Tag: Rajat patidar

  • 18 ವರ್ಷ, 18 ಆವೃತ್ತಿ, ನಂ.18 ಜೆರ್ಸಿ – ಹೇಗಿದೆ ಆರ್‌ಸಿಬಿಯ ರೋಚಕ ಇತಿಹಾಸ..?

    18 ವರ್ಷ, 18 ಆವೃತ್ತಿ, ನಂ.18 ಜೆರ್ಸಿ – ಹೇಗಿದೆ ಆರ್‌ಸಿಬಿಯ ರೋಚಕ ಇತಿಹಾಸ..?

    ಅಹಮದಾಬಾದ್‌: ಕೋಟ್ಯಂತರ ಅಭಿಮಾನಿಗಳ (RCB Fans) ಪ್ರಾರ್ಥನೆ ಕೊನೆಗೂ ನೆರವೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್‌ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ. 17 ವರ್ಷಮ, 6,256 ದಿನಗಳು, 90,08,640 ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿದ್ದು, ಇತಿಹಾಸ ಪುಟ ಸೇರಿಕೊಂಡಿದೆ. ಹಾಗಿದ್ರೆ, ಕಳೆದ 17 ಆವೃತ್ತಿಗಳಲ್ಲಿ ಕಂಡ ಏಳು ಬೀಳಿನ ಕಥೆಯನ್ನು ನೋಡೋಣ….

    ಚೊಚ್ಚಲ ಆವೃತ್ತಿಯಲ್ಲಿ ಹೀನಾಯ ಸೋಲು:
    2008ರ ಚೊಚ್ಚಲ ಐಪಿಎಲ್ (IPL 2025) ಆವೃತ್ತಿಯಲ್ಲಿ 8 ತಂಡಗಳು ಮಾತ್ರ ಭಾಗವಹಿಸಿದ್ದವು. ರಾಜಸ್ಥಾನ್ ರಾಯಲ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆಗ ವಿಜಯ್ ಮಲ್ಯಾ ಮಾಲೀಕತ್ವದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದು, ಲೀಗ್ ಸುತ್ತಿನಲ್ಲೇ ಹೊರಬಿದ್ದಿತ್ತು. ಚುಟುಕು ಕ್ರಿಕೆಟ್‌ಗೆ ಆಗಷ್ಟೇ ಚಾಲನೆ ಸಿಕ್ಕಿದ್ದರಿಂದ ಆರ್‌ಸಿಬಿ ಅಷ್ಟೇನು ಜನಪ್ರಿಯತೆ ಗಳಿಸಿರಲಿಲ್ಲ.

    ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು.

    3ನೇ ಸ್ಥಾನಕ್ಕೆ ತೃಪ್ತಿ
    2010ರ ಐಪಿಎಲ್ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜನಪ್ರಿಯತೆ ಗಳಿಸಿತ್ತು. ಈ ಆವೃತ್ತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಿದ್ರೂ, ಮೊದಲ ಸೆಮಿಫೈನಲ್‌ನಲ್ಲೇ ಮುಂಬೈ ಇಂಡಿಯನ್ಸ್ ವಿರುದ್ಧ 35 ರನ್‌ಗಳ ಅಂತರದಿಂದ ಹೀನಾಯವಾಗಿ ಸೋತಿತ್ತು. ಆದ್ರೆ ಡೆಲ್ಲಿ ವಿರುದ್ಧ ಗೆದ್ದು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

    ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

    ಆರ್‌ಸಿಬಿ ಪಾಲಿಗೆ ಕಹಿ:
    2012ರ ಐಪಿಎಲ್ ಆವೃತ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಅಭಿಮಾನಿಗಳ ಪಾಲಿಗೆ ಕಹಿಯಾಗಿತ್ತು. ಏಕೆಂದರೆ ಈ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿತ್ತು. 16 ಪಂದ್ಯಗಳಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ತಲಾ 8 ಪಂದ್ಯ ಗೆದ್ದು 17 ಅಂಕ ಪಡೆದುಕೊಂಡಿದ್ದವು. ಆದ್ರೆ ನೆಟ್‌ರನ್‌ರೇಟ್ ಕೊರತೆಯಿಂದ ಆರ್‌ಸಿಬಿ ಪ್ಲೇ ಆಫ್‌ನಿಂದ ಹೊರಗುಳಿಯಿತು. ಚೆನ್ನೈಗೆ ಗಿಫ್ಟ್ ಸಿಕ್ಕಿತು. ಆದ್ರೆ ಫೈನಲ್ಲಿ ಕೆಕೆಆರ್ ಸಿಎಸ್‌ಕೆ ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.

    ಲೀಗ್‌ನಲ್ಲೇ ಹೊರಬಿದ್ದ ಬೆಂಗಳೂರು ಬಾಯ್ಸ್
    2013ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲೀಗ್ ಸುತ್ತಿನಲ್ಲೇ ಹೊರಬಿದ್ದಿತ್ತು. 16 ಪಂದ್ಯಗಳ ಪೈಕಿ 9 ಪಂದ್ಯ ಗೆದ್ದು 18 ಅಂಕ ಗಳಿಸಿದ್ರೂ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಯಿತು. ಈ ಆವೃತ್ತಿಯಲ್ಲಿ 2ನೇ ಬಾರಿಗೆ ಚೆನ್ನೈ – ಮುಂಬೈ 2ನೇ ಬಾರಿಗೆ ಮುಖಾಮುಖಿಯಾಗಿದ್ದವು. ಮುಂಬೈ 23 ರನ್‌ಗಳಿಂದ ಗೆದ್ದು ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಧಕ್ಕಿಸಿಕೊಂಡಿತ್ತು.

    ಸತತ ಹೀನಾಯ ಸೋಲು
    2014ರ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿದ್ದ ಆರ್‌ಸಿಬಿ ಪ್ಲೇ ಆಫ್ ಸಮೀಪವೂ ಸುಳಿಯಲಿಲ್ಲ. ಅರಂಭಿಕ 2 ಪಂದ್ಯಗಳನ್ನು ಗೆದ್ದು ಶುಭಾರಂಭ ಕಂಡಿದ್ದ ಆರ್‌ಸಿಬಿ ಬಳಿಕ ಸತತ ಹೀನಾಯ ಸೋಲುಗಳನ್ನು ಅನುಭವಿಸಿತು. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯ ಗೆದ್ದ ಆರ್‌ಸಿಬಿ 8 ತಂಡಗಳ ಪೈಕಿ 7ನೇ ಸ್ಥಾನಕ್ಕೆ ಕುಸಿದು, ಲೀಗ್‌ನಲ್ಲೇ ಮಕಾಡೆ ಮಲಗಿತು. ಈ ಆವೃತ್ತಿಯಲ್ಲಿ ಗೌತಮ್ ಗಂಭೀರ್ ನಾಯಕತ್ವದ ಕೋಲ್ಕತ್ತಾ ನೈಟ್‌ರೈಡರ್ಸ್ ಗೆದ್ದು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

    ಬೆಂಗಳೂರಿಗೆ ಸಿಹಿ-ಕಹಿ
    2015ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಆರ್‌ಸಿಬಿಗೆ ಟ್ರೋಫಿ ಗೆಲ್ಲುವ ಕನಸು ನಿರಾಸೆಯಾಯಿತು. ಏಕೆಂದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 71 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಬೆಂಗಳೂರು ತಂಡ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ 3 ವಿಕೆಟ್‌ಗಳ ವಿರೋಚಿತ ಸೋಲು ಕಂಡು ನಿರಾಸೆ ಅನುಭವಿಸಿತು. ಈ ಆವೃತ್ತಿಯಲ್ಲಿ 3ನೇ ಬಾರಿಗೆ ಮುಂಬೈ – ಚೆನ್ನೈ ಫೈನಲ್‌ನಲ್ಲಿ ಮುಖಾಮುಖಿಯಾಗಿತ್ತು. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ 41 ರನ್‌ಗಳಿಂದ ಪಂದ್ಯ ಗೆದ್ದು 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿತು.

    8 ರನ್‌ಗಳಿಂದ ಕೈತಪ್ಪಿದ ಟ್ರೋಫಿ
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಗೆದ್ದು ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    ಅಡ್ರೆಸ್‌ಗಿಲ್ಲದಂತೆ ಮಕಾಡೆ ಮಲಗಿತ್ತು ಬೆಂಗಳೂರು
    ಪ್ರತಿ ಬಾರಿಯಂತೆ 2017ರ ಆವೃತ್ತಿಯಲ್ಲೂ ʻಈ ಸಲ ಕಪ್ ನಮ್ದೇʼ ಎಂಬ ಧ್ಯೇಯದೊಂದಿಗೆ ಆರ್‌ಸಿಬಿ ಕಣಕ್ಕಿಳಿದಿತ್ತು. ಈ ಆವೃತ್ತಿಯಲ್ಲಿ 8 ತಂಡಗಳು ಪಾಲ್ಗೊಂಡಿದ್ದವು. ಕ್ರಿಸ್‌ಗೇಲ್, ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್, ಶೇನ್ ವಾಟ್ಸನ್, ಕೆ.ಎಲ್ ರಾಹುಲ್ ಅವರಂತಹ ದಿಗ್ಗಜ ಬ್ಯಾಟರ್‌ಗಳಿದ್ದರೂ ಹೀನಾಯ ಸೋಲುಗಳು ಅನುಭವಿಸಿತು. 14ರಲ್ಲಿ ಕೇವಲ 3 ಪಂದ್ಯಗಳನ್ನ ಗೆದ್ದು ಕೊನೆಯ ಸ್ಥಾನದೊಂದಿಗೆ ಹೊರನಡೆಯಿತು. ಈ ಆವೃತ್ತಿಯ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ ಗೆದ್ದು ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಯಿತು.

    2018ರಲ್ಲಿ ವಿಫಲ ಪ್ರಯತ್ನ
    ರಣಕಲಿಗಳ ಬ್ಯಾಟಿಂಗ್ ಪಡೆಯೊಂದಿಗೆ ಟ್ರೋಫಿ ಗೆಲ್ಲಲೇಬೇಕೆಂಬ ಛಲದೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿಗೆ 2018ರ ಆವೃತ್ತಿಯಲ್ಲೂ ನಿರಾಸೆಯಾಯಿತು. ಈ ಆವೃತ್ತಿಯಲ್ಲೂ 8 ತಂಡಗಳಷ್ಟೇ ಭಾಗವಹಿಸಿದ್ದವು. ಜಿದ್ದಾಜಿದ್ದಿ ಹೋರಾಟದ ಹೊರತಾಗಿಯೂ ವಿರೋಚಿತ ಸೋಲುಗಳಿಂದಲೇ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಯಿತು. 14 ಪಂದ್ಯಗಳಲ್ಲಿ ಕೇವಲ 6 ಪಂದ್ಯ ಗೆದ್ದು 6ನೇ ಸ್ಥಾನ ಪಡೆಯುವ ಮೂಲಕ ಲೀಗ್ ಸುತ್ತಿನಲ್ಲೇ ಹೊರಬಿದ್ದಿತು. ಈ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು.

    2019ರಲ್ಲೂ ಹೀನಾಯ ಸೋಲು
    ಅಭಿಮಾನಿಗಳ ಘೋಷಣೆಯಂತೆ ʻಈ ಸಲ ಕಪ್ ನಮ್ದೇʼ ಎನ್ನುವ ಉತ್ಸಾಹದಲ್ಲಿದ್ದ ಆರ್‌ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 5 ಪಂದ್ಯ ಮಾತ್ರ. 8 ತಂಡಗಳು ಪಾಲ್ಗೊಂಡಿದ್ದ ಈ ಆವೃತ್ತಿಯಲ್ಲಿ ಆರ್‌ಸಿಬಿ ಕೊನೆಯ ಸ್ಥಾನ ಬಿಟ್ಟು ಮೇಲೇಳಲೇ ಇಲ್ಲ. ಇನ್ನೂ ಈ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ಸಮಬಲ ಎದುರಾಳಿಗಳ ನಡುವೆ ರೋಚಕ ಕಾದಾಟ ನಡೆದಿತ್ತು. ಆದ್ರೆ ಚೆನ್ನೈ ಸೂಪರ್ ಕಿಂಗ್ಸ್ ಕೊನೆಯಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ಮುಂಬೈ ವಿರುದ್ಧ 1 ರನ್‌ನಿಂದ ಸೋತಿತ್ತು. ಮುಂಬೈ ಇಂಡಿಯನ್ಸ್ ಟ್ರೋಫಿ ಎತ್ತಿಹಿಡಿಯಿತು.

    2020ರಲ್ಲಿ ಪ್ಲೇ ಆಫ್‌ನಲ್ಲಿ ʻಎಲಿಮಿನೇಟ್‌ʼ
    2020ರ ಐಪಿಎಲ್‌ ಆವೃತ್ತಿಯಲ್ಲೂ ʻಈ ಸಲ ಕಪ್‌ ನಮ್ದೇʼ ಅನ್ನೋ ಧ್ಯೇಯದೊಂದಿಗೇ ಆರ್‌ಸಿಬಿ ಅಖಾಡಕ್ಕಿಳಿದಿತ್ತು. ಈ ಆವೃತ್ತಿಯಲ್ಲಿ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಂಡಿದ್ದವು. ಲೀಗ್‌ ಸುತ್ತಿಮ ಮುಕ್ತಾಯದ ವೇಳೆಗೆ 14 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಪಡೆದಿದ್ದ ಆರ್‌ಸಿಬಿ ನಾಲ್ಕನೇ ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿತು. ಆದ್ರೆ, ಸನ್‌ ರೈಸರ್ಸ್‌ ಹೂದರಾಬಾದ್‌ ವಿರುದ್ಧ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಹೀನಾಯ ಸೋಲಿ ಅನುಭವಿಸಿ ಹೊರ ನಡೆಯಿತು. ಈ ಆವೃತ್ತಿಯಲ್ಲಿ ಮುಂಬೈ ಡೆಲ್ಲಿ ವಿರುದ್ಧ ಫೈನಲ್‌ನಲ್ಲಿ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.

    2021ರಲ್ಲಿ ಮತ್ತೆ ಹೀನಾಯ ಸೋಲು
    2021ರ ಆವೃತ್ತಿಯಲ್ಲಿ 18 ಅಂಕಗಳೊಂದಿಗೆ 3ನೇ ಸ್ಥಾನ ಪಡೆದು ಪ್ಲೇ ಆಫ್‌ ಪ್ರವೇಶಿಸಿದ್ದ ಆರ್‌ಸಿಬಿ ಎಲಿಮಿನೇಟರ್‌ ಪಂದ್ಯದಲ್ಲಿ ಇಯಾನ್‌ ಮಾರ್ಗನ್‌ ನಾಯಕತ್ವದ ಕೆಕೆಆರ್‌ ವಿರುದ್ಧ ಸೋಲಿನೊಂದಿಗೆ ಹೊರಬಿದ್ದಿತು. ಅಂತಿಮವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ಟ್ರೋಫಿ ಗೆದ್ದುಕೊಂಡಿತು. ವಿಶ್ವದಾದ್ಯಂತ ಕೋವಿಡ್‌ ಉಲ್ಬಣಗೊಂಡಿದ್ದರಿಂದ ಈ ಆವೃತ್ತಿಯನ್ನು ಕೆಲ ದಿನಗಳ ವರೆಗೆ ಸ್ಥಗಿತಗೊಳಿಸಲಾಗಿತ್ತು.

    2022 – ಕ್ವಾಲಿಫೈಯರ್‌-2ನಲ್ಲಿ ರಾಜಸ್ಥಾನ್‌ ಕೊಕ್ಕೆ
    2022ರ ಆವೃತ್ತಿಯಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನವನ್ನೇ ನೀಡಿತ್ತು. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಪ್ಲೇ ಆಫ್‌ಗೆ ಪ್ರವೇಶಿಸಿತ್ತು. ಎಲಿಮಿನೇಟರ್‌ ಪಂದ್ಯದಲ್ಲಿ ರಜತ್‌ ಪಾಟಿದಾರ್‌ ಅವರ ಭರ್ಜರಿ ಶತಕದ ನೆರವಿನಿಂದ ಆಗಷ್ಟೇ ಪದಾರ್ಪಣೆ ಮಾಡಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಗೆದ್ದು ಬೀಗಿತ್ತು. ಆದ್ರೆ ಕ್ವಾಲಿಫೈಯರ್‌-2ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಸೋತು ನಿರಾಸೆ ಅನುಭವಿಸಿತು. 2022ರಲ್ಲೇ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ತಂಡ ಚೊಚ್ಚಲ ಆವೃತ್ತಿಯಲ್ಲಿ ಟ್ರೋಫಿ ಮುಡಿಗೇರಿಸಿಕೊಂಡಿತು.

    2023: ಲೀಗ್‌ ಸುತ್ತಿನಲ್ಲೇ ಹೊರಬಿದ್ದ ಬೆಂಗಳೂರು ಬಾಯ್ಸ್‌
    ಪ್ರಶಸ್ತಿ ಗೆಲ್ಲುವ ಉತ್ಸಾಹದೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿ 2023ರ ಆವೃತ್ತಿಯಲ್ಲಿ ಭಾರೀ ನಿರಾಸೆ ಅನುಭವಿಸಿತ್ತು. ಈ ಆವೃತ್ತಿಯಲ್ಲಿ ತಂಡಗಳ ಅಂಖ್ಯೆ 10ಕ್ಕೇರಿತ್ತು. ಲೀಗ್‌ನಲ್ಲಿ 14ರಲ್ಲಿ 7 ಪಂದ್ಯ ಗೆದ್ದಿದ್ದ ಆರ್‌ಸಿಬಿ 14 ಅಂಕ ಗಳಿಸುವ ಮೂಲಕ 6ನೇ ಸ್ತಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಆವೃತ್ತಿಯ ರೋಚಕ ಫೈನಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಗೆದ್ದು ಚೆನ್ನೈ ಸೂಪರ್‌ ಕಿಂಗ್ಸ್‌ 5ನೇ ಬಾರಿಗೆ ಟ್ರೋಫಿ ತನ್ನದಾಗಿಸಿಕೊಂಡಿತು.

    2024: ರಾಜಸ್ಥಾನ್‌ ವಿರುದ್ಧ ಆರ್‌ಸಿಬಿ ಎಲಿಮಿನೇಟ್‌
    ʻಇದು ಆರ್‌ಸಿಬಿಯ ಹೊಸ ಅಧ್ಯಾಯʼ ಎನ್ನುವ ಹೊಸ ಘೋಷ ವಾಕ್ಯದೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಾಕೌಟ್‌ ಕದನದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಆದ್ರೆ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ ಸೋತು ಹೊರ ನಡೆಯಿತು. ಈ ಆವೃತ್ತಿಯಲ್ಲಿ ಪ್ರಬಲ ಪಡೆ ರಚಿಸಿಕೊಂಡಿದ್ದ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ತಂಡವು ಟ್ರೋಫಿ ಗೆದ್ದು ಬೀಗಿತು.

  • 18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌

    18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌

    ಅಹಮದಾಬಾದ್‌: ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್‌ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ.

    2009, 2011, 2016ರ ಫೈನಲ್‌ ಪಂದ್ಯಗಳಲ್ಲಿ ಸೋತು ಭಾರೀ ನಿರಾಸೆ ಅನುಭವಿಸಿದ್ದ ಆರ್‌ಸಿಬಿ 4ನೇ ಬಾರಿ ಫೈನಲ್ ಕಂಟಕದಿಂದ ಮುಕ್ತಿ ಪಡೆದಿದೆ. ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ಸಂಘಟಿತ ಪ್ರದರ್ಶನ ನೀಡಿ, ಪಂಜಾಬ್‌ ಕಿಂಗ್ಸ್ ತಂಡವನ್ನು ಮಣಿಸಿ, ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. 4ನೇ ಪ್ರಯತ್ನದಲ್ಲಿ ಯಶಸ್ವಿಯಾಗಿ ಟ್ರೋಫಿ ಎತ್ತುವಲ್ಲಿ ಸಫಲವಾದ ಆರ್‌ಸಿಬಿ ರಜತ್‌ ಪಾಟಿದಾರ್‌ ನಾಯಕತ್ವದಲ್ಲಿ ಐಪಿಎಲ್‌ (IPL 2025) ಇತಿಹಾಸ ಪುಟ ಸೇರಿದೆ.

    191 ರನ್‌ಗಳ ಬೃಹತ್‌ ಟಾರ್ಗೆಟ್‌ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌ ಶುಭಾರಂಭವನ್ನೇ ಪಡೆದಿತ್ತು. ಮೊದಲ ವಿಕೆಟ್‌ಗೆ 5 ಓವರ್‌ಗಳಲ್ಲಿ 43 ರನ್‌ಗಳ ಜೊತೆಯಾಟ ನೀಡಿತ್ತು, ಪವರ್‌ ಪ್ಲೇ ಮುಗಿಯುತ್ತಿದ್ದಂತೆ ರನ್‌ ವೇಗ ಕಡಿತಗೊಂಡಿತು. ಈ ನಡುವೆ ಪ್ರಭ್‌ ಸಿಮ್ರನ್‌, ಶ್ರೇಯಸ್‌ ಅಯ್ಯರ್‌ ಅವರ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಆರ್‌ಸಿಬಿ ಗೆಲುವಿಗೆ ಪುಷ್ಠಿ ನೀಡಿತು. ಕೊನೆಯಲ್ಲಿ ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟ ಕೂಡ ವ್ಯರ್ಥವಾಯಿತು.

    ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌, ಕೃನಾಲ್‌ ಪಾಂಡ್ಯ ತಲಾ 2 ವಿಕೆಟ್‌, ಯಶ್‌ ದಯಾಳ್‌, ಜೋಶ್‌ ಹೇಜಲ್ವುಡ್‌, ರೊಮಾರಿಯೊ ಶೆಫರ್ಡ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ, 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 191 ರನ್‌ ಕಲೆಹಾಕಿತ್ತು. ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿ ಪವರ್‌ ಪ್ಲೇನಲ್ಲಿ ಫಿಲ್‌ ಸಾಲ್ಟ್‌ ಅವರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್‌ ಶುರು ಮಾಡಿತು. ಅಲ್ಲದೇ ಒಂದೆಡೆ ರನ್‌ ಕಲೆಹಾಕುತ್ತಿದ್ದ ಆರ್‌ಸಿಬಿ ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಾಗುತ್ತಿತ್ತು.

    ಮೊದಲ ವಿಕೆಟ್‌ಗೆ ಸಾಲ್ಟ್‌ – ಕೊಹ್ಲಿ ಜೋಡಿ 18 ರನ್‌, 2ನೇ ವಿಕೆಟ್‌ಗೆ ಮಯಾಂಕ್‌ ಅಗರ್ವಾಲ್‌ 38 ರನ್‌, 3ನೇ ವಿಕೆಟಿಗೆ ಕೊಹ್ಲಿ-ರಜತ್‌ ಪಾಟಿದಾರ್‌ ಜೋಡಿ 27 ಎಸೆತಗಳಲ್ಲಿ ಸ್ಫೋಟಕ 40 ರನ್‌, 4ನೇ ವಿಕೆಟಿಗೆ ಕೊಹ್ಲಿ-ಲಿವಿಂಗ್‌ಸ್ಟೋನ್‌ ಜೋಡಿ 35 ರನ್‌ ಜೊತೆಯಾಟ ನೀಡಿತ್ತು. ಆದ್ರೆ 6ನೇ ವಿಕೆಟಿಗೆ ಜಿತೇಶ್‌ ಶರ್ಮಾ ಹಾಗೂ ಲಿವಿಂಗ್‌ಸ್ಟೋನ್‌ ಜೋಡಿ 12 ಎಸೆತಗಳಲ್ಲಿ ಸ್ಫೋಟಕ 36 ರನ್‌ ಜೊತೆಯಾಟ ನೀಡಿತ್ತು. ಇವರಿಬ್ಬರ ಸಿಕ್ಸರ್‌, ಬೌಂಡರಿ ಆಟ ಕೂಡ ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಆದರೆ ಇವರಿಬ್ಬರ ಆಟಕ್ಕೂ ಪಂಜಾಬ್‌ ಬೌಲರ್‌ಗಳು ಬ್ರೇಕ್‌ ಹಾಕಿದ್ರು.

    ಕೈಲ್‌ ಜೆಮಿಸನ್‌ ಬೌಲಿಂಗ್‌ ವೇಳೆ ಲಿವಿಂಗ್‌ಸ್ಟೋನ್‌ ಎಲ್‌ಬಿಡಬ್ಲ್ಯೂಗೆ ಪೆವಿಲಿಯನ್‌ಗೆ ತುತ್ತಾಗಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ ಕನ್ನಡಿಗ ವಿಜಯ್‌ ಕುಮಾರ್‌ ವೈಶಾಕ್‌ನ ಮಾರಕ ದಾಳಿಗೆ ಜಿತೇಶ್‌ ಶರ್ಮಾ ಕ್ಲೀನ್‌ ಬೌಲ್ಡ್‌ ಆಗಿ ಹೊರ ನಡೆದರು. ಇದು ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ಕನಸಿಗೆ ಭಾರೀ ಹೊಡೆತ ನೀಡಿತು. ಕೊನೆಯಲ್ಲಿ ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ ನಿರೀಕ್ಷಿತ ಪ್ರದರ್ಶನ ನೀಡದ ಪರಿಣಾಮ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 190 ರನ್‌ ಗಳಿಸಿತು.

    ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌, ಕೈಲ್‌ ಜೆಮಿಸನ್‌ ತಲಾ ಮೂರು ವಿಕೆಟ್‌ ಕಿತ್ತರೆ, ಅಜ್ಮತುತ್ತ ಒಮರ್ಝೈ, ವಿಜಯ್‌ ಕುಮಾರ್‌ ವೈಶಾಕ್‌, ಚಹಲ್‌ ತಲಾ ಒಂದು ವಿಕೆಟ್‌ ಕಿತ್ತರು.

  • ಪಂದ್ಯ ಆರಂಭಕ್ಕೂ ಮುನ್ನ ಶ್ರೇಯಸ್‌ಗೆ All The Best ಹೇಳಿ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ

    ಪಂದ್ಯ ಆರಂಭಕ್ಕೂ ಮುನ್ನ ಶ್ರೇಯಸ್‌ಗೆ All The Best ಹೇಳಿ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ

    ಅಹಮದಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಉಸಿರು ಅಂದ್ರೆ ಅದು ವಿರಾಟ್‌ ಕೊಹ್ಲಿ. ಯಾವುದೇ ಪಂದ್ಯವಿದರಲಿ ತಮ್ಮನ್ನು ಕೆಣಕಿದ್ರೆ ಸುಮ್ಮನೆ ಬಿಡದ ಕೊಹ್ಲಿ (Virat Kohli), ಪ್ರತಿಭಾನ್ವಿತ ಆಟಗಾರರ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಲೂ ಇರುತ್ತಾರೆ. ಅದೇ ರೀತಿ ಇಂದು ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಅವರಿಗೂ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದಾರೆ.

    ಇದು ಫೈನಲ್‌ ಪಂದ್ಯ, ಟ್ರೋಫಿಗಾಗಿ 18 ವರ್ಷಗಳಿಂದ ನಡೆಯುತ್ತಿರುವ ಸಂಗ್ರಾಮ, ಪಂಜಾಬ್‌ ಕಿಂಗ್ಸ್‌ ತಂಡವೇ ಇಲ್ಲಿ ಎದುರಾಳಿ ಇದೆಲ್ಲವೂ ಗೊತ್ತಿದ್ದರೂ ಕಲ್ಮಶವಿಟ್ಟುಕೊಳ್ಳದ ಕೊಹ್ಲಿ ಶ್ರೇಯಸ್‌ ಅಯ್ಯರ್‌ (Shreyas Iyer) ಅವರಿಗೆ ʻಆಲ್‌ ದಿ ಬೆಸ್ಟ್‌ʼ ಹೇಳಿ ಕ್ರೀಡಾಸ್ಪೋರ್ತಿ ಮೆರೆದಿದ್ದಾರೆ. ಇದು ಕೊಹ್ಲಿ ಅವರ ಹೃದಯವಂತಿಕೆಗೆ ಮತ್ತೊಂದು ಸಾಕ್ಷಿಯಾಗಿದೆ. ಇದನ್ನೂ ಓದಿ: For The First Time ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ – ಇಂದಿನ ಲಕ್‌ ಹೇಗಿದೆ?

    ಸಾಮಾನ್ಯ ಹುಡುಗ ಇಂದು ಕ್ರಿಕೆಟ್‌ ಲೋಕ್‌ ಕಿಂಗ್‌
    ಇಂದು ಕ್ರಿಕೆಟ್‌ ಲೋಕದ ಕಿಂಗ್‌, ಆರ್‌ಸಿಬಿ ಎಂಬ ಮಹಾ ಕೋಟೆ ಕಟ್ಟಿದ ಸಾಮ್ರಾಟ ಎಂದು ಮೆರೆದಾಡುತ್ತಿರುವ ಕೊಹ್ಲಿ ತಂಡಕ್ಕೆ ಎಂಟ್ರಿ ಕೊಟ್ಟಾಗ ಜಸ್ಟ್ 19ರ ಹರೆಯದ ಹುಡುಗ ಅಷ್ಟೇ. ಆಕಸ್ಮಿಕವಾಗಿ ಐಪಿಎಲ್‌ನಲ್ಲಿ ಬೆಂಗಳೂರು ತಂಡಕ್ಕೆ ಸೇರಿದ ಅವನು, ನಂತರದ ದಿನಗಳಲ್ಲಿ ಚರಿತ್ರೆಯನ್ನ ಬರೆದ. ಸಾಮಾನ್ಯನಾಗಿ ಬಂದಾತ ಕಿಂಗ್ ಆಗಿ ಮೆರೆದ. ರನ್ ಮೆಷಿನ್ ಕಿಂಗ್ ಕೊಹ್ಲಿ (Virat Kohli) ರಾಜನಾಗಿ ಮೆರೆದರೂ ಅದೊಂದು ಕೊರಗು 18 ವರ್ಷಗಳಿಂದ ಆರ್‌ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕಾಡುತ್ತಲೇ ಇತ್ತು. ಈಗ ಆ ಕೊರಗನ್ನು ನೀಗಿಸುವ ಅವಕಾಶ ಮತ್ತೆ ಕೂಡಿ ಬಂದಿದೆ. ಅದೇನೆ ಇರಲಿ ಈ ಬಾರಿಯಾದರೂ 18 ವರ್ಷಗಳ ವನವಾಸ ತಪ್ಪಿಸುವಂತೆ ಅಭಿಮಾನಿಗಳಿ ಹರಕೆ ಹೊತ್ತಿದ್ದಾರೆ. ಇದನ್ನೂ ಓದಿ: RCB vs PBKS: ಅಹಮದಾಬಾದ್‌ ಸ್ಟೇಡಿಯಂ ತುಂಬಾ ಆರ್‌ಸಿಬಿ ಫ್ಯಾನ್ಸ್‌

    ಆರ್‌ಸಿಬಿ ಪ್ಲೇಯಿಂಗ್-11
    ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್‌, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್ವುಡ್.

    ಪಂಜಾಬ್ ಪ್ಲೇಯಿಂಗ್-11
    ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್, ನೆಹಲ್ ವಧೇರ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ವಿಜಯ್ ಕುಮಾರ್ ವೈಶಾಕ್, ಅಜ್ಮತುಲ್ಲಾ ಒಮರ್ಜೈ, ಕೈಲ್ ಜೆಮಿಸನ್, ಯಜುವೇಂದ್ರ ಚಹಲ್, ಅರ್ಷ್‌ದೀಪ್‌ ಸಿಂಗ್‌. ಇದನ್ನೂ ಓದಿ: Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

  • Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

    Photo Gallery | ಭಾರತೀಯ ಸೇನೆಗೆ ಫೈನಲ್‌‌ ಪಂದ್ಯ ಅರ್ಪಣೆ… ಸುಂದರ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

    ಅಹಮದಾಬಾದ್‌: 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ (IPL Final) ಪಂದ್ಯ ಆರಂಭಗೊಂಡಿದೆ. ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಆರ್‌ಸಿಬಿಗೆ ಬಿಟ್ಟುಕೊಟ್ಟಿದೆ. ಫೈನಲ್‌ ಪಂದ್ಯಕ್ಕೂ ಮುನ್ನ ಭಾರತ ಸೇನೆಗೆ ವಿಶೇಷ ಗೌರವ ಸಲ್ಲಿಸಲಾಯಿತು. ಖ್ಯಾತ ಹಿನ್ನೆಲೆ ಗಾಯಕ ಶಂಕರ್‌ ಮಹಾದೇವನ್‌ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರ ಮೈನವಿರೇಳುವಂತೆ ಮಾಡಿದರು. ಅಲ್ಲದೇ ವಾಯುಪಡೆಯ ಅದ್ಭುತ ಏರ್‌ಶೋ ಕೂಡ ಗಮನ ಸೆಳೆಯಿತು. ಇಂತಹ ಅದ್ಭುತ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೀಗೆ….

  • ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

    ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

    ತತ ಎರಡನೇ ವರ್ಷ ಟಿ20 ಫೈನಲ್‌ನಲ್ಲಿ (T20 Final) ರಜತ್‌ ಪಾಟಿದಾರ್‌ (Rajat Patidar) ಮತ್ತು ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದ ತಂಡಗಳು ಮುಖಾಮುಖಿಯಾಗುತ್ತಿವೆ.

    ಹೌದು. ಕಳೆದ ಡಿಸೆಂಬರ್‌ನಲ್ಲಿ ವರ್ಷ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯ ಬೆಂಗಳೂರಿನಲ್ಲಿ ಮಧ್ಯಪ್ರದೇಶ (Madhya Pradesh) ಮತ್ತು ಮುಂಬೈ (Mumbai) ತಂಡಗಳ ಮಧ್ಯೆ ನಡೆದಿತ್ತು.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ್ದ ಮಧ್ಯಪ್ರದೇಶ 8 ವಿಕೆಟ್‌ ನಷ್ಟಕ್ಕೆ 174 ರನ್‌ ಹೊಡೆದಿತ್ತು. ನಾಯಕ ಪಾಟಿದಾರ್‌ ಅಜೇಯ 81 ರನ್‌(40 ಎಸೆತ, 6 ಬೌಂಡರಿ, 6 ಸಿಕ್ಸ್‌) ಹೊಡೆದಿದ್ದರು. ಇದನ್ನೂ ಓದಿ: ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

    ಈ ಮೊತ್ತವನ್ನು ಬೆನ್ನಟ್ಟಿದ ಮುಂಬೈ 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 180 ರನ್‌ ಹೊಡೆಯುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಶ್ರೇಯಸ್‌ ಅಯ್ಯರ್‌ 16 ರನ್‌ ಗಳಿಸಿ ಔಟಾಗಿದ್ದರು.


    ಈಗ ಐಪಿಎಲ್‌ನಲ್ಲಿ ಆರ್‌ಸಿಬಿಯನ್ನು ರಜತ್‌, ಪಂಜಾಬ್‌ ತಂಡವನ್ನು ಶ್ರೇಯಸ್‌ ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ಟ್ರೋಫಿ ಗೆದ್ದುಕೊಂಡಿಲ್ಲ. ಆರ್‌ಸಿಬಿ ಈ ಮೊದಲು 3 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಪಂಜಾಬ್ ಒಂದು ಬಾರಿ ಫೈನಲ್ ಆಡಿ ಸೋಲನುಭವಿಸಿತ್ತು. 2014 ರಲ್ಲಿ ಕೋಲ್ಕತ್ತಾ ವಿರುದ್ಧ ಪಂಜಾಬ್‌ ಕಿಂಗ್ಸ್‌ ಸೋತಿತ್ತು. ಇದೇ ಮೊದಲ ಬಾರಿಗೆ ಎರಡು ತಂಡಗಳು ಫೈನಲಿನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾರೇ ಕಪ್‌ ಗೆದ್ದರೂ ಐಪಿಎಲ್‌ನಲ್ಲಿ (IPL 2025) ಹೊಸ ಚಾಂಪಿಯನ್ ತಂಡದ ಉದಯವಾಗಲಿದೆ. ಇದನ್ನೂ ಓದಿ: IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

    ಲೀಗ್‌ ಹಂತದಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದುಕೊಂಡಿದ್ದವು. ಆದರೆ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ತಂಡವನ್ನು ಸೋಲಿಸಿ ಆರ್‌ಸಿಬಿ ಫೈನಲ್‌ ಪ್ರವೇಶಿಸಿತ್ತು. ಹೀಗಾಗಿ ಎರಡು ತಂಡಗಳ ಮಧ್ಯೆ ಸಮಬಲದ ಹೋರಾಟ ನಡೆಯಲಿದೆ.

  • IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

    ಅಹಮದಾಬಾದ್‌: 18ನೇ ಆವೃತ್ತಿಯ ಐಪಿಎಲ್‌ ಆವೃತ್ತಿಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್‌ ಕಿಂಗ್ಸ್‌ vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಫೈನಲ್‌ಪಂದ್ಯಕ್ಕೆ ಇಲ್ಲಿ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಎರಡು ದಶಕಗಳಿಂದ ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಕಾದಿರುವ ಬೆಂಗಳೂರು ಮತ್ತು ಪಂಜಾಬ್‌ಗೆ ವಿರಾಟ್‌ ಕೊಹ್ಲಿ (Virat Kohli) ಮತ್ತು ಶ್ರೇಯಸ್‌ ಅಯ್ಯರ್‌ (Shreyas Iyer) ಇಬ್ಬರೂ ಪ್ರಶಸ್ತಿ ಗೆದ್ದುಕೊಡುವ ಉತ್ಸಾಹದಲ್ಲಿ ಎದುರಾಗುತ್ತಿದ್ದಾರೆ. 18 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಕಾತರದಲ್ಲಿವೆ ಎರಡೂ ತಂಡಗಳೂ ಇವೆ.

    ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದ್ದು, ಜಿಯೋ ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ. 2ನೇ ಅವಧಿಯಲ್ಲಿ ಇಬ್ಬನಿಯ ಪ್ರಭಾವದಿಂದಾಗಿ ಚೇಸಿಂಗ್ ಸುಲಭವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಟಾಸ್‌ ಗೆಲುವು ನಿರ್ಣಾಯಕವಾಗಲಿದೆ. ಟಾಸ್‌ ಗೆದ್ದ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಳ್ಳುವ ಸಾಧ್ಯತೆಯೇ ಹೆಚ್ಚಾಗಿದೆ. ಉಭಯ ತಂಡಗಳ ನಡುವೆ ಈವರೆಗೆ 36 ಪಂದ್ಯಗಳು ನಡೆದಿದ್ದು, ಇತ್ತಂಡಗಳೂ ತಲಾ 18 ಪಂದ್ಯಗಳಲ್ಲಿ ಗೆಲುವು ಕಂಡಿವೆ.

    ಪ್ರತಿ ವರ್ಷವೂ ʻಈ ಸಲ ಕಪ್‌ ನಮ್ದೇ’ ಎನ್ನುವ ಘೋಷವಾಕ್ಯ ಈ ಬಾರಿಯಾದ್ರೂ ನಿಜವಾಗಲಿ ಅನ್ನೋದು ಅಭಿಮಾನಿಗಳ ಹೆಬ್ಬಯಕೆಯಾಗಿದೆ. ಅದಕ್ಕಾಗಿ ದೇಶಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳು ಈ ಬಾರಿ ಆರ್‌ಸಿಬಿ ಪ್ರಶಸ್ತಿ ಗೆಲ್ಲಲೆಂದು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರ್‌ಸಿಬಿ ಮತ್ತು ಪಂಜಾಬ್‌ ಕಿಂಗ್ಸ್‌ ಎರಡೂ ತಂಡಗಳು ಇದುವರೆಗೂ ಟ್ರೋಫಿ ಗೆಲ್ಲದೇ ಇರುವುದರಿಂದ 18ನೇ ಆವೃತ್ತಿಯ ಐಪಿಎಲ್‌ ಫೈನಲ್‌ ಮೇಲೆ ಕ್ರೀಡಾಭಿಮಾನಿಗಳ ಚಿತ್ತ ನೆಟ್ಟಿದೆ.

    ಆರ್‌ಸಿಬಿ ಗೆಲ್ಲುವ ಫೇವರೆಟ್
    ಕ್ವಾಲಿಫೈಯರ್‌-1ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (Punjab King) ತಂಡವನ್ನು 8 ವಿಕೆಟ್‌ಗಳಿಂದ ಮಣಿಸುವ ಮೂಲಕ ಆರ್‌ಸಿಬಿ (RCB) ನೇರವಾಗಿ ಫೈನಲ್‌ ಪ್ರವೇಶಿಸಿದೆ. ಹಿಂದಿನ ಆವೃತ್ತಿಗಳಲ್ಲಿನ ನೀರಸ ಪ್ರದರ್ಶನ ಮೀರಿರುವ ಆರ್‌ಸಿಬಿ, ಈ ವರ್ಷ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಅರಂಭಿಕ ಕ್ರಮಾಂಕದಲ್ಲಿ ಕೊಹ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಭದ್ರ ಅಡಿಪಾಯ ಒದಗಿಸಿದ್ದಲ್ಲದೇ, ಈ ಬಾರಿ ಒಟ್ಟು 614 ರನ್‌ ಗಳಿಸಿದ್ದಾರೆ.

    ಬ್ಯಾಟಿಂಗ್‌ನಲ್ಲಿ ಕಿಂಗ್‌ ಕೊಹ್ಲಿ, ಫಿಲ್‌ ಸಾಲ್ಟ್‌, ರಜತ್‌ ಪಾಟಿದಾರ್‌, ಮಯಾಂಕ್‌ ಅಗರ್ವಾಲ್‌, ಜಿತೇಶ್‌ ಶರ್ಮಾ ಬಲ ತುಂಬಿದ್ರೆ ಬೌಲಿಂಗ್‌ನಲ್ಲಿ ಮಾರಕ ವೇಗಿ ಜೋಷ್‌ ಹೇಜಲ್‌ವುಡ್‌, ಯಶ್‌ ದಯಾಳ್‌, ಸುಯಶ್‌, ಕೃನಾಲ್‌ ಪಾಂಡ್ಯ, ರೊಮಾರಿಯೊ ಶೆಫರ್ಡ್‌ ಹೀಗೆ ತಂಡದ ಪ್ರತಿಯೊಬ್ಬ ಸದಸ್ಯನೂ ಫೈನಲ್‌ ತನಕದ ತಂಡದ ಪಯಣದಲ್ಲಿ ತಮ್ಮ ಹೊಣೆಗಾರಿಕೆ ನಿಭಾಯಿಸುವ ಮೂಲಕ ಹೆಗಲು ನೀಡಿದ್ದಾರೆ.

    ಅಯ್ಯರ್‌ ಕಡೆಗಣಿಸುವಂತಿಲ್ಲ
    ಇನ್ನೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನ ಫೈನಲ್‌ವರೆಗೆ ಕೊಂಡೊಯ್ದಿದ್ದ, ಕೆಕೆಆರ್‌ಗೆ ಪ್ರಶಸ್ತಿ ತಂದುಕೊಟ್ಟಿದ್ದ ಶ್ರೇಯಸ್‌ ಅವರನ್ನೂ ಕಡೆಗಣಿಸುವಂತಿಲ್ಲ. 18 ವರ್ಷದ ಐಪಿಎಲ್‌ ಇತಿಹಾಸದಲ್ಲಿ ಮೂರು ತಂಡಗಳನ್ನು ಫೈನಲ್‌ಗೆ ಮುನ್ನಡೆಸಿದ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷವೂ ಪಂಜಾಬ್‌ ತಂಡವನ್ನು ಫೈನಲ್‌ ತಲುಪಿಸುವ ಮೂಲಕ ತಮ್ಮ ನಾಯಕತ್ವ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್‌ ಪ್ರಶಸ್ತಿ ಗೆಲುವಿನ ಶ್ರೇಯವನ್ನು ಅಯ್ಯರ್‌ ನೀಡಿರಲಿಲ್ಲ ಎನ್ನುವ ಟೀಕೆಗಳು ಕೇಳಿಬಂದಿದ್ದವು. ಪ್ರಭ್‌ಸಿಮ್ರನ್‌ ಸಿಂಗ್‌, ಜೋಷ್‌ ಇಂಗ್ಲಿಸ್‌, ಪ್ರಿಯಾಂಶ್‌ ಆರ್ಯ, ಶಶಾಂಕ್‌ ಸಿಂಗ್‌, ಅಯ್ಯರ್‌ ಪಡೆಗೆ ಆಸರೆ ಒದಗಿಸಿದ್ದಾರೆ. ಕೈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್‌ ಸ್ಪಿನ್ನರ್‌ ಯಜ್ವೇಂದ್ರ ಚಾಹಲ್‌ ಕ್ವಾಲಿಫೈಯರ್‌-2 ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ತಂಡ, ಚಾಹಲ್‌ ಫೈನಲ್‌ನಲ್ಲಿ ಕಮ್‌ ಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿದೆ.

    ಮಳೆ ಸಾಧ್ಯತೆ ಇದೆಯೇ?
    ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಕ್ವಾಲಿಫೈಯರ್‌ ಪಂದ್ಯ, ಮಳೆಯಿಂದಾಗಿ 2 ಗಂಟೆ ತಡವಾಗಿ ಆರಂಭಗೊಂಡಿತ್ತು. ಫೈನಲ್‌ಗೂ ಸಾಕ್ಷಿಯಾಗಲಿರುವ ಅಹಮದಾಬಾದ್‌ನಲ್ಲಿ ಸದ್ಯದ ಮಾಹಿತಿ ಪ್ರಕಾರ ಮಂಗಳವಾರ ಮಳೆಯ ಸಾಧ್ಯತೆ ಶೇ.62ರಷ್ಟಿದೆ. ಆದರೆ, ಬೆಳಗ್ಗೆ ಅಥವಾ ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ರಾತ್ರಿ ವೇಳೆ ಮಳೆಯ ಸಾಧ್ಯತೆ ಶೇ.5ರಷ್ಟು ಎಂದು ಹವಾಮಾನ ವರದಿ ತಿಳಿಸಿದೆ.

  • ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

    ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

    ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ 2025 ಫೈನಲ್‌ಗೆ ಪ್ರವೇಶಿದೆ. ಇದೇ ಸಂಭ್ರಮದಲ್ಲಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಕಡೆ ತಿರುಗಿ ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ ಎಂದು ಸನ್ನೆ ಮಾಡಿದ್ದಾರೆ. ಕೊಹ್ಲಿಯ ಈ ಸಂಭ್ರಮ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಗೂ ಫೋಟೋಗಳು ವೈರಲ್‌ ಆಗಿವೆ.

    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಆರ್‌ಸಿಬಿ ಗೆಲುವಿಗೆ ಸಂಭ್ರಮಾಚರಣೆ ಮಾಡುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಆರ್‌ಸಿಬಿ ಗೆಲುವಿನ ನಂತರ, ಅನುಷ್ಕಾ ಸಹ ಎದ್ದು ನಿಂತು ಸುಮಾರು 10 ನಿಮಿಷಗಳ ಕಾಲ ಚಪ್ಪಾಳೆ ತಟ್ಟಿದರು. ಈ ವೇಳೆ, ಕೊಹ್ಲಿ ಸನ್ನೆ ಮಾಡಿದ್ದಾರೆ. ಇದಕ್ಕೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ, ಕೊಹ್ಲಿ ಕಪ್‌ ಗೆಲ್ಲೋಕೆ ಒಂದೆ ಸ್ಟೆಪ್‌ ಎಂದು ಅನುಷ್ಕಾಗೆ ಹೇಳುತ್ತಿದ್ದಾರೆ ಎಂದು ಕಾಮೆಂಟ್‌ ಮಾಡಿದ್ದಾನೆ.

  • ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

    ಪಂಜಾಬ್‌ ವಿರುದ್ಧ ಭರ್ಜರಿ ಗೆಲವು ಸಾಧಿಸಿ ಫೈನಲ್‌ ಪ್ರವೇಶಿಸಿದ ಆರ್‌ಸಿಬಿ ತಂಡಕ್ಕೆ ಉದ್ಯಮಿ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಆರ್‌ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್‌ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ.

    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿಲ್‌ ಸಾಲ್ಟ್‌ ಸ್ಫೋಟಕ ಅರ್ಧಶತಕದೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು. 27 ಬಾಲ್‌ಗಳಿಗೆ 6 ಫೋರ್‌, 3 ಸಿಕ್ಸರ್‌ನೊಂದಿಗೆ 56 ರನ್‌ (ಔಟಾಗದೇ) ಗಳಿಸಿ ಮಿಂಚಿದರು. ವಿರಾಟ್‌ ಕೊಹ್ಲಿ 12, ಮಯಂಕ್‌ ಅಗರ್ವಾಲ್‌ 19, ರಜತ್‌ ಪಾಟೀದಾರ್‌ 15 ರನ್‌ (ಔಟಾಗದೇ) ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 10 ಓವರ್‌ಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್ ಆರ್ಯ 7, ಜೋಶ್‌ ಇಂಗ್ಲಿಸ್‌ 4, ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ 2, ನೆಹಾಲ್ ವಧೇರಾ 8 ರನ್‌ನ ಒಂದಂಕಿ ಆಟದಿಂದ ನಿರಾಸೆ ಮೂಡಿಸಿದರು. ಪ್ರಭಸಿಮ್ರನ್ ಸಿಂಗ್ 18, ಮಾರ್ಕಸ್ ಸ್ಟೊಯಿನಿಸ್ 26, ಅಜ್ಮತುಲ್ಲಾ ಒಮರ್ಜೈ 18 ರನ್‌ಗಳಿಸಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಕೊನೆಗೆ ಪಂಜಾಬ್‌ 14.1 ಓವರ್‌ಗೆ 101 ರನ್‌ ಗಳಿಸಿ ಆಲೌಟ್‌ ಆಯಿತು.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

  • IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

    IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

    ಲ್ಲನ್‌ಪುರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಬಾರಿಯೂ ಸೇರಿ, ಆರ್‌ಸಿಬಿ ನಾಲ್ಕು ಬಾರಿ ಫೈನಲ್‌ ಪ್ರವೇಶಿಸಿದೆ. ತಂಡದ ಹಿಂದಿನ ಫೈನಲ್‌ ಪ್ರವೇಶದ ಹಾದಿ ಹೇಗಿತ್ತು ಎಂದು ಇಲ್ಲಿ ವಿವರಿಸಲಾಗಿದೆ.

    2009 – ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು.

    2011 ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

    2016 – 8 ರನ್‌ಗಳಿಂದ ಕೈತಪ್ಪಿದ ಟ್ರೋಫಿ
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    2025 – ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಜಯ, 4ನೇ ಬಾರಿಗೆ ಫೈನಲ್‌ಗೆ ಲಗ್ಗೆ
    ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು. ಈ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಆರ್‌ಸಿಬಿ ಕಪ್‌ ಗೆಲ್ಲುವ ಉತ್ಸಾಹದಲ್ಲಿದೆ.

  • ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

    ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

    ಚಂಡೀಗಢ: ಮಲ್ಲನ್‌ಪುರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಕ್ವಾಲಿಫೈಯರ್‌ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 102 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 10 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 106 ರನ್‌ ಸಿಡಿಸಿ ಗೆಲುವು ಸಾಧಿಸಿದೆ. ಈ ಮೂಲಕ 4ನೇ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿದೆ.

    2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 7 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಯಾವ ವರ್ಷ – ಯಾವ ತಂಡ?
    2018 – CSK.
    2019 – MI.
    2020 – MI.
    2021 – CSK.
    2022 – GT.
    2023 – CSK.
    2024 – KKR
    2025 – ….?

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್‌ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.