Tag: Rajghat

  • ಅಬುಧಾಬಿ ದೊರೆಯಿಂದ ರಾಜ್‍ಘಾಟ್‍ನ ಗಾಂಧಿ ಸ್ಮಾರಕಕ್ಕೆ ಗೌರವ ನಮನ

    ಅಬುಧಾಬಿ ದೊರೆಯಿಂದ ರಾಜ್‍ಘಾಟ್‍ನ ಗಾಂಧಿ ಸ್ಮಾರಕಕ್ಕೆ ಗೌರವ ನಮನ

    – ಸಸಿ ನೆಟ್ಟು ಸಂಪ್ರದಾಯ ಮುಂದುವರೆಸಿದ ಕ್ರೌನ್ ಪ್ರಿನ್ಸ್

    ನವದೆಹಲಿ: ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (UAE Crown Prince Sheikh Khaled bin Mohamed bin Zayed Al Nahyan) ದೆಹಲಿಯ ರಾಜ್‍ಘಾಟ್‍ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.

    ಯುಎಇಯ ಹಿಂದಿನ ನಾಯಕರು ಅನುಸರಿಸಿದ ವಿಶಿಷ್ಟ ಸಂಪ್ರದಾಯದ ಭಾಗವಾಗಿ ಅವರು ಅಮಲ್ಟಾಸ್ ಸಸಿಯನ್ನು ನೆಟ್ಟರು. ಈ ಮೂಲಕ ರಾಜ್‍ಘಾಟ್‍ನಲ್ಲಿ ಸಸಿ ನೆಟ್ಟ ಅಬುಧಾಬಿ ದೊರೆಗಳ ಮೂರನೇ ತಲೆಮಾರಿನವರಾಗಿದ್ದಾರೆ.

    1992 ರಲ್ಲಿ ಯುಎಇಯ ಸಂಸ್ಥಾಪಕ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಅಮಲ್ಟಾಸ್ ಸಸಿಯನ್ನು ನೆಟ್ಟಿದ್ದರು. 2016 ರಲ್ಲಿ, ಅವರ ಮಗ, ಪ್ರಸ್ತುತ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೊಲ್ಶ್ರೀ ಸಸಿಯನ್ನು ನೆಡುವ ಮೂಲಕ ಈ ಸಂಪ್ರದಾಯವನ್ನು ಮುಂದುವರೆಸಿದ್ದರು.

    ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿ ಇದಾಗಿದೆ.

    ಕ್ರೌನ್ ಪ್ರಿನ್ಸ್ ಇಂದು ನವದೆಹಲಿಯ ಹೈದರಾಬಾದ್ ಹೌಸ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಉಭಯ ನಾಯಕರು ಪರಮಾಣು ಶಕ್ತಿ, ನೈಸರ್ಗಿಕ ಅನಿಲ, ತೈಲ ಮತ್ತು ಆಹಾರದ ಕುರಿತು ಅನೇಕ ಒಪ್ಪಂದಗಳಿಗೆ ಸಹಿ ಹಾಕಿದರು.

    ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ಮುರ್ಮು ಅವರು, ಭಾರತ ಮತ್ತು ಯುಎಇ ಹೊಸ ಸಹಕಾರ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳ ಮೂಲಕ ಇನ್ನೂ ಮುಂದೆ ನೋಡುತ್ತಿರುವ ಐತಿಹಾಸಿಕ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

  • G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

    G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

    ನವದೆಹಲಿ: ಜಿ20 (G20) ಶೃಂಗಸಭೆಯ ಎರಡನೇ ದಿನವಾದ ಇಂದು (ಭಾನುವಾರ) ಜಾಗತಿಕ ನಾಯಕರು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು ಮತ್ತು ಪ್ರತಿನಿಧಿಗಳು ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: G20 Summit: ಮೊದಲ ದಿನದ ಅಧಿವೇಶನಗಳು ಯಶಸ್ವಿ – ಇಂದಿನ ಕಾರ್ಯಕ್ರಮಗಳೇನು?

    ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜಿ20 ನಾಯಕರನ್ನು ಬರಮಾಡಿಕೊಂಡರು. ಬಳಿಕ ಬಾಪು ಕುಟಿಯ ಬಗ್ಗೆ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಪು ಕುಟಿಯು ಮಹಾರಾಷ್ಟ್ರದ ವಾರ್ಧಾ ಬಳಿ ಇದೆ. ಇದು 1936 ರಿಂದ 1948ರ ಅವರ ಮರಣದವರೆಗೂ ಮಹಾತ್ಮ ಗಾಂಧಿಯವರ ನಿವಾಸವಾಗಿತ್ತು ಎಂದು ತಿಳಿಸಿದ್ದಾರೆ.

    ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ನಾಯಕರು ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಿದ್ದಾರೆ.

    ಈ ಬಗ್ಗೆ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ, ಜಿ20 ಕುಟುಂಬ ಶಾಂತಿ, ಸೇವೆ, ಸಹಾನುಭೂತಿ ಮತ್ತು ಅಹಿಂಸೆಯ ದಾರಿದೀಪವಾದ ಗಾಂಧಿಗೆ ನಮನ ಸಲ್ಲಿಸಿತು. ಗಾಂಧೀಜಿಯವರ ಕಾಲಾತೀತ ಆದರ್ಶಗಳು, ಸಾಮರಸ್ಯ, ಅಂತರ್ಗತ ಮತ್ತು ಸಮೃದ್ಧ ಜಾಗತಿಕ ಭವಿಷ್ಯಕ್ಕಾಗಿ ನಮ್ಮ ಸಾಮೂಹಿಕ ದೃಷ್ಟಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಮಧ್ಯಪ್ರಾಚ್ಯ-ಯುರೋಪ್ ನಡುವೆ ಮೆಗಾ ಕಾರಿಡಾರ್; ಜಿ20 ಶೃಂಗಸಭೆಯಲ್ಲಿ ಬಿಗ್ ಡೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

    ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

    ಚಿಕ್ಕಬಳ್ಳಾಪುರ: ಆಜಾದ್ ಕೀ ಅಮೃತ ಮಹೋತ್ಸವದ ಸಂಭ್ರಮದ ಸವಿನೆನಪಿಗಾಗಿ ಯೋಧರು ಕನ್ಯಾಕುಮಾರಿಯಿಂದ ದೆಹಲಿಯ ರಾಜ್ ಘಟ್ ವರೆಗೂ ಸೈಕಲ್ ರ‍್ಯಾಲಿ ಹಮ್ಮಿಕೊಂಡಿದ್ದು, ಈ ವೇಳೆ ಯೋಧರನ್ನು ಆತ್ಮೀಯವಾಗಿ ಶಾಸಕರು ಬರಮಾಡಿಕೊಂಡರು.

    ಆಜಾದ್ ಕೀ ಅಮೃತ ಮಹೋತ್ಸವ ಪ್ರಯುಕ್ತ ಕನ್ಯಾಕುಮಾರಿಯಿಂದ ರಾಜ್ ಘಟ್ ವರೆಗೂ ಯೋಧರು ಈ ಸೈಕಲ್ ರ‍್ಯಾಲಿ ಹಮ್ಮಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಮೂಲಕ ಚಿಕ್ಕಬಳ್ಳಾಪುರ ಆಂಧ್ರಪ್ರದೇಶದ ಮಾರ್ಗವಾಗಿ ದೆಹಲಿಯ ರಾಜ್ ಘಟ್ ಗೆ ತೆರಳುವಾಗ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಯೋಧರು ಆಗಮಿಸಿದ್ದಾರೆ. ಯೋಧರಿಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

    ಯೋಧ ಮಹಾಂತೇಶ್ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಉಗ್ರರ ದಾಳಿಯಿಂದ ಅಘ್ಘಾನಿಸ್ತಾನದಲ್ಲಿ ಅರಾಜಕತೆ ಉಂಟಾಗಿದ್ದರೂ, ಭಾರತದಲ್ಲಿ ಜನ ನೆಮ್ಮದಿಯಾಗಿದ್ದಾರೆ. ಇದಕ್ಕೆ ಮತ್ತಷ್ಟು ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅಮೃತ ಕಾ ಮಹೋತ್ಸವದ ಕಾರ್ಯಕ್ರಮದಡಿಯಲ್ಲಿ ಕನ್ಯಾಕುಮಾರಿಯಿಂದ ದೆಹಲಿಯ ಮಹಾತ್ಮ ಗಾಂಧಿ ಅವರ ಸಮಾಧಿ ಸ್ಥಳವಾದ ರಾಜ್ ಘಟ್ ಗೆ ಸೈಕಲ್ ರ‍್ಯಾಲಿ ಮೂಲಕ ತೆರಳುತ್ತಿದ್ದು, ಮಾರ್ಗ ಮಧ್ಯೆ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು. ಇದನ್ನೂ ಓದಿ:ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಇನ್ನೂ ಭಾರತದ ಪ್ರಜೆಗಳೆಲ್ಲ ಒಂದೇ. ಎಲ್ಲರಲ್ಲೂ ಆತ್ಮಸ್ಥೈರ್ಯ ತುಂಬಿ ದೇಶದ ಬಲಿಷ್ಠತೆಗೊಸ್ಕರ ಜನರಲ್ಲಿ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ 20 ಮಂದಿ ಸೈನಿಕರು ಈ ಕಾರ್ಯವನ್ನು ಹಮ್ಮಿಕೊಂಡಿದ್ದಾರೆ. ಆಗಸ್ಟ್ 22 ರಂದು ಕನ್ಯಾಕುಮಾರಿಯಲ್ಲಿ ಸೈಕಲ್ ರ‍್ಯಾಲಿ ಆರಂಭವಾಗಿದ್ದು, ಅಕ್ಟೋಬರ್ 2 ರಂದು ದೆಹಲಿಯ ರಾಜ್ ಘಟ್ ತಲುಪಲಿದ್ದಾರೆ.

    ಸೈಕಲ್ ರ‍್ಯಾಲಿ ಮುಖಾಂತರ ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ ಯೋಧರನ್ನು ಜಿಲ್ಲಾಡಳಿತದಿಂದ ಆತ್ಮೀಯವಾಗಿ ಬರ ಮಾಡಿಕೊಂಡು ಸ್ವಾಗತ ಕೋರಿ ಸತ್ಕರಿಸಲಾಯಿತು. ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ದೇಶಾದ್ಯಂತ ಅಜಾದ್ ಕೀ ಅಮೃತ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗುತ್ತಿದ್ದು, ಸಿ.ಆರ್.ಫಿ.ಎಫ್ ಯೋಧರು ಸಹ ಸಂಭ್ರಮದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ:ಮದುವೆಗೆ ಹಿರಿಯ ಮಗಳು ಒಪ್ಪದ್ದಕ್ಕೆ ಕಿರಿಯ ಮಗಳನ್ನೇ ಕಿಡ್ನಾಪ್‍ಗೈದ್ರು

    ಸಾವಿರಾರು ಕಿಲೋಮೀಟರ್ ದೂರ ಸೈಕಲ್ ಮುಖಾಂತರ ಕ್ರಮಿಸುವ ಸಾಹಸಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸೈಕಲ್ ಜಾಥ ಕೈಗೊಂಡ ಯೋಧರ ರ‍್ಯಾಲಿ ಬಾಗೇಪಲ್ಲಿ ಪಟ್ಟಣಕ್ಕೆ ಬಂದ ವೇಳೆ ತಾಲೂಕು ಆಡಳಿತ ಪಟ್ಟಣದಲ್ಲಿ ಯೋಧರಿಗೆ ಭಾವಪೂರ್ಣ ಸ್ವಾಗತ ಕೋರಿ ಸೈನಿಕರಿಗೆ ಸಕಲ ವ್ಯವಸ್ಥೆ ಕಲ್ಪಿಸಿತು.

    ಸೈಕಲ್ ಜಾಥದಲ್ಲಿ ಬಂದ ಯೋಧರಿಗೆ ಆತ್ಮೀಯ ಸ್ವಾಗತ ಕೋರಿದ ಬಾಗೇಪಲ್ಲಿ ತಾಲೂಕು ಆಡಳಿತ ರಾತ್ರಿ ತಂಗಲಿಕ್ಕೆ ಸಕಲ ವ್ಯವಸ್ಥೆ ಮಾಡಿದೆ. ಬೆಳಿಗ್ಗೆ ಧ್ವಜಾರೋಹಣ, ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಸೈನಿಕರ ಬೀಳ್ಕೊಡುಗೆ ಕಾರ್ಯವನ್ನು ನಡೆಸಿಕೊಟ್ಟಿತು. ಇದನ್ನೂ ಓದಿ:ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ