ಬಾತ್ ರೂಮ್ ನಲ್ಲೇ ರೀಲ್ಸ್ ಮಾಡ್ಕೊಂಡು ಸದಾ ನೆಟ್ಟಿಗರ ಮನತಣಿಸುವ, ಮೋಹಕ ಅವತಾರದಲ್ಲಿ ಪಡ್ಡೆ ಹುಡುಗರ ಪಾಲಿನ ಪಾರಿಜಾತವಾಗಿರೋ ನಿವೇದಿತಾ ವೆರೈಟಿ ವೆರೈಟಿ ರೀಲ್ಸ್ ಮೂಲಕ ಗಮನಸೆಳೆದಿದ್ದಾರೆ. ಇದೀಗ ಬಿಗ್ ಬಾಸ್ ಖ್ಯಾತಿಯ ರಜತ್ ಜೊತೆ ರೀಲ್ಸ್ ಮಾಡಿದ್ದಾರೆ. ಅದು ಸಖತ್ ಟ್ರೆಂಡ್ ಆಗ್ತಿದೆ. ರಜನಿಕಾಂತ್ ಅಭಿನಯದ ಕೂಲಿ ಸಿನಿಮಾದ ಮೋನಿಕಾ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ ನಿವೇದಿತಾ ಗೌಡ.
ನಿವೇದಿತಾ ಗೌಡ ಜೊತೆಗೆ ಮಾಜಿ ಬಿಗ್ ಮಾಸ್ ಸ್ಪರ್ಧಿಗಳಾದ ರಜತ್, ಧನರಾಜ್ ಹಾಗೂ ನಟಿ ಅಖಿಲಾ ಪ್ರಕಾಶ್ ಸಖತ್ ಆಗಿಯೇ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಿ ಬಂದಿರುವ ರಜತ್ ಇದೀಗ ನಿವೇದಿತಾ ಗೌಡ ಜೊತೆ ಲವ್ ಯು ಮೋನಿಕಾ ಅಂತಾ ಹೆಜ್ಜೆ ಹಾಕಿದ್ದಾರೆ.
ಕೂಲಿ ಸಿನಿಮಾದಲ್ಲಿ ಮೋನಿಕಾ ಆಗಿ ಸೊಂಟ ಬಳುಕಿಸಿದ್ದಾರೆ ಪೂಜಾ ಹೆಗ್ಡೆ. ಅದೇ ಹಾಡಿಗೆ ನಿವೇದಿತಾ ಗೌಡ ಹಾಗೂ ಸ್ನೇಹಿತರು ಮಸ್ತ್ ಮಸ್ತ್ ಸ್ಟೇಪ್ ಹಾಕಿದ್ದಾರೆ. ಈ ಸ್ಟೆಪ್ ನೋಡಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ಸ್ ಮಾತ್ರ ವೆರೈಟಿ ವೆರೈಟಿ ಆಗಿಯೇ ಬರುತ್ತಿವೆ.
ರೀಲ್ಸ್ ಕೇಸ್ಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಜತ್ಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ನಿನ್ನೆ (ಏ.16) ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು. ಇದನ್ನೂ ಓದಿ: ರೀಲ್ಸ್ ಕೇಸ್: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ರಜತ್
ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.
ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ.
ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.
‘ಬಿಗ್ ಬಾಸ್’ ಖ್ಯಾತಿಯ ವಿನಯ್ (Vinay Gowda) ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಇಂದು (ಮಾ.29) ಜೈಲಿಂದ (Jail) ರಿಲೀಸ್ ಆದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ಗೆ ವಿನಯ್ ಕ್ಷಮೆಯಾಚಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಇದನ್ನೂ ಓದಿ:KD ಲೇಡಿ ರೀಷ್ಮಾಗೆ ‘ಸೆಟ್ ಆಗೋಲ್ಲ ಹೋಗೆ ನಂಗು ನಿಂಗು’ ಎಂದ ಧ್ರುವ ಸರ್ಜಾ
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್ ಮಾಡಿ, ಕರ್ನಾಟಕದ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ ಕ್ಷಮೆ ಕೇಳ್ತೀನಿ. ಕಳೆದ ನಾಲ್ಕು ದಿನದಿಂದ ನೀವು ಟಿವಿಯಲ್ಲಿ ನೋಡಿರಬಹುದು. ಒಂದು ಮಚ್ಚಿನ ಕಥೆ ನಡೆಯುತ್ತಿದೆ. ಪ್ರತಿ ಒಬ್ಬರಿಗೂ ನನ್ನ ಫ್ಯಾಮಿಲಿ ಹಾಗೂ ಫ್ಯಾನ್ಸ್ಗೆ ಕ್ಷಮೆ ಕೇಳಬೇಕು ಅಂತಾನೇ ವಿಡಿಯೋ ಮಾಡ್ತಿದ್ದೀನಿ. ನನ್ನಿಂದ ನನ್ನ ಹೆಂಡತಿ, ಮಗ, ಸ್ನೇಹಿತರಿಗೆ ತೊಂದರೆ ಆಗಿದೆ, ದಯವಿಟ್ಟು ಕ್ಷಮಿಸಿ ಬಿಡಿ ಎಂದು ಸಂಕಷ್ಟದ ಸಮಯದಲ್ಲಿ ನಿಂತವರಿಗೆ ವಿನಯ್ ಕೃತಜ್ಞತೆ ಸಲ್ಲಿಸಿದ್ದಾರೆ. ನನ್ನಿಂದ ತಪ್ಪಾಗಿದೆ ಮಚ್ಚು ಇಟ್ಕೊಂಡು ರೀಲ್ಸ್ ಮಾಡಬಾರದಿತ್ತು. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಾಗಿತ್ತು. ನಾನು ಈ ರೀತಿ ಮೆಸೇಜ್ ನನ್ನ ಫಾಲೋವರ್ಸ್ಗೆ ಕೊಡಬಾರದಿತ್ತು ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:ಗೆಲುವಿನ ನಿರೀಕ್ಷೆಯಲ್ಲಿ ಸಲ್ಮಾನ್ ಖಾನ್- ರಶ್ಮಿಕಾ ಜೊತೆಗಿನ ‘ಸಿಕಂದರ್’ ಚಿತ್ರ ನಾಳೆ ರಿಲೀಸ್
ಪೊಲೀಸ್ ಇಲಾಖೆ ಅವರು ಸರಿಯಾಗಿ ತನಿಖೆ ಮಾಡಿದ್ದಾರೆ. ಕಾಮನ್ ಮ್ಯಾನ್ ಸೆಲೆಬ್ರಿಟಿ ಅಂತ ನೋಡದೆ, ತನಿಖೆ ಮಾಡಿದ್ದಾರೆ. ನಮ್ಮನ್ನು ಚೆನ್ನಾಗಿ ಟ್ರೀಟ್ ಮಾಡಿದ್ದಾರೆ. ದಯವಿಟ್ಟು ಪೊಲೀಸ್ ಅವರ ಮೇಲೆ ಯಾವುದೇ ಆರೋಪ ಮಾಡಬೇಡಿ. ಕಾಮನ್ ಮ್ಯಾನ್ ಹಾಗೆಯೇ ನಮ್ಮನ್ನ ಟ್ರೀಟ್ ಮಾಡಿದ್ದಾರೆ. ಇನ್ನೂ ಪೊಲೀಸ್ ಅವರು ನಮ್ಮಿಂದ ಹಣ ಪಡೆದಿದ್ದಾರೆ ಅನ್ನೋದೆಲ್ಲ ಸುಳ್ಳು ವದಂತಿ ಎಂದಿದ್ದಾರೆ. ಪೊಲೀಸರು ನಮಗೆ ಹಾಗೆಯೇ ಮಾಡಿಲ್ಲ. ಕಾನೂನು ಬದ್ಧವಾಗಿ ತನಿಖೆ ಮಾಡಿದ್ದಾರೆ ಎನ್ನುತ್ತಾ ಅಧಿಕಾರಿ ಎಸಿಪಿ ಚಂದನ್ ಸರ್ ಅವರ ತಂಡಕ್ಕೆ ವಿನಯ್ ಧನ್ಯವಾದ ಹೇಳಿದ್ದಾರೆ.
ನಮ್ಮಿಂದ ಗೊತ್ತಿಲ್ಲದೇ ಆಗಿರೋ ತಪ್ಪಿಗೆ ತಿದ್ದಿ ಬುದ್ಧಿ ಹೇಳಿದ್ದೀರಾ. ಇನ್ನೊಂದು ಸಲ ಈ ತರ ತಪ್ಪು ನಾನೆಂದು ಮಾಡಲ್ಲ. ಸಾಮಾನ್ಯರೊಂದಿಗೆ ಪೊಲೀಸರು ಹೇಗೆ ನಡೆದುಕೊಳ್ತಾರೋ, ಹಾಗೆ ನಮ್ಮೊಂದಿಗೂ ನಡೆದುಕೊಳ್ತಾರೆ. ಎಲ್ಲೂ ನಮ್ಮೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ ಎಂದಿದ್ದಾರೆ. ಮತ್ತೊಮ್ಮೆ ಅಭಿಮಾನಿಗಳಿಗೆ ನಟ ಕ್ಷಮೆಯಾಚಿಸಿದ್ದಾರೆ. ರೀಲ್ಸ್ ನಾನು ಫೈಬರ್ ಮಚ್ಚು ಬಳಸಿದ್ದೆ, ಆ ಪ್ರಾಪರ್ಟಿ ನನ್ನದಲ್ಲ. ಅದು ರಜತ್ ಅವರದಾಗಿತ್ತು. ನನಗೆ ಕೊಟ್ಟಿದ್ದು ಪುಷ್ಪರಾಜ್ ಕ್ಯಾರೆಕ್ಟರ್, ಅದಕ್ಕೆ ನಾನು ಬೀಡಾ ಬಳಸಿ ರೀಲ್ಸ್ ಮಾಡಿದ್ದೆ ಎಂದು ತಿಳಿಸಿದ್ದಾರೆ.
ಇನ್ನೂ ಲಾಂಗ್ ಹಿಡಿದು ರೀಲ್ಸ್ ಮಾಡಿದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಹಾಗೂ ರಜತ್ರನ್ನು ಬಂಧಿಸಲಾಗಿತ್ತು. ನಿನ್ನೆ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಜಾಮೀನು ಮಂಜೂರು ಮಾಡಿತ್ತು. ಬೇಲ್ ಪ್ರತಿ ಪೊಲೀಸರಿಗೆ ತಡವಾಗಿ ಸಿಕ್ಕ ಹಿನ್ನೆಲೆ ಇಂದು ಜೈಲಿನಿಂದ ವಿಜಯ್ ಮತ್ತು ರಜತ್ ರಿಲೀಸ್ ಆಗಿದ್ದಾರೆ.
ರಿಲೀಸ್ ಆದ ಬೆನ್ನಲ್ಲೇ ಮಾಧ್ಯಮಕ್ಕೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದೀರಾ. ಎಲ್ಲರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ತೆರಳಿದ್ದಾರೆ.
ಇನ್ನೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ರಜತ್, ವಿನಯ್ರನ್ನು ಬಂಧಿಸಲಾಗಿತ್ತು. ಮಾ.26ರಿಂದ ಮಾ.28ರವರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿತ್ತು. ನಿನ್ನೆ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇನ್ನೂ ರಜತ್ ಅವರು ದರ್ಶನ್ ನಟನೆಯ ‘ಕರಿಯ’ (Kariya) ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದರು.
ಮಚ್ಚು ಹಿಡಿದು ರೀಲ್ಸ್ ಮಾಡಿ ಬಂಧನಕ್ಕೆ ಒಳಗಾಗಿದ್ದ ವಿನಯ್ ಗೌಡ (Vinay Gowda) ಹಾಗೂ ರಜತ್ಗೆ (Rajath) 24ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಸಮಂತಾ- ಪ್ರವಾಸದ ಫೋಟೋ ಹಂಚಿಕೊಂಡ ನಟಿ
ವಿನಯ್ ಗೌಡ ಹಾಗೂ ರಜತ್ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. ಸದ್ಯ ಇಬ್ಬರನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಸವೇಶ್ವರ ನಗರ ಪೊಲೀಸರು ಸ್ಥಳಾಂತರಿಸಿದ್ದಾರೆ. ಜಾಮೀನು ಆದೇಶ ಪ್ರತಿ ಜೈಲಿಗೆ ತಲುಪಿದ ನಂತರ ಇಬ್ಬರನ್ನೂ ರಿಲೀಸ್ ಮಾಡಲಿದ್ದಾರೆ. ಇಬ್ಬರಿಗೂ ತಲಾ 10,000 ರೂ ಶ್ಯೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ.
ರಜತ್ ಅವರು ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದರು.
5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾ.28ರವರೆಗೆ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿದೆ.
ಇನ್ನೂ ರಜತ್ ಅವರು ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿದ್ದರು. ಇದರಿಂದ ಈಗ ಇಬ್ಬರೂ ಕಾನೂನು ಸಂಕಷ್ಟ ಎದುರಿಸುವಂತಾಗಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ (Vinay Gowda) ಹಾಗೂ ರಜತ್ರನ್ನು (Rajath) ಅರೆಸ್ಟ್ ಮಾಡಲಾಗಿದೆ. ಹಾಗಾಗಿ ಪ್ರಕರಣದ ಕುರಿತು ವಿನಯ್ ಸ್ಪಷ್ಟನೆ ನೀಡಿದ್ದಾರೆ. ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದು ವಿಡಿಯೋದಲ್ಲಿ ವಿನಯ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.
ರೀಲ್ಸ್ನಲ್ಲಿ ಹಿಡಿದ ಮಚ್ಚಿಗೂ ಪೊಲೀಸರ ವಶದಲ್ಲಿರೋ ಮಚ್ಚಿಗೂ ವ್ಯತ್ಯಾಸವಿದೆ. ಹಾಗಾಗಿ ಈ ಕುರಿತು ವಿನಯ್ ಮಾತನಾಡಿ, ನಾವು ನಿನ್ನೆ ಪೊಲೀಸ್ ಸ್ಟೇಷನ್ನಲ್ಲಿದ್ದಾಗ ಅವರು ತಂದಿರೋ ಲಾಂಗ್ ಎಕ್ಸ್ಚೇಂಜ್ ಆಗಿರಬಹುದು. ಇದರ ಬಗ್ಗೆ ನಮಗೆ ತಿಳಿದಿಲ್ಲ. ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶ ಇರಲಿಲ್ಲ. ಸೆಟ್ನಲ್ಲಿ ಸಾಕಷ್ಟು ಆ ರೀತಿ ಮಚ್ಚುಗಳಿರುತ್ತವೆ. ಇದನ್ನೂ ಓದಿ:ವಿನಯ್ ರೀಲ್ಸ್ ತಂದ ಆಪತ್ತು: ‘ಡೆವಿಲ್’ ಚಿತ್ರೀಕರಣಕ್ಕೆ ಮತ್ತೆ ತೊಂದರೆ?
ಪೊಲೀಸರಿಗೆ ಕೊಟ್ಟಿರೊ ಮಚ್ಚು ಬೇರೆ ಆಗಿರೋದು ನನಗೆ ಗೊತ್ತಿಲ್ಲ. ಇದರಲ್ಲಿ ತುಂಬಾ ಕನ್ಪ್ಯೂಷನ್ ಇದೆ. ರೀಲ್ಸ್ ವೇಳೆ, ರಜತ್ ಹಿಡಿದುಕೊಂಡಿದ್ದ ಮಚ್ಚಿನಲ್ಲೇ ನಾನು ರೀಲ್ಸ್ ಮಾಡಿದ್ದೇನೆ. ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ ಎಂದು ಆ ಕಾರಣಕ್ಕೆ ಈ ವಿಡಿಯೋ ಮಾಡ್ತಿರೋದಾಗಿ ವಿನಯ್ ಗೌಡ ಹೇಳಿಕೆ ನೀಡಿದ್ದಾರೆ.
ಇನ್ನೂ ಆರೋಪಿಗಳಾದ ವಿನಯ್ ಮತ್ತು ರಜತ್ರನ್ನು ರೀಲ್ಸ್ ಮಾಡಿದ ಜಾಗದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಇಂದೇ ಇಬ್ಬರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಅಕ್ಷಯ ಸ್ಟುಡಿಯೋದಲ್ಲಿ ಸ್ಥಳ ಮಹಜರು ನಡೆಸುವಾಗ ಯಾವ ಜಾಗದಲ್ಲಿ ವಿಡಿಯೋ ಮಾಡಿದ್ದು? ನಿಮಗೆ ಮಚ್ಚು ಕೊಟ್ಟೋರು ಯಾರು? ಅನ್ನೋದನ್ನು ವಿನಯ್ ಮತ್ತು ರಜತ್ರಿಂದ ಕೇಳಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ, ಮಹಜರಿನ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಮಹಜರಿನ ಬಳಿಕ ರೀಲ್ಸ್ಗೆ ಬಳಸಿದ್ದ ಲಾಂಗ್ ಅನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಳಿಕ ಕೋರ್ಟ್ಗೆ ಇಬ್ಬರನ್ನೂ ಹಾಜರು ಪಡಿಸಲಿದ್ದಾರೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದಕ್ಕೆ ‘ಬಿಗ್ ಬಾಸ್’ ಖ್ಯಾತಿಯ ರಜತ್ (Rajath) ಮತ್ತು ವಿನಯ್ರನ್ನು (Vinay Gowda) ಮತ್ತೆ ಬಸವೇಶ್ವರ ನಗರದ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆ ವಿಡಿಯೋ ಮೂಲಕ ರಜತ್ ಸ್ಪಷ್ಟನೆ ನೀಡಿದ್ದಾರೆ. ಜನ ಕೆಟ್ಟದ್ದು ಕಲಿಯಲಿ ಎಂದು ರೀಲ್ಸ್ ಮಾಡಿಲ್ಲ ಎಂದು ರಜತ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಬ್ಲಡ್ ಕ್ಯಾನ್ಸರ್ನಿಂದ ತಮಿಳು ನಟ ಶಿಹಾನ್ ಹುಸೈನಿ ನಿಧನ
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಮತ್ತು ರಜತ್ರನ್ನು ನಿನ್ನೆ (ಮಾ.24) ಬಂಧಿಸಿದ್ದರು. ಆ ನಂತರ ಮಧ್ಯಾರಾತ್ರಿ ಅವರನ್ನು ಬಿಡುಗಡೆ ಮಾಡಿದ್ದರು. ಇಂದು ಮತ್ತೆ ವಿಚಾರಣೆಗೆ ಬಂದ ವೇಳೆ ರಜತ್ ಮತ್ತು ವಿನಯ್ರನ್ನು ಬಂಧಿಸಿದ್ದಾರೆ. ಠಾಣೆಗೆ ಬರುವ ಮುಂಚೆಯೇ ವಿಡಿಯೋ ಮೂಲಕ ರಜತ್ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.
ನಮಸ್ಕಾರ, ನಾನು ಮತ್ತು ವಿನಯ್ ರೀಲ್ಸ್ ಮಾಡಿದ್ವಿ. ನಟರಾಗಿ ಆ ರೀಲ್ಸ್ ಮಾಡಿದ್ವಿ ಹೊರತು ಅದರಿಂದ ಜನ ಕೆಟ್ಟದ್ದು ಕಲಿಯಲಿ ಎಂಬ ಉದ್ದೇಶದಿಂದ ಮಾಡಿಲ್ಲ. ನಾವು ನಿನ್ನೆ ಠಾಣೆಯಲ್ಲಿದ್ದ ಕಾರಣ ಟಿವಿ ಸೆಟ್ ಅವರಿಗೆ ಹೇಳಿ ಪ್ರಾಪರ್ಟಿ ತರಿಸಿದ್ವಿ. ಯಾವುದು ಕಳುಹಿಸಿ ಕೊಟ್ರು, ಏನು ಕಳುಹಿಸಿ ಕೊಟ್ರು ಅನ್ನೋದು ನಮಗೂ ಗೊತ್ತಿಲ್ಲ. ಅಷ್ಟು ನೀಟಾಗಿ ನಾವು ಅದನ್ನು ನೋಡಿರಲಿಲ್ಲ. ಅದರಲ್ಲಿ ಏನೋ ತಪ್ಪಾಗಿದೆ ಅಂತ ಬಂತು ಎಂದು ರಜತ್ ಹೇಳಿದ್ದಾರೆ. ಇನ್ನೂ ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ನಾವು ಮಾಡಿಲ್ಲ. ಈ ರೀಲ್ಸ್ ಅನ್ನು ಬೇಕಂತ ಮಾಡಿಲ್ಲ ಎಂದು ವಿಡಿಯೋ ಮೂಲಕ ರಜತ್ ಸ್ಪಷ್ಟನೆ ನೀಡಿದ್ದಾರೆ.