Tag: rajesh actor

  • ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನಿಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.

    ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರೇಮಂ ಪೂಜ್ಯಂ ಬೆಡಗಿಗೆ ಈಗ ಜೂಲಿಯಟ್

    ಡಿ.ಕೆ. ಶಿವಕುಮಾರ್ ಸಂತಾಪ 
    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : ತೆಲುಗಿನ ಚೊಚ್ಚಲ ಚಿತ್ರದ ಮುಹೂರ್ತದಲ್ಲಿ ಕಾಣಲಿಲ್ಲ ದುನಿಯಾ ವಿಜಯ್

    ಗಿರಿಜಾ ಲೋಕೇಶ್ ಕಂಬನಿ 
    ರಾಜೇಶ್ ಅವರ ಜೊತೆ ನಾಟಕಗಳಲ್ಲಿ ಅಭಿನಯಿಸಿದ್ದೇನೆ ಕಲೆಯಲ್ಲಿ ತುಂಬಾ ಶ್ರದ್ದೆ ಅವರಿಗೆ ಹದಿನಾರನೇ ವಯಸ್ಸಿನಲ್ಲಿ ನಾನು ‌ಅವರೊಟ್ಟಿಗೆ ನಾಟಕದಲ್ಲಿ ಅಭಿನಯಿಸಿದ್ದೇನೆ. ಕಾಸ್ಟ್ಯೂಮ್, ಹೇರ್ ಸ್ಟೈಲ್, ಬಾಡಿ ಲಾಂಗ್ವೇಜ್ ಯಾವುದೇ ಇರಲಿ ಅಲ್ಲಿ ಶಿಸ್ತು ಬಯಸುತ್ತಿದ್ದರು. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಅವರಿಂದ ನೋಡಿ ತುಂಬಾ ಕಲಿತಿದ್ದೇವೆ. ಅವರು ಶಿಸ್ತುಬದ್ದ ಜೀವನ ನಡೆಸಿದ್ದರು. ಇದನ್ನು ಓದಿ : ಪಾರ್ವತಮ್ಮ ರಾಜ್ ಕುಮಾರ್ ಮತ್ತು ಬೆಳ್ಳಿ ಬಟ್ಟಲು ಸ್ಟೋರಿ ಹೇಳಿದ ರಂಗಾಯಣ ರಘು

    ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಿದ್ದರು. ಕಲಾವಿದರು ಅಡ್ಡದಿಡ್ಡಿ ದೇಹ ಬೆಳೆಸಬಾರದು, ನೀಟಾಗಿರಬೇಕು. ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುತ್ತಿದ್ದರು. ಬೆಳುವಲದ‌ ಮಡಿಲಲ್ಲಿ ಚಿತ್ರದಲ್ಲಿ ರಾಜೇಶ್ ಅವರ ಮಗಳಾಗಿ ಅಭಿನಯಿಸಿದ್ದೇನೆ ಅವರು ಸಂತೃಪ್ತ ಜೀವನ ನಡೆಸಿ ಹೋಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಂಬನಿ ಮಿಡಿದಿದ್ದಾರೆ ಹಿರಿಯ ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ : ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

    ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಚಂದ್ರು 
    ರಾಜೇಶ್ ಅಂತಿಮ ದರ್ಶನ ಪಡೆದ ಮಾತನಾಡಿದ ಚಂದ್ರು, “ರಾಜೇಶ್ ಆತ್ಮೀಯರು ಹಾಗೂ ನನ್ನ ಮಾರ್ಗದರ್ಶಕರು. ರಾಜ್ ಕುಮಾರ್ , ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಸಾಲಿನವರು ಅಭಿನಯಕ್ಕೆ ನವರಸಗಳನ್ನು ತುಂಬಿದವರು. ರಂಗಭೂಮಿಯಲ್ಲಿ ಪಳಗಿದವರು, ಅದ್ಬುತ ಅಭಿನಯ ಮಾಡುತ್ತಿದ್ದರು. ಅವರ ಜೊತೆಗೆ ಬೇರೆಯವರು ಅದ್ಬುತವಾಗಿ ನಟಿಸಬೇಕು‌ ಎನ್ನುತ್ತಿದ್ದರು. ಇಂಗ್ಲಿಷ್ ಪಾಂಡಿತ್ಯವೂ ಇತ್ತು. ಕನ್ನಡ ಪಾಂಡಿತ್ಯವೂ ಇತ್ತುಅವರೊಟ್ಟಿಗೆ ಅಭಿನಯಿಸಿದ್ದೇನೆ. ತುಂಬು ಜೀವನ ಮಾಡಿ‌ ಹೋಗಿದ್ದಾರೆ. ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ರಾಜೇಶ್ ಸೇರಿದಂತೆ ದಿಗ್ವಿಜರ ಪರಂಪರೆಯವರ ಜೊತೆ ಸಿನಿಮಾ ಮಾಡುವ ಭಾಗ್ಯ ನನ್ನದು” ಎಂದು ಚಂದ್ರು. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು

    ತಾರಾ ಅನುರಾಧ ಸಂತಾಪ 
    ನಮ್ಮ ಚಿತ್ರರಂಗದ ಹಿರಿಯರನ್ನ ಕಳೆದುಕೊಂಡಿದ್ದೇವೆ. ಅವರ ಕೆಲಸ, ಸಿನಿಮಾಗಳು ನಮಗೆ ಅವರ ನೆನಪು ಉಳಿಯುವಂತೆ ಮಾಡುತ್ತವೆ ಎಂದಿದ್ದಾರೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ತಾರಾ ಅನುರಾಧ.

  • ಮುನಿ ಚೌಡಪ್ಪ (ವಿದ್ಯಾಸಾಗರ್) ಹೆಸರು ರಾಜೇಶ್ ಆಗಿದ್ದು ಹೇಗೆ?

    ಮುನಿ ಚೌಡಪ್ಪ (ವಿದ್ಯಾಸಾಗರ್) ಹೆಸರು ರಾಜೇಶ್ ಆಗಿದ್ದು ಹೇಗೆ?

    ಇಂದು ಅಗಲಿರುವ ಹಿರಿಯ ನಟ ರಾಜೇಶ್ ಅವರ ನಿಜವಾದ ಹೆಸರು ಮುನಿ ಚೌಡಪ್ಪ. ಅವರನ್ನು ವಿದ್ಯಾಸಾಗರ್ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿತ್ತು. ಇವರ ನಟನೆಯ ಮೊದಲ ಸಿನಿಮಾದ ಟೈಟಲ್ ಕಾರ್ಡ್ ನಲ್ಲೂ ವಿದ್ಯಾಸಾಗರ್ ಎಂದೇ ಇದೆ. ಈ ಸಿನಿಮಾದ ನಂತರ ಅವರ ಹೆಸರು ರಾಜೇಶ್ ಅಂತಾಯಿತು. ಹೀಗೆ ಹೆಸರು ಬದಲಾಯಿಸಿದವರು ಕನ್ನಡದ ಖ್ಯಾತ ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ. ಇದನ್ನೂ ಓದಿ : ರಾಜೇಶ್ ಅವರ ಕೊನೆಯ ಸಿನಿಮಾದ ಎಕ್ಸ್‌ಕ್ಲೂಸಿವ್‌ ಫೋಟೋಸ್, ಮಾಹಿತಿ


    ರಾಜೇಶ್ ಅವರು ಸಿನಿಮಾ ರಂಗಕ್ಕೆ ಬಂದಿದ್ದು ಆಕಸ್ಮಿಕ ಏನೂ ಅಲ್ಲ. ವಿದ್ಯಾಸಾಗರ್ ಹೆಸರಿನಲ್ಲಿ ಆಗಲೇ ಅವರು ರಂಗಭೂಮಿಯಲ್ಲಿ ಪ್ರಸಿದ್ಧಿ ಪಡೆದಿದ್ದರು. ಈ ಜನಪ್ರಿಯತೆಯೇ ಅವರನ್ನು ಸಿನಿಮಾ ರಂಗಕ್ಕೆ ಕರೆದು ತಂದಿತ್ತು. 1964ರಲ್ಲಿ ತೆರೆಕಂಡ ವೀರ ಸಂಕಲ್ಪ ಇವರ ಮೊದಲ ಸಿನಿಮಾ. ಅಂದಿನ ಪ್ರಸಿದ್ಧ ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿಯವರು ವಿದ್ಯಾಸಾಗರ್ ಎಂಬ ಹೆಸರಿದ್ದ ರಾಜೇಶ್ ಅವರನ್ನು ‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು. ಇದನ್ನೂ ಓದಿ : ರವೀಂದ್ರ ಕಲಾಕ್ಷೇತ್ರದಲ್ಲಿ ನಟ ರಾಜೇಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ


    ರಾಜೇಶ್ ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟ ಸಿನಿಮಾ ಸಿ.ವಿ.ಶಿವಶಂಕರ್ ನಿರ್ದೇಶಿಸಿದ ‘ನಮ್ಮ ಊರು’ ಚಿತ್ರ. ಈ ಚಿತ್ರದಿಂದ ಅವರ ವೃತ್ತಿ ಬದುಕಿಗೆ ಮತ್ತೊಂದು ತಿರುವು ಸಿಕ್ಕಿದೆ. ಅಲ್ಲಿಂದ ಅವರು ಈವರೆಗೂ ನಮ್ಮ ಊರು , ಗಂಗೆ ಗೌರಿ , ಸತೀ ಸುಕನ್ಯ , ಬೆಳುವಲದ ಮಡಿಲಲ್ಲಿ , ಕಪ್ಪು ಬಿಳುಪು , ಬೃಂದಾವನ , ಬೋರೆ ಗೌಡ ಬೆಂಗಳೂರಿಗೆ ಬಂದ , ಮರೆಯದ ದೀಪಾವಳ , ಪ್ರತಿಧ್ವನಿ , ಕಾವೇರಿ , ದೇವರ ಗುಡಿ , ಬದುಕು ಬಂಗಾರವಾಯ್ತು , ಸೊಸೆ ತಂದ ಸೌಭಾಗ್ಯ ಸೇರಿದಂತೆ 175ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕರಾಗಿ, ಪೋಷಕ ಪಾತ್ರಧಾರಿಯಾಗಿ ಬಣ್ಣ ಹಚ್ಚಿದ್ದಾರೆ.