Tag: rajanikanth

  • ‘ಚಂದ್ರಮುಖಿ 2’ ಫಸ್ಟ್ ಲುಕ್ ಔಟ್- ರಾಜನಾಗಿ ಮಿಂಚಿದ ರಾಘವ್ ಲಾರೆನ್ಸ್

    ‘ಚಂದ್ರಮುಖಿ 2’ ಫಸ್ಟ್ ಲುಕ್ ಔಟ್- ರಾಜನಾಗಿ ಮಿಂಚಿದ ರಾಘವ್ ಲಾರೆನ್ಸ್

    ಸೌತ್ ಸಿನಿಮಾರಂಗದಲ್ಲಿ ಚಂದ್ರಮುಖಿ ಸಿನಿಮಾ ಮೂಲಕ ರಜನಿಕಾಂತ್ (Rajanikanth) ಅವರು ಸಂಚಲನ ಸೃಷ್ಟಿಸಿದ್ದರು. ಇದೀಗ ಮತ್ತೆ ಚಂದ್ರಮುಖಿ ಸಿನಿಮಾ ತೆರೆಗೆ ಬರುತ್ತಿದೆ. ‘ಚಂದ್ರಮುಖಿ’ ಪಾರ್ಟ್ 2 ಮೂಲಕ ರಾಘವ್ ಲಾರೆನ್ಸ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ರಜನಿಕಾಂತ್ ನಟಿಸಬೇಕಿದ್ದ ರೋಲ್‌ನಲ್ಲಿ ರಾಘವ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಇದೀಗ ರಿವೀಲ್ ಆಗಿದೆ. ಇದನ್ನೂ ಓದಿ:ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಜೈ ಜಗದೀಶ್ ಪುತ್ರಿ ವೈಭವಿ

    ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ (Kangana Ranaut) ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 (Chandramukhi 2) ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್(Raghava Lawrence), ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿ. ಗಣೇಶ್ ಹಬ್ಬಕ್ಕೆ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಬರೆದುಕೊಂಡಿದ್ದಾರೆ.

    ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

    ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮಿ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ಜನಿಕಾಂತ್ ನಟನೆಯ ‘ಜೈಲರ್’ (Jailer) ಸಿನಿಮಾದಲ್ಲಿ ಬಹುಭಾಷಾ ಕಲಾವಿದರ ದಂಡೇ ಇದೆ. ಇದೇ ಆಗಸ್ಟ್ 10ಕ್ಕೆ ತೆರೆಗೆ ಬರೋದಕ್ಕೆ ಸಜ್ಜಾಗಿದೆ. ಹೀಗಿರುವಾಗ ‘ಜೈಲರ್’ ತಂಡಕ್ಕೆ ಸೆನ್ಸಾರ್ ಶಾಕ್ ಕೊಟ್ಟಿದೆ. ರಜನಿ- ಶಿವಣ್ಣ ಸೀನ್‌ಗೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತಲೈವಾ ನಟನೆಯ ‘ಜೈಲರ್’ ಸಿನಿಮಾ ತೆರೆಗೆ ಬರುವ ಮುನ್ನವೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾದ ಫಸ್ಟ್ ಲುಕ್, ಕಾವಾಲಾ (Kaavala) ಸಾಂಗ್ ಸೇರಿದಂತೆ ಜೈಲರ್ ಝಲಕ್ ಫ್ಯಾನ್ಸ್‌ಗೆ ಕಿಕ್ ಕೊಟ್ಟಿದೆ. ಇದೆಲ್ಲದರ ನಡುವೆ ಜೈಲರ್ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ.

    ಆ್ಯಕ್ಷನ್ ಎಂಟರ್‌ಟೈನರ್ ‘ಜೈಲರ್’ ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳು ಹೆಚ್ಚಿದ್ದು ಅದನ್ನು ಕಮ್ಮಿ ಮಾಡುವಂತೆ ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಸೂಚಿಸಿದೆಯಂತೆ. ಒಟ್ಟು 11 ಕಟ್ ಚಿತ್ರದಲ್ಲಿ ಮೋಹನ್ ಲಾಲ್ (Mohanlal) ಮ್ಯಾಥೂ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದು ಮಲಯಾಳಂ ಪದವನ್ನು ಮ್ಯೂಟ್ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆಯಂತೆ. ಇದನ್ನೂ ಓದಿ:ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ‘ಜೈಲರ್’ ಚಿತ್ರದಲ್ಲಿ ಮುತ್ತುವೇಲ್ ಪಾಂಡಿಯನ್ ಆಗಿ ರಜನಿಕಾಂತ್(Rajanikanth), ನರಸಿಂಹ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್‌ನಲ್ಲಿ ಮುತ್ತುವೇಲ್, ನರಸಿಂಹ ಹಾಗೂ ಮ್ಯಾಥ್ಯೂ ಮೂವರು ಸಿಗರೇಟ್ ಸೇದುವ ಸನ್ನಿವೇಶವೊಂದಿದೆಯಂತೆ. ಆ ದೃಶ್ಯದ ಕ್ಲೋಸ್‌ಅಪ್ ಶಾಟ್ಸ್ ಕತ್ತರಿಸುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಮ್ಯಾಥ್ಯೂ, ವ್ಯಕ್ತಿಯೊಬ್ಬನನ್ನು ಕೊಲ್ಲುವುದು ಸೇರಿದಂತೆ ಹಲವು ಸಣ್ಣ ದೃಶ್ಯಗಳಿಗೆ ಕತ್ತರಿ ಬಿದ್ದಿದೆಯಂತೆ.

    ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ರಜನಿಕಾಂತ್, ಶಿವಣ್ಣ(Shivarajkumar), ಮೋಹನ್‌ಲಾಲ್, ತಮನ್ನಾ, ರಮ್ಯಾ ಕೃಷ್ಣ, ಜಾಕಿ ಶ್ರಾಫ್, ಯೋಗಿ ಬಾಬು ನಟಿಸಿದ್ದಾರೆ. ‘ಜೈಲರ್’ ಸಿನಿಮಾ ಬರೋಬ್ಬರಿ 2 ಗಂಟೆ 49 ನಿಮಿಷ ಕಾಲಾವಧಿಯಲ್ಲಿ ಮೂಡಿ ಬಂದಿದೆ. ಕನ್ನಡದ ಜೊತೆ ಮೂರು ಭಾಷೆಗಳಲ್ಲಿ ಜೈಲರ್ ಸಿನಿಮಾ ರಿಲೀಸ್ ಆಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರಂಜೀವಿಯನ್ನು ಹಾಡಿ ಹೊಗಳಿದ ‘ಕಾವಾಲಾ’ ಬ್ಯೂಟಿ ತಮನ್ನಾ

    ಚಿರಂಜೀವಿಯನ್ನು ಹಾಡಿ ಹೊಗಳಿದ ‘ಕಾವಾಲಾ’ ಬ್ಯೂಟಿ ತಮನ್ನಾ

    ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ಅವರಿಗೆ ಈಗ ಡಿಮ್ಯಾಂಡ್ ಜಾಸ್ತಿಯಾಗಿದೆ. ಬಾಲಿವುಡ್- ಟಾಲಿವುಡ್ ಎರಡು ಕಡೆ ಮಿಲ್ಕಿ ಬ್ಯೂಟಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ‘ಭೋಲಾ ಶಂಕರ್’ (Bhola Shankar) ಸಿನಿಮಾದಲ್ಲಿ ಮೆಗಾಸ್ಟಾರ್ ನಾಯಕಿಯಾಗಿರುವ ತಮನ್ನಾ ಅವರು ಈಗ ಸಹನಟ ಚಿರಂಜೀವಿ ಬಗ್ಗೆ ಸೀಕ್ರೆಟ್ ಒಂದನ್ನ ಬಿಚ್ಚಿಟ್ಟಿದ್ದಾರೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ನಟಿ ಮೆಗಾಸ್ಟಾರ್ ಅವರನ್ನು ಹಾಡಿ ಹೊಗಳಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ನಟನೆಯ ಭೋಲಾ ಶಂಕರ್ ಸಿನಿಮಾ ಆಗಸ್ಟ್ 11ಕ್ಕೆ ತೆರೆ ಕಾಣುತ್ತಿದೆ. ಮೆಗಾಸ್ಟಾರ್ ತಂಗಿಯಾಗಿ ಮಹಾನಟಿ ಕೀರ್ತಿ ಸುರೇಶ್, ನಾಯಕಿಯಾಗಿ ತಮನ್ನಾ ನಟಿಸಿದ್ದಾರೆ. ಸಿನಿಮಾದ ಟ್ರೈಲರ್, ಫಸ್ಟ್ ಲುಕ್ ಎಲ್ಲವೂ ಅಭಿಮಾನಿಗಳ ಗಮನ ಸೆಳೆದಿದೆ. ಮೆಗಾಸ್ಟಾರ್ ಭರ್ಜರಿ ಆ್ಯಕ್ಷನ್ ನೋಡೋದ್ದಕ್ಕೆ ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ:18 ವರ್ಷಗಳ ದಾಂಪತ್ಯಕ್ಕೆ ನಟ ಫರ್ದೀನ್ ಖಾನ್ ವಿದಾಯ?

    ಈ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ತಮನ್ನಾ (Tamannah) ಅವರು ಚಿರಂಜೀವಿ ಬಗ್ಗೆ ಮಾತನಾಡಿದ್ದಾರೆ. ಸೆಟ್‌ನಲ್ಲಿ ನಡೆದ ಘಟನೆಯೊಂದನ್ನ ಅವರು ಶೇರ್ ಮಾಡಿದ್ದಾರೆ. ಚಿರಂಜೀವಿ ಅವರು ಶ್ರಮಜೀವಿ. ಯಾಕೆಂದರೆ ನಾವು ಹಾಡೊಂದರ ಚಿತ್ರೀಕರಣ ಮಾಡುವಾಗ ಅವರಿಗೆ ಮೊಣಕಾಲು ನೋವು ಕಾಣಿಸಿಕೊಂಡಿತ್ತು. ಇದರಿಂದ ಅವರು ತೀವ್ರವಾಗಿ ಬಳಲುತ್ತಿದ್ದರು. ಹೀಗಿದ್ದರೂ ಸಹ ನೋವಿನ ನಡುವೆಯೇ ಶೂಟಿಂಗ್ ಮುಂದುವರೆಸಿದರು. ಸಿನಿಮಾ ಶೂಟಿಂಗ್ ಮುಂದುವರೆಯಲು ಏನು ಮಾಡಬೇಕೋ ಅದನ್ನು ಚಿರು ಅವರು ಮಾಡಿದರು.

    ಈಗ ತಾನೇ ಹೆಜ್ಜೆಯಿಟ್ಟವರಂತೆ ಮೆಗಾ ಸ್ಟಾರ್ ಸದಾ ಉತ್ಸಾಹ, ಬದ್ಧತೆಯನ್ನು ಹೊಂದಿರುತ್ತಾರೆ. ಅವರ ಪಯಣವನ್ನು ನೋಡಿ ನಾನು ಸ್ಫೂರ್ತಿ ಪಡೆದಿದ್ದೇನೆ ಎಂದು ನಟನನ್ನು ತಮನ್ನಾ ಹೊಗಳಿದ್ದಾರೆ. ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ನಂತರ ಚಿರಂಜೀವಿ ಜೊತೆ ತಮನ್ನಾಗೆ ಇದು ಎರಡನೇ ಸಿನಿಮಾವಾಗಿದೆ.

    ‘ಜೈಲರ್ʼ (Jailer) ಸಿನಿಮಾ ಕೂಡ ಇದೇ ಆಗಸ್ಟ್ 10ಕ್ಕೆ ತೆರೆಗೆ ಬರಲಿದೆ. ತಲೈವಾ- ಶಿವಣ್ಣ ಕಾಂಬೋ ಸಿನಿಮಾದಲ್ಲಿ ತಮನ್ನಾ ಸೊಂಟ ಬಳುಕಿಸಿರುವ ಕಾವಾಲಾ ಸಾಂಗ್ ಸೂಪರ್ ಹಿಟ್ ಆಗಿದೆ. ರಜನಿಕಾಂತ್ (Rajanikanth) ಜೊತೆ ಮಿಲ್ಕಿ ಬ್ಯೂಟಿ ಹೆಜ್ಜೆ ಹಾಕಿದ್ದಾರೆ. ಒಂದು ದಿನದ ಅಂತರದಲ್ಲಿ ಜೈಲರ್ ಮತ್ತು ಭೋಲಾ ಶಂಕರ್ ತೆರೆಕಾಣುತ್ತಿದೆ. ಯಾವ ಸಿನಿಮಾಗೆ ಪ್ರೇಕ್ಷಕರ ಬೆಂಬಲವಿರಲಿದೆ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಲೈವಾ, ಧನುಷ್ ಆಯ್ತು ಈಗ ಪೃಥ್ವಿರಾಜ್ ಸುಕುಮಾರನ್ ಜೊತೆ ಶಿವಣ್ಣ ಸಿನಿಮಾ

    ತಲೈವಾ, ಧನುಷ್ ಆಯ್ತು ಈಗ ಪೃಥ್ವಿರಾಜ್ ಸುಕುಮಾರನ್ ಜೊತೆ ಶಿವಣ್ಣ ಸಿನಿಮಾ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar)  ಅವರು ಸದ್ಯ ಕನ್ನಡದ ಬ್ಯುಸಿ ನಟ. ಕನ್ನಡ ಚಿತ್ರಗಳ ಜೊತೆ ಪರಭಾಷಾ ಸಿನಿಮಾಗಳಲ್ಲೂ ಶಿವಣ್ಣ ನಟಿಸುತ್ತಿದ್ದಾರೆ. ರಜನಿಕಾಂತ್, ಧನುಷ್ ನಂತರ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಜೊತೆ ಮಾಲಿವುಡ್‌ನಲ್ಲಿ ನಟಿಸಲು ಶಿವಣ್ಣಗೆ ಆಫರ್ ಸಿಕ್ಕಿದೆ. ಜೊತೆಗೆ ಯಾವೆಲ್ಲಾ ಸಿನಿಮಾಗಳು ಶಿವಣ್ಣ ಕೈಯಲ್ಲಿದೆ ಎಂಬ ಡಿಟೈಲ್ಸ್ ಇಲ್ಲಿದೆ.

    ಶಿವರಾಜ್‌ಕುಮಾರ್ ಅವರು ಸಿನಿಮಾರಂಗಕ್ಕೆ ಬಂದು 37 ವರ್ಷಗಳಾಗಿದೆ. ಕಲಾವಿದರಿಗೆ ಭಾಷೆಯ ಬೇಲಿಯಿಲ್ಲ ಎಂಬುದನ್ನ ಶಿವಣ್ಣ ತೋರಿಸಿ ಕೊಟ್ಟಿದ್ದಾರೆ. ಹಾಗಾಗಿ ತೆಲುಗು, ತಮಿಳು ಸಿನಿಮಾ ಅಂತಾ ಶಿವಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡ್ತಿದ್ದಾರೆ. ಯಂಗ್ ಹೀರೋಗಳಿಗೆ ಸೆಡ್ಡು ಹೊಡೆದಂತೆ ಆಕ್ಟೀವ್ ಆಗಿ ಆಕ್ಟ್ ಮಾಡ್ತಿದ್ದಾರೆ. ಇದನ್ನೂ ಓದಿ:Captain Miller Trailer: ಮಾಸ್‌ ಆಗಿ ಎಂಟ್ರಿ ಕೊಟ್ರು ಧನುಷ್‌-ಶಿವಣ್ಣ

    ಶಿವಣ್ಣ ಅವರಿಗೆ ಸ್ಯಾಂಡಲ್‌ವುಡ್ ಸಾಲು ಸಾಲು ಸಿನಿಮಾಗಳ ಆಫರ್ ಅವರ ಕೈಯಲ್ಲಿದೆ. ಹೀಗಿರುವಾಗ ಈಗ ಅವರಿಗೆ ಪರಭಾಷೆಯಿಂದಲೂ ಆಫರ್ಸ್ ಅರಸಿ ಬರುತ್ತಿದೆ. ಹಾಗಂತ ಎಲ್ಲಾ ಚಿತ್ರಗಳನ್ನ ಒಪ್ಪಿಕೊಳ್ಳದೇ, ಅಳಿದು ತೂಗಿ ಕಥೆ ಕೇಳಿ ಓಕೆ ಮಾಡ್ತಿದ್ದಾರೆ. ರಜನಿಕಾಂತ್ (Rajanikanth) ಜೊತೆ ಸ್ಪೆಷಲ್ ರೋಲ್‌ನಲ್ಲಿ ಜೈಲರ್‌ನಲ್ಲಿ (Jailer) ನಟಿಸಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಧನುಷ್ (Dhanush) ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಅವರಿಗೆ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್ ಜೊತೆ ನಟಿಸಲು ಅವಕಾಶ ಸಿಕ್ಕಿದೆ. ಸದ್ಯಕ್ಕಿನ್ನೂ ಮಾತುಕತೆ ಹಂತದಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ವರುಣ್ ತೇಜ್ ಚಿತ್ರಕ್ಕೆ ‘ಮಟ್ಕಾ’ ಟೈಟಲ್: ಐಟಂ ಹಾಡಿಗೆ ಕುಣಿವ ನೋರಾ ಫತೇಹಿ

    ‘ಜೈಲರ್’ ಚಿತ್ರಕ್ಕೆ ಆಯ್ಕೆಯಾದ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ಸಿನಿಮಾ ಒಪ್ಪಿಕೊಳ್ಳಲು ರಜನಿ ಸರ್-ನೆಲ್ಸನ್ ಇಬ್ಬರೂ ಕಾರಣ. ಭೈರಾಗಿ ಶೂಟಿಂಗ್ ಸಮಯದಲ್ಲಿ ನೆಲ್ಸನ್ ಬಂದಿದ್ದರು. ನನ್ನ ನೋಡಿ ಖುಷಿಪಟ್ಟಿದ್ದರು. ನಿಮ್ಮ ಜೊತೆ ಕೆಲಸ ಮಾಡಬೇಕು ಅಂತ ಆಗಲೇ ಹೇಳಿದ್ದರು. ನೀವು ಜೈಲರ್ ಸಿನಿಮಾದಲ್ಲಿ ನಟಿಸಲೇಬೇಕು ಅಂದಿದ್ದರು. ರಜನಿಕಾಂತ್‌ ಅವರಿಗೆ ಬಳಿ ಹೇಳಿದಾಗ ಅವರೂ ಖುಷಿಪಟ್ಟರಂತೆ. ರಜನಿಕಾಂತ್ ಅವರ ಜೊತೆ ತೆರೆಹಂಚಿಕೊಂಡಿರುವ ಬಗ್ಗೆ ಖುಷಿಯಿದೆ ಎಂದು ಮಾತನಾಡಿದ್ದಾರೆ. ಜೈಲರ್‌ನಲ್ಲಿ ನಾನೇ ತಮಿಳಿನಲ್ಲಿ ಡಬ್ ಮಾಡಿದ್ದೇನೆ. ರಜನಿಕಾಂತ್‌ ಅವರಿಗೆ ನಮ್ಮ ಕುಟುಂಬದ ಜೊತೆ ಉತ್ತಮ ಸಂಬಂಧವಿದೆ. ಚಿಕ್ಕ ಪಾತ್ರವಾದರೂ 10 ನಿಮಿಷ ಬರುತ್ತೇನೆ. ಆದರೆ, ತುಂಬ ಚೆನ್ನಾಗಿ ತೋರಿಸಿದ್ದಾರೆ. ಮಂಗಳೂರು ಮತ್ತು ಚೆನ್ನೈ ಚಿತ್ರೀಕರಣ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಘೋಸ್ಟ್, ಭೈರತಿ ರಣ್‌ಗಲ್, ಕರಟಕ ದಮನಕ, 45, ಜೈಲರ್, ಕ್ಯಾಪ್ಟನ್ ಮಿಲ್ಲರ್, ಇನ್ಸ್‌ಪೆಕ್ಟರ್ ವಿಕ್ರಮ್ ರಿಟರ್ನ್ಸ್, ಕೆ.ಪಿ ಶ್ರೀಕಾಂತ್ ಹೊಸ ಸಿನಿಮಾ, ತೆಲುಗಿನ ಎರಡು ಪ್ರಾಜೆಕ್ಟ್‌ಗಳು ಸದ್ಯ ಶಿವಣ್ಣ ಕೈಯಲ್ಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಟ್ ಆಗಿ ಕಾಣಿಸಿಕೊಂಡ ‘ಕಾವಾಲಾ’ ಬ್ಯೂಟಿ ತಮನ್ನಾ

    ಹಾಟ್ ಆಗಿ ಕಾಣಿಸಿಕೊಂಡ ‘ಕಾವಾಲಾ’ ಬ್ಯೂಟಿ ತಮನ್ನಾ

    ನ್ನಡದ ‘ಕೆಜಿಎಫ್’ (KGF) ನಟಿ ತಮನ್ನಾ(Tamanaah) ಅವರು ಇತ್ತೀಚಿಗೆ ತಮ್ಮ ಸಿನಿಮಾಗಳ ಮೂಲಕ ಸಿಕ್ಕಾಪಟ್ಟೆ ಚಾಲ್ತಿಯಲ್ಲಿದ್ದಾರೆ. ಲಸ್ಟ್ ಸ್ಟೋರಿಸ್ 2, ಜೀ ಕರ್ದಾ, ಕಾವಾಲಾ ಹಾಡಿನ ಸಕ್ಸಸ್ ನಂತರ ತಮನ್ನಾ ಬೇಡಿಕೆ ಜಾಸ್ತಿಯಾಗಿದೆ. ಈ ಬೆನ್ನಲ್ಲೇ ತಮನ್ನಾ ಹಾಟ್ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.

    ಲಸ್ಟ್ ಸ್ಟೋರಿಸ್ 2, ಜೀ ಕರ್ದಾ ಪ್ರಾಜೆಕ್ಟ್‌ನಲ್ಲಿ ನಟಿ ತಮನ್ನಾ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಂಚಲನ ಮೂಡಿಸಿದ್ದರು. ತಮನ್ನಾ ಹಸಿ ಬಿಸಿ ದೃಶ್ಯಕ್ಕೆ ಕೆಲವರು ವಿರೋಧಿಸಿದ್ರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದರು. ಇತ್ತೀಚಿಗೆ ರಜನಿಕಾಂತ್ (Rajanikanth) ನಟನೆಯ ‘ಜೈಲರ್’ ಸಿನಿಮಾದಲ್ಲಿ ತಮನ್ನಾ ಸಾಥ್ ನೀಡಿದ್ದರು. ಚಿತ್ರದ ಕಾವಾಲಾ ಹಾಡಿಗೆ ಅದ್ಭುತವಾಗಿ ಹೆಜ್ಜೆಗೆ ಹಾಕಿದ್ದರು. ಅವರ ಎಕ್ಸ್ಪ್ರೇಷನ್‌ಗೆ ಪಡ್ಡೆಹುಡುಗರು ಕಳೆದು ಹೋಗಿದ್ದರು.‌ ಇದನ್ನೂ ಓದಿ:ಪದೇ ಪದೇ ಪ್ರಭಾಸ್ ವಿರುದ್ದ ಕಿಡಿಕಾರುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ಅಷ್ಟರ ಮಟ್ಟಿಗೆ ತಮನ್ನಾ ‘ಕಾವಾಲಾ’ (Kaavala) ಸಾಂಗ್ ಎಲ್ಲೆಲ್ಲೂ ವೈರಲ್ ಆಗುತ್ತಿದೆ. ಚಿಕ್ಕವರಿಂದ ದೊಡ್ಡವರ ತನಕ ಈ ಸಾಂಗ್‌ಗೆ ರೀಲ್ಸ್ ಮಾಡ್ತಿದ್ದಾರೆ. ಸದ್ಯ ಜೈಲರ್ (Jailer) ಸಿನಿಮಾದ ಕಾವಾಲಾ ರಿಲೀಸ್ ಈವೆಂಟ್‌ಗೆ ತಮನ್ನಾ ಭಾಗಿಯಾಗಿದ್ದಾರೆ. ಅದಕ್ಕಾಗಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

    ಬಿಳಿ ಬಣ್ಣದ ಉಡುಗೆಯಲ್ಲಿ ಸಖತ್ ಗ್ಲ್ಯಾಮರಸ್  ಆಗಿ ತಮನ್ನಾ ಪೋಸ್ ನೀಡಿದ್ದಾರೆ. ಕಾವಾಲಾ ಬ್ಯೂಟಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ತಲೈವಾ ಫ್ಯಾನ್ಸ್ ‘ಜೈಲರ್’ ಸಿನಿಮಾ ನೋಡಬೇಕು ಅಂತಾ ಕಾಯ್ತಿದ್ದಾರೆ. ಕಾವಾಲಾ ಹಾಡಿನಲ್ಲಿ ತಮನ್ನಾ ಡ್ಯಾನ್ಸ್ ನೋಡಿದ ಸಿನಿಮಾ ಮೇಲಿನ ನಿರೀಕ್ಷೆ ಈಗ ಡಬಲ್ ಆಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾಗೆ ಬ್ರೇಕ್, ಮಾಲ್ಡೀವ್ಸ್‌ನಲ್ಲಿ ರಜನಿಕಾಂತ್

    ಸಿನಿಮಾಗೆ ಬ್ರೇಕ್, ಮಾಲ್ಡೀವ್ಸ್‌ನಲ್ಲಿ ರಜನಿಕಾಂತ್

    ಕಾಲಿವುಡ್‌ (Kollywood)  ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆ ಬ್ರೇಕ್ ಕೊಟ್ಟು ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ತಲೈವಾ ಸದಾ ಸಿನಿಮಾ- ಕುಟುಂಬ ಅಂತಾ ಬ್ಯುಸಿಯಾಗಿರುತ್ತಾರೆ. ಬ್ರೇಕ್ ತೆಗೆದುಕೊಂಡು ದೂರದ ದೇಶಕ್ಕೆ ಹೋಗೋದು ತೀರಾ ವಿರಳ. ಹೀಗಿರುವಾಗ ಒಪ್ಪಿಕೊಂಡಿರುವ ಸಿನಿಮಾಗಳಿಗೆ ಶೂಟಿಂಗ್ ಮುಗಿಸಿಕೊಟ್ಟು, ತಲೈವಾ ರಿಲಾಕ್ಸ್ ಮೂಡ್‌ಗೆ ಜಾರಿದ್ದಾರೆ.

    ಚೆನ್ನೈ ಟು ಮಾಲ್ಡೀವ್ಸ್‌ಗೆ (Maldives) ಲ್ಯಾಂಡ್ ಆಗಿರುವ ಫೋಟೋದಿಂದ ಹಿಡಿದು ಬೀಚ್ ಬಳಿ ತಲೈವಾ ಓಡಾಡುತ್ತಿರುವ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಕೆಲಸ ಒತ್ತಡವೆನ್ನೆಲ್ಲಾ ಮರೆತು ಖುಷಿಯಾಗಿ ಸಮಯ ಕಳೆಯುತ್ತಿದ್ದಾರೆ. ಇದನ್ನೂ ಓದಿ:ಅಪಘಾತದಿಂದ ಚೇತರಿಸಿಕೊಂಡ್ರಾ ಸಾಯಿ ಧರಂ ತೇಜ್- ನಟ ಹೇಳೋದೇನು?

    ರಜನಿಕಾಂತ್ ಅವರ ವಯಸ್ಸು ಈಗ 72. ಈ ವಯಸ್ಸಿನಲ್ಲೂ ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಜೈಲರ್’ (Jailer) ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಗುತ್ತಿದೆ. ಅವರ ನಟನೆಯ ಮತ್ತೊಂದು ಸಿನಿಮಾ ‘ಲಾಲ್ ಸಲಾಂ’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಚಿತ್ರಕ್ಕೆ ಅವರ ಮಗಳು ಐಶ್ವರ್ಯಾ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬಳಿಕವೇ ಅವರು ವೆಕೇಷನ್ ತೆರಳಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದ ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

    ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದ ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

    ಕಾಲಿವುಡ್ ಸೂಪರ್ ಸ್ಟಾರ್ ತಲೈವಾ(Rajanikanth)  ನಟನೆಯ ‘ಕಬಾಲಿ’ (Kabali Telagu Film) ಸಿನಿಮಾದ ತೆಲುಗು ವರ್ಷನ್‌ಗೆ ಬಂಡವಾಳ ಹೂಡಿದ್ದ ನಿರ್ಮಾಪಕ ಕೆ.ಪಿ. ಚೌದರಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಅವರ ಬಂಧನವಾಗಿದೆ. ಹೈದರಾಬಾದ್ ಪೊಲೀಸರು ಕೆ.ಪಿ. ಚೌದರಿ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೈದರಾಬಾದ್‌ನ ಕಿಸ್ಮತ್‌ಪುರದಲ್ಲಿರುವ ತಮ್ಮ ಮನೆಯಿಂದ ಹೊರಟ ಕೆ.ಪಿ. ಚೌದರಿ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಾರಿ ನಿರ್ದೇಶನಾಲಯ, ಇನ್ನಿತರ ತನಿಖಾ ಸಂಸ್ಥೆಗಳು ಕೂಡ ತನಿಖೆ ನಡೆಸಲಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ ಎನ್ನಲಾಗಿದೆ.

    ಡ್ರಗ್ಸ್ ಮಾರಾಟದ ಬಗ್ಗೆ ಸುಳಿವು ಕಾರಣ ಪೊಲೀಸರು ಕೆ.ಪಿ. ಚೌದರಿ ಅವರ ಮನೆ ಮೇಲೆ ದಾಳಿ ಮಾಡಿದಾಗ 90 ಪ್ಯಾಕೆಟ್ ಕೊಕೇನ್ ಪತ್ತೆ ಆಗಿದೆ. ಗೋವಾದಿಂದ ಅವರು 100 ಪ್ಯಾಕೆಟ್‌ಗಳಲ್ಲಿ ಮಾದಕ ವಸ್ತು ಖರೀದಿಸಿ ತಂದಿದ್ದರು ಎನ್ನಲಾಗಿದೆ. ಆದರೆ ಪೊಲೀಸರಿಗೆ ಸಿಕ್ಕಿರುವುದು 90 ಪ್ಯಾಕೆಟ್‌ಗಳು ಮಾತ್ರ. ಇದು 82.75 ಗ್ರಾಂ ಇದೆ ಎಂದು ವರದಿ ಆಗಿದೆ. ಕೆ.ಪಿ. ಚೌದರಿ ಅವರು ತಮ್ಮ ಗಿರಾಕಿಗಳಿಗೆ ಡ್ರಗ್ಸ್ ಮಾರಾಟ ಮಾಡಲು ಹೊರಟಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಇದನ್ನೂ ಓದಿ:ಟಾಪ್‌ಲೆಸ್ ಆಗಿ ಕಾಣಿಸಿಕೊಂಡ ತಮನ್ನಾ ಭಾಟಿಯಾ- ಹಾಟ್ ವೀಡಿಯೋ ವೈರಲ್

    ಕೆ.ಪಿ. ಚೌದರಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2016ರಲ್ಲಿ. ‘ಕಬಾಲಿ’ (Kabali) ಸಿನಿಮಾದ ತೆಲುಗು ವರ್ಷನ್‌ಗೆ ಅವರು ಬಂಡವಾಳ ಹೂಡಿದ್ದರು. ತೆಲುಗಿನ ಸಾಕಷ್ಟು ಸಿನಿಮಾ ವಿತರಣೆ ಮಾಡಿದ್ದರು. ಆದರೆ ಈ ವ್ಯವಹಾರದಿಂದ ಅವರಿಗೆ ಹೆಚ್ಚು ಲಾಭ ಆಗಲಿಲ್ಲ. ಗೋವಾದಲ್ಲಿ ಕೆ.ಪಿ ಚೌದರಿ ಅವರ ಕ್ಲಬ್‌ಗೆ ಅನೇಕ ಸೆಲೆಬ್ರಿಟಿಗಳು ಅಲ್ಲಿಗೆ ಆಗಾಗ ಭೇಟಿ ನೀಡುತ್ತಾರೆ ಎಂಬ ಸುದ್ದಿ ಇದೆ. ಇನ್ನೂ 2021ರಲ್ಲಿ ಡ್ರಗ್ಸ್ ಕೇಸ್, ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಣಾ ದಗ್ಗುಭಾಟಿ, ರಾಕುಲ್, ರವಿತೇಜಾ ಸೇರಿದಂತೆ ಹಲವರು ವಿಚಾರಣೆ ಒಳಗಾಗಿದ್ರು.

  • 32 ವರ್ಷಗಳ ನಂತರ ಮತ್ತೆ ಒಂದಾದ ತಲೈವಾ- ಬಿಗ್‌ ಬಿ

    32 ವರ್ಷಗಳ ನಂತರ ಮತ್ತೆ ಒಂದಾದ ತಲೈವಾ- ಬಿಗ್‌ ಬಿ

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

  • ಶೂಟಿಂಗ್ ಮುಗಿಸಿದ ‘ಜೈಲರ್’ ಸಿನಿಮಾ- ಕೇಕ್ ಕತ್ತರಿಸಿ ಸಂಭ್ರಮಿಸಿದ ತಲೈವಾ

    ಶೂಟಿಂಗ್ ಮುಗಿಸಿದ ‘ಜೈಲರ್’ ಸಿನಿಮಾ- ಕೇಕ್ ಕತ್ತರಿಸಿ ಸಂಭ್ರಮಿಸಿದ ತಲೈವಾ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ನಟನೆಯ ‘ಜೈಲರ್’ (Jailer) ಸಿನಿಮಾದ ಚಿತ್ರೀಕರಣ ಇದೀಗ ಪೂರ್ಣಗೊಂಡಿದೆ. ಕೇಕ್ ಕತ್ತರಿಸುವ ಮೂಲಕ ಜೈಲರ್ ಟೀಮ್ ಜೊತೆ ತಲೈವಾ ಸಂಭ್ರಮಿಸಿದ್ದಾರೆ. ಈ ಕುರಿತ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ.

    ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ನಿರ್ದೇಶನದಲ್ಲಿ ‘ಜೈಲರ್’ ಸಿನಿಮಾ ಮೂಡಿ ಬಂದಿದೆ. ರಜನಿಕಾಂತ್ 169ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಬೆಟ್ಟದಷ್ಟಿದೆ. ತಲೈವಾ ಜೊತೆ ಬಹುಭಾಷಾ ತಾರೆಯರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವಣ್ಣ (Shivarajkumar) ಕೂಡ ರಜನಿಕಾಂತ್ ಜೊತೆ ನಟಿಸಿ ಬಂದಿದ್ದಾರೆ.

    ಇತ್ತೀಚಿಗಷ್ಟೇ ‘ಜೈಲರ್’ ಸಿನಿಮಾದ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿತ್ತು. ಕಾರಿನಿಂದ ಇಳಿದು ಬರುವ ತಲೈವಾ ಅವರನ್ನ ನೋಡಿ ಫ್ಯಾನ್ಸ್ ಕಳೆದು ಹೋಗಿದ್ದರು. ಚಿತ್ರೀಕರಣವನ್ನ ಹಾಡೊಂದರಿಂದ ಮುಕ್ತಾಯ ಮಾಡಲಾಗಿದೆ. ತಮನ್ನಾ ಜೊತೆ ಮಸ್ತ್‌ ಆಗಿರೋ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಜೈಲರ್‌ ಶೂಟಿಂಗ್‌ಗೆ ತೆರೆಬಿದ್ದಿದೆ. ಈ ಸಿನಿಮಾ ಪೂರ್ಣಗೊಂಡಿರುವ ಬಗ್ಗೆ ಚಿತ್ರತಂಡ ಸಿಹಿಸುದ್ದಿ ನೀಡಿದ್ದಾರೆ. ನಟಿ ತಮನ್ನಾ ಭಾಟಿಯಾ, ನಿರ್ದೇಶಕ ನೆಲ್ಸನ್ & ಟೀಮ್ ಜೊತೆ ರಜನಿಕಾಂತ್ ಕೇಕ್ ಕತ್ತರಿಸಿ ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ಅದ್ದೂರಿಯಾಗಿ ನಡೆಯಿತು ಅಂಬಿ ಪುತ್ರನ ಅರಿಶಿನ ಶಾಸ್ತ್ರ

    ‘ಜೈಲರ್’ ಸಿನಿಮಾ ಇದೇ ಆಗಸ್ಟ್ 10ಕ್ಕೆ ತೆರೆಗೆ ಬರಲಿದೆ. ಬಹುಭಾಷೆಗಳಲ್ಲಿ ತೆರೆ ಕಾಣಲಿದೆ. ರಜನಿಕಾಂತ್ ನಯಾ ಲುಕ್‌ನಲ್ಲಿ ನೋಡಲು ಅಭಿಮಾನಿಗಳು ಕೂಡ ಎದುರುನೋಡ್ತಿದ್ದಾರೆ.

  • ರಜನಿಕಾಂತ್ ಸಿನಿಮಾದಲ್ಲಿ ಕಪಿಲ್ ದೇವ್

    ರಜನಿಕಾಂತ್ ಸಿನಿಮಾದಲ್ಲಿ ಕಪಿಲ್ ದೇವ್

    ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ಪುತ್ರಿ ಐಶ್ವರ್ಯ (Aishwarya) ನಿರ್ದೇಶನದ ‘ಲಾಲ್ ಸಲಾಮ್’ ಸಿನಿಮಾದಲ್ಲಿ ನಟಿಸುವ ಮೂಲಕ ಸಾಥ್ ನೀಡಿದ್ದಾರೆ. ಕ್ರಿಕೆಟ್ ಲೋಕದ ದಂತಕಥೆ ಕಪಿಲ್ ದೇವ್ ಅವರು ತಲೈವಾ ಜೊತೆ ಕೈಜೋಡಿಸಿದ್ದಾರೆ.

    7 ವರ್ಷಗಳ ನಂತರ ನಿರ್ದೇಶನಕ್ಕೆ ಕಮ್ ಬ್ಯಾಕ್ ಆಗಿರುವ ಐಶ್ವರ್ಯ ಅವರು ‘ಲಾಲ್ ಸಲಾಮ್’ (Lal Salaam) ಎಂಬ ವಿಭಿನ್ನ ಸಿನಿಮಾ ಮಾಡ್ತಿದ್ದಾರೆ. ಮಗಳ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ತಲೈವಾ ಬಣ್ಣ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಚಿತ್ರದ ತಲೈವಾ ಲುಕ್ ರಿವೀಲ್ ಮಾಡಲಾಗಿತ್ತು. ತಲೈವಾ ಲುಕ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ‘ಲಾಲ್ ಸಲಾಮ್’ ಚಿತ್ರದಲ್ಲಿ ಕಪಿಲ್ ದೇವ್ ನಟಿಸಿರುವ ಬಗ್ಗೆ ರಜನಿಕಾಂತ್ (Rajanikanth) ಸುಳಿವು ಬಿಟ್ಟು ಕೊಟ್ಟಿದ್ದಾರೆ. ಈ ಬಗ್ಗೆ ರಜನಿಕಾಂತ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಪಿಲ್ ದೇವ್ (Kapil Dev) ಜೊತೆ ಕೆಲಸ ಮಾಡಿರೋದು ಖುಷಿ ಕೊಟ್ಟಿದೆ ಎಂದು ತಲೈವಾ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

    ಚಿತ್ರದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಲೀಡ್ ರೋಲ್‌ನಲ್ಲಿ ಅಭಿನಯಿಸಿದ್ದಾರೆ. ಸಿನಿಮಾಗೆ ಲೈಕಾ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದೆ.