳು ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಸ್ವಾತಂತ್ರ್ಯ ಸೇನಾನಿ RRR ಸಿನಿಮಾ ನೋಡಿ ಇಡೀ ದೇಶ ಹೆಮ್ಮೆಪಡಲಿದೆ ಎಂದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ RRR ಸಿನಿಮಾದಲ್ಲಿ ತೋರಿಸಿರುವುದು ಹೆಮ್ಮೆ ಎಂದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ

    ಭಾರತದ ಅತಿದೊಡ್ಡ ಇವೆಂಟ್‍ನ್ನು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಿದ್ದ ಪ್ರತಿಷ್ಠಿತ ಕೆವಿಎನ್ ಪ್ರೋಡಕ್ಷನ್ ಹೌಸ್ RRR ಸಿನಿಮಾ ಕರುನಾಡಿನಾದ್ಯಂತ RRR ಚಿತ್ರವನ್ನು ವಿತರಣೆ ಮಾಡಲಿದೆ. ಸುಮಾರು 450 ಕೋಟಿ ಬಜೆಟ್‍ನಲ್ಲಿ ದಾನಯ್ಯ ಸಿನಿಮಾಗೆ ಬಂಡವಾಳ ಹೂಡಿದ್ದು, ರಾಜಮೌಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಸೇರಿದಂತೆ ದೊಡ್ಡತಾರಾಬಳಗ ಸಿನಿಮಾದಲ್ಲಿ ನಟಿಸಿದ್ದು, ಇದೇ 25ಕ್ಕೆ ವಲ್ರ್ಡ್ ವೈಡ್ RRR ಸಿನಿಮಾ ರಿಲೀಸ್ ಅಗ್ತಿದೆ.

  • ಸ್ಟೇಜ್‌ನತ್ತ ನುಗ್ಗಿದ ಫ್ಯಾನ್ಸ್‌ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ- RRR ಪ್ರೀ-ರಿಲೀಸ್‌ ಇವೆಂಟ್‌ ತಡವಾಗಿ ಆರಂಭ

    ಸ್ಟೇಜ್‌ನತ್ತ ನುಗ್ಗಿದ ಫ್ಯಾನ್ಸ್‌ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ- RRR ಪ್ರೀ-ರಿಲೀಸ್‌ ಇವೆಂಟ್‌ ತಡವಾಗಿ ಆರಂಭ

    ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ‘RRR’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಈ ಇವೆಂಟ್‍ಗೆ ಅಭಿಮಾನಿಗಳ ಜಾತ್ರೆಯೇ ನೆರದಿದ್ದು, ತಡವಾಗಿ ಕಾರ್ಯಕ್ರಮ ಪ್ರಾರಂಭವಾಯಿತು.

    ತಮ್ಮ ನೆಚ್ಚಿನ ನಟರಾದ ಜ್ಯೂ.ಎನ್‍ಟಿಆರ್, ರಾಮ್‍ಚರಣ್‍ತೇಜ ಮತ್ತು ನಿರ್ದೇಶಕ ರಾಜಮೌಳಿಯನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿಕೊಂಡಿದ್ದರು. ಈ ವೇಳೆ ಪೊಲೀಸರನ್ನು ಲೆಕ್ಕಿಸದೆ ಅಭಿಮಾನಿಗಳು ಸ್ಟೇಜ್‌ ಬಳಿ ನುಗ್ಗಿದರು ಹೋದರು. ಭದ್ರತೆಗೆ ಹಾಕಿದ್ದ ಬ್ಯಾರಿಕೇಡ್ ತಳ್ಳಿ ಓಡಿದರು. ಅಭಿಮಾನಿಗಳನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ಈ  ಹಿನ್ನೆಲೆ ‘RRR’ ಕಾರ್ಯಕ್ರಮ ಸ್ವಲ್ಪ ತಡವಾಗಿ ಪ್ರಾರಂಭವಾಯಿತು. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ನಡೆಸಿಕೊಟ್ಟರು. ಇದನ್ನೂ ಓದಿ: ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

    ಅಭಿಮಾನಿಗಳ ಪ್ರತಿಕ್ರಿಯೆ ನೋಡಿದ ಸಿನಿಮಾ ತಂಡ ಫುಲ್ ಖುಷ್ ಆಗಿದ್ದು, ಗಲಾಟೆ ಮಾಡದಂತೆ ವಿನಂತಿ ಮಾಡಿಕೊಂಡಿದೆ. ಇವೆಂಟ್‍ಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ತಮ್ಮ ಸಿನಿಮಾಗಳ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ವೇಳೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಭಾವುಕರಾಗಿ ಮಾತನಾಡಿದ್ದಾರೆ.

  • ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

    ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

    ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಆರ್.ಆರ್.ಆರ್ ಸಿನಿಮಾದ ಕಾರ್ಯಕ್ರಮಕ್ಕಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಆತ್ಮೀಯ ಸ್ನೇಹಿತರಾದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನೋಡುವುದಕ್ಕೆ ಆಗಿಲ್ಲ. ಆರ್.ಆರ್.ಆರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿರುವೆ. ಇದು ಸಿನಿಮಾ ರಿಲೀಸ್ ಆದ ತಕ್ಷಣವೇ ಜೇಮ್ಸ್ ಸಿನಿಮಾ ನೋಡುವೆ’ ಎಂದಿದ್ದಾರೆ ಜ್ಯೂನಿಯರ್.

    ಜ್ಯೂ.ಎನ್ಟಿಆರ್ ಮತ್ತು ಪುನೀತ್ ರಾಜ್ ಕುಮಾರ್ ಸ್ನೇಹ ಗಾಢವಾದದ್ದು. ಗೆಳೆತನದ ಕಾರಣಕ್ಕಾಗಿ ಪುನೀತ್ ಅವರ ಚಿತ್ರಕ್ಕೆ ಜೂ.ಎನ್.ಟಿ.ಆರ್ ಹಾಡು ಹೇಳಿದ್ದರು. ಇವರ ಕಾರ್ಯಕ್ರಮಕ್ಕಾಗಿ ಹಲವು ಬಾರಿ ಪುನೀತ್ ರಾಜ್ ಕುಮಾರ್ ಹೈದರಾಬಾದ್ ಗೆ ಹೋಗಿದ್ದಾರೆ. ಅಷ್ಟೊಂದು ಸ್ನೇಹ ಇವರಲ್ಲಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಪುನೀತ್ ಸಿನಿಮಾ ಬಿಡುಗಡೆಯ ಬೆನ್ನಲ್ಲೇ ಜ್ಯೂನಿಯರ್ ಚಿತ್ರವೂ ರಿಲೀಸ್ ಆಗುತ್ತಿದೆ. ಜೇಮ್ಸ್ ಒಳ್ಳೆಯ ಓಪನಿಂಗ್ ಪಡೆದಿದೆ. ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

    ಇಂದು ಚಿಕ್ಕಬಳ್ಳಾಪುರದಲ್ಲಿಆರ್.ಆರ್.ಆರ್ ಮೆಗಾ ಪ್ರೀ ರಿಲೀಸ್ ಇವೆಂಟ್ : ಏನೆಲ್ಲ ವಿಶೇಷ?

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಕನ್ನಡ ಅವತರಣಿಕೆಯ ಮೆಗಾ ಪ್ರೀ ರಿಲೀಸ್ ಇವೆಂಟ್ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿದೆ. ಹಾಗಾಗಿ ಕಲಾವಿದರ ದಂಡೇ ಅಲ್ಲಿ ಸೇರಲಿದೆ. ಸಿನಿಮಾದ ನಟರು ಮತ್ತು ಕಾರ್ಯಕ್ರಮದಲ್ಲಿ ಭಾಗಿ ಆಗಲು ಬರುತ್ತಿರುವ  ನೆಚ್ಚಿನ ನಟರನ್ನು ನೋಡುವುದಕ್ಕಾಗಿ ಅಭಿಮಾನಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಕಾಯುತ್ತಿದ್ದಾರೆ. ಏರ್ ಪೋರ್ಟ್ಗೆ ಅಭಿಮಾನಿಗಳ ಸಾಗರವೇ ಹರಿದು ಬಂದಿದ್ದರಿಂದ, ಅಲ್ಲಿನ ಸಿಬ್ಬಂದಿಗೆ ಮತ್ತೊಂದು ಟೆನ್ ಷನ್ ಶುರುವಾಗಿದೆ.

    ಇಂದು ಸಂಜೆ 06 ಗಂಟೆಗೆ ಆರಂಭವಾಗಲಿರುವ ಪ್ರೀ ರಿಲೀಸ್ ಇವೆಂಟ್, ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನೂರಕ್ಕೂ ಹೆಚ್ಚು ಎಕರೆ ವಿಸ್ತೀರ್ಣದಲ್ಲಿ ಜಾಗದಲ್ಲಿ ನಡೆಯುತ್ತಿದೆ. ಸಿನಿಮಾದ ನಾಯಕ ನಟರಾದ ಜ್ಯೂ.ಎನ್‍ಟಿಆರ್, ರಾಮ್ ಚರಣ್ ಹಾಗೂ ನಿರ್ದೇಶಕ ರಾಜಮೌಳಿ, ಆಲಿಯಾ ಭಟ್ ಸೇರಿದಂತೆ ಬಹುತೇಕ ತಾರಾಗಣವೇ ಕಾರ್ಯಕ್ರಮದಲ್ಲಿ ಹಾಜರಿರಲಿದೆ. ಇದನ್ನೂ ಓದಿ : ಪುನೀತ್ ಹುಟ್ಟು ಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ ಮಂದಣ್ಣ ಮತ್ತೆ ನೆಟ್ಟಿಗರು ಗರಂ

    ಕಳೆದ ರಾತ್ರಿಯೇ ಬೆಂಗಳೂರಿಗೆ ಕೆಲವು ನಟರು ಆಗಮಿಸಿದ್ದರಿಂದ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟರನ್ನ ನೋಡಲು ಏರ್ಪೋರ್ಟ್ ನಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ನೆಚ್ಚಿನ ನಟರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಇದನ್ನೂ ಓದಿ: ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

    ಕೇವಲ ಸಿನಿಮಾ ನಟರು ಮಾತ್ರವಲ್ಲ, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರ ಸುಧಾಕರ್ ಸೇರಿದಂತೆ ಕೆಲ ರಾಜಕಾರಣಿಗಳು ಕೂಡ ಭಾಗಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಹಾಗಾಗಿ ಟನ ಶಿವರಾಜ್ ಕುಮಾರ್ ಕೂಡ ಭಾಗಿ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ : ದಾಖಲೆ ಬರೆದ ಜೇಮ್ಸ್ – ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ಚಿತ್ರ

    ಈಗಾಗಲೇ ಲಕ್ಷಾಂತರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಡೀ ದೇಶದಲ್ಲೇ ಅತಿ ದೊಡ್ಡದಾದ ಇವೆಂಟ್ ಇದಾಗಿದೆ. ಭದ್ರತೆ ಮತ್ತು ಸರ್ವ ಸಿದ್ಧತೆಯನ್ನು ಮಾಡಿಕೊಂಡು ಇವೆಂಟ್ ಮಾಡಲಾಗುತ್ತಿದೆ ಎಂದಿದೆ ಚಿತ್ರತಂಡ.

  • 100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್  ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್ ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ ಇವೆಂಟ್ ಗಾಗಿ 100 ಎಕರೆ ಪ್ರದೇಶ ಸಿದ್ಧಗೊಳ್ಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿರುವ ಈ ಕಾರ್ಯಕ್ರಮದಲ್ಲಿ ತೆಲುಗು, ತಮಿಳು ಮತ್ತು ಕನ್ನಡದ ಸ್ಟಾರ್ ನಟರು ಭಾಗಿಯಾಗುತ್ತಿರುವುದು ವಿಶೇಷ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಈ ಇವೆಂಟ್ ಅನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದ್ದು, ಪುನೀತ್ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇದರ ನೇತೃತ್ವವನ್ನು ಶಿವರಾಜ್ ಕುಮಾರ್ ಅವರಿಗೆ ವಹಿಸಲಾಗಿದೆಯಂತೆ.  ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?

    ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಎಲ್ಲ ರೀತಿಯ ಭದ್ರತೆಯನ್ನೂ ಮಾಡಿಕೊಳ್ಳಲಾಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್, ಜ್ಯೂನಿಯರ್ ಎನ್.ಟಿ.ಆರ್, ಆಲಿಯಾ ಭಟ್, ಅಜಯ್ ದೇವಗನ್,  ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಸೇರಿದಂತೆ ಚಿತ್ರತಂಡದ ಬಹುತೇಕ ಸದಸ್ಯರು ಕೂಡ ಅಂದು ಭಾಗಿಯಾಗಲಿದ್ದಾರೆ. ಮನರಂಜನೆ ಕಾರ್ಯಕ್ರಮ ಮತ್ತು ಚಿತ್ರತಂಡದೊಂದಿಗೆ ಸಂವಾದ ಕೂಡ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.

  • ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಬಾಹುಬಲಿ ಸಿನಿಮಾದ ನಂತರ ರಾಜಮೌಳಿ ಮತ್ತು ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಕಾಂಬಿನೇಷನ್ ನ ಆರ್.ಆರ್.ಆರ್ ಸಿನಿಮಾ ಸಂಗೀತದ ಕಾರಣದಿಂದಾಗಿಯೂ ಗಮನ ಸೆಳೆಯುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ‘ಜನನಿ’, ‘ದೋಸ್ತಿ’ ಹಾಗೂ ‘ಹಳ್ಳಿನಾಟು’ ಹಾಡುಗಳು ಟಾಪ್ ಲಿಸ್ಟ್ ನಲ್ಲಿವೆ. ಈಗ ಮತ್ತೊಂದು ಹಾಡು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಇದೇ ಮಾರ್ಚ್ 14 ರಂದು ‘ಎತ್ತುವ ಜಂಡಾ’ ಸಾಂಗ್ ಬಿಡುಗಡೆ ಆಗಲಿದೆ. ಇದನ್ನೂ ಓದಿ : ತಮಿಳಿಗೆ ಹೊರಟ ಬಸಣ್ಣಿ ಖ್ಯಾತಿಯ ತಾನ್ಯ ಹೋಪ್ : ಪ್ರಶಾಂತ್ ರಾಜ್ ಚಿತ್ರಕ್ಕೆ ತಾನ್ಯ ನಾಯಕಿ

    ಈ ಹಾಡಿನ ವಿಶೇಷತೆ ಅಂದರೆ, ಸ್ಫೂರ್ತಿ ತುಂಬಬಲ್ಲಂತ ಸಾಹಿತ್ಯವನ್ನು ಒಳಗೊಂಡಿದೆ. ಅಲ್ಲದೇ, ಹಲವು ಅಪರೂಪದ ವಾದ್ಯಗಳನ್ನೂ ಈ ಹಾಡಿಗೆ ಕೀರವಾಣಿ ಬಳಸಿಕೊಂಡಿದ್ದಾರಂತೆ. ಹಾಗಾಗಿ ಬೇರೆ ರೀತಿಯ ಸೌಂಡ್ ಈ ಹಾಡಿನಲ್ಲಿದೆ. ಇದನ್ನೂ ಓದಿ : ಸೋಲೊ ಟ್ರಿಪ್ ನಲ್ಲಿ ಪ್ಯಾರ್ಗೆ ಹುಡುಗಿ ಪಾರುಲ್ ಯಾದವ್

    ಬಾಹುಬಲಿ ಸಿನಿಮಾ ನಂತರ ರಾಜಮೌಳಿ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಜೂ.ಎನ್.ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಬಾಲಿವುಡ್ ನಟರಾದ ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ ಹಲವು ಪ್ರಮುಖ ನಟರು ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಸದ್ಯ ಡೇಟಿಂಗ್, ಮುಂದೆ ಮದ್ವೆ, ಹೃತಿಕ್ –ಸಬಾ ಜೋಡಿ ಪ್ರೇಮ್ ಕಹಾನಿ

    ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ ‘ಆರ್‌ಆರ್‌ಆರ್‌’ ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ.

  • ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಪ್ರೀ ರಿಲೀಸ್ ಕನ್ನಡ ಇವೆಂಟ್ ಬೆಂಗಳೂರಿನಲ್ಲಿ ಮಾಡುವುದಾಗಿ ಈ ಹಿಂದೆ ಘೋಷಣೆ ಆಗಿತ್ತು. ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಇವೆಂಟ್ ಮಾಡುವ ಕುರಿತು ಚಿತ್ರತಂಡವೇ ಹೇಳಿತ್ತು. ಕೋವಿಡ್ ನಿಯಮ ಪಾಲನೆಯ ಕಾರಣದಿಂದಾಗಿ ಕಾರ್ಯಕ್ರಮ ಆಗಲಿಲ್ಲ. ಇದೀಗ ಅದೇ ಇವೆಂಟ್ ಬೆಂಗಳೂರಿನಿಂದ ಶಿಫ್ಟ್ ಆಗಿದೆ. ಮಾರ್ಚ್ 19ರಂದು ಸಿನಿಮಾದ ಪ್ರೀ ರಿಲೀಸ್ ಕನ್ನಡ ಇವೆಂಡ್ ಆಂಧ್ರದ ಗಡಿಭಾಗವಾದ ಚಿಕ್ಕ ಬಳ್ಳಾಪುರದಲ್ಲಿ ನಡೆಯಲಿದೆ. ಇದನ್ನೂ ಓದಿ : ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ಬೆಂಗಳೂರಿನಲ್ಲಿ ಮಾಡಲು ಹೊರಟಿದ್ದ ಇವೆಂಟ್ ಅಲ್ಲಿಗೆ ಶಿಫ್ಟ್ ಆಗಲು ಕಾರಣ ಟ್ರಾಫಿಕ್ ಜಾಮ್ ಎನ್ನುತ್ತಿದೆ ಚಿತ್ರತಂಡ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಹೋದರೆ, ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ತೊಂದರೆ ಆಗುತ್ತದೆ. ಹಾಗಾಗಿ ಚಿಕ್ಕ ಬಳ್ಳಾಪುರದಲ್ಲಿ ಮಾಡಲು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಕನ್ನಡ ಮತ್ತು ತೆಲುಗಿನ ಖ್ಯಾತ ಗಣ್ಯರೆಲ್ಲ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯ ಅತಿಥಿಯಾಗಿ ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆಯಂತೆ. ಇದನ್ನೂ ಓದಿ : ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದೇ ಮೊದಲ ಬಾರಿಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಜೊತೆಯಾಗಿ ನಟಿಸಿದ್ದಾರೆ. ಇಬ್ಬರ ಫ್ಯಾನ್ಸ್ ಮಧ್ಯ ಆಗಾಗ್ಗೆ ಸ್ಟಾರ್ ವಾರ್ ನಡೆಯುತ್ತಿತ್ತು. ಹೀಗಾಗಿ ಇಬ್ಬರೂ ಅಭಿಮಾನಿಗಳು ಒಟ್ಟಿಗೆ ಸಿನಿಮಾ ನೋಡುವುದು ಇದೊಂದು ಸಿನಿಮಾದ ಐತಿಹಾಸಿಕ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.