Tag: rajaseat

  • ರಾಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಕೋಟಿ ಕೋಟಿ ಅವ್ಯವಹಾರ‌‌‌ ಆರೋಪ – ಖುದ್ದು ಫೀಲ್ಡಿಗಿಳಿದ ಲೋಕಾಯುಕ್ತ

    ರಾಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಕೋಟಿ ಕೋಟಿ ಅವ್ಯವಹಾರ‌‌‌ ಆರೋಪ – ಖುದ್ದು ಫೀಲ್ಡಿಗಿಳಿದ ಲೋಕಾಯುಕ್ತ

    ಮಡಿಕೇರಿ: ಕರ್ನಾಟಕದ ಕಾಶ್ಮೀರ ಅಂದರೆ ಯಾರಿಗೆ ತನ್ನೆ ಇಷ್ಟ ಅಗೋಲ್ಲ ಹೇಳಿ ಅದರಲ್ಲೂ ಮಂಜಿನ ನಗರಿ ಮಡಿಕೇರಿ ರಾಜಾಸೀಟ್ (Rajaseat) ಅಂದ್ರೆ ಎಲ್ಲರಿಗೂ ಫೇವರೆಟ್‌. ದಿನನಿತ್ಯ ಸಾವಿರಾರು ಪ್ರವಾಸಿಗರು ರಾಜಾಸೀಟ್‌ಗೆ ಭೇಟಿ ನೀಡುತ್ತಾರೆ. ಇಂತಹ ಪ್ರವಾಸಿತಾಣದ ಅಭಿವೃದ್ಧಿ ಮಾಡುವ ನೆಪದಲ್ಲಿ ಕೋಟಿ ಕೋಟಿ ಅವವ್ಯಹಾರ ನಡೆದಿದೆಯಂತೆ ಖುದ್ದು ಲೋಕಾಯುಕ್ತ ಅಧಿಕಾರಿಗಳೇ ತನಿಖೆ ಮಾಡಲು ಲೋಕಾಯುಕ್ತ ಫೀಲ್ಡಿಗಿಳಿದಿದೆ.

    ಮಂಜಿನ ನಗರಿಯ ರಾಜಾಸೀಟ್ ಭೂಲೋಕದ ಸ್ವರ್ಗ. ಹೀಗಾಗಿ ಈ ಪ್ರೇಕ್ಷಣೀಯ ಸ್ಥಳವನ್ನು ಇನ್ನಷ್ಟು ಅಭಿವೃದ್ಧಿ ಕಾರ್ಯವನ್ನು ಮಾಡಬೇಕು ಎಂದು ಈ ಹಿಂದಿನ ಬಿಜೆಪಿ ಸರ್ಕಾರದ ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡಿತ್ತು. ಅದ್ರೆ ರಾಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಅವ್ಯವಹಾರ ನಡೆದಿದೆ. ಹೀಗಾಗಿ ಅಧಿಕಾರಿಗಳಿಗೆ ಶಾಕ್ ನೀಡಲು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರವಾಸಿತಾಣ ಗ್ರೇಟರ್ ರಾಜಾಸೀಟ್ ಹೆಸರಿನಲ್ಲಿ ಅಭಿವೃದ್ಧಿ ಪಡಿಸಲು ಈ ಹಿಂದಿನ ಬಿಜೆಪಿ ಸರ್ಕಾರ 2020ರಲ್ಲಿ ಪಣತೋಟ್ಟಿತ್ತು. ಪ್ರವಾಸೋದ್ಯಮ ಇಲಾಖೆಯ ಮೂಲಕ 4.55 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತು.

    ತೋಟಗಾರಿಕೆ ಇಲಾಖೆಗೆ ಸೇರಿದ 3 ಎಕರೆ ಜಾಗದಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 3 ಎಕರೆ ಜಾಗದಲ್ಲಿ ಕಾಮಗಾರಿ ಆರಂಭಿಸಿತ್ತು. ಆದ್ರೆ ಕಾಮಗಾರಿ ಮುಗಿಯುವ ಮೊದಲೇ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ರು. ಆದರೆ ಈ ಕಾಮಗಾರಿಯಲ್ಲಿ ಅವ್ಯವಹಾರದ ವಾಸನೆ ಸಿಕ್ಕಿದ ಹಿನ್ನೆಲೆಯಲ್ಲಿ ಮಡಿಕೇರಿ ನಿವಾಸಿ ತೆನ್ನಿರ ಮೈನಾ ಎಂಬುವವರು ಲೋಕಯುಕ್ತಕ್ಕೆ ದೂರು ನೀಡಿದ್ರು. ಇದೀಗ ಲೋಕಾಯುಕ್ತ ಅಧಿಕಾರಿಗಳು ರಾಜಾಸೀಟ್‌ಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

    ಇನ್ನೂ ಉದ್ಘಾಟನೆಯಾಗಿ ವರ್ಷವಾದ್ರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ಮುಗಿಯದ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಹಸ್ತಾಂತರ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರ ಜೊತೆಗೆ ಕಾಮಗಾರಿ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಕಲಿ ಬಿಲ್‌ ಮಾಡಿ ಸರ್ಕಾರದ ಹಣಕ್ಕೆ ದ್ರೋಹ ಮಾಡಿದ್ದಾರೆ ಅನ್ನೋ ಆರೋಪವೂ ಕೇಳಿ ಬರುತ್ತಿದೆ.

    ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರನ್ನು ಕೇಳಿದ್ರೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಈ ಪ್ರಾಜೆಕ್ಟ್ ಹಸ್ತಾಂತರ ಆಗಿಲ್ಲ. ಟೆಂಡರ್ ಪ್ರಕಾರ ಸಾಕಷ್ಟು ಕೆಲಸಗಳು ವಿದ್ಯುತ್ ಕೆಲಸಗಳು ಬಾಕಿ ಇದೆ ಎಂದು ಲೋಕೋಪಯೋಗಿ ಇಲಾಖೆಯಿಂದ ಮಾಹಿತಿ ನೀಡಿದ್ದಾರೆ. ಅಲ್ಲದೇ ಕಾಮಗಾರಿ ಪೂರ್ಣಗೊಂಡಿಲ್ಲ ಹೀಗಾಗಿ ಬೀಲ್ ಗಳು ಬಾಕಿ ಇದೆ. ಈ ಎಲ್ಲಾ ಕೆಲಸ ಪೂರ್ಣಗೊಂಡ ಬಳಿಕ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

  • ರಾಜ್ಯದ ಪ್ರವಾಸಿ ತಾಣಗಳಲ್ಲಿ ಜನಸಾಗರ – ಕೊರೊನಾ ಲೆಕ್ಕಿಸದೆ ಜನರ ಮೋಜು ಮಸ್ತಿ

    ರಾಜ್ಯದ ಪ್ರವಾಸಿ ತಾಣಗಳಲ್ಲಿ ಜನಸಾಗರ – ಕೊರೊನಾ ಲೆಕ್ಕಿಸದೆ ಜನರ ಮೋಜು ಮಸ್ತಿ

    – ಮಡಿಕೇರಿಯ ರಾಜಾಸೀಟ್‍ನಲ್ಲಿ ಗಿಜಿಗಿಜಿ

    ಬೆಂಗಳೂರು/ಮಡಿಕೇರಿ: ಲಾಕ್‍ಡೌನ್ ಬಳಿಕ ಆಮೆ ನಡಿಗೆಯಲ್ಲಿ ಸಾಗುತ್ತಿದ್ದ ಪ್ರವಾಸೋದ್ಯಮ ವರ್ಷಾಂತ್ಯಕ್ಕೆ ಚೇತರಿಸಿಕೊಳ್ಳುತ್ತಿದೆ. ಕ್ರಿಸ್‍ಮಸ್ ಸೇರಿದಂತೆ ಸಾಲು ಸಾಲು ರಜೆಗಳಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳೆಲ್ಲ ಭರ್ತಿಯಾಗಿವೆ.

    ಬೀಚ್‍ಗಳು, ನದಿಗಳು, ದೇವಸ್ಥಾನಗಳಲ್ಲಿ ಪ್ರವಾಸಿಗರು ತುಂಬಿ ತುಳುಕಿದ್ದಾರೆ. ಉಡುಪಿಯ ಮಲ್ಪೆ ಬೀಚ್, ಮಂಗಳೂರಿನ ಪಣಂಬೂರು ಬೀಚ್, ಶ್ರೀರಂಗಪಟ್ಟಣದ ಕಾವೇರಿ ತಟ, ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಜನ ಜಂಗುಳಿ ಇತ್ತು. ಯಾರೊಬ್ಬರೂ ಕೊರೋನಾ ರೂಲ್ಸ್ ಫಾಲೋ ಮಾಡಿಲ್ಲ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಕೊರೊನಾ ರೂಪಾಂತರಿ ಅಲೆಯ ಮಧ್ಯೆ ಸಾಮಾಜಿಕ ಅಂತರವನ್ನು ಪ್ರವಾಸಿಗರು ಮರೆತಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕವನ್ನು ಮೂಡಿಸಿದೆ. ಕೈ ತುಂಬಾ ಹಣ, ಒಂದೆರಡು ದಿನಗಳ ಪ್ರವಾಸ ಅಂದುಕೊಂಡು ಆಲೋಚಿಸುವವರಿಗೆ ಮಲೆನಾಡು ಜಿಲ್ಲೆಗಳು ಅದರಲ್ಲೂ ಮಂಜಿನ ನಗರಿ ಕೊಡಗು ನೆನಪಾಗುತ್ತೆ. ಇಲ್ಲಿನ ಪ್ರವಾಸಿ ತಾಣಗಳು ಹಾಗೂ ಪರಿಸರ ಎಲ್ಲರನ್ನೂ ಆಕರ್ಷಿಸುವುದು ಸಹಜ.

    ಕೊರೊನಾ ಆತಂಕದಿಂದ ಲಾಕ್‍ಡೌನ್ ಘೋಷಿಸಿದರಿಂದ ಕಳೆದ 8 ತಿಂಗಳಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕುಂಟುತ್ತಾ ಸಾಗಿತ್ತು. ಪ್ರವಾಸೋದ್ಯಮದ ಉತ್ತೇಜನಕ್ಕೆ ಇಲಾಖೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಅಷ್ಟು ಪರಿಣಾಮಕಾರಿ ಆಗಿರಲಿಲ್ಲ. ಆದರೆ ಹೊಸ ವರ್ಷದ ಆಚರಣೆಗೆ ಕೆಲವೇ ದಿನಗಳಿರುವುದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ರಾಜಾಸೀಟ್, ಅಬ್ಬಿಫಾಲ್ಸ್, ಕಾವೇರಿ ನಿಸರ್ಗಧಾಮ, ದುಬಾರೆ, ಭಾಗಮಂಡಲ, ತಲಕಾವೇರಿ ಹೀಗೆ ಎಲ್ಲೆಡೆ ಪ್ರವಾಸಿಗರು ದಿಢೀರನೆ ಕಿಕ್ಕಿರಿದು ಸೇರುತ್ತಿದ್ದಾರೆ.

    ಒಟ್ಟಿನಲ್ಲಿ ಕೊರೊನಾ ಎರಡನೆ ಅಲೆಯಾಗಿ ರೂಪಾಂತರದ ಅರಿವು ಇದ್ದರೂ ಸಾಮಾಜಿಕ ಅಂತರ ಪಾಲಿಸದೆ ಹಾಗೂ ಮಾಸ್ಕ್ ಧರಿಸದೆ ಅಸಡ್ಡೆ ತೋರುತ್ತಿದ್ದಾರೆ.

  • ಯಾಕೆ ಹಾಕಬೇಕು ಮಾಸ್ಕ್? ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿಗರ ಪ್ರಶ್ನೆ

    ಯಾಕೆ ಹಾಕಬೇಕು ಮಾಸ್ಕ್? ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿಗರ ಪ್ರಶ್ನೆ

    ಮಡಿಕೇರಿ: ಕೋವಿಡ್ 19 ನಿಯಂತ್ರಣಕ್ಕೆ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಮಾಸ್ಕ್ ದರಿಸದೇ ಹೋದ್ರೆ 250 ರೂ. ದಂಡ ಕಟ್ಟಬೇಕು ಎಂದು ಕಟ್ಟುನಿಟ್ಟಾಗಿ ಸರ್ಕಾರ ಅದೇಶ ನೀಡಿದೆ. ಜನ ಮಾತ್ರ ಈ ಅದೇಶವನ್ನು ದಿಕ್ಕರಿಸಿ ಕೊರೊನಾ ವೈರಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಪ್ರವಾಸಿತಾಣಗಳಲ್ಲಿ ಓಡಾಡಿಕೊಂಡಿದ್ದಾರೆ.

    ಇಂದು ಪ್ರವಾಸಿಗರ ಸಂಖ್ಯೆ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ. ಮಡಿಕೇರಿ ನಗರದ ರಾಜಾಸೀಟ್ ಬಳಿ ಪ್ರವಾಸಿಗರು ಮಾಸ್ಕ್ ದರಿಸದೇ ಬರುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬರುತ್ತಿದೆ. ಮಾಸ್ಕ್ ಯಾಕೆ ಹಾಕುವುದಿಲ್ಲ ಎಂದು ಪಬ್ಲಿಕ್ ಟಿವಿ ಕೇಳಿದ್ರೆ, ಕೆಲ ಪ್ರವಾಸಿಗರು ಮಾಸ್ಕ್ ಯಾಕೆ ಹಾಕಬೇಕು? ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಕೊರೊನಾ ಬರುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

    ಇನ್ನು ಕೆಲವರು ಪಬ್ಲಿಕ್ ಟಿವಿ ಕ್ಯಾಮೆರಾ ಕಂಡು ಮಾಸ್ಕ್ ಹಾಕುವ ದೃಶ್ಯಗಳು ಕಂಡುಬರುತ್ತಿದೆ. ಅಲ್ಲದೇ ಹೊರ ರಾಜ್ಯದ ಹಾಗೂ ಜಿಲ್ಲೆಯಿಂದ ಅಗಮಿಸುತ್ತಿರುವ ಪ್ರವಾಸಿಗರಿಂದ ಮತ್ತೆ ಕೊಡಗಿನಲ್ಲಿ ಕೊರೊನಾ ಅರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಕೊಡಗಿನ ಜನರು ಮಾಸ್ಕ್ ಹಾಕಿ ಮನೆಯಿಂದ ಹೊರಗೆ ಬರಲು ಭಯ ಪಡುವ ಪರಿಸ್ಥಿತಿ ಇರುವಾಗ ಪ್ರವಾಸಿಗರು ಮಾತ್ರ ಯಾವುದೇ ಅತಂಕ ಇಲ್ಲದೇ ಬರುತ್ತಿರುವುದರಿಂz ಜಿಲ್ಲೆಯ ಜನರು ಮತ್ತಷ್ಟು ಅತಂಕಕ್ಕೆ ಒಳಗಾಗಿದ್ದಾರೆ.

  • ಮೈ ಕೊರೆಯೋ ಚಳಿಯ ವಾತಾವರಣದಲ್ಲಿ ಎಂಜಾಯ್ ಮಾಡ್ತಿರುವ ಪ್ರವಾಸಿಗರು

    ಮೈ ಕೊರೆಯೋ ಚಳಿಯ ವಾತಾವರಣದಲ್ಲಿ ಎಂಜಾಯ್ ಮಾಡ್ತಿರುವ ಪ್ರವಾಸಿಗರು

    ಮಡಿಕೇರಿ: ಮೈ ಕೊರೆಯುವ ಚಳಿಗಾಲ ಬಂದರೆ ಸಾಕು ಮಂಜಿನ ನಗರಿ ಮಡಿಕೇರಿಯಲ್ಲಿ ಜನ ಜಾತ್ರೆಯೇ ಸೇರುತ್ತೆ, ದೇಶದ ನಾನಾ ಭಾಗಗಳಿಂದ ಆಗಮಿಸುವ ಪ್ರವಾಸಿಗರು ಪ್ರಕೃತಿ ಸೌಂದರ್ಯ ಸವಿಯುತ್ತಾ ನಿಸರ್ಗದ ಮಡಿಲಲ್ಲಿ ಮೈ ಮರೆಯುತ್ತಾ ಕಳೆದು ಹೋಗುತ್ತಾರೆ. ಚಳಿಯ ವಾತಾವರಣಕ್ಕೆ ಇದೀಗ ಕಾಫಿನಾಡು ರಂಗೇರಿದ್ದು ಪ್ರವಾಸಿಗರು ಕೊಡಗಿಗೆ ಲಗ್ಗೆಯಿಟ್ಟು ಎಂಜಾಯ್ ಮಾಡ್ತಿದ್ದಾರೆ.

    ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದ್ದು, ಚಳಿಯ ಆಹ್ಲಾದಕಾರ ವಾತಾವರಣವನ್ನು ಸವಿಯಲು ಇದೀಗ ಪ್ರವಾಸಿಗರು ಕೊಡಗಿನತ್ತ ಲಗ್ಗೆ ಹಾಕುತ್ತಿದ್ದಾರೆ. ದೇಶದ ವಿವಿಧೆಡೆಗಳಿಂದ ಆಗಮಿಸಿರುವ ಪ್ರಕೃತಿ ಪ್ರಿಯರು ಕೊಡಗಿನ ಹಿತಕರ ವಾತಾವರಣದಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

    ಸಂಜೆ ಆಗುತ್ತಲೆ ಮಡಿಕೇರಿಯ ರಾಜಾಸೀಟ್ ಜನರಿಂದ ತುಂಬಿ ತುಳುಕುತ್ತೆ. ಪ್ರಕೃತಿ ಸೌಂದರ್ಯ ಸವಿಯುತ್ತಲೆ ಸಂಜೆಯ ಹಿತಕರ ವಾತಾವರಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಬೆಟ್ಟಗುಡ್ಡಗಳ ನಡುವೆ ಕರಗುವ ಕೆಂಪು ಸೂರ್ಯನನ್ನು ಕಣ್ಣು ತುಂಬಿಕೊಂಡು ಮೈ ಮರೆಯುತ್ತಿದ್ದಾರೆ.

    ಸಾಮಾನ್ಯವಾಗಿ ನವೆಂಬರ್-ಡಿಸೆಂಬರ್ ನಲ್ಲಿ ಮಡಿಕೇರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚೆ ಭಾರೀ ಸಂಖ್ಯೆಯ ಜನರು ಕೊಡಗಿನತ್ತ ಆಗಮಿಸಿ ಎಂಜಾಯ್ ಮಾಡುತ್ತಿದ್ದಾರೆ. ವಿಶೇಷವಾಗಿ ರಾಜಾಸೀಟ್ ತುಂಬೆಲ್ಲಾ ಜನ ಸಾಗರವೇ ತುಂಬಿಕೊಂಡಂತೆ ನೆರೆದಿದ್ದ ಜನಸ್ಥೋಮ ರಾಜಾಸೀಟ್‍ನ ಸೂರ್ಯಾಸ್ಥದ ಸವಿಯನ್ನು ಸವಿಯುತ್ತಾ ತಮ್ಮ ಪ್ರವಾಸದ ಕ್ಷಣಗಳನ್ನು ಎಂಜಾಯ್ ಮಾಡಿದರು.

    ನಿಸರ್ಗದ ಸೌಂದರ್ಯವನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆ ಹಿಡಿಯುತ್ತಾ ಖುಷಿಯ ಅಲೆಯಲ್ಲಿ ತೇಲುತ್ತಿದ್ದಾರೆ. ನಿತ್ಯದ ಕಾಯಕ ಮುಗಿಸಿ ಬೆಟ್ಟಗುಡ್ಡಗಳ ಮಡಿಲಲ್ಲಿ ವಿರಮಿಸುವ ನೇಸರನ ಕಂಡು ಜನರು ಖುಷಿಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾ ಚಳಿಯ ವಾತಾವರಣದಲ್ಲಿ ಸಂಭ್ರಮಿಸುತ್ತಿದ್ದಾರೆ.

  • ರಾಜಾಸೀಟ್ ಬಳಿ ಸರ್ಕಾರದಿಂದ ಕೂರ್ಗ್ ವಿಲೇಜ್ ಸ್ಥಾಪನೆ

    ರಾಜಾಸೀಟ್ ಬಳಿ ಸರ್ಕಾರದಿಂದ ಕೂರ್ಗ್ ವಿಲೇಜ್ ಸ್ಥಾಪನೆ

    – ಸರ್ಕಾರದ ನಿರ್ಧಾರಕ್ಕೆ ಪರ, ವಿರೋಧ ಅಭಿಪ್ರಾಯ
    – 15 ಮಳಿಗೆ ನಿರ್ಮಾಣಕ್ಕೆ ಮುಂದಾದ ಪ್ರವಾಸೋದ್ಯಮ ಇಲಾಖೆ

    ಮಡಿಕೇರಿ: ಪ್ರವಾಸಿಗರ ಹಾಟ್ ಸ್ಪಾಟ್ ಮಂಜಿನ ನಗರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ ಬಳಿ ಸರ್ಕಾರ ಕೂರ್ಗ್ ವಿಲೇಜ್ ಸ್ಥಾಪನೆಗೆ ಮುಂದಾಗಿದ್ದು ಇದೀಗ ಸ್ಥಳೀಯವಾಗಿ ಇದಕ್ಕೆ ಪರ-ವಿರೋಧ ಚರ್ಚೆಗಳು ಕೇಳಿಬಂದಿದೆ.

    ಹೌದು. ನಗರದ ಹೃದಯ ಭಾಗದಲ್ಲಿ ಹೆಚ್ಚು ಪ್ರವಾಸಿಗರ ಭೇಟಿ ಕೊಡುವ ರಾಜಾಸೀಟ್ ಬಳಿ ಕುಂದೂರುಮೊಟ್ಟೆ ದೇವಸ್ಥಾನದ ಎದುರು ಇರುವ ತೋಟಗಾರಿಕೆ ಇಲಾಖೆ ಜಾಗದಲ್ಲಿ ಕೂರ್ಗ್ ವಿಲೇಜ್ ನಿರ್ಮಾಣ ಮಾಡಲಾಗುತ್ತಿದೆ. ಇದರ ಕೆಲಸವೂ ಭರದಿಂದ ಸಾಗುತ್ತಿದೆ. ರಸ್ತೆ ಬದಿಯಲ್ಲಿ ಚಿಕ್ಕದಾದ ಕೆರೆಯನ್ನು ಹೊಂದಿರುವ ತೋಟಗಾರಿಕೆ ಇಲಾಖೆ ಜಾಗವು ಇನ್ಮುಂದೆ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆಯಾಗಲಿದೆ.

    ಪ್ರವಾಸೋದ್ಯಮ ಇಲಾಖೆ 98 ಲಕ್ಷ ರೂ. ಅನುದಾನದಲ್ಲಿ ಅಂದಾಜು 15 ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದೊಂದು ಲೂಟಿ ಹೊಡೆಯುವ ಹುನ್ನಾರ ಎಂಬುದು ಪರಿಸರ ಪ್ರಿಯರ ಆಕ್ರೋಶ. ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುತ್ತೇವೆ ಅಂತ ನೈಜ ಪ್ರಾಕೃತಿಕ ಸೌಂದರ್ಯವನ್ನು ಹಾಳು ಮಾಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ಕೆಲವೇ ಜನರ ಹಿತಾಸಕ್ತಿ ಅಡಗಿದೆ. ಅಲ್ಲದೆ ರಾಜಾಸೀಟ್, ಪ್ರಾಚ್ಯವಸ್ತು ಇಲಾಖೆ ಅಡಿಯಲ್ಲಿದ್ದು ಇದರಿಂದ ನೂರು ಅಡಿ ಅಂತರದಲ್ಲಿ ಯಾವುದೇ ಕಟ್ಟಡಗಳ ಕಾಮಗಾರಿ ಮಾಡುವಂತಿಲ್ಲ. ಈ ಎಲ್ಲಾ ನಿಮಯವಗಳನ್ನು ಗಾಳಿಗೆ ತೂರಿ ವಿಲ್ಲಾಗಳನ್ನು ನಿರ್ಮಿಸುತ್ತಿರುವುದು ಯಾರ ಪುರುಷಾರ್ಥಕ್ಕಾಗಿ ಎಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

    ಈ ಪ್ರದೇಶದಲ್ಲಿ ಮೂರು ಕಡೆ ಶಾಪಿಂಗ್ ಕಾಂಪ್ಲೆಕ್ಸ್ ತಲೆಯೆತ್ತಲಿದೆ. ಒಟ್ಟು 15 ಮಳಿಗೆಗಳು ನಿರ್ಮಾಣವಾಗುತ್ತಿವೆ. ಈ ಮಳಿಗೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿ ವಿವಿಧ ಯೋಜನೆಗಳಲ್ಲಿ ತಯಾರಿಸಿದ ವಸ್ತುಗಳು, ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರು ತಯಾರಿಸಿದ ಆಹಾರೋತ್ಪನ್ನಗಳು ಗ್ರಾಹಕರಿಗೆ ಲಭಿಸಲಿವೆ. ಜೊತೆಗೆ ಚಿಕ್ಕದಾದ ಕೆರೆಯಿದ್ದು ಅದನ್ನೂ ಅಭಿವೃದ್ಧಿಪಡಿಸಿ ಪ್ರವಾಸಿ ತಾಣವಾಗಿ ರೂಪಿಸುವ ಆಲೋಚನೆ ಇಲಾಖೆ ಮುಂದಿದೆ. ಇದರಿಂದ ಪ್ರವಾಸೋದ್ಯಮದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಬದಲಾಗಿ ಎರಡು ವರ್ಷಗಳಿಂದ ಪ್ರವಾಹದಿಂದ ಬಿದ್ದು ಹೋಗಿರುವ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಅಂತ ಪ್ರವಾಸೋದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

    ಒಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಜಾಗದಲ್ಲಿ ಕಾಂಪ್ಲೆಕ್ಸ್ ಅಡಿಪಾಯ ಕಾಮಗಾರಿಯೂ ಆರಂಭವಾಗಿದೆ. ಮಳೆಗಾಲ ಆರಂಭಕ್ಕೂ ಮೊದಲೇ ಮಳಿಗೆಗಳನ್ನು ಪ್ರಾರಂಭಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದರೆ, ಪರಿಸರ ಪ್ರೇಮಿಗಳಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಆಗಿರುವ ಅನಾಹುತಗಳೇ ಕಣ್ಮುಂದೆ ಇರುವಾಗ ಇವೆಲ್ಲದರ ಅಗತ್ಯವಿದೆಯೇ ಎನ್ನುವ ಚರ್ಚೆಗಳಿಗೆ ಗ್ರಾಸವಾಗಿದೆ.