Tag: rajinikanth

  • ಮಾಜಿ ಪತ್ನಿ ಮರೆತು ಸಿನಿಮಾಗೆ ವಿಶ್ ಮಾಡಿದ ಧನುಷ್‌

    ಮಾಜಿ ಪತ್ನಿ ಮರೆತು ಸಿನಿಮಾಗೆ ವಿಶ್ ಮಾಡಿದ ಧನುಷ್‌

    ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಪುತ್ರಿ ಐಶ್ವರ್ಯಾ (Aishwarya) ಮತ್ತು ನಟ ಧನುಷ್ (Actor Dhanush) ಜೋಡಿ ಕಳೆದ ವರ್ಷ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇದೀಗ ಮಾಜಿ ಪತ್ನಿ ಐಶ್ವರ್ಯಾ ಸಿನಿಮಾಗೆ ಶುಭಹಾರೈಸುವ ಮೂಲಕ ಧನುಷ್ ಮತ್ತೆ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ:ವಿಜಯ್ ರಾಜಕಾರಣಕ್ಕೆ ಎಂಟ್ರಿ: ಅಭಿನಂದನೆ ಸಲ್ಲಿಸಿದ ತಲೈವ

    ತಂಡಕ್ಕೆ ನನ್ನ ಶುಭ ಹಾರೈಕೆ. ಒಳ್ಳೆಯದಾಗಲಿ ಧನುಷ್ ಹಾರೈಸಿದ್ದಾರೆ. ‘ಸೂಪರ್‌ಸ್ಟಾರ್’ ಹ್ಯಾಶ್‌ಟ್ಯಾಗ್ ಹಾಕಿದ್ದಾರೆ. ಆದರೆ, ಅವರು ಎಲ್ಲಿಯೂ ಮಾಜಿ ಪತ್ನಿ ಐಶ್ವರ್ಯಾ ಹೆಸರನ್ನು ಉಲ್ಲೇಖ ಮಾಡಿಲ್ಲ. ಅವರನ್ನು ಟ್ಯಾಗ್ ಕೂಡ ಮಾಡಿಲ್ಲ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಪತ್ನಿ ಚಿತ್ರಕ್ಕೆ ಶುಭಕೋರಿದ ಮೇಲೆ ಅವರ ಪತ್ನಿಯ ಹೆಸರನ್ನು ಉಲ್ಲೇಖ ಮಾಡಲು ಏನು ಸಮಸ್ಯೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ‘ಲಾಲ್ ಸಲಾಂ’ (Lal Salaam) ಸಿನಿಮಾ ಹಿಂದೂ ಹಾಗೂ ಮುಸ್ಲಿಂ ಧರ್ಮಗಳ ನಡುವೆ ನಡೆಯುವ ಘರ್ಷಣೆ ಮತ್ತು ಸಾಮರಸ್ಯದ ಕಥೆಯನ್ನು ಹೇಳಲಿದೆ. ಈ ಬಗ್ಗೆ ಟ್ರೈಲರ್‌ನಲ್ಲಿ ಸುಳಿವು ನೀಡಲಾಗಿದೆ. ಎಲ್ಲ ದೇವರೂ ಒಂದೇ ಎನ್ನುವ ಡೈಲಾಗ್ ಹೈಲೈಟ್ ಆಗಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಕೂಡ ಇದೆ. ತಲೈವಾ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮಗಳ ನಿರ್ದೇಶನದ ಸಿನಿಮಾಗೆ ರಜನಿಕಾಂತ್ ಸಾಥ್ ನೀಡಿದ್ದಾರೆ.

    ‘ಲಾಲ್ ಸಲಾಂ’ ಚಿತ್ರದಲ್ಲಿ ತಲೈವಾ ಅತಿಥಿಯಾಗಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಷ್ಣು ವಿಶಾಲ್, ವಿಕ್ರಾಂತ್, ಧನ್ಯಾ ಬಾಲಕೃಷ್ಣನ್ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಫೆ.9ರಂದು ಈ ಚಿತ್ರ ರಿಲೀಸ್ ಆಗಲಿದೆ. ಟ್ರೈಲರ್‌ನಲ್ಲಿ ತಲೈವಾ ಎಂಟ್ರಿ ನೋಡಿ ಫಿದಾ ಆಗಿರೋ ಅಭಿಮಾನಿಗಳು ‘ಲಾಲ್ ಸಲಾಂ’ ಚಿತ್ರ ನೋಡಲು ಕಾಯ್ತಿದ್ದಾರೆ.

  • ವಿಜಯ್ ರಾಜಕಾರಣಕ್ಕೆ ಎಂಟ್ರಿ: ಅಭಿನಂದನೆ ಸಲ್ಲಿಸಿದ ತಲೈವ

    ವಿಜಯ್ ರಾಜಕಾರಣಕ್ಕೆ ಎಂಟ್ರಿ: ಅಭಿನಂದನೆ ಸಲ್ಲಿಸಿದ ತಲೈವ

    ಮಿಳಿನ ಹೆಸರಾಂತ ನಟ ದಳಪತಿ ವಿಜಯ್ ರಾಜಕಾರಣಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಜವಾಗಿಯೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ವಿಜಯ್ ಅವರಿಗೆ ಹೆಸರಾಂತ ನಟ ರಜನಿಕಾಂತ್ (Rajinikanth) ಅಭಿನಂದನೆ ಸಲ್ಲಿಸಿದ್ದಾರೆ. ರಾಜಕಾರಣಕ್ಕೆ ಶುಭಾಶಯ ತಿಳಿಸಿದ್ದಾರೆ.

    ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (TVK) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ (Politics) ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

    ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

     

    ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಕಳೆದ ನವೆಂಬರ್‌ನಲ್ಲಿ ತ್ರಿಷಾ ಜೊತೆಗಿನ ವಿಜಯ್ ದಳಪತಿ ಸಿನಿಮಾ ರಿಲೀಸ್ ಆದ್ಮೇಲೆ ಹೊಸ ಚಿತ್ರಗಳನ್ನು ವಿಜಯ್ ಒಪ್ಪಿಕೊಂಡಿದ್ದಾರೆ. ವಿಜಯ್ ಹೊಸ ಪಕ್ಷದ ಕೆಲಸದ ಜೊತೆಗೆ ಸಿನಿಮಾ ಮಾಡುವ ಹುಮ್ಮಸಿನಲ್ಲಿದ್ದಾರೆ.

  • ‘ಲಾಲ್ ಸಲಾಂ’ನಲ್ಲಿ ರಜನಿ ಸ್ಟೈಲೀಶ್ ಲುಕ್

    ‘ಲಾಲ್ ಸಲಾಂ’ನಲ್ಲಿ ರಜನಿ ಸ್ಟೈಲೀಶ್ ಲುಕ್

    ವಾರ ರಜನಿಕಾಂತ್ ನಟನೆಯ ಲಾಲ್ ಸಲಾಂ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಟ್ರೈಲರ್ ರಿಲೀಸ್ (Release) ಆಗಿದ್ದು, ರಜನಿ ಸಖತ್ ಸ್ಟೈಲೀಶ್ ಆಗಿ ಕಂಡಿದ್ದಾರೆ. ಖಡಕ್ ಡೈಲಾಗ್ ಹೊಡೆದಿದ್ದಾರೆ. ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದಾರೆ ನಿರ್ದೇಶಕ ಐಶ್ವರ್ಯ ರಜನಿಕಾಂತ್.

    ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Lal Salaam) ರಿಲೀಸ್ ಆಗುತ್ತಿರುವುದಕ್ಕೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸುತ್ತಿದ್ದಾರೆ. ಕಳೆದ ಸಂಕ್ರಾಂತಿ ಹಬ್ಬದಂದು ಚಿತ್ರ ತೆರೆ ತರುವುದಾಗಿ ಈ ಹಿಂದೆ ಚಿತ್ರತಂಡ ಘೋಷಣೆ ಮಾಡಿತ್ತು. ನಂತರ ಪೋಸ್ಟ್ ಪೋನ್ ಆಗಿತ್ತು.

    ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಂಕ್ರಾಂತಿ ಹಬ್ಬಕ್ಕೆ ತಲೈವಾ ಸಿನಿಮಾ ಎಂಟ್ರಿ ಕೊಡಬೇಕಿತ್ತು. ಅಂದು ಧನುಷ್ ಸಿನಿಮಾ ರಿಲೀಸ್ ಆದ ಕಾರಣದಿಂದಾಗಿ ಫೆಬ್ರವರಿ 9ರಂದು ಲಾಲ್ ಸಲಾಂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

    ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. 2022 ನವೆಂಬರ್ ನಲ್ಲಿ ಟೈಟಲ್ ರಿವೀಲ್ ಮಾಡಲಾಯಿತು. ಆ ನಂತರ 2023ರ ಮಾರ್ಚ್ ನಲ್ಲಿ ಶೂಟಿಂಗ್ ಆರಂಭ ಮಾಡಲಾಯಿತು. ಆಗಸ್ಟ್ 2023ರಲ್ಲಿ ಚಿತ್ರೀಕರಣ ಮುಕ್ತಾಯವಾಗಿತು. ಲಾಲ್ ಸಲಾಂ ಸಿನಿಮಾಗೆ ಮಾಂತ್ರಿಕ ಎ. ಆರ್. ರೆಹಮಾನ್  ಸಂಗೀತ ಸಂಯೋಜನೆ, ವಿಷ್ಣು ರಂಗಸಾಮಿ ಛಾಯಾಗ್ರಹಣ ಮತ್ತು ಬಿ. ಪ್ರವೀಣ್ ಭಾಸ್ಕರ್ ಸಂಕಲನ ಒಳಗೊಂಡಿದೆ.

     

    ಲಾಲ್‌ ಸಲಾಂ ಚಿತ್ರವನ್ನು ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್‌ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ ಪಡೆದುಕೊಂಡಿದೆ. ಕನ್ನಡ, ತೆಲುಗು, ಹಿಂದಿ ಜತೆಗೆ ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಲಿದೆ. ಅಂದಹಾಗೇ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಇದು 3ನೇ ಸಿನಿಮಾ.

  • ರಜನಿ ಸಂಘಿ ಅಲ್ಲ: ಮಗಳ ಮಾತಿಗೆ ಅಪ್ಪನ ಪ್ರತಿಕ್ರಿಯೆ

    ರಜನಿ ಸಂಘಿ ಅಲ್ಲ: ಮಗಳ ಮಾತಿಗೆ ಅಪ್ಪನ ಪ್ರತಿಕ್ರಿಯೆ

    ರಾಮ ಲಲ್ಲಾ ಪ್ರತಿಷ್ಠಾಪನೆ ದಿನ ಅಯೋಧ್ಯೆಗೆ ರಜನಿಕಾಂತ್ ಹೋದ ದಿನದಂದ ರಜನಿ (Rajinikanth) ವಿರೋಧಿಗಳು ಸಂಘಿ ಎಂದು ಕರೆದಿದ್ದರು. ಒಂದು ಪಕ್ಷದ ಏಜೆಂಟ್ ಅಂತಲೂ ಜರಿದಿದ್ದರು. ಈ ವಿಚಾರವಾಗಿ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ಅವರಿಗೆ ನೋವು ಉಂಟಾಗಿತ್ತು. ಅದಕ್ಕಾಗಿ ಅವರು ನನ್ನ ತಂದೆ ಸಂಘಿ (Sanghi) ಅಲ್ಲ ಎಂದು ಉತ್ತರಿಸಿದ್ದರು. ಜೊತೆಗೆ ಸಂಘಿ ಆಗಿದ್ದರೆ ಲಾಲ್ ಸಲಾಂ ಸಿನಿಮಾದಲ್ಲಿ ನಟಿಸುತ್ತಿರಲಿಲ್ಲ ಎಂದೂ ಹೇಳಿದ್ದರು.  ಈ ವಿಚಾರವಾಗಿಯೂ ಜಟಾಪಟೆ ನೆಡಿದಿತ್ತು.

    ತಂದೆಯನ್ನು ಸಂಘಿ ಎಂದು ಕರೆದದ್ದು ಒಂದು ಕಡೆಯಾದರೆ, ಐಶ್ವರ್ಯ ತನ್ನ ತಂದೆ ಸಂಘಿ ಅಲ್ಲ ಎಂದು ಕೊಟ್ಟಿರುವ ಹೇಳಿಕೆ ಎರಡೂ ಸಖತ್ ಚರ್ಚೆಗೆ ಕಾರಣವಾಗಿತ್ತು. ಅದರಲ್ಲೂ ತನ್ನ ತಂದೆ ಸಂಘಿ ಅಲ್ಲ ಎಂದು ಹೇಳಿರುವ ವಿಚಾರ ಹಿಂದೂಪರ ಸಂಘಟನೆಗಳ ಕಂಗೆಣ್ಣಿಗೆ ಗುರಿಯಾಗಿತ್ತು. ಐಶ್ವರ್ಯ ಮೇಲೆಯೂ ಅವರು ಮುಗಿಬಿದ್ದಿದ್ದರು. ಇದೀಗ ಆ ಕಿಚ್ಚನ್ನು ತಣ್ಣಗೆ ಮಾಡಲು ಹೊರಟಿದ್ದಾರೆ ರಜನಿ.

     

    ನನ್ನ ಮಗಳು ಸಂಘಿ ಅಂದರೆ ಕೆಟ್ಟದ್ದು ಅಂತ ಎಲ್ಲಿಯೂ ಹೇಳಿಲ್ಲ. ಯಾರ ಜೊತೆಯೂ ಗುರುತಿಸಿಕೊಂಡಿಲ್ಲ ಎಂದಷ್ಟೇ ಹೇಳಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸುಖಾಸುಮ್ಮನೆ ವಿವಾದವಾಗಿ ಬದಲಾಯಿಸುತ್ತಿರುವುದಕ್ಕೆ ಅವರು ಬೇಸರವನ್ನೂ ವ್ಯಕ್ತ ಪಡಿಸಿದ್ದಾರೆ.

  • ರಾಮಮಂದಿರ ವಿಚಾರ: ತನ್ನದೇ ನಿರ್ದೇಶಕನಿಗೆ ತಿರುಗೇಟು ನೀಡಿದ ರಜನಿ

    ರಾಮಮಂದಿರ ವಿಚಾರ: ತನ್ನದೇ ನಿರ್ದೇಶಕನಿಗೆ ತಿರುಗೇಟು ನೀಡಿದ ರಜನಿ

    ನವರಿ 22ರಂದು ಅಯೋಧ್ಯೆಯಲ್ಲಿ ನಡೆದ ರಾಮಲಲ್ಲಾನ (Ram Mandir) ಪ್ರಾಣ ಪ್ರತಿಷ್ಠಾಪನೆಗೆ ತಮಿಳಿನ ಹೆಸರಾಂತ ನಟ ರಜನಿಕಾಂತ್ (Rajinikanth) ಸೇರಿದಂತೆ ಭಾರತೀಯ ಸಿನಿಮಾ ರಂಗದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಜನಿಕಾಂತ್ ಆಡಿದ ಮಾತಿಗೆ ಅವರದ್ದೇ ಸಿನಿಮಾಗಳ ನಿರ್ದೇಶಕ ಪಾ.ರಂಜಿತ್ (Pa. Ranjith) ಆಕ್ಷೇಪ ವ್ಯಕ್ತ ಪಡಿಸಿದ್ದರು. ಪಾ.ರಂಜಿತ್ ಮತ್ತು ರಜನಿಯ ಪರ ವಿರೋಧದ ಮಾತುಗಳು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದ್ದವು.

    ರಜನಿ ಕುರಿತಂತೆ ಮಾತನಾಡಿದ್ದ ಪಾ.ರಂಜಿತ್, ‘ರಜನಿಕಾಂತ್ ಅಯೋಧ್ಯೆಗೆ ಹೋಗಿದ್ದು, ರಾಮನ ದರ್ಶನ ಪಡೆದದ್ದು ತಪ್ಪಲ್ಲ. ಆದರೆ, 500 ವರ್ಷಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಹೇಳದ್ದನ್ನು ನಾನು ಒಪ್ಪಲಾರೆ. ಇದರ ಹಿಂದಿನ ರಾಜಕಾರಣವನ್ನು ಪ್ರಶ್ನೆ ಮಾಡಬೇಕು. ಸಮಸ್ಯೆ ಮತ್ತು ಪರಿಹಾರ ಎನ್ನುವುದನ್ನು ನಾನು ಟೀಕಿಸುತ್ತೇನೆ’ ಎಂದಿದ್ದರು.

    ಪಾ.ರಂಜಿತ್ ಆಡಿದ ಮಾತುಗಳು ರಜನಿಕಾಂತ್ ಮತ್ತು ರಾಮನ ಭಕ್ತರನ್ನು ಕೆರಳಿಸಿದ್ದವು. ಪಾ.ರಂಜಿತ್ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು. ಹಾಗಾಗಿ ಇದಕ್ಕೆ ರಜನಿಕಾಂತ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವು ಕುತೂಹಲ ಸಹಜವಾಗಿಯೇ ಇತ್ತು. ಅಯೋಧ್ಯೆಯಿಂದ ಬಂದ ರಜನಿಯನ್ನೂ ಕೊನೆಗೂ ಪ್ರಶ್ನೆ ಮಾಡಿದ್ದಾರೆ ಮಾಧ್ಯಮಗಳು.

    ರಾಮಮಂದಿರ ಓಪನ್ ಆದ ತಕ್ಷಣ ರಾಮನ ದರ್ಶನ ಪಡೆದ ಮೊದಲ 150 ಜನರಲ್ಲಿ ನಾನೂ ಒಬ್ಬ. ನನಗೆ ರಾಮನ ಒಳ್ಳೆಯ ದರ್ಶನ ಸಿಕ್ಕಿದೆ. ನನಗೆ ಇದು ಆಧ್ಯಾತ್ಮ. ರಾಜಕೀವಲ್ಲ ಎಂದು ಹೇಳುವ ಮೂಲಕ ಪಾ.ರಂಜಿತ್ ಆಡಿದ ಮಾತಿಗೆ ರಜನಿ ಹೀಗೆ ಉತ್ತರಿಸಿದ್ದಾರೆ. ಅಲ್ಲದೇ, ತಾವು ಇದರಲ್ಲಿ ರಾಜಕೀಯ ಹುಡುಕುವುದಕ್ಕೆ ಹೋಗುದಿಲ್ಲವೆಂದು ತಿರುಗೇಟು ನೀಡಿದ್ದಾರೆ.

  • ರಜನಿ ಹೊಸ ಚಿತ್ರಕ್ಕೆ ‘ವೇಟ್ಟೈಯನ್’ ಟೈಟಲ್ ಫಿಕ್ಸ್

    ರಜನಿ ಹೊಸ ಚಿತ್ರಕ್ಕೆ ‘ವೇಟ್ಟೈಯನ್’ ಟೈಟಲ್ ಫಿಕ್ಸ್

    ಜನಿಕಾಂತ್ ಹೊಸ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಇವರ 170ನೇ ಚಿತ್ರಕ್ಕೆ ‘ವೇಟ್ಟೈಯನ್’ (Vettaiyan) ಎಂದು ಹೆಸರಿಡಲಾಗಿದ್ದು, ರಜನಿ ಸಖತ್ ಮಾಸ್ ಫೀಲ್ ಕೊಡುವಂತಹ ಪಾತ್ರ ಮಾಡಲಿದ್ದಾರೆ ಎನ್ನುವ ಸುಳಿವು ಸಿಕ್ಕಿದೆ. ಟೈಟಲ್ ಜೊತೆಗೆ ಒಂದು ಸಣ್ಣ ವಿಡಿಯೋ ತುಣುಕೊಂದನ್ನೂ ರಿಲೀಸ್ ಮಾಡಲಾಗಿದೆ.

    ನಾನಾ ಕಾರಣಗಳಿಂದ ಈ ಚಿತ್ರ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ನಟಿಸಲಿದ್ದಾರೆ. ಹಲವು ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ. ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

     

    ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

  • ರಜನಿ ಅಭಿಮಾನಿಗಳಿಗೆ ನಿರಾಸೆ : ಸಂಕ್ರಾಂತಿಗೆ ಬರ್ತಿಲ್ಲ ‘ಲಾಲ್ ಸಲಾಂ’

    ರಜನಿ ಅಭಿಮಾನಿಗಳಿಗೆ ನಿರಾಸೆ : ಸಂಕ್ರಾಂತಿಗೆ ಬರ್ತಿಲ್ಲ ‘ಲಾಲ್ ಸಲಾಂ’

    ‘ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Laal Salaam) . ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದಂದು ಚಿತ್ರ ತೆರೆ ತರುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದ್ರೀಗ ಲಾಲ್ ಸಲಾಂ ಬಿಡುಗಡೆ ಪೋಸ್ಟ್ ಪೋನ್ ಆಗಿದೆ.

    ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಂಕ್ರಾಂತಿ ಹಬ್ಬಕ್ಕೆ ತಲೈವಾ ಸಿನಿಮಾ ಎಂಟ್ರಿ ಕೊಡಬೇಕಿತ್ತು. ಆದ್ರೀಗ ಫೆಬ್ರವರಿ 9ರಂದು ಲಾಲ್ ಸಲಾಂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

    ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. 2022 ನವೆಂಬರ್ ನಲ್ಲಿ ಟೈಟಲ್ ರಿವೀಲ್ ಮಾಡಲಾಯಿತು. ಆ ನಂತರ 2023ರ ಮಾರ್ಚ್ ನಲ್ಲಿ ಶೂಟಿಂಗ್ ಆರಂಭ ಮಾಡಲಾಯಿತು. ಆಗಸ್ಟ್ 2023ರಲ್ಲಿ ಚಿತ್ರೀಕರಣ ಮುಕ್ತಾಯವಾಗಿತು. ಲಾಲ್ ಸಲಾಂ ಸಿನಿಮಾಗೆ ಮಾಂತ್ರಿಕ ಎ. ಆರ್. ರೆಹಮಾನ್  ಸಂಗೀತ ಸಂಯೋಜನೆ, ವಿಷ್ಣು ರಂಗಸಾಮಿ ಛಾಯಾಗ್ರಹಣ ಮತ್ತು ಬಿ. ಪ್ರವೀಣ್ ಭಾಸ್ಕರ್ ಸಂಕಲನ ಒಳಗೊಂಡಿದೆ.

    ಲಾಲ್‌ ಸಲಾಂ ಚಿತ್ರವನ್ನು ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್‌ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ ಪಡೆದುಕೊಂಡಿದೆ. ಕನ್ನಡ, ತೆಲುಗು, ಹಿಂದಿ ಜತೆಗೆ ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಲಿದೆ. ಅಂದಹಾಗೇ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಇದು 3ನೇ ಸಿನಿಮಾ.

  • ರಜನಿ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್: ಜಾಮೀನು ಮಂಜೂರು

    ರಜನಿ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್: ಜಾಮೀನು ಮಂಜೂರು

    ಮಿಳು ನಾಡಿನ ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ಖುದ್ದಾಗಿ ಲತಾ ಅವರು ಬೆಂಗಳೂರಿನ ಕೋರ್ಟಿಗೆ ಹಾಜರಾಗಿದ್ದರು.

    ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು. ಅವರ ಮನವಿಯಂತೆ ಲತಾ ಹಾಜರಾದರು. ಜೊತೆಗೆ ಜಾಮೀನು ನೀಡುವಂತೆ ಲತಾ ಪರ ವಕೀಲರು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಷರತ್ತು ಬದ್ದ ಜಾಮೀನು (Bail) ಮಂಜೂರು ಮಾಡಿದೆ. ಎರಡು ವೈಯಕ್ತಿಕ ಬಾಂಡ್ ನೀಡುವಂತೆ ಸೂಚನೆ ನೀಡಿದ್ದಾರೆ ನ್ಯಾಯಮೂರ್ತಿ ಆನಂದ್ ಕರಿಯಮ್ಮನವರ್.

    ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು.

     

    ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಹಾಗಾಗಿ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿತ್ತು. ಕೋರ್ಟಿಗೆ ಲತಾ ಅವರು ಬರೋದು ಅನಿವಾರ್ಯವಾಗಿತ್ತು. ಹಾಗಾಗಿ ಖುದ್ದಾಗಿಯೇ ಅವರು ಹಾಜರಾಗಿದ್ದರು.

  • ಅಂದುಕೊಂಡ ದಿನದಂದು ರಜನಿ ‘ಲಾಲ್ ಸಲಾಂ’ ರಿಲೀಸ್ ಆಗಲ್ಲವಾ?

    ಅಂದುಕೊಂಡ ದಿನದಂದು ರಜನಿ ‘ಲಾಲ್ ಸಲಾಂ’ ರಿಲೀಸ್ ಆಗಲ್ಲವಾ?

    ಜನಿಕಾಂತ್ ವಿಶಿಷ್ಟ ಪಾತ್ರದಲ್ಲಿ ನಟಿಸಿರುವ ಲಾಲ್ ಸಲಾಂ (Lal Salaam) ಸಿನಿಮಾ ಜನವರಿ 14ರ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ದಿನಾಂಕವನ್ನು ಮುಂದೂಡಲು ಚಿತ್ರತಂಡ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಅಂದು ಅನೇಕ ಚಿತ್ರಗಳು ಬಿಡುಗಡೆ ಆಗುತ್ತಿರುವುದರಿಂದ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲಾಗುತ್ತಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ. ಆದರೆ, ಅಧಿಕೃತವಾಗಿ ಈವರೆಗೂ ಈ ಕುರಿತು ಚಿತ್ರತಂಡ ಹೇಳಿಕೊಂಡಿಲ್ಲ.

    ಲಾಲ್ ಸಲಾಂ ರಜನಿಕಾಂತ್ ಮಗಳು ಐಶ್ವರ್ಯ ನಿರ್ದೇಶನದ ಸಿನಿಮಾ. ಈ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ ರಜನಿಕಾಂತ್. ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಕೂಡ ಆಗಿದ್ದು, ಅಚ್ಚರಿ ಎನ್ನುವಂತೆ ಅವರು ಕಾಣಿಸಿಕೊಂಡಿದ್ದಾರೆ.

    ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

     

    1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

  • ರಜನಿ 170ನೇ ಸಿನಿಮಾಗೆ ಟೈಟಲ್ ಫಿಕ್ಸ್: ಟೈಟಲ್ ಟೀಸರ್ ಔಟ್

    ರಜನಿ 170ನೇ ಸಿನಿಮಾಗೆ ಟೈಟಲ್ ಫಿಕ್ಸ್: ಟೈಟಲ್ ಟೀಸರ್ ಔಟ್

    ಜನಿಕಾಂತ್ ನಟನೆಯ 170ನೇ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜ್ಞಾನವೆಲ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ವೆಟ್ಟೈಯನ್ (Vettaiyan) ಎಂದು ಹೆಸರಿಡಲಾಗಿದೆ. ರಿಲೀಸ್ ಆಗಿರುವ ಟೀಸರ್ (Teaser) ನಲ್ಲಿ ರಜನಿಕಾಂತ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿರುವುದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಇದೊಂದು ಮರ್ಡರ್ ಮಿಸ್ಟರಿ ಆಧರಿಸಿದ ಸಿನಿಮಾ ಎಂದು ಗೊತ್ತಾಗುತ್ತಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳನ್ನೂ ಒಳಗೊಂಡಿರೋದು ಪಕ್ಕಾ.

    ಹಲವು ದಿನಗಳಿಂದ ರಜನಿ ನಟನೆಯ 170ನೇ ಸಿನಿಮಾ ಬಗ್ಗೆ ಸಾಕಷ್ಟು ಮಾಹಿತಿಗಳು ಹೊರ ಬೀಳುತ್ತಿವೆ. ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಸಂಸ್ಥೆಯು ಒಂದೊಂದು ಮಾಹಿತಿಯನ್ನು ಹೊರ ಹಾಕುತ್ತಿದೆ. ಜೊತೆಗೆ ಕೆಲ ದಿನಗಳ ಹಿಂದೆ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಅವರ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ. ಜೊತೆಗೆ ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಎನ್ನುವ ವಿಷಯವನ್ನು ಸಂಸ್ಥೆ ಹೇಳಿಕೊಂಡಿದೆ.

    ಹೌದು, ರಜನಿಕಾಂತ್ ಮತ್ತು ಅಮಿತಾಭ್ ಕಾಂಬಿನೇಷನ್ ನ ಈ ಚಿತ್ರದಲ್ಲಿ  ದುಶಾರ ವಿಜಯನ್ (Dushara Vijayan) ಮತ್ತು ಮಂಜು ವಾರಿಯರ್ (Manju Warrier) ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ. ದುಶಾರ ಈಗಾಗಲೇ ಬೋಧೈ ಯೇರಿ ಬುಧಿ ಮಾರಿ, ಅನೀತಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಂಜು ವಾರಿಯರ್ ಲೂಸಿಫರ್, ಅಸುರನ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯರಾಗಿ ನಟಿಸಿದ್ದಾರೆ.

    ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿತ್ತು. ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

     

    ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.