Tag: Rajat Ullagaddimath

  • ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟ

    ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟ

    ಬೆಂಗಳೂರು: ಹುಲಿ ಉಗುರು (Tiger Claw) ಪೆಂಡೆಂಟ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟರ ಬಳಿಕ ಈಗ ರಾಜಕಾರಣಿಗಳಿಗೂ ಸಂಕಷ್ಟ ಶುರುವಾಗಿದೆ. ಕೆಲ ರಾಜಕಾರಣಿಗಳ ಆಪ್ತರು, ಮಕ್ಕಳು ಹುಲಿ ಉಗುರಿನ ಸುಳಿಯಲ್ಲಿ ಸಿಲುಕಿದ್ದಾರೆ.

    ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಹುಬ್ಬಳ್ಳಿ ಕಾಂಗ್ರೆಸ್ ಯುವ ನಾಯಕ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ ರಜತ್ ಉಳ್ಳಾಗಡ್ಡಿಮಠ ಮದುವೆ ವೇಳೆ ವ್ಯಾಘ್ರನಖ ಮಾದರಿ ಪೆಂಡೆಂಟ್ ಧರಿಸಿದ್ದ ಫೋಟೋಗಳು ವೈರಲ್ ಆಗಿವೆ. ಈ ವಿಚಾರದಲ್ಲಿ ಅರಣ್ಯ ಅಧಿಕಾರಿಗಳ ನಡೆ ಕುತೂಹಲ ಕೆರಳಿಸಿದೆ.

    ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರನ ಕೊರಳಲ್ಲಿ ವ್ಯಾಘ್ರನಖ ಮಾದರಿ ಕಂಡುಬಂದ ಕಾರಣ ಅರಣ್ಯಾಧಿಕಾರಿಗಳು, ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಕೆಟ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

    ಕಾಂಗ್ರೆಸ್ ಮುಖಂಡ ಜೇಡರಹಳ್ಳಿ ಕೃಷ್ಣಪ್ಪನ ಆರ್‌ಆರ್ ನಗರದ ಮನೆಯನ್ನು ಇದೇ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡ್ ಮಾಡಿದರು. ಬರೀ ಇವರಷ್ಟೇ ಅಲ್ಲ, ಉದ್ಯಮಿ ಚೇತನ್, ಬೈರತಿ ಸುರೇಶ್ ಸಂಬಂಧಿ, ಮಾಜಿ ಮಂತ್ರಿ ಜಿಟಿ ದೇವೇಗೌಡ ಆಪ್ತ ಶ್ರೀಧರ್ ನಾಯಕ್ ಕೊರಳಲ್ಲಿ ವ್ಯಾಘ್ರನಖ ಮಾದರಿ ಲಾಕೆಟ್ ಇರೋ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ: ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್

    ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್

    ಹುಬ್ಬಳ್ಳಿ: ಅತ್ತೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾದರಿಯಲ್ಲಿ ಅಳಿಯ ರಜತ್ ಉಳ್ಳಾಗಡ್ಡಿಮಠ್ (Rajat Ullagaddimath) ಸಹ ರಾಜಕೀಯ ಶುರು ಮಾಡಿದ್ದಾರೆ. ಅತ್ತೆ ಕುಕ್ಕರ್ ಕೊಟ್ಟು ಸುದ್ದಿಯಾಗಿದ್ದರೆ ಈಗ ಅಳಿಯ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ ಜೊತೆಗೆ ಶರ್ಟ್ ಕೊಟ್ಟು ಸುದ್ದಿಯಾಗುತ್ತಿದ್ದಾರೆ.

    ಚುನಾವಣಾ ಘೋಷಣೆಗೂ ಮುನ್ನವೇ ಹುಬ್ಬಳ್ಳಿ-ಧಾರವಾಡ (Hubballi – Dharwad) ಕೇಂದ್ರ ಕ್ಷೇತ್ರದಲ್ಲಿ ಈಗ ಕುಕ್ಕರ್ ಜೊತೆಗೆ ಅಡುಗೆ ಪಾತ್ರೆ ರಾಜಕೀಯ ಜೋರಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಪ್ರಬಲ ಪೈಪೋಟಿ ನೀಡಲು ಸತತ ಪ್ರಯತ್ನ ನಡೆಸುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರಮಾಪ್ತರು ಸಹ ಆಗಿರುವ ಇವರು ಈ ಬಾರಿ ಶೆಟ್ಟರ್ ಎದುರು ಚುನಾವಣೆಗೆ ನಿಲ್ಲಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಕೊಡುಗೆಗಳನ್ನು ನೀಡಿ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸೆಂಟ್ರಲ್ ಕ್ಷೇತ್ರದ ಎಲ್ಲಾ ಮನೆಗಳಿಗೂ ಕುಕ್ಕರ್, ದೋಸೆ ಹಂಚು, ಅಡುಗೆ ಪಾತ್ರೆಗಳು, ಶರ್ಟ್, ಕ್ಯಾಲೆಂಡರ್‌ಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದನ್ನೂ ಓದಿ: ಚಡ್ಡಿ ಹಾಕೊಂಡು ಬರೋರೂ ನನ್ನ ನೇರವಾಗಿ ಮಾತಾಡಿಸ್ಬೋದು – ಸಿದ್ದರಾಮಯ್ಯ

    ಅಷ್ಟೇ ಅಲ್ಲದೆ ಕ್ಷೇತ್ರದ ಎಲ್ಲಾ ಆಟೋಗಳಿಗೆ ಟಾಪ್ ಕವರ್ ಸಹ ಕೊಡುಗೆ ನೀಡುತ್ತಿದ್ದಾರೆ. ರಜತ್ ಬೆಂಬಲಿಗರು ಈಗ ಕುಕ್ಕರ್ ಹಂಚುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k