Tag: rajamouli

  • ಮಹೇಶ್ ಬಾಬು ಹೊಸ ಚಿತ್ರಕ್ಕೆ ಪಡೆವ ಸಂಭಾವನೆ ಬರೋಬ್ಬರಿ 70 ಕೋಟಿ

    ಮಹೇಶ್ ಬಾಬು ಹೊಸ ಚಿತ್ರಕ್ಕೆ ಪಡೆವ ಸಂಭಾವನೆ ಬರೋಬ್ಬರಿ 70 ಕೋಟಿ

    ತೆಲುಗು ಸಿನಿಮಾ ರಂಗದಲ್ಲೀಗ ಪ್ರಿನ್ಸ್ ಮಹೇಶ್ ಬಾಬು ಅವರದ್ದೇ ಮಾತು. ಸದ್ಯ ಅವರು ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಸಿನಿಮಾ ಮಾಡಲಿದ್ದು, ಈ ಸಿನಿಮಾಗೆ ಅವರು ಬರೋಬ್ಬರಿ 70 ಕೋಟಿ ಸಂಭಾವನೆಯನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ತೆಲುಗು ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯಲಿರುವ ಯುವನಟ ಎಂಬ ಕೀರ್ತಿಗೂ ಅವರು ಪಾತ್ರವಾಗಲಿದ್ದಾರೆ.

    ಮಹೇಶ್ ಬಾಬು ಸಿನಿಮಾಗಳು ಸೋಲುವುದು ಕಡಿಮೆ. ಅವೆಲ್ಲವೂ ಭಾರೀ ಬಜೆಟ್ ಸಿನಿಮಾಗಳೇ ಆಗಿರುತ್ತವೆ. ಅಲ್ಲದೇ ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡುತ್ತವೆ. ಹೀಗಾಗಿಯೇ ಅವರು ಸಿನಿಮಾದಿಂದ ಸಿನಿಮಾಗೆ ಡಿಮಾಂಡ್ ಮಾಡುತ್ತಾರೆ ಎನ್ನುತ್ತಿದೆ ಟಾಲಿವುಡ್. ಅವರು ಸಂಭಾವನೆಯನ್ನು ಅದೆಷ್ಟೇ ಏರಿಸಿದರು. ನಿರ್ಮಾಪಕರು ಕೊಡಲು ರೆಡಿ ಇರುತ್ತಾರೆ ಎಂದು ಹೇಳಲಾಗುತ್ತದೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್

    ತ್ರಿವಿಕ್ರಮ್ ಶ್ರೀನಿವಾಸ್  ಮತ್ತು ಮಹೇಶ್ ಬಾಬು ಕಾಂಬಿನೇಷನ್ ನ ಹೊಸ ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದ್ದು ಇದಾದ ನಂತರ ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇನ್ನೂ ಈ ಕುರಿತು ಅಧಿಕೃತ ಮಾಹಿತಿಯಂತೂ ಇಲ್ಲ. ಮೊದಲು ತ್ರಿವಿಕ್ರಮ್ ಸಿನಿಮಾವಾಗುತ್ತಾ ಅಥವಾ ರಾಜಮೌಳಿ ಅವರ ಸಿನಿಮಾ ಬರತ್ತಾ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ನಟಿಯರ ಮೇಲೆ ತೆಲುಗು ನಟ ಮಹೇಶ್ ಬಾಬುಗೇಕೆ ಮುನಿಸು?

    ಬಾಲಿವುಡ್ ನಟಿಯರ ಮೇಲೆ ತೆಲುಗು ನಟ ಮಹೇಶ್ ಬಾಬುಗೇಕೆ ಮುನಿಸು?

    ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಬಾಲಿವುಡ್ ಕಂಡರೆ ಕೆಂಡಕಾರುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆಯೂ ಈ ಹಿಂದೆ ಮಾತನಾಡಿದ್ದ ಅವರು, ನನ್ನ ಸಿನಿಮಾಗಳು ದಕ್ಷಿಣದಲ್ಲೇ ಓಡಿದರೆ ಸಾಕು. ಹಿಂದಿ ಏನೂ ಬೇಕಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಹಿಂದಿ ಸಿನಿಮಾಗಳಲ್ಲಿ ಅವಕಾಶ ಸಿಕ್ಕರೂ ತಾವು ನಟಿಸುವುದಿಲ್ಲವೆಂದೂ ಮಾತನಾಡಿದ್ದರು. ಇದೀಗ ಮತ್ತೆ ಬಾಲಿವುಡ್ ಮೇಲೆ ಮುನಿಸಿನಿಂದಲೇ ಮಾತನಾಡಿದ್ದಾರೆ. ತಮ್ಮ ಸಿನಿಮಾದಲ್ಲಿ ಬಾಲಿವುಡ್ ನಟಿಯರಿಗೆ ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

    ಮಹೇಶ್ ಬಾಬುಗಾಗಿ ಖ್ಯಾತ ನಿರ್ದೇಶಕ ರಾಜಮೌಳಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ನಾಯಕಿಯ ಆಯ್ಕೆ ಕೂಡ ಈಗ ನಡೆದಿದೆ. ಬಾಲಿವುಡ್ ನಿಂದ ನಾಯಕಿಯನ್ನು ಕರೆತರಲು ರಾಜಮೌಳಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ತಮ್ಮ ಸಿನಿಮಾದಲ್ಲಿ ಬಾಲಿವುಡ್ ನಟಿಯರಿಗೆ ಅವಕಾಶ ನೀಡಬೇಡಿ ಎಂದು ರಾಜಮೌಳಿ ಅವರಿಗೆ ಮಹೇಶ್ ಬಾಬು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಸಖತ್ ಸದ್ದು ಕೂಡ ಮಾಡಿದೆ. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಬಾಲಿವುಡ್ ಸಿನಿಮಾವನ್ನು ರೀಮೇಕ್ ಮಾಡಲ್ಲವೆಂದು ಹಾಗೂ ಹಿಂದಿಯಲ್ಲಿ ತಾವು ನಟಿಸುವುದಿಲ್ಲವೆಂದು ಈಗಾಗಲೇ ತೊಡೆತಟ್ಟಿರುವ ಮಹೇಶ್ ಬಾಬು, ಈ ಬಾರಿ ಅಲ್ಲಿಂದ ನಟಿಯರನ್ನೂ ಕರೆಯಿಸಿಕೊಳ್ಳುವುದಿಲ್ಲವೆಂದು ಶಪಥ ಮಾಡಿದ್ದಾರೆ. ಅಲ್ಲಿಗೆ ಬಾಲಿವುಡ್ ಗಿಂತಲೂ ತಾವು ಯಾವುದರಲ್ಲೂ ಕಡಿಮೆಯಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ಮಹೇಶ್ ಬಾಬು ಈ ಮೂಲಕ ರವಾಣಿಸಿದ್ದಾರೆ. ಈ ಮಾತಿಗೆ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

    Live Tv

  • ಆರ್.ಆರ್.ಆರ್ ಅಕೌಂಟ್ ಕ್ಲೋಸ್ : ನಿರ್ಮಾಪಕರಿಗೆ ಒಟ್ಟು ಹರಿದು ಬಂದ ಹಣವೆಷ್ಟು?

    ಆರ್.ಆರ್.ಆರ್ ಅಕೌಂಟ್ ಕ್ಲೋಸ್ : ನಿರ್ಮಾಪಕರಿಗೆ ಒಟ್ಟು ಹರಿದು ಬಂದ ಹಣವೆಷ್ಟು?

    ರಾಜಮೌಳಿ ನಿರ್ದೇಶನದ ಬಹುಕೋಟಿ ಬಜೆಟ್ ಸಿನಿಮಾ ಆರ್.ಆರ್.ಆರ್ ಸಿನಿಮಾ ಬಹುತೇಕ ಚಿತ್ರಮಂದಿರಗಳಿಂದ ಎತ್ತಂಗಡಿ ಆಗಿದೆ. ಹಾಗಾಗಿ ಈ ಸಿನಿಮಾ ಎಷ್ಟೆಲ್ಲ ಹಣವನ್ನು ತಂದುಕೊಟ್ಟಿತು ಎನ್ನುವ ಕುತೂಹಲ ಮೂಡಿದೆ. ಸಿನಿಮಾ ರಿಲೀಸ್ ಆಗಿ ಎರಡ್ಮೂರು ವಾರಗಳ ಕಾಲ, ನೂರು ಕೋಟಿ ಬಂತು, ಐನೂರು ಕೋಟಿ ಆಯಿತು ಹೀಗೆ ಸುದ್ದಿಗಳನ್ನು ಓದಿದ್ದೇವೆ. ಇದೀಗ ಒಟ್ಟು ಎಷ್ಟು ಹಣ ಬಂದಿದೆ ಎನ್ನುವ ಪ್ರಶ್ನೆ ಕ್ಯೂರಿಯಾಸಿಟಿ ಮೂಡಿಸಿದೆ.

    ಕೇವಲ ರಾಜಮೌಳಿ ನಿರ್ದೇಶನ ಮಾಡಿದಾಗ, ಬಾಕ್ಸ್ ಆಫೀಸಿನಲ್ಲಿ ಒಂದು ಲೆಕ್ಕಚಾರ ಇದ್ದೇ ಇರುತ್ತದೆ. ಆದರೆ, ಈ ಬಾರಿ ಇಬ್ಬರು ಸೂಪರ್ ಸ್ಟಾರ್ ಜೊತೆ ರಾಜಮೌಳಿ ಬಂದಿದ್ದಾರೆ. ಹಾಗಾಗಿ ಲೆಕ್ಕಾಚಾರ ಭರ್ಜರಿಯಾಗಿಯೇ ಇರುತ್ತದೆ ಎನ್ನುವ ನಂಬಿಕೆ ಚಿತ್ರೋದ್ಯಮದ್ದು. ರಾಜಮೌಳಿಯೂ ಸೇರಿದಂತೆ ಮೂವರು ಸ್ಟಾರ್ ಗಳು ಒಂದೇ ಸಿನಿಮಾದಲ್ಲಿ ಸಮಾಗಮವಾಗಿದ್ದರಿಂದ ಸಾವಿರ ಕೋಟಿಯೇ ನಿರ್ಮಾಪಕರ ಜೇಬಿಗೆ ಹರಿದು ಬಂದಿದೆ. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

    ಸಿನಿ ರಂಗದ ಲೆಕ್ಕಾಚಾರದ ಪಂಡಿತರ ಪ್ರಕಾರ ಥಿಯೇಟರ್ ನಿಂದಲೇ ಒಟ್ಟು 1100 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಟಿವಿ ರೈಟ್ಸ್, ಡಿಜಿಟಲ್ ರೈಟ್ಸ್, ಆಡಿಯೋ ಹಕ್ಕುಗಳನ್ನು ಸೇರಿಸಿದರೆ, 1450 ಕೋಟಿಯಷ್ಟು ಹಣವು ಆರ್.ಆರ್.ಆರ್ ಗಳಿಸಿದೆ ಎನ್ನಲಾಗುತ್ತಿದೆ. ಟ್ಯಾಕ್ಸ್, ಕಮಿಷನ್, ಇತ್ಯಾದಿ ಇತ್ಯಾದಿ ಕಡಿತಗೊಂಡು ನಿರ್ಮಾಪಕರಿಗೆ ಎಷ್ಟು ಹಣ ಸೇರುತ್ತದೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಮುಂದಿನ ದಿನಗಳಲ್ಲಿ ಅದೂ ಗೊತ್ತಾಗಬಹುದು.

    Live Tv

  • ಗಲ್ಲಾಪೆಟ್ಟಿಗೆ ಉಡೀಸ್ ಮಾಡಿದ `ಆರ್‌ಆರ್‌ಆರ್’ ಕಲೆಕ್ಷನ್: 1100 ಕೋಟಿ ಬಾಚಿದ ಚಿತ್ರ

    ಗಲ್ಲಾಪೆಟ್ಟಿಗೆ ಉಡೀಸ್ ಮಾಡಿದ `ಆರ್‌ಆರ್‌ಆರ್’ ಕಲೆಕ್ಷನ್: 1100 ಕೋಟಿ ಬಾಚಿದ ಚಿತ್ರ

    ಕ್ಷಿಣ ಭಾರತ ಚಿತ್ರರಂಗದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಅಂದ್ರೆ ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ ಚಿತ್ರ. ಇದೀಗ ಈ ಚಿತ್ರದ ಫೈನಲ್ ಕಲೆಕ್ಷನ್ ಕುರಿತ ಅಪ್‌ಡೇಟ್ ಹೊರ ಬಿದ್ದಿದೆ. ಬಾಕ್ಸಾಫೀಸ್‌ನಲ್ಲಿ ಜ್ಯೂ.ಎನ್‌ಟಿಆರ್ ಮತ್ತು ರಾಮ್ ಚರಣ್ ಚಿತ್ರ 1100 ಕೋಟಿ ಬಾಚಿದೆ.

    ಮಲ್ಟಿಸ್ಟರ‍್ಸ್ ನಟಿಸಿರುವ ಆರ್‌ಆರ್‌ಆರ್ ಸಿನಿಮಾ ಈ ವರ್ಷದ ಹಿಟ್ ಲಿಸ್ಟ್ ಸೇರಿದ ಚಿತ್ರಗಳಲ್ಲಿ ಇದು ಒಂದು. ಚಿತ್ರದ ಫೈನಲ್ ಕಲೆಕ್ಷನ್ ಲಿಸ್ಟ್ ಇದೀಗ ಹೊರ ಬಿದ್ದಿದೆ. `ಆರ್‌ಆರ್‌ಆರ್’ ಭಾರತದಲ್ಲಿ 902 ಕೋಟಿ ಕಲೆಕ್ಷನ್ ಮಾಡಿದ್ರೆ, ವಿಶ್ವಾದ್ಯಂತ 1111 ಕೋಟಿ ಕಲೆಕ್ಷನ್ ಮಾಡಿ, ಗಲ್ಲಾಪೆಟ್ಟಿಗೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರಿಲೀಸ್ ವೇಳೆ ಹಾಲಿವುಡ್‌ನ `ಟೆಂಟ್‌ಪೋಲ್ ದಿ ಬ್ಯಾಟ್‌ಮ್ಯಾನ್’ ಚಿತ್ರಕ್ಕೆ ಸೆಡ್ಡು ಹೊಡೆದು ಭರ್ಜರಿ ಕಲೆಕ್ಷನ್ ಮಾಡಿತ್ತು. ಇದನ್ನೂ ಓದಿ: ಅಮ್ಮ ಅಂತಾ ಎಷ್ಟೇ ಹೇಳಿಕೊಟ್ಟರೂ ಕೊನೆಗೆ ಅಪ್ಪ ಎಂದು ಕರೆದ ರಾಯನ್

    ಇನ್ನು ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ನಲ್ಲಿ ಜ್ಯೂ.ಎನ್‌ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರೀಯಾ ಶರಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಚಿತ್ರದ ಫೈನಲ್ ಕಲೆಕ್ಷನ್ ವಿಚಾರವಾಗಿ `ಆರ್‌ಆರ್‌ಆರ್’ ಮತ್ತೆ ಸೌಂಡ್ ಮಾಡುತ್ತಿದೆ.

    Live Tv

  • ರಾಜಮೌಳಿ ಮುಂದಿನ ಚಿತ್ರಕ್ಕೆ ಐಶ್ವರ್ಯ ರೈ ನಾಯಕಿ?

    ರಾಜಮೌಳಿ ಮುಂದಿನ ಚಿತ್ರಕ್ಕೆ ಐಶ್ವರ್ಯ ರೈ ನಾಯಕಿ?

    ಆರ್.ಆರ್.ಆರ್ ಯಶಸ್ಸಿನಲ್ಲಿ ತೇಲುತ್ತಿರುವ ನಿರ್ದೇಶಕ ರಾಜಮೌಳಿ, ಸದ್ದಿಲ್ಲದೇ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಮಹೇಶ್ ಬಾಬು ಅವರಿಗಾಗಿ ಸಿನಿಮಾ ಮಾಡಲಿದ್ದು, ಈ ಕೆಲಸದಲ್ಲಿ ರಾಜಮೌಳಿ ಬ್ಯುಸಿಯಾಗಿದ್ದಾರಂತೆ. ಸ್ಕ್ರಿಪ್ಟ್ ಕೆಲಸದಲ್ಲಿ ತಲ್ಲೀಣರಾಗಿರುವ ನಿರ್ದೇಶಕರು ಮಹೇಶ್ ಬಾಬು ಅವರನ್ನು ಈ ಸಿನಿಮಾದಲ್ಲಿ ಹೊಸ ರೀತಿಯಲ್ಲಿ ತೋರಿಸಲಿದ್ದಾರಂತೆ. ಕಥೆಯೇ ಬಗ್ಗೆ ಯಾವುದೇ ಮಾಹಿತಿ ಕೊಡದೇ ಇದ್ದರೂ, ಇದು ಕೂಡ ಐತಿಹಾಸಿಕ ಸಂಬಂಧವನ್ನು ಹೊಂದಿದೆಯಂತೆ.

    ರಾಜಮೌಳಿ ಅವರ ಮುಂದಿನ ಸಿನಿಮಾಗೆ ಮಹೇಶ್ ಬಾಬು ಅವರೇ ನಾಯಕ ಎಂದು ಹೇಳಲಾದರೂ, ನಾಯಕಿ ಯಾರು ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಈ ಬಾರಿ ಯಾವ ನಾಯಕಿಗೆ ರಾಜಮೌಳಿ ಅವರು ಅವಕಾಶ ನೀಡಲಿದ್ದಾರೆ ಎಂಬ ಪ್ರಶ್ನೆ ಮೂಡಿತ್ತು. ತೆಲುಗು ಸಿನಿಮಾ ರಂಗದಲ್ಲಿ ಸದ್ಯ ಐಶ್ವರ್ಯ ರೈ ಅವರ ಹೆಸರು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿ ಐಶ್ವರ್ಯ ರೈ ಪ್ರಮುಖ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

    ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ ನ ಈ ಸಿನಿಮಾ ಸೆಟ್ಟೇರುವುದು ತಡವಾಗಿದ್ದರೂ, ಈಗಾಗಲೇ ಹಲವು ಸುತ್ತು ಚರ್ಚೆಗಳು ನಡೆದಿವೆ. ಸಿನಿಮಾದ ಬಜೆಟ್, ಕಲಾವಿದರ ಆಯ್ಕೆ, ಕಥೆ ಹೀಗೆ ಹಲವು ಕಾರಣಗಳಿಂದಾಗಿ ಸಿನಿಮಾ ಈಗಿನಿಂದಲೇ ನಿರೀಕ್ಷೆ ಮೂಡಿಸಿದೆ. ಆರ್.ಆರ್.ಆರ್ ಸಿನಿಮಾದ ನಂತರ ಈ ಸಿನಿಮಾ ಬರುತ್ತಿರುವುದರಿಂದ ಮತ್ತಷ್ಟು ಬೇಡಿಕೆಯಂತೂ ಹೆಚ್ಚಾಗಲಿದೆ.

  • ರಣ್‌ಬೀರ್‌ ನಟನೆಯ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಸಾಥ್

    ರಣ್‌ಬೀರ್‌ ನಟನೆಯ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಸಾಥ್

    ಬಾಲಿವುಡ್‌ನ ನಿರೀಕ್ಷಿತ ಸಿನಿಮಾ `ಬ್ರಹ್ಮಾಸ್ತ್ರ’ ಸಾಕಷ್ಟು ವಿಚಾರಗಳಿಂದ ಸಿನಿರಂಗದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಇದೀಗ ಚಿತ್ರದ ಕುರಿತು ಹೊಸ ಅಪ್‌ಡೇಟ್‌ವೊಂದು ಹೊರ ಬಿದ್ದಿದೆ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಜಮೌಳಿ ಬ್ರಹ್ಮಾಸ್ತ್ರ ಚಿತ್ರದ ಕುರಿತು ಬಿಗ್ ನ್ಯೂಸ್‌ವೊಂದನ್ನು ರಿವೀಲ್ ಮಾಡಿದ್ದಾರೆ. ಟಾಲಿವುಡ್‌ನ ಮೆಗಾಸ್ಟಾರ್ `ಬ್ರಹ್ಮಾಸ್ತ್ರ’ ಚಿತ್ರದ ಭಾಗಿವಾಗಿದ್ದು, ಇದೀಗ ಈ ಚಿತ್ರಕ್ಕೆ ಸಾಥ್ ನೀಡಿದ್ದಾರೆ.

    ಆಯಾನ್ ಮುಖರ್ಜಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ `ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಅನ್ನು ಜೂನ್ 15ಕ್ಕೆ ಚಿತ್ರತಂಡ ರಿಲೀಸ್ ಮಾಡಲಿದೆ. ಇದೀಗ ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರಕ್ಕೆ ಸಾಥ್ ನೀಡಿರುವ ವಿಚಾರವನ್ನ ಟ್ವೀಟ್ ಮೂಲಕ ರಾಜಮೌಳಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ಸೋನಮ್ ಕಪೂರ್ ಬೇಬಿ ಬಂಪ್

    ಸೌತ್ ಸೂಪರ್ ಸ್ಟಾರ್ ಚಿರಂಜೀವಿ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಚಿತ್ರದ ಟ್ರೇಲರ್‌ಗಾಗಿ ತೆಲುಗಿನಲ್ಲಿ ತಮ್ಮ ವಾಯ್ಸ್ ನೀಡಿದ್ದಾರೆ. `ಬ್ರಹ್ಮಾಸ್ತ್ರ’ಕ್ಕೆ ತಮ್ಮ ಖಡಕ್ ವಾಯ್ಸ್ ಮೂಲಕ ಮೋಡಿ ಮಾಡಿದ್ದಾರೆ. ಜೂನ್ 15ಕ್ಕೆ ರಿಲೀಸ್ ಆಗಲಿರುವ ಟ್ರೇಲರ್‌ನಲ್ಲಿ ನೋಡಬಹುದಾಗಿದೆ. ಚಿತ್ರತಂಡವನ್ನ ಭೇಟಿಯಾಗಿ, ಟ್ರೇಲರ್‌ಗೆ ವಾಯ್ಸ್ ನೀಡಿರುವುದಲ್ಲದೇ ಸೂಪರ್ ಸ್ಟಾರ್ಸ್‌ ನಟಿಸಿರುವ ಈ ಚಿತ್ರಕ್ಕೆ ಚಿರಂಜೀವಿ ಶುಭ ಹಾರೈಸಿ ಬಂದಿದ್ದಾರೆ. ಒಟ್ನಲ್ಲಿ ಸೂಪರ್ ಗುಡ್ ನ್ಯೂಸ್ ಕೇಳಿರುವ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಆರ್.ಆರ್.ಆರ್ ಸಿನಿಮಾದಲ್ಲಿ ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಸಲಿಂಗ ಕಾಮಿಗಳಾ?

    ಆರ್.ಆರ್.ಆರ್ ಸಿನಿಮಾದಲ್ಲಿ ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಸಲಿಂಗ ಕಾಮಿಗಳಾ?

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್.ಆರ್.ಆರ್ ಸಿನಿಮಾ ಈವರೆಗೂ ಬಾಕ್ಸ್ ಆಫೀಸ್ ಗಳಿಕೆ, ಸಿನಿಮಾ ಮೂಡಿ ಬಂದ ರೀತಿ ಮತ್ತು ಮೇಕಿಂಗ್ ನಿಂದಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ಸಿನಿಮಾದ ಕಥೆಯಿಂದಾಗಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಅದರಲ್ಲೂ ವಿದೇಶಿ ನೋಡುಗರು ಈ ಕಥೆಯನ್ನು ಬೇರೆಯದ್ದಾಗಿಯೇ ಸ್ವೀಕರಿಸಿರುವುದು ಇನ್ನೂ ಸುದ್ದಿಗೆ ಕಾರಣವಾಗಿದೆ.

    ಆರ್.ಆರ್.ಆರ್ ಸಿನಿಮಾ ಓಟಿಟಿಯಲ್ಲಿ ನೋಡಲು ಲಭ್ಯವಿದೆ. ಹೀಗಾಗಿ ಅನೇಕರು ಈ ಸಿನಿಮಾವನ್ನು ಅದೇ ವೇದಿಕೆಯಲ್ಲೇ ವೀಕ್ಷಿಸುತ್ತಿದ್ದಾರೆ. ಸಿನಿಮಾ ನೋಡಿದ ವಿದೇಶಿಗರು ಈ ಸಿನಿಮಾವನ್ನು ಗೇ ಕಥೆಯುಳ್ಳ ಚಿತ್ರ ಎಂದು ಕಾಲೆಳೆದಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಪಾತ್ರಗಳು ಸಲಿಂಗ ಕಾಮಿಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

    ಇಂತಹ ಸಾಕಷ್ಟು ಕಾಮೆಂಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೆ ಉತ್ತರಿಸಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಉರಿವ ಬೆಂಕಿಗೆ ತುಪ್ಪವಲ್ಲ, ಪೆಟ್ರೊಲ್ ಸುರಿದು ಮತ್ತಷ್ಟು ಬೆಂಕಿ ಉಗುಳುವಂತೆ ಮಾಡಿದ್ದಾರೆ. ‘ಇದೊಂದು ಸಲಿಂಗ ಪ್ರೇಮ ಎನ್ನುವಂತಹ ಕಥೆಯನ್ನು ಈ ಸಿನಿಮಾ ಹೊಂದಿದೆ ಎನ್ನುವ ಅರ್ಥದಲ್ಲಿ ಟ್ವೀಟ್‌ ಮಾಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ಈ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್‌ ಮತ್ತು ರಾಮ್ ಚರಣ್ ತೇಜ್ ಇಬ್ಬರೂ ಒಟ್ಟೊಟ್ಟಿಗೆ ತೆರೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಸಿನಿಮಾ ಮುಗಿಯುವ ತನಕ ಒಬ್ಬರಿಗಾಗಿ ಒಬ್ಬರು ಫೈಟ್ ಮಾಡುತ್ತಾರೆ. ನೃತ್ಯ ಮಾಡುತ್ತಾರೆ. ಹೀಗಾಗಿ ಇದೊಂದು ಸಲಿಂಗ ಪ್ರೇಮಕಥೆ ಎಂದು ಉಲ್ಲೇಖಿಸಲಾಗುತ್ತಿದೆ.

  • `ಬಾಹುಬಲಿ’ ನಿರ್ದೇಶಕನ ಗ್ಯಾಂಗ್‌ಗೆ ಮತ್ತೆ ಕಿಚ್ಚನ ಎಂಟ್ರಿ.!

    `ಬಾಹುಬಲಿ’ ನಿರ್ದೇಶಕನ ಗ್ಯಾಂಗ್‌ಗೆ ಮತ್ತೆ ಕಿಚ್ಚನ ಎಂಟ್ರಿ.!

    ಕಿಚ್ಚ ಸುದೀಪ್ ಅಭಿನಯದ `ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಚಿತ್ರದ ಪ್ರಚಾರದ ಕೆಲಸದಲ್ಲಿ ಕಿಚ್ಚ ಸುದೀಪ್ ಆ್ಯಂಡ್ ಟೀಮ್ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಕಿಚ್ಚ ಸುದೀಪ್‌ಗೆ ಬಾಹುಬಲಿ ನಿರ್ದೇಶಕನಿಂದ ಬುಲಾವ್ ಬಂದಿದೆ.

    ಭಿನ್ನ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡಿರುವ ಸುದೀಪ್ ನಟನೆಯಲ್ಲಿ ಚಕ್ರವರ್ತಿ, ಕನ್ನಡ ಮಾತ್ರವಲ್ಲದೇ ಪರಭಾಷಾ ಚಿತ್ರಗಳಲ್ಲೂ ನಟಿಸಿ ಹೈಪ್ ಕ್ರಿಯೆಟ್ ಮಾಡಿದ್ದಾರೆ. ಸದ್ಯ `ವಿಕ್ರಾಂತ್ ರೋಣ’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಿರೋ ಸುದೀಪ್‌ಗೆ ಮತ್ತೆ ರಾಜಮೌಳಿ ಕ್ಯಾಂಪ್‌ನಿಂದ ಕರೆ ಬಂದಿದೆ. ಹೊಸ ಚಿತ್ರದ ವಿಷ್ಯವಾಗಿ ಮಾತನಾಡಲು ರೈಟರ್‌ ವಿಜಯೇಂದ್ರ ಪ್ರಸಾದ್‌ ಕಡೆಯಿಂದ ಕಿಚ್ಚನಿಗೆ ಬುಲಾವ್ ಬಂದಿದೆ. ಅಷ್ಟೇ ಅಲ್ಲ, ಈ ವಿಷ್ಯವಾಗಿ ಮಾತುಕಥೆ ನಡೆಸಲು ಕಿಚ್ಚ ಕೂಡ ಹೈದರಾಬಾದ್‌ಗೆ ಹಾರಿದ್ದಾರೆ. ಇದನ್ನೂ ಓದಿ: ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ: 21 ಸಿಟಿಗಳಲ್ಲಿ ಚಾರ್ಲಿ-777 ಪ್ರೀಮಿಯರ್

    ಈಗಾಗಲೇ ರಾಜಮೌಳಿ ಜತೆ ಈಗ, ಬಾಹುಬಲಿ ಚಿತ್ರಗಳಲ್ಲಿ ನಟಿಸಿರುವ ಸುದೀಪ್ ಜತೆ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲು ರಾಜಮೌಳಿ ಕಡೆಯಿಂದ ಕರೆ ಬಂದಿದೆ. ಜಕ್ಕಣ್ಣನ ಜೊತೆ ಮೊದಲ ಚಿತ್ರದಿಂದ ಇಂದಿನವೆರಗೂ ಒಳ್ಳೆಯ ಬಾಂದವ್ಯವಿರುವ ಕಿಚ್ಚನಿಗಾಗಿ ಮತ್ತೆ ಹೊಸ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲು ರೆಡಿಯಾಗಿದ್ದಾರೆ. ರಾಜಮೌಳಿ ತಂದೆ ಖ್ಯಾತ ರೈಟರ್ ವಿಜಯೇಂದ್ರ ಪ್ರಸಾದ್ ಕರೆ ಮಾಡಿ, ಸುದೀಪ್ ಜತೆ ಮಾತುಕಥೆ ನಡೆಸಿದ್ದಾರೆ.

    ಸದ್ಯ ರಾಜಮೌಳಿ ಆರ್‌ಆರ್‌ಆರ್ ಸಕ್ಸಸ್ ನಂತರ ಮಹೇಶ್ ಬಾಬುಗೆ ನಿರ್ದೇಶನ ಮಾಡ್ತಿದ್ದಾರೆ. ಆ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೋ ಅಥವಾ ಕಿಚ್ಚನಿಗಾಗಿ ಮತ್ತೊಂದು ಚಿತ್ರ ಮಾಡುತ್ತಿದ್ದಾರೋ ಅನ್ನೋದರ ಬಗ್ಗೆ ಕ್ಲಾರಿಟಿ ಸಿಕ್ಕಿಲ್ಲ. ಆದರೆ ಸುದೀಪ್‌ಗಾಗಿ ಒಂದು ಕಥೆ ರೆಡಿ ಮಾಡಿರೋದಂತೂ ಗ್ಯಾರೆಂಟಿ. ಈ ಎಲ್ಲದರ ಕುರಿತು ಚಿತ್ರತಂಡ ಅಧಿಕೃತ ಅನೌನ್ಸ್ ಮಾಡುವವರೆಗೂ ಕಾಯಲೇಬೇಕು.

  • ಆಫ್ರಿಕನ್ ಜಂಗಲ್ ಅಡ್ವೆಂಚರ್ ಕಥೆ ಹೇಳಲು ಹೊರಟ ರಾಜಮೌಳಿ- ಮಹೇಶ್ ಬಾಬು.!

    ಆಫ್ರಿಕನ್ ಜಂಗಲ್ ಅಡ್ವೆಂಚರ್ ಕಥೆ ಹೇಳಲು ಹೊರಟ ರಾಜಮೌಳಿ- ಮಹೇಶ್ ಬಾಬು.!

    ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. `ಸರ್ಕಾರು ವಾರಿ ಪಾಟ’ ಸಿನಿಮಾ ಗೆಲುವಿನ ನಂತರ `ಬಾಹುಬಲಿ’ ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಸಂದೀಪ್ ಉನ್ನಿಕೃಷ್ಣನ್ ಜೀವನಾಧಾರಿತ ಚಿತ್ರ `ಮೇಜರ್’ಗೆ ನಿರ್ಮಾಪಕನಾಗಿರುವ ಮಹೇಶ್ ಬಾಬು ಈ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.`ಸರ್ಕಾರು ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಹೊಸ ಬಗೆಯ ಪಾತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸದ್ಯ ಜಕ್ಕಣ್ಣ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಹೊಸ ಚಿತ್ರ ಮೂಡಿಬರಲಿದ್ದು, ಆಫ್ರಿಕನ್ ಜಂಗಲ್ ಅಡ್ವೆಂಚರ್ ಕಥೆಯಲ್ಲಿ ಪ್ರಿನ್ಸ್ ಮಹೇಶ್ ಬಾಬು ಮಿಂಚಲಿದ್ದಾರೆ. ಇದನ್ನೂ ಓದಿ: `ನೈಟ್ ಕರ್ಫ್ಯೂ’ ಮೂಲಕ ನಟನೆಗೆ ಮರಳಿದ ಮಾಲಾಶ್ರೀ

    ಎಂದೂ ಮಾಡಿರದ ಭಿನ್ನ ಪಾತ್ರದಲ್ಲಿ ಮಹೇಶ್ ಬಾಬು ಕಾಣಿಸಿಕೊಳ್ತಿದ್ದು, ಈ ಬಾರಿ ಆಫ್ರಿಕನ್ ಜಂಗಲ್ ಅಡ್ವೆಂಚರ್ ಕಥೆ ಹೇಳಲು ಹೊರಟಿದ್ದಾರೆ. ನಿರ್ದೇಶಕ ತ್ರಿವಿಕ್ರಮ್ ಚಿತ್ರದಲ್ಲಿ ನಟಿಸುತ್ತಿರುವ ಮಹೇಶ್ ಬಾಬು ಈ ಚಿತ್ರದ ನಂತರವೇ ರಾಜಮೌಳಿ ನಿರ್ದೇಶನದಲ್ಲಿ ನಟಿಸಲಿದ್ದಾರೆ. ಡಿಫರೆಂಟ್ ಕಥೆ ಮತ್ತು ಪಾತ್ರದ ಮೂಲಕ ಕಮಾಲ್ ಮಾಡಲು ಮಹೇಶ್ ಬಾಬು ಸಜ್ಜಾಗಿದ್ದಾರೆ.

  • ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

    ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

    ಎಸ್.ಎಸ್.ರಾಜಮೌಳಿ ನಿರ್ದೇಶನದ ಜೂನಿಯರ್ ಎನ್.ಟಿಆರ್ ಹಾಗೂ ರಾಮ್ ಚರಣ್ ನಟನೆಯ ಆರ್.ಆರ್.ಆರ್ ಸಿನಿಮಾ ಬಾಕ್ಸಾಫೀಸ್‌ ಕೊಳ್ಳೆ ಹೊಡೆದಿತ್ತು. ದಾಖಲೆಯ ರೀತಿಯಲ್ಲಿ ಹಣ ಬಾಚಿಕೊಂಡಿತ್ತು. ಇದೀಗ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಇದೇ ತಿಂಗಳ 20ರಂದು ತಾರಕ್ ಹುಟ್ಟುಹಬ್ಬದಂದು ಒಟಿಟಿಗೆ ಲಗ್ಗೆ ಇಟ್ಟ ತ್ರಿಬಲ್ ಆರ್ ಸಿನಿಮಾ ಹೊಸದೊಂದು ರೆಕಾರ್ಡ್ ಬರೆದಿದೆ. ಇದನ್ನೂ ಓದಿ : ‘ಮುದುಕನ ಲವ್ ಸ್ಟೋರಿ’ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ

    ಈ ಸಿನಿಮಾ ಜೀ5 ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾದ ದೃಶ್ಯ ವೈಭವ ತ್ರಿಬಲ್ ಆರ್ ಸಿನಿಮಾ, ಜಸ್ಟ್ ಒಂದೇ ಒಂದು ನಿಮಿಷದಲ್ಲಿ 1000 ಮಿಲಿಯನ್ಸ್ ಸ್ಟ್ರೀಮಿಂಗ್ ಪಡೆದುಕೊಂಡಿದ್ದು, ಜೊತೆಗೆ ಜೀ5ಯಲ್ಲಿ ನಾಲ್ಕು ಭಾಷೆಯಲ್ಲಿಯೂ ಟ್ರೇಡಿಂಗ್ ಕಮಾಲ್ ಮಾಡ್ತಿದೆ. ಇದನ್ನೂ ಓದಿ : ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಈ ಕುರಿತು ಟ್ವಿಟ್ ಮಾಡಿರುವ ಜ್ಯೂನಿಯರ್ ಎನ್.ಟಿ.ಆರ್ ‘ಆರ್.ಆರ್.ಆರ್ ಸಿನಿಮಾಕ್ಕೆ ನೀವು ತೋರಿಸುತ್ತಿರುವ ಪ್ರೀತಿಗೆ ನಾನು ಕೃತಜ್ಞ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಈ ನಾಲ್ಕು ಭಾಷೆಯಲ್ಲಿಯೂ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದ್ದು,ನಿಮ್ಮ ಅದ್ಭುತ ಪ್ರತಿಕ್ರಿಯೆ ಧನ್ಯವಾದ’ ಎಂದು ಹೇಳಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ರಾಜಮೌಳಿ ಸಿನಿಮಾ ಎಂದರೆ ಅಭಿಮಾನಿಗಳು ಸಹಜವಾಗಿಯೇ ಅದ್ದೂರಿತನ ಬಯಸುತ್ತಾರೆ. ಅದಕ್ಕೆ ತಕ್ಕಂತೆಯೇ ‘ಆರ್​ಆರ್​ಆರ್​’ ಸಿನಿಮಾ ಮೂಡಿಬಂದಿದೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಆ್ಯಕ್ಷನ್​ ಖದರ್ ನಲ್ಲಿ ಮೆರೆದಿದ್ದರು. ಜೊತೆಗೆ ಸೆಂಟಿಮೆಂಟ್​ ಕೂಡ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಗಿದೆ.