Tag: Rajashekhar Patil

  • ಯಾವ ಪಕ್ಷದವರೂ ನಮ್ಮನ್ನ ಖರೀದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ

    ಯಾವ ಪಕ್ಷದವರೂ ನಮ್ಮನ್ನ ಖರೀದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕ

    -ಇದ್ರೂ ಕಾಂಗ್ರೆಸ್, ಸತ್ತರೂ ಕಾಂಗ್ರೆಸ್

    ಬೀದರ್: ಯಾವ ಪಕ್ಷದವರೂ ನಮ್ಮನ್ನು ಖರೀದಿಸಲು ಸಾಧ್ಯವಿಲ್ಲ. ನಾವು ಇದ್ದರೂ ಕಾಂಗ್ರೆಸ್, ಸತ್ತರೂ ಕಾಂಗ್ರೆಸ್ ಎಂದು ಬಸವಕಲ್ಯಾಣದ ಶಾಸಕ ಬಿ.ನಾರಾಯಣ್ ಆಕ್ರೋಶ ಹೊರಹಾಕಿದ್ದಾರೆ.

    ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಜನತೆಯ ಬೆನ್ನಿಗೆ ಚೂರಿ ಹಾಕುವ ಕೆಲಸ ನಾನು ಮಾಡಲ್ಲ. ಅನಾವಶ್ಯಕವಾಗಿ ನಮ್ಮ ಹೆಸರು ಬಳಕೆಯಾಗ್ತಿರೊ ಬಗ್ಗೆ ಮಾಹಿತಿ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಆಶೀರ್ವಾದದಿಂದ ನಾನು ಶಾಸಕನಾಗಿದ್ದೇನೆ. ನಮ್ಮನ್ನು ಖರೀದಿ ಮಾಡೋರು ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ಕಿಡಿ ಕಾರಿದರು.

    ಇನ್ನು ಇದೇ ವೇಳೆ ಮಾತನಾಡಿದ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್, ಸಚಿವರಾಗಿರುವ ರಮೇಶ್ ಜಾರಕಿಹೊಳಿ ನಮ್ಮನ್ನು ಭೇಟಿಯೂ ಆಗಿಲ್ಲ. ಯಾವ ಮಾತುಕತೆ ನಮ್ಮೊಂದಿಗೆ ನಡೆದಿಲ್ಲ. ರಮೇಶ್ ಜಾರಕಿಹೊಳಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿ. ಅಲ್ಲಿ ಇಬ್ಬರಿದ್ದಾರೆ, ಇಲ್ಲಿ ಒಬ್ಬರಿದ್ದಾರೆ ಅಂತಾ ಹೇಳುತ್ತಿದ್ದಾರೆ. ಕಾಂಗ್ರೆಸ್‍ನಿಂದ ನಾನು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷಕ್ಕೆ ನಾವು ನಿಷ್ಠರಾಗಿದ್ದೇವೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದರು.

  • ಮುಜರಾಯಿ ಇಲಾಖೆಗೆ ಇಬ್ಬಿಬ್ರು ಮಿನಿಸ್ಟರ್- ಇಲ್ಲಿ ಇವ್ರದ್ದೇ ಹವಾ!

    ಮುಜರಾಯಿ ಇಲಾಖೆಗೆ ಇಬ್ಬಿಬ್ರು ಮಿನಿಸ್ಟರ್- ಇಲ್ಲಿ ಇವ್ರದ್ದೇ ಹವಾ!

    ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿ ಈಗ ಇಬ್ಬರು ಮಿನಿಸ್ಟರ್. ಕೆಲವೊಮ್ಮೆ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗೆ ನಮ್ ಮಿನಿಸ್ಟರ್ ಯಾರಪ್ಪ ಅನ್ನೋ ಕನ್‍ಫ್ಯೂಶನ್ ಶುರುವಾಗಿದೆ ಎಂದು ಹೇಳಲಾಗುತ್ತಿದೆ.

    ಹೌದು. ಸಚಿವ ರಾಜಶೇಖರ್ ಪಾಟೀಲ್ ಅವರಿಗಿಂತ ಮುಜರಾಯಿ ಇಲಾಖೆಯ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರಂತೆ. ಅಷ್ಟೇ ಅಲ್ಲದೇ ಎಚ್.ಡಿ.ರೇವಣ್ಣ ಮುಜರಾಯಿ ಸಚಿವರಗಿಂತ ಮೊದಲೇ ಅಧಿಕಾರಿಗಳ ಅನೌಪಚಾರಿಕ ಮೀಟಿಂಗ್ ಬೇರೆ ಮಾಡಿದ್ದಾರಂತೆ. ಎಲ್ಲಾ ದೇವಾಲಯದ ಆದಾಯದ ವಿವರ, ಅಲ್ಲಿನ ಅರ್ಚಕರಿಗೆ ಕೊಡುತ್ತಿರುವ ವೇತನದ ಬಗ್ಗೆ ಲಿಸ್ಟ್ ತರುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.

    ಎಲ್ಲ ನಾಯಕರಿಗಿಂತ ಸ್ವಲ್ಪ ಹೆಚ್ಚು ದೈವ ಭಕ್ತರಾಗಿರುವ ರೇವಣ್ಣ, ಕೆಲ ಆಪ್ತ ಮುಜರಾಯಿ ಅರ್ಚಕರ ವೇತನ ಹೆಚ್ಚಿಸಲು ಜೊತೆಗೆ ಹಾಸನ ಕಡೆಯ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಪಡೆಯೋಕೆ ಹೀಗೆಲ್ಲ ಕೆಲಸ ಮಾಡುತ್ತಿದ್ದಾರೆ ಅನ್ನೋ ಗುಸು ಗುಸು ಸುದ್ದಿಯೂ ಹರಿದಾಡುತ್ತಿದೆ. ಎಲ್ಲರ ಲಿಸ್ಟ್ ಹಿಡ್ಕೊಂಡು ಬನ್ನಿ ಮತ್ತೆ ಸಭೆ ಮಾಡ್ತೀನಿ ಅಂತಾ ಅಧಿಕಾರಿಗಳಿಗೆ ಎಚ್.ಡಿ.ರೇವಣ್ಣ ಸೂಚನೆ ನೀಡಿದ್ದಾರೆ ಅಂತ ಮುಜರಾಯಿ ಉನ್ನತ ಇಲಾಖೆಯ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.