Tag: Rajat patidar

  • ಸಿಎಸ್‌ಕೆ ವಿರುದ್ಧ ಭರ್ಜರಿ ಜಯಗಳಿಸಿದ ಆರ್‌ಸಿಬಿ ಹಾಡಿಹೊಗಳಿದ ಡಿವಿಲಿಯರ್ಸ್‌

    ಸಿಎಸ್‌ಕೆ ವಿರುದ್ಧ ಭರ್ಜರಿ ಜಯಗಳಿಸಿದ ಆರ್‌ಸಿಬಿ ಹಾಡಿಹೊಗಳಿದ ಡಿವಿಲಿಯರ್ಸ್‌

    ಮುಂಬೈ: ಸಾಂಪ್ರದಾಯಿಕ ಎದುರಾಳಿ ಸಿಎಸ್‌ಕೆ (CSK) ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ಆರ್‌ಸಿಬಿ (RCB) ತಂಡವನ್ನು ದಕ್ಷಿಣ ಆಫ್ರಿಕಾ ದಂತಕಥೆ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ (AB de Villiers) ಹಾಡಿಹೊಗಳಿಸಿದ್ದಾರೆ.

    ಐಪಿಎಲ್‌ 2025ರ ಋತುವಿನಲ್ಲಿ ಆರ್‌ಸಿಬಿ ಉತ್ತರ ಆರಂಭ ಪಡೆದುಕೊಂಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ, ತಂಡವು ಗಮನಾರ್ಹವಾಗಿ ಸುಧಾರಿಸಿದೆ ಎಂದು ಆರ್‌ಸಿಬಿ ಮಾಜಿ ಆಟಗಾರರೂ ಆದ ಡಿವಿಲಿಯರ್ಸ್‌ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಸಿಎಸ್‌ಕೆ ಸೋಲಿಸಿ ಬೆಂಗಳೂರಿಗೆ ಆರ್‌ಸಿಬಿ ಟೀಂ ಗ್ರ್ಯಾಂಡ್‌ ಎಂಟ್ರಿ – ಏರ್‌ಪೋರ್ಟ್‌ನಲ್ಲಿ ಫ್ಯಾನ್ಸ್ ಜಯಘೋಷ

    ಶುಕ್ರವಾರ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಆರ್‌ಸಿಬಿ 50 ರನ್‌ಗಳ ಅಂತರದ ಗೆಲುವು ಸಾಧಿಸಿದೆ. 2008 ರ ನಂತರ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿದೆ. ಈ ಬಗ್ಗೆ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಎಬಿಡಿ, ಆರ್‌ಸಿಬಿ ತಂಡವನ್ನು ಮೆಚ್ಚಿ ಮಾತನಾಡಿದ್ದಾರೆ.

    ಹಿಂದಿನ ಋತುಗಳಿಗೆ ಹೋಲಿಸಿದರೆ ಆರ್‌ಸಿಬಿ ತಂಡದ ಸಮತೋಲನ 10 ಪಟ್ಟು ಉತ್ತಮವಾಗಿದೆ ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ. ಒಬ್ಬ ಆಟಗಾರನ ಸಾಧನೆ ಎಂಬುದು ಇಲ್ಲಿ ಕಾಣುತ್ತಿಲ್ಲ. ಒಟ್ಟಾರೆ, ತಂಡದ ಸಾಧನೆಯನ್ನು ಗುರುತಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ತುಂಬಾ ಬೇಗ ಬ್ಯಾಟಿಂಗ್‌ಗೆ ಬಂದ್ರಿ – ಆರ್‌ಸಿಬಿ ವಿರುದ್ಧ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಕಾಲೆಳೆದ ಸೆಹ್ವಾಗ್

    ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೆ ವೇಗಿ ಭುವನೇಶ್ವರ್‌ ಕುಮಾರ್‌ನನ್ನು ಕರೆತಂದ ಬಗ್ಗೆಯೂ ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಕೆಆರ್‌ ವಿರುದ್ಧದ ಪಂದ್ಯಕ್ಕೆ ಭುವಿ ಇರಲಿಲ್ಲ. ಆದರೆ, ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆತನನ್ನು ಆಡಿಸಿದ್ದಾರೆ. ತಂಡಕ್ಕೆ ಬೇಕಿರುವುದು ಈ ರೀತಿಯ ಸಮತೋಲದ, ಸೂಕ್ಷ್ಮ ಆಲೋಚನೆಯ ನಿರ್ಧಾರ ಎಂದು ತಿಳಿಸಿದ್ದಾರೆ. ಭುವನೇಶ್ವರ್ ಕುಮಾರ್ ಪ್ರಮುಖ ಬ್ಯಾಟರ್‌ ದೀಪಕ್ ಹೂಡಾ ಅವರನ್ನು ಬೇಗನೆ ಔಟ್ ಮಾಡಿದರು. ಪವರ್ ಪ್ಲೇನಲ್ಲಿ CSK ಅನ್ನು 26/3 ಕ್ಕೆ ಇಳಿಸಿದರು. ಇದು ಅಂತಿಮವಾಗಿ 197 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆಯನ್ನು 146/8 ಕ್ಕೆ ಕಟ್ಟಿಹಾಕಲು ನೆರವಾಯಿತು. ಇದನ್ನೂ ಓದಿ: 17 ವರ್ಷಗಳ ಬಳಿಕ ಚೆನ್ನೈ ಕೋಟೆಗೆ ಆರ್‌ಸಿಬಿ ‘ರಾಯಲ್‌’ ಎಂಟ್ರಿ

  • IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

    ಕೋಲ್ಕತ್ತಾ: ಫಿಲ್‌ ಸಾಲ್ಟ್‌ (Phil Salt), ವಿರಾಟ್‌ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ನೆರವಿನಿಂದ ಆರ್‌ಸಿಬಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ 2025ರಲ್ಲಿ (IPL 2025) ಆರ್‌ಸಿಬಿ (RCB) ಶುಭಾರಂಭ ಪಡೆದಿದೆ. ತವರಲ್ಲೇ ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) ಮುಖಭಂಗ ಅನುಭವಿಸಿದೆ.

    ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಫೀಲ್ಡಿಂಗ್‌ ಆಯ್ದುಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 8 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತು. 175 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 3 ವಿಕೆಟ್‌ ನಷ್ಟಕ್ಕೆ 16.2 ಓವರ್‌ಗಳಿಗೆ 177 ರನ್‌ ಗಳಿಸಿ ಗೆದ್ದು ಬೀಗಿತು.

    ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ಮೊದಲ ಓವರ್‌ನಲ್ಲೇ ಕ್ವಿಂಟನ್‌ ಡಿಕಾಕ್‌ (4) ವಿಕೆಟ್‌ ಕಳೆದುಕೊಂಡು ಆಘಾತ ಎದುರಿಸಿತು. ಈ ವೇಳೆ ಜೊತೆಯಾದ ಸುನಿಲ್ ನರೈನ್ ಮತ್ತು ಅಜಿಂಕ್ಯಾ ರಹಾನೆ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದ ರಹಾನೆ ಕೇವಲ 25 ಬಾಲ್‌ಗಳಿಗೆ ಫಿಫ್ಟಿ ಬಾರಿಸಿ ಅಬ್ಬರಿಸಿದರು.

    ಇತ್ತ ಅಜಿಂಕ್ಯಾ 31 ಎಸೆತಕ್ಕೆ 56 ರನ್‌ (6 ಫೋರ್‌, 4 ಸಿಕ್ಸರ್‌) ಗಳಿಸಿದ್ದರು. ಅತ್ತ ನರೈನ್‌ 26 ಬಾಲ್‌ಗೆ 44 ರನ್‌ (5 ಫೋರ್‌, 3 ಸಿಕ್ಸರ್) ಬಾರಿಸಿದ್ದರು. ರಹಾನೆ ಮತ್ತು ನರೈನ್‌ ಶತಕದ ಜೊತೆಯಾಟ ಆರ್‌ಸಿಬಿಗೆ ನುಂಗಲಾರದ ತುತ್ತಾಗಿತ್ತು.‌‌ ಈ ವೇಳೆ ರಶಿಕ್‌ ಸಲಾಮ್‌ ಬೌಲಿಂಗ್‌ನಲ್ಲಿ ನರೈನ್‌ ಕ್ಯಾಚ್‌ ನೀಡಿ ನಿರ್ಗಮಿಸಿದರು. ಸ್ಪಿನ್‌ ಜಾದು ಮಾಡಿದ ಕೃಣಾಲ್‌ ಪಾಂಡ್ಯ, ಕೆಕೆಆರ್‌ ಓಟಕ್ಕೆ ಬ್ರೇಕ್‌ ಹಾಕಿದರು. ಪ್ರಮುಖ ಬ್ಯಾಟರ್‌ಗಳಾದ ವೆಂಕಟೇಶ್‌ ಅಯ್ಯರ್‌ (6), ರಿಂಕು ಸಿಂಗ್‌ (12) ಇಬ್ಬರನ್ನೂ ಹೊರಹಾಕುವಲ್ಲಿ ಯಶಸ್ವಿಯಾದರು.

    ಅಂಗ್‌ಕ್ರಿಶ್ ರಘುವಂಶಿ (30) ರನ್‌ ಗಳಿಸಿ ಕೆಕೆಆರ್‌ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು. ಕೊನೆಗೆ ಆರ್‌ಸಿಬಿ ಬೌಲರ್‌ಗಳ ಪರಾಕ್ರಮ ಮುಂದುವರಿದು 174 ರನ್‌ಗಳಿಗೆ ಕೆಕೆಆರ್‌ ಅನ್ನು ಕಟ್ಟಿಹಾಕಿದರು.

    ಆರ್‌ಸಿಬಿ ಪರ ಕೃಣಾಲ್‌ ಪಾಂಡ್ಯ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿ 3 ವಿಕೆಟ್‌ ಕಿತ್ತು. ಜೋಶ್‌ ಹ್ಯಾಜಲ್‌ವುಡ್‌ ಕೂಡ ಕಡಿಮೆ ರನ್‌ ಕೊಟ್ಟು 2 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಇನ್ನು ಯಶ್‌ ದಯಾಳ್‌, ರಶಿಕ್‌ ಸಲಾಮ್, ಸುಯೇಶ್‌ ಶರ್ಮಾ ತಲಾ 1 ವಿಕೆಟ್‌ ಕಿತ್ತರು.

    175 ರನ್‌ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲೇ ಅಬ್ಬರಿಸಿತು. ಓಪನರ್‌ಗಳಾಗಿ ಕಣಕ್ಕಿಳಿದ ಫಿಲ್‌ ಸಾಲ್ಟ್‌ ಮತ್ತು ವಿರಾಟ್‌ ಕೊಹ್ಲಿ ಜೊತೆಯಾಟ ತಂಡದ ಭದ್ರಬುನಾದಿ ಹಾಕಿಕೊಟ್ಟಿತು. ಇಬ್ಬರು ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಸಾಲ್ಟ್‌ 31 ಬಾಲ್‌ಗೆ 56 ರನ್‌ (9 ಫೋರ್‌, 2 ಸಿಕ್ಸರ್‌) ಹಾಗೂ ಕೊಹ್ಲಿ 36 ಬಾಲ್‌ಗೆ 56 ರನ್‌ (4 ಫೋರ್‌, 3 ಸಿಕ್ಸರ್‌) ಬಾರಿಸಿದರು.

    ಹೊಸ ನಾಯಕನಾಗಿ ಬಂದ ರಜತ್‌ ಪಾಟೀದಾರ್‌ ಕೂಡ ಜವಾಬ್ದಾರಿಯುತ (34 ರನ್‌, 16 ಬಾಲ್‌, 5 ಫೋರ್‌, 1 ಸಿಕ್ಸರ್‌) ಆಟ ಆಡಿದರು. ದೇವದತ್‌ ಪಡಿಕಲ್‌ (10), ಲಿಯಾಮ್‌ ಲಿವಿಂಗ್‌ಸ್ಟೋನ್‌ 15 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

  • ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಬೆಂಗಳೂರು: ಇಂದಿನಿಂದ 65 ದಿನಗಳ ಐಪಿಎಲ್‌ (IPL) ಹಬ್ಬ ಆರಂಭವಾಗಲಿದ್ದು ಕೋಲ್ಕತ್ತಾದಲ್ಲಿ ಆರ್‌ಸಿಬಿ (RCB) ಮತ್ತು ಕೋಲ್ಕತ್ತಾ ತಂಡಗಳ ನಡವೆ ಮೊದಲ ಪಂದ್ಯ ನಡೆಯಲಿದೆ. ಮೊದಲ ಪಂದ್ಯದ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ನಾಯಕ ರಜತ್‌ ಪಾಟಿದಾರ್‌ (Rajat Patidar) ಅವರು ಎರಡು ಕೈ ಜೋಡಿಸಿ ನಟ ರಾಜ್‌ಕುಮಾರ್‌ ಅವರ ಪ್ರಸಿದ್ಧ “ಅಭಿಮಾನಿಗಳೇ ನಮ್ಮ ದೇವರು” ಡೈಲಾಗ್‌ ಹೊಡೆದು ಅಭಿಮಾನಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

    ಕಳೆದ 16 ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಇಲ್ಲಿಯವರೆಗೆ ಚಾಂಪಿಯನ್‌ ಆಗಿ ಹೊರಹೊಮ್ಮಿಲ್ಲ. ಚಾಂಪಿಯನ್‌ ಆಗದೇ ಇದ್ದರೂ ಅಭಿಮಾನಿಗಳ ಪ್ರೀತಿ ಮಾತ್ರ ಕಮ್ಮಿಯಾಗಿಲ್ಲ. ಇದಕ್ಕೆ ಸಾಕ್ಷಿ ಯಾವುದು ಎಂದರೆ ಆರ್‌ಸಿಬಿ  ಪಂದ್ಯಗಳು. ಬೆಂಗಳೂರು ಮಾತ್ರವಲ್ಲ ಬೇರೆ ಕಡೆ ನಡೆದ ಪಂದ್ಯಗಳಲ್ಲೂ ಸ್ಟೇಡಿಯಂ ಭರ್ತಿಯಾಗಿರುತ್ತದೆ. ಅಭಿಮಾನಿಗಳು ಆರ್‌ಸಿಬಿ ಪ್ಲೇ ಕಾರ್ಡ್‌ ಹಿಡಿದು ತಂಡಕ್ಕೆ ಪ್ರೋತ್ಸಾಹ ನೀಡುತ್ತಿರುತ್ತಾರೆ.

    ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿ ಪಂದ್ಯ ಆಯೋಜನೆಗೊಂಡರೆ ದುಬಾರಿ ಟಿಕೆಟ್‌ ದರ ಇದ್ದರೂ ಇದ್ದರೂ ಅದು ಮಾರಾಟವಾಗುತ್ತದೆ. ಸ್ಟೇಡಿಯಂನಲ್ಲಿ ಆರ್‌ಸಿಬಿ ಆರ್‌ಸಿಬಿ…ಧ್ವನಿ ಮೊಳಗುತ್ತಿರುತ್ತದೆ. ಪುರುಷರ ಕ್ರಿಕೆಟ್‌ ಮಾತ್ರವಲ್ಲ, ಆರ್‌ಸಿಬಿ ಮಹಿಳೆಯರ ತಂಡಕ್ಕೂ ಅಭಿಮಾನಿಗಳು ಪ್ರೋತ್ಸಾಹ ನೀಡುತ್ತಾರೆ. ಈ ಕಾರಣಕ್ಕೆ ಐಪಿಎಲ್‌ ಆರಂಭಕ್ಕೆ ಮೊದಲು ನೂತನ ನಾಯಕ ರಜತ್‌ ಪಾಟಿದಾರ್‌ ಅವರು ಮಿಸ್ಟರ್ ನ್ಯಾಗ್ಸ್‌ ಅವರ ಆರ್‌ಸಿಬಿ  ಇನ್‌ಸೈಡ್‌ ಶೋನಲ್ಲಿ ಅಭಿಮಾನಿಗಳೇ ನಮ್ಮ ದೇವರು ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಮಧ್ಯಪ್ರದೇಶದ ಪಾಟಿದರ್‌ ಈ ವರ್ಷದಿಂದ ತಂಡವನ್ನು ಮುನ್ನಡೆಸಲಿದ್ದಾರೆ. ರಜತ್ ಪಾಟಿದಾರ್ ಅವರಿಗೆ ನಾಯಕತ್ವದ ಅನುಭವ ಇದೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವನ್ನು ಲೀಡ್‌ ಮಾಡಿದ್ದರು.

    2022 ರಿಂದ 2024 ರವರೆಗೆ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ (Faf du Plessis) ಆರ್​ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 40 ವರ್ಷದ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ 2 ಕೋಟಿ ರೂ. ನೀಡಿ ಖರೀದಿಸಿತ್ತು.

  • RCB ಫ್ಯಾನ್ಸ್‌ ನೂತನ ಕ್ಯಾಪ್ಟನ್‌ಗೆ ಬೆಂಬಲ ನೀಡಬೇಕು – ಅಭಿಮಾನಿಗಳಿಗೆ ಕಿಂಗ್‌ ಕೊಹ್ಲಿ ಮನವಿ

    RCB ಫ್ಯಾನ್ಸ್‌ ನೂತನ ಕ್ಯಾಪ್ಟನ್‌ಗೆ ಬೆಂಬಲ ನೀಡಬೇಕು – ಅಭಿಮಾನಿಗಳಿಗೆ ಕಿಂಗ್‌ ಕೊಹ್ಲಿ ಮನವಿ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ (Rajat Patidar) ಅವರನ್ನ ಫ್ರಾಂಚೈಸಿ ಅಯ್ಕೆ ಮಾಡಿದೆ. ಪಾಟೀದಾರ್‌ ಆಯ್ಕೆಯನ್ನು ಫ್ರಾಂಚೈಸಿಯ ಜೀವಾಳ ವಿರಾಟ್‌ ಕೊಹ್ಲಿ ಶ್ಲಾಘಿಸಿದ್ದಾರೆ.

    ಕೊಹ್ಲಿ ಫಸ್ಟ್​ ರಿಯಾಕ್ಷನ್​ ಏನು?
    ರಜತ್​ ಪಾಟಿದಾರ್ ನಾಯಕನಾಗಿ ಆಯ್ಕೆಗೊಳ್ಳುತ್ತಿದ್ದಂತೆ ಮಾಜಿ ನಾಯಕ ವಿರಾಟ್​ ಕೊಹ್ಲಿ ಶುಭಾಶಯ ಕೋರಿದ್ದಾರೆ. ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿರುವ ರಜತ್​ ನಾಯಕ ಸ್ಥಾನಕ್ಕೆ ಅರ್ಹರಾಗಿದ್ದಾರೆ. ನಾನು ಮತ್ತು ಆರ್​ಸಿಬಿ ತಂಡ ಸದಾ ರಜತ್​ ಅವರಿಗೆ ಬೆಂಬಲ ನೀಡುತ್ತೇವೆ. ಆರ್​ಸಿಬಿ ನಿಮಗೆ ನಾಯಕನ ದೊಡ್ಡ ಜವಾಬ್ದಾರಿ ನೀಡಿದೆ. RCB ಅಭಿಮಾನಿಗಳು ಕೂಡ ನೂತನ ನಾಯಕನಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಕೊಹ್ಲಿಯ ಈ ಮಾತು ಆರ್​ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

    ಸಮಾನ್ಯವಾಗಿ ವಿರಾಟ್​ ಕೊಹ್ಲಿ ಯುವ ಆಟಗಾರರನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದಿರುತ್ತಾರೆ. ಇದೀಗ ಪಾಟಿದಾರ್​ಗೂ ಬೆಂಬಲ ನೀಡಿ ಮತ್ತು ತಮ್ಮ ಅಭಿಮಾನಿಗಳಿಗೂ ಬೆಂಬಲ ನೀಡುವಂತೆ ಕೋರಿದ್ದು ಇದಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    ರಜತ್​ ಐಪಿಎಲ್​ ದಾಖಲೆ:
    ಈ ವರೆಗೂ ಆರ್​ಸಿಬಿ ತಂಡದ ಪರ ರಜತ್​ ಪಾಟಿದಾರ್​ ಒಟ್ಟು 27 ಪಂದ್ಯಗಳನ್ನಾಡಿದ್ದಾರೆ. 24 ಇನ್ನಿಂಗ್ಸ್​ಗಳಲ್ಲಿ 34.74ರ ಸರಾಸರಿಯಲ್ಲಿ ಒಟ್ಟು 779 ರನ್​ ಕಲೆ ಹಾಕಿದ್ದಾರೆ. ಅದರಲ್ಲಿ 1 ಶತಕ, 7 ಅರ್ಧಶತಕ ಸೇರಿವೆ. 112ರನ್​ ಐಪಿಎಲ್​ನಲ್ಲಿ ಇವರ ವೈಯಕ್ತಿಕ ಗರಿಷ್ಠ ಸ್ಕೋರ್‌ ಆಗಿದೆ. ಇದನ್ನೂ ಓದಿ: ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

    ಐಪಿಎಲ್​ 2025ರ RCB ತಂಡ:
    ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್​, ಟಿಮ್ ಡೇವಿಡ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಮನೋಜ್ ಭಾಂಡಗೆ, ಮೋಹಿತ್ ರಥಿ, ರೊಮಾರಿಯೊ ಶೆಫರ್ಡ್​, ಜೇಕಬ್​ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ವಪ್ನಿಲ್ ಸಿಂಗ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಭುವನೇಶ್ವರ್ ಕುಮಾರ್, ಲುಂಗಿ ಎಂಗಿಡಿ, ರಸಿಕ್ ದಾರ್ ಸಲಾಂ, ಸುಯಶ್ ಶರ್ಮಾ, ಯಶ್ ದಯಾಳ್, ನುವಾನ್ ತುಷಾರ, ಅಭಿನಂದನ್ ಸಿಂಗ್.

  • UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

    ಬೆಂಗಳೂರು: ಸಾಧನೆಯ ಜೊತೆ ಅದೃಷ್ಟ ಇದ್ದರೆ ವ್ಯಕ್ತಿಯ ಹುದ್ದೆ ಹೇಗೆ ಬೇಕಾದರೂ ಬದಲಾಗಬಹುದು ಎನ್ನುವುದಕ್ಕೆ  ರಜತ್‌ ಪಾಟಿದಾರ್‌ ಈಗ ಸಾಕ್ಷಿಯಾಗಿದ್ದಾರೆ.  ಟೂರ್ನಿಯ ಅರ್ಧದಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವನ್ನು ಸೇರಿದ್ದ ರಜತ್‌ ಪಾಟಿದಾರ್‌ (Rajat Patidar) ಈಗ ಆ ತಂಡವನ್ನೇ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL) ಸಾಧನೆ ಮಾಡಿದ್ದಾರೆ.

    2021 ರಲ್ಲಿ ಆರ್‌ಸಿಬಿ ತಂಡವನ್ನು ಸೇರಿದ್ದ ರಜತ್‌ ಕೇವಲ 4 ಪಂದ್ಯದಲ್ಲಿ 71 ರನ್‌ ಹೊಡೆದಿದ್ದರು. ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಅವರನ್ನು ಕೈಬಿಟ್ಟಿತ್ತು. 2022ರ ಹರಾಜಿನಲ್ಲಿ ಯಾವುದೇ ತಂಡ ರಜತ್‌ ಅವರನ್ನು ಖರೀದಿಸದ ಕಾರಣ ಅಲ್‌ಸೋಲ್ಡ್‌ ಆಗಿದ್ದರು.

    2022ರ ಆವೃತ್ತಿಯಲ್ಲಿ ಕರ್ನಾಟಕದ ಲುವ್ನಿತ್ ಸಿಸೋಡಿಯಾ (Luvnith Sisodia) ಗಂಭೀರವಾಗಿ ಗಾಯಗೊಳ್ಳುತ್ತಾರೆ. ಇವರ ಜಾಗಕ್ಕೆ ಯಾರನ್ನು ಖರೀದಿಸಬೇಕು ಎಂದು ಯೋಚನೆಯಲ್ಲಿದ್ದಾಗ ಆರ್‌ಸಿಬಿಗೆ ಹೊಳೆದದ್ದೇ ರಜತ್‌ ಪಾಟಿದಾರ್‌ ಹೆಸರು. ಹೀಗಾಗಿ ಟೂರ್ನಿಯ ಅರ್ಧದಲ್ಲಿ ರಜತ್‌ ಮತ್ತೆ ಆರ್‌ಸಿಬಿ ತಂಡವನ್ನು ಸೇರುತ್ತಾರೆ. ಇದನ್ನೂ ಓದಿ: ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಆರ್‌ಸಿಬಿಗೆ ಮರಳಿ ಬಂದ ನಂತರ ರಜತ್‌ ಸ್ಫೋಟಕ ಆಟವನ್ನು ಪ್ರದರ್ಶಿಸುತ್ತಾರೆ. ಅದರಲ್ಲೂ ಎಲಿಮಿನೇಟರ್‌ ಪಂದ್ಯದಲ್ಲಿ ರಜತ್‌ ಲಕ್ನೋ ವಿರುದ್ಧ ಕೇವಲ 54 ಎಸೆತಗಳಲ್ಲಿ 112 ರನ್‌ ( 12 ಬೌಂಡರಿ,7 ಸಿಕ್ಸ್‌) ಹೊಡೆದು ದಾಖಲೆ ನಿರ್ಮಿಸಿದ್ದರು. ಈ ಪಂದ್ಯವನ್ನು ಆರ್‌ಸಿಬಿ ರೋಚಕ 14 ರನ್‌ಗಳಿಂದ ಗೆದ್ದುಕೊಳ್ಳುತ್ತದೆ. ಈ ಮೂಲಕ ಭಾರತ ತಂಡ ಸೇರದೇ ಶತಕ ಹೊಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್‌ ಪಾತ್ರವಾಗುತ್ತಾರೆ.

     

    2024 ರಲ್ಲಿ ಆರ್‌ಸಿಬಿ ವಿರಾಟ್‌ ಕೊಹ್ಲಿ, ರಜತ್‌ ಪಾಟಿದಾರ್‌, ಯಶ್‌ ದಯಾಳ್‌ ಅವರನ್ನು ಉಳಿಸಿಕೊಂಡಿತ್ತು. ನಾಯಕನಾಗಿದ್ದ ಡುಪ್ಲೆಸಿಸ್‌ ಅವರನ್ನು ಕೈ ಬಿಟ್ಟು ರಜತ್‌ ಪಾಟಿದರ್‌ ಅವರನ್ನು 11 ಕೋಟಿ ರೂ. ನೀಡಿ ಉಳಿಸಿಕೊಂಡಾಗ ಈ ಬಾರಿ ಆರ್‌ಸಿಬಿ ನಾಯಕನಾಗುತ್ತಾರಾ ಎಂಬ ಪ್ರಶ್ನೆ ಆಗಲೇ ಎದ್ದಿತ್ತು. ಆದರೆ ವಿರಾಟ್‌ ಕೊಹ್ಲಿ ಅವರನ್ನು ಉಳಿಸಿಕೊಂಡಿರುವಾಗ ಯಾರು ನಾಯಕನಾಗಬಹುದು ಎಂಬ ಕುತೂಹಲ ಮೂಡಿತ್ತು. ಆದರೆ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಆರ್‌ಸಿಬಿ ತಂಡ ರಜತ್‌ ಅವರಿಗೆ ನಾಯಕತ್ವದ ಪಟ್ಟ ನೀಡಿದೆ.

    ಮೂರು ಅವೃತ್ತಿಯಲ್ಲಿ ರಜತ್‌ 27 ಐಪಿಎಲ್‌ ಪಂದ್ಯಗಳಿಂದ 799 ರನ್‌ ಹೊಡೆದಿದ್ದಾರೆ. 1 ಶತಕ, 7 ಅರ್ಧಶತಕ ಸಿಡಿಸಿದ್ದಾರೆ. 34.74 ಬ್ಯಾಟಿಂಗ್‌ ಸರಾಸರಿ, 158.85 ಸ್ಟ್ರೈಕ್‌ ರೇಟ್‌ ಹೊಂದಿರುವ ರಜತ್‌ ಐಪಿಎಲ್‌ನಲ್ಲಿ ಬೌಂಡರಿಗಿಂತಲೂ ಸಿಕ್ಸ್‌ ಹೆಚ್ಚು ಸಿಡಿಸಿದ್ದಾರೆ. ಇಲ್ಲಿಯವರೆಗೆ ಒಟ್ಟು 51 ಬೌಂಡರಿ, 54 ಸಿಕ್ಸ್‌ ಸಿಡಿಸಿ ಸ್ಫೋಟಕ ಬ್ಯಾಟ್ಸ್‌ಮನ್‌ ಎಂದೇ ಗುರುತಿಸಿಕೊಂಡಿದ್ದಾರೆ.

    ಯಾವ ವರ್ಷ ಎಷ್ಟು ರನ್‌?
    2021 – 4 ಪಂದ್ಯ, 71 ರನ್‌
    2022 – 8 ಪಂದ್ಯ, 333 ರನ್‌
    2024 – 15 ಪಂದ್ಯ, 395 ರನ್‌

  • ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

    ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

    ಬೆಂಗಳೂರು:  ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ (Rajat Patidar)  ಅವರನ್ನು ಆಯ್ಕೆ ಮಾಡಲಾಗಿದೆ.

    2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಪಾಟಿದರ್‌ 2025ರ ಐಪಿಎಲ್‌ ಆವೃತ್ತಿಗೆ ಆರ್‌ಸಿಬಿಯನ್ನು ಮುನ್ನಡೆಸಲಿದ್ದಾರೆ.

     


    ರಜತ್ ಪಾಟಿದಾರ್ ಅವರಿಗೆ ನಾಯಕತ್ವದ ಅನುಭವ ಇದೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.

     

    2022 ರಿಂದ 2024 ರವರೆಗೆ  ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಆರ್​ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ 40 ವರ್ಷದ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌  2 ಕೋಟಿ ರೂ. ನೀಡಿ ಖರೀದಿಸಿತ್ತು.

  • IPL Retention | ಡುಪ್ಲೆಸಿ ಔಟ್‌, ಆರ್‌ಸಿಬಿಯಲ್ಲಿ ತ್ರಿಬಲ್‌ ಸ್ಟಾರ್‌; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್‌ 6 ಕೋಟಿ ಏರಿಕೆ

    IPL Retention | ಡುಪ್ಲೆಸಿ ಔಟ್‌, ಆರ್‌ಸಿಬಿಯಲ್ಲಿ ತ್ರಿಬಲ್‌ ಸ್ಟಾರ್‌; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್‌ 6 ಕೋಟಿ ಏರಿಕೆ

    – ನಾಕೌಟ್‌ ಪಂದ್ಯದಲ್ಲಿ ಮ್ಯಾಚ್‌ ಗೆಲ್ಲಿಸಿದ್ದ ಯಶ್‌ ದಯಾಳ್‌ಗೆ ಆರ್‌ಸಿಬಿ ಮಣೆ

    ಮುಂಬೈ: 2025ರ ಐಪಿಎಲ್‌ ಮೆಗಾ ಹರಾಜು ಹಿನ್ನೆಲೆಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ರೀಟೆನ್‌ ಆಟಗಾರರ ಪಟ್ಟಿಯನ್ನು (IPL Retention List) ಬಿಡುಗಡೆಗೊಳಿಸಿದೆ. ನಿರೀಕ್ಷೆಯಂತೆ ಹಾಲಿ ನಾಯಕ ಫಾಫ್‌ ಡು ಪ್ಲೆಸಿಸ್‌ ಅವರನ್ನ ತಂಡದಿಂದ ಹೊರದಬ್ಬಿದ್ದು, ಮೂವರು ದೇಶಿ ಆಟಗಾರರನ್ನ ಮಾತ್ರ ಉಳಿಸಿಕೊಂಡಿದೆ.

    ಆರ್‌ಸಿಬಿ ತಂಡದ ಜೀವಾಳ ಕಿಂಗ್‌ ಕೊಹ್ಲಿ (Virat Kohli) 18ನೇ ಆವೃತ್ತಿಯಲ್ಲೂ ಆರ್‌ಸಿಬಿ ತಂಡದಲ್ಲೇ ಮುಂದುವರಿದಿದ್ದಾರೆ. ಇದರೊಂದಿಗೆ ರಜತ್‌ ಪಾಟೀದಾರ್‌ ಹಾಗೂ ಯಶ್‌ ದಯಾಳ್‌ ಅವರನ್ನ ಆರ್‌ಸಿಬಿ (RCB) ರೀಟೆನ್‌ ಮಾಡಿಕೊಂಡಿದೆ. ಇಲ್ಲಿ 2024ರ ಐಪಿಎಲ್‌ ಆವೃತ್ತಿಯಲ್ಲಿ 15 ಕೋಟಿ ರೂ. ಇದ್ದ ಸಂಭಾವನೆ ಕೊಹ್ಲಿ ಸಂಭಾವನೆ ದಿಢೀರ್‌ 21 ಕೋಟಿ ರೂ.ಗೆ ಏರಿಕೆಯಾಗಿರುವುದು ವಿಶೇಷ. ಇದನ್ನೂ ಓದಿ: IPL 2025: ಆರ್‌ಸಿಬಿ ಕ್ಯಾಪ್ಟನ್‌ ಆಗಿ ವಿರಾಟ್‌ ಕೊಹ್ಲಿ ರೀ ಎಂಟ್ರಿ?

    ಇನ್ನೂ 2024ರ ಐಪಿಎಲ್‌ ಆವೃತ್ತಿಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ ಸಿಡಿಸಿ ಮಿಂಚಿದ್ದ ರಜತ್‌ ಪಾಟೀದಾರ್‌ ಅವರನ್ನು 11 ಕೋಟಿ ರೂ.ಗಳಿಗೆ ಆರ್‌ಸಿಬಿ ಉಳಿಸಿಕೊಂಡಿದೆ. ಜೊತೆಗೆ 2024ರ ಐಪಿಎಲ್‌ನ ನಾಕೌಟ್‌ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಗೆಲುವು ತಂದುಕೊಟ್ಟು ಹೀರೋ ಆಗಿದ್ದ ಯಶ್‌ ದಯಾಳ್‌ ಅವರನ್ನ 5 ಕೋಟಿ ರೂ.ಗಳಿಗೆ ರೀಟೆನ್‌ ಮಾಡಿಕೊಂಡಿದೆ. ಇದನ್ನೂ ಓದಿ: IPL Retention | ರೋಹಿತ್‌, ಪಾಂಡ್ಯಗಿಂತಲೂ ಬುಮ್ರಾ ದುಬಾರಿ – ಮುಂಬೈನಲ್ಲಿ ವಿದೇಶಿ ಆಟಗಾರರಿಗೆ ಕೊಕ್‌

    ಯಾರಿಗೆ ಎಷ್ಟು ಮೊತ್ತ?
    ವಿರಾಟ್‌ ಕೊಹ್ಲಿ – 21 ಕೋಟಿ ರೂ.
    ರಜತ್‌ ಪಾಟೀದಾರ್‌ – 11 ಕೋಟಿ ರೂ.
    ಯಶ್‌ ದಯಾಳ್‌ – 5 ಕೋಟಿ ರೂ.

    ಕಿಂಗ್‌ ಕೊಹ್ಲಿ ಮತ್ತೆ ಕ್ಯಾಪ್ಟನ್‌?
    ಆರಂಭದಿಂದಲೂ ಆರ್‌ಸಿಬಿ ಫ್ರಾಂಚೈಸಿಗಾಗಿಯೇ ಮುಡಿಪಾಗಿರುವ ಕಿಂಗ್‌ ಕೊಹ್ಲಿ 2025ರ ಆವೃತ್ತಿಯಲ್ಲಿ ಮತ್ತೆ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈವರೆಗೆ 252 ಪಂದ್ಯಗಳನ್ನಾಡಿರುವ ವಿರಾಟ್‌ 8,000 ರನ್‌ ಪೂರೈಸಿದ್ದು, ಇಡೀ ಐಪಿಎಲ್‌ನಲ್ಲೇ ಗರಿಷ್ಠ ರನ್‌ ಗಳಿಸಿರುವ‌ ನಂ.1 ಆಟಗಾರನಾಗಿದ್ದಾರೆ. ಅಲ್ಲದೇ ಐಪಿಎಲ್‌ನಲ್ಲಿ ಅತಿಹೆಚ್ಚು ಶಕತ (8) ಸಿಡಿಸಿದ ದಾಖಲೆಯೂ ಕಿಂಗ್‌ ಕೊಹ್ಲಿ ಹೆಸರಿನಲ್ಲಿಯೇ ಇದೆ.

    ಮುಂದಿನ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ.

  • ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ ಕೊಹ್ಲಿ – ಹಿರಿಯ ಕ್ರಿಕೆಟಿಗರಿಂದ ವ್ಯಾಪಕ ಟೀಕೆ

    ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ ಕೊಹ್ಲಿ – ಹಿರಿಯ ಕ್ರಿಕೆಟಿಗರಿಂದ ವ್ಯಾಪಕ ಟೀಕೆ

    – ವಿರಾಟ್‌ ಪರ ಬ್ಯಾಟ್‌ ಬೀಸಿದ ಫಾಫ್‌ ಡು ಪ್ಲೆಸಿಸ್‌

    ಹೈದರಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ (Virat kohli) ಐಪಿಎಲ್‌ನಲ್ಲಿ ಮತ್ತೆ ಕಳಪೆ ಸ್ಟ್ರೈಕ್‌ರೇಟ್‌ ಮುಂದುವರಿಸಿದ್ದಾರೆ. ಇದರಿಂದ ಹಿರಿಯ ಕ್ರಿಕೆಟಿಗರೂ ವಿರಾಟ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕೊಹ್ಲಿಯನ್ನು ಟಿ20 ವಿಶ್ವಕಪ್‌ನಿಂದ ಕೈಬಿಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

    ಹೌದು. ಇತ್ತೀಚೆಗೆ ರಾಜಸ್ಥಾನ್‌ ರಾಯಲ್ಸ್‌ (RR) ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ನಿಧಾನಗತಿಯ ಶತಕವಾಗಿತ್ತು. ಗುರುವಾರ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲೂ 118.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೊಹ್ಲಿ 43 ಎಸೆತಗಳಲ್ಲಿ ಕೇವಲ 51 ರನ್‌ ಸಿಡಿಸಿದ್ದಾರೆ. ಇದರಲ್ಲಿ 4 ಬೌಂಡರಿ, ಒಂದೇ ಒಂದು ಸಿಕ್ಸರ್‌ ದಾಖಲಾಗಿದೆ. ಇದು ಕೆಲ ಅಭಿಮಾನಿಗಳ ಅಸಮಾಧಾನಕ್ಕೂ ಕಾರಣವಾಗಿದೆ.

    ಹೈದರಾಬಾದ್‌ ವಿರುದ್ಧ ಕೊಹ್ಲಿಯೊಂದಿಗೆ ಕಣಕ್ಕಿಳಿದಿದ್ದ ರಜತ್‌ ಪಾಟಿದಾರ್‌ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ ಸಿಡಿಸಿದ್ದರು. ನಂತರ ಬಂದ ಕ್ಯಾಮರೂನ್‌ ಗ್ರೀನ್‌ 185 ಸ್ಟ್ರೈಕ್‌ರೇಟ್‌ನಲ್ಲಿ 37 ರನ್‌ ಚಚ್ಚಿದ್ದರು. ಆದ್ರೆ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 51 ರನ್‌ ಗಳಿಸಲು 43 ಎಸೆತಗಳನ್ನು ತೆಗೆದುಕೊಂಡರು. ಹಾಗಾಗಿ ಕೊಹ್ಲಿ ಕಳಪೆ ಸ್ಟ್ರೈಕ್‌ರೇಟ್‌ ವಿರುದ್ಧ ಸುನೀಲ್‌ ಗವಾಸ್ಕರ್‌, ಇರ್ಫಾನ್‌ ಪಠಾಣ್‌ ಅಸಮಾಧಾನ ಹೊರಹಾಕಿದ್ದಾರೆ.

    ಕೊಹ್ಲಿ ಬೆನ್ನಿಗೆ ನಿಂತ ಕ್ಯಾಪ್ಟನ್‌:
    ವಿರಾಟ್‌ ಕೊಹ್ಲಿ ಸದ್ಯ ಅಗ್ರ ಸ್ಕೋರರ್‌ ಆಗಿದ್ದಾರೆ. ಇತರ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ ಪರೇಡ್‌ ನಡೆಸುತ್ತಿದ್ದರೂ ಕೊಹ್ಲಿ ರನ್‌ ಕಲೆಹಾಕುತ್ತಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ನಮ್ಮ ಹೋರಾಟ ಉತ್ತಮವಾಗಿತ್ತು. ಕೆಕೆಆರ್‌ ವಿರುದ್ಧ ತೀವ್ರ ಪೈಪೋಟಿ ನೀಡಿದ ಹೊರತಾಗಿಯೂ 1 ರನ್‌ನಿಂದ ಸೋಲಬೇಕಾಯಿತು. ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ಮಾತ್ರ ರನ್‌ ಗಳಿಸುತ್ತಿದ್ದರು. ಈಗ ಇತರ ಆಟಗಾರರು ರನ್‌ ಗಳಿಸುತ್ತಿದ್ದಾರೆ. ಕ್ಯಾಮರೂನ್‌ ಗ್ರೀನ್‌ ಸಹ ಫಾರ್ಮ್‌ಗೆ ಮರಳಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ತವರಿನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್‌ 287 ರನ್‌ ಗಳಿಸಿದ್ದಾಗ ನಮ್ಮ ತಂಡ 262 ರನ್‌ ಗಳಿಸಿತ್ತು. ಇದು ಸಹ ಉತ್ತಮ ಪೈಪೋಟಿ ಆಗಿತ್ತು. ಏಕೆಂದರೆ ಆ ಸಮಯದಲ್ಲಿ ಪ್ರಮುಖ ವಿಕೆಟ್‌ ಕಳೆದುಕೊಂಡಿದ್ದ ಕಾರಣ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಬಾರಿಸಿತ್ತು. 207 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

  • IPL 2024: ತವರಿನಲ್ಲೇ ಸನ್‌ ರೈಸರ್ಸ್‌ಗೆ ಚೊಂಬು – ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿಗೆ 35 ರನ್‌ಗಳ ಭರ್ಜರಿ ಜಯ

    IPL 2024: ತವರಿನಲ್ಲೇ ಸನ್‌ ರೈಸರ್ಸ್‌ಗೆ ಚೊಂಬು – ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿಗೆ 35 ರನ್‌ಗಳ ಭರ್ಜರಿ ಜಯ

    ಹೈದರಾಬಾದ್‌: ಕೊನೆಗೂ ತವರಿನಲ್ಲಿ ಅನುಭವಿಸಿದ ವಿರೋಚಿತ ಸೋಲಿಗೆ ಆರ್‌ಸಿಬಿ, ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧ ಸೇಡು ತೀರಿಸಿಕೊಂಡಿದೆ. ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಹೈದರಾಬಾದ್‌ ವಿರುದ್ಧ 35 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಬಾರಿಸಿತ್ತು. 207 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ್ದ ಸನ್‌ ರೈಸರ್ಸ್‌ ತಂಡ ಆರಂಭದಿಂದಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತು. ಆರ್‌ಸಿಬಿ ತವರು ಕ್ರೀಡಾಂಗಣದಲ್ಲಿ ಅಬ್ಬರಿಸಿ ಬೊಬ್ಬರಿದಿದ್ದ ಸನ್‌ ರೈಸರ್ಸ್‌ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿದರು. 5 ಓವರ್‌ಗಳಲ್ಲಿ 56 ರನ್‌ಗಳಿಗೆ ಹೈದರಾಬಾದ್‌ ತಂಡ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ನಂತರ ಕ್ರೀಸ್‌ಗಿಳಿದ ಬ್ಯಾಟರ್ಸ್‌ಗಳು ಆರ್‌ಸಿಬಿ ಎದುರು ನೆಲಕಚ್ಚಿದ್ದರಿಂದ ಸನ್‌ರೈಸರ್ಸ್‌ ತಂಡ ಸೋಲು ಎದುರಿಸಬೇಕಾಯಿತು.

    ಹೈದರಾಬಾದ್‌ ಪರ ಅಭಿಷೇಕ್‌ ಶರ್ಮಾ (Abhishek Sharma) 31 ರನ್‌, ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) 31 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 13 ರನ್‌, ಟ್ರಾವಿಸ್‌ ಹೆಡ್‌ 1 ರನ್‌, ಹೆನ್ರಿಕ್‌ ಕ್ಲಾಸೆನ್‌, ಏಡನ್‌ ಮಾರ್ಕ್ರಮ್‌ ತಲಾ 7 ರನ್‌, ಅಬ್ದುಲ್‌ ಸಮದ್‌ 10 ರನ್‌, ಭುವನೇಶ್ವರ್‌ ಕುಮಾರ್‌ 13 ರನ್‌, ಶಹಬಾಜ್‌ ಅಹ್ಮದ್‌ 40 ರನ್‌, ಜಯದೇವ್‌ ಉನಡ್ಕಟ್‌ 8 ರನ್‌ ಗಳಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಆರ್‌ಸಿಬಿ ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ (Virat Kohli) ಸ್ಪೋಟಕ ಆರಂಭ ತಂದುಕೊಟ್ಟಿದ್ದರು. ಮೊದಲ ವಿಕೆಟ್‌ಗೆ ಈ ಜೋಡಿ 3.5 ಓವರ್‌ಗಳಲ್ಲೇ ಬರೋಬ್ಬರಿ 48 ರನ್‌ಗಳ ಜೊತೆಯಾಟ ನೀಡಿತ್ತು. ಡುಪ್ಲೆಸಿಸ್‌ (Faf du Plessis) 12 ಎಸೆತಗಳಲ್ಲಿ 25 ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್‌ ಜಾಕ್ಸ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ನಂತರ ಕ್ರೀಸ್‌ಗೆ ಬಂದ ರಜತ್‌ ಪಾಟೀದಾರ್‌ ಆರೆಂಜ್‌ ಆರ್ಮಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಬೆಂಡೆತ್ತಿದರು. ಬ್ಯಾಕ್‌ ಟು ಬ್ಯಾಕ್‌ ಸಿಕ್ಸಸ್‌ ಸಿಡಿಸುವ ಮೂಲಕ ಕೇವಲ 20 ಎಸೆತಗಳಲ್ಲೇ ಅರ್ಧಶತಕ ಪೂರೈಸಿದರು. ಇದರೊಂದಿಗೆ ಪವರ್‌ ಪ್ಲೇನಲ್ಲಿ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ್ದ ಕೊಹ್ಲಿ ನಿಧಾಗತಿಯ ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಗ್ರೀನ್‌ ಮತ್ತಿತರ ಬ್ಯಾಟರ್‌ಗಳ ಸಂಘಟಿತ ಪ್ರದರ್ಶನದಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಆರ್‌ಸಿಬಿ ಪರ ರಜತ್‌ ಪಾಟೀದಾರ್‌ 20 ಎಸೆತಗಳಲ್ಲಿ 50 ರನ್‌ (5 ಸಿಕ್ಸರ್‌, 2 ಬೌಂಡರಿ), ವಿರಾಟ್‌ ಕೊಹ್ಲಿ 51 ರನ್‌ (43 ಎಸೆತ, 4 ಬೌಂಡರಿ, 1 ಸಿಕ್ಸರ್‌), ಡುಪ್ಲೆಸಿಸ್‌ 25 ರನ್‌, ಕ್ಯಾಮರೂನ್‌ ಗ್ರೀನ್‌ 37 ರನ್‌, ಮಹಿಪಾಲ್‌ ಲೋಮ್ರೋರ್‌ 7ರನ್‌, ದಿನೇಶ್‌ ಕಾರ್ತಿಕ್‌ 11 ರನ್‌, ಸ್ವಪ್ನಿಲ್ ಸಿಂಗ್‌ 12 ರನ್‌ ಗಳಿಸಿದರು.

  • ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    ಆ 2 ರನ್‌ ಗೆಲುವು ತಂದುಕೊಡ್ತಿತ್ತು; ಆರ್‌ಸಿಬಿ ವಿರೋಚಿತ ಸೋಲಿಗೆ ಇದೇ ಕಾರಣ ಅಂದ್ರು ಫ್ಯಾನ್ಸ್‌!

    – ನಿಯಮದ ಪ್ರಕಾರ ಕೊಹ್ಲಿ ಔಟ್ – ಅಂಪೈರ್‌ ಪರ ಬ್ಯಾಟ್‌ ಬೀಸಿದ ಡುಪ್ಲೆಸಿಸ್‌
    – ಅಂಪೈರ್‌ ವಿರುದ್ಧ ಫ್ಯಾನ್ಸ್‌ ಫುಲ್‌ ಗರಂ

    ಕೋಲ್ಕತ್ತಾ: ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಆರ್‌ಸಿಬಿ (RCB) ಕಂಡ ವಿರೋಚಿತ ಸೋಲು ಅಭಿಮಾನಿಗಳ (RCB Fans) ವಲಯದಲ್ಲಿ ಇನ್ನೂ ಬಿಸಿ-ಬಿಸಿ ಚರ್ಚೆಯಾಗುತ್ತಲೇ ಇದೆ. ಆ 2 ರನ್‌ ಇದ್ದಿದ್ದರೇ ಆರ್‌ಸಿಬಿ, ಗೆದ್ದೇ ಗೆಲ್ಲುತ್ತಿತ್ತು, ಪ್ಲೇ ಆಫ್‌ ಕನಸು ಜೀವಂತವಾಗಿರುತ್ತಿತ್ತು ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ವೀಡಿಯೋ ಸಾಕ್ಷಿಯೊಂದನ್ನೂ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

    223 ರನ್‌ಗಳ ಬೃಹತ್‌ ಮೊತ್ತ ಚೇಸಿಂಗ್‌ ಆರಂಭಿಸಿದ್ದ ಆರ್‌ಸಿಬಿ ಗೆಲುವಿನ ಹಾದಿಯಲ್ಲಿ ನಡೆಯುತ್ತಿತ್ತು. ಆದ್ರೆ 17ನೇ ಓವರ್‌ನ 5ನೇ ಎಸೆತದಲ್ಲಿ ವರುಣ್‌ ಚಕ್ರವರ್ತಿ ಅವರ ಬೌಲಿಂಗ್‌ಗೆ ಸುಯೇಶ್‌ ಪ್ರಭುದೇಸಾಯಿ (Suyash Prabhudesai) ಸಿಕ್ಸರ್‌ ಬಾರಿಸಿದರು. ಆದ್ರೆ ಆನ್‌ಫೀಲ್ಡ್‌ ಅಂಪೈರ್‌ (umpires) ಯಾವುದೇ ನಿರ್ಧಾರ ಪ್ರಕಟಿಸದೇ 3ನೇ ಅಂಪೈರ್‌ ಮೊರೆ ಹೋದರು. ವೀಡಿಯೋನಲ್ಲಿ ಬಾಲ್‌ ಗ್ರೌಂಡ್‌ಗೆ ತಾಕುವ ಮುನ್ನ ಬೌಂಡರಿ ಲೈನ್‌ಗೆ ಬಡಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಆದಾಗ್ಯೂ ಟಿವಿ ಅಂಪೈರ್‌ ಸಿಕ್ಸರ್‌ ಅನ್ನು ಬೌಂಡರಿ ಎಂದು ತೀರ್ಪು ನೀಡಿದರು. ಈ ವೀಡಿಯೋ ಹಂಚಿಕೊಂಡಿರುವ ಆರ್‌ಸಿಬಿ ಅಭಿಮಾನಿಗಳು, 2 ರನ್‌ ಹೆಚ್ಚುವರಿ ಸೇರಿದ್ದರೆ ಆರ್‌ಸಿಬಿ ಗೆದ್ದೇ ಗೆಲ್ಲುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

    ರೂಲ್ಸ್‌ ಪ್ರಕಾರ ಕೊಹ್ಲಿ ಔಟ್:
    ವೇಗದ ಬೌಲರ್‌ ಹರ್ಷಿತ್‌ ರಾಣಾ ಎಸೆದ ಸ್ಲೋ ಫುಲ್‌ ಟಾಸ್‌ ಎಸೆತವನ್ನು ರಕ್ಷಣಾತ್ಮಕ ಆಟವಾಡುವ ಪ್ರಯತ್ನದಲ್ಲಿ ಕೊಹ್ಲಿ ವಿಫಲರಾದರು. ಅಷ್ಟೇ ಅಲ್ಲದೇ ಆನ್‌ಫೀಲ್ಡ್‌ ಅಂಪೈರ್‌ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಆರ್‌ಎಸ್‌ (DRS) ತೆಗೆದುಕೊಂಡರು. ಕೊಹ್ಲಿ ಕ್ರೀಸ್‌ ಒಳಗೆ ನಿಂತು ಚೆಂಡನ್ನು ಎದುರಿಸಿದ್ದರೆ, ಆಗ ಅದು ಸೊಂಟದ ಮೇಲ್ಭಾಗಕ್ಕೆ ಬಿದ್ದ ಫುಲ್‌ ಟಾಸ್‌ ನೋಬಾಲ್‌ ಆಗಿರುತ್ತಿತ್ತು. ಆದರೆ ಕೊಹ್ಲಿ ಕ್ರೀಸ್‌ನಿಂದ ಮುಂದಿದ್ದರು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    ಅಲ್ಲದೇ ಹಾಕ್‌ ಐನಲ್ಲಿ (ಚೆಂಡು ಬೀಳುವ ಕ್ರಮವನ್ನು ಸ್ಕ್ರೀನ್‌ನಲ್ಲಿ ಅಂದಾಜಿಸುವ ಚಿತ್ರಣ) ಚೆಂಡು ವಿಕೆಟ್‌ ನೇರವಾಗಿ ಇರುವು ಕಂಡುಬಂದಿತು. ಆದ್ದರಿಂದ ಕೊಹ್ಲಿ ಅವರ ಕ್ಯಾಚ್‌ ಅನ್ನು ಔಟ್‌ ಎಂದು ತೀರ್ಪು ನೀಡಲಾಯಿತು. ಬಳಿಕ ಅಂಪೈರ್‌ ತೀರ್ಪಿನ ವಿರುದ್ಧವೂ ಆನ್‌ಫೀಲ್ಡ್‌ನಲ್ಲೇ ಅಸಮಾಧಾನ ಹೊರಹಾಕಿದ ಕೊಹ್ಲಿ, ಅಂಪೈರ್‌ಗಳ ಬಳಿ ತೆರಳಿ ವಾದಕ್ಕೆ ಇಳಿದಿದ್ದರು. ಬಳಿಕ ಡ್ರೆಸಿಂಗ್‌ ರೂಮ್‌ನಲ್ಲೂ ಸಹ ಆಟಗಾರರ ಜೊತೆಗೆ ತಮ್ಮ ವಾದ ಮುಂದುವರಿಸಿದರು.

    ನಾಯಕ ಡುಪ್ಲೆಸಿಸ್‌ ಹೇಳಿದ್ದೇನು?
    ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್‌, ಆನ್‌ಫೀಲ್ಡ್‌ ಅಂಪೈರ್‌ಗಳ ಪರ ಬ್ಯಾಟ್‌ ಬೀಸಿದರು. ನಿಯಮಗಳ ಪ್ರಕಾರ ವಿರಾಟ್‌ ಕೊಹ್ಲಿ ಔಟ್‌ ಆಗಿದ್ದಾರೆ. ಅಂಪೈರ್‌ಗಳು ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಶತಾಯ ಗತಾಯ ನಾವು ಪಂದ್ಯ ಗೆಲ್ಲಲೇ ಬೇಕಿತ್ತು. ಟೂರ್ನಿಯಲ್ಲಿ ಪ್ಲೇ ಆಫ್‌ ರೇಸ್‌ನಲ್ಲಿ ಉಳಿಯಲು ಈ ಗೆಲುವು ಅಗತ್ಯವಿತ್ತು. ಆದ್ರೆ ನಾವು ನಮ್ಮ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ