Tag: rajamouli

  • ಮೇ 20ಕ್ಕೆ ಓಟಿಟಿಯಲ್ಲಿ ಆರ್.ಆರ್.ಆರ್ ಸಿನಿಮಾ : ಜ್ಯೂನಿಯರ್ ಎನ್.ಟಿ.ಆರ್ ಬರ್ತಡೇ ಗಿಫ್ಟ್

    ಮೇ 20ಕ್ಕೆ ಓಟಿಟಿಯಲ್ಲಿ ಆರ್.ಆರ್.ಆರ್ ಸಿನಿಮಾ : ಜ್ಯೂನಿಯರ್ ಎನ್.ಟಿ.ಆರ್ ಬರ್ತಡೇ ಗಿಫ್ಟ್

    ನ್ನಡ, ತಮಿಳು, ಹಿಂದಿ,‌ ಮಲಯಾಳಂ, ಮರಾಠಿ, ಗುಜರಾತಿ, ಬೆಂಗಾಲಿ ಹೀಗೆ ನಾನಾ ಭಾಷೆಗಳ‌, ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ಚಿತ್ರಪ್ರೇಮಿಗಳ  ಹಾಕುತ್ತಿರುವ ಪ್ರತಿಷ್ಠಿತ ಒಟಿಟಿ ಸಂಸ್ಥೆ ಜೀ5 ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ RRR ಚಿತ್ರವನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸ್ತಿದೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಎಸ್.ಎಸ್ ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಆರ್ ಆರ್ ಆರ್ ಬಾಕ್ಸಾಫೀಸ್ ಕೊಳ್ಳೆ ಹೊಡೆದು,  1100 ಕೋಟಿ ಹಣ ಲೂಟಿ ಮಾಡಿತ್ತು. ರಾಮ್-ಭೀಮ್ ಪವರ್ ಫುಲ್ ಆಕ್ಟಿಂಗ್ ಗೆ ಸಿನಿಪ್ರೇಕ್ಷಕರು ಜೈಕಾರ ಹಾಕಿದ್ದರು. ಮಾರ್ಚ್ 24ರಂದು ವರ್ಲ್ಡ್ ವೈಡ್ ರಿಲೀಸ್ ಆಗಿದ್ದ ರೌದ್ರ, ರಣ, ರುಧೀರ ಸಿನಿಮಾ ಬೆಳ್ಳಿತೆರೆಯಲ್ಲಿ ಅಬ್ಬರಿಸಿ, ಬೊಬ್ಬಿರಿದಿತ್ತು. ಈಗ ಈ ಸಿನಿಮಾ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದೆ. ವಿಶೇಷ ಅಂದ್ರೆ ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ದಿನವೇ ಅಂದ್ರೆ ಮೇ 20ಕ್ಕೆ ತ್ರಿಬಲ್ ಆರ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದು ತಾರಕ್ ಫ್ಯಾನ್ಸ್ ಗೆ ಡಬ್ಬಲ್ ಖುಷಿಕೊಟ್ಟಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ತ್ರಿಬಲ್ ಆರ್ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ಸ್ವತಃ ಜೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ಡಬ್ ಮಾಡಿದ್ದರು. ಇದೀಗ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿರುವ ಹಿನ್ನೆಲೆ ಆರ್ ಆರ್ ಆರ್ ಸಿನಿಮಾದ ನಯಾ ಟ್ರೇಲರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ಆರ್.ಆರ್.ಆರ್ ಸಿನಿಮಾ ಯಶಸ್ವಿಯಾಗಿ ಐವತ್ತು ದಿನ ಕಂಪ್ಲೀಟ್ ಮಾಡಿದ್ದು, ಇದೇ‌ ಖುಷಿಯಲ್ಲಿರುವ ಚಿತ್ರತಂಡ ಒಟಿಟಿ ಬಿಡುಗಡೆ ದಿನಾಂಕ ರಿವೀಲ್ ಮಾಡಿದೆ. ಮೇ20 ರಿಂದ, ಜೀ5ನಲ್ಲಿ RRR ಸಿನಿಮಾ ಪ್ರೀಮಿಯರ್ ಆಗ್ತಿದೆ. 4k ಕ್ವಾಲಿಟಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

  • ರಾಜಮೌಳಿ ಮುಂದಿನ ಚಿತ್ರಕ್ಕೆ ಮಹೇಶ್ ಬಾಬು ಹೀರೋ

    ರಾಜಮೌಳಿ ಮುಂದಿನ ಚಿತ್ರಕ್ಕೆ ಮಹೇಶ್ ಬಾಬು ಹೀರೋ

    ಆರ್.ಆರ್.ಆರ್ ಯಶಸ್ಸಿನಲ್ಲಿ ತೇಲುತ್ತಿರುವ ರಾಜಮೌಳಿ ಮುಂದಿನ ಸಿನಿಮಾ ಯಾವುದು  ಎಂಬ ಚರ್ಚೆ ಶುರುವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಈ ಕುರಿತು ರಾಜಮೌಳಿ ಅವರು ಏನೂ ಹೇಳದೇ ಇದ್ದರೂ, ಅವರ ತಂದೆ ವಿಜಯೇಂದ್ರ ಪ್ರಸಾದ್ ಈ ಕುರಿತು ಮಾತನಾಡಿದ್ದಾರೆ. ಅಂದುಕೊಂಡಂತೆ ಆದರೆ, ರಾಜಮೌಳಿ ನಿರ್ದೇಶನದ ಮುಂದಿನ ಸಿನಿಮಾ 2023ರಲ್ಲಿ ಸೆಟ್ಟೇರಲಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ರಾಜಮೌಳಿ ಅವರ ಮುಂದಿನ ಚಿತ್ರಕ್ಕೆ ಅವರ ತಂದೆಯೇ ಚಿತ್ರಕತೆ ಬರೆಯುತ್ತಿದ್ದಾರೆ. ಈಗಾಗಲೇ ಕಥೆ ಸಿದ್ದಗೊಂಡಿದ್ದು, ಸ್ಕ್ರೀನ್ ಪ್ಲೇ ಹೆಣೆಯುವಲ್ಲಿ ವಿಜಯೇಂದ್ರ ಪ್ರಸಾದ್ ಬ್ಯುಸಿಯಾಗಿದ್ದಾರಂತೆ. 2023ರ ಜೂನ್‍ನಿಂದ ಚಿತ್ರೀಕರಣ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದು ಕೂಡ ಭಾರೀ ಬಜೆಟ್ ಸಿನಿಮಾವಾಗಿರಲಿದೆಯಂತೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಅಂದಹಾಗೆ ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಐತಿಹಾಸಿಕ ಕಥಾವಸ್ತುವನ್ನು ಈ ಸಿನಿಮಾ ಹೊಂದಿದ್ದು, ಮಹೇಶ್ ಬಾಬು ಈ ಪಾತ್ರಕ್ಕಾಗಿ ಕನಿಷ್ಠ ಆರು ತಿಂಗಳ ಕಾಲ ತಯಾರಿ ಮಾಡಿಕೊಳ್ಳಬೇಕಂತೆ. ಸದ್ಯ ಮಹೇಶ್ ಬಾಬು ಅವರು  ‘ಸರ್ಕಾರು ವಾರಿ ಪಾಟ’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದು, ರಾಜಮೌಳಿ ಅವರ ಕಥೆಯನ್ನು ಒಪ್ಪಿಕೊಂಡಿದ್ದಾರಂತೆ. ಅಲ್ಲದೇ, ವಿಶೇಷ ಪಾತ್ರಕ್ಕೆ ತಯಾರಿ ಮಾಡಿಕೊಳ್ಳುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಈ ಹಿಂದಿನ ಅವರ ಬಾಹುಬಲಿ ಚಿತ್ರ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಬಿರುದಾಂಕಿತಗೊಂಡಿತ್ತು. ಮಹೇಶ್ ಬಾಬುಗಾಗಿ ಬರೆದ ಕಥೆಯು, ಈ ಎರಡೂ ಸಿನಿಮಾಗಳನ್ನೂ ಮೀರಿಸಲಿದೆ ಎಂದು ಸಿನಿಪಂಡಿತರ ಲೆಕ್ಕಾಚಾರ.

  • ತೆಲುಗು, ಕನ್ನಡ ಕೋವಿಡ್ ಹೊಡೆತಕ್ಕೆ ಬಾಲಿವುಡ್ ಸೋಂಕಿತ : ಬೆಂಕಿ ಹಚ್ಚಿದ ರಾಮ್ ಗೋಪಾಲ್ ವರ್ಮಾ

    ತೆಲುಗು, ಕನ್ನಡ ಕೋವಿಡ್ ಹೊಡೆತಕ್ಕೆ ಬಾಲಿವುಡ್ ಸೋಂಕಿತ : ಬೆಂಕಿ ಹಚ್ಚಿದ ರಾಮ್ ಗೋಪಾಲ್ ವರ್ಮಾ

    ಕೆಜಿಎಫ್ 2, ಆರ್.ಆರ್.ಆರ್, ಪುಷ್ಪಾ ಸಿನಿಮಾಗಳು ಬಾಲಿವುಡ್ ನಲ್ಲಿ ಕಮಾಯಿ ಮಾಡುತ್ತಿದ್ದಂತೆಯೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿಪರೀತ ಆಕ್ಟಿವ್ ಆಗಿದ್ದಾರೆ. ದಕ್ಷಿಣದ ಸಿನಿಮಾಗಳನ್ನು ಹಿಗ್ಗಾಮುಗ್ಗಾ ಹೊಗಳಿ, ಹಿಂದಿ ಸಿನಿಮಾಗಳ ಬಗ್ಗೆ ಸಖತ್ ಟಾಂಗ್ ಕೊಡುತ್ತಿದ್ದಾರೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಮೊನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಅವರ ಹೊಸ ಸಿನಿಮಾದ ಟೈಟಲ್ ಲಾಂಚ್ ಬೆಂಗಳೂರಿನಲ್ಲಿ ನಡೆಯಿತು. ಈ ಸಿನಿಮಾದ ಪತ್ರಿಕಾಗೋಷ್ಠಿಯಲ್ಲೂ ಕೆಜಿಎಫ್ 2 ಸಿನಿಮಾದ ಬಗ್ಗೆ ಮೆಚ್ಚಿ ಮಾತನಾಡಿದರೆ, ಅದರ ದಾಖಲೆಯನ್ನು ವಿವರಿಸಿದರು. ಕೆಜಿಎಫ್ 2 ಸಿನಿಮಾ ಬಾಲಿವುಡ್ ಮಂದಿಯನ್ನು ಹೇಗೆಲ್ಲ ಜಾಗೃತವಾಗಿರುವಂತೆ ಮಾಡಿದೆ ಎನ್ನುವುದನ್ನು ಹೇಳಿದ್ದರು. ಇದೀಗ ಇದೇ ವಿಷಯವಾಗಿ ಟ್ವಿಟ್ ವೊಂದನ್ನು ಮಾಡಿದ್ದಾರೆ ಆರ್.ಜಿ.ವಿ. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ತೆಲುಗು ಮತ್ತು ಕನ್ನಡ ಸಿನಿಮಾಗಳು ಹಿಂದಿ ಚಿತ್ರಗಳನ್ನು ಕೋವಿಡ್ 19 ರೀತಿಯಲ್ಲಿ ಸೋಂಕಿತರನ್ನಾಗಿ ಮಾಡಿವೆ. ಅತೀ ಶೀಘ್ರದಲ್ಲೇ ಬಾಲಿವುಡ್ ವ್ಯಾಕ್ಸಿನ್ ತಗೆದುಕೊಂಡು ಮರಳಲಿದೆ ಎಂದು ಟ್ವಿಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ಈ ಟ್ವಿಟ್ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದು, ನೂರಾರು ಹಿಂದಿ ಸಿನಿಮಾಗಳ ಅಭಿಮಾನಿಗಳು ಅದಕ್ಕೆ ಉತ್ತರವನ್ನೂ ಕೊಟ್ಟಿದ್ದಾರೆ. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ತೆಲುಗಿನ ಆರ್.ಆರ್.ಆರ್ ಮತ್ತು ಕನ್ನಡದ ಕೆಜಿಎಫ್ 2 ಸದ್ಯ ಬಾಲಿವುಡ್ ಅನ್ನು ಆಳುತ್ತಿವೆ. ನೂರಾರು ಕೋಟಿ ಕೊಳ್ಳೆ ಹೊಡೆದಿವೆ. ಅದರಲ್ಲೂ ಕನ್ನಡದ ಕಜಿಎಫ್ 2 ಚಿತ್ರ ಮುನ್ನೂರು ಕೋಟಿ ಕ್ಲಬ್ ತಲುಪಿ, ಇನ್ನೂ ಮುನ್ನುಗ್ಗುತ್ತಿದೆ. ಬಾಲಿವುಡ್ ಕಲಾವಿದರು ಈ ಓಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಕೆಲವು ಕಲಾವಿದರು ತಮ್ಮದೇ ಆದ ರೀತಿಯಲ್ಲಿ ರಿಯ್ಯಾಕ್ಟ್ ಕೂಡ ಮಾಡುತ್ತಿದ್ದಾರೆ. ಹೀಗಾಗಿ ರಾಮ್ ಗೋಪಾಲ್ ವರ್ಮಾ ಟ್ವಿಟ್ ಮಹತ್ವ ಪಡೆದಿದೆ.

  • RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    ಗಾಗಲೇ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿರುವ ಆರ್‌ಆರ್‌ಆರ್ ಚಿತ್ರತಂಡವು ವೀಕೆಂಡ್‌ನಲ್ಲಿ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ.

    ವೀಕೆಂಡ್ ಖುಷಿಯಲ್ಲಿರುವ ಅಭಿಮಾನಿಗಳಿಗಾಗಿ ಚಿತ್ರದ ಆರಂಭದಲ್ಲೇ ಬರುವ `ಕೊಮ್ಮ ಉಯ್ಯಾಲ’ ಗೀತೆಯನ್ನು ಬಿಡುಗಡೆ ಮಾಡಿದೆ. ಕನ್ನಡ, ತೆಲುಗು, ಹಿಂದಿ ಹಾಗೂ ತಮಿಳು, ಮಲಯಾಳಂ ಭಾಷೆಗಳಲ್ಲೂ ಯುಟ್ಯೂಬ್‌ನಲ್ಲಿ ಸಾಂಗ್ ರಿಲೀಸ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ವೀವ್ಸ್ ಪಡೆದಿದೆ. ಇದನ್ನೂ ಓದಿ: ಆಲಿಯಾ- ರಣಬೀರ್ ಮದುವೆಗೆ ರಾಕಿ ಸಾವಂತಗಿಲ್ಲ ಆಹ್ವಾನ: ರಾಕಿ ಆ ಬಯಕೆ ಈಡೇರಲೇ ಇಲ್ಲ

    RRR NEW SONG ONE

    ಆರ್‌ಆರ್‌ಆರ್ ಚಿತ್ರತಂಡ ಈಗಾಗಲೇ ಬಿಡುಗಡೆ ಮಾಡಿರುವ `ನಾಟು ನಾಟು’ ಸಾಂಗ್ 5 ಭಾಷೆಗಲ್ಲೂ ಸಖತ್ ಸೌಂಡ್ ಮಾಡಿದೆ. ರಾಮ್‌ಚರಣ್ ಹಾಗೂ ಜ್ಯೂ. ಎನ್‌ಟಿಆರ್ ಈ ಹಾಡಿಗೆ ಹಾಕಿರುವ ಜಬರ್ದಸ್ತ್ ಸ್ಟೆಪ್‌ಗಳು ಅಭಿಮಾನಿಗಳನ್ನು ಹುಚ್ಚೆಂದು ಕುಣಿಯುವಂತೆ ಮಾಡಿದೆ.

    ಇದೀಗ ಪ್ರತಿಯೊಬ್ಬರಿಗೂ ಇಷ್ಟವಾಗುವಂತ ಕೊಮ್ಮಾ ಉಯ್ಯಾಲ ಗೀತೆಯನ್ನು 5 ಭಾಷೆಗಳಲ್ಲೂ ಬಿಡುಗಡೆ ಮಾಡಿದ್ದು, ಮೆಚ್ಚುಗೆ ಗಳಿಸಿದೆ. ಅಜಾದ್ ವರದರಾಜ್ ಅವರು ಬರೆದಿರುವ ಈ ಸಾಂಗ್ ಅನ್ನು ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಖ್ಯಾತ ಗಾಯಕಿ ಪ್ರಕೃತಿ ರೆಟ್ಟಿ ಹಾಡಿ ಮಿಂಚಿದ್ದಾರೆ. 2.49 ನಿಮಿಷದ ಗೀತೆ ಎಲ್ಲರಿಗೂ ಅಚ್ಚುಮೆಚ್ಚಾಗಿದೆ. ಇದನ್ನೂ ಓದಿ : ಪೂಜಾ ಹೆಗ್ಡೆ 1 ಕೋಟಿ ಸಂಭಾವನೆ ಪಡೆದ ಹಾಡಿನಲ್ಲಿ ಏನಿದೆ?: ಫನ್ ಅಂಡ್ ಫ್ರಸ್ಟ್ರೇಷನ್ 

    ಹಸಿರು ಪ್ರಕೃತಿಯ ಅನಾವರಣದಿಂದ ಆರಂಭವಾಗುವ ಈ ಗೀತೆಗೆ ನುಡಿಸಿರುವ ವಾದ್ಯಗಳು ಹಾಗೂ ವಾತಾವರಣ ಅಪ್ಪಟ ಜನಪದ ಶೈಲಿಯಿಂದ ಕೂಡಿದಂತಿದೆ. ಕಾಡುಜನರ ಮುಗ್ಧ ಮನಸ್ಥಿತಿಯನ್ನೂ ಮುಖಭಾವದಲ್ಲಿ ಅರಳಿಸಿದ್ದಾರೆ. ಅಲ್ಲಲ್ಲಿ ಚಿತ್ರದ ಸನ್ನಿವೇಶಗಳನ್ನು ಹಿಡಿದಿದ್ದರೂ ಪ್ರಕೃತಿ ಸೌಂದರ್ಯವನ್ನೇ ಹೆಚ್ಚಾಗಿ ಕೇಂದ್ರೀಕರಿಸಿದೆ. ವಾದ್ಯಕ್ಕೆ ದನಿಗೂಡಿಸಿದಂತೆ ಕೇಳಿಬರುವ ಹಕ್ಕಿಗಳ ಚಿಲಿಪಿಲಿ ನಾದ ಪ್ರಕೃತಿ ಪ್ರಿಯರನ್ನೂ ಸೆಳೆಯುತ್ತದೆ.

    RRR NEW SONG (1)

    ತೆಲುಗಿನಲ್ಲಿ `ಕೋಮ್ಮಾ ಉಯ್ಯಾಲಾ ಕೋನಾ ಜಂಪಾಲ, ಅಮ್ಮಾ ಉಳ್ಳೋ ನೇನು ರೋಜು ವೋಗಾಲ ರೋಜು ವೋಗಾಲ’, ಕನ್ನಡದಲ್ಲಿ `ಕೊಂಬೆ ಉಯ್ಯಾಲೆ, ಕಾಡೆ ಹೊಂಬಾಳೆ, ಅಮ್ಮನ ಮಡಿಲೆನಗೆ ಲಾಲಿ ಸುವ್ವಾಲಿ’ ಹಾಗೂ ಹಿಂದಿ ಭಾಷೆಯಲ್ಲಿ `ಅಂಬರ್‌ಸೆ ತೋಡ, ಸೂರಜ್‌ಕೋ ಪ್ಯಾರಾ’ ಶೀರ್ಷಿಕೆಯೊಂದಿಗೆ ಮೂಡಿ ಬಂದಿರುವ ಈ ಗೀತೆ ಲಕ್ಷಾಂತರ ಅಭಿಮಾನಿಗಳಿಂದ ಬೇಶ್ ಎನಿಸಿಕೊಂಡಿದೆ. ಇದನ್ನೂ ಓದಿ : ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಕೊಮ್ಮ ಉಯ್ಯಲ ಹಾಡನ್ನು ಬಳ್ಳಾರಿಯ ಪ್ರಕೃತಿ ರೆಡ್ಡಿ ಹಾಡಿದ್ದಾಳೆ. 2010 ಜುಲೈ 21ರಂದು ಬಳ್ಳಾರಿಯಲ್ಲಿ ಜನಿಸಿದ ಈಕೆ ತೆಲುಗಿನ ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿದ್ದಳು. ಪ್ರಸ್ತುತ ಈಕೆ ಪೋಷಕರ ಜೊತೆ ಮುಂಬೈನಲ್ಲಿ ನೆಲೆಸಿದ್ದಾಳೆ.

  • 1000 ಕೋಟಿ ಕ್ಲಬ್ ಸೇರಿತು ಆರ್‌ಆರ್‌ಆರ್ ಸಿನಿಮಾ: ತಂಡದ ಟಾರ್ಗೆಟ್ 2500?

    1000 ಕೋಟಿ ಕ್ಲಬ್ ಸೇರಿತು ಆರ್‌ಆರ್‌ಆರ್ ಸಿನಿಮಾ: ತಂಡದ ಟಾರ್ಗೆಟ್ 2500?

    ಜಾಗತಿಕವಾಗಿ ಈಗಾಗಲೇ ಅನೇಕ ದಾಖಲೆಗಳನ್ನು ಮಾಡಿರುವ ಆರ್‍ಆರ್‍ಆರ್ ಸಿನಿಮಾ ನಿರೀಕ್ಷೆಯಂತೆ 1000 ಕೋಟಿ ಕ್ಲಬ್ ಸೇರಿದಂತೆ. ಈ ಮೂಲಕ 1000 ಕೋಟಿ ಕ್ಲಬ್ ದಾಟಿದ ಕೆಲವೇ ಕೆಲವು ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಇದು ಕೂಡ ಸೇರ್ಪಡೆ ಆಗಿದೆ. ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಸಿನಿಮಾ ಬಿಡುಗಡೆ ಆಗಿ ಇವತ್ತಿಗೆ 16 ದಿನಗಳು ಕಳೆದಿವೆ. ಆದರೂ ಈ ಚಿತ್ರದ ಕ್ರೇಜ್ ನಿಂತಿಲ್ಲ. ಕಾರಣ ಚಿತ್ರದಲ್ಲಿರುವ ಇಬ್ಬರು ಸೂಪರ್ ಸ್ಟಾರ್‌ಗಳಾದ ರಾಮ್‍ಚರಣ್ ಮತ್ತು ಜ್ಯೂನಿಯರ್ ಎನ್‍ಟಿಆರ್ ಅವರ ಅದ್ಭುತ ನಟನೆ ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದೆ. ಅದರಲ್ಲೂ ಚಿತ್ರದಲ್ಲಿ ಬಳಸಿರುವ ಅಡ್ವಾನ್ಸ್ ಲೆವೆಲ್ ವಿಎಫ್‍ಎಕ್ಸ್, ಎಡಿಟಿಂಗ್ಸ್ ನೋಡಿದರೆ ಎಂಥವರಿಗೂ ಒಂದು ಕ್ಷಣ ಮೈ ಜುಮ್ಮೆನಿಸುತ್ತದೆ.

    ಚಿತ್ರವು ಜಾಗತಿಕ ಮಟ್ಟದಲ್ಲಿ ಈಗಾಗಲೇ ಕೋಟಿ ಹೃದಯಗಳನ್ನು ಗೆದ್ದಿದ್ದು, ಚಿತ್ರವು ರೀಲಿಸ್ ಆದ ಮೊದಲನೇ ದಿನದಿಂದ ಈವರೆಗೂ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಆದರೆ ಇದೆಲ್ಲದರ ನಡುವೇ ಚಿತ್ರಕ್ಕೆ ಕೊಂಚ ಹೊಡೆತ ಬಿದ್ದಿದ್ದೆಂದರೆ ಅದು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಿಂದ. ಆದಾಗ್ಯೂ ಚಿತ್ರವು ಇವತ್ತಿಗೆ ವಿಶ್ವದಾದ್ಯಂತ ಬರೋಬ್ಬರಿ ಅಂದಾಜು 1000 ಕೋಟಿ ರೂ. ಗಳನ್ನು ಬಾಚಿ ಯಶಸ್ವಿ 16ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಹಿಂದೆ ಜಾಗತಿಕವಾಗಿ ವಿಶ್ವದಾದ್ಯಂತ 1000 ಕೋಟಿ ರೂ. ದಾಟಿದ ಚಿತ್ರಗಳೆಂದರೆ ‘ದಂಗಲ್’ ಮತ್ತು ‘ಬಾಹುಬಲಿ 2’ ಆಗಿದ್ದವು. ಇದೀಗ ಆ ಪಟ್ಟಿಗೆ ‘ಆರ್‍ಆರ್‍ಆರ್’ ಚಿತ್ರವೂ ಸೇರಿದೆ.

     

    View this post on Instagram

     

    A post shared by RRR Movie (@rrrmovie)

    ವಿಶ್ವಾದ್ಯಂತ ಅತೀ ಹೆಚ್ಚು ಗಳಿಕೆ ಮಾಡಿದ ಹತ್ತು ಭಾರತೀಯ ಚಿತ್ರಗಳು
    ದಂಗಲ್ – ರೂ. 2008.30 ಕೋಟಿ
    ಬಾಹುಬಲಿ 2 – ರೂ. 1754.50 ಕೋಟಿ
    ಆರ್‍ಆರ್‍ಆರ್ – ರೂ. 1000 ಕೋಟಿ ಅಂದಾಜು 16 ದಿನಗಳು ಇನ್ನೂ ಎಣಿಸಲಾಗುತ್ತಿದೆ
    ಭಜರಂಗಿ ಭಾಯಿಜಾನ್ – ರೂ. 902.80 ಕೋಟಿ
    ಸೀಕ್ರೆಟ್ ಸೂಪರ್‍ಸ್ಟಾರ್ – ರೂ. 895.50 ಕೋಟಿ
    ಪಿಕೆ – ರೂ. 762 ಕೋಟಿ
    2.0 – ರೂ. 666.30 ಕೋಟಿ
    ಸುಲ್ತಾನ್ – ರೂ. 616.60 ಕೋಟಿ
    ಸಂಜು – ರೂ. 588.30 ಕೋಟಿ
    ಬಾಹುಬಲಿ: ದಿ ಬಿಗಿನಿಂಗ್ – ರೂ. 581 ಕೋಟಿ

     

    View this post on Instagram

     

    A post shared by RRR Movie (@rrrmovie)

    ಈಗಾಗಲೇ ಈ ಸಿನಿಮಾ ಹಲವು ದಾಖಲೆಗಳನ್ನೂ ಬರೆದಿದೆ. ಡಾಲ್ಬಿ ತಂತ್ರಜ್ಞಾನದಲ್ಲಿ ಬಿಡುಗಡೆಯಾದ ಮೊದಲ ಭಾರತೀಯ ಸಿನಿಮಾ ಇದಾಗಿದೆ. ತೆಲುಗು ಭಾಷೆಯ ಅವಧಿಯ ಆ್ಯಕ್ಷನ್ ಡ್ರಾಮಾ ಚಲನಚಿತ್ರವನ್ನು ಡಿವಿವಿ ಎಂಟರ್‌ಟೈನ್‌ಮೆಂಟ್‌ನ ಡಿವಿವಿ ದಾನಯ್ಯ ನಿರ್ಮಿಸಿದ್ದಾರೆ. ಚಿತ್ರವನ್ನು 2022ರ ಮಾರ್ಚ್ 25 ರಂದು ಬಿಡುಗಡೆ ಮಾಡಲಾಗಿದೆ.

  • ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಬಾಲಿವುಡ್ ಮಂದಿಗಾಗಿಯೇ ಆರ್.ಆರ್.ಆರ್ ಸಿನಿಮಾ ತಂಡ ಸಕ್ಸಸ್ ಪಾರ್ಟಿ ಆಯೋಜನೆ ಮಾಡಿತ್ತು. ಈ ಸಂದರ್ಭದಲ್ಲಿ ಆರ್.ಆರ್.ಆರ್ ಸಿನಿಮಾ ತಂಡ ಮತ್ತು ಬಾಲಿವುಡ್ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಆಮೀರ್ ಖಾನ್, ಕರಣ್ ಜೋಹಾರ್, ಜಾವೇದ್ ಅಖ್ತರ್, ದಿ ಕಾಶ್ಮೀರ್ ಫೈಲ್ಸ್ ನಟ ದರ್ಶನ್ ಸಿಂಗ್, ತುಷಾರ್ ಕಪೂರ್ ಹೀಗೆ ಬಾಲಿವುಡ್ ದಿಗ್ಗಜರೇ ಈ ಪಾರ್ಟಿಗೆ ಬಂದಿದ್ದರು. ಯಾರೇ ದಿಗ್ಗಜರು ಬಂದಿದ್ದರೂ, ಅಲ್ಲಿ ಫಳಫಳ ಹೊಳೆದದ್ದು ಮಾತ್ರ ಮಾದಕ ನಟಿ ರಾಕಿ ಸಾವಂತ್. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    ಪಾರ್ಟಿಗೆ ಅವರು ಬಂದಿದ್ದ ಲುಕ್ಕೇ ವಿಭಿನ್ನವಾಗಿತ್ತು. ತುಂಬಾ ಬೋಲ್ಡ್ ಆಗಿ ಕಾಣುವಂತಹ ರೆಡ್ ಡ್ರೆಸ್ ನಲ್ಲಿ ರಾಕಿ ಆಗಮಿಸಿ, ಎಲ್ಲರ ಗಮನ ಸೆಳೆದರು. ಬರೀ ಕಾಸ್ಟ್ಯೂಮ್ ಮಾತ್ರವಲ್ಲ, ಗೋಲ್ಡನ್ ಕಲರ್ ನಿಂದ ಹೆಣೆಯಲ್ಪಟ್ಟ ಕೇಶ ವಿನ್ಯಾಸ ಮತ್ತು ಸೊಂಟದಲ್ಲಿ ಹಾಕಿಸಿಕೊಂಡಿದ್ದ ರಿವಲ್ವಾರ್ ಟ್ಯಾಟೋ ಕ್ಯಾಮೆರಾಗಳು ಕಣ್ಣಿಗೆ ಆಹಾರವಾಗಿದ್ದಂತೂ ಸುಳ್ಳಲ್ಲ. ಹಾಗಂತ ರಾಕಿ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅಲ್ಲಿಗೆ ಬಂದಿದ್ದ ಅಷ್ಟೂ ಸಿಲಿಬ್ರಿಟಿಗಳ ಜತೆ ಫೋಟೋ ತಗೆಸಿಕೊಂಡರು. ತಮಾಷೆ ಮಾಡಿಕೊಂಡು ಇಡೀ ಪಾರ್ಟಿಗೆ ಕಳೆ ತಂದಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ರಾಕಿಯ ಉತ್ಸಾಹ ಕಂಡು ಎಲ್ಲರೂ ದಂಗಾಗಿದ್ದರು. ಅಲ್ಲದೇ, ತಾನು ಸೊಂಟದಲ್ಲಿ ಬರೆಯಿಸಿಕೊಂಡಿದ್ದ ಗನ್ ಟ್ಯಾಟೋವನ್ನು ಎಲ್ಲರಿಗೂ ತೋರಿಸುವುದೇ ಆ ಸಂದರ್ಭದಲ್ಲಿ ಅವರ ಕಾಯಕವಾಗಿತ್ತು. ಬಂದವರಿಗೆಲ್ಲ ಟ್ಯಾಟೋ ತೋರಿಸಿ, ಮನರಂಜನೆ ನೀಡುತ್ತಿದ್ದರು ರಾಕಿ ಸಾವಂತ್. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಈಗಾಗಲೇ ಆರ್.ಆರ್.ಆರ್ ಸಿನಿಮಾ ವಿಶ್ವದಾದ್ಯಂತ ಭಾರೀ ಗೆಲುವು ಕಂಡಿದೆ. ಇನ್ನೇನು ಸದ್ಯದಲ್ಲೇ 1000 ಕೋಟಿ ಕ್ಲಬ್ ಕೂಡ ಸೇರಲಿದೆ. ಹಿಂದಿಯಲ್ಲೂ ಭರ್ಜರಿ ಹಿಟ್ ಆಗಿದೆ. ಹಾಗಾಗಿ ಇಡೀ ತಂಡ ಬಾಲಿವುಡ್ ಮಂದಿಗೆ ಪಾರ್ಟಿ ಆಯೋಜನೆ ಮಾಡಿತ್ತು. ರಾಮ್ ಚರಣ್ ತೇಜ್, ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರ ತಂಡವೇ ಅಲ್ಲಿತ್ತು.

  • ಬರಲಿದೆ ಬಾಹುಬಲಿ 3 – ರಾಜಮೌಳಿ ನಂತರ ನಿರ್ಮಾಪಕರ ಪ್ರತಿಕ್ರಿಯೆ

    ಬರಲಿದೆ ಬಾಹುಬಲಿ 3 – ರಾಜಮೌಳಿ ನಂತರ ನಿರ್ಮಾಪಕರ ಪ್ರತಿಕ್ರಿಯೆ

    ಬಾಹುಬಲಿ, ಬಾಹುಬಲಿ-2 ಎರಡೂ ಸಿನಿಮಾಗಳು ವರ್ಲ್ಡ್ ವೈಡ್ ಭಾರೀ ಸಂಚಲನ ಮೂಡಿಸಿದವುಗಳು. ಈ ಎರಡೂ ಸಿನಿಮಾಗಳು ನಟ ಪ್ರಭಾಸ್‍ಗೆ ನೇಮ್ ಮತ್ತು ಫ್ರೇಮ್ ತಂದು ಕೊಡುವ ಜೊತೆಗೆ ದೊಡ್ಡ ಮಟ್ಟದ ಯಶಸ್ಸನ್ನು ತಂದು ಕೊಟ್ಟಿವೆ. ಪ್ರಭಾಸ್‍ಗೆ ನ್ಯಾಷನಲ್ ಆ್ಯಕ್ಟರ್ ಪಟ್ಟ ಗಿಟ್ಟಿಸಿಕೊಳ್ಳುವಲ್ಲಿ ಸಹಾಯ ಮಾಡಿವೆ. ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಮೂಡಿ ಬಂದ ಈ ಎರಡೂ ಸಿನಿಮಾಗಳು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದವು. ಸದ್ಯ ಮತ್ತೆ ಪ್ರಭಾಸ್ ಹಾಗೂ ರಾಜಮೌಳಿ ಕಾಂಬೀನೇಷನ್‍ನಲ್ಲಿ ಬಾಹುಬಲಿ-3 ಸೆಟ್ಟೆರಲಿದೆ ಎಂದು ಹೇಳಲಾಗುತ್ತಿದೆ.

    ಹೌದು ಇತ್ತೀಚೆಗಷ್ಟೇ ಟಾಲಿವುಡ್ ನಟ ರಾಮ್‍ಚರಣ್ ತೇಜ ಹಾಗೂ ಜೂ.ನಿಯರ್ ಎನ್‍ಟಿಆರ್ ಒಟ್ಟಾಗಿ ಅಭಿನಯಿಸಿದ್ದ ಆರ್‌ಆರ್‌ಆರ್‌ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ರಾಜಮೌಳಿ ಅವರು, ಈ ಸಿನಿಮಾದ ಪ್ರಮೋಷನ್ ವೇಳೆ ಬಾಹುಬಲಿ -3 ಚಿತ್ರವನ್ನು ನಿರ್ದೇಶಿಸುವ ಪ್ಲಾನ್ ಹೊಂದಿರುವ ಬಗ್ಗೆ ಸುಳಿವು ನೀಡಿದ್ದರು. ಇದನ್ನೂ ಓದಿ: ಲಿವ್ ಇನ್ ರಿಲೇಶನ್‍ಶಿಪ್ – ಮದುವೆ ಬಗ್ಗೆ ವಿದ್ಯಾ ಬಾಲನ್ ಹೇಳೋದೇನು?

    ಇದೀಗ ಮಧ್ಯಮವೊಂದರಲ್ಲಿ ಬಾಹುಬಲಿ ಸಿನಿಮಾದ ನಿರ್ಮಾಪಕ ಪ್ರಸಾದ್ ದೇವಿನೇನಿ, ಎಸ್‍ಎಸ್ ರಾಜಮೌಳಿ ಅವರು ಮತ್ತೊಂದು ಬಾಹುಬಲಿ ಕಥೆಯನ್ನು ಹೇಳುವ ಸಾಧ್ಯತೆ ಇದೆ. ಜೀವನಕ್ಕಿಂತ ಪ್ರಪಂಚ ಮತ್ತು ಪಾತ್ರಗಳು ದೊಡ್ಡದಾಗಿದೆ. ಆದರೆ ನಾವು ಈಗಲೇ ಬಾಹುಬಲಿ-3 ಸಿನಿಮಾವನ್ನು ಪ್ರಾರಂಭಿಸುವುದರ ಬಗ್ಗೆ ಯೋಚಿಸಿಲ್ಲ. ಏಕೆಂದರೆ ರಾಜಮೌಳಿ ಅವರು ಒಂದೆರಡು ಕಮಿಟ್‍ಮೆಂಟ್‍ಗಳನ್ನು ಹೊಂದಿದ್ದಾರೆ. ಅದೆಲ್ಲ ಮುಗಿದ ಬಳಿಕ ನಾವು ಈ ಬಗ್ಗೆ ಯೋಚಿಸುತ್ತೇವೆ. ಎಲ್ಲವೂ ಸರಿಯಾಗಿದ್ದರೆ ಖಂಡಿತವಾಗಿಯೂ ಬಾಹುಬಲಿ-3 ಸಿನಿಮಾ ಮಾಡುತ್ತೇವೆ. ಸದ್ಯಕ್ಕೆ ಇದರ ಬಗ್ಗೆ ಯೋಚಿಸಿಲ್ಲ ಎಂದಿದ್ದಾರೆ.

     

    ಇತ್ತೀಚೆಗೆ ನಾವು ಬಾಹುಬಲಿ ಸಿನಿಮಾ ಕಥೆಯನ್ನು ಬರೆದಿದ್ದ, ಕೆ.ವಿ ವಿಜಯೇಂದ್ರ ಪ್ರಸಾದ್ ಅವರನ್ನೂ ಸಂಪರ್ಕಿಸಿದ್ದೆವು. ಅವರು ಖಂಡಿತವಾಗಿವಾಗಿಯೂ ಬಹುಬಲಿ-3 ಸಿನಿಮಾಕ್ಕೆ ಕಥೆಯನ್ನು ಬರೆದುಕೊಡುತ್ತೇನೆ. ಆದರೆ ಅದಕ್ಕೂ ಮುನ್ನ ಮಹೇಶ್ ಬಾಬು ಅವರ ಪ್ರಾಜೆಕ್ಟ್ ಮುಗಿಯಬೇಕು. ಅದಕ್ಕೂ ಮುನ್ನ ಈ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:  ಮೂರು ವರ್ಷದ ಪ್ರೀತಿ ಖತಂ: ಅನನ್ಯಾ ಪಾಂಡೆ ದೂರವಾಗಲು ಕಾರಣವೇನು?

    ಇತ್ತೀಚೆಗಷ್ಟೇ ಬಿಡುಗಡೆಯಾದ ಆರ್‌ಆರ್‌ಆರ್‌ ಸಕ್ಸಸ್ ಅಲೆಯಲ್ಲಿ ರಾಜಮೌಳಿ ತೇಲುತ್ತಿದ್ದು, ಚಿತ್ರದಲ್ಲಿ ಜೂ. ಎನ್‍ಟಿಆರ್ ಮತ್ತು ರಾಮ್ ಚರಣ್ ನಾಯಕರಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಬಾಲಿವುಡ್ ಆಲಿಯಾ ಭಟ್ ಮತ್ತು ನಟ ಅಜಯ್ ದೇವಗನ್ ಕೂಡ ಕಾಣಿಸಿಕೊಂಡಿದ್ದಾರೆ.

  • ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಈವರೆಗಿನ ಎಲ್ಲಾ ದಾಖಲೆಗಳನ್ನು ಅದು ಮುರಿದು ಮುನ್ನುಗ್ಗುತ್ತಿದೆ. ಹತ್ತಿರ ಹತ್ತಿರ ಸಾವಿರ ಕೋಟಿ ಸಮೀಪಕ್ಕೆ ಸಿನಿಮಾ ಬರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಬಾಲಿವುಡ್ ನ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಹೇಳುವುದೇ ಬೇರೆ. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಭಾರತೀಯ ಬಹುತೇಕ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಇತರ ದೇಶಗಳ ಭಾಷೆಗಳಿಗೂ ಅದು ಡಬ್ ಆಗಿ ಬಿಡುಗಡೆ ಆಗಿದೆ. ಮೊದಲ ಮೂರು ದಿನಗಳ ಗಳಿಕೆಯಲ್ಲೇ ಅದು ದಾಖಲೆ ನಿರ್ಮಿಸಿತ್ತು. ರಿಲೀಸ್ ಆದ ವಾರದೊಳಗೆ ಹಿಂದಿಯೊಂದರಲ್ಲೇ ಅದು ನೂರು ಕೋಟಿ ಕ್ಲಬ್ ಸೇರಿ ಆಗಿದೆ. ಆದರೆ, ಅದೆಲ್ಲ ಸುಳ್ಳು ಪ್ರಚಾರ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಓದಿ: ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

    ಬಾಲಿವುಡ್ ನ ಸ್ವಯಂ ವಿಮರ್ಶಕ ಖ್ಯಾತಿಯ ಈ ಕಮಲ್ ಆರ್ ಖಾನ್ ಇಂತಹ ಅಚ್ಚರಿಯ ಹೇಳಿಕೆಯನ್ನು  ಕೊಡುವುದು ಇದೇ ಮೊದಲೇನೂ ಅಲ್ಲ. ಬಾಲಿವುಡ್ ನ ಬಹುತೇಕ ಸ್ಟಾರ್ ನಟ ನಟಿಯರನ್ನು ಕಾಲೆಳೆದು ಕಂಗೆಣ್ಣಿಗೆ ಗುರಿಯಾದವರು ಇವರು. ನಿರ್ದೇಶಕರನ್ನೂ, ನಿರ್ಮಾಪಕರನ್ನೂ ಬಿಡದೇ ತಮ್ಮದೇ ಆದ ರೀತಿಯಲ್ಲಿ ಕಟುವಾಗಿ ಟೀಕಿಸುತ್ತಲೇ ಇರುತ್ತಾರೆ ಕಮಲ್. ಇದೀಗ ಆರ್.ಆರ್.ಆರ್ ವಿಷಯದಲ್ಲೂ ಅದನ್ನೇ ಮಾಡಿದ್ದಾರೆ.

     

    ‘ನನ್ನ ಪ್ರಕಾರ ಆರ್.ಆರ್.ಆರ್ ಸಿನಿಮಾವನ್ನು ಜನರು ತಿರಸ್ಕರಿಸಿದ್ದಾರೆ. ಅಷ್ಟೊಂದು ಪ್ರಮಾಣದಲ್ಲಿ ಬಾಕ್ಸ್ ಆಫೀಸ್ ತುಂಬುವುದಕ್ಕೆ ಹೇಗೆ ಸಾಧ್ಯ? ನಿರ್ಮಾಪಕರು ಮತ್ತು ನಿರ್ದೇಶಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಈ ಸಿನಿಮಾ 680 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಅದು ಕೂಡ ಸುಳ್ಳು. ಜನರಿಗೆ ಬಜೆಟ್ ಅರ್ಥವಾಗಲ್ಲ. ಆ ಪ್ರಮಾಣದಲ್ಲಿ ಈ ಚಿತ್ರಕ್ಕೆ ಹಣ ಹೂಡಿಲ್ಲ ಎಂದು ಮುಂದಿನ ದಿನಗಳಲ್ಲಿ ಸಾಬೀತು ಮಾಡುವುದಾಗಿ’ ನಮ್ಮ ಟ್ವಿಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಕೆಜಿ ತೂಕದ ಕಾಸ್ಟ್ಯೂಮ್‌ ಹಾಕಿಕೊಂಡು ಶೂಟ್ ಮಾಡಿದ್ದು ಕಷ್ಟವಾಗಿತ್ತು ಎಂದ ಮುನ್ನಾಭಾಯಿ

    ಕಮಲ್ ಈ ರೀತಿ ಟ್ವಿಟ್ ಮಾಡುತ್ತಿದ್ದಂತೆಯೇ ರಾಜಮೌಳಿ, ರಾಮ್ ಚರಣ್ ತೇಜ, ಜೂನಿಯರ್ ಎನ್.ಟಿ.ಆರ್ ಮತ್ತು ಆಲಿಯಾ ಭಟ್ ಅಭಿಮಾನಿಗಳು ಒಟ್ಟಾಗಿ ಕಮಲ್ ಮೇಲೆ ಮುಗಿಬಿದ್ದಿದ್ದಾರೆ. ಕಮಲ್ ಕುರಿತಾಗಿ ನಿಂದಿಸಿದ್ದಾರೆ. ಕಮಲ್ ಯಾರು ಎನ್ನುವುದನ್ನೂ ಕೆಲವರು ಬಿಚ್ಚಿಟ್ಟಿದ್ದಾರೆ. ಈಗಾಗಲೇ ಸಾವಿರ ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಇಡುತ್ತಿರುವ ಆರ್.ಆರ್.ಆರ್ ತನ್ನದೇ ದಾಖಲೆ ಮುರಿದು ಮುನ್ನುಗ್ಗುತ್ತಿದೆ. ಅತೀ ಶೀಘ್ರದಲ್ಲೇ ಅದು ಮೈಲುಗಲ್ಲು ಸ್ಥಾಪಿಸಲಿದೆ ಎಂದಿದ್ದಾರೆ ಅಭಿಮಾನಿಗಳು.

  • ʼಆರ್‌ಆರ್‌ಆರ್‌ʼ ರಿಲೀಸ್ ಆದ ಕೆಲವೇ ದಿನಗಳಲ್ಲಿ 100 ಮಿಲಿಯನ್ ದಾಖಲೆ

    ʼಆರ್‌ಆರ್‌ಆರ್‌ʼ ರಿಲೀಸ್ ಆದ ಕೆಲವೇ ದಿನಗಳಲ್ಲಿ 100 ಮಿಲಿಯನ್ ದಾಖಲೆ

    ಕ್ಷಿಣದ ಖ್ಯಾತ ನಿರ್ದೇಶಕ ರಾಜಮೌಳಿ ಅವರು ʼಆರ್‌ಆರ್‌ಆರ್‌’ ವಿಶ್ವದಾದ್ಯಂತ ರಿಲೀಸ್ ಆಗಿ ಭಾರೀ ಸದ್ದು ಮಾಡುತ್ತಿದೆ. ದಿನದಿಂದ ದಿನಕ್ಕೆ ಚಿತ್ರಮಂದಿರದ ಕಡೆ ಹೆಚ್ಚು ಸಿನಿಪ್ರಿಯರು ಮುಖ ಮಾಡುತ್ತಿದ್ದಾರೆ. ಇದರಿಂದ ಸಿನಿಮಾ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲೇ 100 ಮಿಲಿಯನ್ ಡಾಲರ್(758 ಕೋಟಿ ರೂ.) ಕಲೆಕ್ಷನ್ ಸಮೀಪಿಸಿದೆ. ದಾಖಲೆಯ ರೀತಿಯ ಕಲೆಕ್ಷನ್ ಭಾರತೀಯ ಸಿನಿಮಾ ರಂಗದಲ್ಲೇ ಸಂಚಲನ ಮೂಡಿಸಿದೆ.

    ‘ʼಆರ್‌ಆರ್‌ಆರ್‌ʼ’ ಸಿನಿಮಾ ಜಾಗತಿಕ ಥಿಯೇಟರ್‌ನಲ್ಲಿ ಬಿಡುಗಡೆಯಾದ ಆರು ದಿನಗಳ ನಂತರ, ವಿಶ್ವದಾದ್ಯಂತ ಸುಮಾರು 88 ಮಿಲಿಯನ್ ಡಾಲರ್(667 ಕೋಟಿ ರೂ.) ಗಳಿಸಿದೆ. ಗುರುವಾರ ಮತ್ತು ಭಾನುವಾರ 9.5 ಮಿಲಿಯನ್ ಡಾಲರ್(72 ಕೋಟಿ ರೂ.) ಕಲೆಕ್ಷನ್ ಆಗಿತ್ತು. ಕೋವಿಡ್ ನಿರ್ಬಂಧ ಮುಗಿಯುವುದಕ್ಕಾಗಿ ಕಾಯುತ್ತಿದ್ದ ಚಿತ್ರತಂಡ ಮೂರು ವರ್ಷಗಳ ನಂತರ ಭರ್ಜರಿಯಾಗಿ ಸಿನಿಮಾ ರಿಲೀಸ್ ಮಾಡಿತ್ತು. ಪ್ರೇಕ್ಷಕರ ನಿರೀಕ್ಷೆಯಂತೆ ರಾಜಮೌಳಿ ಸಿನಿಮಾ ಜ್ಯೂ.ಎನ್‌ಟಿಆರ್ ಮತ್ತು ರಾಮ್‌ಚರಣ್ ಕಾಂಬಿನೇಷನ್ ಗೆಲ್ಲಿಸುವಲ್ಲಿ ಸಫಲವಾಗಿದೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಈ ಸಿನಿಮಾದ ಕಲೆಕ್ಷನ್ ಜೊತೆ ಸಿನಿಪ್ರಿಯರನ್ನು ಆಕರ್ಷಿಸುತ್ತಿದೆ. ಬಾಲಿವುಡ್ ಬ್ಯೂಟಿ ಆಲಿಯಾ ಭಟ್ ಸಹ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದಲ್ಲಿರುವ ಗ್ರಾಫಿಕ್, ಫ್ರೇಮಿಂಗ್, ಡಿಒಪಿ ಸಿನಿಪ್ರಿಯರ ಕಣ್ಣಿಗೆ ಹಬ್ಬ ತಂದಿದೆ. ರಾಮ್‌ಚರಣ್ ಮತ್ತು ಎನ್‌ಟಿಆರ್ ಕಾಂಬಿನೇಷನ್ ಸೀನ್ ಸಖತ್ ಆಗಿ ಮೂಡಿಬಂದಿದೆ.

    ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಪಾತ್ರವೂ ಸಿನಿಮಾದಂತ ಆಕರ್ಪಿಸುವಂತೆ ಮಾಡುತ್ತೆ. ಈ ಸಿನಿಮಾದಲ್ಲಿ ಬರುವ ಪ್ರತಿ ಪಾತ್ರವನ್ನು ರಾಜಮೌಳಿ ಬಹಳ ನಾಜೂಕಿನಿಂದ ಹಂಚಿಕೆ ಮಾಡಿದ್ದು, ಸಿನಿಮಾ ಎಲ್ಲಿಯೂ ಬೇಸರವಾಗದಂತೆ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತದೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

  • ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಬಾಲಿವುಡ್ ಬಹುಬೇಡಿಕೆಯ ನಟಿಯರಲ್ಲಿ ಬಾಲಿವುಡ್ ಬ್ಯೂಟಿ ಆಲಿಯಾ ಕೂಡ ಒಬ್ಬರು. ತಮ್ಮ ಬೋಲ್ಡ್ ನಟನೆ ಮೂಲಕ ಇಡೀ ಚಿತ್ರರಂಗವನ್ನೆ ಸೆಳೆದಿರುವ ಮೊದಲಬಾರಿಗೆ ‘RRR’ ಸಿನಿಮಾ ಮೂಲಕ ದಕ್ಷಿಣ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅವರು ಎಂಟ್ರಿ ಕೊಟ್ಟ ಮೊದಲ ಸಿನಿಮಾ RRRನಲ್ಲಿ ಪ್ರೇಕ್ಷಕರಿಗೆ ಆಲಿಯಾ ಕಾಣಿಸಿಕೊಳ್ಳುವುದು ಕೆಲವೇ ನಿಮಿಷಗಳು. ಈ ಸಿನಿಮಾ ಕ್ರೆಡಿಟ್ ಜ್ಯೂ.ಎನ್‍ಟಿಆರ್, ರಾಮ್‍ಚರಣ್ ಮತ್ತು ನಿರ್ದೇಶಕ ರಾಜಮೌಳಿಗೆ ಹೋಗುತ್ತಿದೆ. ಇದರಿಂದ ಆಲಿಯಾ ಬೇಸರಗೊಂಡಿದ್ದಾರೆ ಎಂಬ ಸುದ್ದಿ ಎಲ್ಲಕಡೆ ಹಬ್ಬಿದೆ.

    ಆಲಿಯಾ ಹಲವು ದೃಶ್ಯಗಳನ್ನು ‘RRR’ ಸಿನಿಮಾಗಾಗಿ ರಾಜಮೌಳಿ ಚಿತ್ರೀಕರಿಸಿದ್ದರು. ಆದರೆ ಸಿನಿಮಾದ ಅವಧಿ ಉದ್ದವಾದ ಕಾರಣ ಅವಕ್ಕೆ ಕತ್ತರಿ ಹಾಕಿದ್ದಾರೆ. ಇದು ಆಲಿಯಾಗೆ ಬೇಸರ ತಂದಿದ್ದು, ಇನ್‍ಸ್ಟಾದಿಂದ ‘RRR’ ಸಿನಿಮಾದ ಪೋಸ್ಟರ್ ಮತ್ತು ರಾಜಮೌಳಿ ಅವರನ್ನು ಅನ್‍ಫೌಲೋ ಮಾಡಿದ್ದಾರೆ.  ಇದನ್ನೂ ಓದಿ: ನಿರ್ದೇಶಕ ರಾಜಮೌಳಿ ಮೇಲೆ ಆಲಿಯಾ ಭಟ್ ಕೋಪ – ಬೇರೆ ರೀತಿಯಲ್ಲೇ ಸಿಟ್ಟು ತೋರಿಸಿ ಆಲಿಯಾ

    ಈ ಕುರಿತು ಗಾಸಿಪ್ ಕ್ರಿಯೇಟ್ ಆದ ಬಳಿಕ ಆಲಿಯಾ ಪ್ರತಿಕ್ರಿಯೆ ಕೊಟ್ಟಿದ್ದು, ನಾನು RRR ಸಿನಿಮಾತಂಡದ ಮೇಲೆ ಬೇಸರಗೊಂಡಿದ್ದು, ಸಿನಿಮಾ ಪೋಸ್ಟ್‌ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಎಲ್ಲಕಡೆ ಸುದ್ದಿ ಕೇಳಿಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ನಾವು ಏನು ಪೋಸ್ಟ್ ಮಾಡುತ್ತೇವೆ ಅದನ್ನೆ ನಂಬಿ ಈ ರೀತಿಯ ಊಹಿಸುವುದು ತಪ್ಪು. ನಾನು ನನ್ನ ಇನ್‍ಸ್ಟಾ ಪ್ರೋಫೈಲ್ ರಿಫ್ರೆಶ್ ಮಾಡುತ್ತಿರುತ್ತೇನೆ. ಕೆಲವು ಫೋಟೋಗಳನ್ನು ತೆಗೆದುಹಾಕುತ್ತೇನೆ. ಅದೇ ರೀತಿ RRR ಸಿನಿಮಾ ಪೋಸ್ಟ್ ಸಹ ಡಿಲೀಟ್ ಮಾಡಿದ್ದೇನೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    RRR ಜಗತ್ತಿಗೆ ನಾನು ಭಾಗಿಯಾಗಿದ್ದಕ್ಕೆ ಕೃತಜ್ಞನಾಗಿದ್ದೇನೆ. ಸೀತಾ ಪಾತ್ರ ನನಗೆ ತುಂಬಾ ಇಷ್ಟವಾಯಿತು. ರಾಜಮೌಳಿ ಅವರ ಸಿನಿಮಾದಲ್ಲಿ ನಟಿಸಿದ್ದು ನನಗೆ ಸಂತೋಷವಿದೆ. ಎನ್‍ಟಿಆರ್ ಮತ್ತು ರಾಮ್‍ಚರಣ್ ಅವರ ಜೊತೆ ಕೆಲಸ ಮಾಡಿದ್ದು ಖುಷಿ ತಂದುಕೊಟ್ಟಿದೆ. ಈ ಅದ್ಭುತವಾದ ಚಿತ್ರಕ್ಕೆ ಜೀವತುಂಬಲು ರಾಜಮೌಳಿ ಮತ್ತು ತಂಡ ತುಂಬಾ ಕಷ್ಟಪಟ್ಟಿದೆ. ಹಲವು ವರ್ಷಗಳನ್ನು ಈ ಸಿನಿಮಾಗಾಗಿ ಕೊಟ್ಟಿದ್ದಾರೆ. ಕಷ್ಟಪಟ್ಟು ಮಾಡಿರುವ ಸಿನಿಮಾ ಬಗ್ಗೆ ಕೆಟ್ಟದಾಗಿ ಮಾಹಿತಿ ಹಬ್ಬಿಸಬೇಡಿ. ಇದನ್ನು ನಾನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    RRR ಸಿನಿಮಾದಲ್ಲಿ ಆಲಿಯಾ ಪಾತ್ರದ ಬಗ್ಗೆ ಅಭಿಮಾನಿಗಳು ತುಂಬಾ ಕಾತುರದಿಂದ ಕಾಯುತ್ತಿದ್ದರು. ಆದರೆ ಈ ಸಿನಿಮಾದಲ್ಲಿ ಆಲಿಯಾ ಪಾತ್ರ ತುಂಬಾ ಚಿಕ್ಕದಾಗಿದ್ದು, ಅಷ್ಟು ಮಹತ್ವವನ್ನು ಕೊಟ್ಟಿಲ್ಲದೇ ಇರುವ ಕಾರಣ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಈ ಕುರಿತು ಬಿ’ಟೌನ್‍ನಲ್ಲಿ ಭಾರೀ ಚರ್ಚೆಯಾಗುತ್ತಿತ್ತು. ಇದರ ನಡುವೆಯೇ ಆಲಿಯಾ ಇನ್‍ಸ್ಟಾದಿಂದ RRR ಸಿನಿಮಾ ಪೋಸ್ಟರ್ ಡಿಲೀಟ್ ಮಾಡಿದ್ದು, ಅವರು ಚಿತ್ರತಂಡದ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಗಾಸಿಪ್ ಎಲ್ಲಕಡೆ ಹಬ್ಬಿತ್ತು.