Tag: rajani

  • ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ

    ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ

    ನ್ನಡ ಕಿರುತೆರೆ ವೀಕ್ಷಕರಿಗೆ ವಿಭಿನ್ನತೆಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ (Star Suvarna) ವಾಹಿನಿಯು ಇದೀಗ ನೀ ಇರಲು ಜೊತೆಯಲ್ಲಿ (Nee Iralu Jotheyalli) ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ.

    ಮಾತಿನಲ್ಲಿ ತುಂಟತನವನ್ನೊಳಗೊಂಡ ಕಥಾನಾಯಕ ಕೃಷ್ಣನದ್ದು ಸ್ವಾತಂತ್ಯ ಹೋರಾಟಗಾರರ ಕುಟುಂಬ. ಕೆಲಸದಲ್ಲಿ ಜಾಣ್ಮೆ, ನಿಪುಣತೆ ಹೊಂದಿರುವ ಈತ, ತಂತ್ರದಲ್ಲಿ ಕಪಟಿಯಾಗಿದ್ದರೂ ಮಾಡಿದ ಸಹಾಯಕ್ಕೆ ಪ್ರತಿಫಲವನ್ನು ನಿರೀಕ್ಷಿಸದ ಅಧುನಿಕ ಯುಗದ ಶ್ರೀ ಕೃಷ್ಣ. ಆದರೆ ಈ ಕೃಷ್ಣನಿಗೆ ಪೂತನಿಯಂತೆ ಕಾಟ ಕೊಡೋಳು ಅತ್ತಿಗೆ ಊರ್ಮಿಳಾ ದಿವಾನ್. ನನ್ನದೇ ನಡಿಬೇಕು, ನನ್ನಿಂದಲೇ ಎಲ್ಲಾ ಎಂಬ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾ, ಅಹಂಕಾರವನ್ನೇ ಒಡವೆಯನ್ನಾಗಿಸಿಕೊಂಡು ಮನೆಮಂದಿಯನ್ನೆಲ್ಲಾ ತನ್ನ ಕೈಗೊಂಬೆಯಾಗಿಸಿರ್ತಾಳೆ.

    ಇನ್ನು ತಂದೆಯ ಮುದ್ದಿನ ಮಗಳು ಕಥಾನಾಯಕಿ ರಚನಾ ಪಟೇಲ್. ಓದಿನಲ್ಲಿ ಅತ್ಯಂತ ಪ್ರತಿಭಾವಂತೆ. ಯಾರನ್ನು ನೋಯಿಸದ ಮಾತೃ ಹೃದಯಿ. ಸೌಂದರ್ಯವನ್ನು ಮುಖದಲ್ಲಿ ಮಾತ್ರವಲ್ಲದೆ ನಡವಳಿಕೆಯಲ್ಲಿಯೂ ಒಗ್ಗೂಡಿಸಿರುವ ಈಕೆಗೆ, ಸಾಧನೆಯ ಶಿಖರವೇರಿರುವ ಊರ್ಮಿಳಾ ದಿವಾನೇ ಆದರ್ಶ. ಆಕೆಯಂತೆ ಏನನ್ನಾದರೂ ಸಾಧಿಸಬೇಕೆಂಬ ಛಲ ರಚನಾಳದ್ದು. ಹೀಗೆ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾಗೆ ಮುಂದೆ ಕೃಷ್ಣ ತಕ್ಕ ಪಾಠ ಕಲಿಸ್ತಾನ? ತದ್ವಿರುದ್ಧ ಭಾವಗಳನ್ನು ಹೊಂದಿರುವ ಕೃಷ್ಣ,ರಚನಾ ಹೇಗೆ ಒಂದಾಗ್ತಾರೆ? ರಚನಾಗೆ ಆದರ್ಶವಾಗಿರೋ ಊರ್ಮಿಳಾ, ತನ್ನನ್ನೇ ಎದುರಾಳಿಯಾಗಿ ನೋಡಿದ್ರೆ ಮುಂದೇನಾಗಬಹುದು? ಎಂಬುದೇ ಮುಖ್ಯ ಕಥಾ ಹಂದರ. ಇದನ್ನೂ ಓದಿ: ‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ

    ಕನ್ನಡ ಕಿರುತೆರೆಯಲ್ಲಿ ಸುವರ್ಣ ಇತಿಹಾಸ ಬರೆದಿರೋ `ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ, ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್‌ಬ್ಯಾಕ್ ಆಗಿದ್ದು ಊರ್ಮಿಳಾ ದಿವಾನ್ ಎಂಬ ಮುಖ್ಯ ಖಳನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕನಾಗಿ ಪವನ್ ರವೀಂದ್ರ ಹಾಗೂ ನಾಯಕಿಯಾಗಿ ಸಲೋಮಿ ಡಿಸೋಜಾ ಬಣ್ಣ ಹಚ್ಚಿದ್ದಾರೆ. ಜೊತೆಗೆ ನಟ ಮೋಹನ್ ಸೇರಿದಂತೆ ಇನ್ನು ಅನೇಕ ಪ್ರತಿಭಾನ್ವಿತ ನಟ-ನಟಿಯರು ಅಭಿನಯಿಸುತ್ತಿದ್ದಾರೆ.

    ಮುದ್ದುಲಕ್ಷ್ಮಿ, ಮರಳಿ ಬಂದಳು ಸೀತೆ, ಮರಳಿ ಮನಸಾಗಿದೆ ಸೇರಿದಂತೆ ಇನ್ನೂ ಅನೇಕ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ.ರಮೇಶ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ನೀ ಇರಲು ಜೊತೆಯಲ್ಲಿ ಧಾರಾವಾಹಿ ಮೂಡಿ ಬರಲಿದೆ. ಈ ಧಾರಾವಾಹಿ ಇದೇ ಆಗಸ್ಟ್ 11ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

  • ಶೂಟಿಂಗ್ ಮುಗಿಸಿದ ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಸಿನಿಮಾ

    ಶೂಟಿಂಗ್ ಮುಗಿಸಿದ ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಸಿನಿಮಾ

    ಖ್ಯಾತ ನಿರೂಪಕ ಸೃಜನ್ ಲೋಕೇಶ್ (Srujan Lokesh) ನಟಿಸಿ, ನಿರ್ದೇಶನ ಮಾಡುತ್ತಿರುವ ‘ಜಿಎಸ್‌ಟಿ’ (GST Film) ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಮೊದಲ ಬಾರಿಗೆ ತಾಯಿ ಗಿರಿಜಾ ಲೋಕೇಶ್‌ಗೆ ಸೃಜನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ:‌’ಮೈ ಜಾನ್’ ಎಂದು ಪತ್ನಿ ಶ್ರೀದೇವಿ ಹುಟ್ಟುಹಬ್ಬಕ್ಕೆ ಬೋನಿ ಕಪೂರ್ ವಿಶ್

    ನಿರೂಪಕನಾಗಿ ಎಲ್ಲರ ಮನಗೆದ್ದಿರುವ ಸೃಜನ್ ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಟ್ಟಿದ್ದಾರೆ. ‘ಜಿಎಸ್‌ಟಿ’ ಸಿನಿಮಾ ಮುಲಕ ಹೊಸ ಪ್ರಯತ್ನಕ್ಕೆ ನಟ ಕೈಹಾಕಿದ್ದಾರೆ. ಸದ್ಯ ನಿರ್ಮಾಪಕ ಸಂದೇಶ್ ನಾಗಾರಾಜ್ ಅವರ ರೆಸಾರ್ಟ್‌ವೊಂದರಲ್ಲಿ ಸೃಜನ್ ಮತ್ತು ನಾಯಕಿ ರಜನಿ ನಟಿಸಿದ ಹಾಡೊಂದರ ಶೂಟಿಂಗ್ ನಡೆದಿದೆ. ಇದರ ಜೊತೆ ಸೃಜನ್, ತಬಲನಾಣಿ, ವಿನೋದ್‌ ಗೊಬ್ಬರಗಾಲ ಒಳಗೊಂಡಿರುವ ಮತ್ತೊಂದು ಸಾಂಗ್‌ ಶೂಟ್‌ ಮಾಡಲಾಗಿದೆ. ಈ ಮೂಲಕ ಚಿತ್ರದ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ.

    ಕಾಮಿಡಿ ಜಾನರ್‌ನಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಒಂದೇ ಸಿನಿಮಾದಲ್ಲಿ ಗಿರಿಜಾ ಲೋಕೇಶ್, ಸೃಜನ್, ಸೃಜನ್ ಅವರ ಪುತ್ರ ಸುಕೃತ್ ನಟಿಸಿರೋದು ವಿಶೇಷ. ಈ ಮೂವರನ್ನು ಒಟ್ಟಿಗೆ ಚಿತ್ರದಲ್ಲಿ ನೋಡಬಹುದು. ಸದ್ಯ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಶುರುವಾಗಿದೆ. ಇದನ್ನೂ ಓದಿ:ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ಆಶಿಕಾ ರಂಗನಾಥ್

    ಇನ್ನೂ ಚಿತ್ರದಲ್ಲಿ ಸೃಜನ್‌ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಗಿರಿಜಾ ಲೋಕೇಶ್, ಶರತ್ ಲೋಹಿತಾಶ್ವ, ಕಾಂತಾರ ನಟ ಪ್ರಮೋದ್ ಶೆಟ್ಟಿ, ನಿವೇದಿತಾ ಗೌಡ, ತಬಲ ನಾಣಿ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ವರ್ಷದ ಅಂತ್ಯದೊಳಗೆ ಸಿನಿಮಾ ರಿಲೀಸ್ ಆಗಲಿದೆ.

  • ಜುಲೈ 21ರಂದು ಬೆಚ್ಚಿ ಬೀಳಿಸಲು ರೆಡಿಯಾಯ್ತು ‘ಅಂಬುಜ’ ಟೀಂ

    ಜುಲೈ 21ರಂದು ಬೆಚ್ಚಿ ಬೀಳಿಸಲು ರೆಡಿಯಾಯ್ತು ‘ಅಂಬುಜ’ ಟೀಂ

    ಸೆಟ್ಟೇರಿದಾಗಿನಿಂದಲೂ ಸ್ಯಾಂಡಲ್‌ವುಡ್ (Sandalwood) ಅಂಗಳದಲ್ಲಿ ಸೌಂಡ್ ಮಾಡ್ತಿರುವ ಸಿನಿಮಾಗಳ ಪೈಕಿ ‘ಅಂಬುಜ’ ಕೂಡ ಒಂದು. ಶ್ರೀನಿ ಹನುಮಂತರಾಜು ನಿರ್ದೇಶನದ, ಕಾಶಿನಾಥ್ ಡಿ ಮಡಿವಾಳರ್ ನಿರ್ಮಾಣದ ಈ ಚಿತ್ರ, ಟೀಸರ್ ನಿಂದ ಕುತೂಹಲ ಕೆರಳಿಸಿತ್ತು. ಅನ್‌ಟೋಲ್ಡ್ ಕ್ರೈಮ್ ಸ್ಟೋರಿ ಅಂತ ಟ್ಯಾಗ್‌ಲೈನೇ ಹೇಳಿದ್ದರಿಂದ ಸಹಜವಾಗಿ ‘ಅಂಬುಜ’ (Ambuja) ಮೇಲೆ ನಿರೀಕ್ಷೆ ಹೆಚ್ಚಾಗಿತ್ತು. ಇದೀಗ ಈ‌  ಚಿತ್ರದ ಟ್ರೈಲರ್ ಹೊರಬಿದ್ದಿದ್ದು ನಿರೀಕ್ಷೆ ಡಬಲ್ ಆಗಿದೆ. ಮೆಡಿಕಲ್ ಸ್ಕ್ಯಾಮ್‌ನ ಬಟಾ ಬಯಲು ಮಾಡಲು ‘ಅಂಬುಜ’ ಅಖಾಡಕ್ಕೆ ಇಳಿಯುತ್ತಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

    ನೀವೆಂದು ಕಂಡು ಕೇಳರಿಯದ ವಿಚಿತ್ರ ಕಥಾಹಂದರದ ಜೊತೆ ನಿಮ್ಮನ್ನೆಲ್ಲಾ ಬೆಚ್ಚಿಬೀಳಿಸಲು ‘ಅಂಬುಜ’ (Ambuja Film) ಬರುತ್ತಿದ್ದಾರೆ ಅಂತ ಚಿತ್ರದ ನಿರ್ದೇಶಕರು ಹೇಳಿಕೊಂಡಿದ್ದರು. ಅದರ ಝಲಕ್ ಈಗ ನೀವು ಟ್ರೈಲರ್‌ನಲ್ಲೇ ನೋಡಬಹುದು. ಸರಣಿ ಕೊಲೆ, ಆ ಕೊಲೆ ಹಿಂದಿರುವುದು ಮೆಡಿಕಲ್ ಮಾಫಿಯಾನ ಅಥವಾ ಸೈಕಲಾಜಿಕಲ್ ಡಿಸಾರ್ಡರ್ ಇರುವ ವ್ಯಕ್ತಿಯಾ ಎನ್ನುವ ಕುತೂಹಲ. ಇದರ ಜೊತೆಗೆ ಕಾಳಿ ಅವತಾರವೆತ್ತಿ ರಿವೇಂಜ್ ತೆಗೆದುಕೊಳ್ಳಲು ಸಜ್ಜಾಗುವ ನಾಯಕಿ. ನಡುವೆ ಕಾವಿತೊಟ್ಟಿರುವ ವ್ಯಕ್ತಿಯ ದರ್ಶನ ಬೇರೆ ಆಗೋದ್ರಿಂದ ‘ಅಂಬುಜ’ ನೂರೆಂಟು ಅನುಮಾನಗಳನ್ನು ಹುಟ್ಟುಹಾಕ್ತಾಳೆ. ಕೊನೆಯಲ್ಲಿ ವೈದ್ಯೋ ಯಮಹ ಸಹೋದರ ಎಂಬ ಡೈಲಾಗ್ ಕೇಳಿಬರೋದ್ರಿಂದ ಮರ್ಡರ್ ಮಿಸ್ಟ್ರಿಯ ಹಿಂದೆ ಮೆಡಿಕಲ್ ಮಾಫಿಯಾ ಅಡಗಿರೋದು ಸತ್ಯವಾ? ಹೀಗೊಂದು ಸಂಶಯ ಮೂಡುತ್ತೆ.

    ವೈದ್ಯೋ ನಾರಾಯಣೋ ಹರಿಃ ಅಂತಾರೇ. ಆದರೆ, ಅಂಬುಜ ವೈದ್ಯೋ ಯಮಹ ಸಹೋದರ ಅಂತಿದ್ದಾಳೆ. ಇದಕ್ಕೆ ಕಾರಣ ಏನು ಎಂಬುದು ಸಿನಿಮಾ ರಿಲೀಸ್ ಆದ್ಮೇಲೆ ತಿಳಿಯಲಿದೆ. ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದ್ದು, ನಟಿ ಶುಭಾ ಪೂಂಜಾ, ಅಮೃತವರ್ಷಿಣಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಲಂಬಾಣಿ ಹೆಣ್ಣುಮಗಳ ಪಾತ್ರದಲ್ಲಿ ರಜನಿ (Rajani) ಮಿಂಚಿದರೆ ಆಕೆಯ ಮಗಳ ಪಾತ್ರದಲ್ಲಿ ಬೇಬಿ ಆಕಾಂಕ್ಷ ನಟಿಸಿದ್ದಾರೆ. ಶುಭಾ ಪೂಂಜಾ (Shubha Poonja) ಅವರು ಕ್ರೈಂ ಜರ್ನ್‌ಲಿಸ್ಟ್ ಪಾತ್ರಕ್ಕೆ ಜೀವತುಂಬಿದ್ದಾರೆ. ದೀಪಕ್ ಸುಬ್ರಹ್ಮಣ್ಯ, ಪದ್ಮಜರಾವ್, ಶರಣಯ್ಯ, ಜಗದೀಶ್ ಹಲ್ಕುಡೆ, ನಿಶಾ ಹೆಗ್ಡೆ, ಗುರುದೇವ ನಾಗರಾಜ್, ಸಂದೇಶ್ ಶೆಟ್ಟಿ ಅಜ್ರಿ ಪಾತ್ರವರ್ಗದಲ್ಲಿದ್ದಾರೆ.‌ ಇದನ್ನೂ ಓದಿ:ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ

    ಇವ್ರನ್ನೆಲ್ಲಾ ಒಟ್ಟುಗೂಡಿಸಿರುವ ನಿರ್ದೇಶಕ ಶ್ರೀನಿ ಹನುಮಂತರಾಜು, ಲವ್ವು, ಸೆಂಟಿಮೆಂಟ್, ಹಾರರ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಹೀಗೆ ಎಲ್ಲಾ ಒಟ್ಟಿಗೆ ಸೇರಿಸಿ ಕಮರ್ಷಿಯಲ್ಲಾಗೇ ಕಥೆನಾ ಕಟ್ಟಿಕೊಟ್ಟಿದ್ದಾರೆ. ಬೆಂಗಳೂರು, ಗದಗ್, ಚಿಕ್ಕಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಓ ಮೈ ಲವ್, ಸುಮ್ಮನೇ ಪ್ರೀತಿಸು ಹಾಡುಗಳು ಪ್ರೇಕ್ಷಕರಿಗೆ ಗುಂಗು ಹಿಡಿಸಿವೆ. ಅದ್ರಲ್ಲೂ ಮಗಳು ಅಮ್ಮನಿಗಾಗಿ ಹಾಡುವ ಲಾಲಿ ಹಾಡಂತೂ ಹೆತ್ತಕರುಳಿಗೆ ಪ್ರಿಯವಾಗಿ ಹೊಸ ಇತಿಹಾಸವನ್ನೇ ನಿರ್ಮಿಸಿದೆ.

    ಈ ಹಿಂದೆ ‘ಕೆಲವು ದಿನಗಳ ನಂತರ’ ಎಂಬ ಸಿನಿಮಾ ಮಾಡಿದ್ದರು. ಅಲ್ಲೂ ಹಾರರ್ ಎಲಿಮೆಂಟ್ಸ್ ಇಟ್ಟು ಪ್ರೇಕ್ಷಕರನ್ನು ಬೆಚ್ಚಿಬೀಳಿಸಿದ್ದರು. ಈಗ ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಅವರು ಬರೆದಿರುವ ಅನ್‌ಟೋಲ್ಡ್ ಕ್ರೈಮ್ ಸ್ಟೋರಿಗೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಒದಗಿಸಿರುವ ಕಾಶಿನಾಥ್ ಕೋಟಿ ಲೆಕ್ಕದಲ್ಲಿ ಬಂಡವಾಳ ಹಾಕಿದ್ದಾರೆ. ಇವರಿಗೆ ಲೋಕೇಶ್ ಭೈರವ, ಶಿವಪ್ರಕಾಶ್.ಎನ್ ಎಂಬುವವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಮುರುಲೀಧರ್ ಎನ್. ಕ್ಯಾಮೆರಾ ಕೈಚಳಕ ತೋರಿದ್ದು, ವಿಜಯ್ ಎಂ ಕುಮಾರ್ ಸಂಕಲನ ಮಾಡಿದ್ದಾರೆ. ಪ್ರಸನ್ನ ಕುಮಾರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ತ್ಯಾಗರಾಜ್ ಹಿನ್ನಲೆ ಸಂಗೀತ ಒದಗಿಸಿದ್ದಾರೆ. ಲೈಟಿಂಗ್ ಅಂಡ್ ಕಲರ್ ಗ್ರೇಡಿಂಗ್‌ನಲ್ಲಿ ಹೊಸ ಪ್ರಯೋಗ ಮಾಡಿರುವ ಅಂಬುಜ ಟೀಮ್, ಬೆಳ್ಳಿಪರದೆ ಮೇಲೆ ಬರಲು ಮುಹೂರ್ತ ಫಿಕ್ಸ್ ಮಾಡಿದೆ. ಮಾರ್ಸ್ ಸುರೇಶ್ ಅವರು ಡಿಸ್ಟ್ರಿಬ್ರೂಷನ್ ಜವಾಬ್ದಾರಿ ಹೊತ್ತಿದ್ದು, ಇದೇ ಜುಲೈ 21ರಂದು ʼಅಂಬುಜ’ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]