Tag: Rajesh Mishra

  • RSS ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

    RSS ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

    ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಘಾಜಿಪುರ ಜಿಲ್ಲೆಯ ಕರಂದಾ ಎಂಬಲ್ಲಿ ನಡೆದಿದೆ.

    ರಾಜೇಶ್ ಮಿಶ್ರಾ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ರಾಜೇಶ್ ಪತ್ರಕರ್ತರೂ ಆಗಿದ್ದು, ಕರಂದ ಪಟ್ಟಣದಲ್ಲಿ ಸಣ್ಣದಾದ ದಿನಸಿ ಅಂಗಡಿಯನ್ನು ಹೊಂದಿದ್ದರು. ಮುಖವನ್ನು ಮುಚ್ಚಿಕೊಂಡು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್‍ಗೆ ಹತ್ತಿರದಿಂದಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಈ ವೇಳೆ ರಾಜೇಶ್ ಪಕ್ಕದಲ್ಲಿದ್ದ ಅವರ ಸಹೋದರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡು ಬಿದ್ದ ತಕ್ಷಣವೇ ರಾಜೇಶ್ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

    ರಾಜೇಶ್ ಈ ಪ್ರದೇಶದಲ್ಲಿ ಆರ್‍ಎಸ್‍ಎಸ್ ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಳೆದ ವಾರವಷ್ಟೇ ಪಂಜಾಬ್‍ನ ಲೂಧಿಯಾನದಲ್ಲಿ ಆರ್‍ಎಸ್‍ಎಸ್ ಮುಖ್ಯ ಶಿಕ್ಷಕ ರವೀಂದರ್ ಗೋಸಿಯಾನ್ ಎಂಬವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದರು. ರವೀಂದರ್ ಹತ್ಯೆಯ ಪ್ರಕರಣವನ್ನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ತನಿಖೆ ಮಾಡುತ್ತಿದೆ.