Tag: Rajat patidar

  • IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

    IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

    ಚಂಡೀಗಢ: ಐಪಿಎಲ್‌ (IPL 2025) ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ (RCB) ಫೈನಲ್‌ಗೆ ಲಗ್ಗೆ ಇಟ್ಟಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು. ಇದನ್ನೂ ಓದಿ: ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

    ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿಲ್‌ ಸಾಲ್ಟ್‌ ಸ್ಫೋಟಕ ಅರ್ಧಶತಕದೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು. 27 ಬಾಲ್‌ಗಳಿಗೆ 6 ಫೋರ್‌, 3 ಸಿಕ್ಸರ್‌ನೊಂದಿಗೆ 56 ರನ್‌ (ಔಟಾಗದೇ) ಗಳಿಸಿ ಮಿಂಚಿದರು. ವಿರಾಟ್‌ ಕೊಹ್ಲಿ 12, ಮಯಂಕ್‌ ಅಗರ್ವಾಲ್‌ 19, ರಜತ್‌ ಪಾಟೀದಾರ್‌ 15 ರನ್‌ (ಔಟಾಗದೇ) ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 10 ಓವರ್‌ಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಜಯ ಸಾಧಿಸಿತು.

    ಕ್ವಾಲಿಫೈಯರ್‌ 1 ಮ್ಯಾಚ್‌ನಲ್ಲಿ ಪಂಜಾಬ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಶ್ರೇಯಸ್‌ ಅಯ್ಯರ್‌ ಪಡೆ ಮೊದಲ ಪವರ್‌ಪ್ಲೇನಲ್ಲೇ ಪ್ರಮುಖ 48 ರನ್‌ ಇದ್ದಾಗ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತು. ಇದನ್ನೂ ಓದಿ: ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

    ಪ್ರಿಯಾಂಶ್ ಆರ್ಯ 7, ಜೋಶ್‌ ಇಂಗ್ಲಿಸ್‌ 4, ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ 2, ನೆಹಾಲ್ ವಧೇರಾ 8 ರನ್‌ನ ಒಂದಂಕಿ ಆಟದಿಂದ ನಿರಾಸೆ ಮೂಡಿಸಿದರು. ಪ್ರಭಸಿಮ್ರನ್ ಸಿಂಗ್ 18, ಮಾರ್ಕಸ್ ಸ್ಟೊಯಿನಿಸ್ 26, ಅಜ್ಮತುಲ್ಲಾ ಒಮರ್ಜೈ 18 ರನ್‌ಗಳಿಸಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಕೊನೆಗೆ ಪಂಜಾಬ್‌ 14.1 ಓವರ್‌ಗೆ 101 ರನ್‌ ಗಳಿಸಿ ಆಲೌಟ್‌ ಆಯಿತು.

    ಆರ್‌ಸಿಬಿ ಪರ ಬೌಲರ್‌ಗಳು ಮಿಂಚಿದರು. ತಂಡಕ್ಕೆ ಮತ್ತೆ ಮರಳಿದ ಜೋಶ್‌ ಹ್ಯಾಜಲ್‌ವುಡ್‌ ತಮ್ಮ ಮಾರಕ ಬೌಲಿಂಗ್‌ ಪ್ರದರ್ಶನ ತೋರಿದರು. ಹ್ಯಾಜಲ್‌ವುಡ್‌ ಮತ್ತು ಸುಯೇಶ್‌ ಶರ್ಮಾ ತಲಾ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಯಶ್‌ ದಯಾಳ್‌ 2, ಭುವನೇಶ್ವರ್‌ ಕುಮಾರ್‌ ಮತ್ತು ರೊಮಾರಿಯೊ ಶೆಫರ್ಡ್ ತಲಾ 1 ವಿಕೆಟ್‌ ಕಿತ್ತರು.

  • RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

    RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

    ಚಂಡೀಗಢ: ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದ ಪಂಜಾಬ್‌ ಕಿಂಗ್ಸ್‌ವು (Punjab Kings) ಕ್ವಾಲಿಫೈಯರ್‌-1ನಲ್ಲಿ 14.1 ಓವರ್‌ಗಳಲ್ಲೇ 101‌ ರನ್‌ಗಳಿಗೆ ಆಲೌಟ್‌ ಆಗಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ (RCB) 102 ರನ್‌ಗಳ ಗುರಿ ನೀಡಿದೆ.

    ಮಲ್ಲನ್‌ಪುರ ಕ್ರಿಕೆಟ್‌ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಮೊದಲು‌ ಫೀಲ್ಡಿಂಗ್‌ ಆಯ್ದುಕೊಂಡು ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಂಜಾಬ್‌ಗೆ ಬಿಟ್ಟುಕೊಟ್ಟಿತು.

    ಉತ್ತಮ ರನ್‌ ಪೇರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದ ಪಂಜಾಬ್‌ ಕಿಂಗ್ಸ್‌ಗೆ  ಆರಂಭದಲ್ಲೇ ಮರ್ಮಾಘಾತವಾಯಿತು. 1.2 ಓವರ್‌ಗಳಲ್ಲಿ 9 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿದ್ದ ಪಂಜಾಬ್‌ ಬಳಿಕ ಪೆವಿಲಿಯನ್‌ ಪರೇಡ್‌ ನಡೆಸಲು ಶುರು ಮಾಡಿತು. ಪವರ್‌ ಪ್ಲೇನಲ್ಲಿ ಒಂದೆಡೆ ರನ್‌ ಹರಿಯುತ್ತಿದ್ದರೆ ಮತ್ತೊಂದೆಡೆ ಪ್ರಮುಖ ವಿಕೆಟ್‌ಗಳು ತರಗೆಲೆಗಳಂತೆ ಉದುರುತ್ತಿದ್ದವು. ಇದರಿಂದ ಪವರ್‌ ಪ್ಲೇನಲ್ಲಿ 48 ರನ್‌ ಗಳಿಸುವ ಹೊತ್ತಿಗೆ ಪಂಜಾಬ್‌ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು.

    ಆರ್‌ಸಿಬಿ ಬೌಲರ್‌ಗಳ ಬಿಗಿ ಹಿಡಿತ:
    ಮೊದಲ ಓವರ್‌ನಲ್ಲಿ ನಿರಾಸೆಗೊಂಡಿದ್ದ ಆರ್‌ಸಿಬಿ ಬೌಲಿಂಗ್‌ ಪಡೆ 2ನೇ ಓವರ್‌ನಿಂದಲೇ ಪಂಜಾಬ್‌ ಬ್ಯಾಟರ್‌ಗಳ ಮೇಲುಗೈ ಸಾಧಿಸಿತು. ಈ ಆವೃತ್ತಿಯಲ್ಲಿ ಮೆರೆದಾಡಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಗೆ ಪೆವಿಲಿಯನ್‌ ಹಾದಿ ತೋರುವಲ್ಲಿ ಯಶಸ್ವಿಯಾದರು. ಸೂಯಶ್‌ ಶರ್ಮಾ (Suyash Sharma) ಸ್ಪಿನ್‌ ಮೋಡಿ, ಜೋಶ್‌ ಹೇಜಲ್ವುಡ್‌, ಯಶ್‌ ದಯಾಳ್‌, ಭುವನೇಶ್ವರ್‌ ಕುಮಾರ್‌ ಅವರ ಉರಿ ಚೆಂಡಿನ ದಾಳಿಗೆ ಪಂಜಾಬ್‌ ರನ್‌ ಕದಿಯಲು ತಿಣುಕಾಡಿತು. ಮಾರ್ಕಸ್‌ ಸ್ಟೋಯ್ನಿಸ್‌, ನೇಹಾಲ್‌ ವಧೇರಾ ಹೊರತುಪಡಿಸಿದ್ರೆ ಉಳಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಒಂದಂಕಿಯ ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಪಂಜಾಬ್‌ ಕಿಂಗ್ಸ್‌ ಪರ ಮಾರ್ಕಸ್‌ ಸ್ಟೋಯ್ನಿಸ್‌ 26 ರನ್‌, ಅಜ್ಮತುಲ್ಲಾ ಒಮರ್ಜೈ, ಪ್ರಭ್‌ಸಿಮ್ರನ್‌ ತಲಾ 18 ರನ್‌, ಪ್ರಿಯಾಂಶ್‌ ಆರ್ಯ 7 ರನ್‌, ಜೋಶ್‌ ಇಂಗ್ಲಿಸ್‌ 4 ರನ್‌. ಶ್ರೇಯಸ್‌ ಅಯ್ಯರ್‌ 2 ರನ್‌, ನೇಹಾಲ್‌ ವಧೇರಾ 8 ರನ್‌, ಶಶಾಂಕ್‌ ಸಿಂಗ್‌ 3, ಹರ್ಪ್ರೀತ್‌ ಬ್ರಾರ್‌ 4 ರನ್‌ ಗಳಿಸಿದ್ರೆ ಮುಶೀರ್‌ ಖಾನ್‌ ಶೂನ್ಯ ಸುತ್ತಿದರು.

    ಆರ್‌ಸಿಬಿ ಪರ ಸೂಯಶ್‌ ಶರ್ಮಾ, ಜೋಶ್‌ ಹೇಜಲ್ವುಡ್‌ ತಲಾ 3 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌, ರೊಮಾರಿಯೊ ಶೆಫರ್ಡ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

  • ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಆರ್‌ಸಿಬಿಗೆ ʻಜೋಶ್‌ʼ – ಟಾಸ್‌ ಗೆದ್ದ ಬೆಂಗಳೂರು ಫೀಲ್ಡಿಂಗ್‌ ಆಯ್ಕೆ

    ಚಂಡೀಗಢ: 18ನೇ ಆವೃತ್ತಿ ಐಪಿಎಲ್‌ ಟೂರ್ನಿಯ ಕ್ವಾಲಿಫೈಯರ್‌-1 (IPL Qualifier 1) ಪಂದ್ಯ ಇಂದು ನಡೆಯುತ್ತಿದ್ದು, ಆರ್‌ಸಿಬಿ-ಪಂಜಾಬ್‌ ಕಿಂಗ್ಸ್‌ ತಂಡಗಳು ಕಾದಾಟ ನಡೆಸಲಿವೆ. ಟಾಸ್‌ ಗೆದ್ದ ಆರ್‌ಸಿಬಿ (RCB) ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಂಜಾಬ್‌ಗೆ ಬಿಟ್ಟುಕೊಟ್ಟಿದೆ.

    ಚಂಡೀಗಢದ ಮಲ್ಲನ್‌ಪುರ ಕ್ರಿಕೆಟ್‌ ಅಂಗಳದಲ್ಲಿ ಸರಿಯಾಗಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನೂ ಸೋತ ತಂಡ ಕ್ವಾಲಿಫೈಯರ್‌ 2ನಲ್ಲಿ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದೊಂದಿಗೆ ಸೆಣಸಲಿದೆ. ಗಾಯದ ಸಮಸ್ಯೆ ಎದುರಿಸುತ್ತಿದ್ದ ಜೋಶ್‌ ಹೇಜಲ್ವುಡ್‌ ಮತ್ತೆ ಆರ್‌ಸಿಬಿಗೆ ಕಂಬ್ಯಾಕ್‌ ಮಾಡಿದ್ದಾರೆ. ಇನ್ನೂ ಬೆರಳು ಗಾಯದ ಸಮಸ್ಯೆಯಿಂದ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿಯುತ್ತಿದ್ದ ರಜತ್‌ ಪಾಟಿದಾರ್‌ ಮತ್ತೆ ನಾಯಕತ್ವ ವಹಿಸಿಕೊಂಡಿದ್ದಾರೆ. ಹೀಗಾಗಿ ಇಂದಿನ ಆರ್‌ಸಿಬಿ ಫಲಿತಾಂಶದಲ್ಲಿ ಬದಲಾವಣೆ ತರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

    ಪಂಜಾಬ್‌ ಕಿಂಗ್ಸ್‌ ಪ್ಲೇಯಿಂಗ್‌-11
    ಪ್ರಿಯಾಂಶ್‌ ಆರ್ಯ, ಪ್ರಭ್‌ಸಿಮ್ರನ್‌ ಸಿಂಗ್‌, ಜೋಶ್‌ ಇಂಗ್ಲಿಷ್‌, ಶ್ರೇಯಸ್‌ ಅಯ್ಯರ್‌ (ನಾಯಕ), ನೇಹಾಲ್‌ ವಧೇರಾ, ಶಶಾಂಕ್‌ ಸಿಂಗ್‌, ಮಾರ್ಕಸ್‌ ಸ್ಟೋಯ್ನಿಸ್‌, ಅಝ್ಮತುಲ್ಲಾ ಒಮರ್ಝೈ, ಹರ್ಪ್ರೀತ್‌ ಬ್ರಾರ್‌, ಕೈಲ್‌ ಜೇಮಿಸನ್‌, ಅರ್ಷ್‌ದೀಪ್‌ ಸಿಂಗ್‌.

    ಆರ್‌ಸಿಬಿ ಪ್ಲೇಯಿಂಗ್‌-11
    ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌, ರಜತ್‌ ಪಾಟಿದಾರ್‌ (ನಾಯಕ), ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಿತೇಶ್‌ ಶರ್ಮಾ, ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜೋಶ್‌ ಹೇಜಲ್ವುಡ್‌, ಸೂಯಶ್‌ ಶರ್ಮಾ, ಯಶ್‌ ದಯಾಳ್‌.

  • RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

    ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ (IPL 2025) ಇನ್ನೇನು ಕೊನೆಯ ಹಂತ ತಲುಪಿದೆ. ಲೀಗ್‌ ಸುತ್ತಿನ ಎಲ್ಲಾ ಪಂದ್ಯಗಳು ಮುಕ್ತಾಯಗೊಂಡಿದ್ದು,‌ ಇಂದು ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸೆಣಸಲು ಸಜ್ಜಾಗಿವೆ.

    11 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಈ ಬಾರಿ ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿಯುವ ತವಕದಲ್ಲಿದೆ. 2011ರಲ್ಲಿ ಮೊದಲ ಬಾರಿಗೆ ಜಾರ್ಜ್ ಬೈಲಿ ನಾಯಕತ್ವದಲ್ಲಿ ಫೈನಲ್‌ ಪ್ರವೇಶಿಸಿದ್ದ ಪಂಜಾಬ್‌ ತಂಡ ಕೆಕೆಆರ್‌ ವಿರುದ್ಧ 3 ವಿಕೆಟ್‌ಗಳ ವಿರೋಚಿತ ಸೋಲು ಕಂಡಿತ್ತು. ಇನ್ನೂ ಐಪಿಎಲ್‌ನ ಜನಪ್ರಿಯ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಮೂರು ಬಾರಿ ಫೈನಲ್‌ ಪ್ರವೇಶಿಸಿಯೂ ಸೋಲು ಕಂಡಿತ್ತು. ಈ ಸಲ 10ನೇ ಬಾರಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದ್ದು, 18ನೇ ಆವೃತ್ತಿಯಲ್ಲಾದರೂ ಟ್ರೋಫಿ ಗೆಲ್ಲುವ ಕನಸು ನನಸು ಮಾಡಿಕೊಳ್ಳುತ್ತಾ ಅನ್ನೋದನ್ನು ಕಾದುನೋಡಬೇಕಿದೆ. ಹಾಗಾದ್ರೆ ಮೂರು ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಹೋರಾಟ ಹೇಗಿತ್ತು ಅನ್ನೋದನ್ನ ತಿಳಿಯಬೇಕಿದ್ರೆ ಮುಂದೆ ಓದಿ… ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

    ಫೈನಲ್‌ನಲ್ಲಿ ವಿರೋಚಿತ ಸೋಲು
    2009ರ ಆವೃತ್ತಿಯಲ್ಲೂ 8 ತಂಡಗಳು ಭಾಗವಹಿಸಿದ್ದವು. 2ನೇ ಆವೃತ್ತಿಯಲ್ಲಿ ಆರ್‌ಸಿಬಿ ಪುಟಿದೆದ್ದಿತ್ತು. 14 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿ 16 ಅಂಕ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿತ್ತು. ಆಗ ಎಲಿಮಿನೇಟರ್ ಪಂದ್ಯ ಇರಲಿಲ್ಲ, 2 ಸೆಮಿಫೈನಲ್ ಪಂದ್ಯಗಳು ಮಾತ್ರ ಇದ್ದವು. ಮೊದಲ ಸೆಮಿಫೈನಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಇಂದಿನ ಡೆಲ್ಲಿ ಕ್ಯಾಪಿಟಲ್ಸ್), ಹೈದರಾಬಾದ್ ಡೆಕ್ಕನ್ ಚಾರ್ಜಸ್ ಕಾದಾಟ ನಡೆಸಿದ್ರೆ, 2ನೇ ಸೆಮಿಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಿತ್ತು. ಈ ವೇಳೆ ಸೆಮಿಸ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ ಫೈನಲ್‌ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧ 6 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಟ್ರೋಫಿ ಗೆಲ್ಲುವ ಕನಸೂ ಕಮರಿತ್ತು. ಇದನ್ನೂ ಓದಿ: ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

    ಚೆನ್ನೈ ವಿರುದ್ಧ ಎರಡೆರಡುಬಾರಿ ಸೋಲು
    2011ರ ಆವೃತ್ತಿ ಆರ್‌ಸಿಬಿ ಪಾಲಿಗೆ ಅತ್ಯಂತ ರೋಚಕ ಘಟ್ಟ. ಲೀಗ್ ಸುತ್ತಿನಲ್ಲಿ 14ರಲ್ಲಿ 9 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸಿತ್ತು. ಈ ವೇಳೆಗೆ ಪ್ಲೇ ಆಫ್ ಸ್ವರೂಪ ಸಂಪೂರ್ಣ ಬದಲಾಗಿತ್ತು. ಮೊದಲ ಸೆಮಿಫೈನಲ್‌ನಲ್ಲಿ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಕಂಡಿದ್ದ ಆರ್‌ಸಿಬಿಗೆ ಮತ್ತೊಂದು ಅವಕಾಶ ಸಿಕ್ಕಿತ್ತು. ಆಗ 2ನೇ ಕಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಕಂಡಿದ್ದ ಆರ್‌ಸಿಬಿ ಪುನಃ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 58 ರನ್‌ಗಳಿಂದ ಸೋಲು ಕಂಡಿತ್ತು. ಆಗ ಚೆನ್ನೈ ಸೂಪರ್ ಕಿಂಗ್ಸ್ ಸತತ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

    8 ರನ್‌ಗಳಿಂದ ಕೈತಪ್ಪಿದ ಟ್ರೋಫಿ 
    2016 ಐಪಿಎಲ್ ಆವೃತ್ತಿ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಫೈನಲ್ ತಲುಪಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತ್ತು. ಆದ್ರೆ ಚೇಸಿಂಗ್ ಮಾಡಿದ್ದ ಆರ್‌ಸಿಬಿ ಕ್ರಿಸ್‌ಗೇಲ್ ಮತ್ತು ಕಿಂಗ್ ಕೊಹ್ಲಿ ಆರ್ಭಟದ ಹೊರತಾಗಿ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತು. ಆಗ ಸನ್ ರೈಸರ್ಸ್ ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

    18ನೇ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ 9 ಪಂದ್ಯ ಗೆದ್ದಿರುವ ಆರ್‌ಸಿಬಿ ಟ್ರೋಫಿ ಎತ್ತಿ ಹಿಡಿಯಲೇಬೇಕೆಂದು ಪಣ ತೊಟ್ಟಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

  • IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

    IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

    ಲಕ್ನೋ: ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಲಕ್ನೋ ತಂಡ ಸೋತರೂ ನಾಯಕ ಬಾರಿಸಿದ ರಿಷಭ್‌ ಪಂತ್‌ ಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

    17ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ದಿಗ್ವೇಶ್‌ ರಾಠಿ ಮೊದಲ ಎಸೆತದಲ್ಲೇ ಜಿತೇಶ್‌ ಶರ್ಮಾರನ್ನ ಔಟ್‌ ಮಾಡಿದ್ದರು. ಆದ್ರೆ ಅದು ನೋಬಾಲ್‌ ಆಗಿತ್ತು. ಈ ಬಗ್ಗೆ ರಿಷಭ್‌ ಪಂತ್‌ ಟಿವಿ ಅಂಪೈರ್‌ಗೂ ಮೊದಲೇ ಸಿಗ್ನಲ್‌ ಸೂಚಿಸುತ್ತಿದ್ದರು. ಆ ಎಸೆತದಲ್ಲಿ ಟಿವಿ ಅಂಪೈರ್‌ ತೀರ್ಪು ಪರಿಶೀಲಿಸುವುದಕ್ಕೂ ಮುನ್ನ‌ ನೋಬಾಲ್‌ ಸಿಗ್ನಲ್‌ ಕೊಡಲಾಯಿತು. ಇನ್ನೂ ಅದೇ ಓವರ್‌ನ ಕೊನೇ ಎಸೆತದಲ್ಲಿ ದಿಗ್ವೇಶ್‌ ರಾಠಿ ಸ್ಫೋಟಕವಾಗಿ ಆಡುತ್ತಿದ್ದ ಜಿತೇಶ್‌ ಶರ್ಮಾರನ್ನ ಮಂಕಡ್‌ ರನೌಟ್‌ ಮಾಡಲು ಯತ್ನಿಸಿದರು. ಈ ಬಗ್ಗೆ ಮೂರನೇ ಅಂಪೈರ್‌ಗೂ ಅಪೀಲ್‌ ಮಾಡಿದ್ದರು. ಇದು ಆರ್‌ಸಿಬಿ ಫಲಿತಾಂಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿತ್ತು. ಆದ್ರೆ ತೀರ್ಪು ಹೊರ ಬರುವಷ್ಟರಲ್ಲಿ ಪಂತ್‌ ರಿವೀವ್ಯೂ ಹಿಂಪಡೆದರು. ಇದರಿಂದ ಭಾವುಕರಾದ ಜಿತೇಶ್‌ ಶರ್ಮಾ ಮೈದಾನದಲ್ಲೇ ಒಂದು ಕ್ಷಣ ಪಂತ್‌ರನ್ನ ಅಪ್ಪಿಕೊಂಡರು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಲಕ್ನೋ ತಂಡ ಪಂತ್‌ ಅಮೋಘ ಶತಕದ ನೆರವಿನಿಂದ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 18.4 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 230 ರನ್‌ ಗಳಿಸಿ ಗೆದ್ದು ಬೀಗಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ ಅತಿದೊಡ್ಡ ಮೊತ್ತ ಚೇಸಿಂಗ್‌ ಮಾಡಿದ ದಾಖಲೆಯನ್ನೂ ಬರೆದಿದೆ.

    ಮಯಾಂಕ್‌ ಜಿತೇಶ್‌ ಶತಕದ ಜೊತೆಯಾಟ:
    ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಆರ್‌ಸಿಬಿಗೆ ಜಿತೇಶ್‌ ಶರ್ಮಾ – ಮಯಾಂಕ್‌ ಅಗರ್ವಾಲ್‌ ಬ್ಯಾಟಿಂಗ್‌ನಲ್ಲಿ ಬಲ ತುಂಬಿದರು. ಮುರಿಯದ 5ನೇ ವಿಕೆಟಿಗೆ ಈ ಜೋಡಿ 45 ಎಸೆತಗಳಲ್ಲಿ ಸ್ಫೋಟಕ 107 ರನ್‌ ಬಾರಿಸಿತು. ಇದು ತಂಡದ ಗೆಲುವನ್ನು ಸುಲಭವಾಗಿಸಿತು. 257.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಜಿತೇಶ್‌ ಶರ್ಮಾ 33 ಎಸೆತಗಳಲ್ಲಿ 85 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ವಿರಾಟ್‌ ಕೊಹ್ಲಿ 54 ರನ್‌ (30 ಎಸೆತ, 10 ಬೌಂಡರಿ), ಮಯಾಂಕ್‌ ಅಗರ್ವಾಲ್‌ 41 ರನ್‌ (23 ಎಸೆತ, 5 ಬೌಂಡರಿ) ಫಿಲ್‌ ಸಾಲ್ಟ್‌ 30 ರನ್‌ (19 ಎಸೆತ, 6 ಬೌಂಡರಿ), ರಜತ್‌ ಪಾಟೀದಾರ್‌ 14 ರನ್‌ ಗಳಿಸಿದ್ರು.

    ಲಕ್ನೋ ಪರ ರೂರ್ಕಿ 2 ವಿಕೆಟ್‌ ಕಿತ್ತರೆ, ಅಕಾಶ್‌ ಸಿಂಗ್‌, ಅವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿತ್ತು. ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿರುವ ಲಕ್ನೋ ಕೊನೆಯ ಪಂದ್ಯದಲ್ಲಿ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. 2.4 ಓವರ್‌ಗಳಲ್ಲಿ 25 ರನ್‌ಗಳಿದ್ದಾಗಲೇ ಮೊದಲ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿತು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ ಮತ್ತೊಬ್ಬ ಆರಂಭಿಕ ಮಿಚೆಲ್ ಮಾರ್ಷ್ ಜೊತೆಗೂಡಿ ಅಬ್ಬರಿಸಲು ಪ್ರಾರಂಭಿಸಿದರು. 2ನೇ ವಿಕೆಟಿಗೆ ಈ ಜೋಡಿ 78 ಎಸೆತಗಳಲ್ಲಿ ಬರೋಬ್ಬರಿ 152 ರನ್ ಜೊತೆಯಾಟ ನೀಡಿತ್ತು. ಇದರಿಂದ ಲಕ್ನೋ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಲಕ್ನೋ ಪರ 193.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಪಂತ್ ಅಜೇಯ 118 ರನ್ (61 ಎಸೆತ, 8 ಸಿಕ್ಸರ್, 11 ಬೌಂಡರಿ), ಮಿಚೆಲ್ ಮಾರ್ಷ್ 67 ರನ್ ?(37 ಎಸೆತ, 5 ಸಿಕ್ಸರ್, 4 ಬೌಂಡರಿ), ಮ್ಯಾಥ್ಯೂ ಬ್ರೀಟ್ಜ್ಕೆ 14 ರನ್, ನಿಕೋಲಸ್ ಪೂರನ್ 13 ರನ್, ಅಬ್ದುಲ್ ಸಮದ್ 1 ರನ್ ಗಳಿಸಿದ್ರೆ, ಲೆಗ್‌ಬೈಸ್, ನೋಬಾಲ್, ವೈಡ್‌ನಿಂದ 14 ಹೆಚ್ಚುವರಿ ರನ್ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ನುವಾನ್ ತುಷಾರ, ಭುವನೇಶ್ಚರ್ ಕುಮಾರ್, ರೊಮಾರಿಯೊ ಶೆಫರ್ಡ್ ತಲಾ ಒಂದೊಂದು ವಿಕೆಟ್ ಪಡೆದರು.

  • IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳೀಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

    IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳೀಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

    – ದಾಖಲೆಯ ರನ್‌ ಚೇಸ್‌ನೊಂದಿಗೆ 6 ವಿಕೆಟ್‌ಗಳ ಅಮೋಘ ಜಯ

    ಲಕ್ನೋ: ಜಿತೇಶ್‌ ಶರ್ಮಾ (Jitesh sharma) ನಾಯಕನ ಆಟಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ 18ನೇ ಆವೃತ್ತಿಯ ಲೀಗ್‌ ಪಂದ್ಯಗಳನ್ನು ಮುಗಿಸಿದ್ದು, ಕ್ವಾಲಿಫೈಯರ್‌-1ಗೆ ಲಗ್ಗೆಯಿಟ್ಟಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಲಕ್ನೋ ತಂಡ ಪಂತ್‌ ಅಮೋಘ ಶತಕದ ನೆರವಿನಿಂದ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ (RCB) 18.4 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 230 ರನ್‌ ಗಳಿಸಿ ಗೆದ್ದು ಬೀಗಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ ಅತಿದೊಡ್ಡ ಮೊತ್ತ ಚೇಸಿಂಗ್‌ ಮಾಡಿದ ದಾಖಲೆಯನ್ನೂ ಬರೆದಿದೆ.

    ಚೇಸಿಂಗ್‌ ಆರಂಭಿಸಿದ ಆರ್‌ಸಿಬಿ ಬಿರುಸಿನ ಆಟಕ್ಕೆ ಮುಂದಾಯಿತು. ಮೊದಲ ವಿಕೆಟಿಗೆ ವಿರಾಟ್‌ ಕೊಹ್ಲಿ (Virat Kohli), ಸಾಲ್ಟ್‌ ಜೋಡಿ 34 ಎಸೆತಗಳಲ್ಲಿ 61 ರನ್‌ಗಳ ಜೊತೆಯಾಟ ನೀಡಿತ್ತು. ಫಿಲ್‌ ಸಾಲ್ಟ್‌ 19 ಎಸೆತಗಳಲ್ಲಿ 30 ರನ್‌ಗಳಿಸಿ ಔಟಾಗುತ್ತಿದ್ದಂತೆ ರನ್‌ ವೇಗವೂ ಕಡಿತಗೊಂಡಿತ್ತು. ಅಲ್ಲದೇ ರಜ್‌ ಪಾಟೀದಾರ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ ಬ್ಯಾಟಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದರು. ಇದರಿಂದ ಆರ್‌ಸಿಬಿಗೆ ಗೆಲುವು ಕಠಿಣವಾಗಿತ್ತು.

    ಮಯಾಂಕ್‌ ಜಿತೇಶ್‌ ಶತಕದ ಜೊತೆಯಾಟ:
    ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಆರ್‌ಸಿಬಿಗೆ ಜಿತೇಶ್‌ ಶರ್ಮಾ – ಮಯಾಂಕ್‌ ಅಗರ್ವಾಲ್‌ ಬ್ಯಾಟಿಂಗ್‌ನಲ್ಲಿ ಬಲ ತುಂಬಿದರು. ಮುರಿಯದ 5ನೇ ವಿಕೆಟಿಗೆ ಈ ಜೋಡಿ 45 ಎಸೆತಗಳಲ್ಲಿ ಸ್ಫೋಟಕ 107 ರನ್‌ ಬಾರಿಸಿತು. ಇದು ತಂಡದ ಗೆಲುವನ್ನು ಸುಲಭವಾಗಿಸಿತು. 257.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಜಿತೇಶ್‌ ಶರ್ಮಾ 33 ಎಸೆತಗಳಲ್ಲಿ 85 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ವಿರಾಟ್‌ ಕೊಹ್ಲಿ 54 ರನ್‌ (30 ಎಸೆತ, 10 ಬೌಂಡರಿ), ಮಯಾಂಕ್‌ ಅಗರ್ವಾಲ್‌ 41 ರನ್‌ (23 ಎಸೆತ, 5 ಬೌಂಡರಿ) ಫಿಲ್‌ ಸಾಲ್ಟ್‌ 30 ರನ್‌ (19 ಎಸೆತ, 6 ಬೌಂಡರಿ), ರಜತ್‌ ಪಾಟೀದಾರ್‌ 14 ರನ್‌ ಗಳಿಸಿದ್ರು.

    ಲಕ್ನೋ ಪರ ರೂರ್ಕಿ 2 ವಿಕೆಟ್‌ ಕಿತ್ತರೆ, ಅಕಾಶ್‌ ಸಿಂಗ್‌, ಅವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿತ್ತು. ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿರುವ ಲಕ್ನೋ ಕೊನೆಯ ಪಂದ್ಯದಲ್ಲಿ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. 2.4 ಓವರ್‌ಗಳಲ್ಲಿ 25 ರನ್‌ಗಳಿದ್ದಾಗಲೇ ಮೊದಲ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿತು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ ಮತ್ತೊಬ್ಬ ಆರಂಭಿಕ ಮಿಚೆಲ್ ಮಾರ್ಷ್ ಜೊತೆಗೂಡಿ ಅಬ್ಬರಿಸಲು ಪ್ರಾರಂಭಿಸಿದರು. 2ನೇ ವಿಕೆಟಿಗೆ ಈ ಜೋಡಿ 78 ಎಸೆತಗಳಲ್ಲಿ ಬರೋಬ್ಬರಿ 152 ರನ್ ಜೊತೆಯಾಟ ನೀಡಿತ್ತು. ಇದರಿಂದ ಲಕ್ನೋ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಲಕ್ನೋ ಪರ 193.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಪಂತ್ ಅಜೇಯ 118 ರನ್ (61 ಎಸೆತ, 8 ಸಿಕ್ಸರ್, 11 ಬೌಂಡರಿ), ಮಿಚೆಲ್ ಮಾರ್ಷ್ 67 ರನ್ ?(37 ಎಸೆತ, 5 ಸಿಕ್ಸರ್, 4 ಬೌಂಡರಿ), ಮ್ಯಾಥ್ಯೂ ಬ್ರೀಟ್ಜ್ಕೆ 14 ರನ್, ನಿಕೋಲಸ್ ಪೂರನ್ 13 ರನ್, ಅಬ್ದುಲ್ ಸಮದ್ 1 ರನ್ ಗಳಿಸಿದ್ರೆ, ಲೆಗ್‌ಬೈಸ್, ನೋಬಾಲ್, ವೈಡ್‌ನಿಂದ 14 ಹೆಚ್ಚುವರಿ ರನ್ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ನುವಾನ್ ತುಷಾರ, ಭುವನೇಶ್ಚರ್ ಕುಮಾರ್, ರೊಮಾರಿಯೊ ಶೆಫರ್ಡ್ ತಲಾ ಒಂದೊಂದು ವಿಕೆಟ್ ಪಡೆದರು.

  • 7 ವರ್ಷಗಳ ಬಳಿಕ ಶತಕ ಸಿಡಿಸಿ ಪಲ್ಟಿ ಹೊಡೆದ ಪಂತ್‌

    7 ವರ್ಷಗಳ ಬಳಿಕ ಶತಕ ಸಿಡಿಸಿ ಪಲ್ಟಿ ಹೊಡೆದ ಪಂತ್‌

    ಲಕ್ನೋ: 18ನೇ ಆವೃತ್ತಿಯ ಐಪಿಎಲ್‌ಗೆ 27 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದ ರಿಷಭ್‌ ಪಂತ್‌ (Rishabh Pant) ಭಾರೀ ನಿರೀಕ್ಷೆಯೊಂದಿಗೆ ಅಖಾಡಕ್ಕಿಳಿದಿದ್ದರು. ಆದ್ರೆ ಆರಂಭಿಕ ಪಂದ್ಯದಿಂದಲೂ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ ಟ್ರೋಲ್‌ಗೆ ಒಳಗಾಗಿದ್ದ ಪಂತ್‌ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ.

    7 ವರ್ಷಗಳ ಬಳಿಕ ಶತಕ ಸಿಡಿಸಿದ ಪಂತ್‌ ಮೈದಾನದಲ್ಲಿಯೇ ಪಲ್ಟಿ ಹೊಡೆದು ಸಂಭ್ರಮಿಸಿದರು. ಇದು 7 ವರ್ಷಗಳ ಬಳಿಕ ಪಂತ್‌ ಸಿಡಿಸಿದ ಶತಕವಾಗಿದೆ. 2018ರಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ (ಇಂಡಿನ ಡೆಲ್ಲಿ ಕ್ಯಾಪಿಟಲ್ಸ್) ತಂಡದಲ್ಲಿದ್ದ ಪಂತ್‌‌ ಅಜೇಯ 128 ರನ್‌ (63 ಎಸೆತ, 7 ಸಿಕ್ಸರ್‌, 15 ಬೌಂಡರಿ) ಬಾರಿಸಿದ್ದರು. ಆದ್ರೆ ಆ ಪಂದ್ಯದಲ್ಲೂ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಡೇರ್‌ಡೆವಿಲ್ಸ್‌ ಸೋತಿತ್ತು.

    ಈ ಆವೃತ್ತಿಯ ಆರಂಭದಿಂದಲೂ ಲಕ್ನೋ ತಂಡ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತು. ಮೊದಲ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 209 ರನ್‌ಗಳಿಸಿತ್ತು. ಆದ್ರೆ ಆ ಪಂದ್ಯದಲ್ಲೂ ರಿಷಭ್‌ ಪಂತ್‌ ಶೂನ್ಯ ಸುತ್ತಿದರು. ಬಳಿಕ‌ ನಡೆದ ಪಂದ್ಯಗಳಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದಲ್ಲಿ 63 ರನ್‌ ಗಳಿಸಿತ್ತಾದರೂ 49 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೂ ಸಹ ಪಂತ್‌ ವಿರುದ್ಧ ಅಭಿಮಾನಿಗಳು ಬೇಸರಗೊಳ್ಳುವಂತೆ ಮಾಡಿತ್ತು. ಆದ್ರೆ ಲೀಗ್‌ ಪಂದ್ಯದಲ್ಲಿ ಪಂತ್‌ ಅಬ್ಬರಿಸಿದ ರೀತಿ ಕಂಡು ಫ್ಯಾನ್ಸ್‌ ದಂಗಾಗಿದ್ದಾರೆ.

    ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕಿಳಿದ ಪಂತ್‌ 54 ಎಸೆತಗಳಲ್ಲಿ 10 ಬೌಂಡರಿ, 6 ಸಿಕ್ಸರ್‌ ಸಹಿತ ಶತಕ ಪೂರೈಸಿದರು. ಒಟ್ಟು ತಾವು ಎದುರಿಸಿದ 61 ಎಸೆತಗಳಲ್ಲಿ 11 ಬೌಂಡರಿ, 8 ಸಿಕ್ಸರ್‌ ಸಹಿತ 118 ರನ್‌ ಗಳಿಸಿ ಅಜೇಯರಾಗುಳಿದರು.

  • ಆರ್‌ಸಿಬಿಗೆ ರಿಷಭ್‌ ʻಪಂಚ್‌ʼ – ಗೆಲುವಿಗೆ 228 ರನ್‌ಗಳ ಕಠಿಣ ಗುರಿ ನೀಡಿದ ಲಕ್ನೋ

    ಆರ್‌ಸಿಬಿಗೆ ರಿಷಭ್‌ ʻಪಂಚ್‌ʼ – ಗೆಲುವಿಗೆ 228 ರನ್‌ಗಳ ಕಠಿಣ ಗುರಿ ನೀಡಿದ ಲಕ್ನೋ

    ಲಕ್ನೋ: 18ನೇ ಆವೃತ್ತಿಯ ಐಪಿಎಲ್‌ನ ಆರಂಭದಿಂದಲೂ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದ ರಿಷಭ್ ‌ಪಂತ್‌ (Rishabh Pant) ಆಟಕ್ಕುಂಟು ಲೆಕ್ಕಕ್ಕಿಲ್ಲದ ಕೊನೆಯ ರೋಷಾವೇಶದ ಬ್ಯಾಟಿಂಗ್‌ ಮಾಡಿದರು. ಕ್ರೀಸ್‌ಗಿಳಿಯುತ್ತಿದ್ದಂತೆ ಸ್ಫೋಟಕ ಪ್ರದರ್ಶನಕ್ಕೆ ಮುಂದಾದ ಪಂತ್‌ ಆರ್‌ಸಿಬಿ (RCB) ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ನಿಗದಿತ ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿದೆ. ಈ ಮೂಲಕ ಆರ್‌ಸಿಬಿ ಗೆಲುವಿಗೆ 228 ರನ್‌ಗಳ ಕಠಿಣ ಗುರಿ ನೀಡಿದೆ.

    ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿರುವ ಲಕ್ನೋ ಕೊನೆಯ ಪಂದ್ಯದಲ್ಲಿ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. 2.4 ಓವರ್‌ಗಳಲ್ಲಿ 25 ರನ್‌ಗಳಿದ್ದಾಗಲೇ ಮೊದಲ ವಿಕೆಟ್‌ ಕಳೆದುಕೊಂಡು ನಿರಾಸೆ ಅನುಭವಿಸಿತು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್‌ ಮತ್ತೊಬ್ಬ ಆರಂಭಿಕ ಮಿಚೆಲ್‌ ಮಾರ್ಷ್‌ ಜೊತೆಗೂಡಿ ಅಬ್ಬರಿಸಲು ಪ್ರಾರಂಭಿಸಿದರು. 2ನೇ ವಿಕೆಟಿಗೆ ಈ ಜೋಡಿ 78 ಎಸೆತಗಳಲ್ಲಿ ಬರೋಬ್ಬರಿ 152 ರನ್‌ ಜೊತೆಯಾಟ ನೀಡಿತ್ತು. ಇದರಿಂದ ಲಕ್ನೋ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಲಕ್ನೋ ಪರ 193.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಪಂತ್ ಅಜೇಯ 118 ರನ್‌ (61 ಎಸೆತ,‌ 8 ಸಿಕ್ಸರ್‌, 11 ಬೌಂಡರಿ), ಮಿಚೆಲ್‌ ಮಾರ್ಷ್‌ 67 ರನ್‌ ?(37 ಎಸೆತ, 5 ಸಿಕ್ಸರ್‌, 4 ಬೌಂಡರಿ), ಮ್ಯಾಥ್ಯೂ ಬ್ರೀಟ್ಜ್ಕೆ 14 ರನ್‌, ನಿಕೋಲಸ್‌ ಪೂರನ್‌ 13 ರನ್‌, ಅಬ್ದುಲ್‌ ಸಮದ್‌ 1 ರನ್‌ ಗಳಿಸಿದ್ರೆ, ಲೆಗ್‌ಬೈಸ್‌, ನೋಬಾಲ್‌, ವೈಡ್‌ನಿಂದ 14 ಹೆಚ್ಚುವರಿ ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    ಆರ್‌ಸಿಬಿ ಪರ ನುವಾನ್‌ ತುಷಾರ, ಭುವನೇಶ್ಚರ್‌ ಕುಮಾರ್‌, ರೊಮಾರಿಯೊ ಶೆಫರ್ಡ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

    ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India – Pakistan) ನಡುವಿನ ಉದ್ವಿಗ್ನತೆಯಿಂದಾಗಿ 1 ವಾರಗಳ ಕಾಲ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಚುಟುಕು ಕ್ರಿಕೆಟ್ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು (Chinnaswamy Stadium) ಆರ್‌ಸಿಬಿ-ಕೆಕೆಆರ್‌ ತಂಡಗಳು ಮುಖಾಮುಖಿಯಾಗಲಿವೆ. ಹಿಗಾಗಿ ಚಿನ್ನಸ್ವಾಮಿ ಅಂಗಳದಲ್ಲಿ ಅತಿಹೆಚ್ಚು ಜನ ಸೇರುವ ಹಿನ್ನೆಲೆ ಸ್ಟೇಡಿಯಂ ಸುತ್ತಮುತ್ತ ಭದ್ರತೆ ಪರಿಶೀಲಿಸಲಾಗಿದೆ.

    ಇಂದಿನ ಪಂದ್ಯ ಕಿಂಗ್‌ ಕೊಹ್ಲಿ (Virat Kohli) ಅಭಿಮಾನಿಗಳಿಗೆ ತುಂಬಾನೇ ವಿಶೇಷ. ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಮುಖ್ಯ ಆಕರ್ಷಣೆಯಾಗಿರಲಿದ್ದಾರೆ. ಇದರಿಂದ ಹೆಚ್ಚಿನ ಜನ ಸೇರುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆ ಪರಿಶೀಲನೆ ನಡೆಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಇರುವ ಬೃಹತ್ ಮರಗಳನ್ನೂ ಪರಿಶೀಲಿಸಲಾಗಿದೆ.

    ಗೆದ್ದರೆ ಪ್ಲೇ ಆಫ್‌ಗೆ
    ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್ ಪಾಟೀದಾರ್ ಸಾರಥ್ಯದ ಆರ್‌ಸಿಬಿ, +0.482 ನೆಟ್ ರನ್‌ರೇಟ್‌ನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 16 ಅಂಕ ಪಡೆದಿರುವ ಗುಜರಾತ್ ಟೈಟನ್ಸ್ +0.793 ನೆಟ್ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಇಂದಿನ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ 18ನೇ ಆವೃತ್ತಿಯ ಐಪಿಎಲ್ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ. ಜೊತೆಗೆ 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಪ್ಲೇ ಆಫ್ ಪ್ರವೇಶಿಸಿದ ಇತಿಹಾಸವನ್ನು ಆರ್‌ಸಿಬಿ ನಿರ್ಮಿಸಲಿದೆ.

    ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್ ಕೆಕೆಆರ್‌ಗೆ ಉತ್ತಮ ರನ್‌ರೇಟ್‌ನೊಂದಿಗೆ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಒಂದು ವೇಳೆ ಸೋತರೆ ಪ್ಲೇ ಆಫ್ ಸ್ಪರ್ಧೆಯಿಂದ ಹೊರಗುಳಿದ 4ನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರದ ಪಂದ್ಯ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ.

    ಹಿಂದಿನ 4 ಪಂದ್ಯಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಆರ್‌ಸಿಬಿ, ತವರಿನಲ್ಲಿ 3ನೇ ಹಾಗೂ ಸತತ 5ನೇ ಜಯದ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಅತ್ತ ತಾನಾಡಿದ ಹಿಂದಿನ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲು ಕಂಡಿರುವ ಕೆಕೆಆರ್, ಪ್ಲೇ ಆಫ್ ಸ್ಪರ್ಧೆಯಲ್ಲಿ ಉಳಿಯಲು ಗೆಲುವಿನ ಅನಿವಾರ್ಯತೆಯನ್ನು ಎದುರಿಸುತ್ತಿದೆ.

    ರಜತ್ ಪಾಟೀದಾರ್ ಲಭ್ಯ:
    ಇನ್ನೂ ಹಿಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಬೆರಳು ಗಾಯಕ್ಕೆ ಒಳಗಾಗಿದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್, ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಶುಕ್ರವಾರ ತಂಡದ ಅಭ್ಯಾಸದಲ್ಲಿ ಅವರು ಭರ್ಜರಿ ತಾಲೀಮು ನಡೆಸಿರುವುದು ತಂಡದ ದೊಡ್ಡ ಚಿಂತೆಯನ್ನು ದೂರ ಮಾಡಿದೆ.

  • IPL 2025 | ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು – ಕೊಹ್ಲಿಯೇ ಆಕರ್ಷಣೆ, ಇಂದು ಗೆದ್ದರೆ ಇತಿಹಾಸ

    IPL 2025 | ಪ್ಲೇ-ಆಫ್‌ ಮೇಲೆ ಆರ್‌ಸಿಬಿ ಕಣ್ಣು – ಕೊಹ್ಲಿಯೇ ಆಕರ್ಷಣೆ, ಇಂದು ಗೆದ್ದರೆ ಇತಿಹಾಸ

    ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India And Pakistan) ನಡುವಿನ ಸಂಘರ್ಷದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಚುಟುಕು ಕ್ರಿಕೆಟ್‌ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ.

    ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ (KKR vs RCB) ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿ (Virat Kohli) ಎಲ್ಲರ ಆಕರ್ಷಣೆಯಾಗಲಿದ್ದಾರೆ.

    ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ (Rajat Patidar) ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 16 ಅಂಕ ಪಡೆದಿರುವ ಗುಜರಾತ್‌ ಟೈಟನ್ಸ್‌ +0.793 ನೆಟ್‌ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಇಂದಿನ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ 18ನೇ ಆವೃತ್ತಿಯ ಐಪಿಎಲ್‌ ಪ್ಲೇ-ಆಫ್‌ಗೆ ಪ್ರವೇಶಿಸಲಿದೆ. ಜೊತೆಗೆ 18 ಆವೃತ್ತಿಗಳಲ್ಲಿ ಮೊದಲ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿದ ಇತಿಹಾಸವನ್ನು ಆರ್‌ಸಿಬಿ ನಿರ್ಮಿಸಲಿದೆ.

    ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇಆಫ್‌ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್‌ ಕೆಕೆಆರ್‌ಗೆ ಉತ್ತಮ ರನ್‌ರೇಟ್‌ನೊಂದಿಗೆ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಒಂದು ವೇಳೆ ಸೋತರೆ ಪ್ಲೇಆಫ್‌ ಸ್ಪರ್ಧೆಯಿಂದ ಹೊರಗುಳಿದ 4ನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರದ ಪಂದ್ಯ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ.

    ಹಿಂದಿನ 4 ಪಂದ್ಯಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಆರ್‌ಸಿಬಿ, ತವರಿನಲ್ಲಿ 3ನೇ ಹಾಗೂ ಸತತ 5ನೇ ಜಯದ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಅತ್ತ ತಾನಾಡಿದ ಹಿಂದಿನ 3 ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲು ಕಂಡಿರುವ ಕೆಕೆಆರ್‌, ಪ್ಲೇಆಫ್‌ ಸ್ಪರ್ಧೆಯಲ್ಲಿ ಉಳಿಯಲು ಗೆಲುವಿನ ಅನಿವಾರ್ಯತೆಯನ್ನು ಎದುರಿಸುತ್ತಿದೆ.

    ರಜತ್‌ ಪಾಟೀದಾರ್‌ ಲಭ್ಯ:
    ಇನ್ನೂ ಹಿಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಬೆರಳು ಗಾಯಕ್ಕೆ ಒಳಗಾಗಿದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾ‌ರ್, ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಶುಕ್ರವಾರ ತಂಡದ ಅಭ್ಯಾಸದಲ್ಲಿ ಅವರು ಭರ್ಜರಿ ತಾಲೀಮು ನಡೆಸಿರುವುದು ತಂಡದ ದೊಡ್ಡ ಚಿಂತೆಯನ್ನು ದೂರ ಮಾಡಿದೆ.

    ಮಳೆಯದ್ದೇ ಆತಂಕ:
    ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಈ ಬಾರಿ ಬೌಲಿಂಗ್‌ಗೆ ಹೆಚ್ಚು ಸಹಕರಿಸುವ ಚಿನ್ನಸ್ವಾಮಿ ಪಿಚ್‌ನಲ್ಲಿ ಮಳೆಯೂ ಮೇಲುಗೈ ಸಾಧಿಸಬಹುದು. ಇದಕ್ಕೆ ಅನುಗುಣವಾಗಿ ಉಭಯ ತಂಡಗಳು ಕಾರ್ಯತಂತ್ರ ರೂಪಿಸಬೇಕಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಉಭಯ ತಂಡಗಳು ತಲಾ ಒಂದೊಂದು ಅಂಕ ಪಡೆದುಕೊಳ್ಳಲಿವೆ. ಮಳೆಯಿಂದ ಪಂದ್ಯ ರದ್ದಾಗಿ ಒಂದು ಅಂಕ ಪಡೆದರೂ ಆರ್‌ಸಿಬಿ ಪ್ಲೇ ಆಫ್‌ ಖಚಿತವಾಗಲಿದೆ.