Tag: rajasthana

  • ವಿದ್ಯಾರ್ಥಿನಿಯನ್ನ ಮದ್ವೆಯಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಶಿಕ್ಷಕಿ

    ವಿದ್ಯಾರ್ಥಿನಿಯನ್ನ ಮದ್ವೆಯಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಶಿಕ್ಷಕಿ

    ಜೈಪುರ: ಪ್ರೀತಿ (Love) ಅನ್ನೋದೇ ಮಾಯೆ ಅದು ಯಾರನ್ನು ಹೇಗೆ ಬೇಕಾದರೂ ಬದಲಾಯಿಸುತ್ತದೆ ಎಂಬ ಮಾತನ್ನು ನಾವು ಕೇಳುತ್ತಲೇ ಇದ್ದೇವೆ. ಅದಕ್ಕೆ ಅನೇಕ ನಿದರ್ಶನಗಳನ್ನು ನೋಡುತ್ತಲೇ ಇದ್ದೇವೆ.

    ಪ್ರೀತಿ ಎಂದಾಕ್ಷಣ ಅದೆಷ್ಟೋ ಸಿನಿಮಾ ಕಥೆಗಳು (Cinema Story) ಕಣ್ಣ ಮುಂದೆ ಹಾದು ಹೋಗುತ್ತವೆ. ಮೈ ಕೊರೆಯುವ ಚಳಿಗೆ ಬೆಚ್ಚನೆಯ ಅಪ್ಪುಗೆ ಬೇಕೆನ್ನಿಸುತ್ತದೆ. ಆದ್ದರಿಂದಲೇ ಪ್ರೀತಿಗೆ ಕಣ್ಣಿಲ್ಲ ಎಂದೂ ಹೇಳುತ್ತಾರೆ. ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಇದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಯುವತಿಯರ ಗುದ್ದಾಟ – ಜುಟ್ಟು ಹಿಡಿದು ಒಬ್ಬಳ ಮೇಲೆ ಎರಗಿದ ನಾಲ್ವರು

    ಹೌದು. ರಾಜಸ್ಥಾನದ (Rajasthana) ಭರತ್‌ಪುರದ ಶಿಕ್ಷಕರೊಬ್ಬರು ತಾನು ಪುರುಷನಾಗಲು ಹಾಗೂ ತನ್ನ ವಿದ್ಯಾರ್ಥಿನಿಯನ್ನು (Student) ಮದುವೆಯಾಗಬೇಕೆಂಬ ಹಂಬಲದಿಂದ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ (Gender Change Surgery) ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ – ಪೋಸ್ಟರ್ ಹಾಕಿ ಬಿಜೆಪಿ ಪ್ರತಿಭಟನೆ

    ಈ ಬಗ್ಗೆ ಪುರಷನಾಗಿ ಬದಲಾಗಿರುವ ಶಿಕ್ಷಕ (Teacher) ಆರವ್ ಕುಂತಲ್ ತಾವೇ ಹೇಳಿಕೊಂಡಿದ್ದಾರೆ. ನಾನೂ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬಯಸಿದ್ದೆ. 2019ರ ಡಿಸೆಂಬರ್‌ನಲ್ಲಿ ನನ್ನ ಮೊದಲ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡೆ. ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಾಯಿತು ಎಂದು ಹೇಳಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ತನ್ನ ವಿದ್ಯಾರ್ಥಿಯನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ (Marriage).

    ಇನ್ನೂ ಪುರುಷನಾಗಿ ಬದಲಾದ ಶಿಕ್ಷಕನನ್ನು ಮದುವೆಯಾದ ಯುವತಿ ಪ್ರತಿಕ್ರಿಯಿಸಿ, ನಾನು ಮೊದಲಿನಿಂದಲೂ ಅವರನ್ನು ಪ್ರೀತಿಸುತ್ತಿದ್ದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಾಗ ನಾನೂ ಅವರೊಂದಿಗೆ ಇದ್ದೆ. ಈ ಸರ್ಜರಿ ಮಾಡಿಸಿಕೊಳ್ಳದೇ ಇದ್ದಿದ್ದರೂ ನಾನು ಅವರನ್ನು ಮದುವೆಯಾಗುತ್ತಿದ್ದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಠಾಣೆಯ ಸಮೀಪದಲ್ಲೇ ಸಾಮೂಹಿಕ ಅತ್ಯಾಚಾರ

    ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಠಾಣೆಯ ಸಮೀಪದಲ್ಲೇ ಸಾಮೂಹಿಕ ಅತ್ಯಾಚಾರ

    ಜೈಪುರ: ಪೊಲೀಸ್ ಠಾಣೆಯಿಂದ 200 ಮೀಟರ್ ದೂರದಲ್ಲೇ ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೃದಯ ವಿದ್ರಾವಕ ಘಟನೆ ರಾಜಾಸ್ಥಾನದ ಜೈಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

    ರಾತ್ರಿ 10 ರಿಂದ 12 ಗಂಟೆಯ ನಡುವೆ 35 ವರ್ಷದ ಮಹಿಳೆ ತನ್ನ ಪತ್ನಿಯೊಂದಿಗೆ ದೆಹಲಿಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಐವರು ಅತ್ಯಾಚಾರ ಎಸಗಿದ್ದಾರೆ. ಘಟನೆ ಬಳಿಕ ಮಹಿಳೆ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾಕ್ ಬೆಂಬಲಕ್ಕೆ ಸೌದಿ ಅರೇಬಿಯಾ – 8 ಸಾವಿರ ಕೋಟಿ ಹೂಡಿಕೆ ಮಾಡೋದಾಗಿ ಘೋಷಣೆ

    STOP RAPE

    ಘಟನೆ ನಡೆದಿದ್ದು ಹೇಗೆ?
    ಜೈಪುರ ರೈಲ್ವೆ ಜಂಕ್ಷನ್‌ನಲ್ಲಿ ದೆಹಲಿಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದರು. ದೆಹಲಿಯಿಂದ ತ್ರಿಪುರಾಗೆ ಮತ್ತೊಂದು ರೈಲಿನಲ್ಲಿ ತೆರಳಬೇಕಿತ್ತು. ಪತಿ ಕುಡಿದ ಅಮಲಿನಲ್ಲಿದ್ದ. ಈ ವೇಳೆ ಹಸಿವಿನಲ್ಲಿದ್ದ ಮಹಿಳೆ ರೆಸ್ಟೋರೆಂಟ್‌ನಲ್ಲಿ ಆಹಾರ ತೆಗೆದುಕೊಳ್ಳಲು ಹೋಗಿದ್ದಳು. ಅಲ್ಲಿಂದ ವಾಪಸ್ ಬರುವಾಗ ಐವರು ಯುವಕರು ರೈಲ್ವೆ ಜಂಕ್ಷನ್ ಬಳಿ ಡ್ರಾಪ್ ಮಾಡುವುದಾಗಿ ಹೇಳಿದ್ದಾರೆ. ಆದರೆ ಆಕೆ ಒಪ್ಪದೇ ಇದ್ದಾಗ ಆಕೆಯ ಬಾಯಿ ಬಿಗಿದು, ಅಪಹರಿಸಿ ರೈಲಿನ ಬೇಲಿಯಿಂದ ಅಳಿಯ ಪಕ್ಕಕ್ಕೆ ಎಸೆದಿದ್ದಾರೆ. ನಂತರ ಅತ್ಯಾಚಾರ ಎಸಗಿ, ಕಾಮುಕರು ಪರಾರಿಯಾಗಿದ್ದಾರೆ ಎಂದು ಜಿಆರ್‌ಪಿ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶನ್ ಸಿಂಗ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಮುನಿಸು – 80 ಅಡಿ ಎತ್ತರದ ತಾಳೆ ಮರದಲ್ಲಿ 1 ತಿಂಗಳು ಕಳೆದ ವ್ಯಕ್ತಿ

    ಇದು ಜೈಪುರದ ಜಿಪಿಆರ್ ಠಾಣೆಯ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲೇ ನಡೆದಿದೆ. ಮಹಿಳೆ ಘಟನೆಯ ಬಗ್ಗೆ ಪತಿಗೆ ತಿಳಿಸಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈ ವ್ಯಕ್ತಿಯ ದೇಹದೊಳಗಿದ್ದ 75 ಗುಂಡುಸೂಜಿಗಳನ್ನ ನೋಡಿ ವೈದ್ಯರೇ ಶಾಕ್ ಆದ್ರು!

    ಈ ವ್ಯಕ್ತಿಯ ದೇಹದೊಳಗಿದ್ದ 75 ಗುಂಡುಸೂಜಿಗಳನ್ನ ನೋಡಿ ವೈದ್ಯರೇ ಶಾಕ್ ಆದ್ರು!

    ಜೈಪುರ್: ಊಟ ಮಾಡ್ಬೇಕಾದ್ರೆ ಅನ್ನ ಗಂಟಲಲ್ಲಿ ಸಿಕ್ಕಿಕೊಂಡ್ರೆ ಜೀವ ಹೋದಂಗೆ ಆಗುತ್ತೆ. ಅಂಥದ್ರಲ್ಲಿ ಗಂಟಲಲ್ಲಿ ಗುಂಡುಸೂಜಿ ಸಿಕ್ಕಾಕ್ಕೊಂಡ್ರೆ ಏನಾಗ್ಬೇಡ. ಆದ್ರೆ ಬರೋಬ್ಬರಿ 40 ಗುಂಡುಸೂಜಿಗಳು ರಾಜಸ್ಥಾನದ ವ್ಯಕ್ತಿಯೊಬ್ಬರ ಗಂಟಲಲ್ಲೇ ಇತ್ತು ಅಂದ್ರೆ ನೀವು ನಂಬಲೇಬೇಕು.

    ಹೌದು. ರಾಜಸ್ಥಾನ ಮೂಲದ ರೈಲ್ವೆ ನೌಕರರಾದ 56 ವರ್ಷದ ಬದ್ರಿಲಾಲ್ ಮೀನಾ ಎಂಬ ವ್ಯಕ್ತಿ ಫೆಬ್ರವರಿ ತಿಂಗಳಲ್ಲಿ ಕಾಲುಬೆರಳಿನ ಸೋಂಕಿನಿಂದ ಆಸ್ಪತ್ರೆಗೆ ತೆರಳಿದ್ದರು. ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ನಂತರ ನನ್ನ ಕಾಯಿಲೆ ಗುಣವಾಯಿತು ಅಂದುಕೊಂಡಿದ್ರು. ಆದ್ರೆ ಏಪ್ರಿಲ್‍ನಲ್ಲಿ ವೈದ್ಯರು ಬದ್ರಿಲಾಲ್ ಅವರ ಎಕ್ಸ್ ರೇ ತೆಗೆದಾಗ ದೊಡ್ಡ ಶಾಕ್ ಕಾದಿತ್ತು. ಬದ್ರಿಲಾಲ್ ಅವರ ದೇಹಲ್ಲಿ ಒಟ್ಟು 75 ಪಿನ್(ಗುಂಡುಸೂಜಿ) ಗಳಿರುವುದು ಪತ್ತೆಯಾಗಿತ್ತು. ಆದ್ರೆ ಈ ಪಿನ್‍ಗಳು ಹೇಗೆ ಅವರ ದೇಹದೊಳಗೆ ಹೊಕ್ಕಿದೆ ಎಂಬುವುದು ಮಾತ್ರ ತಿಳಿದಿಲ್ಲ.

    ಈ ಬಗ್ಗೆ ಆತಂಕಗೊಂಡ ಬದ್ರಿಲಾಲ್ ಕುಟುಂಬ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದರು. ರೈಲ್ವೆ ಸಿಬ್ಬಂದಿಯಾಗಿರೋದ್ರಿಂದ ಕೊನೆಗೆ ಬದ್ರಿಲಾಲ್ ಅವರಿಗೆ ಮುಂಬೈ ರೈಲ್ವೇ ಆಸ್ಪತ್ರೆಗೆ ಗೊತ್ತು ಮಾಡಿದ್ರು. ಅಂತೆಯೇ ಏಪ್ರಿಲ್ 24 ರಂದು ಮುಂಬೈನಲ್ಲಿರೋ ಜಗಜೀವನ್ ರಾಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮತ್ತೆ ಎಕ್ಸ್ ರೇ ತೆಗೆಸಿದ್ರು. ಈ ವೇಳೆ ಬದ್ರಿಲಾಲ್ ಅವರ ಗಂಟಲಲ್ಲಿ 40, ಬಲಗಾಲಿನಲ್ಲಿ 25, ಎರಡೂ ಕೈಗಳಲ್ಲಿ 2, ಹೀಗೆ ದೇಹದೊಳಗೆ ಒಟ್ಟು 75 ಗುಂಡು ಸೂಜಿಗಳಿರುವುದು ಬೆಳಕಿಗೆ ಬಂದಿತ್ತು.

    ಬದ್ರಿಲಾಲ್ ಅವರು ಕಾಲಿನಲ್ಲಿ ನೋವಿರುವ ಬಗ್ಗೆ 4 ತಿಂಗಳಿನಿಂದ ಹೇಳುತ್ತಿದ್ದರು. ನಂತರ ರಾಜಸ್ಥಾನದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಾದ ದೇಹದಲ್ಲಿ ಗುಂಡುಸೂಜಿಗಳಿರುವ ಬಗ್ಗೆ ಗೊತ್ತಾಯಿತು. ಚಿತ್ರಗಳನ್ನ ನೋಡಿ ನಮಗೆ ಭಯವಾಯ್ತು. ಪಿನ್‍ಗಳು ಹೇಗೆ ಅವರ ದೇಹದೊಳಗೆ ಹೋದವು ಎಂಬುದು ಗೊತ್ತಿಲ್ಲ. ನಾವು ಅವರನ್ನ ಹಲವು ಬಾರಿ ಈ ಬಗ್ಗೆ ಕೇಳಿದೆವು. ಆದ್ರೆ ಅವರಿಗೆ ಅದರ ನೆನಪಿಲ್ಲ ಎಂದು ಬದ್ರಿಲಾಲ್ ಅವರ ಮಗ ರಾಜೇಂದ್ರ ಹೇಳಿದ್ದಾರೆ.

    ವೈದ್ಯರು ಏನು ಹೇಳಿದ್ರು?: ಅಚ್ಚರಿಯೆಂಬಂತೆ ಬದ್ರಿಲಾಲ್ ಅವರ ದೇಹದೊಳಗಿರುವ ಗುಂಡುಸೂಜಿಗಳಿಂದ ಅವರಿಗೆ ಯಾವುದೇ ಅಪಾಯವಾಗಿಲ್ಲ. ಜಾಗೃತ ಮನಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಇಷ್ಟೊಂದು ಪಿನ್‍ಗಳನ್ನ ನುಂಗುವುದು ಸಾಧ್ಯವೇ ಇಲ್ಲ. ಪಿನ್ ಹೊರತೆಗೆಯಲು ಆಪರೇಷನ್ ಮಾಡಬೇಕು. ಆದ್ರೆ ಇವರಿಗೆ ಸಕ್ಕರೆ ಕಾಯಿಲೆ ಇರೋದ್ರಿಂದ ಮತ್ತೊಂದು ಆಪರೇಷನ್ ಮಾಡೋದು ಸ್ವಲ್ಪ ಕಷ್ಟವಾಗಬಹುದು. ಇವರ ದೇಹದ ಸ್ಥಿತಿ ಬಗ್ಗೆ ನಿರ್ದಿಷ್ಟವಾಗಿ ತಿಳಿಯಲು ಇಎನ್‍ಟಿ ಪರೀಕ್ಷೆಗಾಗಿ ನಾಯರ್ ಆಸ್ಪತ್ರೆಗೆ ಕಳಿಸಿದ್ದೇವೆ. ಮುಂದಿನ ಚಿಕಿತ್ಸೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಜಗಜೀವನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

    ಅಲ್ಲದೇ ಕಳೆದ 5 ದಿನಗಳಿಂದ ಅಪ್ಪನ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದೇವೆ. ಆದ್ರೆ ಅವರ ಚಿಕಿತ್ಸೆಗೆ ವೈದ್ಯರು ಇನ್ನೂ ನಿರ್ದಿಷ್ಟವಾಗಿ ಯೋಜನೆ ಮಾಡಿಲ್ಲ. ಎರಡು ದಿನಗಳ ಹಿಂದೆ ನನ್ನ ತಂದೆ ಮಾತನಾಡುತ್ತಿದ್ರು. ಈಗ ಗಂಟಲು ನೋವಿನಿಂದ ಆಹಾರ ಸೇವನೆ, ನೀರು ಕುಡಿಯುವುದು ಕೂಡ ನಿಲ್ಲಿಸಿದ್ದಾರೆ. ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ ಅಂತಾ ರಾಜೇಂದ್ರ ಆರೋಪಿಸಿದ್ದಾರೆ.

    ಬದ್ರಿಲಾಲ್ ಮೀನಾ ಮಗ ರಾಜೇಂದ್ರ