Tag: Rajat patidar

  • IPL 2025 | ಆರ್‌ಸಿಬಿಗೆ 2 ರನ್‌ಗಳ ರೋಚಕ ಜಯ – 16 ವರ್ಷಗಳ ಬಳಿಕ ಹೊಸ ಮೈಲುಗಲ್ಲು

    IPL 2025 | ಆರ್‌ಸಿಬಿಗೆ 2 ರನ್‌ಗಳ ರೋಚಕ ಜಯ – 16 ವರ್ಷಗಳ ಬಳಿಕ ಹೊಸ ಮೈಲುಗಲ್ಲು

    ಬೆಂಗಳೂರು: ಕೊನೆಯ ಓವರ್‌ನಲ್ಲಿ ನೋಬಾಲ್‌ ಯಡವಟ್ಟಿನ ಹೊರತಾಗಿಯೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಸಿಎಸ್‌ಕೆ (CSK), ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿರುದ್ಧ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಡೆತ್‌ ಓವರ್‌ನಲ್ಲಿ ಕಂಬ್ಯಾಕ್‌ ಮಾಡಿದ ಆರ್‌ಸಿಬಿ 2 ರನ್‌ಗಳ ರೋಚಕ ಗೆಲುವು ಸಾಧಿಸಿತು.

    ಈ ಮೂಲಕ ಅಂಕಪಟ್ಟಿಯಲ್ಲಿ 16 ಅಂಕಗಳೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಪ್ಲೇ ಆಫ್‌ ಹಾದಿ ಬಹುತೇಕ ಖಚಿತಪಡಿಸಿಕೊಂಡಿದೆ. ಜೊತೆಗೆ 16 ವರ್ಷಗಳ ಐಪಿಎಲ್‌ (IPL 2025) ಇತಿಹಾಸದಲ್ಲಿ ಮೊದಲ ಬಾರಿಗೆ ಸತತ 2 ಬಾರಿ ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಸಾಧನೆ ಮಾಡಿದೆ.

    214 ರನ್‌ಗಳ ಬೃಹತ್‌ ಚೇಸಿಂಗ್‌ ಆರಂಭಿಸಿದ್ದ ಸಿಎಸ್‌ಕೆ 16 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 171 ರನ್‌ ಕೆಲಹಾಕಿ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ 17ನೇ ಓವರ್‌ನಲ್ಲಿ ಸ್ಪೋಟಕ ಆಟವಾಡುತ್ತಿದ್ದ ಆಯುಷ್‌ ಮಾತ್ರೆ, ದೇವಾಲ್‌ ಬ್ರೇವಿಸ್‌ ವಿಕೆಟ್‌ ಒಪ್ಪಿಸಿದ್ರು. ಇದು ಆರ್‌ಸಿಬಿ ಗೆಲುವಿಗೆ ಬಹುದೊಡ್ಡ ಟರ್ನಿಂಗ್‌ ನೀಡಿತು. ಬ್ರೇವಿಸ್‌ (Dewald Brevis) ಎಲ್‌ಬಿಡಬ್ಲ್ಯೂಗೆ ತುತ್ತಾದರು, ರಿವ್ಯೂ ತೆಗೆದುಕೊಳ್ಳುವಷ್ಟರಲ್ಲಿ ಸಮಯ ಮೀರಿತ್ತು. ಹೀಗಾಗಿ ಅಂಪೈರ್ಸ್‌ ಕಾಲ್‌ ಪ್ರಕಾರ ಔಟ್‌ ತೀರ್ಪು ನೀಡಲಾಯಿತು. ಅಲ್ಲದೇ ಕೊನೆಯ ಓವರ್‌ನ 3ನೇ ಎಸೆತದಲ್ಲಿ ಎಂ.ಎಸ್‌ ಧೋನಿ ಸಹ ಎಲ್‌ಬಿಎಬ್ಲ್ಯೂಗೆ ತುತ್ತಾಗಿದ್ದು, ಫಲಿತಾಂಶದ ಮೇಲೆ ಪರಿಣಾಮ ಬೀರಿತು.

    ಆಯುಷ್‌ ಮಾತ್ರೆ 94 ರನ್‌ (48 ಎಸೆತ, 5 ಸಿಕ್ಸರ್‌, 9 ಬೌಂಡರಿ), ಶೈಕ್‌ ರಶೀದ್‌ 14 ರನ್‌, ಸ್ಯಾಮ್‌ ಕರ್ರನ್‌ 5 ರನ್‌, ಜಡೇಜಾ 77 ರನ್‌ (45 ಎಸೆತ, 2 ಸಿಕ್ಸರ್‌, 8 ಬೌಂಡರಿ), ಎಂ.ಎಸ್‌ ಧೋನಿ 12 ರಮ್‌, ಶಿವಂ ದುಬೆ 8 ರನ್‌ ಕೊಡುಗೆ ನೀಡಿದರು.

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿತ್ತು. ಮೊದಲ ವಿಕೆಟ್‌ಗೆ ವಿರಾಟ್ ಕೊಹ್ಲಿ ಮತ್ತು ಜಾಕೊಬ್ ಬೆಥೆಲ್ ಜೋಡಿ 59 ಎಸೆತಗಳಲ್ಲಿ 97 ರನ್‌ಗಳ ಜೊತೆಯಾಟ ನೀಡಿತ್ತು. ಇವರಿಬ್ಬರ ವಿಕೆಟ್ ಬೀಳುತ್ತಿದ್ದಂತೆ ರನ್ ವೇಗವೂ ಕಡಿತಗೊಂಡಿತ್ತು. 14 ಓವರ್‌ಗಳಲ್ಲಿ 144 ರನ್ ಗಳಿಸಿದ್ದ ಆರ್‌ಸಿಬಿ 18 ಓವರ್ ಕಳೆದರೂ 160 ರನ್ ಗಡಿ ದಾಟುವಲ್ಲಿ ವಿಫಲವಾಗಿತ್ತು.

    ಇದರಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವುದೂ ಕಷ್ಟವಾಗಿತ್ತು. ಆದ್ರೆ ಕೊನೆಯಲ್ಲಿ ಕ್ರೀಸ್‌ಗೆ ಬಂದ ರೊಮಾರಿಯೋ ಶೆಫರ್ಡ್ 19ನೇ ಓವರ್‌ನಲ್ಲಿ ಖಲೀಲ್ ಅಹ್ಮದ್ ಬೌಲಿಂಗ್‌ಗೆ ಒಂದೇ ಓವರ್‌ನಲ್ಲಿ 33 ರನ್ ಚಚ್ಚಿದರು. ಜೊತೆಗೆ 20ನೇ ಓವರ್‌ನಲ್ಲಿ ಬರೋಬ್ಬರಿ 20 ರನ್ ಚಚ್ಚಿದ ಪರಿಣಾಮ ಆರ್‌ಸಿಬಿ ಸುಲಭವಾಗಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಆರ್‌ಸಿಬಿ ಪರ ವಿರಾಟ್ ಕೊಗ್ಲಿ 62 ರನ್ (33 ಎಸೆತ, 5 ಸಿಕ್ಸರ್, 5 ಬೌಂಡರಿ), ಬೆಥೆಲ್ 55 ರನ್ (33 ಎಸೆತ, 2 ಸಿಕ್ಸರ್, 8 ಬೌಂಡರಿ), ರೊಮಾರಿಯೊ ಶೆಫರ್ಡ್ 53 ರನ್ (14 ಎಸೆತ, 6 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಇನ್ನುಳಿದಂತೆ ದೇವದತ್ ಪಡಿಕಲ್ 17 ರನ್, ರಜತ್ ಪಾಟಿದಾರ್ 11 ರನ್, ಜಿತೇಶ್ ಶರ್ಮಾ 7 ರನ್, ಟಿಮ್ ಡೇವಿಡ್ 2 ರನ್ ಕೊಡುಗೆ ನೀಡಿದರು.

    ಸಿಎಸ್‌ಕೆ ಪರ ಮತೀಶ ಪಥಿರಣ 3 ವಿಕೆಟ್ ಕಿತ್ತರೆ, ನೂರ್ ಅಹ್ಮದ್, ಸ್ಯಾಮ್ ಕರ್ರನ್ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

  • ಸ್ಫೋಟಕ ಫಿಫ್ಟಿ – ಕನ್ನಡಿಗ ಕೆ.ಎಲ್‌ ರಾಹುಲ್‌ ದಾಖಲೆ ಸರಿಗಟ್ಟಿದ ರೊಮಾರಿಯೊ ಶೆಫರ್ಡ್

    ಸ್ಫೋಟಕ ಫಿಫ್ಟಿ – ಕನ್ನಡಿಗ ಕೆ.ಎಲ್‌ ರಾಹುಲ್‌ ದಾಖಲೆ ಸರಿಗಟ್ಟಿದ ರೊಮಾರಿಯೊ ಶೆಫರ್ಡ್

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಆಟವಾಡಿದ ರೊಮಾರಿಯೊ ಶೆಫರ್ಡ್‌ (Romario Shepherd) ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

    ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮತೀಶ ಪಥಿರಣ ಬೌಲಿಂಗ್‌ಗೆ 20 ರನ್‌ ಚಚ್ಚಿದ ಶೆಫರ್ಡ್‌ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಗೆಕೆ ಪಾತ್ರರಾದರು. ಜೊತೆಗೆ ಈ ಸಾಧನೆ ಮಾಡಿದ ಕನ್ನಡಿಗ ಕೆ.ಎಲ್‌ ರಾಹುಲ್‌, ಪ್ಯಾಟ್‌ ಕಮ್ಮಿನ್ಸ್‌ ಅವರ ದಾಖಲೆಗಳನ್ನೂ ಸರಿಗಟ್ಟಿದರು.

    ವೇಗದ ಫಿಫ್ಟಿ ಬಾರಿಸಿದ ಟಾಪ್‌-5 ಪ್ಲೇಯರ್ಸ್‌
    ಯಶಸ್ವಿ ಜೈಸ್ವಾಲ್‌ – ರಾಜಸ್ಥಾನ್‌ ರಾಯಲ್ಸ್‌ 13 ಎಸೆತ (2023)
    ರೊಮಾರಿಯೊ ಶೆಫರ್ಡ್‌ – ಆರ್‌ಸಿಬಿ – 14 ಎಸೆತ (2025)
    ಕೆ.ಎಲ್‌ ರಾಹಿಲ್‌ – ಪಿಬಿಕೆಎಸ್‌ – 14 ಎಸೆತ (2018)
    ಪ್ಯಾಟ್‌ ಕಮ್ಮಿನ್ಸ್‌ – ಕೆಕೆಆರ್‌ – 14 ಎಸೆತ (2022)
    ಯೂಸೂಫ್‌ ಪಠಾಣ್‌ – ಕೆಕೆಆರ್‌ – 15 ಎಸೆತ (2014)

    ಕೊನೇ 2 ಓವರ್‌ಗಳಲ್ಲಿ 54 ಎನ್‌:
    ಆರ್‌ಸಿಬಿ ಪರ ಮೊದಲ ವಿಕೆಟ್‌ಗೆ ವಿರಾಟ್‌ ಕೊಹ್ಲಿ ಮತ್ತು ಜಾಕೊಬ್‌ ಬೆಥೆಲ್‌ ಜೋಡಿ 59 ಎಸೆತಗಳಲ್ಲಿ 97 ರನ್‌ಗಳ ಜೊತೆಯಾಟ ನೀಡಿತ್ತು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ರನ್‌ ವೇಗವೂ ಕಡಿತಗೊಂಡಿತ್ತು. 14 ಓವರ್‌ಗಳಲ್ಲಿ 144 ರನ್‌ ಗಳಿಸಿದ್ದ‌ ಆರ್‌ಸಿಬಿ 18 ಓವರ್‌ ಕಳೆದರೂ 160 ರನ್‌ ಗಡಿ ದಾಟುವಲ್ಲಿ ವಿಫಲವಾಗಿತ್ತು. ಇದರಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವುದೂ ಕಷ್ಟವಾಗಿತ್ತು. ಆದ್ರೆ ಕೊನೆಯಲ್ಲಿ ಕ್ರೀಸ್‌ಗೆ ಬಂದ ರೊಮಾರಿಯೋ ಶೆಫರ್ಡ್‌ 19ನೇ ಓವರ್‌ನಲ್ಲಿ ಖಲೀಲ್‌ ಅಹ್ಮದ್‌ ಬೌಲಿಂಗ್‌ಗೆ ಒಂದೇ ಓವರ್‌ನಲ್ಲಿ 33 ರನ್‌ ಚಚ್ಚಿದರು. ಜೊತೆಗೆ 20ನೇ ಓವರ್‌ನಲ್ಲಿ ಬರೋಬ್ಬರಿ 20 ರನ್‌ ಚಚ್ಚಿದ ಪರಿಣಾಮ ಆರ್‌ಸಿಬಿ ಸುಲಭವಾಗಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಆರ್‌ಸಿಬಿ ಪರ ವಿರಾಟ್‌ ಕೊಗ್ಲಿ 62 ರನ್‌ (33 ಎಸೆತ, 5 ಸಿಕ್ಸರ್‌, 5 ಬೌಂಡರಿ), ಬೆಥೆಲ್‌ 55 ರನ್‌ (33 ಎಸೆತ, 2 ಸಿಕ್ಸರ್‌, 8 ಬೌಂಡರಿ), ರೊಮಾರಿಯೊ ಶೆಫರ್ಡ್‌ 53 ರನ್‌ (14 ಎಸೆತ, 6 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಇನ್ನುಳಿದಂತೆ ದೇವದತ್‌ ಪಡಿಕಲ್‌ 17 ರನ್‌, ರಜತ್‌ ಪಾಟಿದಾರ್‌ 11 ರನ್‌, ಜಿತೇಶ್‌ ಶರ್ಮಾ 7 ರನ್‌, ಟಿಮ್‌ ಡೇವಿಡ್‌ 2 ರನ್‌ ಕೊಡುಗೆ ನೀಡಿದರು.

  • ಶೆಫರ್ಡ್ ಬೆಂಕಿ ಬ್ಯಾಟಿಂಗ್‌ – ಕೊನೇ 12 ಎಸೆತಗಳಲ್ಲಿ 54 ರನ್‌, ಸಿಎಸ್‌ಕೆ ಗೆಲುವಿಗೆ 214 ರನ್‌ ಗುರಿ ನೀಡಿದ ಆರ್‌ಸಿಬಿ

    ಶೆಫರ್ಡ್ ಬೆಂಕಿ ಬ್ಯಾಟಿಂಗ್‌ – ಕೊನೇ 12 ಎಸೆತಗಳಲ್ಲಿ 54 ರನ್‌, ಸಿಎಸ್‌ಕೆ ಗೆಲುವಿಗೆ 214 ರನ್‌ ಗುರಿ ನೀಡಿದ ಆರ್‌ಸಿಬಿ

    ಬೆಂಗಳೂರು: ರೊಮಾರಿಯೊ ಶೆಫರ್ಡ್ (Romario Shepherd) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 213 ರನ್‌ ಕಲೆಹಾಕಿದ ಆರ್‌ಸಿಬಿ (RCB) ಎದುರಾಳಿ ಸಿಎಸ್‌ಕೆ ಗೆಲುವಿಗೆ 214 ರನ್‌ಗಳ ಗುರಿ ನೀಡಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿತು. ಮೊದಲ ವಿಕೆಟ್‌ಗೆ ವಿರಾಟ್‌ ಕೊಹ್ಲಿ (Virat Kohli) ಮತ್ತು ಜಾಕೊಬ್‌ ಬೆಥೆಲ್‌ (Jacob Bethell )ಜೋಡಿ 59 ಎಸೆತಗಳಲ್ಲಿ 97 ರನ್‌ಗಳ ಜೊತೆಯಾಟ ನೀಡಿತ್ತು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ರನ್‌ ವೇಗವೂ ಕಡಿತಗೊಂಡಿತ್ತು. 14 ಓವರ್‌ಗಳಲ್ಲಿ 144 ರನ್‌ ಗಳಿಸಿದ್ದ‌ ಆರ್‌ಸಿಬಿ 18 ಓವರ್‌ ಕಳೆದರೂ 160 ರನ್‌ ಗಡಿ ದಾಟುವಲ್ಲಿ ವಿಫಲವಾಗಿತ್ತು.

    ಇದರಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವುದೂ ಕಷ್ಟವೆಂದೇ ಭಾವಿಸಲಾಗಿತ್ತು. ಆದ್ರೆ ಕೊನೆಯಲ್ಲಿ ಕ್ರೀಸ್‌ಗೆ ಬಂದ ರೊಮಾರಿಯೋ ಶೆಫರ್ಡ್‌ 19ನೇ ಓವರ್‌ನಲ್ಲಿ ಖಲೀಲ್‌ ಅಹ್ಮದ್‌ ಬೌಲಿಂಗ್‌ಗೆ ಒಂದೇ ಓವರ್‌ನಲ್ಲಿ 33 ರನ್‌ ಚಚ್ಚಿದರು. ಜೊತೆಗೆ 20ನೇ ಓವರ್‌ನಲ್ಲಿ ಬರೋಬ್ಬರಿ 20 ರನ್‌ ಚಚ್ಚಿದ ಪರಿಣಾಮ ಆರ್‌ಸಿಬಿ ಸುಲಭವಾಗಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಆರ್‌ಸಿಬಿ ಪರ ವಿರಾಟ್‌ ಕೊಗ್ಲಿ 62 ರನ್‌ (33 ಎಸೆತ, 5 ಸಿಕ್ಸರ್‌, 5 ಬೌಂಡರಿ), ಬೆಥೆಲ್‌ 55 ರನ್‌ (33 ಎಸೆತ, 2 ಸಿಕ್ಸರ್‌, 8 ಬೌಂಡರಿ), ರೊಮಾರಿಯೊ ಶೆಫರ್ಡ್‌ 53 ರನ್‌ (14 ಎಸೆತ, 6 ಸಿಕ್ಸರ್, 4 ಬೌಂಡರಿ) ಚಚ್ಚಿದರು. ಇನ್ನುಳಿದಂತೆ ದೇವದತ್‌ ಪಡಿಕಲ್‌ 17 ರನ್‌, ರಜತ್‌ ಪಾಟಿದಾರ್‌ 11 ರನ್‌, ಜಿತೇಶ್‌ ಶರ್ಮಾ 7 ರನ್‌, ಟಿಮ್‌ ಡೇವಿಡ್‌ 2 ರನ್‌ ಕೊಡುಗೆ ನೀಡಿದರು.

    ಸಿಎಸ್‌ಕೆ ಪರ ಮತೀಶ ಪಥಿರಣ 3 ವಿಕೆಟ್‌ ಕಿತ್ತರೆ, ನೂರ್‌ ಅಹ್ಮದ್‌, ಸ್ಯಾಮ್‌ ಕರ್ರನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು,

  • IPL 2025 | ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಸಿಎಸ್‌ಕೆ – ಸ್ಟಾರ್‌ ಬೌಲರನ್ನೇ ಕೈಬಿಟ್ಟ ಆರ್‌ಸಿಬಿ

    IPL 2025 | ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಸಿಎಸ್‌ಕೆ – ಸ್ಟಾರ್‌ ಬೌಲರನ್ನೇ ಕೈಬಿಟ್ಟ ಆರ್‌ಸಿಬಿ

    ಬೆಂಗಳೂರು: ಸಾಂಪ್ರದಾಯಿಕ ಎದುರಾಳಿಗಳಾದ ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಹಣಾಹಣಿ ಕೆಲವೇ ಕ್ಷಣಗಳಲ್ಲಿ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ರಾತ್ರಿ 7:30ಕ್ಕೆ ಪಂದ್ಯ ಶುರುವಾಗಲಿದೆ. ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ. ಇನ್ನೂ ತವರು ಕ್ರೀಡಾಂಗಣದಲ್ಲಿ 9ನೇ ಬಾರಿಗೆ ಟಾಸ್‌ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಹ್‌ ಮಾಡಲು ಮುಂದಾಗಿದೆ.

    ಇತ್ತ ಬ್ಯಾಟಿಂಗ್‌ ಮಾಡಲು ಸಜ್ಜಾಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದೆ. ಕಳೆದ ಕೆಲ ಪಂದ್ಯಗಳಲ್ಲಿ ತಮ್ಮ ಘಾತುಕ ದಾಳಿಯಿಂದ ಗೆಲುವು ತಂದುಕೊಟ್ಟಿದ್ದ ಜೋಶ್‌ ಹೇಜಲ್ವುಡ್‌ (Josh Hazlewood) ಅವರನ್ನ ಕೈಬಿಟ್ಟಿದೆ. ದಕ್ಷಿಣ ಆಫ್ರಿಕಾದ ಲುಂಗಿ ಎನ್‌ಗಿಡಿಗೆ (Lungi Ngidi) ಮಣೆ ಹಾಕಿದೆ. ಜೊತೆಗೆ‌ ಅಗ್ರ ಕ್ರಮಾಂದಕ ಬ್ಯಾಟರ್‌ಗಳಲ್ಲಿ ಫಿಲ್‌ ಸಾಲ್ಟ್‌ ಬದಲಿಗೆ ಜಾಕೋಬ್‌ ಬೆಥೆಲ್ (Jacob Bethell) ಅವರನ್ನೇ ಕಣಕ್ಕಿಳಿಸಲಿದೆ.

    ಸಿಎಸ್‌ಕೆ ಪ್ಲೇಯಿಂಗ್‌-11
    ಆಯುಷ್ ಮ್ಹಾತ್ರೆ, ಶೇಖ್‌ ರಶೀದ್, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ದೇವಾಲ್‌ ಬ್ರೇವಿಸ್‌, ದೀಪಕ್ ಹೂಡಾ, ಎಂ.ಎಸ್ ಧೋನಿ (ನಾಯಕ + ವಿಕೆಟ್‌ ಕೀಪರ್‌), ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪಥಿರಣ.

    ಆರ್‌ಸಿಬಿ ಪ್ಲೇಯಿಂಗ್‌-11
    ವಿರಾಟ್ ಕೊಹ್ಲಿ, ಜಾಕೋಬ್‌ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ರೊಮಾರಿಯೋ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್.

  • ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 6 ವಿಕೆಟ್‌ಗಳ ಅಮೋಘ ಜಯ – ನಂ.1 ಪಟ್ಟಕ್ಕೇರಿದ ಬೆಂಗಳೂರು

    ನವದೆಹಲಿ: ಕೃನಾಲ್‌ ಪಾಂಡ್ಯ (Krunal Pandya), ವಿರಾಟ್‌ ಕೊಹ್ಲಿ (Virat Kohli) ಶತಕದ ಜೊತೆಯಾಟ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

    ಸೂಪರ್‌ ಸಂಡೇ ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. ಏಕೆಂದರೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆದ್ದಾಗ ಕೆ.ಎಲ್‌ ರಾಹುಲ್‌ ಸಂಭ್ರಮಿಸಿದ ರೀತಿ ಇದಕ್ಕೆ ಕಾರಣವಾಗಿತ್ತು. ಅಂದಿನಿಂದಲೇ ಕೊಹ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ ಅನ್ನೋ ಪೋಸ್ಟರ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡಿಂಗ್‌ನಲ್ಲಿತ್ತು. ಇದೀಗ ಆರ್‌ಸಿಬಿ ಗೆಲುವು ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಗೆಲುವಾಗಿದೆ. ಅಲ್ಲದೇ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ.

    ಗೆಲುವಿಗೆ 163 ರನ್‌ಗಳ ಗುರಿ ಪಡೆದ ಆರ್‌ಸಿಬಿ ಪವರ್‌ ಪ್ಲೇ ನಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮೊದಲ 4 ಓವರ್‌ಗಳಲ್ಲಿ 26 ರನ್‌ಗಳಿಗೆ ಜಾಕೋಬ್‌ ಬೇಥಲ್‌ (12 ರನ್‌), ರಜತ್‌ ಪಾಟೀದಾರ್‌ (6 ರನ್‌), ದೇವದತ್‌ ಪಡಿಕಲ್‌ (0) ವಿಕೆಟ್‌ ಕಳೆದುಕೊಂಡು ಆರ್‌ಸಿಬಿ ಸಂಕಷ್ಟಕ್ಕೀಡಾಯಿತು. 10 ಓವರ್‌ ಕಳೆದರೂ 100 ರನ್‌ಗಳ ಗಡಿ ದಾಟದ ಆರ್‌ಸಿಬಿ ಪಂದ್ಯ ಗೆಲ್ಲುವುದು ಅನುಮಾನ ಎಂದೇ ಹೇಳಲಾಗುತ್ತಿತ್ತು. ಆದ್ರೆ ವಿರಾಟ್‌ ಕೊಹ್ಲಿ ಹಾಗೂ ಕೃನಾಲ್‌ ಪಾಂಡ್ಯ ಅವರ ಶತಕದ ಜೊತೆಯಾಟ ತಂಡದ ಗೆಲುವಿನ ಹಾದಿಯನ್ನು ಸುಗಮವಾಗಿಸಿತು.

    4ನೇ ವಿಕೆಟಿಗೆ ಕೃನಾಲ್‌ ಪಾಂಡ್ಯ, ವಿರಾಟ್‌ ಕೊಹ್ಲಿ ಜೋಡಿ 84 ಎಸೆತಗಳಲ್ಲಿ 119 ರನ್‌ಗಳ ಜೊತೆಯಾಟ ನೀಡಿತು. ಇದು ತಂಡದ ಗೆಲುವಿಗೆ ಕಾರಣವಾಯಿತು. ಇನ್ನೂ ಕೊನೆಯಲ್ಲಿ ಟಿಮ್‌ ಡೇವಿಡ್‌ ಅವರ ಸಿಕ್ಸರ್‌ ಬೌಂಡರಿ ಆಟದಿಂದ ಆರ್‌ಸಿಬಿಗೆ ಗೆಲುವು ಸುಲಭವಾಯಿತು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ ಅಜೇಯ 73 ರನ್‌ (47 ಎಸೆತ, 5 ಬೌಂಡರಿ, 4 ಸಿಕ್ಸರ್)‌, ವಿರಾಟ್‌ ಕೊಹ್ಲಿ 51 ರನ್‌ (47 ಎಸೆತ, 4 ಬೌಂಡರಿ) ಗಳಿಸಿದ್ರೆ, ಟಿಮ್‌ ಡೇವಿಡ್‌ 5 ಎಸೆತಗಳಲ್ಲಿ 19 ರನ್‌ ಗಳಿಸಿ ಮಿಂಚಿದರು.

    ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ಆರಂಭವನ್ನೇ ಪಡೆಯಿತು. ಅಭಿಷೇಕ್ ಪೊರೇಲ್ 28 ಮತ್ತು ಫಫ್ ಡುಪ್ಲೆಸಿ 22 ರನ್ ಸಿಡಿಸಿದರು. ಕರುಣ್ ನಾಯರ್ 4 ರನ್‌ಗೆ ಪೆವಿಲಿಯನ್ ಸೇರಿಕೊಂಡರು. ಉತ್ತಮವಾಗಿ ಆಡಿದ ಕೆ.ಎಲ್. ರಾಹುಲ್ 41 (39 ಎಸೆತ) ರನ್‌ಗಳ ಕೊಡುಗೆ ನೀಡಿದರು. ಒಂದು ಹಂತದಲ್ಲಿ 200ರ ಸಮೀಪಕ್ಕೆ ತಲುಪಬಹುದು ಎನ್ನುವಂತಿದ್ದ ರನ್ ಗತಿ ಆರ್‌ಸಿಬಿ ಬೌಲರ್‌ಗಳ ಬಿಗಿ ಹಿಡಿತಕ್ಕೆ ರನ್‌ ಕದಿಯಲು ತಿಣುಕಾಡುತ್ತಾ ಸಾಗಿತು. ಅತ್ತ ರನ್‌ ಬರದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತೊಂದೆಡೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಸಾಗಿತು. ಆದ್ರೆ ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 18 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಡೆಲ್ಲಿ 163 ರನ್‌ಗಳ ಗುರಿ ನೀಡಲು ನೆರವಾದರು.

    ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 33 ರನ್ ನೀಡಿ 3 ವಿಕೆಟ್ ಕಿತ್ತರೆ, ಹೇಜಲ್ವುಡ್‌ 36 ರನ್ ನೀಡಿ 2 ವಿಕೆಟ್ ಪಡೆದರು.

    ರಾಹುಲ್‌ vs ಕೊಹ್ಲಿ:
    ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್‌ಸಿಬಿಯನ್ನು ಸೋಲಿಸಿತ್ತು. ಆಗ ಗೆಲುವಿನ ರುವಾರಿಯಾಗಿದ್ದ ಕೆ.ಎಲ್ ರಾಹುಲ್ ಅವರು, ʻಇದು ನನ್ನ ಗ್ರೌಂಡ್‌ʼ ಎಂದು ʻಕಾಂತಾರʼ ಚಲನಚಿತ್ರದ ದೃಶ್ಯದ ಮಾದರಿಯನ್ನು ಅನುಕರಿಸಿದ್ದರು. ಇದೀಗ ಗೆದ್ದು ಆರ್‌ಸಿಬಿ ಸೋಲಿಗೆ ಸೇಡು ತೀರಿಸಿಕೊಂಡಿದೆ.

  • ತವರಿನಲ್ಲಿ RCBಗೆ ʻಜೋಶ್‌ʼ ತಂದ ಜಯ – ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಬೆಂಗಳೂರು

    ತವರಿನಲ್ಲಿ RCBಗೆ ʻಜೋಶ್‌ʼ ತಂದ ಜಯ – ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಬೆಂಗಳೂರು

    – ರೋಚಕ ಹಣಾಹಣಿಯಲ್ಲಿ ರಾಜಸ್ಥಾನ್‌ಗೆ ವಿರೋಚಿತ ಸೋಲು

    ಬೆಂಗಳೂರು: ಕಳೆದ ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ತನ್ನ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಸೋಲಿನ ಮುಖವಾಡ ಕಳಚುವುದರ ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

    ಗುರುವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ 11 ರನ್ ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿರುವ ಒಂಬತ್ತು ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕಗಳನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ ಮತ್ತೆ 3ನೇ ಸ್ಥಾನಕ್ಕೇರಿದೆ.

    ಗೆಲುವಿಗೆ 206 ರನ್ ಗಳ ಕಠಿಣ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳು ಮುಗಿದಾಗ 9 ವಿಕೆಟ್ ನಷ್ಟಕ್ಕೆ ಕೇವಲ 194 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ರಾಜಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ 49 ರನ್‌ ಗಳಿಸುವ ಮೂಲಕ ಸ್ಫೋಟಕ ಆರಂಭ ಒದಗಿಸಿದರೂ ಅದನ್ನು ಕೊನೇವರೆಗೂ ಬೆಳೆಸಿಕೊಂಡು ಹೋಗುವಲ್ಲಿ ರಾಜಸ್ಥಾನ ರಾಯಲ್ಸ್ ಸಂಪೂರ್ಣವಾಗಿ ಎಡವಿತು.

    ಹೇಜಲ್ವುಡ್ 4 ವಿಕೆಟ್
    ಜೋಶ್‌ ಹೇಜಲ್ವುಡ್‌ ತನ್ನ ಪಾಲಿನ ಅಂತಿಮ ಓವರ್‌ನಲ್ಲಿ ಸ್ಫೋಟಕವಾಗಿ ಆಡುತ್ತಿದ್ದ ಧ್ರುವ್ ಜುರೆಲ್ (47) ಅವರು ಆರ್ ಸಿಬಿ ಪಾಳೆಯದಿಂದ ಪಂದ್ಯ ಕಿತ್ತುಕೊಳ್ಳುವ ಸೂಚನೆ ನೀಡಿದರಾದರೂ ಹೇಜಲ್ವುಡ್ ಅದಕ್ಕೆ ಅವಕಾಶ ನೀಡಲಿಲ್ಲ. ಹೇಟ್ಮೇಯರ್ (11), ಶುಭಂ ದುಬೆ (12) ಸೇರಿದಂತೆ ಯಾವ ಬ್ಯಾಟರ್ ಸಹ ಅಗತ್ಯ ಸಂದರ್ಭದಲ್ಲಿ ಆಟವಾಡಲು ವಿಫಲವಾಗಿದ್ದರಿಂದ ಆರ್‌ಸಿಬಿ ಜಯಭೇರಿ ಬಾರಿಸಿತು. ಆರ್ ಸಿಬಿ ಪರ ಹೇಜಲ್ವುಡ್ ಅವರು 33 ರನ್ ಗಳಿಗೆ 4 ವಿಕೆಟ್ ಕಬಳಿಸಿದರು. ಕೃನಾಲ್ ಪಾಂಡ್ಯ 2 ವಿಕೆಟ್, ಭುವನೇಶ್ವರ್ ಕುಮಾರ್, ಯಶ್ ದಯಾಳ್ ತಲಾ 1 ವಿಕೆಟ್ ಗಳಿಸಿದರು.

    ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ರಜತ್ ಪಾಟೀದಾರ್ ಬಳಗ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.

    ಕೊಹ್ಲಿ- ಪಡಿಕ್ಕಲ್ ಮಿಂಚಿನಾಟ:
    ಆರ್‌ಸಿಬಿ ಪವರ್‌ ಪ್ಲೇನಲ್ಲಿ ಸ್ಫೋಟಕ ಆರಂಭ ಪಡೆದಿತ್ತು. ಆ ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ದೇವದತ್ ಪಡಿಕ್ಕಲ್ ಅವರು 95 ರನ್‌ಗಳ ಮಹತ್ವದ ಜೊತೆಯಾಟವಾಡಿದರು. ತಂಡದ ಮೊತ್ತವನ್ನು 15 ಓವರ್ ಗಳಲ್ಲಿ 150ರ ಗಡಿದಾಟಿಸಿದರು. 16ನೇ ಓವರ್ ನಲ್ಲೇ ಆರ್ಚರ್ ಅವರು ವಿರಾಟ್ ಕೊಹ್ಲಿ ಅವರನ್ನು ಜೋಫ್ರಾ ಆರ್ಚರ್ ಅವರು ಔಟ್ ಮಾಡಿದರು. ವಿರಾಟ್ ಕೊಹ್ಲಿ ಅವರು 42 ಎಸೆತಗಳಲ್ಲಿ 70 ರನ್ ಗಳನ್ನು ಗಳಿಸಿದರು. ಅದರಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದವು. ಮುಂದಿನ ಓವರ್ ನಲ್ಲೇ ಸಂದೀಪ್ ಶರ್ಮಾ ಅವರು ದೇವದತ್ ಪಡಿಕ್ಕಲ್ ಅವರನ್ನು ಪೆವಿಲಿಯನ್ ಗೆ ಅಟ್ಟಿದರು.

    27 ಎಸೆತಗಳಿಂದ 50 ರನ್ ಗಳಿಸಿದ ಅವರ ಇನ್ನಿಂಗ್ಸ್ ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಗಳಿದ್ದವು. ಇದು ದೇವದತ್ ಪಡಿಕ್ಕಲ್ ಅವರ ನಿರಂತರ ಎರಡನೇ ಅರ್ಧಶತಕವಾಗಿದೆ. ಅಂತಿಮ ಹಂತದಲ್ಲಿ ಟಿಂ ಡೇವಿಡ್ (23) ಮತ್ತು ಜಿತೇಶ್ ಶರ್ಮಾ(20) ಬಿರುಸಿನ ಆಟವಾಡಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ರಾಜಸ್ಥಾನ ರಾಯಲ್ಸ್ ಪರ ಸಂದೀಪ್ ಶರ್ಮಾ 2 ವಿಕೆಟ್ ಗಳಿಸಿದರೆ, ಜೋಫ್ರಾ ಆರ್ಚರ್ ಮತ್ತು ಹಸರಂಗ ತಲಾ ಒಂದು ವಿಕೆಟ್ ಉರುಳಿಸಿದರು. ಮತ್ತೊಂದು ವಿಕೆಟ್ ರನೌಟ್ ರೂಪದಲ್ಲಿ ಬಂತು.

  • ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

    ಮಲ್ಲನ್‌ಪುರ್‌: ಸೂಪರ್‌ ಸಂಡೇ ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸೋಲಿನ ಸರಪಣಿ ಮತ್ತೆ ಮುಂದುವರಿದಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್‌ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕಾತರದಿಂದ ಕಾಯುತ್ತಿದೆ.

    18ನೇ ಆವೃತ್ತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಬಾರಿಗೆ ಪರಾಭವಗೊಂಡಿದೆ. ಹೀಗಾಗಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳ ಪೈಕಿ 5 ಗೆಲುವಿನೊಂದಿಗೆ 10 ಅಂಕ ಪಡೆದು 2ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

    Punjab Kings 2

    ಆರ್‌ಸಿಬಿ ಸೋಲಿಗೆ ಮಳೆ ಕಾರಣವೇ?
    ಶುಕ್ರವಾರದ ಮಳೆಯಿಂದಾಗಿ ಅಚಡಣೆಗೊಳಗಾದ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಆದಾಗ್ಯೂ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ತಲುಪಿತು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

    ಪಂಜಾಬ್ ತಂಡದ ಮೊದಲೆರಡು ವಿಕೆಟ್‌ಗಳು 32 ರನ್ ಗಳಿಗೆ ಉರುಳಿದಾಗ ಆರ್‌ಸಿಬಿ ಗೆಲುವಿನ ಆಸೆಯಲ್ಲಿತ್ತು. ಬಳಿಕ 53 ರನ್ ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಾಗಲೂ ಗೆಲ್ಲುವ ಅವಕಾಶವಿತ್ತು. ಆದರೆ ಅಂತಿಮ ಹಂತದಲ್ಲಿ ನೇಹಾಲ್ ವಧೇರಾ ಕೇವಲ 19 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನೊಳಗೊಂಡ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್ವುಡ್ 3 ವಿಕೆಟ್ ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿದ್ದರು. ಇನ್ನೂ ಸ್ಫೋಟಕ ಪ್ರದರ್ಶನ ನೀಡಿ, 2 ಕ್ಯಾಚ್‌ ಪಡೆದಿದ್ದ ಆರ್‌ಸಿಬಿ ಟಿಂ ಡೇವಿಡ್‌ಗೆ ತಂಡ ಸೋತ ಹೊರತಾಗಿಯೂ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

  • IPL 2025: ಆರ್‌ಸಿಬಿಗೆ ಆಗಿಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    IPL 2025: ಆರ್‌ಸಿಬಿಗೆ ಆಗಿಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    ಜೈಪುರ್‌: ರಜತ್‌ ಪಾಟಿದಾರ್ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB_ ತಂಡ ಇಂದು (ಏ.13) ರಾಜಸ್ಥಾನ್‌ ರಾಯಲ್ಸ್‌ (RR) ವಿರುದ್ಧ ಸೆಣಸಲಿದೆ.

    ಜೈಪುರದ ಸವಾಯ್‌ ಮಾನ್ಸಿಂಗ್‌ ಕ್ರಿಕೆಟ್‌ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ (Green Jersey) ಕಾಣಿಸಿಕೊಳ್ಳಲಿದ್ದಾರೆ.

    2011ರ ಐಪಿಎಲ್​ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.

    ಗೆಲುವಿಗಿಂತ ಸೋಲೇ ಹೆಚ್ಚು:
    2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಕೇವಲ 1 ರನ್‌ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

    ಪುಟಿದೇಳುತ್ತಾ ಆರ್‌ಸಿಬಿ?
    ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

  • RCB | ಪಾಟಿದಾರ್‌ ಕ್ಯಾಪ್ಟನ್ಸಿ ಬಗ್ಗೆ ಅಸಮಾಧಾನ – ಡಿಕೆಗೆ ಕೊಹ್ಲಿ ದೂರು?

    RCB | ಪಾಟಿದಾರ್‌ ಕ್ಯಾಪ್ಟನ್ಸಿ ಬಗ್ಗೆ ಅಸಮಾಧಾನ – ಡಿಕೆಗೆ ಕೊಹ್ಲಿ ದೂರು?

    ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೂರು ಐತಿಹಾಸಿಕ ಗೆಲುವು ಕಂಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ತವರಿನಲ್ಲಿ ನಡೆದ ಎರಡೂ ಪಂದ್ಯಗಳಲ್ಲೂ ಹೀನಾಯ ಸೋಲು ಕಂಡಿದೆ. ಆದ್ರೆ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋತಿದೆ ಎನ್ನುವುದಕ್ಕಿಂತ ಹೆಚ್ಚಾಗಿ ತಂಡದಲ್ಲೇ ಆಂತರಿಕ ಕಲಹ ಉಂಟಾಗಿದೆ ಅನ್ನೋ ವದಂತಿ ಹೆಚ್ಚು ಸದ್ದು ಮಾಡುತ್ತಿದೆ.

    ಹೌದು. ಚೇಸಿಂಗ್‌ ವೇಳೆ ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆರ್‌ಸಿಬಿ ಆರಂಭದಲ್ಲಿ ಪ್ರಬಲ ಪೈಪೋಟಿ ನೀಡಿತ್ತು. 4.3 ಓವರ್‌ಗಳಲ್ಲಿ 30 ರನ್‌ಗಳಿಗೆ 3 ವಿಕೆಟ್‌, 58 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಆರ್‌ಸಿಬಿ ಪಡೆದುಕೊಂಡಿತ್ತು. ಆ ಬಳಿಕ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌ (KL Rahul_ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಮುರಿಯದ 5ನೇ ವಿಕೆಟ್‌ಗೆ 55 ಎಸೆತಗಳಲ್ಲಿ ಸ್ಫೋಟಕ 111 ರನ್‌ಗಳ ಜೊತೆಯಾಟ ನೀಡುವ ಮೂಲಕ ಡೆಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಪಂದ್ಯ ಕೊನೆಯ ಹಂತದಲ್ಲಿರುವಾಗ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್‌ ಕೋಚ್‌ ದಿನೇಶ್ ಕಾರ್ತಿಕ್ (Dinesh Karthik) ಅವರೊಂದಿಗೆ ಕೋಪ ಮತ್ತು ಬೇಸರಿಂದ ಗಾಢ ಚರ್ಚೆಯಲ್ಲಿ ತೊಡಗಿದ್ರು, ಫೀಲ್ಡ್‌ ಸೆಟ್‌ನತ್ತ ಕೈತೋರಿಸುತ್ತಾ ಮಾತನಾಡುತ್ತಿದ್ದರು. ಈ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

    ಅಲ್ಲದೇ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ರಜತ್‌ ಪಾಟಿದಾರ್‌ (Rajat Patidar) ನಾಯಕತ್ವದ ಬಗ್ಗೆ ಕೊಹ್ಲಿ ಅತೃಪ್ತರಾಗಿದ್ದಾರೆ ಎಂಬ ವದಂತಿಗಳು ಸದ್ದು ಮಾಡತೊಡಗಿದೆ. ವಿಡಿಯೋದಲ್ಲಿ, ಕೊಹ್ಲಿ, ನಾಯಕನ ಕೆಲವು ನಿರ್ಧಾರಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಕಾಮೆಂಟೇಟರ್ ಆಕಾಶ್ ಚೋಪ್ರಾ ಮತ್ತು ವೀರೇಂದ್ರ ಸೆಹ್ವಾಗ್ ಕೂಡ ಮಾತನಾಡಿದರು. ಕೊಹ್ಲಿಗೆ ಯಾವುದೇ ಸಮಸ್ಯೆ ಇದ್ದರೂ ಅದನ್ನು ನಾಯಕ ಪಾಟಿದಾರ್ ಅವರಿಗೆ ಹೇಳಬೇಕು, ಏಕೆಂದರೆ ಈಗ ಕೊಹ್ಲಿ ತಂಡದ ನಾಯಕನಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    ಅಲ್ಲದೇ ಈ ಬಗ್ಗೆ ಕ್ರಿಕೆಟ್‌ ತಜ್ಞರು ಹಾಗೂ ಕ್ರಿಕೆಟ್‌ ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚಿಸುತ್ತಾ, ಕೊಹ್ಲಿ ನಾಯಕನ ನಿರ್ಧಾರಗಳಿಂದ ಕೋಪಗೊಂಡಿದ್ದಾರೆ. ದಿನೇಶ್‌ ಕಾರ್ತಿಕ್‌ ಅವರೊಂದಿಗೆ ಬೌಲಿಂಗ್ ಬದಲಾವಣೆಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಸ್ಟೆಟರ್ಜಿಕ್‌ ಟೈಮ್‌ ವೇಳೆ ಕೊಹ್ಲಿ ಕೆಲವು ನಿರ್ಧಾರಗಳ ಬಗ್ಗೆ ಕಾರ್ತಿಕ್, ಅನುಭವಿ ಬೌಲರ್ ಭುವನೇಶ್ವರ್ ಕುಮಾರ್, ಟಿಮ್‌ ಡೇವಿಡ್‌ ಅವರೊಂದಿಗೂ ಮಾತನಾಡಿದ್ದಾರೆ. ಆದ್ರೆ ಕೊಹ್ಲಿ, ದಿನೇಶ್‌ ಕಾರ್ತಿಕ್‌ ನಡುವಿನ ಸಂಭಾಷಣೆ ಕುರಿತು ನಿಖರ ಕಾರಣ ತಿಳಿದುಬಂದಿಲ್ಲ. ಆರ್‌ಸಿಬಿ ಫ್ರಾಂಚೈಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಪ್ರತಿ ಬಾರಿಯೂ ಆರ್‌ಸಿಬಿ ಒಂದಿಲ್ಲೊಂದು ವಿವಾದಗಳಿಗೆ ಹೆಸರಾಗುತ್ತಲೇ ಇರುತ್ತದೆ. ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಆಟಗಾರನಿಗೆ ಟಾಂಗ್‌ ಕೊಡುವ ಮೂಲಕ ಕೊಹ್ಲಿ ಅವರ ನಡೆ ಸದ್ದು ಮಾಡಿತ್ತು. ಇದಕ್ಕೂ ಮುನ್ನ 2023ರಲ್ಲಿ ಗೌತಮ್‌ ಗಂಭೀರ್‌ ಅವರೊಂದಿಗಿನ ಕಲಹ ದೊಡ್ಡ ಸದ್ದು ಮಾಡಿತ್ತು. ಆದ್ರೆ ಇದೇ ಮೊದಲಬಾರಿಗೆ ತಂಡದಲ್ಲೇ ಆಂತರಿಕ ಕಲಹ ಬಿರುಗಾಳಿ ಎಬ್ಬಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ತವರಲ್ಲಿ ಮತ್ತೆ ಸೋತ ಆರ್‌ಸಿಬಿ – ಕೆ.ಎಲ್‌.ರಾಹುಲ್‌ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ

  • ಬಟ್ಲರ್‌ ಬೊಂಬಾಟ್‌ ಫಿಫ್ಟಿ; ಆರ್‌ಸಿಬಿ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನ – ಗುಜರಾತ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಬಟ್ಲರ್‌ ಬೊಂಬಾಟ್‌ ಫಿಫ್ಟಿ; ಆರ್‌ಸಿಬಿ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನ – ಗುಜರಾತ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರು: ಜೋಸ್‌ ಬಟ್ಲರ್‌ (Jos Buttler) ಬೊಂಬಾಟ್‌ ಅರ್ಧಶತಕ, ಮೊಹಮ್ಮದ್‌ ಸಿರಾಜ್‌ (Mohammed Siraj) ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಗುಜರಾತ್‌ ಟೈಟಾನ್ಸ್‌ (Gujarat Titans) 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದ ಆರ್‌ಸಿಬಿ ಆಸೆಗೆ ತಣ್ಣೀರು ಎರಚಿದೆ.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ ಗಳಿಸಿತ್ತು. 170 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ 17.5 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 170 ರನ್‌ ಗಳಿಸಿ ಗೆಲುವು ಸಾಧಿಸಿತು.

    ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ ಗುಜರಾತ್‌ ಟೈಟಾನ್ಸ್‌ 4.4 ಓವರ್‌ಗಳಲ್ಲಿ 32 ರನ್‌ ಗಳಿಸಿದ್ದಾಲೇ ತನ್ನ ಮೊದಲ ವಿಕೆಟ್‌ ಕಳೆದುಕೊಂಡಿತು. ಈ ವೇಳೆ 2ನೇ ವಿಕೆಟ್‌ಗೆ ಜೊತೆಗೂಡಿದ ಸಾಯಿ ಸುದರ್ಶನ್‌ (Sai Sudharsan) ಹಾಗೂ ಜೋಸ್‌ ಬಟ್ಲರ್‌ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. 2ನೇ ವಿಕೆಟಿಗೆ ಈ ಜೋಡಿ 47 ಎಸೆತಗಳಲ್ಲಿ 75 ರನ್‌ಗಳ ಜೊತೆಯಾಟ ನೀಡಿತು. ಇದಾದ ಬಳಿಕ ಮುರಿಯದ 3ನೇ ವಿಕೆಟಿಗೆ ಬಟ್ಲರ್‌ – ರುದರ್ಫೋರ್ಡ್ 36 ರನ್‌ (32 ಎಸೆತ) ಜೊತೆಯಾಟದಿಂದ ಟೈಟಾನ್ಸ್‌ ಪಡೆ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌:
    ಕಳೆದ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಜೋಸ್‌ ಬಟ್ಲರ್‌ 3ನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಅಬ್ಬರಿಸಿ ಬೊಬ್ಬರಿದರು. 31 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್‌ ಸಹಿತ ಅರ್ಧಶತಕ ಸಿಡಿಸಿದ್ದ ಬಟ್ಲರ್‌ ಒಟ್ಟು 39 ಎಸೆತಗಳಲ್ಲಿ 73 ರನ್‌ (6 ಸಿಕ್ಸ್‌, 5 ಬೌಂಡರಿ) ಚಚ್ಚಿ ಅಜೇಯರಾಗುಳಿದರು. ಇದರೊಂದಿಗೆ ಆರಂಭಿಕ ಆಟಗಾರ ಸಾಯಿ ಸುದರ್ಶನ್‌ 49 ರನ್‌ (36 ಎಸೆತ, 7 ಬೌಂಡರಿ, 1 ಸಿಕ್ಸರ್‌), ಸ್ಫೋಟಕ ಪ್ರದರ್ಶನ ನೀಡಿದ ಶೆರ್ಫೇನ್ ರುದರ್ಫೋರ್ಡ್ 18 ಎಸೆತಗಳಲ್ಲಿ 30 ರನ್‌ (3 ಸಿಕ್ಸರ್, 1 ಬೌಂಡರಿ), ನಾಯಕ ಶುಭಮನ್‌ ಗಿಲ್‌ 14 ರನ್‌ ಕೊಡುಗೆ ನೀಡಿದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ಗಳನ್ನು ಬಾರಿಸುವ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕಿಳಿಸಿದ್ದ ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌ ಸ್ಫೋಟಕ ಪ್ರದರ್ಶನ ನೀಡಲು ಮುಂದಾಗಿದ್ದರು. ಆದ್ರೆ ಒಂದೆಡೆ ರನ್‌ ಕಲೆ ಹಾಕುತ್ತಿದ್ದಂತೆ ಮತ್ತೊಂದೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಪವರ್‌ ಪ್ಲೇನಲ್ಲೇ ವೇಗಿ ಮೊಹಮ್ಮದ್‌ ಸಿರಾಜ್‌ ಫಿಲ್‌ ಸಾಲ್ಟ್‌ ಹಾಗೂ ದೇವದತ್‌ ಪಡಿಕಲ್‌ ವಿಕೆಟ್‌ ಕಿತ್ತಿದ್ದು, ಆರ್‌ಸಿಬಿಗೆ ಬಹುದೊಡ್ಡ ಹೊಡೆತ ನೀಡಿತು.

    ಲಿವಿಂಗ್‌ಸ್ಟೋನ್‌ ಅಮೋಘ ಅರ್ಧಶತಕ:
    ಬಳಿಕ ಕಣಕ್ಕಿಳಿದು ತಾಳ್ಮೆಯ ಆಟ ಆಡಿದ ಲಿಯಾಮ್ ಲಿವಿಂಗ್‌ಸ್ಟೋನ್ ಆಕರ್ಷಕ ಅರ್ಧಶತಕ ಸಿಡಿಸಿದರು. 40 ಎಸೆತಗಳಲ್ಲಿ 54 ರನ್‌ (5 ಸಿಕ್ಸರ್‌, 1 ಬೌಂಡರಿ) ಚಚ್ಚಿದ್ದರು. ಇವರಿಗೆ ಉತ್ತಮ ಸಾಥ್‌ ನೀಡಿದ ಜಿತೇಶ್‌ ಶರ್ಮಾ 33 ರನ್‌ (21 ಎಸೆತ, 1 ಸಿಕ್ಸರ್‌, 5 ಬೌಂಡರಿ) ಗಳಿಸಿ ಔಟಾಗಿ ಪೆವಿಲಿಯನ್‌ನತ್ತ ತೆರಳಿದರು. ಇನ್ನು ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟಿಂ ಡೇವಿಡ್‌ 16 ರನ್‌ ಚಚ್ಚಿ 170 ರನ್‌ಗಳ ಗುರಿ ನೀಡುವಲ್ಲಿ ಯಶಸ್ವಿಯಾದರು.

    ಮತ್ತೊಂದೆಡೆ ಗುಜರಾತ್‌ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌ 3 ವಿಕೆಟ್‌ ಪಡೆದರೆ, ಸಾಯಿ ಕಿಶೋರ್‌ 2 ವಿಕೆಟ್‌, ಪ್ರಸಿದ್‌ ಕೃಷ್ಣ, ಅರ್ಷದ್‌ ಖಾನ್‌ ಮತ್ತು ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.