Tag: Rajinikanth Fans

  • ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ‘ಜೈಲರ್’ (Jailer) ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳನ್ನ ಮಾಡುತ್ತಿದ್ದು, ಬ್ಯುಸಿಯಲ್ಲಿದ್ದಾರೆ. ಈ ನಡುವೆ ತಲೈವಾಗೆ ಅಭಿಮಾನಿಯೊಬ್ಬರು ಯಾರೂ ಊಹಿಸದ ವಿಶೇಷ ಉಡುಗೊರೆ ನೀಡಿದ್ದಾರೆ.

    ಕಾರ್ತಿಕ್‌ ಎಂಬ ಅಭಿಮಾನಿಯೊಬ್ಬರು (Rajinikanth Fans) ತಮಿಳುನಾಡಿನ ಮಧುರೈನಲ್ಲಿರುವ ತಮ್ಮ ಮನೆಯ ಆವರಣದಲ್ಲಿ ತಲೈವಾಗೆ ದೇವಸ್ಥಾನವನ್ನೇ ಕಟ್ಟಿಸಿದ್ದಾರೆ. ದೇವಸ್ಥಾನಲ್ಲಿ 250 ಕೆ.ಜಿ ತೂಕದ ರಜನಿಕಾಂತ್‌ ಅವರ ವಿಗ್ರಹ ನಿರ್ಮಿಸಲಾಗಿದೆ. ಕಾರ್ತಿಕ್ ಪುತ್ರಿ ಅನುಶಿಯಾ ಕೂಡ ರಜನಿಕಾಂತ್ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾರುಖ್ ಹುಟ್ಟುಹಬ್ಬ: ನಟನ ಮನೆಮುಂದೆ ಪೊಲೀಸ್ ಸರ್ಪಗಾವಲು

    ಅಲ್ಲದೇ ಕಾರ್ತಿಕ್‌, ನಾನು ರಜನಿಕಾಂತ್‌ ಬಿಟ್ಟು ಬೇರೆ ಯಾವುದೇ ನಟರ ಸಿನಿಮಾ ನೋಡುವುದಿಲ್ಲ. ನಮಗೆ ಅವರೇ ದೇವರು. ಗೌರವದ ಸಂಕೇತಕ್ಕಾಗಿ ದೇವಾಲಯ ಕಟ್ಟಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಮಿಮಿಕ್ರಿ ಮಾಡಿದ ತುಕಾಲಿ ಸಂತು

    ಸದ್ಯ ಜೈಲರ್‌ ಸಿನಿಮಾ ಸಕ್ಸಸ್‌ ಬಳಿಕ ಸಾಲು ಸಾಲು ಸಿನಿಮಾಗಳನ್ನು ಮುಂದಿಟ್ಟುಕೊಂಡಿರುವ ರಜನಿಕಾಂತ್‌ ʻತಲೈವರ್‌ 170ʼ (Thalaivar 170) ಚಿತ್ರದಲ್ಲಿ ರಜನಿಕಾಂತ್‌ಗೆ ಬಿಗ್ ಬಿ ಜೊತೆಯಾಗುತ್ತಿದ್ದಾರೆ. 33 ವರ್ಷಗಳ ಬಳಿಕ ಮತ್ತೆ ಈ ಜೋಡಿ ಒಂದಾಗ್ತಿರೋದು ವಿಶೇಷ. ಈ ಬಗ್ಗೆ ಸ್ಪೆಷಲ್ ಪೋಸ್ಟ್‌ವೊಂದನ್ನ ತಲೈವಾ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಟಿ.ಜಿ ಜ್ಞಾನವೇಲ್ ನಿರ್ದೇಶನದ, ಲೈಕಾ ಪ್ರೋಡಕ್ಷನ್ಸ್ ನಿರ್ಮಾಣ ಮಾಡುತ್ತಿರುವ ‘ತಲೈವರ್ 170’ ಚಿತ್ರದಲ್ಲಿ 33 ವರ್ಷಗಳ ನಂತರ ನಾನು ನನ್ನ ಗುರು ಶ್ರೀ ಅಮಿತಾಭ್ ಬಚ್ಚನ್ ಅವರೊಂದಿಗೆ ಮತ್ತೆ ಕೆಲಸ ಮಾಡುತ್ತಿದ್ದೇನೆ ಎಂಬುದಾಗಿ ರಜನಿಕಾಂತ್‌ ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ಅಭಿಮಾನಿಗಳಿಂದ ಸಿನಿಮಾ ಮಂದಿರದಲ್ಲಿ ಗಲಾಟೆ

    ರಜನಿಕಾಂತ್ ಅಭಿಮಾನಿಗಳಿಂದ ಸಿನಿಮಾ ಮಂದಿರದಲ್ಲಿ ಗಲಾಟೆ

    ಬೆಂಗಳೂರು: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬ. ಹೌದು ಇಂದು ವಿಶ್ವಾದ್ಯಂತ ರಜನಿಕಾಂತ್ ಅಭಿನಯದ ದರ್ಬಾರ್ ಸಿನಿಮಾ ಬೆಳ್ಳಿತೆರೆಗೆ ಬಂದಿದೆ. ಎಷ್ಟೋ ಚಿತ್ರಮಂದಿರಗಳಲ್ಲಿ ಬೆಳಗ್ಗೆ 7:30 ಕ್ಕೆ ಫಸ್ಟ್ ಶೋ ಶುರುವಾಗಿದೆ. ಮಾಸ್ ಲುಕ್‍ನಲ್ಲಿ ರಜನಿಕಾಂತ್ ಅಭಿಮಾನಿಗಳನ್ನು ಮನಸೂರೆಗೊಳಿಸಿದ್ದಾರೆ.

    ಎ.ಆರ್ ಮುರುಗನ್ ನಿರ್ದೇಶನದ ಪಕ್ಕ ಕಮರ್ಷಿಯಲ್ ಸಿನಿಮಾದಲ್ಲಿ ಸ್ಟೈಲ್ ಕಿಂಗ್ ರಜನಿಕಾಂತ್‍ಗೆ ಜೋಡಿಯಾಗಿ ನಯನತಾರಾ ಸಾಥ್ ನೀಡಿರೋ ಸಿನಿಮಾ ನೋಡಲು ಬಂದ ಅಭಿಮಾನಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಬೆಂಗಳೂರು ವಿದ್ಯಾರಣ್ಯಪುರದ ಬಳಿ ಇರೋ ಸಿಂಗಾಪುರದ ವೈನಿಧಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಥೀಯೇಟರ್ ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿದ್ದಾರೆ.

    ಬೆಳಗ್ಗೆ 7:30ಕ್ಕೆ ಆರಂಭವಾಗಬೇಕಾಗಿದ್ದ ಮೊದಲ ಶೋ 9:30 ಅದ್ರೂ ಪ್ರಾರಂಭ ಮಾಡಿಲ್ಲ. ತಾಂತ್ರಿಕ ಕಾರಣಗಳನ್ನು ಹೇಳಿ ಸಿನಿಮಾದ ಮೊದಲ ಶೋ ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಟಾಕೀಸ್‍ನ ಸಿಬ್ಬಂದಿ ಪ್ರೇಕ್ಷಕರ ಮೇಲೆ ದರ್ಪ ತೋರುತ್ತಾ ಏನೂ ಮಾಡೋದಕ್ಕೆ ಆಗಲ್ಲ ಸಿನಿಮಾ 11 ಗಂಟೆಗೆ ಶುರು ಮಾಡುತ್ತೇವೆ. ಇಷ್ಟ ಇದ್ದರೆ ನೋಡಿ ಇಲ್ವಾ ಹೋಗಿ ಎಂದಿದ್ದಾರೆ.

    ಈ ಕಾರಣಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದು, ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪ್ರೇಕ್ಷಕರನ್ನು ಸಮಾಧಾನ ಮಾಡೋ ಕೆಲಸ ಮಾಡಿದ್ದಾರೆ.