Tag: Rajasthan elections

  • ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ 6 ವರ್ಷ ಪಕ್ಷದಿಂದ ಔಟ್

    ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ 6 ವರ್ಷ ಪಕ್ಷದಿಂದ ಔಟ್

    ಜೈಪುರ್: ರಾಜಸ್ಥಾನದ ಮಹಿಳಾ ಘಟಕದ ಉಪಾಧ್ಯಕ್ಷೆಯನ್ನು ಪಕ್ಷದಿಂದ ಆರು ವರ್ಷ ವಜಾಗೊಳಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಸ್ಪರ್ಧಾ ಚೌಧರಿ ಅವರು ಈ ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಮೂಲಕ ಸ್ಪರ್ಧಾ ಚೌದರಿ ಮಹಿಳಾ ಘಟಕದ ಉಪಾಧ್ಯಕ್ಷೆ ಸ್ಥಾನ ಹಾಗೂ ಪಕ್ಷದಿಂದ ವಜಾಗೊಂಡಿದ್ದಾರೆ ಎಂದು ವರದಿಯಾಗಿದೆ.

    ಆಗಿದ್ದೇನು?:
    ಸ್ಪರ್ಧಾ ಚೌದರಿ ಅವರು ಪುಲೇರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮೊದಲ ಪಟ್ಟಿಯಲ್ಲಿಯೇ ವಿದ್ಯಾಧರ್ ಚೌಧರಿ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಇದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೆಹಲಿ ನಿವಾಸದ ಮುಂಭಾಗದಲ್ಲಿ ಇಂದು ಬೆಳಗ್ಗೆ ಚೌಧರಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.

    ಕಾಂಗ್ರೆಸ್‍ನ ರಾಜಸ್ಥಾನ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಅವರು ಟಿಕೆಟ್ ಹಂಚಿಕೆಯಲ್ಲಿ ಹಣ ಪಡೆಯುತ್ತಿದ್ದಾರೆ. ಹೀಗಾಗಿ ನನ್ನನ್ನು ಕಡೆಗಣಿಸಿ ವಿದ್ಯಾಧರ್ ಚೌಧರಿ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದು ಸ್ಪರ್ಧಾ ಚೌಧರಿ ದೂರಿದ್ದರು.

    ಈ ಎಲ್ಲ ಬೆಳವಣಿಗೆಯನ್ನು ಗಮನಿಸಿದ್ದ ರಾಹುಲ್ ಗಾಂಧಿ ಹಾಗೂ ಹೈಕಮಾಡ್ ಸ್ಪರ್ಧಾ ಚೌಧರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ನವೆಂಬರ್ 19ರಂದು ಮುಕ್ತಾಯವಾಗಲಿದೆ. ಕಾಂಗ್ರೆಸ್ 32 ಜನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ವಸುಂದರಾ ರಾಜೇ ಅವರಿಗೆ ಶಾಕ್ ಕೊಟ್ಟು, ಮಾನವೇಂದ್ರ ಅವರನ್ನು ಕಣಕ್ಕೆ ಇಳಿಸಿದೆ. ಡಿಸೆಂಬರ್ 7ರಂದು ಮತದಾನ ನಡೆಯಲಿದ್ದು, ವರ್ಷಾಂತ್ಯದಲ್ಲಿಯೇ ರಾಜಸ್ಥಾನದಲ್ಲಿ ಹೊಸ ಸರ್ಕಾರ ಆಡಳಿತದ ಚುಕ್ಕಾನೆ ಹಿಡಿಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಿಜೆಪಿ ತೊರೆದ ನಾಯಕರೇ ಕಾಂಗ್ರೆಸ್‍ಗೆ ಅಸ್ತ್ರವಾದ್ರು

    ಬಿಜೆಪಿ ತೊರೆದ ನಾಯಕರೇ ಕಾಂಗ್ರೆಸ್‍ಗೆ ಅಸ್ತ್ರವಾದ್ರು

    -ರಾಜಸ್ಥಾನ ಸಿಎಂ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಜಸ್ವಂತ್ ಸಿಂಗ್ ಪುತ್ರ

    ಜೈಪುರ್: ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರನ್ನು ಸೋಲಿಸಲು ಕಾಂಗ್ರೆಸ್ ಪ್ರಬಲ ಅಸ್ತ್ರ ಪ್ರಯೋಗ ಮಾಡಿದ್ದು, ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

    ನಾಮಪತ್ರ ಸಲ್ಲಿಕೆಗೆ ನವೆಂಬರ್ 19 ಕೊನೆಯ ದಿನವಾಗಿದ್ದು, ಇಂದು ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ವಸುಂದರಾ ರಾಜೇ ಅವರಿಗೆ ಶಾಕ್ ಕೊಟ್ಟಿದೆ. ಮುಖ್ಯಮಂತ್ರಿ ವಸುಂದರಾ ರಾಜೇ ಸ್ಪರ್ಧಿಸಿರುವ ಜಲ್ವಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾನವೇಂದ್ರ ಅವರನ್ನು ಕಣಕ್ಕೆ ಇಳಿಸಲಾಗಿದೆ. ಈ ಮೂಲಕ ರಾಜಸ್ಥಾನದ ಬಿಜೆಪಿಯ ಇಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡ ಕಾಂಗ್ರೆಸ್ ನಾಯಕರು ಭಾರೀ ರಣತಂತ್ರ ರೂಪಿಸುತ್ತಿದ್ದಾರೆ.

    ರಜಪೂತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. 2003ರಿಂದಲೂ ವಸುಂಧರಾ ರಾಜೇ ಜಲ್ವಾರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಹೀಗಾಗಿ ಇಂದು ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಈ ರಣತಂತ್ರ ಹೂಡಿದೆ ಎನ್ನಲಾಗಿದೆ.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದ ಸಚಿವರಾಗಿದ್ದ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಕಾಂಗ್ರೆಸ್‍ಗೆ ಸೇರಿದ್ದು, ಕೈ ಪಾಳಯಕ್ಕೆ ಬಲ ಬಂದಂತಾಗಿದೆ. ಮಾನವೇಂದ್ರ ಸಿಂಗ್ ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಬೆನ್ನಲ್ಲೇ ಮಾಜಿ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಸಂಸದ ಹರೀಶ್ ಮೀನಾ ಅವರು ನವೆಂಬರ್ 14ರಂದು ಕಾಂಗ್ರೆಸ್ ಮನೆ ಪ್ರವೇಶ ಮಾಡಿದ್ದರು. ಈ ಭಾರೀ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಲಿವೆ.

    ವಸುಂದರಾ ರಾಜೇ ಪ್ರತಿಕ್ರಿಯೆ:
    ನನ್ನ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ ಸಿಂಗ್ ಅವರನ್ನು ನನ್ನ ವಿರುದ್ಧ ಕಣಕ್ಕಿಳಿಸಿದ್ದಾರೆ ಎಂದು ರಾಜಸ್ಥಾನ ಸಿಎಂ ವಸುಂಧರಾ ರಾಜೇ ಕಿಡಿಕಾರಿದ್ದಾರೆ.

    ಜಲ್ವಾರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಕಾಂಗ್ರೆಸ್‍ನಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆಯಿದೆ. ಇದರಿಂದಾಗಿ ಇಲ್ಲಿಂದ ಹೋದವರಿಗೆ ಟಿಕೆಟ್ ನೀಡಿದ್ದಾರೆ. ನಾವು ಅವರನ್ನು ಇಲ್ಲಿಂದಲೂ ಹೊರ ಹಾಕುತ್ತೇವೆ ಎಂದು ಮಾನವೇಂದ್ರ ಸಿಂಗ್ ವಿರುದ್ಧ ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews