Tag: Rajasthan high court

  • 1988ರ ರೇಪ್ ಕೇಸ್‌ಗೆ ಶಿಕ್ಷೆ ಪ್ರಕಟಿಸಿದ ಸುಪ್ರೀಂ – 53 ವರ್ಷದ ವ್ಯಕ್ತಿ ಈಗ ಬಾಲಾಪರಾಧಿ

    1988ರ ರೇಪ್ ಕೇಸ್‌ಗೆ ಶಿಕ್ಷೆ ಪ್ರಕಟಿಸಿದ ಸುಪ್ರೀಂ – 53 ವರ್ಷದ ವ್ಯಕ್ತಿ ಈಗ ಬಾಲಾಪರಾಧಿ

    ಜೈಪುರ: 37 ವರ್ಷದ ಹಿಂದೆ 11 ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ (Supreme Court) ಇಂದು (ಜು.24) ಶಿಕ್ಷೆ ಪ್ರಕಟಿಸಿದೆ.

    1988ರ ನವೆಂಬರ್‌ನಲ್ಲಿ ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣ ಸಂಬಂಧ ಭಾರತದ ಮುಖ್ಯ ನ್ಯಾ.ಬಿ.ಆರ್. ಗವಾಯಿ ಮತ್ತು ನ್ಯಾ.ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ 53 ವರ್ಷದ ವ್ಯಕ್ತಿಯನ್ನು ಬಾಲಾಪರಾಧಿ ಎಂದು ಘೋಷಿಸಿದೆ.

    ಈ ಕುರಿತು ವಾದ ಮಂಡಿಸಿದ ಆರೋಪಿಯ ಪರ ವಕೀಲರು, 37 ವರ್ಷದ ಹಿಂದೆ ಅತ್ಯಾಚಾರ ನಡೆದಾಗ ವ್ಯಕ್ತಿಯು ಅಪ್ರಾಪ್ತನಾಗಿದ್ದ. ರಾಜಸ್ಥಾನ ಹೈಕೋರ್ಟ್ ಆರೋಪಿಯನ್ನು ಸೆಕ್ಷನ್ 342, ಸೆಕ್ಷನ್ 376 ಅಡಿಯಲ್ಲಿ ಅಪರಾಧಿಯೆಂದು ಘೋಷಿಸಿ, ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು ಎಂದು ತಿಳಿಸಿದ್ದಾರೆ.

    ಬಳಿಕ ಕೋರ್ಟ್, ಅತ್ಯಾಚಾರ ಎಸಗಿದ್ದಾಗ ಅಪ್ರಾಪ್ತನಾಗಿದ್ದ ಅಂಶವನ್ನು ಪರಿಗಣಿಸಿ, ಬಾಲ ನ್ಯಾಯ ಮಂಡಳಿಯು ವ್ಯಕ್ತಿಯನ್ನು ಗರಿಷ್ಠ ಮೂರು ವರ್ಷಗಳ ಕಾಲ ವಿಶೇಷ ಗೃಹಕ್ಕೆ ಕಳುಹಿಸಬಹುದು ಎಂದು ತಿಳಿಸಿದೆ.

  • ಹುಟ್ಟಿನಿಂದ ಸ್ತ್ರೀ, ಬಳಿಕ ಪುರುಷ- ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?

    ಹುಟ್ಟಿನಿಂದ ಸ್ತ್ರೀ, ಬಳಿಕ ಪುರುಷ- ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?

    ಜೈಪುರ್: ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಯ ನಂತರ ದಾಖಲೆಗಳಲ್ಲಿ ಹೆಸರು ಮತ್ತು ಲಿಂಗವನ್ನು ನವೀಕರಿಸಲು ದೈಹಿಕ ಶಿಕ್ಷಣದ ಶಿಕ್ಷಕನಿಗೆ (Physical Training Instructor) ರಾಜಸ್ಥಾನ ಹೈಕೋರ್ಟ್ (Rajasthan High Court) ಅನುಮತಿ ನೀಡಿದೆ. ಅಲ್ಲದೆ ಅರ್ಜಿದಾರರು ತಮ್ಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

    ಒಬ್ಬ ವ್ಯಕ್ತಿಯ ಲಿಂಗದ ಗುರುತನ್ನು (Gender Identity) ಆಯ್ಕೆ ಮಾಡುವ ಹಕ್ಕು ಅವರ ವ್ಯಕ್ತಿತ್ವದ ಅತ್ಯಗತ್ಯ ಭಾಗವಾಗಿದೆ. ಅಲ್ಲದೆ ಅವರ ಸ್ವ ನಿರ್ಣಯ, ಘನತೆ ಮತ್ತು ಮೂಲಭೂತ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯವು ಒತ್ತಿ ಹೇಳಿದೆ. ಅಲ್ಲದೆ ವ್ಯಕ್ತಿಯ ಲೈಂಗಿಕ ದೃಷ್ಟಿಕೋನ ಅಥವಾ ಲಿಂಗದ ಗುರುತಿನ ಆಧಾರದ ಮೇಲೆ ಯಾವುದೇ ತಾರತಮ್ಯವನ್ನು ಮಾಡುವಂತಿಲ್ಲ. ಎಲ್ಲರಿಗೂ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಆನಂದಿಸಲು ಹಕ್ಕಿದೆ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಧಂಡ್ ತೀರ್ಪಿನ ವೇಳೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ಏನಿದು ಪ್ರಕರಣ?: ಹುಟ್ಟಿನಿಂದ ಹೆಣ್ಣು ಎಂದು ಗುರುತಿಸಲಾಗಿದ್ದ ವ್ಯಕ್ತಿಯೊಬ್ಬರು ಮಹಿಳಾ ವರ್ಗದಲ್ಲಿ ದೈಹಿಕ ತರಬೇತಿ ಬೋಧಕರಾಗಿ ನೇಮಕಗೊಂಡಿದ್ದರು. 32 ನೇ ವಯಸ್ಸಿನಲ್ಲಿ ಲಿಂಗದ ಗುರುತಿನಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ನಂತರ ಲಿಂಗ ಮರುವಿನ್ಯಾಸ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷರಾಗಿ ಬದಲಾದರು. ಈ ಬಗ್ಗೆ ಅವರು ವೈದ್ಯರ ದೃಢೀಕರಣವನ್ನು ಪಡೆದಿದ್ದಾರೆ. ಬಳಿಕ ಅವರು ಆಧಾರ್ ಕಾರ್ಡ್‍ನಲ್ಲಿ (Aadhar Card) ತಮ್ಮ ಹೆಸರನ್ನು ಹಾಗೂ ಲಿಂಗವನ್ನು ಕಾನೂನುಬದ್ಧವಾಗಿ ಬದಲಾಯಿಸಿದ್ದಾರೆ. ಅಲ್ಲದೆ ಅರ್ಜಿದಾರರು ಮದುವೆಯಾಗಿ ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ. ಆದರೆ ಮೂರು ವರ್ಷಗಳಿಂದ ಸೇವಾ ದಾಖಲೆಯಲ್ಲಿ ಹೆಸರು ಮತ್ತು ಲಿಂಗ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಇದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

  • ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪೈಲಟ್- ಮತ್ತೆ ಸ್ಪೀಕರ್ ಅಧಿಕಾರದ ಕುರಿತು ಚರ್ಚೆ

    ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪೈಲಟ್- ಮತ್ತೆ ಸ್ಪೀಕರ್ ಅಧಿಕಾರದ ಕುರಿತು ಚರ್ಚೆ

    ಜೈಪುರ: ರಾಜಸ್ಥಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಮತ್ತೊಮ್ಮೆ ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಅವರ ಅಧಿಕಾರದ ಮೇಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿದ್ದ ಕಾರಣ ಸ್ಪೀಕರ್ ನೀಡಿದ್ದ ಅನರ್ಹತೆ ನೋಟಿಸ್ ವಿರುದ್ಧ ಮಾಜಿ ಡಿಸಿಎಂ ಸಚಿನ್ ಪೈಲಟ್ ಹಾಗೂ 18 ಶಾಸಕರು ರಾಜಸ್ಥಾನ ಹೈ ಕೋರ್ಟ್ ಮೇಟ್ಟಿಲೇರಿದ್ದಾರೆ.

    ಸ್ಪೀಕರ್ ನೀಡಿರುವ ನೋಟಿಸ್ ವಿರುದ್ಧ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿರುವ ಶಾಸಕರು, ಕೇವಲ ವಿಧಾನಸಭಾ ಅಧಿವೇಶನಕ್ಕೆ ಮಾತ್ರ ವಿಪ್ ಅನ್ವಯವಾಗುತ್ತದೆ. ಆದರೆ ಒತ್ತಡದ ಹಿನ್ನೆಲೆಯಲ್ಲಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ಇತ್ತ ಸಚಿನ್ ಬೆಂಬಲಿತ ಶಾಸಕ ಪೃಥ್ವಿರಾಜ್ ಮೀನಾ ಹೈಕೋರ್ಟಿನಲ್ಲಿ ಸ್ಪೀಕರ್ ನಡೆ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲರಾದ ಹರೀಶ್ ಸಾಳ್ವೆ ಹಾಗೂ ಮುಕುಲ್ ರೊಹ್ಟಗಿ ಅವರು ಪೈಲಟರ್ ಪರ ವಾದ ಮಂಡಿಸಲಿದ್ದಾರೆ. ಇತ್ತ ರಾಜಸ್ಥಾನ ಸ್ಪೀಕರ್ ಪರ ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.


    ಸದ್ಯ ಹೈ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದು, ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ತಿದ್ದುಪಡಿ ಮಾಡಲು ಸಮಯ ಕೋರಿದ್ದಾರೆ. ನ್ಯಾಯಾಲಯ ಅವರಿಗೆ ಸಮಯ ನೀಡಿದೆ. ತಿದ್ದುಪಡಿ ಅರ್ಜಿ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ ಎಂದು ವಕೀಲ ಅಭಯ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

    ಅನರ್ಹತೆ ಮಾಡಲು ಸಾಧ್ಯವೇ?
    ಈ ಹಿಂದೆ ಸ್ಪೀಕರ್ ಅಧಿಕಾರದ ಮೇಲೆ ಹಲವು ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. ಆದರೆ ಸದನದ ಕಲಾಪಕ್ಕೆ ಮಾತ್ರ ವಿಪ್ ಅನ್ವಯವಾಗುತ್ತದೋ ಇಲ್ಲವೋ ಎನ್ನುವುದು ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಕರ್ನಾಟಕ ಪ್ರಕರಣದಲ್ಲಿ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿದ 17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ಕ್ರಮ ಸರಿ ಎಂದು ತೀರ್ಪು ನೀಡಿತ್ತು. ಆದರೆ ಸ್ಪೀಕರ್ 5 ವರ್ಷಗಳ ಕಾಲ ಅಂದರೆ 2023ರವರೆಗೆ ವಿಧಾನಸಭೆಯಿಂದ ಅನರ್ಹಗೊಳಿಸಿದ್ದು ಸರಿಯಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿತ್ತು. ತೀರ್ಪಿನಲ್ಲಿ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ಅನರ್ಹಗೊಂಡ ಶಾಸಕರು ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು.

    ರಾಜಸ್ಥಾನದಲ್ಲಿ ಶಾಸಕರು ರಾಜೀನಾಮೆಯೇ ನೀಡಿಲ್ಲ. ಜೊತೆಗೆ ವಿಧಾನಸಭಾ ಕಲಾಪವೇ ನಡೆದಿಲ್ಲ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ವಿಪ್ ಜಾರಿಗೊಳಿಸಲಾಗಿತ್ತು. ಶಾಸಕಾಂಗ ಸಭೆಗೆ ವಿಪ್ ಅನ್ವಯವಾಗುತ್ತದೋ ಇಲ್ಲವೋ ಎನ್ನುವುದು ಇಲ್ಲಿ ಎದ್ದಿರುವ ದೊಡ್ಡ ಪ್ರಶ್ನೆ. ಸ್ಪೀಕರ್ ತಮಗೆ ಸಿಕ್ಕಿರುವ ಅಧಿಕಾರದ ಹಿನ್ನೆಲೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಅನರ್ಹಗೊಳಿಸಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಹೈಕೋರ್ಟ್ ಹೇಗೆ ಸ್ವೀಕರಿಸುತ್ತದೆ ಎಂಬ ಕುತೂಹಲ ಮೂಡಿದೆ.

    ಪೈಲಟ್ ಜೊತೆ ಶಾಸಕರು ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಅವರ ವಾಟ್ಸಪ್, ಇಮೇಲ್‍ಗೆ ಸಂದೇಶ ಕಳುಹಿಸಲಾಗಿತ್ತು. ಅಷ್ಟೇ ಅಲ್ಲದೇ ಶಾಸಕರ ಮನೆಯ ಮುಂದೆ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಮಾಹಿತಿಯನ್ನು ನೀಡಲಾಗಿತ್ತು.

  • ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.

    ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.

    ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಹೇಳಿದೆ.

    ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

    https://twitter.com/mayhempsingh/status/869827993618665472